Tag: Awaaz

  • ಅರಣ್ಯ ಅಧಿಕಾರಿಗಳ ಜೊತೆ ಗೂಂಡಾವರ್ತನೆ ತೋರಿದ ಮೂಡಿಗೆರೆ ಶಾಸಕ!

    ಅರಣ್ಯ ಅಧಿಕಾರಿಗಳ ಜೊತೆ ಗೂಂಡಾವರ್ತನೆ ತೋರಿದ ಮೂಡಿಗೆರೆ ಶಾಸಕ!

    ಚಿಕ್ಕಮಗಳೂರು: ಅಧಿಕಾರಿಗಳ ಮೇಲೆ ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ ಗೂಂಡಾವರ್ತನೆ ತೋರಿಸಿದ್ದು, ಈ ಮೂಲಕ ಹುಲಿ ಉಗುರು ಮಾರಾಟಗಾರರ ಬೆಂಬಲಕ್ಕೆ ಬಿಜೆಪಿ ಶಾಸಕರು ನಿಂತಿದ್ದಾರಾ ಎನ್ನುವ ಪ್ರಶ್ನೆ ಎದ್ದಿದೆ.

    ಅರಣ್ಯ ಅಧಿಕಾರಿಗಳು ಹುಲಿ ಉಗುರು ಮಾರುತ್ತಿದ್ದ ವೆಂಕಟೇಶ್, ರಂಜಿತ್ ಹಾಗೂ ಶಿವಕುಮಾರ್ ಅವರನ್ನು ಬಂಧಿಸಿದ್ದರು. ಇದರಿಂದ ಕೋಪಗೊಂಡು ತನ್ನ ಹಿಂಬಾಲಕರನ್ನ ಬಂಧಿಸಿದಕ್ಕೆ ಶಾಸಕ ಎಂ.ಪಿ ಕುಮಾರಸ್ವಾಮಿ ಫುಲ್ ಗರಂ ಆಗಿ ಅರಣ್ಯಾಧಿಕಾರಿಗಳ ಜೊತೆ ಜಗಳ ಮಾಡಿ ಅವರಿಗೆ ಅವಾಜ್ ಹಾಕಿದ್ದಾರೆ.

    ರಂಪಾಟ ಮಾಡಿಬಿಡುತ್ತೇನೆ. ನನಗೆ ಏನು ಸಮಸ್ಯೆ ಆಗಲ್ಲ. ನನ್ನ ಫೋನ್ ರಿಸೀವ್ ಮಾಡದೇ ಇದ್ದರೆ ಆಫೀಸ್ ಬಾಗಿಲು ಹಾಕಿಸುತ್ತೇನೆ ಎಂದು ಮೂಡಿಗೆರೆ ಅರಣ್ಯ ಇಲಾಖೆ ಕಚೇರಿಯಲ್ಲಿ ಕುಮಾರಸ್ವಾಮಿ ರಂಪಾಟ ಮಾಡಿ ಕಿರುಚಾಟ ಮಾಡಿದ್ದಾರೆ. ಸೋಮವಾರ ತಡರಾತ್ರಿ ಈ ಘಟನೆ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಈಗ ಹರಿದಾಡುತ್ತಿದ್ದು, ಎಂ.ಪಿ.ಕುಮಾರಸ್ವಾಮಿ ವಿರುದ್ಧ ಸಾರ್ವಜನಿಕರಿಂದ ಆಕ್ರೋಶ ಕೇಳಿ ಬರುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಟಚ್ ಮಾಡ್ಬೇಡ: ಕಾರ್ಮಿಕ ಇಲಾಖೆಯ ಕಾರ್ಯದರ್ಶಿಯಿಂದ ಬಿಜೆಪಿ ಶಾಸಕನಿಗೆ ಅವಾಜ್

    ಟಚ್ ಮಾಡ್ಬೇಡ: ಕಾರ್ಮಿಕ ಇಲಾಖೆಯ ಕಾರ್ಯದರ್ಶಿಯಿಂದ ಬಿಜೆಪಿ ಶಾಸಕನಿಗೆ ಅವಾಜ್

    ಹುಬ್ಬಳ್ಳಿ: ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಅಮ್ಲನ್ ಆದಿತ್ಯ ಬಿಸ್ವಾಸ್, ಬಿಜೆಪಿ ಶಾಸಕ ಅರವಿಂದ ಬೆಲ್ಲದ್‍ಗೆ ಆವಾಜ್ ಹಾಕಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

    ನಗರದ ಇಎಸ್‍ಐ ಆಸ್ಪತ್ರೆ ಮೇಲ್ದರ್ಜೆಗೆ ಏರಿಸುವ ಕಾರ್ಯಕ್ರಮದಲ್ಲಿ ಆದಿತ್ಯ ಬಿಸ್ವಾಸ್ ಶಾಸಕರಿಗೆ ಅವಾಜ್ ಹಾಕಿದ್ದಾರೆ. ಕಾರ್ಯಕ್ರಮಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಬರ್ತಾಯಿದ್ದಾರೆ ಸೈಡ್ ಸರಿಯುವಂತೆ ಬಿಜೆಪಿ ಶಾಸಕ ಅರವಿಂದ ಬೆಲ್ಲದವರು ಆದಿತ್ಯ ಬಿಸ್ವಾಸ್ ಅವರಿಗೆ ಭುಜ ಹಿಡಿದು ಸರಿಸಿದ್ದಾರೆ. ಇಷ್ಟಕ್ಕೆ ಕೋಪಗೊಂಡ ಬಿಸ್ವಾಸ್ ಟಚ್ ಮಾಡಬೇಡ ಅಂತ ಏರು ಧ್ವನಿಯಲ್ಲಿ ಹೇಳಿದ್ದಾರೆ. ಆಗ ಕಾರ್ಮಿಕ ಸಚಿವ ವೆಂಕಟರಮಣಪ್ಪ ಅರವಿಂದ ಬೆಲ್ಲದ್ ಅವರಿಗೆ ಸಮಾಧಾನ ಮಾಡಿದರು. ಈ ವೇಳೆ ಸಂಸದ ಪ್ರಲ್ಹಾದ ಜೋಶಿ ಸೇರಿದಂತೆ ಹಲವು ಗಣ್ಯವ್ಯಕ್ತಿಗಳು ಇದ್ದರು.

    ಇದೇ ವೇಳೆ ಹುಬ್ಬಳ್ಳಿಯಲ್ಲಿ ಕೇಂದ್ರ ಕಾರ್ಮಿಕ ಖಾತೆ ರಾಜ್ಯ ಸಚಿವ ಸಂತೋಷ್‍ಕುಮಾರ್ ಗಂಗ್ವಾರ್ ಅವರು ಕೇಂದ್ರ ಸರ್ಕಾರ ಸಕಾರಾತ್ಮಕ ಮಾರ್ಗದಲ್ಲಿ ಕೆಲಸ ಮಾಡುತ್ತಿದೆ. ಅನಾರೋಗ್ಯ ಪೀಡಿತರಿಗೆ ಸೂಕ್ತ ಸಂದರ್ಭದಲ್ಲಿ ಔಷಧೋಪಚಾರ ಸಿಗಬೇಕು. ರಾಜ್ಯ ಸರ್ಕಾರ ಔಷಧ ಮತ್ತು ಸೌಲಭ್ಯಗಳ ಕೊರತೆಯಾದರೆ ಕೂಡಲೇ ಕೇಂದ್ರದ ಗಮನಕ್ಕೆ ತರಬೇಕು. ನಾವು ಕಾರ್ಮಿಕರ ಬಗ್ಗೆ ಸಾಕಷ್ಟು ಕಾಳಜಿ ವಹಿಸುತ್ತಿದ್ದೇವೆ. ಕಾರ್ಮಿಕರ ಹಿತಕ್ಕಾಗಿ ನಾಲ್ಕು ಕೋಡ್‍ಗಳ ಸಮಗ್ರ ಕಾನೂನು ಜಾರಿಗೆ ತರಲಾಗುತ್ತಿದೆ. ದೇಶದ ನಲವತ್ತು ಕೋಟಿ ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ನಿರಂತರವಾಗಿ ಶ್ರಮಿಸುತ್ತಿದ್ದೇವೆ ಎಂದು ಇಎಸ್‍ಐ ಆಸ್ಪತ್ರೆಯ ಶಂಕುಸ್ಥಾಪನೆ ಸಮಾರಂಭದಲ್ಲಿ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಲೋಕಲ್ ಚಾನೆಲ್ ಮಾಲೀಕನಿಂದ ನಡು ರಸ್ತೆಯಲ್ಲೇ ಪಾರ್ಟಿ – ಪ್ರಶ್ನಿಸಿದ್ದಕ್ಕೆ ಪೊಲೀಸರಿಗೆ ಅವಾಜ್!

    ಲೋಕಲ್ ಚಾನೆಲ್ ಮಾಲೀಕನಿಂದ ನಡು ರಸ್ತೆಯಲ್ಲೇ ಪಾರ್ಟಿ – ಪ್ರಶ್ನಿಸಿದ್ದಕ್ಕೆ ಪೊಲೀಸರಿಗೆ ಅವಾಜ್!

    ಬೆಂಗಳೂರು: ನಡು ರಸ್ತೆಯಲ್ಲಿಯೇ ಹುಟ್ಟುಹಬ್ಬದ ಪಾರ್ಟಿ ಮಾಡುತ್ತಿದ್ದ ಲೋಕಲ್ ಚಾನೆಲ್ ಮಾಲೀಕನೊಬ್ಬನನ್ನು ಪೊಲೀಸರು ಪ್ರಶ್ನೆ ಮಾಡಿದ್ದಕ್ಕೆ ಅವಾಜ್ ಹಾಕಿರುವ ಘಟನೆ ನಗರದ ಅಂದ್ರಹಳ್ಳಿಯಲ್ಲಿ ನಡೆದಿದೆ.

    ಲೋಕಲ್ ಚಾನೆಲ್ ಮಾಲೀಕ ಮುರಳಿ ಎಂಬಾತ ರಸ್ತೆಯಲ್ಲಿ ಪಾರ್ಟಿ ಮಾಡಿರುವುದನ್ನು ಪೊಲೀಸರು ಪ್ರಶ್ನೇ ಮಾಡಿದ್ದಾರೆ. ಅದಕ್ಕೆ ನಾನು ಮೀಡಿಯಾದವನು ಎಲ್ಲಿ ಬೇಕಾದರೂ ಪಾರ್ಟಿ ಮಾಡುತ್ತೇನೆ. ಅದನ್ನ ಕೇಳೋಕೆ ನಿವ್ಯಾರು ಅಂತ ಪೊಲೀಸರಿಗೆ ಧಮ್ಕಿ ಹಾಕಿದ್ದಾನೆ.

    ಅಂದ್ರಹಳ್ಳಿಯ ಮಧ್ಯರಾತ್ರಿ ನಡು ಬೀದಿಯಲ್ಲಿ ಮುರಳಿ ಬರ್ತ್ ಡೇ ಪಾರ್ಟಿ ಮಾಡುತ್ತಿದ್ದನು. ಆದರೆ ಪಾರ್ಟಿಯಲ್ಲಿ ಕೂಗಾಟ ಜೋರಾಗಿದ್ದರಿಂದ ಸ್ಥಳೀಯರಿಗೆ ತೊಂದರೆಯಾಗಿದೆ. ಆದ್ದರಿಂದ ಸ್ಥಳೀಯರು ಬ್ಯಾಡರಹಳ್ಳಿ ಪೆÇಲೀಸ್ ಠಾಣೆಗೆ ಕರೆ ಮಾಡಿ ದೂರು ನೀಡಿದ್ದಾರೆ. ನಂತರ ಸ್ಥಳಕ್ಕೆ ಬಂದ ಬೀಟ್ ಪಿಸಿಗಳು ಇದನ್ನು ಪ್ರಶ್ನಿಸಲು ಮುಂದಾಗಿದ್ದಾರೆ. ಆದರೆ ಮುರಳಿ, ನಾನು ಮನಸ್ಸು ಮಾಡಿದರೆ ನಿಮ್ಮ ಜಾಗವನ್ನು ಖಾಲಿ ಮಾಡಿಸುತ್ತೇನೆ. ನನ್ನ ಎದುರು ಹಾಕ್ಕೊಂಡ್ರೆ ಪರಿಣಾಮ ನೆಟ್ಟಗಿರಲ್ಲ ಅಂತ ಬೆದರಿಕೆ ಹಾಕಿ ಧಮ್ಕಿ ಹಾಕಿದ್ದಾನೆ.

    ಮುರಳಿ ರಾದ್ಧಾಂತ ಜೋರಾಗಿದ್ದರೀಂದ ಸ್ಥಳಕ್ಕೆ ಇನ್ಸ್ ಪೆಕ್ಟರ್ ಸತ್ಯನಾರಾಯಣ್ ಮತ್ತು ಪಿಎಸ್‍ಐ ಮಂಜುನಾಥ್ ಭೇಟಿ ನೀಡಿ ಆರೋಪಿ ಮುರುಳಿ ಮತ್ತು ಜೊತೆಗಿದ್ದ ಅಭಿಷೇಕ್ ಮೇಲೆ ಎಫ್‍ಐಆರ್ ದಾಖಲು ಮಾಡಿದ್ದಾರೆ.