Tag: Ayan Mukerji

  • ‘ಬ್ರಹ್ಮಾಸ್ತ್ರ’ ಸೀಕ್ವೆಲ್ ರಿಲೀಸ್ ಬಗ್ಗೆ ಬಿಗ್ ಅಪ್‌ಡೇಟ್ ನೀಡಿದ ನಿರ್ದೇಶಕ ಅಯಾನ್ ಮುಖರ್ಜಿ

    ‘ಬ್ರಹ್ಮಾಸ್ತ್ರ’ ಸೀಕ್ವೆಲ್ ರಿಲೀಸ್ ಬಗ್ಗೆ ಬಿಗ್ ಅಪ್‌ಡೇಟ್ ನೀಡಿದ ನಿರ್ದೇಶಕ ಅಯಾನ್ ಮುಖರ್ಜಿ

    ಣ್‌ಬೀರ್ ಕಪೂರ್- ಆಲಿಯಾ ಭಟ್ (Alia Bhatt) ನಟನೆಯ ‘ಬ್ರಹ್ಮಾಸ್ತ್ರʼ ಸಿನಿಮಾ 2022ರಲ್ಲಿ ಸಿನಿಪ್ರೇಕ್ಷಕರಿಗೆ ಮೋಡಿ ಮಾಡಿತ್ತು. ಗಲ್ಲಾಪೆಟ್ಟಿಗೆಯಲ್ಲಿ ಕೋಟಿ ಕೋಟಿ ಲೂಟಿ ಮಾಡಿತ್ತು. Bramastra Film ನೋಡಿ ಇಷ್ಟಪಟ್ಟಿದ್ದ ಪ್ರೇಕ್ಷಕರಿಗೆ ನಿರ್ದೇಶಕ ಅಯಾನ್ ಮುಖರ್ಜಿ (Ayan Mukerji) ಗುಡ್ ನ್ಯೂಸ್ ನೀಡಿದ್ದಾರೆ. ಇದನ್ನೂ ಓದಿ: Exclusive: ನೀಲಿ ಚಿತ್ರದಲ್ಲಿ ಆಕ್ಟ್‌ ಮಾಡ್ತೀಯಾ ಎಂದು ಕೇಳಿದ್ರಾ ಹರ್ಷ? ಸ್ಪಷ್ಟನೆ ನೀಡಿದ ನಟ

    ಅಯಾನ್ ಮುಖರ್ಜಿ ನಿರ್ದೇಶನದ ‘ಬ್ರಹ್ಮಾಸ್ತ್ರʼ ಸಿನಿಮಾದಲ್ಲಿ ಆಲಿಯಾ- ರಣ್‌ಬೀರ್ ಲವ್ ಕೆಮಿಸ್ಟ್ರಿ ತೆರೆಯ ಮೇಲೆ ಕಮಾಲ್ ಮಾಡಿತ್ತು. ನಿಜ ಜೀವನದ ಅವರ ಲವ್ ಸ್ಟೋರಿಗೂ ‘ಬ್ರಹ್ಮಾಸ್ತ್ರʼ ಚಿತ್ರ ಕಾರಣವಾಗಿತ್ತು. ರಣ್‌ಬೀರ್ ಈ ಚಿತ್ರ, ಭಾರತದ ಮಾರುಕಟ್ಟೆಯಲ್ಲಿ 257 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಈ ಸಿನಿಮಾ ಸೀಕ್ವೆಲ್ ಯಾವಾಗ ಬರುತ್ತೆ ಎಂದು ಎದುರು ನೋಡ್ತಿದ್ದ ಫ್ಯಾನ್ಸ್‌ಗೆ ಸಾಮಾಜಿಕ ಜಾಲತಾಣದಲ್ಲಿ ನಿರ್ದೇಶಕ ಅಯಾನ್ ಅಪ್‌ಡೇಟ್ ನೀಡಿದ್ದಾರೆ.

     

    View this post on Instagram

     

    A post shared by Ayan Mukerji (@ayan_mukerji)

    ಡೈರೆಕ್ಟರ್ ಅಯಾನ್ ಮುಖರ್ಜಿ ಅವರು ಹಂಚಿಕೊಂಡಿರುವ ಮಾಹಿತಿ ಪ್ರಕಾರ ‘ಬ್ರಹ್ಮಾಸ್ತ್ರ: ಪಾರ್ಟ್ 2’ ಸಿನಿಮಾ 2026ರ ಡಿಸೆಂಬರ್ ತಿಂಗಳಲ್ಲಿ ಬಿಡುಗಡೆ ಆಗಲಿದೆ. ‘ಬ್ರಹ್ಮಾಸ್ತ್ರ: ಪಾರ್ಟ್ 3’ ಚಿತ್ರ 2027ರ ಡಿಸೆಂಬರ್‌ಗೆ ತೆರೆಕಾಣಲಿದೆ. ಅಂದರೆ ಪ್ರೇಕ್ಷಕರು ಈ ಚಿತ್ರಗಳನ್ನು ಕಣ್ತುಂಬಿಕೊಳ್ಳಲು 3-4 ವರ್ಷ ಕಾಯಲೇಬೇಕಾಗಿದೆ.

    ರಶ್ಮಿಕಾ ಮಂದಣ್ಣ (Rashmika Mandanna) ಜೊತೆಗಿನ ‘ಅನಿಮಲ್’ (Animal) ಸಿನಿಮಾ ಆಗಸ್ಟ್ 11ಕ್ಕೆ ತೆರೆಗೆ ಬರಲಿದೆ. ಇನ್ನೂ ಮಗಳ ಜೊತೆ ಸಮಯ ಕಳೆಯುವ ದೃಷ್ಟಿಯಿಂದ ರಣ್‌ಬೀರ್ ಬ್ರೇಕ್ ತೆಗೆದುಕೊಳ್ಳಲಿದ್ದಾರೆ. ಇದಾದ ಬಳಿಕ ‘ಬ್ರಹ್ಮಾಸ್ತ್ರʼ ಸೀಕ್ವೆಲ್ ಶೂಟಿಂಗ್‌ನಲ್ಲಿ ಭಾಗಿಯಾಗುತ್ತಾರೆ.

  • ರಣ್ಬೀರ್ ಬೀಫ್ ತಿಂದ ಹೇಳಿಕೆ: ಮಹಾಕಾಳೇಶ್ವರ ದೇವಸ್ಥಾನ ಪ್ರವೇಶಿಸದಂತೆ ತಡೆದ ಭಜರಂಗದಳ ಕಾರ್ಯಕರ್ತರು

    ರಣ್ಬೀರ್ ಬೀಫ್ ತಿಂದ ಹೇಳಿಕೆ: ಮಹಾಕಾಳೇಶ್ವರ ದೇವಸ್ಥಾನ ಪ್ರವೇಶಿಸದಂತೆ ತಡೆದ ಭಜರಂಗದಳ ಕಾರ್ಯಕರ್ತರು

    ಣ್ಬೀರ್ ಕಪೂರ್ ಮತ್ತು ಆಲಿಯಾ ಭಟ್ ಜೋಡಿಯ ಬ್ರಹ್ಮಾಸ್ತ್ರ ಸಿನಿಮಾ ಇನ್ನಷ್ಟೇ ಬಿಡುಗಡೆ ಆಗಬೇಕಿದೆ. ಹಾಗಾಗಿ ಅವರು ಕಾಲಿಗೆ ಚಕ್ರ ಕಟ್ಟಿಕೊಂಡು ಊರೂರು ತಿರುಗುತ್ತಿದ್ದಾರೆ. ಪ್ರಚಾರದಲ್ಲಿ ತೊಡಗಿದ್ದಾರೆ. ಸದ್ಯ ಮಧ್ಯ ಪ್ರದೇಶದಲ್ಲಿರುವ  ಈ ಜೋಡಿ ಅಲ್ಲಿನ ಸುಪ್ರಸಿದ್ಧ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲು ಬಂದ ಸಂದರ್ಭದಲ್ಲಿ ದೇವಸ್ಥಾನ ಪ್ರವೇಶಿಸದಂತೆ ಅಲ್ಲಿನ ಭಜರಂಗ ದಳದ ಕಾರ್ಯಕರ್ತರು ತಡೆದಿದ್ದಾರೆ.

    ranbir alia

    ರಣ್ಬೀರ್ ಕಪೂರ್ ಮತ್ತು ಆಲಿಯಾ ಭಟ್ ಸಾಂಪ್ರದಾಯಿಕ ಬಟ್ಟೆಯಲ್ಲೇ ದೇವಸ್ಥಾನಕ್ಕೆ ಬಂದಿದ್ದಾರೆ. ದೇವಸ್ಥಾನದ ಶಿಷ್ಟಾಚಾರಗಳನ್ನೂ ಪಾಲಿಸಿದ್ದಾರೆ. ತಮಗೆ ಮತ್ತು ಸಿನಿಮಾಗೆ ಒಳ್ಳೆದಾಗಲಿ ಎಂದು ಪ್ರಾರ್ಥಿಸಲು ಬಂದ ಜೋಡಿಯನ್ನು ಭಜರಂಗ ದಳದ ಕಾರ್ಯಕರ್ತರು ತಡೆದಿರುವುದಕ್ಕೆ ಕಾರಣ, ರಣ್ಬೀರ್ ಕಪೂರ್ ಈ ಹಿಂದೆ ಹೇಳಿದ್ದ ಹೇಳಿಕೆ. ಹಲವು ವರ್ಷಗಳ ಹಿಂದೆ ಹೇಳಿದ್ದ ಆ ಹೇಳಿಕೆ ಇವತ್ತು ಅವರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಇದನ್ನೂ ಓದಿ:ನಟ ಧನಂಜಯ್ ಮತ್ತು ಅದಿತಿ ಪ್ರಭುದೇವ್ ರಿಯಲ್ ಆಗಿ ಮದುವೆ ಆಗ್ಬೇಕಿತ್ತು: ಆದರೆ ತಪ್ಪಿಸಿದವರು ಯಾರು?

    ರಣ್ಬೀರ್ ಕಪೂರ್ ಈ ಹಿಂದೆ ಸಂದರ್ಶನವೊಂದರಲ್ಲಿ ನಾನ್ ವೆಜ್ ಕುರಿತು ಮಾತನಾಡುತ್ತಾ, ತಮ್ಮದು ಮಾಂಸದೂಟ ಮಾಡುವ ಕುಟುಂಬ. ಅದರಲ್ಲೂ ನಾನಾ ರೀತಿಯ ಮಾಂಸದಡಿಗೆ ತಮ್ಮ ಮನೆಯಲ್ಲಿ ತಯಾರಾಗುತ್ತದೆ. ನನಗೆ ಬೀಫ್ ಅಂದರೆ ತುಂಬಾ ಇಷ್ಟ ಎಂದು ಹೇಳಿದ್ದರು. ಈ ಮಾತಿಗೆ ಇದೀಗ ಆಕ್ರೋಶ ವ್ಯಕ್ತವಾಗುತ್ತಿದೆ. ಹಿಂದೂಗಳು ದೇವರು ಎಂದು ಪೂಜಿಸುವ ಗೋವಿನ ಮಾಂಸವನ್ನು ತಿನ್ನುವ ರಣ್ಬೀರ್ ನಮ್ಮ ದೇವಸ್ಥಾನಗಳಿಗೆ ಬರುವುದು ಬೇಡವೆಂದು ಭಜರಂಗ ದಳದ ಕಾರ್ಯಕರ್ತರು ತಡೆದಿದ್ದಾರೆ.

    ಸಡನ್ನಾಗಿ ನಡೆದ ಬೆಳವಣಿಗೆಯಿಂದ ಗಲಿಬಿಲಿಗೊಂಡ ರಣ್ಬೀರ್ ಮತ್ತು ಆಲಿಯಾ ಭಟ್, ಅದೆಷ್ಟೇ ಸಮಾಧಾನ ಹೇಳಿದರೂ ಕೇಳದ ಕಾರಣದಿಂದಾಗಿ ದೇವಸ್ಥಾನದಿಂದ ಅವರು ಹೊರಗುಳಿದಿದ್ದಾರೆ. ಕೇವಲ ನಿರ್ದೇಶಕ ಅಯಾನ್ ಮುಖರ್ಜಿ ಒಬ್ಬರೇ ದೇವಸ್ಥಾನದ  ಒಳಗೆ ಪ್ರವೇಶಿಸಿ ದೇವರ ದರ್ಶನ ಪಡೆದಿದ್ದಾರೆ. ಮತ್ತು ಆ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಅವರು ಶೇರ್ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]