Tag: Ayana

  • ʻಕಾಂತಾರʼ ಸಿಂಗಾರ ಸಿರಿಯೇ ಲಿರಿಕ್ಸ್ ರೈಟರ್ ಬರೆದಿರುವ `ದೂರದರ್ಶನ’ ಚಿತ್ರದ ನ್ಯೂ ಸಾಂಗ್ ಔಟ್

    ʻಕಾಂತಾರʼ ಸಿಂಗಾರ ಸಿರಿಯೇ ಲಿರಿಕ್ಸ್ ರೈಟರ್ ಬರೆದಿರುವ `ದೂರದರ್ಶನ’ ಚಿತ್ರದ ನ್ಯೂ ಸಾಂಗ್ ಔಟ್

    ಟೈಟಲ್ ಮೂಲಕ ಸಖತ್ ಸುದ್ದಿ ಮಾಡಿರುವ ದಿಯಾ ಖ್ಯಾತಿಯ ಪೃಥ್ವಿ ಅಂಬರ್ ನಾಯಕ ನಟನಾಗಿ ಅಭಿನಯಿಸಿರುವ ಚಿತ್ರ ʻದೂರದರ್ಶನʼ ಸುಕೇಶ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾ ಚಿತ್ರೀಕರಣ ಮುಗಿಸಿ ಅಂತಿಮ ಹಂತದ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ. ವಿಭಿನ್ನ ಪೋಸ್ಟರ್ ಹಾಗೂ ಟೀಸರ್ ಮೂಲಕ ಎಲ್ಲರ ಗಮನ ಸೆಳೆದ ಈ ಚಿತ್ರತಂಡ ಬಿಡುಗಡೆಗೆ ಎದುರು ನೋಡುತ್ತಿದ್ದು ಪ್ರಚಾರ ಕಾರ್ಯವನ್ನು ಆರಂಭಿಸಿದೆ. ಸದ್ಯ ಈ ಚಿತ್ರದ ಬಹು ನಿರೀಕ್ಷಿತ ಹಾಡೊಂದನ್ನು ಚಿತ್ರತಂಡ ಬಿಡುಗಡೆ ಮಾಡಿದೆ.

    `ಸಿಂಗಾರ ಸಿರಿಯೇ’ ಸಾಂಗ್ ಖ್ಯಾತಿಯ ಪ್ರಮೋದ್ ಮರವಂತೆ ಸಾಹಿತ್ಯ ಕೃಷಿಯಲ್ಲಿ ಅರಳಿರುವ ಚಿತ್ರದ ಮೊದಲ ಹಾಡು ಕಣ್ಣು ಕಣ್ಣು ಕಾದಾಡುತ ಇರಲಿ ವೀಡಿಯೋ ಸಾಂಗ್ ಬಿಡುಗಡೆಯಾಗಿದೆ. ಸಂಗೀತ ನಿರ್ದೇಶಕ ವಾಸುಕಿ ವೈಭವ್ ಸಂಗೀತ ಸಂಯೋಜನೆ ಜೊತೆಗೆ ಈ ಹಾಡಿಗೆ ದನಿಯಾಗಿದ್ದಾರೆ. 80, 90ರ ದಶಕದ ಪ್ರೀತಿ, ಪ್ರೇಮವನ್ನು ನೆನಪಿಸುವ ಹಾಡು ಇದಾಗಿದ್ದು, ಅದರ ಮರುಸೃಷ್ಟಿ ಮಾಡುವ ಕೆಲಸವನ್ನು ಈ ಹಾಡಿನಲ್ಲಿ ಮಾಡಲಾಗಿದೆ. ಅದಕ್ಕೆ ತಕ್ಕಂತೆ ಛಾಯಾಗ್ರಾಹಕ ಅರುಣ್ ಸುರೇಶ್ ಈ ಹಾಡನ್ನು ಸೆರೆ ಹಿಡಿದಿದ್ದು, ಬಿಡುಗಡೆಯಾದ ಕೆಲವೇ ಗಂಟೆಯಲ್ಲಿ ಮೆಚ್ಚುಗೆ ಜೊತೆಗೆ ಒಂದು ಲಕ್ಷಕ್ಕೂ ಅಧಿಕ ವೀವ್ಸ್ ಪಡೆದುಕೊಂಡಿದೆ.

     

    View this post on Instagram

     

    A post shared by Sukesh Shetty (@sukeshetty)

    ಸುಕೇಶ್ ಶೆಟ್ಟಿ ಕಥೆ ಚಿತ್ರಕಥೆ ಬರೆದು ದೂರದರ್ಶನ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಇದು ಇವರ ಮೊದಲ ಸಿನಿಮಾ. ದೂರದರ್ಶನ 80, 90ರ ದಶಕದಲ್ಲಿ ನಡೆಯುವ ಕಥೆಯನ್ನು ಒಳಗೊಂಡಿದ್ದು, ಹಳ್ಳಿಯೊಂದಕ್ಕೆ ಟಿವಿ ಎಂಟ್ರಿ ಕೊಟ್ಟಾಗ ಏನೆಲ್ಲ ಆಗುತ್ತೆ ಅನ್ನೋದು ಈ ಚಿತ್ರದ ಒನ್ ಲೈನ್ ಕಹಾನಿ. ಚಿತ್ರದಲ್ಲಿ ಪೃಥ್ವಿ ಅಂಬರ್ ನಾಯಕಿಯಾಗಿ ಅಯಾನ ನಟಿಸಿದ್ದಾರೆ. ಇದನ್ನೂ ಓದಿ: ವ್ಯಾಯಾಮ ಮಾಡುತ್ತಿದ್ದಾಗ ಜಿಮ್ ನಲ್ಲಿ ಕುಸಿದು ಬಿದ್ದು ನಟ ಸಿದ್ಧಾಂತ್ ನಿಧನ

    ಉಗ್ರಂ ಮಂಜು, ಸುಂದರ್ ವೀಣಾ, ಹರಿಣಿ, ದೀಪಕ್ ರೈ ಪಾಣಾಜೆ, ರಘು ರಮಣಕೊಪ್ಪ, ಹುಲಿ ಕಾರ್ತಿಕ್, ಸೂರಜ್ ಮಂಗಳೂರು, ಸೂರ್ಯ ಕುಂದಾಪುರ ಒಳಗೊಂಡ ತಾರಾಗಣ ಸಿನಿಮಾದಲ್ಲಿದೆ. ಚಿತ್ರೀಕರಣ ಮುಗಿಸಿ, ಡಬ್ಬಿಂಗ್ ಪೂರ್ಣಗೊಳಿಸಿರುವ ಸಿನಿಮಾ ತಂಡ ಅಂತಿಮ ಹಂತದ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿದ್ದು ಸದ್ಯದಲ್ಲೇ ರಿಲೀಸ್ ಡೇಟ್ ಅನೌನ್ಸ್ ಮಾಡಲಿದೆ ಚಿತ್ರತಂಡ.

    Live Tv
    [brid partner=56869869 player=32851 video=960834 autoplay=true]

  • ‘ದೂರದರ್ಶನ’ದಲ್ಲಿ ಪೃಥ್ವಿ ಅಂಬರ್ ಗೆ ಜೊತೆಯಾದ ಆಯಾನಾ

    ‘ದೂರದರ್ಶನ’ದಲ್ಲಿ ಪೃಥ್ವಿ ಅಂಬರ್ ಗೆ ಜೊತೆಯಾದ ಆಯಾನಾ

    ದಿಯಾ ಸಿನಿಮಾ ಮೂಲಕ ಬೆಳ್ಳಿಪರದೆಯಲ್ಲಿ ಮಿಂಚಿದ್ದ ಪೃಥ್ವಿ ಅಂಬರ್‌ ಈಗ ‘ದೂರದರ್ಶನ’ ಹೊತ್ತು ಬರುತ್ತಿದ್ದಾರೆ. ವಿಭಿನ್ನ ಕಥಾಹಂದರದ ಈ ಸಿನಿಮಾದ ಟೈಟಲ್‌ ಟೀಸರ್‌ ಇತ್ತೀಚೆಗೆ ರಿಲೀಸ್ ಆಗಿದ್ದು, ಸಾಕಷ್ಟು ಸದ್ದು ಮಾಡ್ತಿದೆ. ಇದೀಗ ದೂರದರ್ಶನ ಬಳಗ ನಾಯಕಿಯನ್ನು ಚಿತ್ರರಸಿಕರಿಗೆ ಪರಿಚಯಿಸ್ತಿದೆ. ಈ ಹಿಂದೆ ಇಲ್ಲಿ ಇರಲಾರೆ ಅಲ್ಲಿಗೆ ಹೋಗಲಾರೆ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಅಡಿ ಇಟ್ಟಿದ್ದ ಆಯಾನಾ ಪೃಥ್ವಿ ಅಂಬರ್ ಗೆ ಜೋಡಿಯಾಗಿ ನಟಿಸಿದ್ದಾರೆ.

    ದೂರದರ್ಶನ ಸಿನಿಮಾಗೆ ನಾಯಕಿ ಪಾತ್ರಕ್ಕೆ ಆಡಿಷನ್ ಕರೆಯಲಾಗಿತ್ತು. 30 ರಿಂದ 40 ಮಂದಿ ಆಡಿಷನ್ ನಲ್ಲಿ ಪಾಲ್ಗೊಂಡಿದ್ದರು. ಈ ಪೈಕಿ ಆಯಾನಾ ಫೈನಲ್ ಆಗಿ ಆಯ್ಕೆಯಾದರು ಎನ್ನುವ ನಿರ್ದೇಶಕ ಸುಕೇಶ್ ಶೆಟ್ಟಿ, ಆಯಾನಾ ಮೈತ್ರಿ ಎಂಬ ಪಾತ್ರದಲ್ಲಿ ಬಣ್ಣ ಹಚ್ಚಿದ್ದು, ರಿಕ್ಷಾ ಡ್ರೈವರ್ ಮಗಳಾಗಿ ಅಪ್ಪನ ಆಸೆಯಲ್ಲಿ ಬೆಳೆಯುವ ಹುಡುಗಿ ಪ್ರೀತಿಯಲ್ಲಿ ಬಿದ್ದಾಗ ಮುಂದೇನು ಆಗುತ್ತೇ ಎಂಬ ತಿರುವು ನೀಡುವ ಪಾತ್ರದಲ್ಲಿ ನಟಿಸಿದ್ದಾರೆ. ಪ್ರಮುಖ ಪಾತ್ರದಲ್ಲಿ ಉಗ್ರಂ ಮಂಜು, ಸುಂದರ್ ವೀಣಾ ಕಾಣಿಸಿಕೊಂಡಿದ್ದು, ಉಳಿದಂತೆ ಹರಿಣಿ, ದೀಪಕ್ ರೈ ಪಾಣಾಜೆ, ರಘು ರಮಣಕೊಪ್ಪ, ಹುಲಿ ಕಾರ್ತಿಕ್, ಸೂರಜ್ ಮಂಗಳೂರು, ಸೂರ್ಯ ಕುಂದಾಪುರ ಸೇರಿದಂತೆ ಮತ್ತಿತರ ತಾರಾಗಣ ಸಿನಿಮಾದಲ್ಲಿದೆ. ಇದನ್ನೂ ಓದಿ:ಅನಾಥ ಮಹಿಳೆಗೆ ಮನೆ ಕಟ್ಟಿಸಿಕೊಟ್ಟ ಕಿಚ್ಚ ಸುದೀಪ್

    ಸಂಭಾಷಣೆ ಹಾಗೂ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ, ಹಲವು ಕಿರುಚಿತ್ರಗಳನ್ನು ನಿರ್ದೇಶನ ಮಾಡಿರುವ ಸುಕೇಶ್ ಶೆಟ್ಟಿ ಈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದು, ಸಿನಿಮಾಗೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಇದು ಇವರ ಮೊದಲ ಸಿನಿಮಾವಾಗಿದೆ. ನೈಜ ಘಟನೆ ಹಾಗೂ ಕಾಲ್ಪನಿಕತೆ ಬೆರೆತ ಸಿನಿಮಾವಾಗಿರುವ ದೂರದರ್ಶನ ಚಿತ್ರೀಕರಣ ಮಂಗಳೂರು  ಪುತ್ತೂರು ಮಧ್ಯದ ಆರ್ಲಪದವಿನಲ್ಲಿ 38 ದಿನಗಳ ಕಾಲ ನಡೆದಿದೆ. ವಿಎಸ್ ಮೀಡಿಯಾ ಎಂಟರ್ ಪ್ರೈಸಸ್ ಬ್ಯಾನರ್ ನಡಿ ರಾಜೇಶ್ ಭಟ್ ಸಿನಿಮಾಗೆ ಬಂಡವಾಳ ಹೂಡಿದ್ದು, ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಜವಾಬ್ದಾರಿಯನ್ನು ಉಗ್ರಂ ಮಂಜು ಹೊತ್ತಿದ್ದಾರೆ. ವಾಸುಕಿ ವೈಭವ್ ಸಂಗೀತ ಸಂಯೋಜನೆ, ಅರುಣ್ ಸುರೇಶ್ ಕ್ಯಾಮೆರಾ ವರ್ಕ್, ನಂದೀಶ್ ಟಿಜಿ ಸಂಭಾಷಣೆ, ಪ್ರದೀಪ್ ಆರ್ ರಾವ್ ಸಂಕಲನ ಸಿನಿಮಾಕ್ಕಿದೆ.

    Live Tv