Tag: AYUSH

  • ಯುಜಿ, ಪಿಜಿ ಆಯುಷ್: ಡಿ.23ರಿಂದ ಕೊನೆ ಸುತ್ತಿನ ಸೀಟು ಹಂಚಿಕೆ – ಕೆಇಎ

    ಯುಜಿ, ಪಿಜಿ ಆಯುಷ್: ಡಿ.23ರಿಂದ ಕೊನೆ ಸುತ್ತಿನ ಸೀಟು ಹಂಚಿಕೆ – ಕೆಇಎ

    ಬೆಂಗಳೂರು: ಪ್ರಸಕ್ತ ಸಾಲಿನ ಪದವಿ ಮತ್ತು ಸ್ನಾತಕೋತ್ತರ ಪದವಿಯ ಆಯುಷ್ ಕೋರ್ಸ್‌ಗಳ (AYUSH) ಪ್ರವೇಶಕ್ಕೆ ಕೊನೆ ಸುತ್ತಿನ ಸೀಟು ಹಂಚಿಕೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅವಕಾಶ ಕಲ್ಪಿಸಿದೆ. ಅರ್ಹ ಅಭ್ಯರ್ಥಿಗಳು ಡಿ.23ರಿಂದ ಕೋರ್ಸ್ ಶುಲ್ಕವನ್ನು ಮುಂಗಡವಾಗಿ ಪಾವತಿಸಿ ಈ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ತಿಳಿಸಿದ್ದಾರೆ.

    ಭಾರತೀಯ ವೈದ್ಯ ಪದ್ಧತಿಯ ರಾಷ್ಟ್ರೀಯ ಆಯೋಗ ಈ ಕೋರ್ಸ್‌ಗಳ ಪ್ರವೇಶಕ್ಕೆ ಡಿ.31ರವರೆಗೆ ಸಮಯ ನೀಡಿರುವ ಕಾರಣ ಹಂಚಿಕೆಯಾಗದೆ ಬಾಕಿ ಉಳಿದಿರುವ ಸೀಟುಗಳನ್ನು ಕೊನೆ ಸುತ್ತಿನಲ್ಲಿ ಹಂಚಿಕೆ ಮಾಡಲಾಗುತ್ತಿದೆ. ಸದ್ಯ ಯುಜಿ ಆಯುಷ್‌ನಲ್ಲಿ 436 ಹಾಗೂ ಪಿಜಿ ಆಯುಷ್‌ನಲ್ಲಿ 201 ಸೀಟುಗಳು ಹಂಚಿಕೆಗೆ ಲಭ್ಯ ಇವೆ. ಇನ್ನೂ ಕೆಲವರು ಕಾಲೇಜುಗಳಿಗೆ ವರದಿ ಮಾಡಿಕೊಳ್ಳದಿದ್ದ ಪಕ್ಷದಲ್ಲಿ ಅಂತಹವರ ಸೀಟುಗಳನ್ನು ಕೂಡ ಹಂಚಿಕೆಗೆ ಪರಿಗಣಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

    ವೇಳಾಪಟ್ಟಿ: ಕೋರ್ಸ್ ಶುಲ್ಕ ಮುಂಗಡ ಪಾವತಿಗೆ ಡಿ.23ರಿಂದ 26ರವರೆಗೆ ಅವಕಾಶ ನೀಡಲಾಗಿದೆ. ಶುಲ್ಕ ಪಾವತಿಸಿದವರು ಡಿ.24ರಿಂದ 26ರವರೆಗೆ ಆಯ್ಕೆ ದಾಖಲಿಸಬೇಕು. ಡಿ.26ರಂದು ಸಂಜೆ 6ಕ್ಕೆ ತಾತ್ಕಾಲಿಕ ಹಾಗೂ ಡಿ.27ಕ್ಕೆ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ಡಿ.27ರಿಂದ 29ರವರೆಗೆ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡು, ಡಿ.30ರೊಳಗೆ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್‌ಗೆ ಭೇಟಿ ನೀಡುವಂತೆ ಅವರು ಕೋರಿದ್ದಾರೆ.

  • ಪಿಜಿ ಆಯುಷ್‌ ತಾತ್ಕಾಲಿಕ ಫಲಿತಾಂಶ ಪ್ರಕಟ – ಕೆಇಎ

    ಬೆಂಗಳೂರು: ಪಿಜಿ ಆಯುಷ್‌-2024 (PG Ayush 2024) ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸೋಮವಾರ ಪ್ರಕಟಿಸಿದೆ.

    ಆಕ್ಷೇಪಣೆಗಳನ್ನು ನೋಡಿಕೊಂಡು ಮಂಗಳವಾರ (ನ.12) ಮಧ್ಯಾಹ್ನ 2 ಗಂಟೆಗೆ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

    ಅಭ್ಯರ್ಥಿಗಳು,ಪೋಷಕರ ಬಳಿ ಚರ್ಚಿಸಿ, ಆಯ್ಕೆಯನ್ನು ದಾಖಲಿಸಬೇಕು. ನಂತರ ಶುಲ್ಕ ಪಾವತಿಸಿ ಕಾಲೇಜಿಗೆ ವರದಿ ಮಾಡಿಕೊಳ್ಳಲು ನ.14ರವರೆಗೆ ಅವಕಾಶ ಇರುತ್ತದೆ ಎಂದು ತಿಳಿಸಿದ್ದಾರೆ.

    ಹೆಚ್ಚಿನ ವಿವರಗಳಿಗೆ ಕೆಇಎ ವೆಬ್‌ಸೈಟ್‌ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ ಎಂದಿದ್ದಾರೆ.

  • ಯುಜಿಆಯುಷ್-2023: ಕೊನೆ ಸುತ್ತಿನ ಸೀಟು ಹಂಚಿಕೆ ಅ.13ಕ್ಕೆ ದಾಖಲೆ ಪರಿಶೀಲನೆ

    ಯುಜಿಆಯುಷ್-2023: ಕೊನೆ ಸುತ್ತಿನ ಸೀಟು ಹಂಚಿಕೆ ಅ.13ಕ್ಕೆ ದಾಖಲೆ ಪರಿಶೀಲನೆ

    ಬೆಂಗಳೂರು: ಆರ್ಯುವೇದ, ಯುನಾನಿ ಮತ್ತು ಹೋಮಿಯೋಪತಿ ಓದಲು ಆಸಕ್ತಿ ಇರುವ ಹಾಗೂ ಯುಜಿ ನೀಟ್ (UG NEET) ಪರೀಕ್ಷೆಯಲ್ಲಿ ಅರ್ಹತೆ ಪಡೆದ ರಾಜ್ಯದ ವಿದ್ಯಾರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಯನ್ನು ಅ.13ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಲು ತೀರ್ಮಾನಿಸಿದೆ.

    ಅಂದು ಕೆಇಎ ಕಚೇರಿಯಲ್ಲಿ ಬೆಳಗ್ಗೆ 10ರಿಂದ ದಾಖಲೆಗಳ ಪರಿಶೀಲನೆ ನಡೆಯಲಿದೆ. ಇದು ಕೊನೆಯ ಅವಕಾಶ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

    ಈಗಾಗಲೇ ವೆರಿಫಿಕೇಷನ್ ಸ್ಲಿಪ್ ಪಡೆದಿರುವವರು ದಾಖಲಾತಿ ಪರಿಶೀಲನೆಗೆ ಹಾಜರಾಗಲು ಅವಕಾಶ ಇರುವುದಿಲ್ಲ. ಇದುವರೆಗೂ ದಾಖಲಾತಿಗಳನ್ನು ಪರಿಶೀಲನೆ ಮಾಡಿಸಿಕೊಳ್ಳದಿರುವವರು ಮಾತ್ರ ಹಾಜರಾಗಬೇಕು ಎಂದು ಅವರು ವಿವರಿಸಿದ್ದಾರೆ.  ಇದನ್ನೂ ಓದಿ: ಸಣ್ಣ ಮಕ್ಕಳ ಹಾಲಿಗೆ 4, ದೊಡ್ಡ ಮಕ್ಕಳ ಕ್ವಾಟರ್‌ಗೆ 40 ರೂ. ಜಾಸ್ತಿ – ಸರ್ಕಾರದ ವಿರುದ್ಧ ಅಶೋಕ್ ಕಿಡಿ

    ಯುಜಿ ಆಯುಷ್ (UG AYUSH) ಕೊನೆಯ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಅ.16ರಿಂದ ಆರಂಭವಾಗಲಿದೆ. ಅಂದು ಸೀಟ್ ಮ್ಯಾಟ್ರಿಕ್ಸ್ ಮತ್ತು ಶುಲ್ಕದ ವಿವರಗಳನ್ನು ಪ್ರಕಟಿಸಲಾಗುತ್ತದೆ. ಹಾಗೆಯೇ ತಮ್ಮ ಇಚ್ಛೆಗಳನ್ನು ದಾಖಲು ಮಾಡುವುದಕ್ಕೂ ಅಂದೇ ಅವಕಾಶ ನೀಡಲಾಗಿದೆ. ಒಟ್ಟಾರೆ ಅ.21ಕ್ಕೆ ಇಡೀ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು.

    ಯೋಗ ಮತ್ತು ನ್ಯಾಚುರೋಪತಿ ಕೋರ್ಸ್‌ಗಳ ಪ್ರವೇಶ ಪ್ರಕ್ರಿಯೆ ಆರಂಭವಾಗಿದ್ದು ಆಪ್ಷನ್ ಎಂಟ್ರಿಗೆ ಅ.15ರವರೆಗೆ ಅವಕಾಶ ನೀಡಲಾಗಿದೆ. ಪ್ರವೇಶ ಪ್ರಕಿಯೆ ಅ.18ರೊಳಗೆ ಮುಗಿಯಲಿದೆ ಎಂದು ಅವರು ವಿವರಿಸಿದ್ದಾರೆ. ವಿವರಗಳಿಗೆ ಕೆಇಎ ವೆಬ್‌ಸೈಟ್‌ಗೆ ಭೇಟಿ ನೀಡುವಂತೆ ಅವರು ಕೋರಿದ್ದಾರೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 5ನೇ ವರ್ಷದ ಮದುವೆ ವಾರ್ಷಿಕೋತ್ಸವ ಸಂಭ್ರಮದಲ್ಲಿ ರಾಧಿಕಾ-ಯಶ್

    5ನೇ ವರ್ಷದ ಮದುವೆ ವಾರ್ಷಿಕೋತ್ಸವ ಸಂಭ್ರಮದಲ್ಲಿ ರಾಧಿಕಾ-ಯಶ್

    ಬೆಂಗಳೂರು: ಚಂದನವನದ ರಾಕಿಂಗ್ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಇಂದು 5ನೇ ವರ್ಷದ ಮದುವೆ ವಾರ್ಷಿಕೋತ್ಸವ ಸಂಭ್ರಮದಲ್ಲಿದ್ದಾರೆ.

    ಮದುವೆ ವಾರ್ಷಿಕೋತ್ಸವದ ಹಿನ್ನೆಲೆ ರಾಧಿಕಾ ಅವರು ಇನ್‍ಸ್ಟಾಗ್ರಾಮ್ ನಲ್ಲಿ ಬ್ಯೂ ಟ್ಯಾಪ್ಲಿನ್ ಬರೆದ ಸಾಲುಗಳನ್ನು ಬರೆದು, ಯಶ್ ಜೊತೆಗಿನ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಈ ಸಾಲಿನಲ್ಲಿ, ಯಾರಾದರೂ ನಿಮ್ಮನ್ನು ನೀವು ಉತ್ತಮಗೊಳ್ಳುವಂತೆ ಮಾಡುವ ಪ್ರೀತಿಯಲ್ಲಿ ಮತ್ತು ಜೀವನದಲ್ಲಿ ನಿಮ್ಮನ್ನು ಪ್ರೇರೇಪಿಸುವ, ಪ್ರೋತ್ಸಾಹಿಸುವ, ನೀವು ನಿರ್ಲಕ್ಷಿಸುವ ಕನಸುಗಳು ಮತ್ತು ಗುರಿಗಳ ಕಡೆಗೆ ನಿಮ್ಮನ್ನು ಮತ್ತೆ ತಳ್ಳುವವರು, ಯಾವುದೇ ಅಪೇಕ್ಷೆಗಳಿಲ್ಲದೆ ನಿಸ್ವಾರ್ಥವಾಗಿ ಅವರ ಸಮಯವನ್ನು ನಿಮಗಾಗಿ ತ್ಯಾಗ ಮಾಡುವವರು ನಿಮ್ಮ ಜೀವನದಲ್ಲಿ ಇದ್ದರೆ, ನೀವು ಧೈರ್ಯಶಾಲಿ, ಸುಸಜ್ಜಿತ ಸಂತೋಷದ ವ್ಯಕ್ತಿಯಾಗಲು ಸಹಾಯ ಮಾಡುತ್ತೆ. ಅಂತಹ ಸಂಬಂಧ ಪವಿತ್ರವಾದದ್ದು, ಅಂತಹ ಪ್ರೀತಿಯನ್ನು ನೀವು ಹಿಡಿದುಕೊಳ್ಳಿ ಎಂದು ಬರೆದು ಯಶ್‍ಗೆ ಮದುವೆ ವಾರ್ಷಿಕೋತ್ಸವದ ವಿಶ್ ಮಾಡಿದ್ದಾರೆ. ಇದನ್ನೂ ಓದಿ: ಐರಾಗೆ ಹುಟ್ಟುಹಬ್ಬದ ಸಂಭ್ರಮ – ನಿನ್ನ ಕೈ ಹಿಡಿಯಲು ಯಾವಾಗಲೂ ಇರುತ್ತೇನೆ ಅಂದ ರಾಧಿಕಾ

     

    View this post on Instagram

     

    A post shared by Radhika Pandit (@iamradhikapandit)

    ಇನ್‍ಸ್ಟಾದಲ್ಲಿ ರಾಧಿಕಾ, ಯಶ್ ಜೊತೆಗೆ ಬೀಚ್ ನಲ್ಲಿ ಕೈಹಿಡಿದುಕೊಂಡು ಕುಳಿತುಕೊಂಡಿರುವ ಫೋಟೋವನ್ನು ಶೇರ್ ಮಾಡಿದ್ದು, ಬ್ಯೂ ಟ್ಯಾಪ್ಲಿನ್ ಬರೆದ ಸಾಲುಗಳನ್ನು ಯಶ್ ಗೆ ಅರ್ಪಿಸಿದ್ದಾರೆ. ಈ ಸಾಲುಗಳ ಮೂಲಕ ಯಶ್ ನನಗೆ ಎಷ್ಟು ಪರ್ಫೆಕ್ಟ್ ಜೋಡಿ ಎಂದು ಹೇಳಿದ್ದಾರೆ.

    ಈ ಜೋಡಿ ಚಂದನವನದ ರಾಕಿಂಗ್ ಜೋಡಿಯಾಗಿದ್ದು, ಇವರ ಕುಟುಂಬ ಎಲ್ಲರಿಗೂ ಆಕರ್ಷಣೆಯ ಕೇಂದ್ರವಾಗಿರುತ್ತೆ. ಇವರ ಪ್ರತಿಯೊಂದು ಅಪ್ಡೇಟ್ ಗಳನ್ನು ಅಭಿಮಾನಿಗಳು ಕೇಳಲು ಕಾತುರದಿಂದ ಕಾಯುತ್ತಿರುತ್ತಾರೆ. ಈ ಜೋಡಿ ಸಿನಿಮಾದಲ್ಲಿಯೂ ಸೂಪರ್ ಹಿಟ್ ಆಗಿದ್ದು, ನಿಜ ಜೀವನದಲ್ಲಿಯೂ ವೈಯಕ್ತಿಕ ಜೀವನದ ಜೊತೆಗೆ ಸಾಮಾಜಿಕ ಕಾರ್ಯಗಳಲ್ಲಿಯೂ ತೊಡಗಿಸಿಕೊಂಡಿರುತ್ತಾರೆ. ಇದನ್ನೂ ಓದಿ: ಓಟದ ಮೂಲಕ ಅಪ್ಪು ಸಮಾಧಿಗೆ ಹೊರಟ ಮಹಿಳೆಯ ಆರೋಗ್ಯ ವಿಚಾರಿಸಿದ್ರು ರಾಘಣ್ಣ

    ಈ ಜೋಡಿ 2016ರ ಡಿಸೆಂಬರ್ 9 ರಂದು ವಿವಾಹವಾಗಿದ್ದು, ಇವರಿಗೆ ಇಬ್ಬರು ಮಕ್ಕಳಿದ್ದಾರೆ. 2018 ಡಿಸೆಂಬರ್ ನಲ್ಲಿ ಹೆಣ್ಣು ಮಗು ಜನಿಸಿದ್ದು, ಆ ಮಗುವಿಗೆ ‘ಐರಾ’ ಎಂದು ಹೆಸರಿಟ್ಟರು. ನಂತರ 2019 ರಲ್ಲಿ ಗಂಡು ಮಗು ಜನಿಸಿದ್ದು, ಆ ಮಗುವಿಗೆ ‘ಯಥರ್ವ್’ ಎಂದು ಹೆಸರಿಟ್ಟಿದ್ದಾರೆ. ಈ ಸ್ಟಾರ್ ಜೋಡಿಗಳಂತೆ ಇವರ ಮಕ್ಕಳು ಸ್ಟಾರ್ ಆಗಿದ್ದು, ಇವರಿಬ್ಬರಿಗೂ ಅಭಿಮಾನಿ ಬಳಗವಿದೆ.

  • ರಾಜ್ಯಾದ್ಯಂತ ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಪುನರಾರಂಭಕ್ಕೆ ಗ್ರೀನ್ ಸಿಗ್ನಲ್

    ರಾಜ್ಯಾದ್ಯಂತ ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಪುನರಾರಂಭಕ್ಕೆ ಗ್ರೀನ್ ಸಿಗ್ನಲ್

    – ಮುಖ್ಯಮಂತ್ರಿಗಳಿಂದ 5 ಲಕ್ಷ ಲಸಿಕೆಗೆ ಬೇಡಿಕೆ

    ಬೆಂಗಳೂರು: ರಾಜ್ಯಾದ್ಯಂತ ವೈದ್ಯಕೀಯ, ಆಯುಷ್, ದಂತ ವೈದ್ಯಕೀಯ ಹಾಗೂ ಪ್ಯಾರಾ ಮೆಡಿಕಲ್ ಶಿಕ್ಷಣ ಸಂಸ್ಥೆಗಳನ್ನು ಪುನರಾರಂಭಿಸಲು ಅನುಮತಿ ನೀಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?
    ರಾಜ್ಯಾದ್ಯಂತ ವೈದ್ಯಕೀಯ, ಆಯುಷ್, ದಂತ ವೈದ್ಯಕೀಯ ಹಾಗೂ ಪ್ಯಾರಾ ಮೆಡಿಕಲ್ ಶಿಕ್ಷಣ ಸಂಸ್ಥೆಗಳನ್ನು ಪುನರಾರಂಭಿಸಲು ಅನುಮತಿ ನೀಡಲಾಗಿದ್ದು, ಕೊರೊನಾ ಲಸಿಕೆ ಪಡೆದಿರುವ ವಿದ್ಯಾರ್ಥಿಗಳು, ಬೋಧಕರು ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಮಾತ್ರ ಕಾಲೇಜು ಹಾಜರಾತಿಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

    ಕೋವಿಡ್ ನಿರ್ವಹಣೆಗಾಗಿ ಎಲ್ಲ ಜಿಲ್ಲೆಗಳಲ್ಲಿ ತರಬೇತಿ:
    ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ವೈದ್ಯರು ಹಾಗೂ ಇತರೆ ಸಿಬ್ಬಂದಿಗೆ ಎಲ್ಲ ಜಿಲ್ಲೆಗಳಲ್ಲಿ ತರಬೇತಿ ಕಾರ್ಯಕ್ರಮ ನಡೆಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

    ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್ ನಿರ್ವಹಣೆ ಸಂಬಂಧ ವೈದ್ಯರಿಗೆ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, 18 ವರ್ಷ ಮೇಲಿನವರೆಲ್ಲರಿಗೂ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಇದಕ್ಕಿಂತ ಕೆಳ ವಯಸ್ಸಿನ ಮಕ್ಕಳಿಗೆ ಸೋಂಕು ತಗುಲಬಹುದು ಎಂದು ತಜ್ಞರು ಅಂದಾಜಿಸಿದ್ದಾರೆ. ಮಧ್ಯಮ, ಹಿರಿಯ ವಯಸ್ಸಿನವರಿಗೆ ನೀಡುವ ಚಿಕಿತ್ಸೆಯನ್ನು ಮಕ್ಕಳಿಗೆ ನೀಡಲು ಸಾಧ್ಯವಿಲ್ಲ. ಈ ವಯೋಮಾನದವರಿಗೆ ಸೋಂಕು ಬಂದರೆ ಮಕ್ಕಳ ತಜ್ಞರ ಬಳಿಯೇ ಹೋಗಬೇಕೆಂದು ಸೂಚಿಸಲಾಗಿದೆ. ಇದಕ್ಕೆ ಪೂರಕವಾಗಿ ವೈದ್ಯರಿಗೆ ತರಬೇತಿ ನೀಡಲಾಗುತ್ತಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ವೈದ್ಯರಿಗೆ ತರಬೇತಿ ನೀಡಲಾಗುವುದು ಎಂದರು.

    ತರಬೇತಿಯನ್ನು ವಿಷಯ ತಜ್ಞರು ನೀಡುತ್ತಿದ್ದು, ಇದನ್ನು ದಾಖಲೆಯಾಗಿಸಿದರೆ ಅನುಕೂಲವಾಗುತ್ತದೆ. ಆದ್ದರಿಂದ ಇಲ್ಲಿ ನೀಡುವ ತರಬೇತಿಯನ್ನು ವೀಡಿಯೋ ರೆಕಾರ್ಡ್ ಮಾಡಿಸಿ ದಾಖಲಿಸಬೇಕು. ಇತರೆ ವೈದ್ಯರಿಗೂ ಈ ವಿಷಯ ತಿಳಿಸಬೇಕು ಎಂದು ಸೂಚಿಸಿದರು. ಇದನ್ನೂ ಓದಿ: ಉಮಾಪತಿಗೆ ಬ್ಲ್ಯಾಕ್‍ಮೇಲ್, ದರ್ಶನ್ ಹೊಡೆದಿದ್ದು ನಿಜ: ಸಂದೇಶ್ ಆಡಿಯೋ ಬಾಂಬ್

    ಡಾ.ದೇವಿಶೆಟ್ಟಿ ಸಮಿತಿ ಮೂರನೇ ಅಲೆ ಸಿದ್ಧತೆಗೆ ವರದಿ ನೀಡಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಕೊರೊನಾ ವೈರಾಣು ರೂಪಾಂತರಗೊಳ್ಳುತ್ತಿದ್ದು, ಮುಂದುವರಿದ ದೇಶಗಳು ಕೂಡ ಎಡವಿದೆ. ಮೊದಲ ಅಲೆಯಲ್ಲಿ ಇತರೆ ದೇಶಗಳಿಗೆ ಹೋಲಿಕೆ ಮಾಡಿದರೆ ಪರಿಣಾಮಕಾರಿಯಾಗಿ ನಿಯಂತ್ರಣ ಮಾಡಿದ್ದೇವೆ. ಎರಡನೇ ಅಲೆಗೆ ಮುನ್ನ ಮೂಲಸೌಕರ್ಯ ಹೆಚ್ಚಿಸಲಾಗಿದೆ. 4 ಸಾವಿರ ವೈದ್ಯರನ್ನು ನೇಮಿಸಲಾಗಿದೆ ಎಂದು ವಿವರಿಸಿದರು.

    ಕೇರಳ, ಮಹಾರಾಷ್ಟ್ರ ಗಡಿ ಹಂಚಿಕೊಳ್ಳುವುದರಿಂದ ಕೋವಿಡ್ ಬಗ್ಗೆ ಎಚ್ಚರವಾಗಿರಬೇಕು. ಸೋಂಕು ಇನ್ನೂ ಇರುವುದರಿಂದ ಸುರಕ್ಷತಾ ಕ್ರಮ ವಹಿಸಬೇಕು. ಬೆಂಗಳೂರು ನಗರ ಜಿಲ್ಲೆ ಕೋವಿಡ್ ಲಸಿಕಾಕರಣದಲ್ಲಿ ಮುಂಚೂಣಿಯಲ್ಲಿದೆ. ಇದಕ್ಕಾಗಿ ಎಲ್ಲ ಸಿಬ್ಬಂದಿಗೆ ಧನ್ಯವಾದ ಎಂದರು.

    ಮಕ್ಕಳಿಗೆ ಚಿಕಿತ್ಸೆ:
    ಪ್ರತಿ ಜಿಲ್ಲಾಸ್ಪತ್ರೆಗಳಲ್ಲಿ ಮಕ್ಕಳ ಆರೈಕೆಗಾಗಿ ವಿಶೇಷ ವಿಭಾಗ ಆರಂಭಿಸಲಾಗುತ್ತಿದೆ. ಅದಕ್ಕೆ ಬೇಕಾದ ಮಾನವ ಸಂಪನ್ಮೂಲವನ್ನು ಒದಗಿಸಲಾಗಿದೆ. ಹಲವು ದೇಶಗಳಲ್ಲಿ ಮೂರನೇ ಅಲೆ ಬಂದಿದೆ. ಮೈಮರೆತರೆ ಮೂರನೇ ಅಲೆ ನಾವೇ ಉಂಟುಮಾಡಿದಂತಾಗುತ್ತದೆ. ಧಾರ್ಮಿಕ, ಸಾಮಾಜಿಕ ಚಟುವಟಿಕೆಗಳಿಗೆ ಕಡಿವಾಣ ಹಾಕಿದರೆ ಸೋಂಕು ಹರಡುವುದನ್ನು ತಪ್ಪಿಸಬಹುದು. ಕನಿಷ್ಠ ಶೇ.70 ಜನಸಂಖ್ಯೆಗೆ ಲಸಿಕೆ ನೀಡುವವರೆಗೂ ಎಚ್ಚರ ಅಗತ್ಯ ಎಂದರು.

    ಪ್ರಧಾನಿಗಳು, ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದ್ದು, ನಮ್ಮ ಮುಖ್ಯಮಂತ್ರಿಗಳು ದಿನಕ್ಕೆ 5 ಲಕ್ಷ ಲಸಿಕೆಗೆ ಬೇಡಿಕೆ ಇಟ್ಟಿದ್ದಾರೆ. ಒಂದು ತಿಂಗಳಲ್ಲಿ ಒಂದೂವರೆ ಕೋಟಿ ಜನರಿಗೆ ಲಸಿಕೆ ನೀಡುವ ಗುರಿ ಇದೆ. ಈಗಾಗಲೇ 2.40 ಕೋಟಿಗೂ ಹೆಚ್ಚು ಜನರಿಗೆ ಲಸಿಕೆ ನೀಡಿದ್ದೇವೆ ಎಂದು ಸಿಎಂ ಮನವಿ ಮಾಡಿದ್ದಾರೆ. ಈ ತಿಂಗಳಲ್ಲೇ ಹೆಚ್ಚು ಲಸಿಕೆ ಸಿಗುವ ನಿರೀಕ್ಷೆ ಇದೆ ಎಂದರು.

    ಹೆಚ್ಚು ಎಚ್ಚರಿಕೆಯಿಂದಿರಬೇಕೆಂದು ಪ್ರಧಾನಿ ಕಿವಿಮಾತು ಹೇಳಿದ್ದಾರೆ. ಲಸಿಕೆ ಹೆಚ್ಚು ನೀಡಲು ಹಾಗೂ ಕಂಟೇನ್ ಮೆಂಟ್ ನಿಯಮ ಪಾಲಿಸಲು ಸೂಚಿಸಿದ್ದಾರೆ. ಈಗಾಗಲೇ ಮೂಲಸೌಕರ್ಯ ಹೆಚ್ಚಳಕ್ಕೆ 23 ಸಾವಿರ ಕೋಟಿ ರೂ. ಅನ್ನು ಕೇಂದ್ರ ನೀಡಿದೆ. ಇದನ್ನು ಗ್ರಾಮೀಣ ಆರೋಗ್ಯ ಮೂಲಸೌಕರ್ಯ ಹೆಚ್ಚಿಸಲು ಬಳಸಲು ಸಲಹೆ ನೀಡಲಾಗಿದೆ ಎಂದರು.

  • ಮನೆಯ ಔಷಧ ಬಳಸಿ ಕೊರೊನಾ ತಡೆಗಟ್ಟಿ- ಆಯುಷ್‍ನಿಂದ ಟಿಪ್ಸ್

    ಮನೆಯ ಔಷಧ ಬಳಸಿ ಕೊರೊನಾ ತಡೆಗಟ್ಟಿ- ಆಯುಷ್‍ನಿಂದ ಟಿಪ್ಸ್

    ಬೆಂಗಳೂರು: ವಿಶ್ವಾದ್ಯಂತ ಕೊರೊನಾ ವೈರಸ್ ಜನರನ್ನು ಭಯಭೀತರನ್ನಾಗಿ ಮಾಡಿದೆ. ಇದುವರೆಗೂ ಕೊರೊನಾ ವೈರಸ್ ತಗುಲಿದವರ ಸಂಖ್ಯೆ 1 ಲಕ್ಷದ ಗಡಿ ದಾಟಿದೆ. ಅವರಲ್ಲಿ ಸೋಂಕಿನಿಂದಾಗಿ ಇದುವರೆಗೆ 3,412 ಮಂದಿ ಸಾವನ್ನಪ್ಪಿದ್ದು, 41,365 ಮಂದಿಗೆ ಈಗಲೂ ಚಿಕಿತ್ಸೆ ಮುಂದುವರಿದಿದೆ. ಇದೀಗ ಕೊರೊನಾ ವೈರಸ್ ತಡೆಗಟ್ಟಲು ಆಯುಷ್ ಮಂತ್ರಾಲಯ ಮತ್ತು ಭಾರತ ಸರ್ಕಾರ ಮುನ್ನೆಚ್ಚರಿಕಾ ಮಾರ್ಗಸೂಚಿಗಳನ್ನು ತಿಳಿಸಿದೆ.

    ಮೊದಲಿಗೆ ತಡೆಗಟ್ಟುವ ಸಾಮಾನ್ಯ ವಿಧಾನ:
    1. ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳುವುದು.
    2. ಆಗಾಗ ಸಾಬೂನಿನಿಂದ ಕೈತೊಳೆಯುವುದು.
    3. ಕೆಮ್ಮುವಾಗ ಹಾಗೂ ಸೀನುವಾಗ ಬಾಯಿ ಮತ್ತು ಮೂಗನ್ನು ಕರವಸ್ತ್ರದಿಂದ ಮುಚ್ಚಿಕೊಳ್ಳುವುದು.
    4. ಕೆಮ್ಮು ಮತ್ತು ಶೀತ ಲಕ್ಷಣಗಳಿರುವ ವ್ಯಕ್ತಿಗಳಿಂದ ದೂರವಿರುವುದು ಹಾಗೂ ಸರಿಯಾಗಿ ಬೇಯಿಸದ ಮಾಂಸ ಸೇವಿಸಬಾರದು.
    5. ಜೀವಂತ ಪ್ರಾಣಿಗಳ ಸಂಪರ್ಕ ಮಾಡದಿರುವುದು.
    6. ಕಸಾಯಿಖಾನೆ ಹಾಗೂ ಪ್ರಾಣಿಗಳ ಮಾರಾಟ ಸ್ಥಳಗಳಿಂದ ದೂರವಿರುವುದು.
    7. ಕೆಮ್ಮು ಮತ್ತು ಸೀನು ಲಕ್ಷಣಗಳಿದ್ದಲ್ಲಿ ಮಾಸ್ಕ್ ಧರಿಸುವುದು.

    ಆಯುಷ್ ಪದ್ಧತಿಯಿಂದ ತಡೆಗಟ್ಟುವ ವಿಧಾನ:
    1. ತಾಜಾ, ಬಿಸಿಯಾದ, ಜೀರ್ಣಕ್ಕೆ ಸುಲಭವಾದ ಆಯಾ ಕಾಲದಲ್ಲಿ ಲಭ್ಯವಿರುವ ತರಕಾರಿಗಳನ್ನು ಸೇವಿಸುವುದು.
    2. ತುಳಸಿ, ಶುಂಠಿ ಹಾಗೂ ಅರಿಶಿಣಗಳನ್ನು ಬಿಸಿ ನೀರಿನಲ್ಲಿ ಕುದಿಸಿ ಸ್ವಲ್ಪ ಆಗಾಗ ಕುಡಿಯುವುದು.
    3. ಕೆಮ್ಮು ಇದ್ದಾಗ ಜೇನುತುಪ್ಪದೊಂದಿಗೆ 1 ಚಿಟಿಕೆ ಕಾಳು ಮೆಣಸಿನ ಪುಡಿಯೊಂದಿಗೆ ಸೇವಿಸುವುದು.
    4. ಶೀತಲೀಕರಿಸಿದ ಪರಾರ್ಥಗಳನ್ನು ಸೇವಿಸಬಾದರು.
    5. ತಂಪಾದ ಗಾಳಿ ಬೀಸುವ ಸ್ಥಳದಿಂದ ದೂರವಿರುವುದು.
    6. ಯೋಗಾಸನ ಮತ್ತು ಪ್ರಾಣಾಯಾಮವನ್ನು ಮಾಡುವುದು.

    ಉಪಯೋಗಿಸಬಹುದಾದ ಔಷಧ ಸಸ್ಯಗಳು:
    1. ತುಳಸಿ
    2. ಅಮೃತಬಳ್ಳಿ
    3. ಅರಿಶಿಣ

    ಸೋಂಕು ಲಕ್ಷಣ ಕಾಣಿಸಿಕೊಂಡರೆ ಮಾಹಿತಿ, ಚಿಕಿತ್ಸೆಗಾಗಿ ಸಂಪರ್ಕಿಸಿ:
    1.  ರಾಜ್ಯದ ಎಲ್ಲಾ ಜಿಲ್ಲಾ ಆಯುಷ್ ಅಧಿಕಾರಿಗಳು.
    2. ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಬೆಂಗಳೂರು/ಮೈಸೂರು ಇಲ್ಲವೇ ಶಿವಮೊಗ್ಗ ಮತ್ತು ತಾತನಾಥ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಬಳ್ಳಾರಿ.
    3. ಸರ್ಕಾರಿ ಯುನಾನಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಬೆಂಗಳೂರು.
    4. ಸರ್ಕಾರಿ ಹೋಮಿಯೋಪತಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಬೆಂಗಳೂರು.
    5. ಸರ್ಕಾರಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ.
    6. ಸಮೀಪದ ಆಯುರ್ವೇದ/ಯುನಾನಿ/ಹೋಮಿಯೋಪತಿ/ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಆಸ್ಪತ್ರೆ ಮತ್ತು ಚಿಕಿತ್ಸಾಯಗಳು.
    7. ಸರ್ಕಾರಿ ಆಯುರ್ವೇದ ಸಂಶೋಧನಾ ಕೇಂದ್ರ, ಮೈಸೂರು.

    ಹೀಗೆ ಕೊರೊನಾ ವೈರಸ್ ಸೋಂಕು ಬರುವ ಮೊದಲು ಜಾಗೃತರಾಗಿರಬೇಕು. ಒಂದು ವೇಳೆ ಸೋಂಕು ಕಂಡು ಬಂದರೆ ತಕ್ಷಣ ಮೇಲೆ ಸೂಚಿಸಿರುವ ಆಸ್ಪತ್ರೆಗಳಿಗೆ ಹೋಗಿ ಪರೀಕ್ಷೆ ಮಾಡಿಸಿಕೊಳ್ಳಿ.