Tag: Ayushman Bharat

  • ಆಯುಷ್ಮಾನ್ ಭಾರತ್ ವ್ಯಾಪ್ತಿಗೆ ಹೃದಯಾಘಾತ, ಪಾರ್ಶ್ವವಾಯುಗೆ ಚಿಕಿತ್ಸೆ ತರಲು ಹೆಚ್.ಡಿ.ದೇವೇಗೌಡರ ಒತ್ತಾಯ

    ಆಯುಷ್ಮಾನ್ ಭಾರತ್ ವ್ಯಾಪ್ತಿಗೆ ಹೃದಯಾಘಾತ, ಪಾರ್ಶ್ವವಾಯುಗೆ ಚಿಕಿತ್ಸೆ ತರಲು ಹೆಚ್.ಡಿ.ದೇವೇಗೌಡರ ಒತ್ತಾಯ

    – ಗ್ರಾಮೀಣ ವೈದ್ಯರು, ಆಸ್ಪತ್ರೆ ಸಿಬ್ಬಂದಿ, ದಾದಿಯರ ವೇತನ ಹೆಚ್ಚಳಕ್ಕೆ ಸಲಹೆ
    – ರಾಜ್ಯಸಭೆಯಲ್ಲಿ ಆರೋಗ್ಯ ಕ್ಷೇತ್ರದ ಬಗ್ಗೆ ಮಾಜಿ ಪ್ರಧಾನಿಗಳ ಚರ್ಚೆ
    – ಆರೋಗ್ಯ ಕ್ಷೇತ್ರಕ್ಕೆ ಬಜೆಟ್ ಹಂಚಿಕೆ 99,058 ಕೋಟಿಗೆ ಏರಿಕೆ; ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಪ್ರಧಾನಿ

    ನವದೆಹಲಿ: ಆಯುಷ್ಮಾನ್ ಭಾರತ್ ಕಾರ್ಯಕ್ರಮದಡಿಯಲ್ಲಿ ಹೃದಯಾಘಾತ ಮತ್ತು ಪಾರ್ಶ್ವವಾಯುಗೆ ಚಿಕಿತ್ಸೆ ಪಡೆಯಲು ರಾಷ್ಟ್ರವ್ಯಾಪಿ ಯೋಜನೆ ರೂಪಿಸಬೇಕು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿದರು.

    ರಾಜ್ಯಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಪ್ರಧಾನಿಗಳು, ಹೃದಯಾಘಾತ ಮತ್ತು ಪಾರ್ಶ್ವವಾಯುನಿಂದ ಮರಣ ಹೊಂದುವವರು ಭಾರತದಲ್ಲಿ ಹೆಚ್ಚುತ್ತಿದ್ದಾರೆ. ಪ್ರತಿ ವರ್ಷ ನಾವು ಲಕ್ಷಾಂತರ ಜನರನ್ನು ಕಳೆದುಕೊಳ್ಳುತ್ತಿದ್ದೇವೆ ಮತ್ತು ದುರದೃಷ್ಟವಶಾತ್ ಶೇ.30 ರಷ್ಟು ಹೃದಯಾಘಾತಗಳು 45 ವರ್ಷಕ್ಕಿಂತ ಕಡಿಮೆ ವಯಸ್ಸಿನ ವ್ಯಕ್ತಿಗಳಲ್ಲಿ ಸಂಭವಿಸುತ್ತವೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

    ಗ್ರಾಮೀಣ ಪ್ರದೇಶದಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಿರುವ ಸಲುವಾಗಿ ತಾಲ್ಲೂಕು ಆಸ್ಪತ್ರೆಗಳಲ್ಲಿ 18,000 ರೂ.ಗೆ ರಕ್ತ ಹೆಪ್ಪುಗಟ್ಟುವಿಕೆ ಕರಗಿಸುವ ಇಂಜೆಕ್ಷನ್‌ಗಳು ಲಭ್ಯವಾಗುವಂತೆ ಮಾಡಬೇಕೆಂದು ಕೋರಿದರು. ಹೀಗೆ ಮಾಡುವುದರಿಂದ ಗೋಲ್ಡನ್. ಅವರ್ ನಲ್ಲಿಯೇ, ಆರು ಗಂಟೆಗಳ ಒಳಗಾಗಿ ಜೀವಗಳನ್ನು ಉಳಿಸಬಹುದು. ಆರಂಭಿಕವಾಗಿ ಆಯುಷ್ಮಾನ್ ಭಾರತ್ ಅಡಿಯಲ್ಲಿ ಆಂಜಿಯೋಪ್ಲ್ಯಾಸ್ಟಿ ಮತ್ತು ಸ್ಟಂಟ್ ಅಳವಡಿಸುವುದಕ್ಕಾಗಿ ರೋಗಿಗಳನ್ನು ಹತ್ತಿರದ ನಗರಗಳಿಗೆ ಸ್ಥಳಾಂತರಿಸುವ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.

    ಆಯುಷ್ಮಾನ್ ಭಾರತ್ ಅಡಿಯಲ್ಲಿ ಆಂಜಿಯೋಪ್ಲ್ಯಾಸ್ಟಿ ಒಳಗೊಳ್ಳಲ್ಪಟ್ಟಿದ್ದರೂ ಜೀವ ರಕ್ಷಕ ಔಷಧಿಗಳನ್ನು ಸಹ ಈ ಯೋಜನೆಯಲ್ಲಿ ಸೇರಿಸಬೇಕು ಎಂದು ಮನವಿ ಮಾಡಿದರು.

    ಕಳೆದ ಹತ್ತು ವರ್ಷಗಳಲ್ಲಿ ರಾಷ್ಟ್ರದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ತೀವ್ರಗತಿಯ ಸುಧಾರಣೆಗೆಲೈ ಆಗುತ್ತಿವೆ. 2013-14ರಲ್ಲಿ ಆರೋಗ್ಯ ಕ್ಷೇತ್ರಕ್ಕೆ ಬಜೆಟ್ ಹಂಚಿಕೆ ಕೇವಲ 37,000 ಕೋಟಿ ರೂ.ಗಳಷ್ಟಿತ್ತು. ಈಗ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಈ ಹಂಚಿಕೆ 99,058 ಕೋಟಿ ರೂ.ಗಳಿಗೆ ಏರಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೇಳಿದರು. ಎನ್‌ಡಿಎ ಹಾಗೂ ಯುಪಿಎ ಸರ್ಕಾರಗಳ ಅವಧಿಯಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಆಗಿರುವ ಬೆಳವಣಿಗೆಯನ್ನು ಹೋಲಿಸಿ ಮಾತನಾಡಿದರು.

    ಗ್ರಾಮೀಣ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ದಾದಿಯರ ಕೊರತೆ ನೀಗಿಸಿ
    ಗ್ರಾಮೀಣ ಪ್ರದೇಶಗಳಲ್ಲಿ ಕೆಲಸ ಮಾಡುವ ಎಂಬಿಬಿಎಸ್ ವೈದ್ಯರ ವೇತನ ಹೆಚ್ಚಳಕ್ಕೆ ದೇವೇಗೌಡರು ಬಲವಾಗಿ ಪ್ರತಿಪಾದಿಸಿದರು. ಗ್ರಾಮೀಣ ವೈದ್ಯರು ಪ್ರಸ್ತುತ ತಿಂಗಳಿಗೆ 50,000-60,000 ರೂ. ವೇತನ ಪಡೆಯುತ್ತಿದ್ದಾರೆ. ಕಡಿಮೆ ಸಂಬಳದಿಂದಾಗಿ ವೈದ್ಯರು ಸಹ ಗ್ರಾಮೀಣ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಲು ಸಿದ್ಧರಿಲ್ಲ. ಪಿಎಚ್‌ಸಿಗಳು, ಸಿಎಚ್‌ಸಿಗಳು ಮತ್ತು ತಾಲ್ಲೂಕು ಆಸ್ಪತ್ರೆಗಳಿಗೆ ಹೆಚ್ಚಿನ ವೃತ್ತಿಪರರನ್ನು ಆಕರ್ಷಿಸಲು ಸರ್ಕಾರ ಅವರ ವೇತನವನ್ನು ಕನಿಷ್ಠ 80,000-90,000 ರೂ.ಗೆ ಹೆಚ್ಚಿಸಬೇಕು ಎಂದು ಮಾಜಿ ಪ್ರಧಾನಿಗಳು ಒತ್ತಾಯಿಸಿದರು.

    ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರಿಗೆ ಪ್ರೋತ್ಸಾಹ ಧನ ನೀಡಬೇಕು. ಗ್ರಾಮೀಣ ಆರೋಗ್ಯವನ್ನು ನಾವು ಸುಧಾರಿಸದೇ ಇದ್ದರೆ, ನಮ್ಮ ಹಳ್ಳಿಗಳು ಸರಿಯಾದ ವೈದ್ಯಕೀಯ ಆರೈಕೆಯ ಕೊರತೆಯಿಂದ ಬಳಲುತ್ತಲೇ ಇರುತ್ತವೆ ಎಂದು ಅವರು ಎಚ್ಚರಿಸಿದರು.

    ಅದೇ ರೀತಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಮತ್ತು ದಾದಿಯರಿಗೆ ಕಡಿಮೆ ಸಂಬಳದ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದರು. ಅವರಿಗೆ ಪ್ರಸ್ತುತ ತಿಂಗಳಿಗೆ ಕೇವಲ 13,000 ರೂ. ವೇತನ ನೀಡಲಾಗುತ್ತದೆ. ಈ ವೇತನವು ದೈನಂದಿನ ವೇತನ ಮಾನದಂಡಕ್ಕಿಂತ ಕಡಿಮೆಯಾಗಿದೆ. ದಾದಿಯರು ತಮ್ಮ ಕುಟುಂಬಗಳನ್ನು ಉಳಿಸಿಕೊಳ್ಳಲು ಮತ್ತು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುವುದನ್ನು ಮುಂದುವರಿಸಲು ವೇತನವನ್ನು ಕನಿಷ್ಠ 20,000-28,000 ರೂ.ಗೆ ಹೆಚ್ಚಿಸಬೇಕು ಎಂದು ಕೋರಿದರು.

    HPV ಲಸಿಕೆ ಮತ್ತು ಕ್ಯಾನ್ಸರ್ ತಡೆಗಟ್ಟುವಿಕೆ
    ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ರಾಷ್ಟ್ರೀಯ ರೋಗನಿರೋಧಕ ಕಾರ್ಯಕ್ರಮದಲ್ಲಿ HPV ಲಸಿಕೆಯನ್ನು ಸೇರಿಸಬೇಕೆಂದು ದೇವೇಗೌಡರು ಮನವಿ ಮಾಡಿದರು. ಗರ್ಭಕಂಠದ ಕ್ಯಾನ್ಸರ್ ಮಹಿಳೆಯರಲ್ಲಿ ಸಾಮಾನ್ಯವಾಗಿ ಕಂಡುಬರುವ ಕ್ಯಾನ್ಸರ್‌ಗಳಲ್ಲಿ ಒಂದಾಗಿದೆ. HPV ಲಸಿಕೆಯು ಅದರ ಸಂಭವವನ್ನು ಶೇ.80-90ರಷ್ಟು ಕಡಿಮೆ ಮಾಡುತ್ತದೆ. ರಾಷ್ಟ್ರೀಯ ರೋಗನಿರೋಧಕ ಕಾರ್ಯಕ್ರಮದ ಭಾಗವಾಗಿ ಪ್ರೌಢಶಾಲಾ ಹುಡುಗಿಯರಿಗೆ ಲಸಿಕೆ ಹಾಕುವುದು ಉತ್ತಮ ಪರಿಹಾರೋಪಾಯ ಆಗಿದೆ ಅವರು ಒತ್ತಿ ಹೇಳಿದರು.

    ಗ್ರಾಮೀಣ ಆರೋಗ್ಯ ರಕ್ಷಣೆಯಲ್ಲಿ ಖಾಸಗಿ ವಲಯದ ಹೂಡಿಕೆಯನ್ನು ಪ್ರೋತ್ಸಾಹಿಸಿ
    ಸೇವೆಯಲ್ಲಿ ಹಿಂದುಳಿದ ಪ್ರದೇಶಗಳಲ್ಲಿ ಆರೋಗ್ಯ ಸೇವೆಯನ್ನು ಸುಧಾರಿಸಲು, ಗ್ರಾಮೀಣ ಪ್ರದೇಶಗಳಲ್ಲಿ ಸಣ್ಣ ವಿಶೇಷ ಕೇಂದ್ರಗಳನ್ನು ಸ್ಥಾಪಿಸುವ ಖಾಸಗಿ ಆಸ್ಪತ್ರೆಗಳಿಗೆ ಐದು ವರ್ಷಗಳ ತೆರಿಗೆ ವಿನಾಯಿತಿ ನೀಡುವ ಬಗ್ಗೆ ದೇವೇಗೌಡರು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದರು.

    ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಉತ್ತಮ ಆರ್ಥಿಕ ನೆರವು ನೀಡಬೇಕೆಂದು ಅವರು ಒತ್ತಾಯಿಸಿದ ಅವರು, ಈ ಕಾರ್ಯಕರ್ತರು ನಮ್ಮ ಗ್ರಾಮೀಣ ಆರೋಗ್ಯ ವ್ಯವಸ್ಥೆಯ ಬೆನ್ನೆಲುಬು. ಜನರಿಗೆ ಸೇವೆ ಸಲ್ಲಿಸಲು ಅವರ ಪ್ರೇರಣೆ ಮತ್ತು ಬದ್ಧತೆಯನ್ನು ಖಚಿತಪಡಿಸಿಕೊಳ್ಳಲು ಅವರ ಗೌರವಧನವನ್ನು ನಿಯತಕಾಲಿಕವಾಗಿ ಪರಿಷ್ಕರಿಸಬೇಕು ಎಂದು ಅವರು ಸರ್ಕಾರದ ಗಮನ ಸೆಳೆದರು.

    ಆಯುಷ್ಮಾನ್ ಭಾರತ್ ಯೋಜನೆ ಬಲಪಡಿಸಿ
    ಆಯುಷ್ಮಾನ್ ಭಾರತ್ ಯೋಜನೆಯ ಯಶಸ್ಸನ್ನು ದೇವೇಗೌಡರು ಶ್ಲಾಘಿಸಿದರು. ಭಾರತದ ಜನಸಂಖ್ಯೆಯ ಶೇ.70ಕ್ಕೂ ಹೆಚ್ಚು ಜನರು ಈ ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ. 2018ರಲ್ಲಿ ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಪ್ರಾರಂಭಿಸಲಾದ ಈ ಉಪಕ್ರಮವು ಲಕ್ಷಾಂತರ ಜನರಿಗೆ ಆರೋಗ್ಯ ಸೇವೆಯನ್ನು ಕಲ್ಪಿಸಿದೆ. ಬಡ ನಾಗರಿಕರು ಸಹ ಗುಣಮಟ್ಟದ ಆರೋಗ್ಯ ಸೇವೆಯನ್ನು ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮತ್ತು ಆರೋಗ್ಯ ಸಚಿವರನ್ನು ಅಭಿನಂದಿಸುತ್ತೇನೆ ಎಂದು ಅವರು ಹೇಳಿದರು.

  • ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸೆ ಪಡೆದ ವ್ಯಕ್ತಿಯನ್ನೇ ನೋಡಿಲ್ಲ – ಮೋದಿಗೆ ಕೇಜ್ರಿವಾಲ್ ತಿರುಗೇಟು

    ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸೆ ಪಡೆದ ವ್ಯಕ್ತಿಯನ್ನೇ ನೋಡಿಲ್ಲ – ಮೋದಿಗೆ ಕೇಜ್ರಿವಾಲ್ ತಿರುಗೇಟು

    ನವದೆಹಲಿ: ರಾಜಕೀಯ ಹಿತಾಸಕ್ತಿಗಳ ಕಾರಣದಿಂದ ಆಯುಷ್ಮಾನ್ ಭಾರತ್ (Ayushman Bharat) ಆರೋಗ್ಯ ವಿಮಾ ಯೋಜನೆಯನ್ನು ಜಾರಿಗೊಳಿಸಲು ವಿಫಲವಾಗಿದೆ, ಸಾರ್ವಜನಿಕ ಆರೋಗ್ಯದ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜಕೀಯ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಹೇಳಿದ್ದಾರೆ.

    ದೆಹಲಿ ಮತ್ತು ಪಶ್ಚಿಮ ಬಂಗಾಳ ಸರ್ಕಾರಗಳು ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯನ್ನು ಜಾರಿಗೊಳಿಸಲು ವಿಫಲವಾಗಿದೆ ಎಂದು ಟೀಕಿಸಿದ ಪ್ರಧಾನಿ ಮೋದಿಗೆ (Narendra Modi) ಕೇಜ್ರಿವಾಲ್‌ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: Hyderabad | ಮೊಮೊಸ್ ತಿಂದು ಓರ್ವ ಮಹಿಳೆ ಸಾವು ಬೆನ್ನಲ್ಲೇ 20 ಜನರಿಗೆ ಫುಡ್ ಪಾಯ್ಸನ್

    ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿರುವ ಅವರು, ಸಾರ್ವಜನಿಕ ಆರೋಗ್ಯದ ವಿಷಯದ ಬಗ್ಗೆ ತಪ್ಪಾಗಿ ಮಾತನಾಡುವುದು ಮತ್ತು ಅದರ ಮೇಲೆ ರಾಜಕೀಯ ಮಾಡುವುದು ಸರಿಯಲ್ಲ. ಪ್ರಧಾನಿ ಮೋದಿ ದೆಹಲಿ ಮಾದರಿಯ ಆರೋಗ್ಯ ರಕ್ಷಣೆ ಯೋಜನೆಯನ್ನು ಅಧ್ಯಯನ ಮಾಡಬೇಕು. ದೆಹಲಿ ಸರ್ಕಾರದ ಯೋಜನೆಯಡಿಯಲ್ಲಿ, ನಗರದ ಪ್ರತಿಯೊಬ್ಬ ವ್ಯಕ್ತಿಯು ಉಚಿತ ವೈದ್ಯಕೀಯ ಚಿಕಿತ್ಸೆಯನ್ನು ಪಡೆಯುತ್ತಾನೆ. 5 ರೂ. ಮಾತ್ರೆ ಅಥವಾ 1 ಕೋಟಿ ರೂ. ಮೌಲ್ಯದ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರ ಭರಿಸುತ್ತದೆ ಎಂದು ಹೇಳಿದರು. ಇದನ್ನೂ ಓದಿ: Darshan Case File | ಜೂನ್‌ 8 ರಿಂದ ಅ.30ರ ವರೆಗೆ ಏನೆಲ್ಲಾ ಆಯ್ತು?

    ಜನರಿಗೆ ವಾಸ್ತವದಲ್ಲಿ ಆರೋಗ್ಯ ಪ್ರಯೋಜನಕ್ಕಾಗಿ ದೇಶದಾದ್ಯಂತ ದೆಹಲಿಯಂತೆ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯನ್ನು ಬದಲಿಸಬೇಕು ಎಂದು ಒತ್ತಾಯಿಸಿದ ಕೇಜ್ರಿವಾಲ್, ಈವರೆಗೂ ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸೆ ಪಡೆದ ವ್ಯಕ್ತಿಯನ್ನು ತಾನು ಇನ್ನೂ ಭೇಟಿ ಮಾಡಿಲ್ಲ ಎಂದು ಕೇಜ್ರಿವಾಲ್ ವ್ಯಂಗ್ಯ ಮಾಡಿದರು. ಆಯುಷ್ಮಾನ್ ಭಾರತ್ ಯೋಜನೆಯಡಿ ಸಿಎಜಿ ಅದರಲ್ಲಿ ಹಲವಾರು ಅಕ್ರಮಗಳನ್ನು ಕಂಡುಹಿಡಿದಿದೆ ಎಂದು ಹೇಳಿದರು.

    ಆಯುಷ್ಮಾನ್ ಭಾರತ್ ʻವಿಫಲʼ ಯೋಜನೆಯಾಗಿದೆ ಎಂದು ದೆಹಲಿಯ ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ಹೇಳಿದ್ದಾರೆ. ಯೋಜನೆಯನ್ನು ಜಾರಿಗೊಳಿಸಿದ ಉತ್ತರ ಪ್ರದೇಶ, ಹರಿಯಾಣ ಮತ್ತು ರಾಜಸ್ಥಾನದಂತಹ ಬಿಜೆಪಿ ಆಡಳಿತ ರಾಜ್ಯಗಳ ಬಡ ರೋಗಿಗಳು ಶಸ್ತ್ರಚಿಕಿತ್ಸೆಗಾಗಿ ದೆಹಲಿಯ ಆಸ್ಪತ್ರೆಗಳಿಗೆ ಭೇಟಿ ನೀಡಿದ್ದಾರೆ ಎಂದು ಅವರು ತಿರಗೇಟು ನೀಡಿದರು. ಇದನ್ನೂ ಓದಿ: ದರ್ಶನ್‌ಗೆ ಜಾಮೀನು – ಪಾಸ್‌ಪೋರ್ಟ್‌ ಒಪ್ಪಿಸುವಂತೆ ಕೋರ್ಟ್‌ ಸೂಚಿಸಿದ್ದೇಕೆ?

  • 70 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ – 5 ಲಕ್ಷದವರೆಗೆ ಚಿಕಿತ್ಸೆ ಫ್ರೀ

    70 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ – 5 ಲಕ್ಷದವರೆಗೆ ಚಿಕಿತ್ಸೆ ಫ್ರೀ

    ನವದೆಹಲಿ: ರಾಷ್ಟ್ರೀಯ ವಿಮಾ ಯೋಜನೆ ಆಯುಷ್ಮಾನ್ ಭಾರತ್ (Ayushman Bharat) ಅಡಿಯಲ್ಲಿ 70 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಪ್ರತಿಯೊಬ್ಬರಿಗೂ ಆರೋಗ್ಯ ರಕ್ಷಣೆಯನ್ನು ಕೇಂದ್ರ ಸರ್ಕಾರ ಅನುಮೋದಿಸಿದೆ. ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಅಧ್ಯಕ್ಷತೆಯಲ್ಲಿ ನಡೆದ ಕ್ಯಾಬಿನೆಟ್‌ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

    ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (ಎಬಿ ಪಿಎಂ-ಜೆಎವೈ) ಆರು ಕೋಟಿ ಹಿರಿಯ ನಾಗರಿಕರನ್ನು (Senior Citizen) ಹೊಂದಿರುವ 4.5 ಕೋಟಿ ಕುಟುಂಬಗಳಿಗೆ ಪ್ರಯೋಜನವಾಗಲಿದೆ. ಉಚಿತ ಸೌಲಭ್ಯ 5 ಲಕ್ಷ ರೂ ಮೌಲ್ಯದ್ದಾಗಿದೆ. ಈ ಅನುಮೋದನೆಯೊಂದಿಗೆ, 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲಾ ಹಿರಿಯ ನಾಗರಿಕರು ಅವರ ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ಲೆಕ್ಕಿಸದೆಯೇ AB PM-JAY ಪ್ರಯೋಜನಗಳನ್ನು ಪಡೆಯಲು ಅರ್ಹರಾಗಿರುತ್ತಾರೆ. ಅರ್ಹ ಹಿರಿಯ ನಾಗರಿಕರಿಗೆ AB PM- ಅಡಿಯಲ್ಲಿ ಹೊಸ ವಿಭಿನ್ನ ಕಾರ್ಡ್ ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

    ಖಾಸಗಿ ಆರೋಗ್ಯ ವಿಮಾ ಪಾಲಿಸಿಗಳು ಅಥವಾ ಉದ್ಯೋಗಿಗಳ ರಾಜ್ಯ ವಿಮಾ ಯೋಜನೆಯಡಿಯಲ್ಲಿರುವ 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಹಿರಿಯ ನಾಗರಿಕರು AB PM-JAY ಅಡಿಯಲ್ಲಿ ಪ್ರಯೋಜನಗಳನ್ನು ಪಡೆಯಲು ಅರ್ಹರಾಗಿರುತ್ತಾರೆ ಎಂದು ಕೇಂದ್ರ ಸ್ಪಷ್ಟಪಡಿಸಿದೆ.

    AB PM-JAY ಯೋಜನೆಯು ಫಲಾನುಭವಿಗಳ ತಳಹದಿಯ ನಿರಂತರ ವಿಸ್ತರಣೆಯನ್ನು ಮಾಡಲಾಗಿದೆ. ಆರಂಭದಲ್ಲಿ, ಭಾರತದ ಜನಸಂಖ್ಯೆಯ ಕೆಳಭಾಗದ 40% ಒಳಗೊಂಡಿರುವ 10.74 ಕೋಟಿ ಬಡ ಮತ್ತು ಬಡ ಕುಟುಂಬಗಳು ಯೋಜನೆಯ ವ್ಯಾಪ್ತಿಗೆ ಒಳಪಟ್ಟಿವೆ. ದೇಶದಾದ್ಯಂತ ಕೆಲಸ ಮಾಡುತ್ತಿರುವ 37 ಲಕ್ಷ ಆಶಾ ಕಾರ್ಯಕರ್ತೆಯರು, ಎಡಬ್ಲ್ಯೂಡಬ್ಲ್ಯೂಗಳು ಮತ್ತು ಅವರ ಕುಟುಂಬಗಳಿಗೆ ಉಚಿತ ಆರೋಗ್ಯ ಯೋಜನೆಯನ್ನು ವಿಸ್ತರಿಸಲಾಗಿದೆ.

    AB PM-JAY ವಿಶ್ವದ ಅತಿದೊಡ್ಡ ಸಾರ್ವಜನಿಕ ನಿಧಿಯ ಆರೋಗ್ಯ ಖಾತ್ರಿ ಯೋಜನೆಯಾಗಿದ್ದು, 70 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ಸೌಲಭ್ಯ ನೀಡುವುದಾಗಿ ಮೋದಿ ತಮ್ಮ ಚುನಾವಣಾ ಭಾಷಣದಲ್ಲಿ ಹೇಳಿದ್ದರು.

  • BBMP Budget 2024: ಪಾಲಿಕೆಯ ಶಾಲಾ/ಕಾಲೇಜು ವಿದ್ಯಾರ್ಥಿಗಳು, ಪೋಷಕರಿಗೆ ‘ಆಯುಷ್ಮಾನ್‌ ಭಾರತ್‌’ ವಿಮೆ!

    BBMP Budget 2024: ಪಾಲಿಕೆಯ ಶಾಲಾ/ಕಾಲೇಜು ವಿದ್ಯಾರ್ಥಿಗಳು, ಪೋಷಕರಿಗೆ ‘ಆಯುಷ್ಮಾನ್‌ ಭಾರತ್‌’ ವಿಮೆ!

    ಬೆಂಗಳೂರು: ಬಿಬಿಎಂಪಿಯು (BBMP) ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಭರ್ಜರಿ ಗಿಫ್ಟ್‌ ನೀಡಿವೆ. ಪಾಲಿಕೆಯ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಅವರ ಪೋಷಕರಿಗೆ ಆಯುಷ್ಮಾನ್‌ ಭಾರತ್‌ ಆರೋಗ್ಯ ವಿಮೆ ಯೋಜನೆಯಡಿ ಉಚಿತ ಆರೋಗ್ಯ ವಿಮೆ (Ayushman Bharat) ಮಾಡಿಸಲು ನಿರ್ಧರಿಸಿದೆ.

    ಇಂದು (ಗುರುವಾರ) ಮಂಡಿಸಿದ ಬಿಬಿಎಂಪಿ ಬಜೆಟ್‌ನಲ್ಲಿ (BBMP Budget 2024) ಈ ಘೋಷಣೆ ಮಾಡಲಾಯಿತು. ಸ್ವಯಂ ಸೇವಾ ಸಂಸ್ಥೆಗಳ ಸಹಭಾಗಿತ್ವದಲ್ಲಿ ಪಾಲಿಕೆಯ ಶಾಲಾ/ಕಾಲೇಜುಗಳ ಮತ್ತು ವಿದ್ಯಾರ್ಥಿಗಳ ಆರೋಗ್ಯ ಸುಧಾರಣೆಗಾಗಿ ವೈದ್ಯಕೀಯ ತಪಾಸಣೆ, ಔಷಧಿಗಳ ವಿತರಣೆಗಾಗಿ ಒಡಂಬಡಿಕೆ ಮಾಡಿಕೊಂಡಿದೆ ಎಂದು ಹೇಳಿದೆ. ಇದನ್ನೂ ಓದಿ: BBMP Budget 2024: ಆಟದ ಮೈದಾನದ ಕೆಳಗೆ ಬರಲಿದೆ ಅಂಡರ್‌ಗ್ರೌಂಡ್‌ ಪಾರ್ಕಿಂಗ್!‌

    ಬ್ರ್ಯಾಂಡ್‌ ಬೆಂಗಳೂರು- ಶಿಕ್ಷಣ ಬೆಂಗಳೂರು ಅಡಿ ಸಿಕ್ಕಿದ್ದೇನು?
    – ಪಾಲಿಕೆಯ ಶಾಲಾ ಮತ್ತು ಕಾಲೇಜುಗಳ ಕಲಿಕಾ ಸಾಮರ್ಥ್ಯ ವೃದ್ಧಿಗೆ ಕಂಪ್ಯೂಟರ್‌ ಲ್ಯಾಬ್‌, ಡಿಜಿಟಲ್‌ ಲ್ಯಾಬ್‌, ಮಾಹಿತಿ ಮತ್ತು ತಂತ್ರಜ್ಞಾನ ಲ್ಯಾಬ್‌, ಸೈನ್ಸ್‌ ಲ್ಯಾಬ್‌, ಇ-ಗ್ರಂಥಾಲಯ ಸ್ಥಾಪನೆಗೆ 10 ಕೋಟಿ ರೂ.
    – ಪೂರ್ಣ ಶಿಥಿಲಾವಸ್ಥೆಗೆ ತಲುಪಿರುವ 19 ಶಾಲಾ ಕಟ್ಟಡ ಪೂರ್ಣ ತೆರವು ಮತ್ತು ಪುನರ್‌ ನಿರ್ಮಾಣ
    – 67 ಶಾಲಾ/ಕಾಲೇಜುಗಳ ಕಟ್ಟಡ ದುರಸ್ತಿ ಕಾರ್ಯ
    – ಶೌಚಾಲಯ ನಿರ್ವಹಣೆ, ಕುಡಿಯುವ ನೀರಿನ ಘಟಕ
    – ಈ ಎಲ್ಲ ಕಾಮಗಾರಿಗಳಿಗೆ ಒಟ್ಟು 35 ಕೋಟಿ ರೂ. ಅನುದಾನ

    ʼಶಾಲೆ ತೋಟʼ ಕಾರ್ಯಕ್ರಮ
    ಪಾಲಿಕೆಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಮಕ್ಕಳಿಗೆ ಕೃಷಿ ಮತ್ತು ತೋಟಗಾರಿಕೆಯ ಪರಿಕಲ್ಪನೆ ಹಾಗೂ ಪರಿಸರದ ಕಾಳಜಿ ಮೂಡಿಸಲು ಶಾಲೆ ತೋಟ ವಿಶಿಷ್ಟ ಕಾರ್ಯಕ್ರಮ. ಈ ಯೋಜನೆಯಡಿ ಶಾಲೆಯ ಆವರಣದಲ್ಲಿ ಶಿಕ್ಷಕರ ಮಾರ್ಗದರ್ಶನದಲ್ಲಿ ಕೃಷಿ ಬೆಳೆಗಳು, ತರಕಾರಿ ಮತ್ತು ಹೂ ಬೆಳೆಯಲು ಒಟ್ಟು 5 ಕೋಟಿ ರೂ. ಅನುದಾನ ನೀಡಲಾಗಿದೆ. ಇದನ್ನೂ ಓದಿ: BBMP Budget 2024: 350 ಕೋಟಿ ರೂ. ವೆಚ್ಚದಲ್ಲಿ ಸ್ಕೈ-ಡೆಕ್‌ ನಿರ್ಮಾಣ

  • ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್‌ಗೆ ಹೊಸ ರೂಪ – ಈ ಕಾರ್ಡ್‌ ಇದ್ರೆ ಏನು ಸಿಗುತ್ತೆ?

    ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್‌ಗೆ ಹೊಸ ರೂಪ – ಈ ಕಾರ್ಡ್‌ ಇದ್ರೆ ಏನು ಸಿಗುತ್ತೆ?

    ಬೆಳಗಾವಿ: ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್ ಗಳಿಗೆ ಆರೋಗ್ಯ ಇಲಾಖೆ ಹೊಸ ರೂಪ ನೀಡಿದ್ದು, ಮರುನಾಮಕರಣಗೊಂಡ ನವೀಕೃತ ಹೆಲ್ತ್ ಕಾರ್ಡ್‌ಗಳನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಬಿಡುಗಡೆಗೊಳಿಸಿದ್ದಾರೆ.

    “ಆಯುಷ್ಮಾನ್ ಭಾರತ್ (Ayushman Bharat) ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್ ಗಳನ್ನ, ಆಯುಷ್ಮಾನ್‌ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಎಂದು ಹೆಸರಿಸಲಾಗಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ್‌ನಲ್ಲಿ ಕೆಲ ಬದಲಾವಣೆ ತರಲಾಗಿದ್ದು, ರಾಜ್ಯದ 5.9 ಕೋಟಿ ಜನರಿಗೆ ಹೆಲ್ತ್ ಕಾರ್ಡ್‌ಗಳನ್ನು ವಿತರಿಸುವ ಗುರಿಯನ್ನ ಆರೋಗ್ಯ ಇಲಾಖೆ ಹಾಕಿಕೊಂಡಿದೆ.‌

    ನೂತನ ಕಾರ್ಡ್ ಗಳನ್ನ ಸಿಎಂ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದ್ದಾರೆ.‌ ರಾಜ್ಯದ ಪ್ರತಿಯೊಬ್ಬ ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆ ಹಾಗೂ ಚಿಕಿತ್ಸೆಗಳನ್ನು ಒದಗಿಸಬೇಕು ಎಂಬುದು ನಮ್ಮ ಸರ್ಕಾರದ ಆದ್ಯತೆಗಳಲ್ಲಿ ಒಂದು ಎಂದಿದ್ದಾರೆ.  ಇದನ್ನೂ ಓದಿ: ಬಿಜೆಪಿಯವರಿಗೆ ನನ್ನ ಮೇಲೆ ಅಷ್ಟೊಂದು ದ್ವೇಷವೇ: ಪ್ರಿಯಾಂಕ್ ಖರ್ಗೆ ಪ್ರಶ್ನೆ

    ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ನ್ಯಾಷನಲ್ ಪೊರ್ಟಲ್ ಗೆ ನೂತನ ಹೆಲ್ತ್ ಕಾರ್ಡ್ ಗಳನ್ನ ಸಂಯೋಜನೆಗೊಳಿಸಲಾಗಿದ್ದು, ರಾಜ್ಯದ ಬಿಪಿಎಲ್ ಕಾರ್ಡುದಾರರು ದೇಶದ ಇತರೆ ರಾಜ್ಯಗಳಲ್ಲಿ ಹೆಲ್ತ್ ಕಾರ್ಡ್ ನ ಅಡಿ ಚಿಕಿತ್ಸೆ ಪಡೆಯಬಹುದಾಗಿದೆ.

    ರಾಜ್ಯದಲ್ಲಿರುವ ಒಟ್ಟು5.09 ಕೋಟಿ ಫಲಾನುಭವಿಗಳಿಗೆ ಮುಂದಿನ 6 ತಿಂಗಳ ಒಳಗಾಗಿ ಆಯುಷ್ಮಾನ್‌ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಕಾರ್ಡ್‌ ಸೃಜನೆ ಮತ್ತು ವಿತರಣಾ ಗುರಿಯನ್ನು ಹೊಂದಲಾಗಿದೆ.

    ಯೋಜನೆಯ ಒಟ್ಟು ಅನುದಾನದ ಪಾಲಿನಲ್ಲಿ ರಾಜ್ಯ ಸರ್ಕಾರವು 66% ರಷ್ಟು ನೀಡುತ್ತಿದ್ದರೆ, ಕೇಂದ್ರ ಸರ್ಕಾರವು 34% ನೀಡುತ್ತಿದೆ. ಯೋಜನೆಯಡಿಯಲ್ಲಿ ಬಿಪಿಎಲ್‌ ಪಡಿತರ ಚೀಟಿ ಹೊಂದಿರುವ ಬಡ ಕುಟುಂಬಗಳು ವಾರ್ಷಿಕ 5 ಲಕ್ಷ ಮೌಲ್ಯದ ಚಿಕಿತ್ಸೆಯನ್ನು ಕುಟುಂಬದ ಒಬ್ಬರು ಅಥವಾ ಹಲವರು Family Floater ಆಧಾರದ ಮೇಲೆ ಬಳಸಿಕೊಳ್ಳಬಹುದು.‌

    ಎಪಿಎಲ್‌ ಕುಟುಂಬದವರಿಗೂ ಸಹ ಯೋಜನೆಯಲ್ಲಿ ಅವಕಾಶ ಕಲ್ಪಿಸಿರುವ ಮೊದಲ ರಾಜ್ಯ ಕರ್ನಾಟಕವಾಗಿದ್ದು, ಎಪಿಎಲ್‌ ಕುಟುಂಬಗಳಿಗೆ 5 ಲಕ್ಷದ ಮೌಲ್ಯದ ಚಿಕಿತ್ಸೆಯಲ್ಲಿ ಗರಿಷ್ಠ ರೂ.1.5 ಲಕ್ಷ ವೆಚ್ಚವನ್ನ ರಾಜ್ಯ ಸರ್ಕಾರ ಪಾವತಿಸಲಿದೆ. ಎಪಿಎಲ್ ಕಾರ್ಡ್‌ದಾರರು 70% ರಷ್ಟು ಚಿಕಿತ್ಸಾ ವೆಚ್ಚವನ್ನ ಪಾವತಿಸಿದರೆ 30% ರಷ್ಟು ವೆಚ್ಚವನ್ನು  ರಾಜ್ಯ ಸರ್ಕಾರ ಭರಿಸಲಿದೆ.

    ಪ್ರಸ್ತುತ ರಾಜ್ಯದಲ್ಲಿ 3450 ಕ್ಕೂ ಹೆಚ್ಚಿನ ಆರೋಗ್ಯ ಸಂಸ್ಥೆಗಳು“ಆಯುಷ್ಮಾನ್‌ ಭಾರತ್- “ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಯೋಜನೆಯಲ್ಲಿ ಸೇವೆ ನೀಡಲು ನೊಂದಾಯಿಸಿಕೊಂಡಿರುತ್ತಾರೆ. ಸುಮಾರು 1650 ಚಿಕಿತ್ಸಾ ಪ್ಯಾಕೇಜ್‌ಗಳು ರಾಜ್ಯದ ಎಲ್ಲಾ ಸಾರ್ವಜಿಕ ಆಸ್ಪತ್ರೆ ಮತ್ತು 540 ನೊಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಾಗಲಿದೆ.

    171 ಅತ್ಯಂತ ತುರ್ತು ಚಿಕಿತ್ಸೆಯ ಮತ್ತು ಜೀವ ಉಳಿಸುವ ಪ್ಯಾಕೇಜ್‌ಗಳನ್ನು ಒಳಗೊಂಡಿದೆ. ರಾಜ್ಯದಲ್ಲಿ 1.15 ಕೋಟಿ ಬಿಪಿಎಲ್‌ ಕುಟುಂಬಗಳಿದ್ದು, ಇದರಲ್ಲಿ 69 ಲಕ್ಷ SECC 2011 ಸಮೀಕ್ಷೆಯಂತೆ ಬಡತನ ರೇಖೆಗಿಂತ ಕೆಳಗಿವೆ. ಕೇಂದ್ರ ಸರ್ಕಾರ ಈ ಕುಟುಂಬಗಳಿಗೆ 60:40 ಅನುಪಾತದಲ್ಲಿ ಅನುದಾನ ಒದಗಿಸುತ್ತಿದೆ. ರಾಜ್ಯ ಸರ್ಕಾರವು ಉಳಿದ 46 ಲಕ್ಷ ಬಿಪಿಎಲ್‌ ಹಾಗೂ 19 ಲಕ್ಷ ಎಪಿಲ್‌ ಕುಟುಂಬಗಳಿಗೆ 100% ಅನುದಾನ ಒದಗಿಸುತ್ತಿದೆ.

    ಆಯುಷ್ಮಾನ್‌ ಭಾರತ್‌ – ಪ್ರಧಾನ ಮಂತ್ರಿ ಜನಾರೋಗ್ಯ ಯೋಜನಾ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆಯ Co-branded ಗುರುತಿನ ಚೀಟಿಗಳಾಗಿದ್ದು, Co-branded ಗುರುತಿನ ಚೀಟಿಗಳನ್ನು ಉಚಿತವಾಗಿ ನೀಡಲಾಗುವುದು.‌

    ಈ ಗುರುತಿನ ಚೀಟಿಗಳನ್ನು ರಾಷ್ಟ್ರೀಯ ಆರೋಗ್ಯ ID (ABHA ID) ಯೊಂದಿಗೆ ಜೋಡಿಸಲಾಗಿರುತ್ತದೆ. ಇದರಿಂದ ಫಲಾನುಭವಿಗಳ ವ್ಯೆದ್ಯಕೀಯ ದಾಖಲೆಗಳನ್ನು ಸಂರಕ್ಷಿಸಿ ಸುಲಭ ಮತ್ತು ಪರಿಣಾಮಕಾರಿ ಚಿಕಿತ್ಸೆ ನೀಡಲು ನೆರವಾಗುತ್ತದೆ.

    ಪಡಿತರ ಚೀಟಿಯೊಂದಿಗೆ ಜೋಡಿಸಲಾದ ಮೂಲ ಆಧಾರ್‌ ಗುರುತಿನ ಚೀಟಿಯ ಸಹಾಯದಿಂದ ಹತ್ತಿರದ ಗ್ರಾಮ-1 ಕೇಂದ್ರಗಳು ಅಥವಾ ನಾಗರೀಕ ಸೇವಾ “ಆಯುಷ್ಮಾನ್‌ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಗುರುತಿನ ಚೀಟಿಗಳನ್ನು ಸುಲಭವಾಗಿ ನೊಂದಾಯಿಸಿ ಪಡೆಯಬಹುದಾಗಿರುತ್ತದೆ.

     

  • ಆಯುಷ್ಮಾನ್ ಭಾರತ: ಬೀದರ್‌ನ ಸಾಯಿ ಗಣೇಶ ಆಸ್ಪತ್ರೆಗೆ ಪ್ರಶಸ್ತಿ

    ಆಯುಷ್ಮಾನ್ ಭಾರತ: ಬೀದರ್‌ನ ಸಾಯಿ ಗಣೇಶ ಆಸ್ಪತ್ರೆಗೆ ಪ್ರಶಸ್ತಿ

    ಬೀದರ್: ಆಯುಷ್ಮಾನ್ ಭಾರತ (Ayushman Bharat) ಆರೋಗ್ಯ ಕರ್ನಾಟಕ ಯೋಜನೆಯಡಿ ಜಿಲ್ಲೆಯಲ್ಲೇ ಅತಿ ಹೆಚ್ಚು ರೋಗಿಗಳಿಗೆ ವೈದ್ಯಕೀಯ ಸೇವೆ ಒದಗಿಸಿದ್ದಕ್ಕೆ ಚಿದ್ರಿ ರಸ್ತೆಯಲ್ಲಿ ಇರುವ ಸಾಯಿ ಗಣೇಶ ಕಿಡ್ನಿ ಆ್ಯಂಡ್ ಎಂಡ್ರಾಲಜಿ ಆಸ್ಪತ್ರೆಗೆ (Sai Ganesh Kidney And Andrology Hospital) ಪ್ರಶಸ್ತಿ ಲಭಿಸಿದೆ.

    ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಗಂಜಲಖೇಡ ಪ್ರಶಸ್ತಿ ಪ್ರದಾನ ಮಾಡಿದರು.

     

    ಆಸ್ಪತ್ರೆಯಲ್ಲಿ ಬಿಪಿಎಲ್ ಕಾರ್ಡ್(BPL Card) ಹೊಂದಿದವರಿಗೆ ಯೋಜನೆಯಡಿ ನಿತ್ಯ ಉಚಿತ ಶಸ್ತ್ರಚಿಕಿತ್ಸೆ ಮಾಡಲಾಗುತ್ತಿದೆ. ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ಶ್ರಮಿಸಲಾಗುತ್ತಿದೆ ಎಂದು ಪ್ರಶಸ್ತಿ ಸ್ವೀಕರಿಸಿದ ಆಸ್ಪತ್ರೆಯ ಮುಖ್ಯಸ್ಥರೂ ಆದ ಕಿಡ್ನಿ ತಜ್ಞ ಡಾ. ಶಿವಪುತ್ರ ಖಪ್ಲೆ ಹೇಳಿದರು.  ಇದನ್ನೂ ಓದಿ: ಲೋಕಸಮರಕ್ಕೆ ಆಪರೇಷನ್ ಹಸ್ತ – ಕರಾವಳಿಯಿಂದ ಸ್ಪರ್ಧಿಸ್ತಾರಾ ಬಿಜೆಪಿಯ ಆ ಸಂಸದ?

    ಈ ಪ್ರಶಸ್ತಿ ಆಸ್ಪತ್ರೆಯ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸಿದೆ. ಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ರೋಗಗಳಿಗೆ ಯೋಜನೆ ಲಾಭ ದೊರಕಿಸಿಕೊಡುವ ದಿಸೆಯಲ್ಲಿ ಕಾರ್ಯ ನಿರ್ವಹಿಸಲಾಗುವುದು ಎಂದು ತಿಳಿಸಿದರು.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆಯುಷ್ಮಾನ್, ಆರೋಗ್ಯ ಕರ್ನಾಟಕಕ್ಕೆ ಕೇಂದ್ರ 60% ನೆರವು ನೀಡಲಿ – ದಿನೇಶ್ ಗುಂಡೂರಾವ್ ಮನವಿ

    ಆಯುಷ್ಮಾನ್, ಆರೋಗ್ಯ ಕರ್ನಾಟಕಕ್ಕೆ ಕೇಂದ್ರ 60% ನೆರವು ನೀಡಲಿ – ದಿನೇಶ್ ಗುಂಡೂರಾವ್ ಮನವಿ

    ಬೆಂಗಳೂರು: ಆಯುಷ್ಮಾನ್ ಭಾರತ್ (Ayushman Bharat) ಹಾಗೂ ಆರೋಗ್ಯ ಕರ್ನಾಟಕ (Arogya Karnataka) ವಿಮೆ ಯೋಜನೆಗೆ ಕೇಂದ್ರ ಸರ್ಕಾರ 60% ರಷ್ಟು ಅನುದಾನ ನೀಡಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಕೇಂದ್ರ ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.

    ಡೆಹ್ರಾಡೂನ್ ಸ್ವಾಸ್ಥ್ಯ ಚಿಂತನ ಶಿಬಿರದಲ್ಲಿ ಅವರು ಪಾಲ್ಗೊಂಡಿದ್ದಾರೆ. ಈ ವೇಳೆ ಮಾತನಾಡಿದ ಅವರು ಆಯುಷ್ಮಾನ್ ಭಾರತ್ ಯೋಜನೆಗೆ ಕೇಂದ್ರದಿಂದ ಹೆಚ್ಚಿನ ನೆರವಿನ ಅಗತ್ಯತೆ ಇದೆ. ಯೋಜನೆಗೆ ಕೇಂದ್ರದ ನೆರವಿನ ಕುರಿತು ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಂಡೋವಿಯಾ ಅವರ ಗಮನಕ್ಕೆ ತಂದಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ಫ್ಲೈಓವರ್‌ನಲ್ಲೇ ಸ್ಕೂಟರ್ ಅಡ್ಡಗಟ್ಟಿ 1.70 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ

    ABPMJAY ಸ್ಕೀಮ್‍ನಲ್ಲಿ ಕರ್ನಾಟಕವು ಉತ್ತಮ ಪ್ರಗತಿಯನ್ನು ಸಾಧಿಸುತ್ತಿದೆ. ಅದರೂ ಆಯುಷ್ಮಾನ್ ಯೋಜನೆಯಡಿ ಆರೋಗ್ಯ ಕರ್ನಾಟಕ ಫಲಾನುಭವಿಗಳಿಗೆ ಕೇಂದ್ರ ಸರ್ಕಾರದಿಂದ ನೀರಿಕ್ಷಿತ ಹಣಕಾಸಿನ ನೆರವು ದೊರೆಯುತ್ತಿಲ್ಲ. ಪ್ರಸ್ತುತ ರಾಜ್ಯ ಸರ್ಕಾರ 64% ರಷ್ಟು ಹಣಕಾಸಿನ ನೆರವು ನೀಡುತ್ತಿದೆ. ಕೇಂದ್ರ ಸರ್ಕಾರ 36% ರಷ್ಟು ಮಾತ್ರ ಅನುದಾನ ಒದಗಿಸುತ್ತಿದೆ. 64% ರಷ್ಟು ಹಣಕಾಸನ್ನ ರಾಜ್ಯ ಸರ್ಕಾರವೇ ಭರಿಸುತ್ತಿದೆ ಎಂದಿದ್ದಾರೆ.

    ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಗೆ ಕೇಂದ್ರ ಸರ್ಕಾರ 60% ರಷ್ಟು ಹಣಕಾಸಿನ ನೆರವು ನೀಡಿದರೆ ಹೆಚ್ಚಿನ ಜನರಿಗೆ ಯೋಜನೆಯನ್ನ ತಲುಪಿಸಬಹುದು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 60% ರಾಜ್ಯ ಸರ್ಕಾರ 40% ದರಗಳಲ್ಲಿ ಕಾರ್ಯನಿರ್ವಹಿಸುವ ಅಗತ್ಯವಿದೆ. ಸಾರ್ವಜನಿಕರ ಆರೋಗ್ಯ ಭದ್ರತೆ ಉದ್ದೇಶದಿಂದ ಆರಂಭ ಆಗಿರುವ ಆಯುಷ್ಮಾನ್ ಭಾರತ್ ಯೋಜನೆ ಬಗ್ಗೆ ಕೇಂದ್ರ ನಿರ್ಣಯ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

    ಸ್ವಾಸ್ಥ್ಯ ಚಿಂತನ ಶಿಬಿರದ ಎರಡನೇ ದಿನವಾದ ಶನಿವಾರ ಆಯುಷ್ಮಾನ್ ಭವ ವಿಚಾರ ಸಂಕಿರಣದಲ್ಲಿ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪಾಲ್ಗೊಂಡಿದ್ದರು. ಇದನ್ನೂ ಓದಿ: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೂ ಸೋಮಣ್ಣ ಟವೆಲ್? – ಕಾರ್ಯಕರ್ತರ ಸಭೆಯಲ್ಲಿ ಇಂಗಿತ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಡವರ ಆರೋಗ್ಯದ ಮೇಲೆ ಕೇಂದ್ರ, ರಾಜ್ಯ ಸರ್ಕಾರ ಹೆಚ್ಚಿನ ಗಮನವಿಟ್ಟಿದೆ: ಸುಧಾಕರ್

    ಬಡವರ ಆರೋಗ್ಯದ ಮೇಲೆ ಕೇಂದ್ರ, ರಾಜ್ಯ ಸರ್ಕಾರ ಹೆಚ್ಚಿನ ಗಮನವಿಟ್ಟಿದೆ: ಸುಧಾಕರ್

    – ವೈದ್ಯಕೀಯ ಶಿಕ್ಷಣದಲ್ಲಿ ಅಭಿವೃದ್ಧಿಗೆ ಸರ್ಕಾರ ಶ್ರಮಿಸುತ್ತಿದೆ

    ಬೆಂಗಳೂರು: ನರೇಂದ್ರ ಮೋದಿಯವರು ಆರಂಭಿಸಿರುವ ಆಯುಷ್ಮಾನ್ ಭಾರತ್ ಯೋಜನೆ ಎಲ್ಲರಿಗೂ ಉಚಿತ ಆರೋಗ್ಯ ವಿಮೆ ನೀಡುತ್ತಿದೆ. ಉಚಿತವಾಗಿ ಆರೋಗ್ಯ ವಿಮೆ ನೀಡುತ್ತಿರುವ ಏಕೈಕ ದೇಶ ಭಾರತವಾಗಿದೆ. ಶೂನ್ಯ ಪ್ರಿಮಿಯಂನಲ್ಲಿ 5 ಲಕ್ಷ ರೂಪಾಯಿ ತನಕ ಶಾಶ್ವತ ಆರೋಗ್ಯ ವಿಮೆಯನ್ನು ಸರ್ಕಾರ ನೀಡುತ್ತಿದೆ. ದೇಶದ ಬಡವರ ಆರೋಗ್ಯದ ಮೇಲೆ ಸರ್ಕಾರ ಹೆಚ್ಚಿನ ಗಮನವಿಟ್ಟಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ.

    ಬೆಂಗಳೂರು ಮೆಡಿಕಲ್ ಕಾಲೇಜ್‍ನ ಪದವಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಇಂದು ತಾಂತ್ರಿಕ ಮತ್ತು ವೈದ್ಯಕೀಯ ಶಿಕ್ಷಣದಲ್ಲಿ ಹೆಣ್ಣುಮಕ್ಕಳು ಹೆಚ್ಚಿನ ಸಾಧನೆ ಮಾಡುತ್ತಿದ್ದಾರೆ. ಇದು ದೇಶದಲ್ಲಿ ಮಹಿಳಾ ಸಬಲೀಕರಣದ ಸಂಕೇತ. ಸಮಾಜದಲ್ಲಿ ಬದಲಾವಣೆಗಳು ಆಗುತ್ತಿವೆ. ಬಡವರ ಮಕ್ಕಳು ಕೂಡ ವೈದ್ಯರಾಗಬೇಕೆಂಬ ಕನಸು ಈಡೇರುತ್ತಿದೆ. ಕಳೆದ 7 ವರ್ಷಗಳಲ್ಲಿ ದೇಶದಲ್ಲಿ ವೈದ್ಯಕೀಯ ಶಿಕ್ಷಣ ವ್ಯವಸ್ಥೆ ಬದಲಾವಣೆ ಕಂಡಿದೆ. ಪ್ರತೀ ವರ್ಷ 65,000 ಎಂಬಿಬಿಎಸ್ ವೈದ್ಯರು ಮತ್ತು 30,000 ವೈದ್ಯರು ಸ್ನಾತಕೋತ್ತರ ಪದವಿ ಪಡೆದು ಸೇವೆಗೆ ಲಭ್ಯರಾಗುತ್ತಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಒಂದು ಲಕ್ಷ ಉದ್ಯೋಗ ಸೃಷ್ಟಿಸುವ FMCG ಕ್ಲಸ್ಟರ್ ಯೋಜನೆ ಇದೇ ವರ್ಷ ಪ್ರಾರಂಭ: ಬೊಮ್ಮಾಯಿ

    ಬೆಂಗಳೂರು ಮೆಡಿಕಲ್ ಕಾಲೇಜು (ಬಿಎಂಸಿ) ದೇಶದ ಹೆಮ್ಮೆಯ ಕಾಲೇಜ್‍ಗಳಲ್ಲಿ ಒಂದು. ಇಲ್ಲಿ ಪ್ರವೇಶ ಪಡೆಯುವ ಕನಸು ಹಲವು ವಿದ್ಯಾರ್ಥಿಗಳಿಗೆ ಇರುತ್ತದೆ. ಇಲ್ಲಿ ಕಲಿತ ವಿದ್ಯಾರ್ಥಿಗಳು ಅದೃಷ್ಟವಂತರಲ್ಲಿ ಅದೃಷ್ಟವಂತರು. ಅತ್ಯುತ್ತಮ ಸಂಸ್ಥೆಯಲ್ಲಿ ಕಲಿತವನ ಅನುಭವ ಜೊತೆಗೆ ಸಮಾಜದಲ್ಲಿ ವಿಭಿನ್ನ ಮತ್ತು ವಿಶಿಷ್ಟ ಗೌರವ ಸಿಗುತ್ತದೆ. ವೈದ್ಯರಿಗೆ ಸಮಾಜದ ಎಲ್ಲಾ ಕಡೆಯೂ ವಿಶಿಷ್ಟ ಗೌರವ ಇದೆ. ವೈದ್ಯ ವಿದ್ಯಾರ್ಥಿಗಳು, ಪದವಿ ಪಡೆದವರು ಈ ಸಮಾಜದ ಹೆಮ್ಮೆ ಎಂದು ತಿಳಿಸಿದರು.

    ಕರ್ನಾಟಕದಲ್ಲಿ ಒಟ್ಟು 65 ಮೆಡಿಕಲ್ ಕಾಲೇಜುಗಳಿವೆ. 4 ಸರ್ಕಾರಿ ಮೆಡಿಕಲ್ ಕಾಲೇಜ್‍ಗಳು ಶೀಘ್ರದಲ್ಲಿ ಆರಂಭವಾಗಲಿವೆ. ಖಾಸಗಿಯಲ್ಲಿ 3 ಹೆಚ್ಚುವರಿ ಮೆಡಿಕಲ್ ಕಾಲೇಜ್‍ಗಳಿಗೆ ಅನುಮತಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ 9 ಜಿಲ್ಲೆಗಳಲ್ಲಿ ಹೊಸತಾಗಿ 9 ಮೆಡಿಕಲ್ ಕಾಲೇಜ್‍ಗಳು ಆರಂಭ ಮಾಡಲು ತಯಾರಿಗಳು ನಡೆಯುತ್ತಿವೆ. ದೇಶದ ವೈದ್ಯ ವಿದ್ಯಾರ್ಥಿಗಳಲ್ಲಿ ಶೇಕಡಾ 30.5 ರಷ್ಟು ಕೊಡುಗೆ ಕರ್ನಾಟಕದ್ದಾಗಿದೆ. ಮಹಾರಾಷ್ಟ್ರ, ಮಧ್ಯಪ್ರದೇಶ ನಂತರ ಕರ್ನಾಟಕದಲ್ಲಿ ಅತೀ ಹೆಚ್ಚು ವೈದ್ಯ ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ – ಮರುಪರೀಕ್ಷೆಗೆ ಸರ್ಕಾರ ತೀರ್ಮಾನ

    corona

    ಪ್ರಧಾನ ಮಂತ್ರಿ ನರೇಂದ್ರ ಮೋದಿ, ವೈದ್ಯಕೀಯ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುತ್ತಿದ್ದಾರೆ. 2014ಕ್ಕೂ ಮೊದಲು ದೇಶದಲ್ಲಿ ಕೆಲವೇ ಕೆಲವು ಮೆಡಿಕಲ್ ಕಾಲೇಜ್‍ಗಳಿದ್ದವು. ಆದರೆ ಕಳೆದ 7 ವರ್ಷಗಳಲ್ಲಿ ಹೊಸತಾಗಿ 150ಕ್ಕೂ ಅಧಿಕ ಮೆಡಿಕಲ್ ಕಾಲೇಜ್‍ಗಳು ಆರಂಭವಾಗಿವೆ. 65,000 ಎಂಬಿಬಿಎಸ್ ಡಾಕ್ಟರ್‌ಗಳು ಪ್ರತೀ ವರ್ಷ ಹೊರ ಬರುತ್ತಾರೆ. 30,000 ಸ್ನಾತಕೋತ್ತರ ಪದವಿ ಪಡೆದ ವೈದ್ಯರು ಸಮಾಜ ಸೇವೆಗೆ ಲಭ್ಯರಾಗುತ್ತಿದ್ದಾರೆ. ವೈದ್ಯಕೀಯ ಶಿಕ್ಷಣದ ಕ್ಷೇತ್ರ ದುಬಾರಿ ವೆಚ್ಚವನ್ನು ಬಯಸುತ್ತಿದೆ. ಆದರೆ ಇದನ್ನು ಸರ್ಕಾರ ಹಂತ ಹಂತವಾಗಿ ಕಡಿಮೆ ಮಾಡಲು ಯೋಜನೆ ರೂಪಿಸಿದೆ. ಬಡವರಿಗೂ ಸಹ ವೈದ್ಯಕೀಯ ಶಿಕ್ಷಣ ಸಿಗಬೇಕು ಅನ್ನುವುದೇ ಪ್ರಧಾನಿ ನರೇಂದ್ರ ಮೋದಿಯವರ ಕನಸಾಗಿದೆ ಎಂದು ನುಡಿದರು. ಇದನ್ನೂ ಓದಿ: ತಮ್ಮದೇ ಪಕ್ಷದ ಮುಖಂಡರ ಫ್ಲೆಕ್ಸ್ ವಿರುದ್ಧ ಪ್ರತಾಪ್ ಸಿಂಹ ಗರಂ

    ಕೊರೊನಾ ಸಾಂಕ್ರಾಮಿಕ ರೋಗದ ವೇಳೆ ವೈದ್ಯಕೀಯ ವಿದ್ಯಾರ್ಥಿಗಳು ಅನನ್ಯ ಸೇವೆ ಸಲ್ಲಿಸಿದ್ದಾರೆ. ಜೀವನದಲ್ಲಿ ಎದುರಾಗಬಹುದುದಾದ ಸಂಕಷ್ಟಗಳು ಕಲಿಕೆಯ ಹಂತದಲ್ಲೇ ಅನುಭವಕ್ಕೆ ಬಂದಿದೆ. ಇದು ಜೀವನದ ಅಂತ್ಯವಲ್ಲ, ಆರಂಭ ಎಂದು ಪ್ರಧಾನಿಯವರು ಹೇಳಿದರಂತೆ ಎಲ್ಲಾ ವೈದ್ಯಕೀಯ ವಿದ್ಯಾರ್ಥಿಗಳ ಹೊಸ ಜೀವನ ಇಂದಿನಿಂದ ಆರಂಭವಾಗಿದೆ. ಕಳೆದ 5 ವರ್ಷಗಳಲ್ಲಿ ತೋರಿದ ಬದ್ಧತೆ, ಶ್ರದ್ಧೆ ಮತ್ತು ಅಧ್ಯಯನ ಶೀಲತೆಯನ್ನು ಬದುಕಿನ ಉದ್ದಕ್ಕೂ ಅಳವಡಿಸಿಕೊಳ್ಳಬೇಕು ಎಂದು ಆಶಿಸಿದರು.

    ಭಾರತ ವೈದ್ಯಕೀಯ ವಿಜ್ಞಾನಕ್ಕೆ ಅದ್ಭುತ ಇತಿಹಾಸವಿದೆ. ಆಯುರ್ವೇದದಲ್ಲಿ ಚರಕ, ಶುಶ್ರೂತರ ಕೊಡುಗೆ ಅಮೂಲ್ಯವಾದದ್ದು. ಬಿಎಂಸಿ ಕೂಡ ಕೇವಲ ವೈದ್ಯರನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡುತ್ತಿಲ್ಲ. ಬದಲಾಗಿ ಸಂಶೋಧನೆ ಮತ್ತು ಅಭಿವೃದ್ಧಿ ಕಡೆಗೂ ಗಮನ ಹರಿಸಿದೆ. ಕೊರೊನಾ ಸಾಂಕ್ರಾಮಿಕ ರೋಗದ ಸಮಯದಲ್ಲಿ ಬಿಎಂಸಿಯ ವಿದ್ಯಾರ್ಥಿಗಳು ನೀಡಿದ ಸೇವೆಗೆ ಧನ್ಯವಾಧಗಳು. ಇವರ ಶ್ರಮದಿಂದ ಲಸಿಕೆ ಬರುವ ಹಂತದ ವರೆಗೆ ಕೊರೊನಾವನ್ನು ಕಂಟ್ರೋಲ್ ಮಾಡಲು ಸಾಧ್ಯವಾಯಿತು ಎಂದರು.

    ವೈದ್ಯರ ಸೇವೆ ಸಮಾಜದಲ್ಲಿ ವಿಭಿನ್ನ ಗೌರವವನ್ನು ಹೊಂದಿದೆ. ಮನುಷ್ಯತ್ವ ಮತ್ತುಸೇವೆಯನ್ನು ಒಂದೇ ಕಾಲದಲ್ಲಿ ಅಪೇಕ್ಷೆ ಮಾಡುವ ಕೆಲಸ ಇದಾಗಿದೆ. ಇದರಲ್ಲಿ ಆತ್ಮ ತೃಪ್ತಿಯೂ ಇದೆ. ಎಲ್ಲವನ್ನೂ ಮರೆತು ಸಮಾಜಕ್ಕಾಗಿ, ಇನ್ನೊಬ್ಬರಿಗಾಗಿ ಕೆಲಸ ಮಾಡಬೇಕಾಗುತ್ತದೆ. ಎಲ್ಲಾ ತ್ಯಾಗವನ್ನು ಮಾಡಲು ಸದಾ ಸಿದ್ಧರಿರಬೇಕಾದ ಕೆಲಸ ಇದು. ಎಲ್ಲಾ ಕ್ಷಣದಲ್ಲೂ, ಎಲ್ಲಾ ದಿನವೂ ವೈದ್ಯರು ಸಮಾಜದ ಬಗ್ಗೆ ಮಾತ್ರ ಯೋಚನೆ ಮಾಡಬೇಕು ಎಂದು ಹೇಳಿದರು.

  • ಎಲ್ಲಾ ಪ್ರಜೆಗಳಿಗೆ ಸಿಗಲಿದೆ ಹೆಲ್ತ್ ಐಡಿ ಕಾರ್ಡ್ – ವಿಶೇಷತೆ ಏನು? ಲಾಭ ಏನು?

    ಎಲ್ಲಾ ಪ್ರಜೆಗಳಿಗೆ ಸಿಗಲಿದೆ ಹೆಲ್ತ್ ಐಡಿ ಕಾರ್ಡ್ – ವಿಶೇಷತೆ ಏನು? ಲಾಭ ಏನು?

    ನವದೆಹಲಿ: ಇನ್ನು ಮುಂದೆ ದೇಶದ ಎಲ್ಲ ಪ್ರಜೆಗಳು ಒಂದೇ ಕ್ಲಿಕ್ ನಲ್ಲಿ ತಮ್ಮ ಆರೋಗ್ಯ ಮಾಹಿತಿಯನ್ನು ಪಡೆದುಕೊಳ್ಳಬಹುದು.

    ದೇಶದ ಜನತೆಗೆ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಸಮರ್ಪಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಯೊಬ್ಬ ಭಾರತೀಯರು ಈಗ ಡಿಜಿಟಲ್ ಹೆಲ್ತ್ ಐಡಿಯನ್ನು ಪಡೆಯಬಹುದು. ಡಿಜಿಟಲ್ ಆರೋಗ್ಯ ಪರಿಸರ ವ್ಯವಸ್ಥೆಯಲ್ಲಿ ಇದು ಪ್ರಮುಖ ಪಾತ್ರ ವಹಿಸಲಿದೆ. ಹೇಗೆ ಯುಪಿಐ ಕಾರ್ಯನಿರ್ವಹಿಸುತ್ತದೋ ಅದೇ ರೀತಿಯಾಗಿ ಇದು ಕಾರ್ಯ ನಿರ್ವಹಿಸಲಿದೆ ಎಂದು ತಿಳಿಸಿದರು.

    https://twitter.com/PIB_India/status/1442376458509316098

    ಪ್ರತಿಯೊಬ್ಬ ನಾಗರಿಕರ ಆರೋಗ್ಯ ದಾಖಲೆಗಳು ಈಗ ಡಿಜಿಟಲ್ ನಲ್ಲಿ ಸುರಕ್ಷಿತವಾಗಿರುತ್ತದೆ. ಬಡ ಮತ್ತು ಮಧ್ಯಮ ವರ್ಗದ ವೈದ್ಯಕೀಯ ಚಿಕಿತ್ಸೆಯಲ್ಲಿನ ಸಮಸ್ಯೆಗಳನ್ನು ನಿವಾರಿಸುವಲ್ಲಿ ಇದು ದೊಡ್ಡ ಪಾತ್ರವನ್ನು ವಹಿಸುತ್ತದೆ. ಮೂರು ವರ್ಷಗಳ ಹಿಂದೆ, ಪಂಡಿತ್ ದೀನದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆಯಂದು ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೆ ತರಲಾಯಿತು. ಇಂದಿನಿಂದ ದೇಶಾದ್ಯಂತ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಆರಂಭವಾಗುತ್ತಿರುವುದಕ್ಕೆ ನನಗೆ ಸಂತೋಷವಾಗಿದೆ ಎಂದು ಮೋದಿ ಹೇಳಿದರು.

    130 ಕೋಟಿ ಆಧಾರ್ ಐಡಿಗಳು, 118 ಕೋಟಿ ಮೊಬೈಲ್ ಚಂದಾದಾರರು, ಸುಮಾರು 80 ಕೋಟಿ ಇಂಟರ್ನೆಟ್ ಬಳಕೆದಾರರು ಮತ್ತು 43 ಕೋಟಿ ಜನ್ ಧನ್ ಬ್ಯಾಂಕ್ ಖಾತೆಗಳು – ಇಂತಹ ಬೃಹತ್, ಸಂಪರ್ಕಿತ ಮೂಲಸೌಕರ್ಯವನ್ನು ಪ್ರಪಂಚದಲ್ಲಿ ಬೇರೆಲ್ಲಿಯೂ ಕಾಣಲು ಸಾಧ್ಯವಿಲ್ಲ ಎಂದು ಮೋದಿ ಮೆಚ್ಚುಗೆ ವ್ಯಕ್ತಪಡಿಸಿದರು.

    ಆರೋಗ್ಯ ಕಾರ್ಡ್ ನಲ್ಲಿ 14 ಅಂಕಿಗಳ ವಿಶಿಷ್ಟ ಗುರುತಿನ ಸಂಖ್ಯೆ ಇರಲಿದೆ. ಪ್ರತಿ ಪ್ರಜೆಯ ಆರೋಗ್ಯ ಖಾತೆಯಾಗಿ ಇದು ಕೆಲಸ ಮಾಡುತ್ತದೆ. ಈ ಕಾರ್ಡ್ ನಲ್ಲಿ ವ್ಯಕ್ತಿಯ ಆರೋಗ್ಯಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಗಳ ಸಂಗ್ರಹ ಇರಲಿದೆ. ವೈಯಕ್ತಿಕ ಆರೋಗ್ಯ ದಾಖಲೆಗಳನ್ನು ಮೊಬೈಲ್ ಅಪ್ಲಿಕೇಷನ್ ಸಹಾಯದಿಂದ ಲಿಂಕ್ ಮಾಡಬಹುದು.

    ಕಳೆದ ವರ್ಷ ಘೋಷಣೆ:
    ಕಳೆದ ವರ್ಷದ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಪ್ರಾಯೋಗಿಕ ಯೋಜನೆಯನ್ನು ಪ್ರಧಾನಿ ಘೋಷಿಸಿದ್ದರು. 6 ಕೇಂದ್ರಾಡಳಿತ ಪ್ರದೇಶದಲ್ಲಿ ಇದನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುತ್ತದೆ.

    ಲಾಭ ಹೇಗೆ?
    ಈ ಸೇವೆ ದೇಶವ್ಯಾಪಿ ಇರಲಿದೆ. ವ್ಯಕ್ತಿ ಯಾವುದೇ ಮೂಲೆಗೆ ಹೋದಾಗ ಸಮಸ್ಯೆಯಾಗಿ ಆಸ್ಪತ್ರೆ ಸೇರಿದಾಗ ಆತನ ಆರೋಗ್ಯದ ಮಾಹಿತಿ ಕೂಡಲೇ ಸಿಗುವುದಿಲ್ಲ. ಆದರೆ ಈ ಆಪ್‍ನಲ್ಲಿ ವಿವರ ನೀಡಿದ್ದರೆ ಕೂಡಲೇ ವೈದ್ಯರಿಗೆ ಈ ಹಿಂದೆ ರೋಗಿಗೆ ಏನಾಗಿತ್ತು? ಯಾವ ಕಾರಣಕ್ಕೆ ಶಸ್ತ್ರ ಚಿಕಿತ್ಸೆ ನೀಡಲಾಗಿತ್ತು? ಈ ಹಿಂದೆ ಎಲ್ಲಿ ಚಿಕಿತ್ಸೆ ನೀಡಲಾಗಿತ್ತು ಈ ಎಲ್ಲ ವಿವರಗಳು ಕೂಡಲೇ ಸಿಗಲಿದೆ. ಇದರಿಂದಾಗಿ ಕಡಿಮೆ ಅವಧಿಯಲ್ಲಿ ರೋಗಿಗೆ ಸರಿಯಾದ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ.  ಇದನ್ನೂ ಓದಿ: ಪ್ರತಿಭಟನೆ ವೇಳೆ ಡಿಸಿಪಿ ಮೇಲೆ ಕಾರು ಹತ್ತಿಸಲು ಯತ್ನ

    ಈ ಐಡಿ ಕಾರ್ಡ್ ಎಲ್ಲರಿಗೂ ಕಡ್ಡಾಯವಲ್ಲ. ಜನರು ಸ್ವಇಚ್ಛೆಯಿಂದ ಕಾರ್ಡ್ ಮಾಡಿಸಬಹುದು. ಆರಂಭದಲ್ಲಿ ಹೆಲ್ತ್ ಐಡಿ, ವೈಯಕ್ತಿಕ ಆರೋಗ್ಯ ಮಾಹಿತಿ, ಡಿಜಿ ಡಾಕ್ಟರ್ ಮತ್ತು ಹೆಲ್ತ್ ರಿಜಿಸ್ಟ್ರಿ ಇರಲಿದೆ. ನಂತರದ ದಿನಗಳಲ್ಲಿ ಇ ಫಾರ್ಮಾಸಿ ಮತ್ತು ಟೆಲಿಮೆಡಿಸಿನ್ ಸೇವೆಗಳನ್ನು ಸೇರಿಸಲಾಗುತ್ತದೆ ಎಂದು ವರದಿಯಾಗಿದೆ. ಈಗಾಗಲೇ ಹಲವು ದೇಶಗಳಲ್ಲಿ ಸರ್ಕಾರವೇ ಈ ರೀತಿಯ ಆರೋಗ್ಯ ಕಾರ್ಡ್‍ಗಳನ್ನು ನೀಡಿವೆ.

  • ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೆ ಕೊರೊನಾ ಉಚಿತ ಚಿಕಿತ್ಸೆ ಕೊಡದಿದ್ದರೆ ಯೋಜನೆ ಯಾವ ಪುರುಷಾರ್ಥಕ್ಕೆ- ಎಚ್‍ಡಿಕೆ ಪ್ರಶ್ನೆ

    ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೆ ಕೊರೊನಾ ಉಚಿತ ಚಿಕಿತ್ಸೆ ಕೊಡದಿದ್ದರೆ ಯೋಜನೆ ಯಾವ ಪುರುಷಾರ್ಥಕ್ಕೆ- ಎಚ್‍ಡಿಕೆ ಪ್ರಶ್ನೆ

    ಬೆಂಗಳೂರು: ದೇಶದ ಜನತೆಗೆ ಉಚಿತ ಆರೋಗ್ಯ ಸೇವೆ ಒದಗಿಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆಯುಷ್ಮಾನ್ ಭಾರತ್ ಯೋಜನೆಯ ಫಲಾನುಭವಿಗಳಿಗೆ ಉಚಿತವಾಗಿ ಕೊರೊನಾ ಚಿಕಿತ್ಸೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

    ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಆಯುಷ್ಮಾನ್ ಭಾರತ್ ಅಡಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯಲು ಅವಕಾಶ ಕೊಡಿ. ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯ ಅಡಿಯಲ್ಲಿ ನಾಗರಿಕರಿಗೆ ಮಹಾಮಾರಿ ಕೊರೊನಾ ವೈರಸ್ ಸೋಂಕಿಗೆ ಚಿಕಿತ್ಸೆ ಪಡೆಯಲು ಅವಕಾಶ ನೀಡಬೇಕು. ಈ ಸಂಬಂಧ ಕೇಂದ್ರ ಸರ್ಕಾರ ತಕ್ಷಣವೇ ಆದೇಶ ಹೊರಡಿಸಬೇಕೆಂದು ಈ ಮೂಲಕ ಆಗ್ರಹಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

    ಬಿಪಿಎಲ್ ಕಾರ್ಡುದಾರರು ಆಯುಷ್ಮಾನ್ ಭಾರತ ಯೋಜನೆ ಅಡಿ 5 ಲಕ್ಷ ರೂಪಾಯಿಗಳವರೆಗೆ ಮಾರಣಾಂತಿಕ ಖಾಯಿಲೆಗಳಿಗೆ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ. ಎಪಿಎಲ್ ಕಾರ್ಡ್ ದಾರರಿಗೆ ಗರಿಷ್ಠ 5 ಲಕ್ಷ ರೂ. ಗಳವರೆಗೆ ಶೇ.30ರಷ್ಟು ಚಿಕಿತ್ಸಾ ವೆಚ್ಚದಲ್ಲಿ ರಿಯಾಯಿತಿ ದಕ್ಕಲಿದೆ. ಯೋಜನೆ ವ್ಯಾಪ್ತಿಗೆ ಕೋವಿಡ್ ನ್ನೂ ಸೇರಿಸುವುದು ಅಗತ್ಯವಾಗಿದೆ ಎಂದಿದ್ದಾರೆ.

    ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೆ ಕೊರೊನಾ ಉಚಿತ ಚಿಕಿತ್ಸೆ ಕೊಡುವುದಿಲ್ಲವಾದರೆ ಈ ಯೋಜನೆ ಮತ್ತಿನ್ಯಾವ ಪುರುಷಾರ್ಥಕ್ಕೆ? ಕೇಂದ್ರ ಸರ್ಕಾರ ತಕ್ಷಣ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ತುರ್ತು ಅಗತ್ಯವಿದೆ. ದೇಶದ ಬಹುಸಂಖ್ಯಾತರ ಆಗ್ರಹ ಕೂಡ ಇದೇ ಆಗಿದೆ ಎಂದು ಒತ್ತಾಯಿಸಿದ್ದಾರೆ.