Tag: Ayyappa devotees

  • ಹಾವೇರಿಯಿಂದ ಶಬರಿಮಲೆಗೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿ – ಗುರುಸ್ವಾಮಿ ಸಾವು, 10ಕ್ಕೂ ಅಧಿಕ ಮಂದಿಗೆ ಗಾಯ

    ಹಾವೇರಿಯಿಂದ ಶಬರಿಮಲೆಗೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿ – ಗುರುಸ್ವಾಮಿ ಸಾವು, 10ಕ್ಕೂ ಅಧಿಕ ಮಂದಿಗೆ ಗಾಯ

    ಹಾವೇರಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ತೆರಳುತ್ತಿದ್ದ ಮಿನಿ ಬಸ್ ಪಲ್ಟಿಯಾಗಿ ಗುರುಸ್ವಾಮಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಕೇರಳದ (Kerala) ಎರಿಮಲೈನಲ್ಲಿ ನಡೆದಿದೆ.

    ಹಾವೇರಿಯ (Haveri) ಹಾನಗಲ್ (Hanagal) ಪಟ್ಟಣದ ನಿವಾಸಿ ಮಾರುತಿ ಎಂ ಹರಿಹರ(51) ಮೃತ ಗುರುಸ್ವಾಮಿ. ಇದನ್ನೂ ಓದಿ: ಮಲ್ಪೆಯ ಟಾಯ್ಲೆಟ್‌ನಲ್ಲಿ ನವಜಾತ ಶಿಶುವಿನ ಶವ ಪತ್ತೆ

    ಹಿರೇಕಣಗಿ ಸೇರಿ ಹಾನಗಲ್ ತಾಲೂಕಿನ ಅಯ್ಯಪ್ಪ ಮಾಲಾಧಾರಿಗಳು ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಮಿನಿ ಬಸ್ ಮಾಡಿಕೊಂಡು ತೆರಳಿದ್ದರು. ಈ ವೇಳೆ ನಿಯಂತ್ರಣ ತಪ್ಪಿ ಮಿನಿ ಬಸ್ ಪಲ್ಟಿಯಾಗಿದೆ. ಪರಿಣಾಮ ಓರ್ವ ಗುರುಸ್ವಾಮಿ ಮೃತಪಟ್ಟಿದ್ದಾರೆ. 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, 20 ಜನರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಯುವಕನೊಂದಿಗೆ ಆಂಟಿ ಲವ್ವಿಡವ್ವಿ – ರೀಲ್ಸ್‌ ಪ್ರಿಯನಿಗಾಗಿ ಗಂಡನಿಗೇ ಚಟ್ಟ ಕಟ್ಟಿದ ಪತ್ನಿ

    ರಾಜ್ಯ ಸರ್ಕಾರವು ಕೇರಳ ಸರ್ಕಾರದೊಂದಿಗೆ ಮಾತುಕತೆ ನಡೆಸಿ, ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸುವ ವ್ಯವಸ್ಥೆ ಮಾಡಿದೆ. ಅಲ್ಲದೇ ಹಾನಗಲ್ ಶಾಸಕ ಶ್ರೀನಿವಾಸ್ ಮಾನೆ ಅವರು ರಾಜ್ಯ ಸರ್ಕಾರದೊಂದಿಗೆ ಮಾತನಾಡಿ, ಮೃತದೇಹವನ್ನು ತರುವ ವ್ಯವಸ್ಥೆ ಮಾಡಿದ್ದಾರೆ.

  • ಮದ್ಯ ಕುಡಿದು ಅಯ್ಯಪ್ಪ ಭಕ್ತರ ಮೇಲೆ ಕಾರು ಹರಿಸಿದ ಕೇಸ್ – ಆರೋಪಿ ವಿರುದ್ಧ ಎಫ್‌ಐಆರ್

    ಮದ್ಯ ಕುಡಿದು ಅಯ್ಯಪ್ಪ ಭಕ್ತರ ಮೇಲೆ ಕಾರು ಹರಿಸಿದ ಕೇಸ್ – ಆರೋಪಿ ವಿರುದ್ಧ ಎಫ್‌ಐಆರ್

    ಉತ್ತರ ಕನ್ನಡ: ಸಿದ್ದಾಪುರದ (Siddapura) ಅಯ್ಯಪ್ಪ ಸ್ವಾಮಿ ಭಕ್ತರ ಮೇಲೆ ಮದ್ಯ ಸೇವಿಸಿ ಕಾರು ಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ.

    ಆರೋಪಿಯನ್ನು ರೋಷನ್ ಫರ್ನಾಂಡಿಸ್ ಎಂದು ಗುರುತಿಸಲಾಗಿದ್ದು, ಭಾರತೀಯ ನ್ಯಾಯ ಸಂಹಿತೆ 2023ರ ಕಲಂ 281, 125(ಎ),125(ಬಿ), 105 ಅಡಿ ಪ್ರಕರಣ ದಾಖಲಿಸಲಾಗಿದೆ.ಇದನ್ನೂ ಓದಿ: ಹೈಕಮಾಂಡ್ ಒಪ್ಪಿದ್ರೆ ನಾನೂ ಸಿಎಂ ಆಗ್ತೀನಿ – ಸಚಿವ ಆರ್.ಬಿ ತಿಮ್ಮಾಪುರ

    ಘಟನೆ ಏನು?
    ಮಂಗಳವಾರ ರಾತ್ರಿ ಸಿದ್ದಾಪುರದ ರವೀಂದ್ರ ನಗರದ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಜಾತ್ರೆಗೆ ಬಂದಿದ್ದ ಭಕ್ತರ ಮೇಲೆ ಬೇಕಾಬಿಟ್ಟಿಯಾಗಿ ರೋಷನ್ ಕಾರು ಚಲಾಯಿಸಿದ್ದನು. ಈ ವೇಳೆ ಯುವತಿಯೊಬ್ಬರು ಸಾವನ್ನಪ್ಪಿದ್ದು, ಎಂಟು ಜನರು ಗಾಯಗೊಂಡಿದ್ದರು.

    ಉದ್ದೇಶ ಪೂರ್ವಕವೇ?
    ಆರೋಪಿ ರವೀಂದ್ರ ನಗರದ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿಯೇ ಈತ ಮನೆ ಹೊಂದ್ದಾನೆ. ಇಸ್ರೇಲ್‌ನಲ್ಲಿ ಉದ್ಯೋಗಮಾಡಿಕೊಂಡಿದ್ದ ಈತ ಮರಳಿ ಸಿದ್ದಾಪುರಕ್ಕೆ ಬಂದಿದ್ದ. ಕೈಯಲ್ಲಿ ಏನು ಕೆಲಸವಿಲ್ಲದಿದ್ದರೂ ಬಿಂದಾಸ್ ಆಗಿ ಖರ್ಚು ಮಾಡಿಕೊಂಡು ಮದ್ಯವೆಸನಿಯಾಗಿದ್ದ. ಕಳೆದ ಎರಡು ದಿನದ ಹಿಂದೆ ಇದೇ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನಡೆಯುತ್ತಿದ್ದ ಭಜನೆಯಿಂದ ಕೋಪಗೊಂಡು ಗಲಾಟೆ ಮಾಡಿದ್ದ ಎಂದು ಕೆಲವರು ಹೇಳಿದ್ದಾರೆ.

    ಕುಡಿದ ಮತ್ತಲ್ಲಿ ಕಾರು ಚಲಾಯಿಸಿಕೊಂಡು ಬಂದು, ರಸ್ತೆಯಲ್ಲಿ ಬ್ಯಾರಿಕೇಟ್ ಹಾಕಿದ್ದನ್ನು ನೋಡಿದ್ದರೂ ಕೂಡ ಹಾಗೆಯೇ ಹೋಗಿ ರಸ್ತೆಯ ಪಕ್ಕದಲ್ಲಿ ಬರುತಿದ್ದ ಅಕ್ಕ ತಂಗಿಯರಿಗೆ ಡಿಕ್ಕಿ ಹೊಡೆದಿದ್ದಾನೆ. ಆಗ ಓರ್ವ ಯುವತಿ ಸಾವನ್ನಪ್ಪಿದ್ದಾಳೆ. ಅಲ್ಲಿಂದ ಮತ್ತೆ ರಿವರ್ಸ್ ಹೋಗಿ ಏಕಾಏಕಿ ಮುಂದೆ ಬಂದು, ದೇವರ ಪಲ್ಲಕ್ಕಿ ಬರುವುದಕ್ಕಾಗಿ ಕಾದಿದ್ದ ಜನರ ಮೇಲೆ ಹತ್ತಿಸಿದ್ದಾನೆ.

    ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಹಾಗೂ ಸೂಕ್ತ ತನಿಖೆ ಮಾಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಇನ್ನೂ ಅಪಘಾತ ವೇಳೆ ಆರೋಪಿ ಮದ್ಯಪಾನ ಮಾಡಿರುವುದು ವೈದ್ಯಕೀಯ ಪರೀಕ್ಷೆಯಿಂದ ದೃಡಪಟ್ಟಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.ಇದನ್ನೂ ಓದಿ: 12 ಗಂಟೆಯಲ್ಲಿ 1,057 ಪುರುಷರೊಂದಿಗೆ ಸೆಕ್ಸ್‌ – ವಿಶ್ವದಾಖಲೆ ಬರೆದ ನೀಲಿ ತಾರೆ

  • ಕರ್ನಾಟಕದ ಅಯ್ಯಪ್ಪ ಭಕ್ತರೇ ಗಮನಿಸಿ.. ಶಬರಿಮಲೆ ದರ್ಶನಕ್ಕೆ ಸ್ಪಾಟ್‌ ಬುಕಿಂಗ್‌ ದಿನಕ್ಕೆ 5,000 ಜನರಿಗೆ ಮಾತ್ರ

    ಕರ್ನಾಟಕದ ಅಯ್ಯಪ್ಪ ಭಕ್ತರೇ ಗಮನಿಸಿ.. ಶಬರಿಮಲೆ ದರ್ಶನಕ್ಕೆ ಸ್ಪಾಟ್‌ ಬುಕಿಂಗ್‌ ದಿನಕ್ಕೆ 5,000 ಜನರಿಗೆ ಮಾತ್ರ

    ತಿರುವನಂತಪುರಂ: ಮಕರ ಸಂಕ್ರಾಂತಿಯಂದು ಕೇರಳದ ಶಬರಿಮಲೆಯಲ್ಲಿ (Sabarimala) ಸಂಭವಿಸುವ ಮಕರ ಜ್ಯೋತಿಯನ್ನು (ಮಕರವಿಳಕ್ಕು) ಕಣ್ತುಂಬಿಕೊಳ್ಳಲು ಅಯ್ಯಪ್ಪ ಭಕ್ತರು ಕಾತರರಾಗಿದ್ದಾರೆ. ಹೀಗಾಗಿ, ಶಬರಿಮಲೆಗೆ ಭಕ್ತರ ದಂಡೇ ಆಗಮಿಸುತ್ತಿದೆ. ಜನಸಂದಣಿಯನ್ನು ನಿಯಂತ್ರಿಸಲು ಶಬರಿಮಲೆ ದರ್ಶನಕ್ಕೆ ಬರುವ ಭಕ್ತರಿಗೆ ಸ್ಪಾಟ್‌ ಬುಕಿಂಗ್‌ ಅನ್ನು 5,000ಕ್ಕೆ ಮಿತಿಗೊಳಿಸಲಾಗಿದೆ.

    ಮಕರ ಜ್ಯೋತಿಯನ್ನು (Makarajyothi) ಕಣ್ತುಂಬಿಕೊಳ್ಳಲು ಶಬರಿಮಲೆಗೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಆಗ, ಶಬರಿಮಲೆಯಲ್ಲಿ ಭಕ್ತಾದಿಗಳ ನೂಕುನುಗ್ಗಲು ತಪ್ಪಿಸುವ ನಿಟ್ಟಿನಲ್ಲಿ ಸನ್ನಿಧಾನಂನಲ್ಲಿ ಸ್ಪಾಟ್ ಬುಕ್ಕಿಂಗ್ ಸೌಲಭ್ಯವನ್ನು ನಾಳೆಯಿಂದ (ಜ.8) ಜನವರಿ 15ರ ವರೆಗೆ ದಿನಕ್ಕೆ 5000 ಜನರಿಗೆ ಸೀಮಿತಗೊಳಿಸಲು ನಿರ್ಧರಿಸಲಾಗಿದೆ. ಇದನ್ನೂ ಓದಿ: ಸನ್ ಗ್ಲಾಸ್ ಕ್ಯಾಮೆರಾ ಬಳಸಿ ರಾಮಜನ್ಮಭೂಮಿಯ ಚಿತ್ರೀಕರಣ – ಆರೋಪಿ ಅರೆಸ್ಟ್‌

    ಶಬರಿಮಲೆಯಲ್ಲಿ ಹಬ್ಬ ಹರಿದಿನಗಳಲ್ಲಿ ಜನಸಂದಣಿ ನಿರ್ವಹಣೆಗೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿದೆ. ದೇವಸ್ವಂ ಬೋರ್ಡ್ ವೆಬ್‌ಸೈಟ್‌ನಲ್ಲಿ ಜ.12 ರಂದು 60,000, ಜ.13 ರಂದು 50,000 ಮತ್ತು ಜ.14 ರಂದು 40,000 ಎಂದು ವರ್ಚುವಲ್ ಕ್ಯೂ ಮೂಲಕ ಬುಕ್ಕಿಂಗ್ ಅನ್ನು ನಿಗದಿಪಡಿಸಲಾಗಿದೆ. ಮಕರ ಜ್ಯೋತಿ ದಿನ (ಜ.14) ಬೆಟ್ಟದ ಮೇಲೆ ಬಿಡಾರ ಹೂಡದಂತೆ ಭಕ್ತರಿಗೆ ಸಲಹೆ ನೀಡಲಾಗಿದೆ.

    ಜ.10 ರಿಂದಲೇ ಪರ್ಣಶಾಲೆಗಳಲ್ಲಿ ಭಕ್ತರು ಕಾದು ಜ್ಯೋತಿ ದರ್ಶನ ಮಾಡುವುದು ವಾಡಿಕೆ. ಈ ಕಾರಣಕ್ಕಾಗಿ ಮಕರವಿಳಕ್ಕು ದಿನದಂದು ಉಂಟಾಗಬಹುದಾದ ಜನಸಂದಣಿ ತಪ್ಪಿಸಲು ಸಿದ್ಧತೆಗಳು ನಡೆಯುತ್ತಿವೆ. ಸ್ಪಾಟ್ ಬುಕ್ಕಿಂಗ್ ಅನ್ನು ಸೀಮಿತಗೊಳಿಸುವುದರ ಜೊತೆಗೆ ನಿಲಕ್ಕಲ್‌ನಲ್ಲಿ ಭಕ್ತರನ್ನು ಪಂಪಾ ನದಿಗೆ ಪ್ರವೇಶಿಸಲು ಅನುಮತಿಸುವ ಮೊದಲು ಪೊಲೀಸರು ತಪಾಸಣೆ ನಡೆಸುತ್ತಾರೆ. ಪರ್ಣಶಾಲೆಯಲ್ಲಿ ಕುಳಿತುಕೊಳ್ಳುವ ಭಕ್ತರ ಅಡುಗೆ ಮತ್ತು ಇತರ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸರು ಮಾರ್ಗಸೂಚಿಗಳನ್ನು ಜಾರಿಗೆ ತರಲಿದ್ದಾರೆ. ಜ್ಯೋತಿ ದರ್ಶನಕ್ಕೆ ಸಜ್ಜಾಗಿರುವ ವಿವಿಧೆಡೆ ಭದ್ರತೆಗಾಗಿ ನಾನಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದನ್ನೂ ಓದಿ: ಪೆನ್ನಾರ್ ನದಿ ನೀರು ವಿವಾದ, ಭದ್ರಾ ಮೇಲ್ದಂಡೆ ಯೋಜನೆ – ಕೇಂದ್ರ ಸಚಿವ ಸೋಮಣ್ಣ ಜೊತೆ ಡಿಕೆಶಿ ಚರ್ಚೆ

    ಜ.12ರಂದು ಮಧ್ಯಾಹ್ನ 1 ಗಂಟೆಗೆ ಪಂದಳಂನ ವಲಿಯ ಕೊಯಿಕ್ಕಲ್ ದೇವಸ್ಥಾನದಿಂದ ಭಕ್ತರ ದರ್ಶನ ಹಾಗೂ ವಿವಿಧ ಕಾರ್ಯಕ್ರಮಗಳ ನಂತರ ತಿರುವಾಭರಣ ಮೆರವಣಿಗೆ ಶಬರಿಮಲೆಗೆ ತೆರಳಲಿದೆ. ವಿವಿಧ ದೇವಸ್ಥಾನಗಳನ್ನು ತಲುಪಿದ ಬಳಿಕ ದರ್ಶನ ಸೌಲಭ್ಯ ಪಡೆದು ರಾತ್ರಿ 9:30ಕ್ಕೆ ಅಯೂರು ಪುತಿಯಕಾವು ದೇವಸ್ಥಾನದಲ್ಲಿ ತಂಗಲಿದೆ. ಜ.13 ರಂದು ಮುಂಜಾನೆ 3 ಗಂಟೆಗೆ ಹೊರಡುವ ಮೆರವಣಿಗೆ ರಾತ್ರಿ 9 ಗಂಟೆಗೆ ಲಾಹಾದಲ್ಲಿ ತಂಗಲಿದೆ. 14ರಂದು ಮಕರವಿಳಕ್ಕು ದಿನ ಲಾಹದಿಂದ ಹೊರಟು ಪಂಡಿತಾವಲಂ, ಚೆರಿಯಾನವಟ್ಟಂ, ನೀಲಿಮಲ, ಅಪಾಚಿಮೇಡು ಮೂಲಕ ಸಂಜೆ 4 ಗಂಟೆಗೆ ಶಬರಿಪೀಠ ತಲುಪಲಿದೆ. ನಂತರ ಸಾರಂಕುತಿ ಮೂಲಕ ಸಂಜೆ 5.30ಕ್ಕೆ ಸನ್ನಿಧಾನಕ್ಕೆ ಬರಮಾಡಿಕೊಳ್ಳಲಾಗುವುದು. ಮೆರವಣಿಗೆ ಮಾರ್ಗಗಳಲ್ಲಿ ಯಾತ್ರಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಪೊಲೀಸರು ಅಗತ್ಯ ವ್ಯವಸ್ಥೆಗಳನ್ನು ಮಾಡುತ್ತಿದ್ದಾರೆ.

    ಯಾತ್ರಾರ್ಥಿಗಳ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿರುವುದು ಪೊಲೀಸರ ಸಿದ್ಧತೆಗಳ ಯಶಸ್ಸಿಗೆ ಮತ್ತು ಸುಗಮ ಮತ್ತು ಸುರಕ್ಷಿತ ದರ್ಶನಕ್ಕೆ ಸಾಕ್ಷಿಯಾಗಿದೆ. ನ.15 ರಿಂದ ಈ ವರ್ಷ ಜ.5 ರವರೆಗೆ ತೀರ್ಥಯಾತ್ರೆ ಪ್ರಾರಂಭವಾದಾಗ ದಾಖಲೆಯ 39,02,610 ಅಯ್ಯಪ್ಪ ಭಕ್ತರು ದೇಗುಲಕ್ಕೆ ಭೇಟಿ ನೀಡಿದ್ದರು. ಕಳೆದ ವರ್ಷ ಇದೇ ಅವಧಿಯಲ್ಲಿ 35,12,691 ಭಕ್ತರು ದೇಗುಲಕ್ಕೆ ಭೇಟಿ ನೀಡಿದ್ದರು. ಮಕರವಿಳಕ್ಕು ಆರಂಭವಾದ ಡಿ.30 ರಿಂದ ನಿನ್ನೆಯವರೆಗೆ 6,22,849 ಜನರು ದೇಗುಲಕ್ಕೆ ಭೇಟಿ ನೀಡಿದ್ದಾರೆ ಎಂದು ರಾಜ್ಯ ಪೊಲೀಸ್‌ ಮಾಧ್ಯಮ ಕೇಂದ್ರದ ಉಪ ನಿರ್ದೇಶಕ ಎಸ್‌.ಆರ್‌.ಪ್ರವೀಣ್‌ ತಿಳಿಸಿದ್ದಾರೆ. ಇದನ್ನೂ ಓದಿ: ಭಾರತ್‌ಪೋಲ್ ಪೋರ್ಟಲ್ ಲೋಕಾರ್ಪಣೆ ಮಾಡಿದ ಅಮಿತ್ ಶಾ

  • ಶಬರಿಮಲೆ ಯಾತ್ರೆಯಲ್ಲಿ ಮಸೀದಿ ಭೇಟಿ ಬೇಡ: ಬಿಜೆಪಿ ಶಾಸಕ ರಾಜಾ ಸಿಂಗ್‌

    ಶಬರಿಮಲೆ ಯಾತ್ರೆಯಲ್ಲಿ ಮಸೀದಿ ಭೇಟಿ ಬೇಡ: ಬಿಜೆಪಿ ಶಾಸಕ ರಾಜಾ ಸಿಂಗ್‌

    ಹೈದರಾಬಾದ್: ಕೇರಳದ ಶಬರಿಮಲೆಗೆ ಭೇಟಿ ನೀಡುವ ಅಯ್ಯಪ್ಪ ಭಕ್ತರು ತಮ್ಮ ತೀರ್ಥಯಾತ್ರೆಯ ಸಮಯದಲ್ಲಿ ಯಾವುದೇ ಮಸೀದಿಗಳಿಗೆ ಹೋಗಬೇಡಿ ಎಂದು ತೆಲಂಗಾಣದ ಬಿಜೆಪಿ ಶಾಸಕ ರಾಜಾ ಸಿಂಗ್ ತಿಳಿಸಿದ್ದಾರೆ.

    ಭಕ್ತರು ‘ಅಯ್ಯಪ್ಪ ದೀಕ್ಷಾ’ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮಾಲಾಧಾರಿಗಳು ಮಸೀದಿಗೆ ಹೋದರೆ ಅವರು ಅಶುದ್ಧರಾಗುತ್ತಾರೆ. ಭಕ್ತರನ್ನು ಮಸೀದಿಗೆ ಬರುವಂತೆ ಮಾಡಿರುವುದು ಷಡ್ಯಂತ್ರ ಎಂದು ಸಿಂಗ್ ಹೇಳಿದ್ದಾರೆ.

    ತೆಲಂಗಾಣ ಮತ್ತು ಆಂಧ್ರಪ್ರದೇಶದ ಮುಖ್ಯಮಂತ್ರಿಗಳಾದ ಎ ರೇವಂತ್ ರೆಡ್ಡಿ ಮತ್ತು ಎನ್ ಚಂದ್ರಬಾಬು ನಾಯ್ಡು ಅವರು ಭಕ್ತರಿಗೆ ವಸತಿ ನಿರ್ಮಿಸಲು 10 ಎಕರೆ ಜಾಗವನ್ನು ಕೋರಿ ಕೇರಳ ಸರ್ಕಾರಕ್ಕೆ ಪತ್ರ ಬರೆಯಬೇಕು ಎಂದು ಒತ್ತಾಯಿಸಿದ್ದಾರೆ.

    ಗೋಶಾಮಹಲ್‌ ಶಾಸಕ ಶಾಸಕ ರಾಜಾಸಿಂಗ್‌ ಹೇಳಿಕೆಯು ಚರ್ಚೆಗೆ ಗ್ರಾಸವಾಗಿದೆ. ಸೋಷಿಯಲ್‌ ಮೀಡಿಯಾದಲ್ಲಿ ಪರ-ವಿರೋಧ ಮಾತು ವ್ಯಕ್ತವಾಗುತ್ತದೆ.

  • 8 ಅಯ್ಯಪ್ಪ ಮಾಲಾಧಾರಿಗಳ ಸಾವು – ಮುಖ್ಯಮಂತ್ರಿಗಳ ನಿಧಿಯಿಂದ ತಲಾ 5 ಲಕ್ಷ ಪರಿಹಾರ ಘೋಷಣೆ

    8 ಅಯ್ಯಪ್ಪ ಮಾಲಾಧಾರಿಗಳ ಸಾವು – ಮುಖ್ಯಮಂತ್ರಿಗಳ ನಿಧಿಯಿಂದ ತಲಾ 5 ಲಕ್ಷ ಪರಿಹಾರ ಘೋಷಣೆ

    ಹುಬ್ಬಳ್ಳಿ: ಸಿಲಿಂಡರ್ ಸ್ಫೋಟಗೊಂಡು (Cylinder Blast) 8 ಮಂದಿ ಅಯ್ಯಪ್ಪ ಮಾಲಾಧಾರಿಗಳು (Ayyappa Devotees) ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಹಿನ್ನೆಲೆ ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ (Relief) ಘೋಷಿಸಲಾಗಿದೆ.

    ಎಂಟು ಜನರಿಗೆ ಪರಿಹಾರ ನೀಡಬೇಕೆಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ (Santhosh Lad) ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು. ಲಾಡ್ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಂದಿಸಿದ್ದು, ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ರೂ. ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ದೆಹಲಿ ಗಣರಾಜ್ಯೋತ್ಸವಕ್ಕೆ ಲಕ್ಕುಂಡಿಯ ಬ್ರಹ್ಮ ಜಿನಾಲಯ ಆಯ್ಕೆ – ವಿಶೇಷತೆ ಏನು?

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಘೋಷಣೆ ಮಾಡಲಾಗಿದೆ. ಸಂತೋಷ್ ಲಾಡ್ ಫೌಂಡೇಶನ್‌ನಿಂದಲೂ ಮೃತರ ಕುಟುಂಬಕ್ಕೆ ಧನ ಸಹಾಯ ಮಾಡಲಾಗಿದೆ. ಇದನ್ನೂ ಓದಿ: ರಾಜ್ಯದ ಜನತೆಗೆ ಗ್ಯಾರಂಟಿ ಶಾಕ್ – ದರ ಏರಿಕೆಗೆ ಸರ್ಕಾರ ಹೇಳೋದು ಏನು?

    ಡಿಸೆಂಬರ್ 22ರಂದು ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಂಭೀರ ಗಾಯಗೊಂಡಿದ್ದರು. ಗಾಯಾಳುಗಳಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ 8 ಮಂದಿ ಅಯ್ಯಪ್ಪ ಮಾಲಾಧಾರಿಗಳು ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಬಾಣಂತಿಯರಿಗೆ ಬದುಕುವ ಗ್ಯಾರಂಟಿ ನೀಡಿ: ಅಶೋಕ್ ಕಿಡಿ

  • ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಫೋಟ ಕೇಸ್‌ – ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು – 8 ಕ್ಕೇರಿದ ಸಾವಿನ ಸಂಖ್ಯೆ

    ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಫೋಟ ಕೇಸ್‌ – ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು – 8 ಕ್ಕೇರಿದ ಸಾವಿನ ಸಂಖ್ಯೆ

    ಹುಬ್ಬಳ್ಳಿ: ಸಿಲಿಂಡರ್ ಸ್ಫೋಟಗೊಂಡು ಆಸ್ಪತ್ರೆ ಸೇರಿದ್ದ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಲ್ಲಿ ಮತ್ತೊಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ ಎಂಟಕ್ಕೇರಿದೆ.

    ಪ್ರಕಾಶ ಬಾರಕೇರ (42) ಮೃತಪಟ್ಟಿದ್ದಾರೆ. ಅವಘಡದಲ್ಲಿ ಒಂಬತ್ತು ಮಂದಿ ಮಾಲಾಧಾರಿಗಳು ಗಾಯಗೊಂಡು ಆಸ್ಪತ್ರೆ ಸೇರಿದ್ದರು. ಎಲ್ಲರ ಸ್ಥಿತಿಯೂ ಚಿಂತಾಜನಕವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸರಣಿಯಂತೆ ಎಂಟು ಮಂದಿ ಕೊನೆಯುಸಿರೆಳೆದಿದ್ದಾರೆ. 25% ಗಾಯಗೊಂಡಿದ್ದ 12 ವರ್ಷ ವಿನಾಯಕ ಬಾರಕೇರ ಎಂಬ ಮಾಲಾಧಾರಿ ಬಾಲಕ ಮಾತ್ರ ಬದುಕಿಳಿದ್ದು, ಇನ್ನು ಎರಡ್ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.

    ಕಳೆದ ಭಾನುವಾರ ಬೆಳಗ್ಗೆ ಹುಬ್ಬಳ್ಳಿ ಅಚ್ಚವನ ಕಾಲೊನಿಯ ಈಶ್ವರ ದೇವಸ್ಥಾನದಲ್ಲಿ, ಮಾಲಾಧಾರಿಗಳು ಮಲಗಿದ್ದ ವೇಳೆ ಈ ಅವಘಡ ಸಂಭವಿಸಿತ್ತು. ಸಕಾಲದಲ್ಲಿ ಎಲ್ಲಾ ಮಾಲಾಧಾರಿಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜಿಲ್ಲಾಡಳಿತ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದ ಪರಿಣಾಮ, ಬೆಂಗಳೂರಿನ ನುರಿತ ವೈದ್ಯರು ಮತ್ತು ಕಿಮ್ಸ್ ನಿರ್ದೇಶಕ ಎಸ್.ಎಫ್. ಕಮ್ಮಾರ ನೇತೃತ್ವದ ತಂಡ ಗಾಯಾಳುಗಳನ್ನು ಉಳಿಸಿಕೊಳ್ಳಲು ಸಾಕಷ್ಟು ಪ್ರಯತ್ನ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ.

    ಡಿ.23ರಿಂದ 31 ರ ನಡುವೆ, ನಿಜಲಿಂಗಪ್ಪ ಬೇಪುರಿ, ಸಂಜಯ್ ಸವದತ್ತಿ, ರಾಜು ಮುಗೇರಿ, ಲಿಂಗರಾಜ್ ಬಿರನೂರು, ಮಂಜುನಾಥ ವಾಗ್ಮೋಡೆ, ಶಂಕರ್ ಚಹ್ವಾಣ್, ತೇಜಸ್ವಿ ಸಾತ್ರೆ, ಪ್ರಕಾಶ್ ಬಾರಕೇರ ಸಾವನ್ನಪ್ಪಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನೂ ಎಲ್ಲಾ ಗಾಯಾಳುಗಳ ಚಿಕಿತ್ಸೆ ವೆಚ್ಚವನ್ನು ಸರ್ಕಾರವೇ ಭರಿಸಿದ್ದು, ಮೃತಪಟ್ಟವರ ಕುಟುಂಬಸ್ಥರಿಗೆ ತಲಾ ಐದು ಲಕ್ಷ ಪರಿಹಾರ ನೀಡಲಾಗಿದೆ.

  • ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಫೋಟ – ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು, ಸಾವಿನ ಸಂಖ್ಯೆ 6ಕ್ಕೇರಿಕೆ!

    ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಫೋಟ – ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು, ಸಾವಿನ ಸಂಖ್ಯೆ 6ಕ್ಕೇರಿಕೆ!

    – ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ಸ್ಥಿತಿ ಗಂಭೀರ

    ಹುಬ್ಬಳ್ಳಿ: ಕಳೆದ ಭಾನುವಾರ ತಡರಾತ್ರಿ ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯಲ್ಲಿ ನಡೆದಿದ್ದ ಸಿಲಿಂಡರ್ ಸ್ಫೋಟ ಪ್ರಕರಣ (Hubballi Cylinder Blast Case) ಇಡೀ ಹುಬ್ಬಳ್ಳಿ-ಧಾರವಾಡ ಜನರನ್ನು ಬೆಚ್ಚಿ ಬಿಳಿಸಿತ್ತು.

    ಈಶ್ವರ ದೇವಸ್ಥಾನದಲ್ಲಿ ಮಲಗಿದ್ದ ಒಂಬತ್ತು ಅಯ್ಯಪ್ಪ ಮಾಲಾಧಾರಿಗಳು ಬೆಂಕಿಗೆ ಬೆಂದಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ರೂ ಮೂವರು ಮೃತಪಟ್ಟಿದ್ರು. ಉಳಿದವರಿಗೆ ಕಿಮ್ಸ್‌ನಲ್ಲಿ ಚಿಕಿತ್ಸೆ ಮುಂದುವರೆದಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳು ಕೊನೆಯುಸಿರೆಳೆದಿದ್ದು, ಸಾವಿನ ಸಂಖ್ಯೆ 6ಕ್ಕೇರಿದೆ. ಇದನ್ನೂ ಓದಿ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು, ಮತ್ತೊಬ್ಬನ ಕಾಲು ಕಟ್

    30 ವರ್ಷದ ಶಂಕರ್, 22 ವರ್ಷದ ಮಂಜುನಾಥ ವಾಗ್ಮೋಡೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ಶಂಕರ್ ಕಿಮ್ಸ್ ಆಸ್ಪತ್ರೆಯಲ್ಲಿ ಹೊರ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡ್ತಿದ್ರು. ಬಾಲ್ಯದಲ್ಲಿ ತಂದೆ ತಾಯಿ ಕಳೆದುಕೊಂಡು ಅನಾಥವಾಗಿದ್ದ ಶಂಕರ್ ದೊಡ್ಡಮ್ಮನ ಮನೆಯಲ್ಲಿ ವಾಸವಿದ್ದ. ಶಂಕರ್ ಚವ್ಹಾಣ್ ಮೊದಲ ಬಾರಿ ಅಯ್ಯಪ್ಪನ ಮಾಲೆ ಧರಿಸಿದ್ದರು. ಕಳೆದ ಏಳು ದಿನಗಳಿಂದ ಕಿಮ್ಸ್‌ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಪಾಕ್‌ ವಿರುದ್ಧ ರೋಚಕ ಜಯ – WTC ಫೈನಲ್‌ಗೆ ದ.ಆಫ್ರಿಕಾ, ಭಾರತಕ್ಕೆ ಗೆಲುವೊಂದೇ ದಾರಿ

    ಇನ್ನೂ ಮಂಜುನಾಥ ವಾಗ್ಮೋಡೆಯ ದೇಹ ಶೇ.70ರಷ್ಟು ಸುಟ್ಟಿತ್ತು. 2ನೇ ವರ್ಷ ಡಿಪ್ಲೊಮಾ ಕೋರ್ಸ್ ವಿದ್ಯಾರ್ಥಿಯಾಗಿದ್ದ ಮಂಜುನಾಥ್. ಅಯ್ಯಪ್ಪ ಮಾಲೆ ಧರಿಸಿದ್ರು. ಒಂದು ವಾರದಿಂದ ಚಿಕಿತ್ಸೆಗೆ ಸ್ಪಂದಿಸಿದ್ರೂ ಇಂದು ಮೃತಪಟ್ಟಿದ್ದಾರೆ. ಕಿಮ್ಸ್ ಸಿಬ್ಬಂದಿ ಕೂಡ ತಮ್ಮ ಸಹೋದ್ಯೋಗಿಯ ಅಂತಿಮ ದರ್ಶನ ಪಡೆದು ಕಣ್ಣಿರು ಹಾಕಿದ್ದಾರೆ. ಪ್ರಕಾಶ್ ಬಾರಕೇರ್ ದೇಹ ಶೇ.91 ರಷ್ಟು, ತೇಜಸ್ವರ್ ಸಾತರೆಯ ದೇಹ ಶೇ.74 ರಷ್ಟು ಸುಟ್ಟಿದೆ. ವಿನಾಯಕ್ ಭಾರಕೇರ್ ದೇಹ ಶೇ.25 ರಷ್ಟು ಸುಟ್ಟಿದ್ದು, ಅಪಾಯದಿಂದ ಪಾರಾಗಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಕಿಮ್ಸ್ನಲ್ಲಿ ಚಿಕಿತ್ಸೆ ಮುಂದುವರೆದಿದೆ. ಇದನ್ನೂ ಓದಿ: ಸಾರಿಗೆ ಮುಷ್ಕರ ಕೈಬಿಡುವಂತೆ ಸರ್ಕಾರ ಮನವಿ – ಸಿಎಂ 2,000 ಕೋಟಿ ಬಿಡುಗಡೆ ಮಾಡಿದ್ದಾರೆ: ರಾಮಲಿಂಗಾ ರೆಡ್ಡಿ

  • ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಮುಸ್ಲಿಂ ಮುಖಂಡನಿಂದ ಅನ್ನಸಂತರ್ಪಣೆ: ಭಾವೈಕ್ಯತೆ ಮೆರೆದ ಕರೀಂಸಾಬ್

    ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಮುಸ್ಲಿಂ ಮುಖಂಡನಿಂದ ಅನ್ನಸಂತರ್ಪಣೆ: ಭಾವೈಕ್ಯತೆ ಮೆರೆದ ಕರೀಂಸಾಬ್

    ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳದಲ್ಲಿ ಮುಸ್ಲಿಂ ಮುಖಂಡ ಅಬ್ದುಲ್ ಕರೀಂ ಸಾಬ್ ತಮ್ಮ ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ ಅನ್ನ ಸಂತರ್ಪಣೆ ಮಾಡುವ ಮೂಲಕ ಭಾವೈಕ್ಯತೆ ಮೆರೆದಿದ್ದಾರೆ.

    ಕಳೆದ ಮೂರು ವರ್ಷಗಳಿಂದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ ಅನ್ನಸಂತರ್ಪಣೆ ಮಾಡುತ್ತಾ ಹಿಂದೂ ಮುಸ್ಲಿಮರ ನಡುವಿನ ಭಾವೈಕ್ಯತೆ ಸಾರಿದ್ದಾರೆ. ಕವಿತಾಳ ಮತ್ತು ಪಾತಾಪೂರದ ಅಯ್ಯಪ್ಪ ಸ್ವಾಮಿ ಪೀಠದ 40ಕ್ಕೂ ಹೆಚ್ಚು ಮಾಲಾಧಾರಿಗಳಿಗೆ ಹೋಳಿಗೆ ತುಪ್ಪ, ಲಾಡು ಸೇರಿ ಬಗೆಬಗೆಯ ತಿಂಡಿ ತಿನಿಸುಗಳನ್ನು ಮಾಡಿ ಸ್ವತಃ ಬಡಿಸುವ ಮೂಲಕ ಗಮನ ಸೆಳೆದಿದ್ದಾರೆ. ಇದನ್ನೂ ಓದಿ: UI ಸಕ್ಸಸ್ ಬೆನ್ನಲ್ಲೇ ಉಪೇಂದ್ರ ಟೆಂಪಲ್ ರನ್

    ಅಯ್ಯಪ್ಪ ಮಾಲೆ ಧರಿಸಿದ ಭಕ್ತರಿಗೆ ಸ್ವಚ್ಛತೆ ಹಾಗೂ ಮಡಿಯಿಂದ ಅಡುಗೆ ಮಾಡಿ ಉಣ ಬಡಿಸಿದ್ದಾರೆ. ಕರೀಂಸಾಬ್ ಆತಿಥ್ಯ ಸ್ವೀಕರಿಸಿದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಖುಷಿ ವ್ಯಕ್ತಪಡಿಸಿದ್ದಾರೆ.

  • ಸಿಲಿಂಡರ್‌ ಸ್ಫೋಟ ಕೇಸ್‌; ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು – ಮೃತರ ಸಂಖ್ಯೆ 5 ಕ್ಕೆ ಏರಿಕೆ

    ಸಿಲಿಂಡರ್‌ ಸ್ಫೋಟ ಕೇಸ್‌; ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು – ಮೃತರ ಸಂಖ್ಯೆ 5 ಕ್ಕೆ ಏರಿಕೆ

    ಹುಬ್ಬಳ್ಳಿ: ಸಿಲಿಂಡರ್‌ ಸೋರಿಕೆಯಿಂದ (Hubballi Cylinder Blast) ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ (Ayyappa Devotee) ಸಾವಿಗೀಡಾಗಿದ್ದಾರೆ. ಮೃತರ ಸಂಖ್ಯೆ 5 ಕ್ಕೆ ಏರಿಕೆಯಾಗಿದೆ.

    ಹುಬ್ಬಳ್ಳಿಯ ಉಣಕಲ್ ನಿವಾಸಿ ಮಾಲಾಧಾರಿ ಶಂಕರ ಚವ್ಹಾಣ್ (30) ಮೃತಪಟ್ಟವರು. ಗಂಭೀರ ಸ್ಥಿತಿಯಲ್ಲಿದ್ದ ಇವರು ಕಳೆದ ಏಳು ದಿನಗಳಿಂದ ಹುಬ್ಬಳ್ಳಿಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: Hubballi| ಮಲಗಿದ್ದ ವೇಳೆ ಸಿಲಿಂಡರ್ ಗ್ಯಾಸ್ ಸ್ಫೋಟ – 9 ಅಯ್ಯಪ್ಪ ಮಾಲಾಧಾರಿಗಳಿಗೆ ಗಂಭೀರ ಗಾಯ

    ಬಾಲ್ಯದಲ್ಲೇ ತಂದೆ-ತಾಯಿಯನ್ನ ಕಳೆದುಕೊಂಡು ದೊಡ್ಡಮ್ಮನ ಮನೆಯಲ್ಲಿ ಶಂಕರ್‌ ಬೆಳೆದಿದ್ದ. ಅಯ್ಯಪ್ಪನ ವೃತ ಮಾಡಲು ಮೊದಲ ಬಾರಿಗೆ ಮಾಲೆ ಹಾಕಿದ್ದ. ಕಳೆದ ಭಾನುವಾರ ರಾತ್ರಿ ಸಿಲಿಂಡರ್‌ ಸೋರಿಕೆ ಅವಘಡ ನಡೆದಿತ್ತು.

    ಸಾಯಿನಗರದ ಅಚ್ಚವ್ವಳ ಕಾಲೊನಿಯಲ್ಲಿ ಈ ದುರ್ಘಟನೆ ಸಂಭವಿಸಿತ್ತು. ಗ್ಯಾಸ್‌ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡಿತ್ತು. ಅವಘಡದಲ್ಲಿ 9 ಮಾಲಾಧಾರಿಗಳಿಗೆ ತೀವ್ರ ಗಾಯವಾಗಿತ್ತು. ಗಾಯಾಳುಗಳು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣ – ಮೃತರ ಸಂಖ್ಯೆ 4ಕ್ಕೆ ಏರಿಕೆ

    ಇದುವರೆಗೆ 5 ಮಂದಿ ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಇನ್ನುಳಿದ ನಾಲ್ವರು ಅಯ್ಯಪ್ಪ ಮಾಲಾಧಾರಿಗಳಿಗೆ ಚಿಕಿತ್ಸೆ ಮುಂದುವರಿದಿದೆ.

  • ಮೃತ ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

    ಮೃತ ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

    – ಕಿಮ್ಸ್‌ಗೆ ಸಚಿವ ಸಂತೋಷ್‌ ಲಾಡ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

    ಹುಬ್ಬಳ್ಳಿ: ಸಿಲಿಂಡರ್ ಸ್ಫೋಟದಿಂದ (Cylinder Blast) ಗಂಭೀರ ಗಾಯಗೊಂಡಿದ್ದ 9 ಮಾಲಾಧಾರಿಗಳ ಪೈಕಿ ಇಬ್ಬರು ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದೆ.

    ಹುಬ್ಬಳ್ಳಿಯ ಕಿಮ್ಸ್ (KIMS) ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ (Santosh Lad) ಭೇಟಿ ನೀಡಿ ಮೃತರ ಕುಟುಂಬಸ್ಥರನ್ನು ಸಂತೈಸಿದರು. ಈ ವೇಳೆ ಸಚಿವರ ಮುಂದೆ ಕುಟುಂಬಸ್ಥರು ಕಣ್ಣೀರು ಹಾಕಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಲಾಡ್, ಸಿಲಿಂಡರ್ ಸ್ಫೋಟದಲ್ಲಿ ನಿಜಲಿಂಗಪ್ಪ, ಸಂಜಯ್ ನಿಧನ ಹೊಂದಿದ್ದಾರೆ. ಈಗ ಏನು ಮಾತನಾಡಬೇಕು ಅಂತ ತೋಚುತ್ತಿಲ್ಲ. ಸರ್ಕಾರ, ಜಿಲ್ಲಾಡಳಿತ, ಕಿಮ್ಸ್ ಅವರನ್ನ ಬದುಕಿಸಲು ಪ್ರಯತ್ನ ಮಾಡಿದೆವು. 4 ನುರಿತ ವೈದ್ಯರನ್ನು ಕರೆಸಿ ಬದುಕಿಸಲು ಸಕಲ ಪ್ರಯತ್ನ ಮಾಡಲಾಗಿತ್ತು. ಆದರೆ ಇದನ್ನು ಮೀರಿ ಸುಟ್ಟ ಪ್ರಮಾಣ ಹೆಚ್ಚಾಗಿದ್ದರಿಂದ ಉಳಿಸಿಕೊಳ್ಳಲಾಗಲ್ಲಿಲ್ಲ. ಅವರ ಕುಟುಂಬಕ್ಕೆ ಸಾಂತ್ವನ ಹೇಳುವ ಜೊತೆಗೆ ನಷ್ಟ ಎದುರಿಸುವ ಶಕ್ತಿ ಆ ಕುಟುಂಬಕ್ಕೆ ನೀಡಲಿ. ಮುಖ್ಯಮಂತ್ರಿಗಳು ಸಹ ಆ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: INDIA ಒಕ್ಕೂಟದಿಂದ ಕಾಂಗ್ರೆಸ್‌ ಉಚ್ಚಾಟಿಸಿ – ಆಪ್‌ ಬಂಡಾಯ!

     

    ಮೃತಪಟ್ಟ ಕುಟುಂಬಕ್ಕೆ ಮುಖ್ಯಮಂತ್ರಿ ನಿರ್ದೇಶನದ ಮೇಲೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಲಾಗಿದೆ. ಇನ್ನುಳಿದವರಿಗೆ ಚಿಕಿತ್ಸೆ ಮುಂದುವರೆದಿದೆ. ಓರ್ವ ಬಾಲಕನ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಉಳಿದವರ ಕುಟುಂಬದ ಜೊತೆ ಸಮಾಲೋಚನೆ ಮಾಡಿ ಇನ್ನೂ ಹೆಚ್ಚಿನ ಚಿಕಿತ್ಸೆ ನೀಡುತ್ತೇವೆ ಎಂದರು. ಇದನ್ನೂ ಓದಿ: 2.5 ಕೋಟಿ ಚಿನ್ನಾಭರಣ ವಂಚನೆ ಕೇಸ್‌ – ನನಗೂ ಶ್ವೇತಾಗೂ ಸಂಬಂಧವಿಲ್ಲ: ಪವಿತ್ರಾಗೌಡ ಸ್ನೇಹಿತೆ ಸಮತಾ ಸ್ಪಷ್ಟನೆ

    ಸದ್ಯ ಕಿಮ್ಸ್ ಶವಾಗಾರದಿಂದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಎರಡು ಅಂಬುಲೆನ್ಸ್ ಮೂಲಕ ಮೃತದೇಹವನ್ನು ಮನೆಗೆ ರವಾನಿಸಲಾಗಿದೆ. ಸಂಜಯ್ ಸವದತ್ತಿ ಅಂತ್ಯಕ್ರಿಯೆ ವಿದ್ಯಾನಗರದ ರುದ್ರಭೂಮಿಯಲ್ಲಿ ನಡೆಯಲಿದ್ದು, ನಿಜಲಿಂಗಪ್ಪ ಅವರ ಅಂತ್ಯಸಂಸ್ಕಾರ ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿ ಗ್ರಾಮದಲ್ಲಿ ನಡೆಯಲಿದೆ. ಇದನ್ನೂ ಓದಿ: ಬಸ್ಸಿನಲ್ಲಿ ಸಿಕ್ಕಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಾಪಸ್, ವ್ಯಕ್ತಿಗೆ ಸನ್ಮಾನ