Tag: ayyappa swamy

  • ಚಂದ್ರಯಾನ ಸಾಫ್ಟ್ ಲ್ಯಾಂಡಿಗ್‌ಗಾಗಿ ಅಯ್ಯಪ್ಪಸ್ವಾಮಿ ಮೊರೆಹೋದ ಇಸ್ರೋ ಅಧ್ಯಕ್ಷ

    ಚಂದ್ರಯಾನ ಸಾಫ್ಟ್ ಲ್ಯಾಂಡಿಗ್‌ಗಾಗಿ ಅಯ್ಯಪ್ಪಸ್ವಾಮಿ ಮೊರೆಹೋದ ಇಸ್ರೋ ಅಧ್ಯಕ್ಷ

    ಬೆಂಗಳೂರು: ಚಂದ್ರಯಾನ (Chandrayaan-3) ಸಕ್ಸಸ್‌ಗಾಗಿ ದೇಶಾದ್ಯಂತ ಜನ ಪೂಜೆ ಸಲ್ಲಿಸುತ್ತಿದ್ದಾರೆ. ಅಂತೆಯೇ ಇದೀಗ ಇಸ್ರೋ ಅಧ್ಯಕ್ಷರು ಕೂಡ ಅಯ್ಯಪ್ಪ ಸ್ವಾಮಿ (Ayyappa Swamy) ದೇವರ ಮೊರೆ ಹೋಗಿದ್ದಾರೆ.

    ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ (S Somanth) ಮಂಗಳವಾರ ಸಂಜೆ ಬೆಂಗಳೂರಿನ (Bengaluru) ಜಾಲಹಳ್ಳಿಯ (Jalahalli) ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಸಂಜೆ 5:30ರ ವೇಳೆಗೆ ಚಂದ್ರಯಾನ ಯಶಸ್ಸಿಗಾಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇವರೊಂದಿಗೆ ಇತರೆ ವಿಜ್ಞಾನಿಗಳು ಸಹಾ ಪೂಜೆ ಸಲ್ಲಿಕೆ ಮಾಡಿದ್ದು, ಚಂದ್ರಯಾನ ಯಶಸ್ವಿಯಾಗಲಿ ಎಂದು ಪ್ರಾರ್ಥಿಸಿದ್ದಾರೆ. ಇದನ್ನೂ ಓದಿ: ಚಂದ್ರನ ಮಣ್ಣಿಗೆ ಹೋಲಿಕೆಯಾಗುತ್ತಂತೆ ತಮಿಳುನಾಡಿನ ಮಣ್ಣು – ಚಂದ್ರಯಾನ-3ಗೂ ಇದೆ ಈ ಮಣ್ಣಿನ ಕೊಡುಗೆ; ಏನಿದರ ವಿಶೇಷತೆ?

    ಚಂದ್ರನ ದಕ್ಷಿಣ ಧ್ರುವದ ಮೇಲೆ ಚಂದ್ರಯಾನ-3 ನೌಕೆಯ ವಿಕ್ರಮ್ ಲ್ಯಾಂಡರ್ (Vikram Lander) ಅನ್ನು ಇಳಿಸುವ ಈ ಮಹತ್ವದ ಕ್ಷಣವನ್ನ ಕಣ್ತುಂಬಿಕೊಳ್ಳಲು ಜನ ಕಾತುರವಾಗಿದ್ದಾರೆ. 2019ರ ಸೆಪ್ಟೆಂಬರ್ 6ರಂದು ಆ ಕ್ಷಣದಲ್ಲಿ ಉಂಟಾದ ಆಘಾತ, ನೋವು ಮತ್ತೆ ಎದುರಾಗದಿರಲಿ ಅನ್ನೋದು ಕೋಟ್ಯಂತರ ಜನರ ಪ್ರಾರ್ಥನೆಯಾಗಿದೆ. ಇದನ್ನೂ ಓದಿ: 146 ಪ್ರಯತ್ನಗಳ ಪೈಕಿ 69 ಚಂದ್ರಯಾನಗಳು ಯಶಸ್ವಿ – ಸಾವಿರಾರು ಕೋಟಿ ಖರ್ಚು ಮಾಡುವ ಯೋಜನೆಯ ಪ್ರಮುಖ ಉದ್ದೇಶವೇನು?

    ಪ್ರಗ್ಯಾನ್ ರೋವರ್ ಅನ್ನು ಹೊತ್ತ ವಿಕ್ರಮ್ ಲ್ಯಾಂಡರ್ ಸುರಕ್ಷಿತವಾಗಿದ್ದು, ದಕ್ಷಿಣ ಧ್ರುವದ ಮೇಲೆ ಸಂಜೆ 6:04ರ ವೇಳೆಗೆ ಯಾವುದೇ ಅಡೆತಡೆ ಇಲ್ಲದೇ ಚಂದ್ರನ ಅಂಗಳದಲ್ಲಿ ಇಳಿಯುವ ಮೂಲಕ ಇತಿಹಾಸ ನಿರ್ಮಿಸುವ ಭರವಸೆ ಮೂಡಿಸಿದೆ. ಜುಲೈ 14ರಂದು ಉಡಾವಣೆಗೊಂಡ ಚಂದ್ರಯಾನ-3 ನೌಕೆಯ ಇಷ್ಟು ದಿನದ ಪಯಣದಂತೆಯೇ ಕೊನೆಯ 20 ನಿಮಿಷಗಳ ಯಾನ ಅತ್ಯಂತ ನಿರ್ಣಾಯಕವಾಗಿದೆ. ಇದನ್ನೂ ಓದಿ: ಚಂದ್ರಯಾನ-3 ಯಶಸ್ಸಿಗೆ ಪ್ರಾರ್ಥಿಸಿ ಬೆಳಗಾವಿ ಕಪಿಲೇಶ್ವರ ಮಂದಿರದಲ್ಲಿ ಮಹಾರುಧ್ರಾಭಿಷೇಕ

    ಕೌತುಕಭರಿತ ಲ್ಯಾಂಡಿಂಗ್ ಆಪರೇಷನ್ ಪ್ರಕ್ರಿಯೆಯನ್ನ ಇಸ್ರೋ ಇಂದು ಸಂಜೆ 5 ಗಂಟೆ 20 ನಿಮಿಷದಿಂದ ಲೈವ್ ಟೆಲಿಕಾಸ್ಟ್ ಮಾಡಲಿದೆ. ನಿಮ್ಮ ಪಬ್ಲಿಕ್ ಟಿವಿ ಕೂಡ ಚಂದ್ರ ಚುಂಬನದ ಕ್ಷಣಕ್ಷಣದ ಮಾಹಿತಿಯನ್ನು ವಿಶ್ಲೇಷಣೆ ಸಹಿತ ನಿಮಗೆ ಒದಗಿಸಲಿದೆ. ಸಾಫ್ಟ್ ಲ್ಯಾಂಡಿಂಗ್ ಪ್ರಕ್ರಿಯೆ ಮುಗಿದ ಬಳಿಕ ಇಸ್ರೋ ವಿಜ್ಞಾನಿಗಳನ್ನು ಜೋಹನ್ಸ್‌ಬರ್ಗ್ ಪ್ರಧಾನಿ ಮೋದಿ ವರ್ಚೂವಲ್ ಆಗಿ ಭೇಟಿ ಮಾಡಲಿದ್ದಾರೆ. ಇದನ್ನೂ ಓದಿ: Chandrayaan-3: ಬಾಹ್ಯಾಕಾಶ ಯೋಜನೆಗಳಿಗೆ ನೂರಾರು ಕೋಟಿ ವ್ಯಯ – ಭಾರತಕ್ಕೇನು ಲಾಭ?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶಬರಿಮಲೆ ಅಯ್ಯಪ್ಪನಿಗೆ ವಜ್ರದ ಕಿರೀಟ ಕಾಣಿಕೆ ಕೊಟ್ಟ ಭಕ್ತ

    ಶಬರಿಮಲೆ ಅಯ್ಯಪ್ಪನಿಗೆ ವಜ್ರದ ಕಿರೀಟ ಕಾಣಿಕೆ ಕೊಟ್ಟ ಭಕ್ತ

    ತಿರುವನಂತಪುರಂ: ಶಬರಿಮಲೆ ಅಯ್ಯಪ್ಪನಿಗೆ ಆಂಧ್ರಪ್ರದೇಶದ ಭಕ್ತರೊಬ್ಬರು ವಜ್ರದ ಕಿರೀಟವನ್ನು ಕಾಣಿಕೆಯಾಗಿ ಕೊಟ್ಟು ಹರಕೆಯನ್ನು ತೀರಿಸಿಕೊಂಡಿದ್ದಾರೆ.

    ಕರ್ನೂಲ್ ಜಿಲ್ಲೆಯ ನಂದ್ಯಾಲದ ಮಾರಂ ವೆಂಕಟಸುಬ್ಬಯ್ಯ ಶಬರಿಮಲೆ ಅಯ್ಯಪ್ಪ ಸ್ವಾಮಿಗೆ ವಜ್ರ ಹೊದಿಕೆಯ ಚಿನ್ನದ ಕಿರೀಟ ನೀಡಿದ್ದಾರೆ. ಕೇರಳ ಹೈಕೋರ್ಟ್ ವಕೀಲರೊಬ್ಬರ ನೆರವಿನೊಂದಿಗೆ ಶುಕ್ರವಾರ ಕಿರೀಟವನ್ನು ಶಬರಿಮಲೆ ದೇವಸ್ಥಾನದ ಮುಖ್ಯ ಅರ್ಚಕರಿಗೆ ಹಸ್ತಾಂತರಿಸಿದ್ದಾರೆ. ಇದನ್ನೂ ಓದಿ:  ಯೋಗಿ ಗೋರಖ್‍ಪುರದಲ್ಲಿಯೇ ಇರಲಿ, ಮತ್ತೆ ಬರುವುದು ಬೇಡ : ಅಖಿಲೇಶ್ ಯಾದವ್

    ವೆಂಕಟಸುಬ್ಬಯ್ಯ ಅವರು ಅಯ್ಯಪ್ಪನ ಭಕ್ತರಾಗಿದ್ದಾರೆ. ಕಳೆದ 30 ವರ್ಷಗಳಿಂದ ಶಬರಿಗಿರಿಗೆ ಭೇಟಿ ನೀಡುತ್ತಿದ್ದಾರೆ. ವೆಂಕಟಸುಬ್ಬಯ್ಯ ಅವರು ಕಳೆದ ವರ್ಷ ಕೊರೊನಾ ಸೋಂಕಿಗೆ ಒಳಗಾಗಿದ್ದರು. 15 ದಿನಗಳ ಕಾಲ ಐಸಿಯುನಲ್ಲಿ ಚಿಕಿತ್ಸೆ ಪಡೆದು ಸಾವು-ಬದುಕಿನ ನಡುವೆ ಹೋರಾಡಿ ಬದುಕುಳಿದಿದ್ದರು. ಇದನ್ನೂ ಓದಿ: ರಸ್ತೆಗಳನ್ನು ಕಂಗನಾ ಕೆನ್ನೆಗಿಂತ ಸುಗಮವಾಗಿಸುತ್ತೇನೆ: ಇರ್ಫಾನ್ ಅನ್ಸಾರಿ

    ಚೇತರಿಸಿಕೊಂಡಲ್ಲಿ ಶಬರಿಮಲೆ ಅಯ್ಯಪ್ಪ ಸ್ವಾಮಿಗೆ ವಜ್ರದ ಕಿರೀಟವನ್ನ ನೀಡುವುದಾಗಿ ಹರಕೆ ಹೊತ್ತಿದ್ದರು. ಅದೇ ರೀತಿಯಾಗಿ ಆ ಹರಕೆಯ ಭಾಗವಾಗಿ ಚಿನ್ನದ ಕಿರೀಟವನ್ನ ದೇವಾಲಯಕ್ಕೆ ಕಾಣಿಕೆಯಾಗಿ ನೀಡಿದ್ದಾರೆ. ಅಯ್ಯಪ್ಪನ ಆಶೀರ್ವಾದಿಂದಲೇ ನಾನು ಮತ್ತೆ ಬದುಕಲು ಸಾಧ್ಯವಾಯಿತು ಎಂದು ವೆಂಕಟಸುಬ್ಬಯ್ಯ ಅವರು ಹೇಳಿದ್ದಾರೆ. ಈ ಕಿರೀಟದ ನಿಖರವಾದ ಬೆಲೆ ಎಷ್ಟು ಎನ್ನುವ ಮಾಹಿತಿ ಇಲ್ಲ.

  • ಶಬರಿಗಿರಿಯಲ್ಲಿ ಮಕರ ಜ್ಯೋತಿ ದರ್ಶನ

    ಶಬರಿಗಿರಿಯಲ್ಲಿ ಮಕರ ಜ್ಯೋತಿ ದರ್ಶನ

    ತಿರುವನಂತಪುರಂ: ವರ್ಷದ ಮೊದಲ ಹಬ್ಬವಾದ ಸಂಕ್ರಾಂತಿಯಂದು ಜ್ಯೋತಿ ರೂಪದಲ್ಲಿ ಅಯ್ಯಪ್ಪ ಭಕ್ತರಿಗೆ ದರ್ಶನ ನೀಡಿದ್ದಾನೆ.

    ಸಂಜೆ 6.30ರಿಂದ 6.45ರ ವೇಳೆಗೆ ದೀಪಾರಾಧನೆ ವೇಳೆ ಜ್ಯೋತಿ ರೂಪದಲ್ಲಿ ಭಕ್ತರಿಗೆ ದರ್ಶನವಾಗಿದೆ. ಮಕರ ಜ್ಯೋತಿ ದರ್ಶನವನ್ನು ಶಬರಿಮಲೆ ಪಡೆದುಕೊಂಡಿದೆ. ಇದನ್ನೂ ಓದಿ:  190 ವರ್ಷದ ಆಮೆ- ಗಿನ್ನಿಸ್ ಪುಟಕ್ಕೆ ಸೇರ್ಪಡೆ

    ಪೊನ್ನಂಬಲ ಮೇಡು ಬೆಟ್ಟದಲ್ಲಿ ಮಕರ ಜ್ಯೋತಿ ದರ್ಶನವಾಗಿದೆ. ಭಕ್ತರು ಜ್ಯೋತಿ ರೂಪದಲ್ಲಿ ದರ್ಶನ ಪಡೆದು ಕಣ್ತುಂಬಿಕೊಂಡಿದ್ದಾರೆ. ‘ಮಕರ ವಿಳಕ್ಕು’ ದರ್ಶನವನ್ನು ಭಕ್ತರು ಪಡೆದುಕೊಂಡಿದ್ದಾರೆ. ಮಹಾಮಂಗಳಾರತಿ ವೇಳೆಗೆ ಜ್ಯೋತಿರೂಪದಲ್ಲಿ ಅಯ್ಯಪ್ಪ ಕಾಣಿಸಿಕೊಂಡಿದ್ದಾನೆ.

  • ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ- ವಿಸ್ಮಯ ಕಣ್ತುಂಬಿಕೊಂಡ ಭಕ್ತಗಣ

    ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ- ವಿಸ್ಮಯ ಕಣ್ತುಂಬಿಕೊಂಡ ಭಕ್ತಗಣ

    ತಿರುವನಂತಪುರಂ: ಶಬರಿಮಲೆಯಲ್ಲಿ ಸಾವಿರಾರು ಭಕ್ತರು ಕಾತರದಿಂದ ಕಾಯುತ್ತಿದ್ದ ಮಕರ ಜ್ಯೋತಿ ಗೋಚರವಾಗಿದ್ದು, ಜ್ಯೋತಿಯನ್ನು ಕಣ್ತುಂಬಿಕೊಂಡಿದ್ದಾರೆ.

    ಇಂದು ಸಂಜೆ 6.42ಕ್ಕೆ ಸರಿಯಾಗಿ ಪೊನ್ನಂಬಲಮೇಡು ಗಿರಿಯಲ್ಲಿ ಮಕರ ಜ್ಯೋತಿ ಗೋಚರವಾಗಿದೆ. ಜ್ಯೋತಿ ಕಾಣುತ್ತಿದ್ದಂತೆ ಸಾವಿರಾರು ಭಕ್ತರು ಸಂತಸಗೊಂಡು, ಕಣ್ತುಂಬಿಕೊಂಡಿದ್ದಾರೆ. ಅಯ್ಯಪ್ಪನ ನಾಮಸ್ಮರಣೆ ಹಾಗೂ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು. ಕೊರೊನಾ ಹಿನ್ನೆಲೆ ಕಡಿಮೆ ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಅದರಂತೆ ಇಂದು ಹಲವರು ಜ್ಯೋತಿಯನ್ನು ನೋಡಿದ್ದಾರೆ.

    ಕೊರೊನಾ ಹಿನ್ನೆಲೆ ಈ ಬಾರಿ ಶಬರಿಮಲೆ ದೇವಸ್ಥಾನದಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಕೈಗೊಳ್ಳಲಾಗಿತ್ತು. ಹೀಗಾಗಿ ಮಕರ ಜ್ಯೋತಿ ದರ್ಶನಕ್ಕೆ ಸಹ ಕೇವಲ 5 ಸಾವಿರ ಮಂದಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಅಲ್ಲದೆ ಆರ್ ಟಿಪಿಸಿಆರ್ ಪರೀಕ್ಷೆಯಲ್ಲಿ ನೆಗೆಟಿವ್ ಬಂದವರಿಗೆ ಮಾತ್ರ ದೇವಾಲಯ ಹಾಗೂ ಜ್ಯೋತಿ ನೋಡಲು ಅವಕಾಶ ಕಲ್ಪಿಸಲಾಗಿತ್ತು.

    ದೇವಸ್ಥಾನದಿಂದ 8 ಕಿ.ಮೀ ದೂರದಲ್ಲಿ ಪೊನ್ನಂಬಲಮೇಡು ಗಿರಿ ಇದ್ದು, ಪ್ರತಿ ವರ್ಷದಂತೆ ಈ ವರ್ಷವೂ ಮಕರ ಜ್ಯೋತಿ ಗೋಚರಿಸಿದೆ. ಈ ವಿಶೇಷ ಘಳಿಗೆಗಾಗಿ ಕಾದಿದ್ದ ಸಾವಿರಾರು ಭಕ್ತರು ಮಕರ ಜ್ಯೋತಿಯ ದರ್ಶನವಾಗುತ್ತಿದ್ದಂತೆ ಗಟ್ಟಿಯಾಗಿ `ಸ್ವಾಮಿಯೇ ಶರಣಂ ಅಯ್ಯಪ್ಪ’ ಎಂದು ಹೇಳಿ ಘೋಷಣೆ ಕೂಗಿದರು. ಭಕ್ತಿಯಿಂದ ಮಕರ ಜ್ಯೋತಿಗೆ ನಮಸ್ಕರಿಸಿ ಧನ್ಯರಾದರು.

    ಐತಿಹಾಸಿಕ ಸಾಂಪ್ರದಾಯದಂತೆ ಪಂದಳದಿಂದ ಘೋಷಯಾತ್ರೆಯ ಮೂಲಕ ತಂದ ತಿರುವಾಭರಣಗಳನ್ನು ಅಯ್ಯಪ್ಪನಿಗೆ ತೊಡಿಸಿ ದೀಪಾರಾಧನೆ ನಡೆಸಿದ ಬಳಿಕ ಮಹಾ ಮಂಗಳರಾತಿಯನ್ನು ಮಾಡಲಾಗುತ್ತದೆ. ಮಹಾ ಮಂಗಳಾರತಿ ನಡೆದ ಬಳಿಕ ಪೊನ್ನಂಬಲಮೇಡು ಬೆಟ್ಟದಲ್ಲಿ ಮೂರು ಬಾರಿ ಜ್ಯೋತಿ ಕಾಣಿಸುತ್ತದೆ.

  • ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವ್ಯಕ್ತಿಯನ್ನ ರಕ್ಷಿಸಿದ ಅಯ್ಯಪ್ಪನ ಭಕ್ತರು

    ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವ್ಯಕ್ತಿಯನ್ನ ರಕ್ಷಿಸಿದ ಅಯ್ಯಪ್ಪನ ಭಕ್ತರು

    ಬೆಂಗಳೂರು: ಆತ್ಮಹತ್ಯೆ ಮಾಡಿಕೊಳ್ಳಲು ಫ್ಲೈಓವರ್ ಹತ್ತಿದ ವ್ಯಕ್ತಿಯೊಬ್ಬನನ್ನು ಅಯ್ಯಪ್ಪ ಸ್ವಾಮಿ ಭಕ್ತರು ರಕ್ಷಣೆ ಮಾಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

    ನಗರದ ಹೊಸಕೆರೆಹಳ್ಳಿಯ ನೈಸ್ ರೋಡ್ ಬಳಿ ಈ ಘಟನೆ ನಡೆದಿದ್ದು, 45 ವರ್ಷದ ಅಪರಿಚಿತ ವ್ಯಕ್ತಿಯನ್ನು ರಕ್ಷಣೆ ಮಾಡಲಾಗಿದೆ. ಗಿರಿನಗರದ ಸುಮಾರು ಮೂವತ್ತುಕ್ಕೂ ಹೆಚ್ಚು ಜನರು ಇಂದು ಶಬರಿಮಲೆಗೆ ಹೊರಟಿದ್ದರು. ಹೊಸಕೆರೆಹಳ್ಳಿ ಮಾರ್ಗವಾಗಿ ನೈಸ್ ರೋಡ್‍ಗೆ ಎಂಟ್ರಿಯಾದ ವೇಳೆ ನೈಸ್ ರೋಡ್‍ನ ಫ್ಲೈಓವರ್ ಮೇಲೆ ವ್ಯಕ್ತಿವೊಬ್ಬ ರಸ್ತೆಗೆ ಹಾರಿ ಆತ್ಮಹತ್ಯೆಗೆ ಪ್ರಯತ್ನ ಮಾಡುತ್ತಿರುವುದು ಕಂಡು ಬಂದಿದೆ.

    ತಕ್ಷಣ ವಾಹನ ರಸ್ತೆಗೆ ಅಡ್ಡಲಾಗಿ ನಿಲ್ಲಿಸಿದ ಅಯ್ಯಪ್ಪ ಸ್ವಾಮಿ ಭಕ್ತರು, ರಸ್ತೆಯ ಎರಡು ಕಡೆಯ ವಾಹನಗಳನ್ನು ನಿಲ್ಲಿಸಿ ರಕ್ಷಣೆಗೆ ಮುಂದಾಗಿದ್ದಾರೆ. ಆದರೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಭಕ್ತರ ಕೈಗೆ ಸಿಗದೆ ಸುಮಾರು ಅರ್ಧ ಗಂಟೆಗಳ ಕಾಲ ಆತ್ಮಹತ್ಯೆಗೆ ಯತ್ನಿಸಿದ್ದ. ಎರಡು ಕಡೆಗಳಿಂದ ಅಯ್ಯಪ್ಪ ಸ್ವಾಮಿ ಭಕ್ತರು ಆ ವ್ಯಕ್ತಿಯನ್ನು ಸುತ್ತುವರೆದು ಕೊನೆಗೆ ಆತನನ್ನು ಹಿಡಿದು ರಕ್ಷಣೆ ಮಾಡಿದ್ದಾರೆ.

    ಇಷ್ಟೇಲ್ಲಾ ನಡೆಯೋ ಹೊತ್ತಿಗೆ ಹೊಯ್ಸಳ ಪೊಲೀಸರು ಸ್ಥಳಕ್ಕೆ ಬಂದು ಆ ವ್ಯಕ್ತಿಯನ್ನು ವಶಕ್ಕೆ ಪಡೆದು ಕರೆದುಕೊಂಡು ಹೋಗಿದ್ದಾರೆ. ಆತ ಯಾವ ಕಾರಣಕ್ಕೆ ಆತ್ಮಹತ್ಯೆಗೆ ಯತ್ನಿಸಿದ. ಆ ವ್ಯಕ್ತಿ ಯಾರು? ಎನ್ನುವುದು ಪೊಲೀಸರ ತನಿಖೆಯಿಂದ ಬಹಿರಂಗವಾಗಬೇಕಿದೆ.

  • ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ – ವಿಸ್ಮಯ ಕಣ್ತುಬಿಕೊಂಡ ಭಕ್ತಗಣ

    ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ – ವಿಸ್ಮಯ ಕಣ್ತುಬಿಕೊಂಡ ಭಕ್ತಗಣ

    ತಿರುವನಂತಪುರಂ: ಪ್ರತಿ ವರ್ಷದಂತೆ ಈ ಬಾರಿ ಶಬರಿಮಲೆಯಲ್ಲಿ ಮಕರ ಜ್ಯೋತಿಯನ್ನು ಭಕ್ತರು ಕಣ್ತುಂಬಿಕೊಂಡಿದ್ದಾರೆ. ದೇವಾಲಯದಿಂದ 8 ಕಿ.ಮೀ ದೂರದಲ್ಲಿರುವ ಪೊನ್ನಂಬಲಮೇಡು ಬೆಟ್ಟದಲ್ಲಿ ಮಕರ ಜ್ಯೋತಿ ಬುಧವಾರ ಸಂಜೆ 6.45ರ ಸುಮಾರಿಗೆ ಕಾಣಿಸಿಕೊಂಡಿತು.

    ಈ ವಿಶೇಷ ಘಳಿಗೆಗಾಗಿ ಕಾದಿದ್ದ ಲಕ್ಷಾಂತರ ಭಕ್ತರು ಮಕರ ಜ್ಯೋತಿಯ ದರ್ಶನವಾಗುತ್ತಿದ್ದಂತೆ ಗಟ್ಟಿ ಸ್ವರದಲ್ಲಿ “ಸ್ವಾಮಿಯೇ ಶರಣಂ ಅಯ್ಯಪ್ಪ” ಎಂದು ಹೇಳಿ ಜಯಘೋಷ ಕೂಗಿದರು. ಭಕ್ತಿಯಿಂದ ಮಕರ ಜ್ಯೋತಿಗೆ ನಮಸ್ಕರಿಸಿ ಧನ್ಯರಾದರು.

    ಪ್ರತಿ ವರ್ಷ ಜನವರಿ 14ರ ಸಂಜೆ ಅಯ್ಯಪ್ಪ ಸ್ವಾಮಿಗೆ ಮಹಾಮಂಗಳಾರತಿ ಬಳಿಕ ಮಕರ ಜ್ಯೋತಿ ದರ್ಶನವಾಗುತ್ತದೆ. ಆದರೆ ಈ ಬಾರಿ ಮಕರ ಜ್ಯೋತಿ ಜನವರಿ 15ರಂದು ಕಾಣಿಸಿಕೊಂಡಿದೆ. ದೇಶದ ವಿವಿಧ ಭಾಗಗಳಿಂದ ಜಾತಿ, ಧರ್ಮ ಬೇದಭಾವವಿಲ್ಲದೆ ಶಬರಿಮಲೆಗೆ ಬರುವ ಭಕ್ತರು, ಅಯ್ಯಪ್ಪನ ಸನ್ನಿಧಾನದಲ್ಲಿ ಜ್ಯೋತಿಯ ದರ್ಶನ ಪಡೆಯಲು ಎರಡು ಮೂರು ದಿನಗಳ ಮುಂಚೆಯೇ ಆಗಮಿಸುತ್ತಾರೆ.

    ಐತಿಹಾಸಿಕ ಸಾಂಪ್ರದಾಯದಂತೆ ಪಂದಳದಿಂದ ಘೋಷಯಾತ್ರೆಯ ಮೂಲಕ ತಂದ ತಿರುವಾಭರಣಗಳನ್ನು ಅಯ್ಯಪ್ಪನಿಗೆ ತೊಡಿಸಿ ದೀಪಾರಾಧನೆ ನಡೆಸಿದ ಬಳಿಕ ಮಹಾ ಮಂಗಳರಾತಿಯನ್ನು ಮಾಡಲಾಗುತ್ತದೆ. ಮಹಾ ಮಂಗಳಾರತಿ ನಡೆದ ಬಳಿಕ ಪೊನ್ನಂಬಲಮೇಡು ಬೆಟ್ಟದಲ್ಲಿ ಮೂರು ಬಾರಿ ಜ್ಯೋತಿ ಕಾಣಿಸುತ್ತದೆ.

  • ಮಣಿಕಂಠನ ದರ್ಶನಕ್ಕಾಗಿ ಶಬರಿಮಲೆ ಏರಿದ ಅಣ್ಣಾಮಲೈ

    ಮಣಿಕಂಠನ ದರ್ಶನಕ್ಕಾಗಿ ಶಬರಿಮಲೆ ಏರಿದ ಅಣ್ಣಾಮಲೈ

    ಉಡುಪಿ: ಕರ್ನಾಟಕದ ಸಿಂಗಂ ಎಂದೇ ಖ್ಯಾತಿ ಗಳಿಸಿದ್ದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ತಮ್ಮ ಹುದ್ದೆಗೆ ರಾಜೀನಾಮೆ ಕೊಟ್ಟಿರುವುದು ಹಳೇ ಸುದ್ದಿಯಾಯ್ತು. ಆದರೆ ಕರ್ತವ್ಯಕ್ಕೆ ರಾಜೀನಾಮೆ ನೀಡಿದ ಬಳಿಕ ಇದೀಗ ಅಣ್ಣಾಮಲೈ ಶಬರಿಮಲೆಯಲ್ಲಿ ಕಾಣಿಸಿಕೊಂಡಿದ್ದಾರೆ.

    ಹೌದು. ಐಪಿಎಸ್ ಅಧಿಕಾರಿ ಹುದ್ದೆಗೆ ರಾಜೀನಾಮೆ ಕೊಟ್ಟ ಅಣ್ಣಾಮಲೈ ಅವರು ಖಾಕಿ ಕಳಚಿ ಕಪ್ಪು ಯೂನಿಫಾರ್ಮ್ ತೊಟ್ಟಿದ್ದಾರೆ. ಖಾಕಿಗೆ ವಿದಾಯ ಹೇಳಿರುವ ಅಣ್ಣಾಮಲೈ ಅವರು ಕಪ್ಪು ಲುಂಗಿ ತೊಟ್ಟು, ಹೆಗಲಿಗೊಂದು ಕಪ್ಪು ಶಾಲು ಹಾಕಿ 18 ಮೆಟ್ಟಿಲೇರಿ ಅಯ್ಯಪ್ಪ ಸ್ವಾಮಿಯ ದರ್ಶನ ಮಾಡಿದ್ದಾರೆ. ಅಣ್ಣಾಮಲೈ ಅವರು ಸಿನಿಮಾ ನಟರಲ್ಲ. ಆದರೆ ಪೊಲೀಸ್ ಇಲಾಖೆಯಲ್ಲಿದ್ದೇ ಸೆಲೆಬ್ರಿಟಿ ಆಗಿದ್ದರು. ತಮ್ಮ ದಕ್ಷತೆಯಿಂದಲೇ ಸಾರ್ವಜನಿಕರ ಜೊತೆ ಪೊಲೀಸ್ ಅಧಿಕಾರಿಯಾಗಿದ್ದಾಗ ಗೆಳೆತನವೂ ಸಂಪಾದನೆ ಮಾಡಿದ್ದರು. ಹಾಗೂ ಅವರಿಗೆ ಅಭಿಮಾನಿಗಳು ಕೂಡ ಸಾಕಷ್ಟು ಮಂದಿ ಇದ್ದಾರೆ.

    ನೇರ ಮತ್ತು ನಿಷ್ಠುರತೆಗೆ ಹೆಸರುವಾಸಿಯಾಗಿದ್ದ ಅಣ್ಣಾಮಲೈ, ಖಡಕ್ ಅಧಿಕಾರಿ ಎಂದು ಹೆಸರು ಗಳಿಸಿದ್ದರು. ಹಾಗಾಗಿ ಪಂಪಾ ನದಿಯಿಂದ ಶಬರಿಮಲೆ ಹತ್ತಿ ಇಳಿಯುವ ಅಯ್ಯಪ್ಪ ಭಕ್ತರು ಅಣ್ಣಾಮಲೈ ಅವರನ್ನು ಕಂಡು ಅವರೊಂದಿಗೆ ಸೆಲ್ಫೀ ಕ್ಲಿಕ್ಕಿಸಿಕೊಂಡರು. ಸಾರ್ವಜನಿಕರ ಜೊತೆ ಉಭಯ ಕುಶಲೋಪರಿ ಹಂಚಿಕೊಂಡರು.

    ಶಬರಿಮಲೆಗೆ ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತಮಿಳುನಾಡು ಭಕ್ತರು ಭೇಟಿ ಕೊಟ್ಟು ದರ್ಶನ ಪಡೆಯುತ್ತಾರೆ. ಕರ್ನಾಟಕದ ನಾಲ್ಕು ಜಿಲ್ಲೆಯಲ್ಲಿ ಮಾತ್ರ ಕೆಲಸ ಮಾಡಿದ್ದರೂ ಮಲೆಗೆ ಬಂದ ಹೆಚ್ಚಿನವರಿಗೆ ಅಣ್ಣಾಮಲೈ ಬಗ್ಗೆ ಗೊತ್ತಿತ್ತು. ಕೇರಳ ರಾಜ್ಯದ ಸ್ಥಳೀಯ ಎಸ್‍ಪಿ ಅವರು ಕೂಡ ಅಣ್ಣಾಮಲೈ ಅವರನ್ನು ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದರು, ಇತರೆ ಅಧಿಕಾರಿಗಳು ಕೂಡ ಜೊತೆಗಿದ್ದರು.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅಣ್ಣಾಮಲೈ, ಬಹಳ ಸಮಯದಿಂದ ಮಲೆಗೆ ಬರುವ ಸಂಕಲ್ಪ ಮಾಡಿದ್ದೆ. ಕೆಲಸದ ಒತ್ತಡದಲ್ಲಿದ್ದರಿಂದ ಸಾಧ್ಯವಾಗಿರಲಿಲ್ಲ. ಮುಂದೇನು ಎಂದು ಆಮೇಲೆ ಸ್ವಲ್ಪ ಸಮಯ ಬಿಟ್ಟು ಹೇಳುತ್ತೇನೆ. ಸದ್ಯ ಪಂದಳ ಕಂದನ ದರ್ಶನ ಮಾಡಿದ್ದೇನೆ ನೆಮ್ಮದಿಯಾಗಿದ್ದೇನೆ. ನನಗೆ ಜನ ಬಹಳ ಪ್ರೀತಿ ತೋರಿಸುತ್ತಾರೆ ಖುಷಿಯಾಗಿದೆ. ಅಯ್ಯಪ್ಪನ ಸನ್ನಿಧಿಯಲ್ಲಿ ಮನಸ್ಸಿಗೆ ನೆಮ್ಮದಿ ಸಿಕ್ಕಿತು ಎಂದು ತಮ್ಮ ಸಂತಸ ಹಂಚಿಕೊಂಡರು.

  • ಅಯ್ಯಪ್ಪ ಹೆಣ್ಣುಮಕ್ಕಳಿಗೆ ಹುಟ್ಟಿಲ್ಲ, ಅವನು ಗಂಡಸರಿಗೆ ಹುಟ್ಯಾನ: ಮಹಿಳಾ ಹೋರಾಟಗಾರ್ತಿ

    ಅಯ್ಯಪ್ಪ ಹೆಣ್ಣುಮಕ್ಕಳಿಗೆ ಹುಟ್ಟಿಲ್ಲ, ಅವನು ಗಂಡಸರಿಗೆ ಹುಟ್ಯಾನ: ಮಹಿಳಾ ಹೋರಾಟಗಾರ್ತಿ

    ಧಾರವಾಡ: ಅಯ್ಯಪ್ಪ ಹೆಣ್ಣಮಕ್ಕಳಿಗೆ ಹುಟ್ಟಿಲ್ಲ, ಅವನು ಗಂಡಸರಿಗೆ ಹುಟ್ಟಿದ್ದಾನೆ. ಅದಕ್ಕಾಗಿ ಹೆಣ್ಣನ್ನು ಅಯ್ಯಪ್ಪ ದೇವಾಸ್ಥಾನಕ್ಕೆ ಪ್ರವೇಶಿಸಲು ಬಿಡೋದಿಲ್ಲವೇನು ಎಂದು ಮಹಿಳಾ ಹೋರಾಟಗಾರ್ತಿಯೊಬ್ಬರು ಪ್ರಶ್ನಿಸಿ ಅಯ್ಯಪ್ಪ ಭಕ್ತರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

    ಕಲಬುರಗಿ ಮೂಲದ ಹೋರಾಟಗಾರ್ತಿ ಮೀನಾಕ್ಷಿ ಬಾಳಿ, ಅಯ್ಯಪ್ಪ ಸ್ವಾಮಿ ದೇವರು ಹೆಣ್ಣಿಗೆ ಹುಟ್ಟಿಲ್ಲ, ಗಂಡಸರಿಗೆ ಹುಟ್ಟಿದ್ದು. ಅದಕ್ಕೆ ನಮ್ಮನ್ನು ಅಯ್ಯಪ್ಪ ದೇವಸ್ಥಾನಕ್ಕೆ ಬಿಡೊಲ್ಲವೇನು? ಎಲ್ಲರಿಗೂ ಜನ್ಮ ನೀಡೋದು ತಾಯಿ. ಗಂಡಸರಿಗೆ ಮಗು ಹುಟ್ಟೊದಕ್ಕೆ ಸಾಧ್ಯವೇನು? ತೃತೀಯ ಲಿಂಗಿಗಳು, ಕಿನ್ನರಿಯರಿಗೆ ಕೇಳಿ ನೋಡಿ, ಅವರು ನೀವೇಷ್ಟು ಬೇಕೂಫ್ ಅಂತ ಹೇಳ್ತಾರೆ ಎಂದು ಪ್ರಶ್ನಿಸಿದ್ದಾರೆ.

    ನಾವು ಮಹಿಳೆಯರು ಒಂದಾಗಿದ್ದರೆ ನಿಮ್ಮ ವಿರುದ್ಧ ಕುಸ್ತಿ ಮಾಡಲು ನಿಂತಿಲ್ಲ. ನಿಮಗೆ ಬಡೆದು ಬುದ್ಧಿಹೇಳಲು ನಿಂತಿದ್ದೇವೆ. ನಾವು ನಿಮ್ಮ ಮನೆ ಒಳಗಿರುವ ದೇವರ ಕೋಣೆಗೆ ಬರ್ತೀವಿ ಅಂತ ಹೇಳಿಲ್ಲ. ಮಠದೊಳಗೆ ಬರ್ತೀವಿ ಅಂತ ಹೇಳಿಲ್ಲ. ಯಾವುದು ಸಾರ್ವಜನಿಕ ದೇವಸ್ಥಾನ ಇದೆ ಅಲ್ಲಿ ಬರ್ತೀವಿ ಅಂತ ಹೇಳಿದ್ದೇವೆ. ನಮ್ಮ ರೊಕ್ಕ ಮೈಲಿಗೆ ಆಗೋದಿಲ್ಲ. ಮಕ್ಕಳೇ ನಮಗೆ ಮೈಲಿಗೆ ಆಗುತ್ತಾ ಎಂದು ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ನಿಷೇಧ ಅಂತ ಹೋರಾಡುವ ಪುರುಷರಿಗೆ ಪ್ರಶ್ನಿಸಿದ್ದಾರೆ.

    ಮಹಿಳಾ ದಿನಾಚರಣೆ ಅಂಗವಾಗಿ ಧಾರವಾಡದಲ್ಲಿ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ ಕಾರ್ಯಕ್ರಮವನ್ನು ಏರ್ಪಡಿಸಿತ್ತು. ಈ ವೇಳೆ ವೇದಿಕೆಯಲ್ಲಿ ಮಾತನಾಡುತ್ತಿದ್ದಾಗ ಮೀನಾಕ್ಷಿ ಬಾಳಿ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಮಹಿಳೆಯರಿಗೆ ನಿಷೇಧ ವಿಚಾರವನ್ನು ಪ್ರಸ್ತಾಪಿಸಿ ಮಾತನಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಇವತ್ತೇ ನಾರಿಯರಿಗೆ ಮಣಿಕಂಠನ ದರ್ಶನ ಸಿಗುತ್ತಾ – ಅಯ್ಯಪ್ಪನ ಊರಲ್ಲಿ ಗಲಾಟೆ ಜೋರು

    ಇವತ್ತೇ ನಾರಿಯರಿಗೆ ಮಣಿಕಂಠನ ದರ್ಶನ ಸಿಗುತ್ತಾ – ಅಯ್ಯಪ್ಪನ ಊರಲ್ಲಿ ಗಲಾಟೆ ಜೋರು

    ತಿರುವನಂತಪುರ: ಇಂದು ಸಂಜೆ 5 ಗಂಟೆ ವೇಳೆಗೆ ದೇವಾಲಯದ ಬಾಗಿಲು ತೆರೆಯಲಿರುವ ಹಿನ್ನೆಲೆಯಲ್ಲಿ ಕೇರಳಾದ್ಯಂತ ಅಯ್ಯಪ್ಪಸ್ವಾಮಿ ಉಳಿಸಿ ಆಂದೋಲನ ಜೋರಾಗಿದೆ.

    ಸುಪ್ರೀಂ ಕೋರ್ಟ್ ಪ್ರವೇಶಕ್ಕೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಯಾವೊಬ್ಬ ಮಹಿಳೆಯರು ದೇವಾಲಯಕ್ಕೆ ತೆರಳದಂತೆ ಭಕ್ತರು ಹಾಗೂ ಮಹಿಳಾ ಹೋರಾಟಗಾರರು ಸ್ಥಳದಲ್ಲಿ ಅಡ್ಡಗಟ್ಟಿ ಪ್ರತಿ ವಾಹನವನ್ನು ಪರಿಶೀಲನೆ ನಡೆಸಿ ಮುಂದಕ್ಕೆ ಬಿಡುತ್ತಿದ್ದಾರೆ. ದೇವಾಲಯದ ಆಡಳಿತ ಮಂಡಳಿಕಾರ್ಯಕರ್ತರು, ಭಕ್ತರು ದೇವಾಲಯದ ಬೆಟ್ಟದ ಕೆಳಭಾಗದ ಅಂದರೆ ದೇವಾಲಯದಿಂದ 20 ಕಿಮೀ ದೂರದ ನಿಳಕ್ಕಲ್ ಬಳಿಯೇ ವಾಹನಗಳನ್ನು ತಡೆಯುತ್ತಿದ್ದಾರೆ.

    ಸುಪ್ರೀಂ ಕೋರ್ಟ್ ಆದೇಶವನ್ನು ಧಿಕ್ಕರಿಸಿರುವ ಭಕ್ತರು ಸ್ಥಳದಲ್ಲಿ ಭದ್ರಕೋಟೆ ನಿರ್ಮಿಸಿದ್ದಾರೆ. ಪ್ರತಿಭಟನೆ ನಡೆಸುತ್ತಿರುವವರಲ್ಲಿ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ. ಮಂಗಳವಾರ ತಿರುವಾಂಕೂರು ಆಡಳಿತ ಮಂಡಳಿ, ಪಂದಳಂ ರಾಜಮನೆತನ ಹಾಗೂ ಸರ್ಕಾರ ನಡುವೆ ಏರ್ಪಡಿಸಿದ್ದ ಸಂಧಾನ ಸಭೆಯೂ ವಿಫಲವಾಗಿದೆ. ಪೊಲೀಸರು ನಡೆಸಬೇಕಾದ ಕಾರ್ಯವನ್ನು ಕಾರ್ಯಕರ್ತರು ಕೈಗೆತ್ತುಕೊಂಡಿದ್ದು ದೇವಾಲಯ ಪ್ರದೇಶದಲ್ಲಿ ಹೈ ಆಲರ್ಟ್ ಘೋಷಣೆ ಮಾಡಲಾಗಿದೆ.

    ಈ ನಡುವೆ ವಿವಾದ ಕುರಿತು ಪ್ರತಿಕ್ರಿಯೆ ನೀಡಿರುವ ಪತ್ತನಂತಿಟ್ಟಂ ಕ್ಷೇತ್ರದ ಸಂಸದ ಆಂಟೋ ಆ್ಯಂಟನಿ ಅವರು, ಸರ್ಕಾರ ಸುಗ್ರೀವಾಜ್ಞೆ ಜಾರಿ ಮಾಡಿ ಕೋರ್ಟ್ ತೀರ್ಪು ಜಾರಿಗೆ ಅವಕಾಶ ನೀಡಬೇಕು ಎಂದು ತಿಳಿಸಿದ್ದಾರೆ. ದೇವಾಲಯದ ಪ್ರದೇಶದಲ್ಲಿ ಶಾಂತಿ ಕಾಪಾಡಲಿ ಸರ್ಕಾರ ಕೂಡ ಕ್ರಮಕೈಗೊಂಡಿದ್ದು ಜಾರಿ ಸಂಖ್ಯೆಯಲ್ಲಿ ಪೊಲೀಸರನ್ನು ನೇಮಕ ಮಾಡಿ ಪ್ರದೇಶವನ್ನು ವಶಕ್ಕೆ ಪಡೆದಿದೆ.

    ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ವಿಚಾರವಾದಿ ಪ್ರೋ ಭಗವಾನ್, ದೇವಾಲಯ ಪ್ರವೇಶಕ್ಕೆ ತಡೆ ನೀಡಿರುವುದು ಅವೈಜ್ಞಾನಿಕ ನಡೆ. ಮಹಿಳೆಯರಿಗೆ ತಡೆ ನೀಡಿರುವುದು ಕಂದಚಾರ ಆಚರಣೆ ಪ್ರತಿರೂಪ. ಮಹಿಳೆಯಲ್ಲಿ ನಡೆಯುವ ಕ್ರೀಯೆ ಪ್ರಕೃತಿಯ ವರ. ಆದರೆ ಈ ಕಾರಣದಿಂದ ಪ್ರವೇಶ ನಿರಾಕರಿಸಬಾರದು. ಮಹಿಳೆಯರೇ ಅಲ್ಲಿ ಪ್ರತಿಭಟನೆ ನಡೆಸುತ್ತಿರುವುದು ವಿಷಾದನೀಯ. ಆಡಳಿತ ಮಂಡಳಿ ಹಾಗೂ ರಾಜಮನೆತನ ನಡೆ ಕೂಡ ಅವರ ಮೌಢ್ಯವನ್ನು ಬೆಳೆಸುತ್ತಿದೆ. ಆದರೆ ಕೇರಳ ಸರ್ಕಾರ ಸುಪ್ರೀಂ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ತೀರ್ಮಾನಿಸದೇ ಇರುವುದು ಉತ್ತಮ ನಡೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

    ದೇವಾಲಯಕ್ಕೆ ಮಹಿಳೆಯರ ಪ್ರವೇಶ ನಿರಾಕರಣೆ ಮಾಡಿರುವುದು ವೈಜ್ಞಾನಿಕ ಕಾರಣಕ್ಕೂ ಆಗಿರಬಹುದು, ಏಕೆಂದರೆ ದೇವದಾಸಿ ಪದ್ಧತಿ ಜಾರಿ ಇದ್ದ ವೇಳೆ ಅಂತಹ ಘಟನೆಗಳು ಅಲ್ಲಿ ನಡೆಯಬಾರದು ಎಂಬ ಕಾರಣದಿಂದಲೂ ನಿಷೇಧ ಮಾಡಿರಬಹುದು. ಆದರೆ ಇಂದು ಸಂವಿಧಾನ ಎಲ್ಲಾ ಜನರಿಗೂ ಸಮಾನತೆ ಹಕ್ಕು ನೀಡಿದೆ. ಅದ್ದರಿಂದ ಮಹಿಳೆಯ ಪ್ರವೇಶಕ್ಕೆ ತಡೆ ನೀಡಬಾರದು ಎಂದು ತಿಳಿಸಿದರು.

    ತುಲಾ ಮಾಸದ ಆರಂಭದ ಕಾರಣ ಇಂದಿನಿಂದ 6 ದಿನಗಳ ಕಾಲ ದೇವಾಲಯ ತೆರೆಯಲಾಗುತ್ತದೆ, 6 ದಿನಗಳ ಕಾಲ ನಡೆಯುವ ವಿಶೇಷ ಪೂಜೆಯ ಬಳಿಕ ಮತ್ತೆ ದೇವಾಲಯದ ಬಾಗಿಲು ಮುಚ್ಚಲಾಗುತ್ತದೆ. ಪತ್ರಕರ್ತೆಯೊಬ್ಬರು ಕಾರಿನಲ್ಲಿ ತೆರಳಲು ಯತ್ನಿಸಿದ ವೇಳೆ ಮಹಿಳಾ ಪ್ರತಿಭಟನಕಾರರೇ ಕಾರಿನ ಗಾಜನ್ನು ಧ್ವಂಸಗೊಳಿಸಿದ್ದಾರೆ. ಈ ವೇಳೆ ಕೆಲ ಕಾಲ ಸ್ಥಳದಲ್ಲಿ ಅಂತಕದ ವಾತಾವರಣ ನಿರ್ಮಾಣವಾಗಿತ್ತು. ಅಲ್ಲದೇ ಮಹಿಳೆಯರು ದೇವಾಲಯ ಪ್ರವೇಶ ಮಾಡಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿಯೂ ಶಿವಸೇನೆಯ ಮಹಿಳಾ ಕಾರ್ಯಕರ್ತೆಯರು ಬೆದರಿಕೆ ಹಾಕಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನ ಪಡೆದ ಚಾಲೆಂಜಿಂಗ್ ಸ್ಟಾರ್- ಫೋಟೋಗಳಲ್ಲಿ ನೋಡಿ

    ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನ ಪಡೆದ ಚಾಲೆಂಜಿಂಗ್ ಸ್ಟಾರ್- ಫೋಟೋಗಳಲ್ಲಿ ನೋಡಿ

    ಶಬರಿಮಲೆ: ಏಪ್ರಿಲ್ 6ರಂದು ಇರುಮುಡಿ ಹೊತ್ತುಕೊಂಡು ಅಯ್ಯಪ್ಪಸ್ವಾಮಿಯ ದರ್ಶನಕ್ಕೆ ತೆರಳಿದ್ದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದು ಶಬರಿಮಲೆಯಿಂದ ವಾಪಸ್ಸಾಗಲಿದ್ದಾರೆ.

    ಮಾಲಾಧಾರಿಯಾಗಿದ್ದ ದರ್ಶನ್ ಗುರುವಾರದಂದು ಇರುಮುಡಿ ಹೊತ್ತು ಶಬರಿಮಲೆ ಯಾತ್ರೆ ಕೈಗೊಂಡಿದ್ರು. ದರ್ಶನ್ ಜೊತೆ ಸಹೋದರ ದಿನಕರ್ ತೂಗುದೀಪ್ ಸೇರಿದಂತೆ ಇನ್ನೂ ಅನೇಕ ಆಪ್ತರು ಪ್ರಯಾಣ ಬೆಳೆಸಿದ್ರು. ದರ್ಶನ್ ಶಬರಿಮಲೆಯ ಹಲವು ದೇವಸ್ಥಾನಗಳಿಗೆ ಭೇಟಿ ನೀಡಿರೋ ಫೋಟೋಗಳು ಲಭ್ಯವಾಗಿವೆ.

     

    https://www.youtube.com/watch?v=JOAsX2npLGg

    https://www.youtube.com/watch?v=mWR866nADpY

    https://www.youtube.com/watch?v=dCs5LXIe3Yw