Tag: Ayyappa temple

  • ಶಬರಿಮಲೆಗೆ ಭೇಟಿ ನೀಡಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು

    ಶಬರಿಮಲೆಗೆ ಭೇಟಿ ನೀಡಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು

    – ರಾಷ್ಟ್ರಪತಿಯೊಬ್ಬರು ಶಬರಿಮಲೆಗೆ ಭೇಟಿ ನೀಡುತ್ತಿರುವುದು ಇದೇ ಮೊದಲು

    ತಿರುವನಂತಪುರ: ರಾಷ್ಟ್ರಪತಿ ದ್ರೌಪದಿ ಮುರ್ಮು(Droupadi Murmu) ಅವರು ಮೇ 19ರಂದು ಕೇರಳದಲ್ಲಿರುವ ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ(Sabarimala Ayyappa Temple) ಭೇಟಿ ನೀಡುವ ಮೂಲಕ ಭಾರತದ ಮೊದಲ ಹಾಲಿ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

    ಮೇ 18ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಕೇರಳಕ್ಕೆ(Kerala) ಆಗಮಿಸಲಿದ್ದು, ಬಳಿಕ ಕೊಟ್ಟಾಯಂ ಜಿಲ್ಲೆಯ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 19ರಂದು ಬೆಳಗ್ಗೆ ಶಬರಿಮಲೆಯ ಬಳಿಯಿರುವ ನೀಲಕ್ಕಲ್ ಹೆಲಿಪ್ಯಾಡ್‌ಗೆ ಬಂದಿಳಿಯಲಿದ್ದು, ಬಳಿಕ ಪಂಪಾ ಬೇಸ್ ಕ್ಯಾಂಪ್‌ಗೆ ತೆರಳಿದ್ದಾರೆ. ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನ 33 ಜಡ್ಜ್‌ ಪೈಕಿ 21 ಮಂದಿಯ ಆಸ್ತಿ ಬಹಿರಂಗ

    ಪಂಪಾ ಬೇಸ್ ಕ್ಯಾಂಪ್‌ನಿಂದ ದೇವಾಲಯಕ್ಕೆ ತೆರಳುವ ಪ್ರಯಾಣ ವಿಧಾನದ ಕುರಿತು ಅಂತಿಮ ನಿರ್ಧಾರವನ್ನು ಭದ್ರತಾ ವ್ಯವಸ್ಥೆಯ ವಿಶೇಷ ರಕ್ಷಣಾ ಗುಂಪು ತೆಗೆದುಕೊಳ್ಳಲಿದೆ. ರಾಷ್ಟ್ರಪತಿಯೊಬ್ಬರು ಶಬರಿಮಲೆ ದೇಗುಲಕ್ಕೆ ಭೇಟಿ ನೀಡಲು ನಿರ್ಧರಿಸಿದ್ದು ಇದೇ ಮೊದಲು ಎಂದು ತಿರುವಾಂಕೂರು ದೇವಸ್ವಂ ಮಂಡಳಿಯ ಅಧ್ಯಕ್ಷ ಪಿ.ಎಸ್.ಪ್ರಶಾಂತ್ ತಿಳಿಸಿದರು. ಇದನ್ನೂ ಓದಿ: ಕಾಶ್ಮೀರದಲ್ಲಿ ಮದ್ದುಗುಂಡುಗಳ ಸಹಿತ ಇಬ್ಬರು ಉಗ್ರರು ಅರೆಸ್ಟ್‌

    ರಾಷ್ಟ್ರಪತಿ ಅವರ ಭೇಟಿಯ ಬಗ್ಗೆ ಕೆಲವು ವಾರಗಳಿಂದ ಗಾಳಿ ಸುದ್ದಿ ಹರಿದಾಡುತ್ತಿದ್ದವು. ಅಧಿಕೃತ ಮಾಹಿತಿ ಬಂದ ನಂತರ ಮುಖ್ಯಮಂತ್ರಿ ಪಿಣರಾಯಿ ವಿಜಯನ್(Pinarayi Vijayan) ಅವರು ಸಭೆಯನ್ನು ಕರೆಯಲಿದ್ದಾರೆ. ಅಲ್ಲದೇ ನಾವು ದೇವಾಲಯಕ್ಕೆ ತೆರಳುವ ರಸ್ತೆಯ ತುರ್ತು ದುರಸ್ತಿ ಹಾಗೂ ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಂಡಿದ್ದೇವೆ ಎಂದು ರಾಷ್ಟ್ರಪತಿ ಭೇಟಿಯ ಕುರಿತು ಬಹಿರಂಗಪಡಿಸಿದರು.

  • ಬೆಂಗಳೂರಿನ ಅಯ್ಯಪ್ಪ ದೇವಾಲಯಕ್ಕೆ ಚಿನ್ನದ ಲೇಪನ

    ಬೆಂಗಳೂರಿನ ಅಯ್ಯಪ್ಪ ದೇವಾಲಯಕ್ಕೆ ಚಿನ್ನದ ಲೇಪನ

    ಬೆಂಗಳೂರು: ಜಾಲಹಳ್ಳಿಯ ಅಯ್ಯಪ್ಪ ದೇವಾಲಯದ 55ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಗರ್ಭಗುಡಿಯ ಚಿನ್ನ ಲೇಪನ ಲೋಕಾರ್ಪಣೆ ಕಾರ್ಯಕ್ರಮ ದೇವಾಲಯದ ಆಡಳಿತ ಮಂಡಳಿಯಿಂದ ನೆರವೆರಿತು.

    ದಕ್ಷಿಣ ಭಾರತದಲ್ಲೇ ಶಬರಿಮಲೆಯ ಬಳಿಕ ಅತ್ಯಂತ ಪ್ರಸಿದ್ಧಿ ಪಡೆದಿರುವ ಅಯ್ಯಪ್ಪನ ದೇವಾಲಯವಾಗಿರುವ ಬೆಂಗಳೂರಿನ ಜಾಲಹಳ್ಳಿನಲ್ಲಿರುವ ಅಯ್ಯಪ್ಪ ದೇವಾಲಯದ 55ನೇ ವಾರ್ಷಿಕೊತ್ಸವವು ಸಕಲ ಧಾರ್ಮಿಕ ವಿಧಿವಿಧಾನಗಳ ಪ್ರಕಾರ ನಡೆಯಿತು. ಶಬರಿ ಮಲೆಯ ಅಯ್ಯಪ್ಪ ದೇವಸ್ಥಾನದ ಮಾದರಿಯಲ್ಲೇ ಜಾಲಹಳ್ಳಿಯ ಅಯ್ಯಪ್ಪ ದೇಗುಲದ ಗರ್ಭಗುಡಿಯಲ್ಲೂ ಚಿನ್ನದ ಲೇಪನ ಮಾಡಲಾಗಿತ್ತು.

    ಈ ಚಿನ್ನದ ಲೇಪನ ಲೋಕಾರ್ಪಣೆ ಕಾರ್ಯಕ್ರಮವನ್ನು ಕೇರಳದ ಶಬರಿ ಮೆಲೆ ದೇವಾಲಯದ ತಂತ್ರಿ ಬ್ರಹ್ಮಶ್ರೀ ತಾಳಮನ್‌ ಮಡಮ್‌ ರಾಜೀ ಅವರು ಧಾರ್ಮಿಕ ಪದ್ಧತಿಯಂತೆ ನೆರೆವೆಸಿ ಕಳಸದ ಪ್ರತಿಷ್ಠಾಪನೆ ಮಾಡಿದರು. ನೂರಾರು ಅಯ್ಯಪ್ಪ ಸ್ವಾಮಿಯ ಭಕ್ತರು ಈ ಕಾರ್ಯದಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ 50ರೂ. ಏರಿಕೆ

    ಸುಮಾರು 15 ವರ್ಷಗಳ ಚಿನ್ನದ ಲೇಪನದ ಕನಸು ಇಂದು ಈಡೇರಿದೆ. 11 ಕೆ.ಜಿ ಚಿನ್ನವನ್ನು ಬಳಸಿಕೊಂಡು ದೇವಾಲಯದ ಗರ್ಭಗುಡಿಗೆ ಚಿನ್ನದ ಲೇಪನದ ತಗಡನ್ನು ಯಶಸ್ವಿಯಾಗಿ ಆಳವಡಿಕೆ ಮಾಡಲಾಗಿದ್ದು, ಇಂದು ಬೆಳಗ್ಗೆ ಭಕ್ತರ ದರ್ಶನಕ್ಕೆ ಲೋಕಾರ್ಪಣೆ ಮಾಡಲಾಯಿತು ಎಂದು ಆಡಳಿತ ಮಂಡಳಿ ತಿಳಿಸಿದೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ – 5 ವಾರಗಳಲ್ಲಿ ಎರಡನೇ ಬಾರಿ ಹೇರಿಕೆ

  • ಜುಲೈ 17ರಿಂದ ಶಬರಿಮಲೆ ಅಯ್ಯಪ್ಪ ದರ್ಶನಕ್ಕೆ ಅವಕಾಶ- ಮಾರ್ಗಸೂಚಿಗಳೇನು?

    ಜುಲೈ 17ರಿಂದ ಶಬರಿಮಲೆ ಅಯ್ಯಪ್ಪ ದರ್ಶನಕ್ಕೆ ಅವಕಾಶ- ಮಾರ್ಗಸೂಚಿಗಳೇನು?

    ತಿರುವನಂತಪುರಂ: ಸುಪ್ರಸಿದ್ಧ ಶಬರಿಮಲೆಯ ಅಯ್ಯಪ್ಪ ದೇವಸ್ಥಾನವನ್ನು ಜುಲೈ 17 ರಿಂದ 21ರ ವರೆಗೆ ತೆರೆಯಲಾಗುತ್ತಿದ್ದು, ಭಕ್ತರು ಅಯ್ಯಪ್ಪನ ದರ್ಶನ ಪಡೆಯಬಹುದಾಗಿದೆ.

    ಕೊರೊನಾ 2ನೇ ಅಲೆ ಮಧ್ಯೆ ತಿಂಗಳ ಪೂಜೆಯನ್ನು ನೆರವೇರಿಸಲು ಜುಲೈ 17 ರಿಂದ 21ರ ವರೆಗೆ ಐದು ದಿನಗಳ ಅವಧಿಗೆ ದೇವಸ್ಥಾನವನ್ನು ಮತ್ತೆ ತೆರೆಯಲಾಗುತ್ತಿದೆ ಎಂದು ತಿರುವಾಂಕುರ್‌ ದೇವಸ್ವಂ ಮಂಡಳಿ ತಿಳಿಸಿದೆ.

    ಕೊರೊನಾ ಹೊಸ ಮಾರ್ಗಸೂಚಿಗಳ ಪ್ರಕಾರ ಲಸಿಕೆ ಪಡೆದ ಸರ್ಟಿಫಿಕೇಟ್ ಅಥವಾ 48 ಗಂಟೆಗಳೊಳಗೆ ಟೆಸ್ಟ್ ಮಾಡಿಸಿದ ಕೋವಿಡ್-19 ಆರ್ ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿದೆ. ಅಲ್ಲದೆ ಆನ್‍ಲೈನ್ ಮೂಲಕ ಬುಕಿಂಗ್ ಮಾಡಿಕೊಂಡ ಗರಿಷ್ಠ 5 ಸಾವಿರ ಭಕ್ತರಿಗೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ.

    ಕೇರಳ ಪೊಲೀಸರು ಹಾಗೂ ದೇವಸ್ವಂ ಮಂಡಳಿ ಕಳೆದ ವರ್ಷ ಹೊಸ ಆನ್‍ಲೈನ್ ಪೋರ್ಟಲ್ ಲಾಂಚ್ ಮಾಡಿದ್ದು, ಇದರ ಮೂಲಕವೇ ವಚ್ರ್ಯೂಲ್ ಕ್ಯೂ, ಪ್ರಸಾದ, ಪೂಜೆ, ವಾಸ್ತವ್ಯ, ಕಾಣಿಕೆ ಬುಕ್ ಮಾಡಬೇಕು. ಈ ಮೂಲಕ ಗಲಾಟೆ ಮುಕ್ತ ದರ್ಶನಕ್ಕೆ ದೇವಸ್ಥಾನ ಮಂಡಳಿ ವ್ಯವಸ್ಥೆ ಕಲ್ಪಿಸಿದೆ. ರಿಜಿಸ್ಟ್ರೇಶನ್ ಮಾಡಲು ಮೊಬೈಲ್ ನಂಬರ್, ಇ-ಮೇಲ್ ಐಡಿ ಕಡ್ಡಾಯವಾಗಿದೆ.

  • ಅಯ್ಯಪ್ಪ ದೇಗುಲಕ್ಕೆ ಭೇಟಿ -ಅನ್ನದಾನಕ್ಕೆ 50 ಸಾವಿರ ನೀಡಿದ್ರು ಜಮೀರ್

    ಅಯ್ಯಪ್ಪ ದೇಗುಲಕ್ಕೆ ಭೇಟಿ -ಅನ್ನದಾನಕ್ಕೆ 50 ಸಾವಿರ ನೀಡಿದ್ರು ಜಮೀರ್

    ಬೆಂಗಳೂರು: ಸದಾ ಸಹಾಯ ಹಸ್ತ ಚಾಚುವ ಮೂಲಕ ಮಾನವೀಯತೆ ಮೆರೆಯುತ್ತಿರುವ ಶಾಸಕ ಜಮೀರ್ ಅಹ್ಮದ್ ಅವರು ಇದೀಗ ಅಯ್ಯಪ್ಪ ದೇಗುಲಕ್ಕೆ 50 ಸಾವಿರ ರೂ. ನೀಡಿದ್ದಾರೆ.

    ಹೌದು. ಚಾಮರಾಜಪೇಟೆಯ ಅಯ್ಯಪ್ಪ ದೇವಸ್ಥಾನಕ್ಕೆ ಇಂದು ಶಾಸಕರು ಭೇಟಿ ನೀಡಿದ್ದಾರೆ. 45 ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿದ ಶಾಸಕರು, ಅನ್ನದಾನಕ್ಕೆ 50 ಸಾವಿರ ರೂ. ಕಾಣಿಕೆಯಾಗಿ ನೀಡಿದ್ದಾರೆ.

    ಈ ಸಂಬಂಧ ಟ್ವೀಟ್ ಮಾಡಿಕೊಂಡಿರುವ ಮಾಜಿ ಸಚಿವರು, ಚಾಮರಾಜಪೇಟೆ ಕ್ಷೇತ್ರದ 140ನೇ ವಾರ್ಡ್ ನಲ್ಲಿರುವ ಅಯ್ಯಪ್ಪ ದೇಗುಲಕ್ಕೆ ಭೇಟಿ ನೀಡಿದೆ. ದೇವಸ್ಥಾನದ 45ನೇ ವರ್ಷದ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಅನ್ನದಾನಕ್ಕೆಂದು 50 ಸಾವಿರ ರೂ. ನೀಡಿರುವುದಾಗಿ ತಿಳಿಸಿದ್ದಾರೆ.

    ಸದ್ಯ ಮಗಳ ಮದುವೆಯ ಬ್ಯುಸಿಯಲ್ಲಿರುವ ಶಾಸಕರು, ರಾಜಕೀಯ ನಾಯಕರು ಹಾಗೂ ಗಣ್ಯರಿಗೆ ಮದುವೆಯ ಆಮಂತ್ರಣ ನೀಡುವಲ್ಲಿ ನಿರತರಾಗಿದ್ದಾರೆ. ಈ ಮಧ್ಯೆ ದೇಗುಲಕ್ಕೆ ಭೇಟಿ ನೀಡಿ ಧನಸಹಾಯ ಮಾಡಿದ್ದಾರೆ.

    https://twitter.com/BZZameerAhmed/status/1346722781413695490

  • ಜೂನ್ 14ರಿಂದ ಅಯ್ಯಪ್ಪನ ದರ್ಶನ ಇಲ್ಲ: ತಿರುವಾಂಕೂರು ದೇವಸ್ವಂ ಮಂಡಳಿ ಸ್ಪಷ್ಟನೆ

    ಜೂನ್ 14ರಿಂದ ಅಯ್ಯಪ್ಪನ ದರ್ಶನ ಇಲ್ಲ: ತಿರುವಾಂಕೂರು ದೇವಸ್ವಂ ಮಂಡಳಿ ಸ್ಪಷ್ಟನೆ

    ತಿರುವನಂತಪುರಂ: ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆ ಶಬರಿಮಲೈ ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ಸದ್ಯ ತೆರೆಯದಿರಲು ನಿರ್ಧರಿಸಿದೆ. ಇಂದು ನಡೆದ ಮಹತ್ವದ ಸಭೆ ಬಳಿಕ ಈ ನಿರ್ಧಾರವನ್ನು ಕೇರಳದ ದೇವಸ್ವಂ ಖಾತೆ ಸಚಿವ ಕಡಕಂಪಲ್ಲಿ ಸುರೇಂದ್ರನ್ ಪ್ರಕಟಿಸಿದ್ದಾರೆ.

    ಜೂನ್ 14ರಿಂದ ಮಾಸಿಕ ಪೂಜೆ ಆರಂಭವಾಗಬೇಕಿದ್ದು, ದೇವಸ್ಥಾನ ತೆರೆಯುವ ಸಂಬಂಧ ತಿರುವಾಂಕೂರು ದೇವಸ್ವಂ ಮಂಡಳಿ ಸಭೆ ನಡೆಸಿತು. ಈ ಸಭೆಯಲ್ಲಿ ಕೇರಳದ ದೇವಸ್ವಂ ಖಾತೆ ಸಚಿವ ಕಡಕಂಪಲ್ಲಿ ಸುರೇಂದ್ರನ್ ಸೇರಿದಂತೆ ಎಲ್ಲ ಅರ್ಚಕರು ಭಾಗಿಯಾಗಿದ್ದರು.

    ಭಾರತ ಅನ್‍ಲಾಕ್ ಬಳಿಕ ಧಾರ್ಮಿಕ ಕ್ಷೇತ್ರಗಳನ್ನು ತೆರೆಯಲು ಷರತ್ತುಗಳೊಂದಿಗೆ ಅವಕಾಶ ನೀಡಿತ್ತು. ಈ ಹಿನ್ನೆಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನ ತೆರೆಯುವ ಸಂಬಂಧ ಚರ್ಚೆ ನಡೆಸಲಾಯಿತು. ಜೂನ್ 14ರಿಂದ ಶಬರಿಮಲೆಯಲ್ಲಿ ಮಾಸಿಕ ಪೂಜೆ ನಡೆಸಬೇಕಿತ್ತು. ಈ ಪೂಜೆ ನಡೆದರೆ ಕೇವಲ ಕೇರಳ ಮಾತ್ರವಲ್ಲದೆ ದೇಶದ ಹಲವು ಭಾಗಗಳಿಂದ ಭಕ್ತಾಧಿಗಳು ಆಗಮಿಸುತ್ತಾರೆ. ಶಬರಿಮಲೈ ದೇವಸ್ಥಾನದಲ್ಲಿ ಮಾರ್ಗಸೂಚಿಗಳ ಪಾಲನೆ ಕಷ್ಟ. ಇದರಿಂದ ಸೋಂಕು ಹರಡುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಲಾಯಿತು.

    ಈ ಹಿನ್ನೆಲೆಯಲ್ಲಿ ಶಬರಿಮಲೈ ದೇವಸ್ಥಾನ ತೆರೆಯದಿರಲು ಮತ್ತು ತಿಂಗಳ ಪೂಜೆಗೆ ಭಕ್ತಾದಿಗಳಿಗೆ ಅವಕಾಶ ನೀಡದರಿಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಇದರ ಜೊತೆಗೆ ದೇವಸ್ಥಾನ ಉತ್ಸವ ರದ್ದು ಮಾಡಲು ಕೂಡಾ ಒಮ್ಮತದ ತಿರ್ಮಾನ ತೆಗೆದುಕೊಳ್ಳಲಾಗಿದೆ.

  • ಮಡಿಕೇರಿಯ ಅಯ್ಯಪ್ಪ ದೇವಾಲಯದಲ್ಲಿ ಮಕರ ಸಂಕ್ರಾಂತಿ ಉತ್ಸವ

    ಮಡಿಕೇರಿಯ ಅಯ್ಯಪ್ಪ ದೇವಾಲಯದಲ್ಲಿ ಮಕರ ಸಂಕ್ರಾಂತಿ ಉತ್ಸವ

    ಮಡಿಕೇರಿ: ಮಂಜಿನ ನಗರಿ ಮಡಿಕೇರಿ ನಗರದ ಮುತ್ತಪ್ಪ ದೇವಾಲಯ ಆವರಣದ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಇಂದು ವರ್ಷದ ಮಕರ ಸಂಕ್ರಾಂತಿ ಉತ್ಸವವು ವಿಶೇಷ ದೈವಿಕ ಕೈಂಕರ್ಯಗಳೊಂದಿಗೆ ನೆರವೇರಿತು.

    ಮಂಗಳವಾರ ಸಂಜೆಯಿಂದಲೂ ಸನ್ನಿಧಿಯಲ್ಲಿ ನಿರ್ಮಾಲ್ಯ ವಿಸರ್ಜನೆ, ಉಷಾ ಪೂಜೆ, ಗಣಹೋಮ ಹಾಗೂ ಶ್ರೀ ಮುತ್ತಪ್ಪ ಮತ್ತು ಸುಬ್ರಹ್ಮಣ್ಯ ದೇವರಿಗೆ ವಿಶೇಷ ಪೂಜೆ ನಡೆಸಲಾಯಿತು. ಇಂದು ಬೆಳಗ್ಗೆ ದೇವರಿಗೆ ಪಂಚಾಮೃತ ಅಭಿಷೇಕ, ತುಪ್ಪಾಭಿಷೇಕ, ಕ್ಷೀರಾಭಿಷೇಕ, ಭಷ್ಮಾಭಿಷೇಕ, ಎಳನೀರು ಅಭಿಷೇಕ, ಪುಷ್ಪಾರ್ಚನೆಯೊಂದಿಗೆ ಅಲಂಕಾರ ಪೂಜೆ ಜರುಗಿತು. ಅಲ್ಲದೆ ಶ್ರೀ ಅಯ್ಯಪ್ಪ ಉತ್ಸವ ಮೂರ್ತಿಯ ಕ್ಷೇತ್ರ ಪ್ರದಕ್ಷಿಣೆಯೊಂದಿಗೆ ಬಲಿ ಪೂಜೆಯ ಬಳಿಕ ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ನಡೆಯಿತು.

    ನಂತರ ಭಕ್ತರಿಗೆ ಪ್ರಸಾದದೊಂದಿಗೆ ಅನ್ನಸಂತರ್ಪಣೆ ನೆರವೇರಿತು. ಮಕರ ಸಂಕ್ರಾಂತಿ ಪ್ರಯುಕ್ತ ಮುಸ್ಸಂಜೆಯಲ್ಲಿ ವಿಶೇಷ ಭಜನಾ ಕಾರ್ಯಕ್ರಮದ ಬಳಿಕ ದೇವರಿಗೆ ಪಡಿಪೂಜೆ ಹಾಗೂ ದೀಪಾರಾಧನೆಯೊಂದಿಗೆ ರಾತ್ರಿ ಮಹಾಸೇವೆ ಬಳಿಕ ಪ್ರಸಾದ ವಿನಿಯೋಗ ನೆರವೇರಿತು. ದೇವರಿಗೆ ವಿಶೇಷ ಚಂಡು ಸೇವೆಯೊಂದಿಗೆ ಮಂಗಳವಾದ್ಯಗಳನ್ನು ಮಹಾಪೂಜೆ ವೇಳೆ ನುಡಿಸಲಾಯಿತು. ಅಪಾರ ಸಂಖ್ಯೆಯಲ್ಲಿ ಸದ್ಭಕ್ತರು ಪೂಜೆ ಹಾಗೂ ಅನ್ನದಾನದಲ್ಲಿ ಪಾಲ್ಗೊಂಡಿದ್ದರು.

  • ಅಯ್ಯಪ್ಪನಿಗೆ ಪೂಜೆ ಸಲ್ಲಿಸಲು ಬಂದವರ ಮೇಲೆ ಕಾಂಪೌಂಡ್ ಕುಸಿತ – ಓರ್ವ ಸಾವು

    ಅಯ್ಯಪ್ಪನಿಗೆ ಪೂಜೆ ಸಲ್ಲಿಸಲು ಬಂದವರ ಮೇಲೆ ಕಾಂಪೌಂಡ್ ಕುಸಿತ – ಓರ್ವ ಸಾವು

    ಬೆಂಗಳೂರು: ಸೇನೆಯ ವಿಂಗ್ ಕಮಾಂಡರ್ ಮನೆ ಬಳಿಯ 10 ಅಡಿ ಎತ್ತರದ ಕಾಂಪೌಂಡ್ ಗೋಡೆ ಕುಸಿದು, ವ್ಯಕ್ತಿ ಸಾವನ್ನಪ್ಪಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ನಗರದ ಜಾಲಹಳ್ಳಿ ಬಳಿಯ ಅಯ್ಯಪ್ಪ ದೇವಸ್ಥಾನದ ಬಳಿ ನಡೆದಿದೆ.

    ಪರಮೇಶ್ವರ್ ಸಾವನ್ನಪ್ಪಿದ್ದು ವರುಣ್ ಮತ್ತು ಕಲ್ಯಾಣಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಜಾಲಹಳ್ಳಿ ರಸ್ತೆಯಲ್ಲಿರುವ ಸೇನೆಯ ಆವರಣದಲ್ಲಿ ಈ ಘಟನೆ ನಡೆದಿದೆ.

    ಸೇನೆಯ ಎತ್ತರದ ಕಾಂಪೌಂಡ್ ಬಿದ್ದ ತಕ್ಷಣ ಪರಮೇಶ್ವರ್ ಮೃತಪಟ್ಟಿದ್ದು ಗಂಭೀರವಾಗಿ ಗಾಯಗೊಂಡಿದ್ದ ವರುಣ್ ಮತ್ತು ಕಲ್ಯಾಣಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಂಪೌಂಡ್ ಕುಸಿಯುತ್ತಿದ್ದಂತೆ ಗೋಡೆ ಪಕ್ಕದಲ್ಲಿದ್ದ ಬೈಕ್‍ಗಳು ಗೋಡೆಯ ಅವಶೇಷಗಳಡಿ ಸಿಲುಕಿ ಸಂಪೂರ್ಣ ಜಖಂಗೊಂಡಿವೆ. ಘಟನೆ ನಡೆಯುತ್ತಿದಂತೆ ಸ್ಥಳೀಯರೇ ರಕ್ಷಣಾ ಕಾರ್ಯ ನಡೆಸಿದ್ದು, ಈ ಸಂಬಂಧ ಗಂಗಮ್ಮನಗುಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಮೊಮ್ಮಗನ ಹೆಸರಲ್ಲಿ ವಿಶೇಷ ಪೂಜೆ ಮಾಡಿಸೋದಾಗಿ ಕುಟುಂಬ ಹರಕೆ ಹೊತ್ತಿತ್ತು. ವಿಜಯದಶಮಿ ಹಬ್ಬದ ಪ್ರಯುಕ್ತ ಇಂದು ಕೆಆರ್ ಪುರದಿಂದ ಜಾಲಹಳ್ಳಿಯಲ್ಲಿರುವ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಹರಕೆ ತೀರಿಸಲು ಕುಟುಂಬ ಸಮೇತರಾಗಿ ಬಂದಿದ್ದರು.

    ಹರಕೆ ತೀರಿಸಿ, ಪೂಜೆ ನೆರವೇರಿಸಿ ಪರಮೇಶ್, ಕಲ್ಯಾಣಿ, ಪ್ರಸಾದ್, ವರುಣ್ ಹೊರ ಬಂದಿದ್ದರು. ಸೇನೆಯ ಕಾಂಪೌಂಡ್ ಬಳಿ ಪಾರ್ಕ್ ಮಾಡಿದ್ದ ಕಾರನ್ನು ತೆಗೆದುಕೊಂಡು ಬರಲು ಮಗ ಪ್ರಸಾದ್ ಹೋಗಿದ್ದ. ಈ ವೇಳೆ ಬಿಸಿಲು ಎಂಬ ಕಾರಣಕ್ಕೆ ಉಳಿದ ಮೂವರು ಗೋಡೆ ಬದಿಯ ನೆರಳಿಗೆ ಹೋಗಿದ್ದರು. ಈ ವೇಳೆ ಏಕಾಏಕಿ 10 ಅಡಿ ಎತ್ತರದ ಕಾಂಪೌಂಡ್ ಗೋಡೆ ಕುಸಿದಿದೆ.

  • 50 ವರ್ಷದೊಳಗಿನ 51 ಮಹಿಳೆಯರು ಅಯ್ಯಪ್ಪ ದೇಗುಲ ಪ್ರವೇಶ

    50 ವರ್ಷದೊಳಗಿನ 51 ಮಹಿಳೆಯರು ಅಯ್ಯಪ್ಪ ದೇಗುಲ ಪ್ರವೇಶ

    ತಿರುವನಂತಪುರ: 50 ವರ್ಷದೊಳಗಿನ 51 ಮಹಿಳೆಯರು ಅಯ್ಯಪ್ಪ ದೇಗುಲ ಪ್ರವೇಶ ಮಾಡಿದ್ದಾರೆ ಎಂದು ಕೇರಳ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದೆ.

    ಶಬರಿಮಲೆಯ ದೇವಾಲಯಕ್ಕೆ ಎಲ್ಲ ವಯೋಮಾನದವರಿಗೂ ಪ್ರವೇಶ ಕಲ್ಪಿಸಬೇಕು ಎಂದು ನ್ಯಾಯಾಲಯ ತೀರ್ಪು ನೀಡಿದ ಬಳಿಕ ಇದುವರೆಗೂ 51 ಮಹಿಳೆಯರು ದೇವಾಲಯ ಪ್ರವೇಶ ಮಾಡಿದ್ದಾರೆ ಎಂದು ಸರ್ಕಾರ ನೀಡಿರುವ ಮಾಹಿತಿಯಲ್ಲಿ ತಿಳಿದು ಬಂದಿದೆ. ಪ್ರಮುಖವಾಗಿ ನ್ಯಾಯಾಲಯಕ್ಕೆ ನೀಡಿರುವ ಮಾಹಿತಿಯಲ್ಲಿ ದೇಗುಲ ಪ್ರವೇಶ ಮಾಡಿದ ಎಲ್ಲಾ ಮಹಿಳೆಯರ ಹೆಸರುಗಳನ್ನು ಡಿಜಿಪಿ ನಮೂದಿಸಿದ್ದಾರೆ. ಇದರಲ್ಲಿ ಕೆಲ ಮಹಿಳೆಯರು 18 ಮೆಟ್ಟಿಲು ಹತ್ತಿ ದೇಗುಲ ಪ್ರವೇಶ ಮಾಡಿದರೆ, ಉಳಿದವರು ವಿಶೇಷ ದರ್ಶನ ಮಾಡಿದ್ದಾರೆ ಎಂದು ಮಾಹಿತಿ ನೀಡಲಾಗಿದೆ.

    ಕೇರಳ ಸರ್ಕಾರ ಪರವಾಗಿ ರಾಜ್ಯ ಪೊಲೀಸ್ ಇಲಾಖೆ ಮುಖ್ಯಸ್ಥರು ಈ ಮಾಹಿತಿಯನ್ನು ನೀಡಿದ್ದಾರೆ. ಪ್ರಮುಖವಾಗಿ ದೇವಾಲಯ ಪ್ರವೇಶ ಮಾಡಿರುವ ಮಹಿಳೆಯರಲ್ಲಿ ಕೇರಳದವರು ಕಡಿಮೆ ಸಂಖ್ಯೆಯಲ್ಲಿದ್ದು, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಕರ್ನಾಟಕದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ತಿಳಿಸಲಾಗಿದೆ. ಅಲ್ಲದೇ ದೇಗುಲ ಪ್ರವೇಶ ಮಾಡಲು ಇದುವರೆಗೂ ಸುಮಾರು 7,500 ಸಾವಿರ ಮಹಿಳೆಯರು ತಮ್ಮ ಆಧಾರ್ ಮಾಹಿತಿ ಮೂಲಕ ನೋಂದಣಿ ಮಾಡಿಕೊಂಡಿದ್ದು, 50 ಮಹಿಳೆಯರಿಗೆ ದರ್ಶನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮಾಹಿತಿಯಲ್ಲಿ ನೀಡಲಾಗಿದೆ.

    ಜ. 2ರಂದು ದೇವಾಲಯ ಪ್ರವೇಶ ಮಾಡಿದ್ದ ಕನಕದುರ್ಗ ಎಂಬ ಮಹಿಳೆ ವಿರುದ್ಧ ಕುಟುಂಬಸ್ಥರೆ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೇ ಕನಕದುರ್ಗ ಅವರ ಮೇಲೆ ಹಲ್ಲೆ ಕೂಡ ನಡೆಸಲಾಗಿತ್ತು. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ರಕ್ಷಣೆಗಾಗಿ ನ್ಯಾಯಾಲಯದ ಮೆಟ್ಟಲು ಹತ್ತಿದ್ದ ಕನಕದುರ್ಗ ಹಾಗೂ ಬಿಂದು ಅವರಿಗೆ ರಕ್ಷಣೆ ನೀಡುವಂತೆ ನ್ಯಾಯಾಲಯ ಆದೇಶ ನೀಡಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶಬರಿಮಲೆಯಲ್ಲಿ ಅಯ್ಯಪ್ಪನ ದರ್ಶನ ಪಡೆದ `ಮೂರನೇ ಮಹಿಳೆ’..!

    ಶಬರಿಮಲೆಯಲ್ಲಿ ಅಯ್ಯಪ್ಪನ ದರ್ಶನ ಪಡೆದ `ಮೂರನೇ ಮಹಿಳೆ’..!

    ತಿರುವನಂತಪುರ: ಈಗಾಗಲೇ ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಇಬ್ಬರು ಮಹಿಳೆಯರ ಪ್ರವೇಶ ಮಾಡಿದ್ದು, ಅವರ ಪ್ರವೇಶವನ್ನು ಖಂಡಿಸಿ ಪ್ರತಿಭಟನೆ ನಡೆದಿತ್ತು. ಇದರ ಬೆನ್ನಲ್ಲೆ ಈಗ ಮೂರನೇ ಮಹಿಳೆ ಶಬರಿಮಲೆ ಅಯ್ಯಪ್ಪನ ದೇವಾಲಯಕ್ಕೆ ಎಂಟ್ರಿಕೊಟ್ಟು ದರ್ಶನ ಪಡೆದುಕೊಂಡಿದ್ದಾರೆ.

    43 ವರ್ಷದ ಶ್ರೀಲಂಕಾ ಮೂಲದ ಶಶಿಕಲಾ ಅವರು ಶಬರಿಮಲೆಯಲ್ಲಿ ಅಯ್ಯಪ್ಪನ ದರ್ಶನ ಪಡೆದಿದ್ದಾರೆ. ಇವರು 18 ಮೆಟ್ಟಿಲುಗಳನ್ನು ಹತ್ತಿ ಹರಿಹರನ ಸುತನಿಗೆ ನಮಿಸಿದ್ದು, ಗುರುವಾರ ರಾತ್ರಿ ಸುಮಾರು 9.30ಕ್ಕೆ ಅಯ್ಯಪ್ಪನ ಸನ್ನಿಧಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಬಳಿಕ ರಾತ್ರಿ 11.30ಕ್ಕೆ ಸುರಕ್ಷಿತವಾಗಿ ಪಂಪಾಗೆ ವಾಪಸ್ ಹೋಗಿದ್ದಾರೆ. ಇದನ್ನೂ ಓದಿ: ಶಬರಿಮಲೆ ಎಂಟ್ರಿಗೆ ಕೊಡಗಲ್ಲೇ ಸ್ಕೆಚ್- ಲಾಡ್ಜ್‌ನಲ್ಲಿ ಉಳಿದಿದ್ರು ಬಿಂದು, ಕನಕದುರ್ಗ

    ಈ ಹಿಂದೆ 44 ವರ್ಷದ ಬಿಂದು ಮತ್ತು 42 ವರ್ಷದ ಕನಕದುರ್ಗ ಮಹಿಳೆಯರು ಅಯ್ಯಪ್ಪ ದೇವಾಲಯಕ್ಕೆ ಎಂಟ್ರಿ ಕೊಟ್ಟು ದರ್ಶನ ಪಡೆದಿದ್ದಾರೆ. ಬಿಂದು ಕಾಲೇಜು ಉಪನ್ಯಾಸಕಿ ಮತ್ತು ಸಿಪಿಐ(ಎಂ) ಕಾರ್ಯಕರ್ತೆಯಾಗಿದ್ದು, ಕನಕದುರ್ಗ ನಾಗರಿಕ ಸರಬರಾಜು ಇಲಾಖೆಯಲ್ಲಿ ಉದ್ಯೋಗದಲ್ಲಿದ್ದಾರೆ.

    ಮಹಿಳೆಯರಿಬ್ಬರ ಪ್ರವೇಶದ ಬಳಿಕ ದೇವರನಾಡು ಕೇರಳ ಬೂದಿ ಮುಚ್ಚಿದ ಕೆಂಡದಂತಾಗಿದೆ. ಗುರುವಾರ ನಡೆದ ಬಂದ್ ಹಿಂಸಾತ್ಮಕ ರೂಪ ಪಡೆದಿದ್ದು, ಹಲವರು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಇನ್ನು ಬಿಜೆಪಿ ಮತ್ತು ಸಿಪಿಎಂ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಈ ಮಧ್ಯೆ ಕ್ಯಾಮೆರಾ ಹಿಡಿದು ವರದಿಗೆ ತೆರಳಿದ್ದವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಆದರೂ ಅಳುತ್ತಾ ವರದಿ ಮಾಡಿರುವ ಫೋಟೋ ವೈರಲ್ ಆಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಯ್ಯಯ್ಯೋ ಅಯ್ಯಪ್ಪ..!!

    ಅಯ್ಯಯ್ಯೋ ಅಯ್ಯಪ್ಪ..!!

    https://www.youtube.com/watch?v=SJPugEv41_4