ಹಾಸನ: ಆಜಾನ್ ವಿರುದ್ಧ ಶ್ರೀರಾಮಸೇನೆ ಸಂಘಟನೆ ವತಿಯಿಂದ ಹಾಸನದ ದೇವಸ್ಥಾನಗಳಲ್ಲಿ ರಾಮಜಪ, ಶಿವನಜಪ ಹಮ್ಮಿಕೊಳ್ಳಲಾಗಿದೆ.
ಹಾಸನದ ಸಂಗಮೇಶ್ವರ ಬಡಾವಣೆಯಲ್ಲಿರುವ, ಸಂಗಮೇಶ್ವರ ದೇವಾಲಯದಲ್ಲಿ ಇಂದಿನಿಂದ ಮೈಕ್ ಮೂಲಕ ದೇವರ ಜಪ ಮಾಡುವುದಕ್ಕೆ ಚಾಲನೆ ನೀಡಲಾಯಿತು. ಶ್ರೀರಾಮಸೇನೆ ಸಂಘಟನೆಯ ಜಿಲ್ಲಾಧ್ಯಕ್ಷ ಜಾನಕೆರೆ ಹೇಮಂತ್ ಮತ್ತು ಪ್ರಧಾನ ಕಾರ್ಯದರ್ಶಿ ಹೇಮಂತ್ ಬೇಲೂರು ಬೆಳಗ್ಗೆ ಐದು ಗಂಟೆಗೆ ಮೈಕ್ ಮೂಲಕ ರಾಮಜಪ, ಶಿವನಜಪ ಆರಂಭಿಸಿದರು. ಇದನ್ನೂ ಓದಿ: 500ಕ್ಕೂ ಹೆಚ್ಚು ಮಸೀದಿಗಳು ಸೇರಿ ಸೂಕ್ಷ್ಮ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಇನ್ನು ಮುಂದೆ ಪ್ರತಿದಿನ ದೇವಾಲಯದಲ್ಲಿ ಸುಪ್ರಭಾತ, ಭಜನೆ, ರಾಮಜಪವನ್ನು ಮೈಕ್ನಲ್ಲಿ ಹಾಕಲಾಗುವುದು ಎಂದು ತಿಳಿಸಿದರು. ನಾವು ಮೈಕ್ ಮೂಲಕ ಸುಪ್ರಭಾತ, ಭಜನೆ, ಜಪ ಮಾಡಬಾರದು ಎಂದರೆ ಬೇರೆ ಧರ್ಮದವರಿಗೂ ಅದಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಆಗ್ರಹಿಸಿದರು.
ಬೆಂಗಳೂರು: ಆಜಾನ್ ವಿಚಾರದಲ್ಲಿ ಹಿಂದೂಪರ ಸಂಘಟನೆಗಳು ಸರ್ಕಾರಕ್ಕೆ ನೀಡಿದ್ದ ಗಡುವು ಮುಕ್ತಾಯಗೊಂಡಿದೆ. ಆದರೆ ಸರ್ಕಾರದಿಂದ ಯಾವುದೇ ಕ್ರಮ ಆಗಿಲ್ಲ ಎಂದು ಬೇಸರ ವ್ಯಕ್ತಪಡಿಸಿರುವ ಹಿಂದೂಪರ ಸಂಘಟನೆಗಳು ದೇವಾಲಯಗಳಲ್ಲಿ ಆರತಿ, ಹನುಮಾನ್ ಚಾಲೀಸಾ ಪಠಿಸಲು ನಿರ್ಧರಿಸಿವೆ.
ಈ ಕುರಿತು ಬಿಜೆಪಿ ಸರ್ಕಾರದ ವಿರುದ್ಧ ಪ್ರಮೋದ್ ಮುತಾಲಿಕ್ ಮತ್ತು ಆಂದೋಲ ಶ್ರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂದೂಪರ ಸಂಘಟನೆಗಳು ಆಜಾನ್ ಕೂಗುವುದನ್ನು ನಿಷೇಧಿಸಲು ಮೇ 1 ರವರೆಗೂ ಗಡುವು ನೀಡಿದ್ದವು. ಮೇ 1ರ ಒಳಗೆ ಮಸೀದಿಯ ಧ್ವನಿವರ್ಧಕ ತೆರವಿಗೆ ಶ್ರೀರಾಮಸೇನೆ ಗಡುವು ನೀಡಿತ್ತು. ಆದರೆ ಸರ್ಕಾರ ಮೇ 1 ಆದರೂ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿವೆ.
ಸಾರ್ವಜನಿಕ, ವಸತಿ ಸ್ಥಳಗಳಲ್ಲಿ ಆಜಾನ್ ಕೂಗಬಾರದು ಎಂದು ಸುಪ್ರೀಂ ಕೋರ್ಟ್ ಆದೇಶ ಇದೆ. ಡೆಸಿಬಲ್ ಕಡಿಮೆ ಇಡಬೇಕು ಅಂತಾ ಸುಪ್ರೀಂ ಕೋರ್ಟ್ ಸ್ಪಷ್ಟವಾದ ಆದೇಶ ನೀಡಿದೆ. ಆದರೆ ಸರ್ಕಾರ ಮಾತ್ರ ಯಾವುದೇ ಕ್ರಮ ಜರುಗಿಸಿಲ್ಲ. ಸರ್ಕಾರಕ್ಕೆ ನೀಡಿದ್ದ ಗಡುವು ಅಂತ್ಯವಾದ ಹಿನ್ನೆಲೆ ಹಿಂದೂಪರ ಸಂಘಟನೆಗಳಿಂದ ಆಜಾನ್ ವಿರುದ್ಧ ಹೋರಾಟ ನಡೆಯಲಿದೆ ಎಂದು ಸಂಘಟನೆಗಳು ತಿಳಿಸಿವೆ.
ರಾಜ್ಯಾದ್ಯಂತ ಮೇ 9 ನೇ ತಾರೀಖು ಮೈಕ್ ಪ್ರಾರ್ಥನೆ ತಡೆಯದಿದ್ದರೆ ಹಿಂದೂ ಸಂಘಟನೆಗಳಿಂದ ಸಂಘರ್ಷವಾಗಲಿದ್ದು, ಆಜಾನ್ ವಿರುದ್ಧ ಆರತಿ, ಹನುಮಾನ್ ಚಾಲೀಸಾ ಪಠಣ ಪಠಿಸಲಾಗುವುದು. ಹಿಂದೂ ದೇವಾಲಯಗಳ ಬಳಿ ಶ್ರೀರಾಮನ ಭಜನೆ ಮಾಡಲು ಶ್ರೀರಾಮ ಸೇನೆ ನಿರ್ಧರಿಸಿದೆ.
ಮೇ 9 ರ ಬೆಳ್ಳಗ್ಗೆ 5 ಗಂಟೆಗೆ ದೇಗುಲ, ಮಠದಲ್ಲಿ ಭಜನೆ ನಡೆಸುವ ಪ್ಲ್ಯಾನ್ ಹಾಕಿಕೊಂಡಿದೆ. ಹಿಂದೂಪರ ಸಂಘಟನೆಗಳು ಅಂದು ರಾಜ್ಯದ ದೇವಾಲಯಗಳಲ್ಲಿ ಮೈಕ್ ಹಾಕಿ ಕೀರ್ತನೆ, ಭಜನೆ ಪಠಣೆ ಮಾಡಲಿವೆ.
ಈಗಾಗಲೇ ಅಜಾನ್ ಶಬ್ಧದಿಂದ ಹಾರ್ಟ್ ಪೇಷೆಂಟ್ಸ್ ಸಾಯುವಂತಾಗಿದೆ. ಬೆಳಗ್ಗೆ ಐದು ಗಂಟೆ ಆಗಿತ್ತೆಂದರೆ ಮತ್ತೆ ಮಲಗುವಂತಿಲ್ಲ ಎನ್ನುವಂತಾಗಿದೆ. ಮಸೀದಿಗಳಲ್ಲಿ ಎಷ್ಟು ಎತ್ತರಲ್ಲಿ ಮೈಕ್ ಕಟ್ಟಬೇಕು ಎಂಬ ಹಠಕ್ಕೆ ಬಿದ್ದು ಕಟ್ಟುತ್ತಿದ್ದಾರೆ. ಈಗಾಲದರೂ ಸಾಮರಸ್ಯ ಬೇಕು ಎನ್ನುವವರು ಮೈಕ್ ಸೌಂಡ್ ಕಡಿಮೆ ಮಾಡಿ ಎಂದು ಶಾಸಕ ಹೇಳಿದ್ದಾರೆ.
ಧಾರವಾಡ: ಮಸೀದಿಗಳಲ್ಲಿ ಹಾಕಲಾಗಿರುವ ಮೈಕ್ ಬಗ್ಗೆ ಕಳೆದ 6 ತಿಂಗಳ ಹಿಂದೆ ತಹಶೀಲ್ದಾರರಿಗೆ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣ ಮಂಡಳಿಗೆ ಮನವಿ ಸಲ್ಲಿಸಿದ್ದೆವು. ಆ ಬಗ್ಗೆ ಏನೇನು ಕ್ರಮ ಕೈಗೊಂಡಿದ್ದೀರಿ ಎಂಬುದರ ಬಗ್ಗೆ ವಿಚಾರಣೆ ಮಾಡಲು ಇಂದು ಧಾರವಾಡ ಶಬ್ದ ಮಾಲಿನ್ಯ ನಿಯಂತ್ರಣ ಮಂಡಳಿಗೆ ಭೇಟಿ ನೀಡಿದ್ದೆವು. ಆದರೆ ಅಲ್ಲಿನ ಅಧಿಕಾರಿಗಳು ಹಾರಿಕೆ ಉತ್ತರ ನೀಡಿದ್ದಾರೆ. ಈ ಕಚೇರಿಗೆ ಬೀಗ ಹಾಕಬೇಕಿದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿ ಕಾರಿದ್ದಾರೆ.
ಧಾರವಾಡದಲ್ಲಿ ಮಾತನಾಡಿದ ಅವರು, ಇಂದು ಶಬ್ದ ಮಾಲಿನ್ಯ ನಿಯಂತ್ರಣ ಮಂಡಳಿಗೆ ಭೇಟಿ ನೀಡಿದಾಗ ಅಲ್ಲಿನ ಅಧಿಕಾರಿಗಳು ನಿಸ್ಸಹಾಯಕರಾಗಿ ಮಾತನಾಡಿದ್ದಾರೆ. ಅವರು ಮಸೀದಿಗಳಲ್ಲಿನ ಮೈಕ್ಗಳ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ನಮ್ಮ ಬಳಿ ಸಿಬ್ಬಂದಿ ಇಲ್ಲ, ಪೊಲೀಸರು ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂಬ ಹಾರಿಕೆ ಉತ್ತರ ನೀಡಿದ್ದಾರೆ. ನಾವು ಅವರ ಮೇಲೆ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸುತ್ತೇವೆ ಎಂದಾಗ ಆ ರೀತಿ ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ ಎಂದರು. ಇದನ್ನೂ ಓದಿ: ಲಿಂಗಾಯತ ಪಂಚಮಸಾಲಿ ಜನಾಂಗವನ್ನು 2ಎ ವರ್ಗಕ್ಕೆ ಸೇರಿಸಬೇಕೆಂಬ ಬೇಡಿಕೆ – ಕೊಡಗಿನಲ್ಲಿ ವಿರೋಧ
ಈ ವಿಚಾರದ ಬಗ್ಗೆ ನಾವು ಮತ್ತೆ ಏಪ್ರಿಲ್ 13 ರಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸುತ್ತೇವೆ ಎಂದ ಅವರು ಗೋಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದರೂ ಕಸಾಯಿ ಖಾನೆಗಳು ಇನ್ನೂ ಇವೆ. ಇನ್ನೂ ಕೂಡ ದನಗಳನ್ನು ಕಡಿಯುತ್ತಿದ್ದಾರೆ ಎಂದರು.
ಎಸಿ ಕಚೇರಿಯಲ್ಲಿ ಅಧಿಕಾರಿಗಳು ಮಜಾ ಉಡಾಯಿಸುತ್ತಿದ್ದಾರೆ. ಶಬ್ದ ಮಾಲಿನ್ಯ ಇವರ ಗಮನಕ್ಕೆ ಬಂದೇ ಇಲ್ವಾ? ರಾಜ್ಯದಲ್ಲಿರುವುದು ಬೇಜವಾಬ್ದಾರಿ ಸರ್ಕಾರ. ಈ ಸರ್ಕಾರ ಡೀಲಾ ಆಗಿದೆ. ರಾಜಕೀಯ ಪಕ್ಷಗಳು ವೋಟಿನ ಆಸೆಗೆ ಜೊಲ್ಲು ಸುರಿಸುತ್ತಿವೆ. ಈ ಕಾನೂನು ಒಬ್ಬರಿಗೆ ಮಾತ್ರ ಅನ್ವಯವಾಗುವುದಿಲ್ಲ. ಎಲ್ಲರೂ ಕಾನೂನು ಪಾಲಿಸಬೇಕು. ಚರ್ಚ್, ಮಸೀದಿಯಲ್ಲಿ ಶಬ್ದ ನಿಲ್ಲಿಸಬೇಕು ಎಂದರು. ಇದನ್ನೂ ಓದಿ: ಹಿಂದೂ-ಮುಸ್ಲಿಂ ನಡುವೆ ವಿಷ ಹಾಕಿ ಬಿಜೆಪಿ ರಾಜಕೀಯ ಲಾಭ ಪಡೆಯಲೆತ್ನಿಸುತ್ತಿದೆ: ಸಿದ್ದರಾಮಯ್ಯ
ನಮ್ಮ ವಿರೋಧ ಇರುವುದು ಪ್ರಾರ್ಥನೆಗೆ ಅಥವಾ ಭಜನೆಗೆ ಅಲ್ಲ. ನಮ್ಮ ವಿರೋಧ ಇರುವುದು ಶಬ್ದಕ್ಕೆ. ಭಜನೆ ಒಂದೇ ಸಮಯ ಆಗುತ್ತದೆ. ಆದರೆ ನಮಾಜ್ ದಿನಕ್ಕೆ ಐದು ಬಾರಿ ಆಗುತ್ತದೆ. ಮಸೀದಿಯಲ್ಲಿ ಕಾನೂನು ಉಲ್ಲಂಘನೆಯಾಗುತ್ತಿದೆ. ಆ ಶಬ್ದ ನಿಲ್ಲಿಸಬೇಕು ಎಂದು ಮುತಾಲಿಕ್ ಒತ್ತಾಯಿಸಿದರು.
ಬೆಂಗಳೂರು: ಕುಮಾರಸ್ವಾಮಿ ಯಾವಾಗ ಯಾರ ಪರ ಬ್ಯಾಟಿಂಗ್ ಮಾಡುತ್ತಾರೋ ಗೊತ್ತಾಗುವುದಿಲ್ಲ. ಹೀಗೆ ಮಾತನಾಡಿದರೆ ಹಿಟ್ ವಿಕೆಟ್ ಆಗುತ್ತೀರಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಕಂದಾಯ ಸಚಿವ ಆರ್. ಅಶೋಕ್ ತಿರುಗೇಟು ನೀಡಿದ್ದಾರೆ.
ಸರ್ಕಾರಿ ಶಾಲೆಗಳ ಆಸ್ತಿಯ ಖಾತೆಗಳನ್ನ ಎಸ್ಡಿಎಂಸಿಗೆ ಹಸ್ತಾಂತರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಆರ್.ಅಶೋಕ್ ಅವರು ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕುಮಾರಸ್ವಾಮಿ ಯಾವಾಗ ಯಾರ ಪರ ಬ್ಯಾಟಿಂಗ್ ಮಾಡುತ್ತಾರೋ ಗೊತ್ತಾಗುವುದಿಲ್ಲ. ಹೇಗೆ ತಿರುಗಿ ಬೇಕಾದರೂ ಬ್ಯಾಟಿಂಗ್ ಮಾಡುತ್ತಾರೆ. ಉಲ್ಟಾ- ಸೀದಾ ಬ್ಯಾಟಿಂಗ್ ಕೂಡಾ ಮಾಡುತ್ತಾರೆ. ಕುಮಾರಸ್ವಾಮಿ ಹೀಗೆ ಬ್ಯಾಟಿಂಗ್ ಮಾಡಿದಾಗ ಹಿಟ್ ವಿಕೆಟ್ ಆಗಿರುವುದೇ ಜಾಸ್ತಿ. ಕುಮಾರಸ್ವಾಮಿ ಅವರು ಹೀಗೆ ಮಾತನಾಡಿದರೆ ಹಿಟ್ ವಿಕೆಟ್ ಆಗುತ್ತೀರಾ ಹೀಗೆಲ್ಲಾ ಮಾತನಾಡಬೇಡಿ. 2006ರಲ್ಲಿ ನಮ್ಮ ಜೊತೆ ಸರ್ಕಾರ ಮಾಡಿದ್ದರು. 2018ರಲ್ಲಿ ಕಾಂಗ್ರೆಸ್ ಜೊತೆ ಸರ್ಕಾರ ಮಾಡಿದ್ದರು. ಆಡು ಮುಟ್ಟದ ಸೊಪ್ಪಿಲ್ಲ, ಜೆಡಿಎಸ್ ಮುಟ್ಟದ ಪಕ್ಷ ಇಲ್ಲ ಎನ್ನುವ ಹಾಗೇ ಆಗಿದೆ ಜೆಡಿಎಸ್ ಪರಿಸ್ಥಿತಿ ಎಂದು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ನಸುಕಿನಲ್ಲಿ ಸುಪ್ರಭಾತ, ಅಲ್ಲಾಹ್ ಕೂಗುವ ಪರಿಪಾಠ ನಿನ್ನೆ, ಇಂದಿನದಲ್ಲ: ಕುಮಾರಸ್ವಾಮಿ
ರಾಜ್ಯದಲ್ಲಿ ಅಜಾನ್ ಗೊಂದಲ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಾವು ಯಾವುದೇ ಹೊಸ ಕಾನೂನು ಮಾಡಿಲ್ಲ. ಸ್ಪೀಕರ್ ಹಾಕುವ ವಿಚಾರದಲ್ಲಿ ಹೈಕೋರ್ಟ್ ಅನೇಕ ತೀರ್ಪು ಕೊಟ್ಟಿದೆ. ಎಷ್ಟು ಸೌಂಡ್ ಇರಬೇಕು ಅಂತ ಕೋರ್ಟ್ ಹತ್ತಾರು ಬಾರಿ ಆದೇಶಿಸಿದೆ. ಅದರ ಪ್ರಕಾರ ಮಸೀದಿಗಳು ನಿಯಮ ಪಾಲನೆ ಮಾಡಬೇಕು. ಮೈಕ್ ಹಾಕುವ ವಿಚಾರದಲ್ಲಿ ಎಲ್ಲಾ ಧರ್ಮಗಳು ಕೋರ್ಟ್ ಆದೇಶ ಪಾಲನೆ ಮಾಡಬೇಕು. ಕೋರ್ಟ್ ಆದೇಶ ಪಾಲನೆ ಮಾಡಬೇಕು ಎನ್ನುವುದು ಸರ್ಕಾರದ ಸ್ಪಷ್ಟ ನಿಲುವು. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದ್ದಾರೆ.
ಕಿಡಿಗೇಡಿಗಳಿಗೆ ಪಾಠ
ಎಲ್ಲಿ ಉತ್ತಮವಾದ ಆಹಾರ ಸಿಗುತ್ತದೆ ಅಲ್ಲಿ ಜನ ಹೋಗುತ್ತಾರೆ. ಎಲ್ಲಿ ಇಷ್ಟವೋ ಅಲ್ಲಿ ಮಾಂಸ ತೆಗೆದುಕೊಳ್ಳುತ್ತಾರೆ. ಹೊಸ ತೊಡಕಿನಲ್ಲಿ ಕಿಡಿಗೇಡಿಗಳಿಗೆ ಪಾಠ ಕಲಿಸಿದ್ದಾರೆ. ಯಾರು ಬಲತ್ಕಾರವಾಗಿ ತಿನ್ನಿ ಅಂತ ಹೇಳುವ ಹಾಗೆ ಇಲ್ಲ. ಇದನ್ನು ಸರ್ಕಾರ ಸಹಿಸುವುದಿಲ್ಲ. ಮಾಂಸ ತಿನ್ನುವುದು ಅವರ ಇಷ್ಟ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮನೆಯಲ್ಲಿ ನಿಲ್ಲಿಸಿದ್ದ ಕಾರುಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿ
ಧ್ವನಿ ಎತ್ತಲಿಲ್ಲ ಯಾಕೆ?
ಹಿಜಬ್ ವಿಷಯ ತಂದಿದ್ದು ಯಾರು? 6 ಜನ ಹೆಣ್ಣು ಮಕ್ಕಳು ಹಿಜಬ್ ವಿಷಯ ತಂದರು. ಇದರಿಂದ ದೊಡ್ಡ ಸಂಚು, ಗ್ಯಾಂಗ್ ಇದೆ. ಅವರು ಈ ವಿಚಾರಗಳನ್ನು ತರುತ್ತಿದ್ದಾರೆ. ಇಂತಹ ವಿಷಯಗಳಿಗೆ ಪೋಷಣೆ ಮಾಡುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ಹಿಜಬ್ ವಿಷಯ ಬಂದಾಗ ಕಾಂಗ್ರೆಸ್ ಯಾಕೆ ಬಾಯಿ ಮುಚ್ಚಿ ಕುಳಿತಿತ್ತು. ವಿಧಾನಸಭೆಯಲ್ಲಿ ಧ್ವನಿ ಎತ್ತಲಿಲ್ಲ ಯಾಕೆ? ಹೈಕೋರ್ಟ್ ಆದೇಶದ ವಿರುದ್ಧ ಬಂದ್ ಮಾಡಿದ್ದರು. ಯಾವ ಕಾಂಗ್ರೆಸ್ ನಾಯಕರು ಇದರ ಬಗ್ಗೆ ಮಾತನಾಡಿಲ್ಲ. ಧರ್ಮಗುರುಗಳ ಜೊತೆ ಚರ್ಚೆ ಮಾಡಿ ಕೋರ್ಟ್ ಆದೇಶ ಪಾಲಿಸಿ ಅಂತ ಯಾಕೆ ಹೇಳಲಿಲ್ಲ. ವೋಟ್ ರಾಜಕೀಯ ಮಾಡುತ್ತಿರುವುದು ಕಾಂಗ್ರೆಸ್. ಉತ್ತರ ಪ್ರದೇಶದಲ್ಲಿ ನಾವು ಅಭಿವೃದ್ಧಿ ಹೆಸರಿನಲ್ಲಿ ಗೆದ್ದಿದ್ದೇವೆ. ಅಲ್ಪಸಂಖ್ಯಾತ ಓಲೈಕೆ ಮಾಡಿಲ್ಲ. ಆದರೆ ಕಾಂಗ್ರೆಸ್ಗೆ ಯಾರು ಓಟ್ ಹಾಕಿಲ್ಲ. ಹಿಜಬ್ ಬಗ್ಗೆ ಕಾಂಗ್ರೆಸ್ ನಿಲುವು ಸ್ಪಷ್ಟಪಡಿಸಲಿ ಎಂದು ಕಿಡಿಕಾರಿದ್ದಾರೆ.
ಡಿಕೆಶಿ ಒಂದು ಹೇಳಿಕೆ ಕೊಟ್ಟರೆ, ಸಿದ್ದರಾಮಯ್ಯ ಮತ್ತೊಂದು ಹೇಳಿಕೆ ಕೊಡುತ್ತಾರೆ. ಮೊದಲು ಹಿಜಬ್ ವಿಚಾರದಲ್ಲಿ ಕಾಂಗ್ರೆಸ್ ನಿಲುವು ಹೇಳಲಿ. ಕಾಂಗ್ರೆಸ್ಗೆ ಬೇಕಾಗಿರುವುದು ಗಲಭೆಗಳು ಮಾತ್ರ. ಸರ್ಕಾರ ಇಂತಹ ಗಲಭೆಗಳಿಗೆ ಅವಕಾಶ ಕೊಡುವುದಿಲ್ಲ. ಗಲಭೆಗಳನ್ನು ಸರ್ಕಾರ ಮಟ್ಟ ಹಾಕುತ್ತಿವೆ. ಮೋದಿ ಅವರ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ರೀತಿ ನಾವು ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಅಧಿಕೃತ ಮಸೀದಿಗಳಲ್ಲಿ ಮಾತ್ರ ಆಜಾನ್ ಕೂಗಲು ಅನುಮತಿ ಇದೆ. ಆದರೆ ಎಲ್ಲ ಮಸೀದಿಗಳಲ್ಲಿ ಆಜಾನ್ ಕೂಗಲಾಗುತ್ತದೆ. ಅಷ್ಟೇ ಅಲ್ಲದೇ ಆಜಾನ್ ಕೂಗಲು ಸ್ಪಷ್ಟವಾದ ಕೋರ್ಟ್ ನಿಯಮವಿದೆ. ಆದರೆ ಈ ನಿಯಮವನ್ನು ಉಲ್ಲಂಘಿಸಿ ಆಜಾನ್ ಕೂಗಲಾಗುತ್ತದೆ. ಈ ರೀತಿ ಆಜಾನ್ ಕೂಗುವುದನ್ನು ಕೂಡಲೇ ನಿಲ್ಲಿಸಬೇಕು. ಇಲ್ಲದೇ ಇದ್ದರೆ ಹಿಂದೂ ದೇವಾಲಯಗಳಲ್ಲೂ ಭಜನೆ, ಮಂತ್ರವನ್ನು ಪಠಿಸಲಾಗುವುದು ಎಂದು ಹಿಂದೂ ಸಂಘಟನೆಗಳ ಮುಖಂಡರು ಸೋಮವಾರ ಎಚ್ಚರಿಕೆ ನೀಡಿದ್ದರು.
ಅಹಮದಾಬಾದ್: ಗುಜರಾತ್ ಚುನಾವಣಾ ಪ್ರಚಾರದ ಕಾರ್ಯಕ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ ವಿಶೇಷ ಪ್ರಸಂಗ ನಡೆದಿದೆ.
ಮೋದಿ ಭಾಷಣ ನಿಲ್ಲಿಸಲು ಕಾರಣವಾಗಿದ್ದು ಆಜಾನ್(ನಮಾಜ್). ಬುಧವಾರ ನವ್ಸಾರಿಯ ಪ್ರಚಾರ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಸಮೀಪದ ಮಸೀದಿಯಿಂದ ಆಜಾನ್(ನಮಾಜ್) ಧ್ವನಿ ಕೇಳಿತು. ತಕ್ಷಣವೇ ಪ್ರಧಾನಿ ಮೋದಿ ಕೆಲ ಕ್ಷಣಗಳ ಕಾಲ ತಮ್ಮ ಭಾಷಣವನ್ನು ನಿಲ್ಲಿಸಿ ಮೌನವಾದರು. ನಂತರ ಆಜಾನ್ ಮುಗಿದ ಬಳಿಕ ಮತ್ತೆ ಭಾಷಣ ಮುಂದುವರೆಸಿದರು.
ಪ್ರಧಾನಿ ಮೋದಿ ಅವರು ತಮ್ಮ ಭಾಷಣವನ್ನು ನಿಲ್ಲಿಸುತ್ತಿದ್ದಂತೆ ಸಭಿಕರಲ್ಲಿ ಕೆಲ ಕಾಲ ಗೊಂದಲ ಉಂಟಾಯಿತು. ಆದರೆ ಮೋದಿ ಅವರು ಆಜಾನ್ ಮುಗಿದ ಬಳಿಕ ಭಾಷಣ ಆರಂಭಿಸುತ್ತಿದಂತೆ ಎಲ್ಲ ಸಭಿಕರು ಚಪ್ಪಾಳೆ ತಟ್ಟುವ ಮೂಲಕ ಮೋದಿಯವರ ನಡೆಯನ್ನು ಸ್ವಾಗತಿಸಿದರು.
ಇದೇ ಮೊದಲಲ್ಲ: ಆಜಾನ್ ವೇಳೆ ಮೋದಿ ಅವರು ಭಾಷಣ ನಿಲ್ಲಿಸಿದ್ದು ಇದೇ ಮೊದಲಲ್ಲ. ಈ ಹಿಂದೆ ಪಶ್ಚಿಮ ಬಂಗಾಳದ ಖರಗ್ಪುರದಲ್ಲಿ ಭಾಷಣ ಮಾಡುವ ವೇಳೆ ಆಜಾನ್ ಧ್ವನಿ ಕೇಳಿಸಿದಾಗಲೂ ಪ್ರಧಾನಿ ತಮ್ಮ ಭಾಷಣವನ್ನು ನಿಲ್ಲಿಸಿ ಮೌನ ವಹಿಸಿದ್ದರು. ನಂತರ ಭಾಷಣ ಆರಂಭಿಸಿದ ಅವರು ಯಾರ ಪ್ರಾರ್ಥನೆಯನ್ನು ನಡುವೆ ಅಡ್ಡಿಪಡುಸುವುದು ನನಗೆ ಇಷ್ಟವಿಲ್ಲ. ಹಾಗಾಗಿ ಭಾಷಣವನ್ನು ನಡುವೆ ನಿಲ್ಲಿಸಬೇಕಾಯಿತು ಎಂದು ಹೇಳಿದ್ದರು.
ಭಾಷಣ ವೇಳೆ ಮತ್ತೊಂದು ಅಚ್ಚರಿ: ಪ್ರಧಾನಿ ಮೋದಿ ಭಾಷಣ ಮಾಡುವ ವೇಳೆ ಮತ್ತೊಂದು ಅಚ್ಚರಿ ಘಟನೆ ನಡೆಯಿತು. ಪ್ರಧಾನಿ ಮೋದಿಯಂತೆ ಬಟ್ಟೆತೊಟ್ಟಿದ್ದ ಪುಟ್ಟ ಪೋರನೊಬ್ಬ ವೇದಿಕೆ ಮೇಲೆ ಬಂದು ಪ್ರಧಾನಿಗಳಿಗೆ ಶುಭಾಶಯ ತಿಳಿಸಿದ. ಬಾಲಕನನ್ನು ಮಾತನಾಡಿಸಿದ ಪ್ರಧಾನಿ ಮೋದಿ ಬಾಲಕನ ಬಳಿ ಬಂದು ಶುಭ ಕೋರಿದರು.
ಕಳೆದ ಎರಡು ದಿನಗಳಿಂದ ಗುಜರಾತ್ ಚುನಾವಣೆಯ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಪ್ರಧಾನಿ ಮೋದಿ ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿಯನ್ನು ನಡೆಸುತ್ತಿದ್ದಾರೆ.
કોંગ્રેસનું ચાલે તો ગરીબ માટે મીઠું અને મોંઘી સિગરેટ-દારૂ ઉપર સરખો GST રેટ લગાવે. અમને આ મંજૂર નથી. એમની લડાઈ અમીરો માટે, અમારી ગરીબો માટે. pic.twitter.com/WOGA2wgnYZ