Tag: b r shetty

  • ಉಡುಪಿಯ BRS ಉಚಿತ ಆಸ್ಪತ್ರೆ ಸರ್ಕಾರದ ಸುಪರ್ದಿಗೆ

    ಉಡುಪಿಯ BRS ಉಚಿತ ಆಸ್ಪತ್ರೆ ಸರ್ಕಾರದ ಸುಪರ್ದಿಗೆ

    ಉಡುಪಿ: ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಉಚಿತ ಆಸ್ಪತ್ರೆಯನ್ನು ಸರ್ಕಾರವೇ ಮುನ್ನಡೆಸುತ್ತದೆ. ಕೆಲ ಪತ್ರ ವ್ಯವಹಾರಗಳು ನಡೆದ ಮೇಲೆ ಎಲ್ಲಾ ಖರ್ಚು ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ

    ಆಸ್ಪತ್ರೆಯನ್ನು ಮುನ್ನಡೆಸುವ ಸಮಸ್ಯೆಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾ. ಸುಧಾಕರ್ ಅವರ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ಬೆಂಗಳೂರಿನಲ್ಲಿ ಸಭೆ ನಡೆಸಿ ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು. ಸಾಧಕ ಬಾಧಕಗಳ ಕುರಿತಂತೆ ಸಮಗ್ರವಾಗಿ ಚರ್ಚೆ ಮಾಡಲಾಯ್ತು.

    ಕಳೆದ ಐದಾರು ತಿಂಗಳಿನಿಂದ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗೆ ಸಂಬಳ ನೀಡಲಾಗಿಲ್ಲ. ಉಚಿತ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ ಎಂದು ಕೆಲ ತಿಂಗಳಿನಿಂದ ಆರೋಪ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ವೈದ್ಯರು, ಸಿಬ್ಬಂದಿ ಆಗಾಗ ತಮ್ಮ ಆಕ್ರೋಶ ಹೊರ ಹಾಕುತ್ತಿದ್ದರು. ರೋಗಿಗಳಿಗೆ ಯಾವುದೇ ಸೇವೆಗಳನ್ನು ನೀಡಲು ನಿರಂತರ ಪ್ರತಿಭಟನೆ ಮಾಡುವ ಎಚ್ಚರಿಕೆಯನ್ನು ನೀಡಿದ್ದರು. ಇಷ್ಟಾಗುತ್ತಲೇ ಆರೋಗ್ಯ ಇಲಾಖೆ ಅಧಿಕಾರಿಗಳು, ಉಡುಪಿ ಶಾಸಕ ರಘುಪತಿ ಭಟ್ ಜೊತೆ ಸಚಿವ ಸುಧಾಕರ್ ಸಭೆ ನಡೆಸಿ ಎಲ್ಲ ಮಾಹಿತಿಗಳನ್ನು ಸಂಗ್ರಹ ಮಾಡಿದ್ದಾರೆ.

    ಉಡುಪಿ ಮೂಲದ ದುಬೈ ಉದ್ಯಮಿ ಬಿ.ಆರ್.ಶೆಟ್ಟಿ ತಂದೆ-ತಾಯಿಯ ಹೆಸರಿನಲ್ಲಿ ಆಸ್ಪತ್ರೆಯನ್ನು ಉಡುಪಿಯಲ್ಲಿ ಕಟ್ಟಿಸಿ ಸಾರ್ವಜನಿಕರಿಗೆ ಉಚಿತ ಚಿಕಿತ್ಸೆಯನ್ನು ನೀಡುತ್ತಿದ್ದರು. ಆರ್ಥಿಕ ಸಮಸ್ಯೆಗೆ ಸಿಲುಕಿದ ನಂತರ ಬಿ.ಆರ್.ಶೆಟ್ಟಿ ಆಸ್ಪತ್ರೆಯನ್ನು ಸರ್ಕಾರವೇ ಸುಪರ್ದಿಗೆ ತೆಗೆದುಕೊಂಡು ಮುಂದುವರಿಸುವಂತೆ ಕೋರಿದ್ದರು. ಈ ಬಗ್ಗೆ ಸಭೆ ನಡೆಸಿ ಕೆಲ ಪತ್ರ ವ್ಯವಹಾರಗಳು ಮುಗಿದ ನಂತರ ರಾಜ್ಯ ಸರ್ಕಾರವೇ ಆಸ್ಪತ್ರೆಯನ್ನು ಸುಪರ್ದಿಗೆ ತೆಗೆದುಕೊಳ್ಳಲು ತೀರ್ಮಾನಿಸಲಾಯಿತು. ಇದನ್ನೂ ಓದಿ: ನಾನು ಹಠವಾದಿ, ಅಂದುಕೊಂಡಿದ್ದನ್ನ ಸಾಧಿಸದೇ ಬಿಡಲ್ಲ: ಸಚಿವ ಆನಂದ್ ಸಿಂಗ್

    ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಆಯುಕ್ತರಾದ ಕೆ.ವಿ. ತ್ರಿಲೋಕ್ ಚಂದ್ರ, ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿಗಳಾದ ಡಾ. ನಾಗಭೂಷಣ್ ಉಡುಪ, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಮಧುಸೂದನ್ ನಾಯಕ್ ಉಪಸ್ಥಿತರಿದ್ದರು. ಇದನ್ನೂ ಓದಿ: ರೋಹಿಣಿ ಸಿಂಧೂರಿ ಅಮಾನತು ಮಾಡಿ, ಅವರ ವಿರುದ್ಧ ತನಿಖೆ ನಡೆಸಿ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು

  • ಆಸ್ಪತ್ರೆ ಕಾಮಗಾರಿಗೆ ಪೇಜಾವರ ಶ್ರೀಗಳು ಓದಿದ ಶಾಲೆಯ ಕಟ್ಟಡದಲ್ಲಿ ಬಿರುಕು- ಬಿಆರ್ ಶೆಟ್ಟಿಗೆ ತಲೆಬಾಗ್ತಿದೆಯಾ ಸರ್ಕಾರ?

    ಆಸ್ಪತ್ರೆ ಕಾಮಗಾರಿಗೆ ಪೇಜಾವರ ಶ್ರೀಗಳು ಓದಿದ ಶಾಲೆಯ ಕಟ್ಟಡದಲ್ಲಿ ಬಿರುಕು- ಬಿಆರ್ ಶೆಟ್ಟಿಗೆ ತಲೆಬಾಗ್ತಿದೆಯಾ ಸರ್ಕಾರ?

    ಉಡುಪಿ: ಇದು 131 ವರ್ಷಗಳ ಹಳೆಯ ಐತಿಹಾಸಿಕ ಶಾಲೆ. ಪೇಜಾವರ ಶ್ರೀಗಳಂತಹ ಹಿರಿಯರು ಇಲ್ಲಿ ಕಲಿತಿದ್ದಾರೆ. ಆದ್ರೆ ಖಾಸಗಿ ಆಸ್ಪತ್ರೆಯ ಲಾಬಿಗೆ ಆ ಶಾಲೆಯ ಸ್ಥಳಾಂತರಕ್ಕರ ಹುನ್ನಾರ ನಡೀತಿದೆ. ಶಾಲೆಯನ್ನ ಅಭಿವೃದ್ಧಿಗೊಳಸಬೇಕಾದವ್ರೇ ಈಗ ಶಿಫ್ಟ್ ಮಾಡೋಕೆ ನಿರ್ಧರಿಸಿದ್ದಾರೆ.

    ಹೌದು. ಉಡುಪಿ ನಗರದಲ್ಲಿರೋ ಮಹಾತ್ಮಗಾಂಧಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯು 1885ರಲ್ಲಿ ಸ್ಥಾಪನೆಯಾಗಿದೆ. ಈ ಶಾಲೆಯಲ್ಲಿ ಸದ್ಯ 60ಕ್ಕೂ ಅಧಿಕ ಮಕ್ಕಳು ಕಲೀತಿದ್ದಾರೆ. ಕೂಲಿ ಕೆಲಸಕ್ಕಾಗಿ ನಗರಕ್ಕೆ ಬಂದಿರೋ ಉತ್ತರ ಕರ್ನಾಟಕದ ಕೂಲಿ ಕಾರ್ಮಿಕರ ಮಕ್ಕಳೇ ಇಲ್ಲಿ ಹೆಚ್ಚಾಗಿದ್ದಾರೆ.

    ಈ ಶಾಲೆಯ ಹಿಂಭಾಗದಲ್ಲಿ ಉಡುಪಿ ಮೂಲದ ದುಬೈ ಉದ್ಯಮಿ ಬಿಆರ್ ಶೆಟ್ಟಿ ಎರಡು ಆಸ್ಪತ್ರೆ ನಿರ್ಮಿಸುತ್ತಿದ್ದಾರೆ. ಆಸ್ಪತ್ರೆ ಕಾಮಗಾರಿಯಿಂದ ಶಾಲಾ ಕಟ್ಟಡ ಈಗಾಗಲೇ ಬಿರುಕು ಬಿಟ್ಟಿದೆ. ರಸ್ತೆಗೆ ಆಸ್ಪತ್ರೆ ಕಾಣುವುದಕ್ಕೆ ಅಡ್ಡಲಾಗಿರೋ ಈ ಶಾಲೆಯನ್ನೇ ಸ್ಥಳಾಂತರ ಮಾಡಲಾಗುತ್ತಿದೆ ಅನ್ನೋ ಆರೋಪ ಕೇಳಿಬಂದಿದೆ.

    ನಗರಸಭೆಯ ಮುಂಭಾಗದಲ್ಲೇ ಇರೋ ಈ ಶಾಲೆಯ ಅಭಿವೃದ್ಧಿಗೆ ಯಾರೂ ಮುಂದಾಗಿಲ್ಲ. ಆದರೆ ಶಾಲೆಯನ್ನು ಇದೇ ಜಾಗದಲ್ಲಿ ಅಭಿವೃದ್ಧಿ ಮಾಡುವಂತೆ ಒತ್ತಾಯಿಸಿರುವ ವಿದ್ಯಾರ್ಥಿಗಳು ಶಾಲೆಯ ಸಮಸ್ಯೆ ಬಗ್ಗೆ ಬಾಲ ನ್ಯಾಯ ಮಂಡಳಿಗೂ ದೂರು ಕೊಟ್ಟಿದ್ದಾರೆ. ಕೊನೆಗೆ ಉದ್ಯಮಿಯ ಆಸೆ ಈಡೇರಿಸಲು ಸರ್ಕಾರ ಶಾಲೆಗೆ ಎಳ್ಳುನೀರು ಬಿಟ್ಟಿದೆ. ಶಿಕ್ಷಣಾಧಿಕಾರಿಯನ್ನ ಕೇಳಿದ್ರೆ, ಇದು ತಾತ್ಕಾಲಿಕ ಸ್ಥಳಾಂತರ, ಮಕ್ಕಳ ಹಿತದೃಷ್ಟಿಯಿಂದ ಮಾಡಿದ್ದೇವೆ ಅಂತ ಹೇಳುತ್ತಿದ್ದಾರೆ.

    ಇದನ್ನೂ ಓದಿ: ಸ್ವಾತಂತ್ರ್ಯ ದಿನದಂದು ರಾಷ್ಟ್ರಧ್ವಜ ಹಿಡಿದು ಉಡುಪಿ ಶಾಲೆ ವಿದ್ಯಾರ್ಥಿಗಳಿಂದ ಪ್ರತಿಭಟನೆ

    ಸ್ವಾತಂತ್ರ್ಯ ದಿನಾಚರಣೆಯಂದು ಶಾಲಾ ವಿದ್ಯಾರ್ಥಿಗಳು ಸ್ಥಳಾಂತರ ವಿರೋಧಿಸಿ ಪ್ರತಿಭಟಿಸಿದ್ದರು. ನಮ್ಮ ಸಿಎಂ ಸಿದ್ದರಾಮಯ್ಯ ಸರ್ಕಾರಿ ಶಾಲೆ, ಕನ್ನಡ ವ್ಯಾಕರಣ ಅಂತೆಲ್ಲಾ ಮಾತಾಡ್ತಾನೇ ಇರ್ತಾರೆ. ಆದ್ರೆ ಈ ಶಾಲೆಯ ಅಭಿವೃದ್ಧಿಗೆ ಮುಂದಾಗದ ಶಿಕ್ಷಣ ಇಲಾಖೆ, ಈಗ ಸ್ಥಳಾಂತರಕ್ಕೆ ಆಸಕ್ತಿ ವಹಿಸಿದೆ.