Tag: B.S.Yadiyurappa

  • `ಗಂಧದಗುಡಿ’ ಸಿನಿಮಾ ವೀಕ್ಷಿಸಿದ ಮಾಜಿ ಸಿಎಂ ಯಡಿಯೂರಪ್ಪ

    `ಗಂಧದಗುಡಿ’ ಸಿನಿಮಾ ವೀಕ್ಷಿಸಿದ ಮಾಜಿ ಸಿಎಂ ಯಡಿಯೂರಪ್ಪ

    ವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್(Puneeth Rajkumar) ನಟಿಸಿದ ಕೊನೆಯ ಸಿನಿಮಾ `ಗಂಧದಗುಡಿ'(Gandadagudi) ಚಿತ್ರವನ್ನ ಮಾಜಿ ಸಿಎಂ ಯಡಿಯೂರಪ್ಪ ವೀಕ್ಷಿಸಿದ್ದಾರೆ. ಅಪ್ಪು ಕನಸಿನ ಸಿನಿಮಾ `ಗಂಧದಗುಡಿ’ ಪುತ್ರ ರಾಘವೇಂದ್ರ(Raghavendra) ಜೊತೆ ವೀಕ್ಷಿಸಿದ್ದಾರೆ.

    ಕರ್ನಾಟಕ ರತ್ನ ಪುನೀತ್ ನಟನೆಯ `ಗಂಧದಗುಡಿ’ ಚಿತ್ರಕ್ಕೆ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿದೆ. `ಜೇಮ್ಸ್’ ಸೂಪರ್ ಡೂಪರ್ ಹಿಟ್ ಆದ್ಮೇಲೆ ಗಂಧದಗುಡಿಗಾಗಿ ಕಾಯುತ್ತಿದ್ದ ಫ್ಯಾನ್ಸ್, ಅಪ್ಪು ಕನಸಿನ ಸಿನಿಮಾ ನೋಡಿ ಖುಷಿಪಟ್ಟಿದ್ದರು. ಇದೀಗ ಮಾಜಿ ಸಿಎಂ ಯಡಿಯೂರಪ್ಪ(Bs Yediyurappa) ಶಿವಮೊಗ್ಗದ ಶಿವಪ್ಪನಾಯಕ ಸರ್ಕಲ್‌ನಲ್ಲಿರುವ ಭಾರತ್ ಸಿನಿಮಾಸ್ ಮಾಲ್‌ಗೆ `ಗಂಧದಗುಡಿ’ ಚಿತ್ರ ವೀಕ್ಷಿಸಿದ್ದಾರೆ. ಈ ವೇಳೆ ಪುತ್ರ ರಾಘವೇಂದ್ರ ಕೂಡ ಸಾಥ್ ನೀಡಿದ್ದಾರೆ. ಇದನ್ನೂ ಓದಿ: `ಗಂಧದಗುಡಿ’ ಸಿನಿಮಾ ವೀಕ್ಷಿಸಿದ ಮಾಜಿ ಸಿಎಂ ಯಡಿಯೂರಪ್ಪ 

    ಸಿನಿಮಾ ವೀಕ್ಷಿಸಲು ಬಂದ ವೇಳೆ ಸೆಲ್ಫಿಗಾಗಿ ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಇನ್ನೂ `ಗಂಧದಗುಡಿ’ಯಲ್ಲಿ ಅಪ್ಪು ನೈಜ ನಟನೆ ನೋಡಿ ಮಾಜಿ ಸಿಎಂ ಯಡಿರೂರಪ್ಪ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮನೆಮಂದಿಯೆಲ್ಲರೂ ಕುಳಿತು ಈ ಚಿತ್ರಕ್ಕೆ ಸಾಥ್ ನೀಡಿ ಎಂದಿದ್ದಾರೆ. ಎಲ್ಲರೂ ವೀಕ್ಷಿಸಿ ಎಂದು ಮನವಿ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಂಗಳಮುಖಿಯರು ಹೊಡೆದಾಡಿದ್ರೆ ಯಾರನ್ನ ಕಳುಹಿಸಲಿ: ಸಿಎಂ ಇಬ್ರಾಹಿಂ

    ಮಂಗಳಮುಖಿಯರು ಹೊಡೆದಾಡಿದ್ರೆ ಯಾರನ್ನ ಕಳುಹಿಸಲಿ: ಸಿಎಂ ಇಬ್ರಾಹಿಂ

    ರಾಯಚೂರು: ಗಂಡಸರು ಹೊಡೆದಾಡಿದ್ರೆ ಗಂಡಸರನ್ನ ಕಳಿಸಬಹುದು, ಹೆಂಗಸರು ಹೊಡೆದಾಡಿದ್ರೆ ಹೆಂಗಸರನ್ನ ಕಳಿಸಬಹುದು. ಈ ಮಂಗಳಮುಖಿಯರು ಹೊಡೆದಾಡಿದ್ರೆ ನಾನು ಯಾರನ್ನ ಕಳುಹಿಸಲಿ? ಬಿಜೆಪಿಯವರೇ ಮಂಗಳಮುಖಿಯರು, ಏನೋ ಬಸ್ಯಾ ಅಂತಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ತಿಳಿಸಿದ್ದಾರೆ.

    CM IBRAHIM

    ಅವರಿಂದು ರಾಯಚೂರಿನಲ್ಲಿ ಮಾತನಾಡಿ, ಬಿ.ಎಸ್.ಯಡಿಯೂರಪ್ಪ ಅವರು ಮೇಕಪ್ ಮಾಡಿ ಸರ್ಕಾರ ತಂದ್ರು, ಪಾಪ ಬೊಮ್ಮಾಯಿಗೆ ಸಿಎಂ ಸ್ಥಾನ ಕೊಟ್ರು. ಸಚಿವ ಸಂಪುಟ ವಿಸ್ತರಣೆ ಮಾಡಲು, ಬಿಡ್ತಿಲ್ಲ. ಈ ಗುಲಾಮಗಿರಿಯಿಂದ ಹೊರಬರಲು ಜನ ಪ್ರಾದೇಶಿಕ ಪಕ್ಷಕ್ಕೆ ಬೆಂಬಲಿಸುತ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ತಾರಕಕ್ಕೇರಿದ ಆಡಳಿತಮಂಡಳಿ, ಕಾರ್ಯನಿರ್ವಹಣಾಧಿಕಾರಿ ಜಟಾಪಟಿ

    ಬಿಜೆಪಿ ಮತ್ತು ಕಾಂಗ್ರೆಸ್ ಎಲ್ಲದಕ್ಕೂ ಹೈಕಮಾಂಡ್ ಮುಂದೆ ಕೈ ಕಟ್ಟಿ ನಿಲ್ಲಬೇಕು. ನಮ್ಮ ಪಕ್ಷದಲ್ಲಿ ದೇವೇಗೌಡರೇ ಹೈಕಮಾಂಡ್ ಇಲ್ಲಿಯೇ ಸಿಗುತ್ತಾರೆ. ದೇವೇಗೌಡರ ನೀರಾವರಿ ಕೊಡುಗೆ ಜನತೆ ಮರೆತಿಲ್ಲ ಎಂದು ಹೇಳಿದ್ದಾರೆ.

  • ನಾನು ಹೇಳಿದ್ದು ನಿಜವಾಗಿದೆ, ಬೊಮ್ಮಾಯಿ ನಾಯಕತ್ವಕ್ಕೆ ಬೆಂಬಲ: ಬಿಎಸ್‌ವೈ

    ನಾನು ಹೇಳಿದ್ದು ನಿಜವಾಗಿದೆ, ಬೊಮ್ಮಾಯಿ ನಾಯಕತ್ವಕ್ಕೆ ಬೆಂಬಲ: ಬಿಎಸ್‌ವೈ

    ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಹುತೇಕ 12 ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನ ಹಂತದಲ್ಲಿದೆ. ಈ ಬಗ್ಗೆ ನಾನು ಮೊದಲೇ ಹೇಳಿದ್ದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲೇ ನಾನು ಹೇಳಿದ ಹಾಗೆ 15 ಕ್ಷೇತ್ರದಲ್ಲಿ ಗೆಲುವು ಸಾಧಿಸುತ್ತೇವೆ. ಒಂದು ಕ್ಷೇತ್ರ ಹೆಚ್ಚು ಕಮ್ಮಿಯಾಗಿರಬಹುದು. ಆದರೂ ನಾನು ಹೇಳಿದ್ದು ನಿಜ ಆಗುತ್ತಿದೆ. ಅಲ್ಲದೆ ಈ ಗೆಲುವಿನಿಂದಾಗಿ ನಮಗೆ ಕಾರ್ಯಕಲಾಪ ನಡೆಸಲು ಸುಗಮ ಆಗುತ್ತದೆ ಎಂದರು.

    ಈ ಚುನಾವಣೆ ಫಲಿತಾಂಶ ಮುಂದಿನ ಚುನಾವಣೆ ಮೇಲೆ ಪರಿಣಾಮ ಬೀರುತ್ತದೆ ಅಂತ ಅಲ್ಲ. ಮುಖ್ಯಮಂತ್ರಿ ಬೊಮ್ಮಾಯಿ ನಾಯಕತ್ವಕ್ಕೆ ಜನ ಬೆಂಬಲ ಕೊಟ್ಟಿದ್ದಾರೆ. ನಾನು ಮುಂದಿನ ದಿನಗಳಲ್ಲಿ ರಾಜ್ಯ ವ್ಯಾಪ್ತಿ ಪ್ರವಾಸ ಆರಂಭಿಸಿ ಪಕ್ಷ ಸಂಘಟನೆ ಮಾಡುತ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: 1,743 ಕೋಟಿ ಆಸ್ತಿಯ ಒಡೆಯ ಕೆಜಿಎಫ್‌ ಬಾಬುಗೆ ಸೋಲು

    ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ 140 ಸ್ಥಾನ ಗೆಲುವು ಸಾಧಿಸುತ್ತೇವೆ. ಹೊಸ ಕ್ಷೇತ್ರಗಳಲ್ಲಿ ಬಿಜೆಪಿ ಹಿನ್ನಡೆಯಾಗಿದ್ದು ನಿಜ. ಆದರೆ ಹಾಸನ ಮಂಡ್ಯ ಸೇರಿದಂತೆ ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಒತ್ತು ಕೊಡುತ್ತೆವೆ ಎಂದು ತಿಳಿಸಿದರು. ಇದನ್ನೂ ಓದಿ: ಒಳ್ಳೆಯ ಫಲಿತಾಂಶ ಬರುವ ನಿರೀಕ್ಷೆ ಇದೆ: ಬೊಮ್ಮಾಯಿ

  • ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ 15 ಸೀಟ್ ಗೆಲುವು- ಬಿಎಸ್‌ವೈ ವಿಶ್ವಾಸ

    ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ 15 ಸೀಟ್ ಗೆಲುವು- ಬಿಎಸ್‌ವೈ ವಿಶ್ವಾಸ

    ಹುಬ್ಬಳ್ಳಿ: ನಾಳೆ ಬರುವ ವಿಧಾನ ಪರಿಷತ್ ಫಲಿತಾಂಶದಲ್ಲಿ ಬಿಜೆಪಿಯು ಕನಿಷ್ಠ 15 ಸೀಟ್‌ಗಳನ್ನು ಗೆಲ್ಲುತ್ತದೆ ಎಂದು ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

    ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನ ನಮಗೆ ಆಶೀರ್ವಾದ ಮಾಡ್ತಾರೆ ಎನ್ನುವ ವಿಶ್ವಾಸವಿದೆ. ಇದರಿಂದ ವಿಧಾನ ಪರಿಷತ್‌ನಲ್ಲಿ ನಮಗೆ ಬಹುಮತ ಸಾಬೀತು ಆಗುತ್ತದೆ ಎಂದರು.

    ಬೆಳಗಾವಿ ಅಧಿವೇಶನದ ಕುರಿತು ಮಾತನಾಡಿದ ಅವರು, ಅಧಿವೇಶನದಲ್ಲಿ ಅನೇಕ ವಿಷಯಗಳು ಚರ್ಚೆ ಆಗುತ್ತಿವೆ. ಅದರಲ್ಲೂ ಪ್ರಮುಖವಾಗಿ ಮತಾಂತರ ಕಾಯ್ದೆ ನಿಷೇಧ ಜಾರಿ ವಿಚಾರವಾಗಿ ಕಾಂಗ್ರೆಸ್ ವಿರೋಧ ಇದ್ದೇ ಇರುತ್ತದೆ. ನಮ್ಮ ಅಪೇಕ್ಷೆಯೂ ನಿಷೇಧ ಮಾಡುವುದಾಗಿದೆ. ಇದು ಕೇವಲ ನನ್ನ ಅಭಿಪ್ರಾಯ ಅಷ್ಟೇ ಅಲ್ಲ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಆಡಳಿತ ಪಕ್ಷದವರು ಸೇರಿದಂತೆ ಸಂಸತ್ ಪ್ರತಿನಿಧಿಗಳ ಅಭಿಪ್ರಾಯಗಳನ್ನು ಪಡೆಯಲಾಗಿದೆ. ಹಲವು ರಾಜ್ಯಗಳಲ್ಲಿ ಈಗಾಗಲೇ ಮತಾಂತರ ಕಾಯ್ದೆ ಜಾರಿಯಲ್ಲಿದೆ. ಅಧಿವೇಶನ ಮುಗಿಯುವ ಕೆಲ ಎರಡು ಮೂರು ದಿನಗಳ ಒಳಗೆ ಕಾಯ್ದೆ ಜಾರಿ ಆಗಲಿದೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ಬಳಿಕ ಲವ್ ಜಿಹಾದ್ ನಿಷೇಧ ಕಾಯ್ದೆ: ಸುನಿಲ್ ಕುಮಾರ್

    ಬಸವರಾಜ ಬೊಮ್ಮಾಯಿಗೆ ಬಿಜೆಪಿ ನಾಯಕರಿಂದ ಸಹಕಾರ ಸಿಗುತ್ತಿಲ್ಲ ಎನ್ನುವ ರಾಯರೆಡ್ಡಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಅದರಲ್ಲಿ ಸತ್ಯಾಂಶ ಇಲ್ಲ. ಸಿಎಂ ಬೊಮ್ಮಾಯಿಗೆ ಎಲ್ಲಾ ರೀತಿಯ ಸಹಕಾರ ಸಿಗುತ್ತಿದೆ. ಬಿಜೆಪಿಯಲ್ಲಿ ಅವರ ಅವಧಿಯನ್ನು ಬೊಮ್ಮಾಯಿ ಪೂರ್ಣಗೊಳಿಸುತ್ತಾರೆ ಎಂದು ಬಿಎಸ್‌ವೈ ತಿಳಿಸಿದರು. ಇದನ್ನೂ ಓದಿ: ಪ್ರತಿ ಮನೆಯಲ್ಲೂ ತಲ್ವಾರ್ ಇಟ್ಟುಕೊಂಡು ಗೋವು ರಕ್ಷಣೆ ಮಾಡಿ: ಸಾಧ್ವಿ ಸರಸ್ವತಿ

  • ಗಾಂಧಿ ಜಯಂತಿಯಂದು 31ನೇ ಜಿಲ್ಲೆ ವಿಜಯನಗರಕ್ಕೆ ಅಧಿಕೃತ ಚಾಲನೆ

    ಗಾಂಧಿ ಜಯಂತಿಯಂದು 31ನೇ ಜಿಲ್ಲೆ ವಿಜಯನಗರಕ್ಕೆ ಅಧಿಕೃತ ಚಾಲನೆ

    ವಿಜಯನಗರ: ರಾಜ್ಯದ 31ನೇ ಜಿಲ್ಲೆಯಾಗಿ ಉದಯವಾಗಿರುವ ವಿಜಯನಗರ ಜಿಲ್ಲೆಯ ಉದ್ಘಾಟನೆ ಅಕ್ಟೋಬರ್ 2 ರ ಗಾಂಧಿ ಜಯಂತಿಯಂದು ನಡೆಯಲಿದೆ. ಕಳೆದ ಫೆಬ್ರವರಿಯಲ್ಲಿ ಅಧಿಕೃತ ಘೋಷಣೆಯಾಗಿದ್ದ ವಿಜಯನಗರ ಜಿಲ್ಲೆಗೆ ಹಾಲಿ ಸಿಎಂ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಇಬ್ಬರು ಸೇರಿ ಸರಳವಾಗಿ ಚಾಲನೆ ನೀಡಲಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಳ್ಳಾರಿ ವಿಜಯನಗರ ಜಿಲ್ಲೆಗಳ ಉಸ್ತುವಾರಿ ಸಚಿವ ಆನಂದ್ ಸಿಂಗ್, ಗಾಂಧಿ ಜಯಂತಿ ದಿನ ರಾಜ್ಯದ ನೂತನ ಜಿಲ್ಲೆ ವಿಜಯನಗರಕ್ಕೆ ಚಾಲನೆ ಸಿಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಬೋಟ್‍ನಲ್ಲಿ ನದಿ ದಾಟಿ ರೈತರ ಮನೆಯಂಗಳದಲ್ಲಿ ‘ಅನ್ನದಂಗಳದ ಮಾತುಕತೆ’

    ಸಾಕಷ್ಟು ವಿರೋಧದ ನಡುವೆಯೂ ಬಳ್ಳಾರಿ ಜಿಲ್ಲೆಯನ್ನು ವಿಭಜನೆ ಮಾಡಿ ವಿಜಯನಗರ ಜಿಲ್ಲೆಯನ್ನು ಘೋಷಣೆ ಮಾಡಿರೋ ರಾಜ್ಯ ಸರ್ಕಾರದ ನಡೆಗೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಕಳೆದ ಫೆಬ್ರವರಿ 8 ರಂದು ಅಧಿಕೃತವಾಗಿ ವಿಜಯನಗರ ಜಿಲ್ಲೆಯನ್ನು ಘೋಷಣೆ ಮಾಡಲಾಗಿತ್ತು. ಆದರೆ ಯಾವುದೇ ವ್ಯವಸ್ಥೆಗಳನ್ನು ನೀಡಿರಲಿಲ್ಲ. ಆದರೆ ಇದೀಗ ಅ.2 ರಂದು ಸಿಎಂ ಬಸವರಾಜ್ ಬೊಮ್ಮಾಯಿ ಮತ್ತು ಮಾಜಿ ಸಿಎಂ ಯಡಿಯೂರಪ್ಪನವರು ಸೇರಿದಂತೆ ಅನೇಕ ಗಣ್ಯರು ನೂತನ ಜಿಲ್ಲೆಗೆ ಚಾಲನೆ ನೀಡಲಿದ್ದಾರೆ ಎಂದರು.

    ಸಿಎಂ ಬಸವರಾಜ್ ಬೊಮ್ಮಾಯಿಯವರು ವಿಜಯನಗರ ಜಿಲ್ಲೆಗೆ ಚಾಲನೆ ನೀಡುವುದರ ಜೊತೆಗೆ ನಾನಾ ಅಭಿವೃದ್ಧಿ ಕಾರ್ಯಗಳಿಗೂ ಕೂಡ ಚಾಲನೆ ನೀಡಲಿದ್ದಾರೆ. ಜಿಲ್ಲೆ ಕಾರ್ಯಾರಂಭ ಮಾಡುವ ಸಂದರ್ಭದಲ್ಲಿ ಅನೇಕ ಸವಾಲುಗಳಿರುತ್ತವೆ. ಕಚೇರಿಗಳ ಕಾರ್ಯಾರಂಭ ಮಾಡುವುದು, ಯುವ ಮತ್ತು ಉತ್ಸಾಹಿ ಹಾಗೂ ಅನುಭವಿ ಅಧಿಕಾರಿಗಳನ್ನು ಕರೆತರುವುದು. ಈ ಭಾಗದ ಜನರು ವಿವಿಧ ಸರ್ಕಾರಿ ಸೌಲಭ್ಯಗಳಿಗೆ ಬಳ್ಳಾರಿಗೆ ಅಲೆದಾಡುವುದನ್ನು ತಪ್ಪಿಸಿ, ಎಲ್ಲ ಸೌಲಭ್ಯಗಳನ್ನು ವಿಜಯನಗರದಲ್ಲಿ ಸಿಗುವಂತೆ ನೋಡಿಕೊಳ್ಳಬೇಕಿದೆ. ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳು ಆರಂಭ ಮಾಡುವ ಸಂದರ್ಭದಲ್ಲಾದ ಲೋಪಗಳನ್ನು ಗಮನದಲ್ಲಿಟ್ಟುಕೊಂಡು ಈ ಜಿಲ್ಲೆಯಲ್ಲಿ ಆ ರೀತಿಯ ಸಮಸ್ಯೆಗಳಾಗದಂತೆ ಜಿಲ್ಲೆಯನ್ನು ಕಟ್ಟುವ ಮೂಲಕ ಮಾದರಿ ಜಿಲ್ಲೆಯನ್ನಾಗಿ ರೂಪಿಸಲಾಗುವುದು ಎಂದು ಸಚಿವ ಆನಂದ್ ಸಿಂಗ್ ಆಶಾಭಾವನೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು ಹೊರವಲಯದಲ್ಲಿ ರೇವ್ ಪಾರ್ಟಿ- ಅರೆನಗ್ನ ಸ್ಥಿತಿಯಲ್ಲಿ ಯುವತಿಯರ ಡ್ಯಾನ್ಸ್

    ಹೊಸಪೇಟೆಯ ಟಿಎಸ್‍ಪಿ ಕಚೇರಿ ಆವರಣದಲ್ಲಿ ಸ್ಥಾಪಿಸಲಾಗುತ್ತಿರುವ ಜಿಲ್ಲಾಡಳಿತ ಕಟ್ಟಡ 6 ಕೋಟಿ ರೂ. ವೆಚ್ಚದಲ್ಲಿ ನವೀಕರಣಗೊಳ್ಳುತ್ತಿದೆ. ಈಗಾಗಲೇ 3 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಕಾರಿಗನೂರ ಬಳಿಯ ಇಎಸ್‍ಐ ಕಟ್ಟಡದಲ್ಲಿ ಎಸ್ಪಿ ಕಚೇರಿ ಸ್ಥಾಪಿಸಲಾಗುತ್ತಿದೆ. ಟಿಎಸ್‍ಪಿ ಕಚೇರಿ ಆವರಣದಲ್ಲಿಯೇ 35 ಎಕರೆ ವಿಶಾಲ ಜಾಗದಲ್ಲಿ ಮೆಡಿಸಿಟಿ ಸ್ಥಾಪಿಸಲಾಗುತ್ತಿದೆ ಎಂದರು. ಇದರಲ್ಲಿ 110 ಕೋಟಿ ವೆಚ್ಚದ 250 ಹಾಸಿಗೆ ಆಸ್ಪತ್ರೆ, ಮೆಡಿಕಲ್ ಕಾಲೇಜು, ನಸಿರ್ಂಗ್ ಕಾಲೇಜುಗಳಿರಲಿವೆ. ಒಟ್ಟಾರೆ ವಿಜಯನಗರ ಜಿಲ್ಲೆಯ ಜಿಲ್ಲಾಡಳಿತ ಕಾರ್ಯಾರಂಭಕ್ಕೆ ಮುಹೂರ್ತ ಕೂಡಿ ಬಂದಿದ್ದು, ಈ ಭಾಗದ ಜನರಿಗೆ ಸಾಕಷ್ಟು ಖುಷಿ ತಂದಿದೆ.

  • ಬಿಎಸ್‍ವೈ ಡೈರಿ ಪ್ರಕರಣ- ಕಾಂಗ್ರೆಸ್ ಮುಂದೆ 10 ಪ್ರಶ್ನೆಗಳನ್ನಿಟ್ಟ ಸಿ.ಟಿ.ರವಿ

    ಬಿಎಸ್‍ವೈ ಡೈರಿ ಪ್ರಕರಣ- ಕಾಂಗ್ರೆಸ್ ಮುಂದೆ 10 ಪ್ರಶ್ನೆಗಳನ್ನಿಟ್ಟ ಸಿ.ಟಿ.ರವಿ

    ಬೆಂಗಳೂರು: ಕಾಂಗ್ರೆಸ್ಸಿನಿಂದ ಬಿಜೆಪಿ ನಾಯಕ ಬಿ.ಎಸ್ ಯಡಿಯೂರಪ್ಪ ವಿರುದ್ಧ ಡೈರಿ ಆರೋಪ ವಿಚಾರ, ಕಾಂಗ್ರೆಸ್ಸಿಗೆ 10 ಪ್ರಶ್ನೆ ಕೇಳಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಡೈರಿಯ ಪ್ರತಿ ಹಾಳೆಯಲ್ಲೂ ಯಾರೂ ಸಹಿ ಮಾಡಲ್ಲ. ಡೈರಿಯಲ್ಲಿ ಹಣ ಕೊಟ್ಟಿರೋದು ಬರೆದಿರೋರು, ತಮ್ಮಗೆ ಬಂದಿರೋ ಹಣದ ಬಗ್ಗೆಯೂ ಬರೆಯಬೇಕಲ್ಲವಾ? 2010 ಪೂರ್ವದಲ್ಲಿ ಯಡಿಯೂರಪ್ಪ ಅವರು ಸಂಖ್ಯಾಶಾಸ್ತ್ರದ ಪ್ರಕಾರ ‘ಯಡ್ಯೂರಪ್ಪ’ ಅಂತಾ ಸಹಿ ಮಾಡುತ್ತಿದ್ದರು. ಇದೊಂದು ಕಾಂಗ್ರೆಸ್ ಸಂಚು. ಚೌಕಿದಾರರು ವರ್ಸಸ್ ಚೋರ್‍ದಾರರ ನಡುವಿನ ಚುನಾವಣೆ ಇದು ಎಂದು ಕಾಂಗ್ರೆಸ್ಸಿಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ:ಬಿಎಸ್ ವೈ ಡೈರಿ ಪ್ರಕರಣ- ಇದು ಜೋಕ್ ಆಫ್ ದಿ ಇಯರ್ ಅಂದ್ರು ಬಿ.ವೈ.ರಾಘವೇಂದ್ರ

    ಮೂರು ಬಾರಿ ಸಹಿ ಬದಲಾವಣೆ:
    ಮೊದಲು ಬಿಎಸ್‍ವೈ “ಯಡಿಯೂರಪ್ಪ ” ಎಂದು ಸಹಿ ಮಾಡುತ್ತಿದ್ದರು. ಬಳಿಕ ಸಂಖ್ಯಾಶಾಸ್ತ್ರದ ಪ್ರಕಾರ “ಯಡ್ಯೂರಪ್ಪ” ಎಂದು ಬದಲಾಯಿಸಿಕೊಂಡರು. ಆದರೇ ಇತ್ತೀಚಿಗೆ ಮತ್ತೆ “ಬಿ.ಎಸ್.ಯಡಿಯೂರಪ್ಪ” ಎಂದು ಮತ್ತೆ ಹಳೆಯ ಸಹಿಯನ್ನೇ ಮಾಡುತ್ತಿದ್ದಾರೆ ಎಂದು ಸಿ.ಟಿ ರವಿ ತಿಳಿಸಿದ್ದಾರೆ.  ಇದನ್ನೂ ಓದಿ:ಫೇಕ್ ಡೈರಿ ಮುದ್ರಿಸುವ ಅವಸರದಲ್ಲಿ ಕಾಂಗ್ರೆಸ್ ತಪ್ಪು ಮಾಡಿದೆ: ಬಿಎಸ್‍ವೈ ವ್ಯಂಗ್ಯ

    ಕಾಂಗ್ರೆಸ್ ಮುಂದಿಟ್ಟ ಪ್ರಶ್ನೆಗಳು:
    1. ಡೈರಿ ನಿಮಗೆ ಸಿಕ್ಕಿದ್ದು ಯಾವಾಗ?
    2. ಯಾರು ಈ ಡೈರಿಯನ್ನು ತಂದುಕೊಟ್ಟರು?
    3. ಡೈರಿಯನ್ನು ಎಲ್ಲಿ ಕೊಟ್ಟರು?
    4. ಒರಿಜಿನಲ್ ಡೈರಿ ಎಲ್ಲಿ?
    5. ಏಕೆ ಇದುವರೆಗೂ ಈ ಡೈರಿ ಆದರಿಸಿ ಲೋಕಾಯುಕ್ತ ಅಥವಾ ಎಸಿಬಿಗೆ ದೂರು ಕೊಡಲಿಲ್ಲ?


    6. 2013 ಮೇ ತಿಂಗಳಿನಿಂದ ನಿಮ್ಮದೇ ಪಕ್ಷದ ಆಡಳಿತ ಇದ್ದರೂ ಯಾವುದೇ ತನಿಖೆ ನಡೆಸದೇ ಇರಲು ಕಾರಣವೇನು?
    7. ಯಡಿಯೂರಪ್ಪನವರದ್ದೆಂದು ಹೇಳಲಾದ ಡೈರಿಯು ಡಿ.ಕೆ.ಶಿವಕುಮಾರ್ ಮನೆಯಲ್ಲಿ ಪತ್ತೆಯಾಗಿದ್ದು ಹೇಗೆ? ಇದಕ್ಕೆ ಡಿ.ಕೆ.ಶಿವಕುಮಾರ್ ಉತ್ತರಿಸಬೇಕಾಗಿದೆ.
    8. ಈ ಹಿಂದೆ ಪ್ರಕರಣವೊಂದರ ಬಗ್ಗೆ ಎಸಿಬಿಗೆ ದೂರು ನೀಡಿದ್ದ ಕಾಂಗ್ರೆಸ್ ಈಗ ಏಕೆ ದೂರು ನೀಡದಿರಲು ಕಾರಣವೇನು?
    9 ಎಂಎಲ್ ಸಿ ಗೋವಿಂದರಾಜುಮನೆಯಲ್ಲಿ ಐಟಿ ಅಧಿಕಾರಿಗಳು ವಶಪಡಿಸಿಕೊಂಡ ಡೈರಿಯಲ್ಲಿ ಕಾಂಗ್ರೆಸ್ ನಾಯಕರಿಗೆ ಹಣ ಸಂದಾಯವಾಗಿತ್ತು ಎಂದು ನಮೂದಾಗಿತ್ತು. ಆಗ ಯಡಿಯೂರಪ್ಪ ಡೈರಿ ಕಾಂಗ್ರೆಸ್ ಪ್ರಾಯೋಜಕತ್ವದಲ್ಲಿ ಸೃಷ್ಟಿಯಾಗಿದ್ದು ನಿಜವಲ್ಲವೇ?
    10. ಡೈರಿ ಪ್ರಕರಣ ಜನಲೋಕಪಾಲ್ ತನಿಖೆಗೆ ಸೂಕ್ತವಾದುದು ಎಂದು ಕಾಂಗ್ರೆಸ್ ಹೇಳುತ್ತಿದೆ. ಆರೋಪ ಮಾಡಿದವರು ದೂರು ನೀಡಬೇಕೆ ಅಥವಾ ದೂರಿಗೆ ಒಳಗಾದವರು ನೀಡಬೇಕೆ? ಎಂದು ಪ್ರಶ್ನಿಸಿದ್ದಾರೆ.

    ಬಿಎಸ್‍ವೈ ಡೈರಿ ಪ್ರಕರಣ ದಿನಕ್ಕೊಂದು ಹೊಸ ತಿರುವು ಪಡೆಯುತ್ತಿದೆ. ಒಂದೆಡೆ ಕಾಂಗ್ರೆಸ್ ಬಿಎಸ್‍ವೈ ವಿರುದ್ಧ ಆರೋಪಿಸುತ್ತಿದ್ದಾರೆ. ಆದ್ರೆ ಇನ್ನೊಂದೆಡೆ ಬಿಜೆಪಿ ನಾಯಕರು ಬಿಎಸ್‍ವೈ ಪರ ನಿಂತು ಇದು ಕಾಂಗ್ರೆಸ್ ಅವರ ಸಂಚು ಎಂದು ಕಿಡಿಕಾರುತ್ತಿದ್ದಾರೆ.

  • ಬಿಎಸ್ ವೈ ಡೈರಿ ಪ್ರಕರಣ- ಇದು ಜೋಕ್ ಆಫ್ ದಿ ಇಯರ್ ಅಂದ್ರು ಬಿ.ವೈ.ರಾಘವೇಂದ್ರ

    ಬಿಎಸ್ ವೈ ಡೈರಿ ಪ್ರಕರಣ- ಇದು ಜೋಕ್ ಆಫ್ ದಿ ಇಯರ್ ಅಂದ್ರು ಬಿ.ವೈ.ರಾಘವೇಂದ್ರ

    – ತಂದೆಯವರಿಗೆ ಡೈರಿ ಬರೆಯುವ ಅಭ್ಯಾಸವಿಲ್ಲ

    ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಡೈರಿ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ ಪುತ್ರ ಬಿ.ವೈ.ರಾಘವೇಂದ್ರ ಅವರು, ಇದು ಜೋಕ್ ಆಫ್ ದಿ ಇಯರ್. ಹಿಟ್ ಅಂಡ್ ರನ್ ಥರ ಇದು. ಡೈರಿ ಬರೆಯುವ ಅಭ್ಯಾಸವೇ ಯಡಿಯೂರಪ್ಪ ಅವರಿಗೆ ಇಲ್ಲ ಎಂದು ತಿಳಿಸಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಹಿಂದೆ ಟೆಂಪಲ್ ರನ್ ಮಾಡಿ ಡ್ರಾಮಾ ಮಾಡುವ ಪ್ರಯತ್ನ ಕಾಂಗ್ರೆಸ್ ನಾಯಕರು ಮಾಡಿದ್ದರು. ವಿರೋಧ ಪಕ್ಷದವರಿಗೆ ಕನಾಟಕದಲ್ಲಿ ಬಿಜೆಪಿಯನ್ನು ಕಟ್ಟಿಹಾಕಲು ಸಾಧ್ಯವಿಲ್ಲ. ಆದರಿಂದ ಯಡಿಯೂರಪ್ಪ ಅವರ ಮೇಲೆ ಈ ರೀತಿ ಸುಳ್ಳು ಆರೋಪ ಮಾಡುತ್ತಿದ್ದಾರೆ. ಪ್ರತೀ ಪೇಜಿಗೂ ಸೈನ್ ಹಾಕಿ ಭಗವದ್ಗೀತೆಯಲ್ಲಿ ಇಡೋ ಅಗತ್ಯವೇನಿತ್ತು? ಅವರ ಹಸ್ತಾಕ್ಷರ ಸೃಷ್ಟಿ ಮಾಡಿ ಇದನ್ನು ಮಾಡಿದ್ದಾರೆ. ಕಾಂಗ್ರೆಸ್‍ನವರು ವಾಮ ಮಾರ್ಗ ಉಪಯೋಗಿಸುತ್ತಿದ್ದಾರೆ. ಡೈರಿ 2009ರಲ್ಲಿ ಈ ಪುನ್ಯಾತ್ಮರಿಗೆ ಸಿಕ್ಕಿದೆ ಅಂದಮೇಲೆ ಇದೂವರೆಗೂ ಅದನ್ನ ಇಟ್ಟುಕೊಂಡು ಏನ್ ಮಾಡಿದರು? ಕಳೆದ ಐದು ವರ್ಷ ಸಿದ್ದರಾಮಯ್ಯ ಸರ್ಕಾರ ಏನು ನಿದ್ದೆ ಮಾಡ್ತಿದ್ದರಾ ಎಂದು ಪ್ರಶ್ನಿಸಿ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ:1800 ಕೋಟಿ ಬಿಎಸ್‌ವೈ ಡೈರಿ ಬಾಂಬ್ – ಗಡ್ಕರಿಗೆ 150 ಕೋಟಿ, ಅಡ್ವಾಣಿಗೆ 50 ಕೋಟಿ!

    2009ರಲ್ಲಿ ಯಡಿಯೂರಪ್ಪ ಅವರ ಮೇಲೆ ಯಾವ ಪ್ರಕರಣ ಇತ್ತು? ಎಂದು ವಿರೋಧ ಪಕ್ಷಗಳ ಮುಂದೆ ಪ್ರಶ್ನೆ ಇಟ್ಟಿದ್ದಾರೆ. ಹಾಗೆಯೇ ಇದರಿಂದ ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಬೀರೋದಿಲ್ಲ. ಇದರ ಬಗ್ಗೆ ತನಿಖೆ ನಡೆಸಬೇಕು. ಯೋಗ್ಯತೆ ಬಿಟ್ಟು ವಾಮಮಾರ್ಗದಲ್ಲಿ ಗೆಲ್ಲುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

  • ಯೋಧರ ಬಲಿದಾನವನ್ನು ಬಿಎಸ್‍ವೈ ರಾಜಕಾರಣಕ್ಕೆ ಬಳಸುತ್ತಿಲ್ಲ: ಬಿ.ವೈ.ವಿಜಯೇಂದ್ರ

    ಯೋಧರ ಬಲಿದಾನವನ್ನು ಬಿಎಸ್‍ವೈ ರಾಜಕಾರಣಕ್ಕೆ ಬಳಸುತ್ತಿಲ್ಲ: ಬಿ.ವೈ.ವಿಜಯೇಂದ್ರ

    ಮೈಸೂರು: ಯೋಧರ ಬಲಿದಾನವನ್ನು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ರಾಜಕಾರಣಕ್ಕೆ ಬಳಸಿಲ್ಲ. ಅವರ ಹೇಳಿಕೆಯನ್ನು ಕೆಲವರು ತಿರುಚಿ ಅಪಾರ್ಥ ಮಾಡಿಕೊಂದಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ವೈ ವಿಜಯೇಂದ್ರ ಅವರು ತಮ್ಮ ತಂದೆಯ ಮಾತನ್ನು ಸಮರ್ಥಿಸಿಕೊಂಡಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ 22 ಸೀಟನ್ನು ಗೆಲ್ಲುತ್ತೇವೆ ಎನ್ನುವ ಮಾತನ್ನು ಬಿಎಸ್‍ವೈ ಅವರು ನಿನ್ನೆ ಮೊನ್ನೆಯಿಂದ ಹೇಳುತ್ತಿಲ್ಲ. ಸಮ್ಮಿಶ್ರ ಸರ್ಕಾರ ಬರುವ ಮೊದಲು ಅವರು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವಾಗಲು ಬಿಜೆಪಿ ರಾಜ್ಯದಲ್ಲಿ 22 ಸೀಟು ಗೆದ್ದು ಪ್ರಧಾನಿ ಮೋದಿಯವರಿಗೆ ಮತ್ತೆ ಪ್ರಧಾನಿಯಾಗಲು ಸಹಾಯ ಮಾಡಬೇಕು ಎಂದಿದ್ದರು. ಆದ್ರೆ ಬಿಎಸ್‍ವೈ ಅವರ ಹೇಳಿಕೆಯನ್ನು ಕೆಲವರು ತಿರುಚಿ, ಅದಕ್ಕೆ ಬೇರೆ ಅರ್ಥವನ್ನೇ ಕಲ್ಪಿಸುತ್ತಿದ್ದಾರೆ ಅಂತ ಕಿಡಿಕಾರಿದ್ದಾರೆ.

    ಸುಮಲತಾ ಅವರು ಮಂಡ್ಯದಿಂದ ಸ್ಪರ್ಧೆ ಮಾಡುವ ವಿಚಾರವಾಗಿ ಪ್ರತಿಕ್ರಿಯಿಸಿ, ನಮ್ಮದು ರಾಷ್ಟ್ರೀಯ ಪಕ್ಷ ನಮ್ಮ ಅಭ್ಯರ್ಥಿಯೇ ಮಂಡ್ಯದಲ್ಲಿ ಸ್ಪರ್ಧೆ ಮಾಡ್ತಾರೆ. ಕಳೆದ ಚುನಾವಣೆಯಲ್ಲಿ ನಮ್ಮ ಪಕ್ಷ 2 ಲಕ್ಷದಷ್ಟು ಮತ ಪಡೆದಿದೆ. ಈ ಬಾರಿ ಮಂಡ್ಯದಲ್ಲಿ ಗೆಲ್ಲುವ ವಿಶ್ವಾಸ ಇದೆ. ನಾನು ಎಲ್ಲಿಯೂ ಲೋಕಸಭಾ ಅಭ್ಯರ್ಥಿ ಅಲ್ಲ. ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷ ಸಂಘಟನೆ ಮಾಡ್ತಿನಿ ಎಂದು ಬಿಜೆಪಿಯಿಂದ ಸುಮಲತಾ ಅವರನ್ನು ಬೆಂಬಲಿಸುವುದಿಲ್ಲ ಎಂದು ಪರೋಕ್ಷವಾಗಿ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮತ್ತೆ ಬಿಎಸ್‍ವೈ ಎಡವಟ್ಟು

    ಮತ್ತೆ ಬಿಎಸ್‍ವೈ ಎಡವಟ್ಟು

    ತುಮಕೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅದ್ಯಾಕೋ ಇತ್ತೀಚೆಗೆ ಮೇಲಿಂದ ಮೇಲೆ ಎಡವಟ್ಟು ಮಾಡ್ಕೊಳ್ತಾನೆ ಇದ್ದಾರೆ. ಕರ್ನಾಟಕ ರಾಜ್ಯದಲ್ಲಿ 120ಕ್ಕೂ ಹೆಚ್ಚು ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲಬೇಕು ಅಂತ ಹೇಳಿಕೆ ನೀಡಿ ಇದೀಗ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.

    ಜಿಲ್ಲೆಯಲ್ಲಿ ಇಂದು ನಡೆದ ಬಿಜೆಪಿ ವಿಜಯ ಸಂಕಲ್ಪ ಬೈಕ್ ರ್ಯಾಲಿಗೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡೋ ವೇಳೆ ಈ ರೀತಿಯ ಎಡವಟ್ಟು ಹೇಳಿಕೆ ನೀಡಿದ್ದಾರೆ. ಮಾತಿನ ಭರದಲ್ಲಿ ಕರ್ನಾಟಕದಲ್ಲಿ 120 ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕೆಂದು ಹೇಳಿ, ಬಳಿಕ ರಾಜ್ಯದಲ್ಲಿ ಎಷ್ಟು ಸ್ಥಾನ ಗೆಲ್ಲುತ್ತೀರಾ ಅನ್ನೋ ಮಾಧ್ಯಮದವರ ಪ್ರಶ್ನೆಗೆ 22 ಸ್ಥಾನ ಗೆಲ್ಲುತ್ತೀವಿ ಅಂತ ಹೇಳಿ ಮೈಕ್ ಸರಿಸಿ ಮಾತು ಮುಗಿಸಿದರು.

    ಮಾತಿನ ಭರದಲ್ಲಿ ರಾಜ್ಯದಲ್ಲಿ 22 ಎನ್ನುವ ಬದಲು 120 ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಗೆದ್ದು, ಪ್ರಧಾನಿಯವರ ಕೈ ಬಲ ಪಡಿಸಬೇಕಾಗಿದೆ. 300ಕ್ಕೂ ಹೆಚ್ಚು ಸ್ಥಾನ ಗೆದ್ದು ಮೋದಿಯನ್ನು ಮತ್ತೆ ಪ್ರಧಾನಿ ಮಾಡಬೇಕು. ರಾಜ್ಯದಲ್ಲಿ ಕನಿಷ್ಟ 22 ಸ್ಥಾನ ಗೆಲ್ಲುವ ವಿಶ್ವಾಸವಿದೆ. ಇನ್ನೊಂದು ವಾರದಲ್ಲಿ ಅಮಿತ್ ಶಾ ಭೇಟಿ ಮಾಡಿ ಅಭ್ಯರ್ಥಿಗಳನ್ನು ಅಂತಿಮಗೊಳಿಸುತ್ತೇವೆ ಎಂದು ಹೇಳಿದ್ದಾರೆ.

    ಮಂಡ್ಯದಲ್ಲಿ ನಟಿ ಸುಮಲತಾ ಸ್ಪರ್ಧೆ ವಿಚಾರ ಪ್ರತಿಕ್ರಿಯಿಸಿ, ಆ ಬಗ್ಗೆ ನಾವು ಇನ್ನು ಚರ್ಚೆ ಮಾಡಿಲ್ಲ, ನೋಡೋಣ. ತುಮಕೂರು ಲೋಕಸಭೆಗೆ ಅಭ್ಯರ್ಥಿ ಆಯ್ಕೆ ಬಗ್ಗೆ ತೀರ್ಮಾನ ಅಂತಿಮಗೊಳಿಸಿಲ್ಲ, ಚರ್ಚೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕರ್ನಾಟಕದಲ್ಲಿ ತುಘಲಕ್ ದರ್ಬಾರ್ ನಡೆದಿದೆ: ಬಿಎಸ್‍ವೈ ಕಿಡಿ

    ಕರ್ನಾಟಕದಲ್ಲಿ ತುಘಲಕ್ ದರ್ಬಾರ್ ನಡೆದಿದೆ: ಬಿಎಸ್‍ವೈ ಕಿಡಿ

    ಧಾರವಾಡ: ಸಮ್ಮಿಶ್ರ ಸರ್ಕಾರದಿಂದ ರಾಜ್ಯದಲ್ಲಿ ತುಘಲಕ್ ದರ್ಬಾರ್ ನಡೆದಿದೆ, ಭಷ್ಟಾಚಾರ ತುಂಬಿ ತುಳುಕುತ್ತಿದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಕಿಡಿಕಾರಿದ್ದಾರೆ.

    ಜಿಲ್ಲೆಯಲ್ಲಿ ನಡೆಯುತ್ತಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಆಗಮಿಸಿದ್ದಾರೆ. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿಎಂ ತಾವು ಹೇಳಿದಂತೆ ನಡೆದುಕೊಂಡಿಲ್ಲ. ಪ್ರತಿಯೊಂದು ವಿಷಯದಲ್ಲೂ ಗೊಂದಲ ಉಂಟುಮಾಡಿಕೊಳ್ತಾರೆ. ರಾಜ್ಯದಲ್ಲಿ ಬಹುತೇಕ ತಾಲೂಕಿನಲ್ಲಿ ಜನ ಬರಗಾಲದಿಂದ ತತ್ತರಿಸಿ ಸಂಕಷ್ಟದಲ್ಲಿದ್ದಾರೆ. ಈ ವೇಳೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದ್ದಾರೆ. ಇದರಿಂದ ಸಾರ್ವಜನಿಕರ ಮೇಲೆ ಭಾರ ಬೀಳೋದಿಲ್ವ? ಈ ರೀತಿ ತೆರಿಗೆ ಹೆಚ್ಚಳ ಮಾಡಿ ಎಲ್ಲದಕ್ಕೂ ಸಾಲಮನ್ನಾ ಅಂತ ಕುಂಟು ನೆಪ ಹೇಳುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಇಂದು ಸಚಿವರೊಬ್ಬರ ಇಲಾಖೆಯಲ್ಲೇ ಸುಮರು 76 ಲಕ್ಷ ರೂ. ಸಿಕ್ಕಿದೆ, ಇದು ಎಷ್ಟರ ಮಟ್ಟಿಗೆ ಸರಿ. ಈ ವಿಚಾರವಾಗಿ ತಕ್ಷಣ ಕ್ರಮ ತೆಗೆದುಕೊಳ್ಳೋದನ್ನ ಬಿಟ್ಟು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಬೇರೆ ಉತ್ತರ ನೀಡುತ್ತಾರೆ. ಸರ್ಕಾರದಲ್ಲಿ ಭಷ್ಟಾಚಾರ ತುಂಬಿ ತುಳುಕುತ್ತಿದೆ, ಅಭಿವೃದ್ಧಿ ಕಾರ್ಯ ಸ್ಥಗಿತವಾಗ್ತಿದೆ. ರಾಜ್ಯದಲ್ಲಿ ಒಂದು ರೀತಿ ತುಘಲಕ್ ದರ್ಬಾರ್ ನಡೆದಿದ್ದು, ಇದನ್ನ ನಾನು ಖಂಡಿಸುತ್ತೇನೆ. ಬರಗಾಲದಿಂದ ಜನ ಉದ್ಯೋಗವಿಲ್ಲದೆ ವಲಸೆ ಹೋಗ್ತಿದ್ದಾರೆ. ಈ ಬಗ್ಗೆ ಅನುದಾನ ಬಿಡುಗಡೆ ಮಾಡುವ ಯಾವುದೇ ಕೆಲಸವನ್ನು ಸರ್ಕಾರ ಮಾಡ್ತಿಲ್ಲ ಎಂದು ಬಿಎಸ್‍ವೈ ಹರಿಹಾಯ್ದಿದ್ದಾರೆ.

    ಧಾರವಾಡದಲ್ಲಿ ಸಮ್ಮೇಳನ ಅದ್ಧೂರಿಯಾಗಿ ನಡೆಯುತ್ತಿದೆ. ಸನ್ಮಾನ ಕಾರ್ಯಕ್ರಮ ಇದೆ, ನನನ್ನು ಆಹ್ವಾನಿಸಿದ್ದಾರೆ ಅದಕ್ಕೆ ಬಂದಿದ್ದೇನೆ. ಮಾಧ್ಯಮದವರು ಕಳೆದ ಮೂರು ದಿನಗಳಿಂದ ಈ ಕಾರ್ಯಕ್ರಮಕ್ಕೆ ಸಹಕಾರ ಕೊಡುತ್ತಿರೋದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

    ಸ್ಯಾಂಡಲ್‍ವುಡ್ ಸ್ಟಾರ್ ನಟರ ಮೇಲೆ ಐಟಿ ದಾಳಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ತೆರಿಗೆ ಅಧಿಕಾರಿಗಳಿಗೆ ಯಾವುದು ಸೂಕ್ತ ಅನಿಸುತ್ತದೆಯೋ ಅದನ್ನ ಮಾಡ್ತಾರೆ. ಈ ಬಗ್ಗೆ ಕೇಂದ್ರವನ್ನು ಮಧ್ಯ ತರೋದು ಸರಿಯಲ್ಲ. ಈ ವಿಚಾರವಾಗಿ ತನಿಖೆ ಆಗುತ್ತಿದೆ. ಇದಕ್ಕೆ ಯಾವ ನಟರು ವಿರೋಧ ಮಾಡ್ತಿಲ್ಲ, ಅಧಿಕಾರಿಗಳಿಗೆ ಸಹಕರಿಸುತ್ತಿದ್ದಾರೆ. ಇದರ ಬಗ್ಗೆ ನಾನು ಹೆಚ್ಚು ಮಾತನಾಡಲ್ಲ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv