Tag: babar

  • ಪಾಕ್‌ಗೆ ವರವಾದ ವರುಣ – ಕಿವೀಸ್‌ ವಿರುದ್ಧ 21 ರನ್‌ಗಳ ಜಯ; ಸೆಮೀಸ್‌ ಆಸೆ ಜೀವಂತ

    ಪಾಕ್‌ಗೆ ವರವಾದ ವರುಣ – ಕಿವೀಸ್‌ ವಿರುದ್ಧ 21 ರನ್‌ಗಳ ಜಯ; ಸೆಮೀಸ್‌ ಆಸೆ ಜೀವಂತ

    ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್‌ ಟೂರ್ನಿಯ 35ನೇ ಪಂದ್ಯದಲ್ಲಿ ಮಳೆ ಕಾರಣದಿಂದಾಗಿ ನ್ಯೂಜಿಲೆಂಡ್‌ ವಿರುದ್ಧ ಪಾಕಿಸ್ತಾನ (PAK vs NZ) 21 ರನ್‌ಗಳ ಜಯಗಳಿಸಿದೆ. ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದ್ದರಿಂದ ಡಕ್‌ವರ್ತ್‌ ನಿಯಮದ ಪ್ರಕಾರ ಪಾಕಿಸ್ತಾನ ಗೆಲುವು ದಾಖಲಿಸಿದೆ. ಆ ಮೂಲಕ ಪಾಕ್‌ನ ಸೆಲಿ-ಫೈನಲ್‌ ಕನಸು ಇನ್ನೂ ಜೀವಂತವಾಗಿ ಉಳಿದಿದೆ.

    ಆರಂಭದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್ 50 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 401 ರನ್ ಬಾರಿಸಿತ್ತು. ಆ ಮೂಲಕ ಪಾಕಿಸ್ತಾನಕ್ಕೆ ಸವಾಲಿನ 402 ರನ್‌ಗಳ ಗುರಿ ನೀಡಿತ್ತು. ಗುರಿ ಬೆನ್ನತ್ತಿದ ಪಾಕಿಸ್ತಾನ ಆರಂಭಿಕ ಆಘಾತ ಎದುರಿಸಿತು. ಅಬ್ದುಲ್ಲಾ ಶಫೀಕ್ ಕೇವಲ 4 ರನ್‌ಗಳಿಗೆ ಔಟಾದರು. ನಂತರ ಬಂದ ಫಖರ್ ಜಮಾನ್ (Fakhar Zaman) (81 ಬಾಲ್‌, 126 ರನ್‌, 11 ಸಿಕ್ಸರ್‌, 8 ಫೋರ್) ಹಾಗೂ ಬಾಬರ್‌ ಆಜಾಮ್‌ (Babar) (63 ಬಾಲ್‌, 66 ರನ್‌, 2 ಸಿಕ್ಸರ್‌, 6 ಫೋರ್‌) ಉತ್ತಮ ಜೊತೆಯಾಟವಾಗಿ ಮಿಂಚಿದರು. ಇದನ್ನೂ ಓದಿ: ಪಾಕ್‌-ಕಿವೀಸ್‌ ಹೈವೋಲ್ಟೇಜ್‌ ಪಂದ್ಯಕ್ಕೆ ಮಳೆ ಅಡ್ಡಿ – ಅಭಿಮಾನಿಗಳಿಗೆ ನಿರಾಸೆ

    141 ಬಾಲ್‌ಗಳಿಗೆ 194 ರನ್‌ ಬಾರಿಸುವ ಮೂಲಕ ಉತ್ತಮ ಜೊತೆಯಾಟ ನೀಡಿ ಪಾಕ್‌ ಗೆಲುವಿಗೆ ಭರವಸೆ ಮೂಡಿಸಿದ್ದರು. ಪಾಕ್‌ ಬ್ಯಾಟರ್‌ಗಳ ಉತ್ತಮ ಪ್ರದರ್ಶನಕ್ಕೆ ಮಳೆ ಎರಡು ಬಾರಿ ಅಡ್ಡಿಪಡಿಸಿತು. ಮೊದಲ ಬಾರಿಗೆ ಮಳೆ ಬಂದಾಗ, ಡಿಎಲ್‌ಎಸ್‌ ನಿಯಮದ ಪ್ರಕಾರ ಪಾಕ್‌ಗೆ 41 ಓವರ್‌ಗಳಿಗೆ 342 ರನ್‌ ಗುರಿ ನೀಡಲಾಯಿತು. ಇದೀಗ ಎರಡನೇ ಸಲ ಮಳೆ ಬಂದು ಪಂದ್ಯ ನಿಂತ ವೇಳೆಗೆ ಪಾಕಿಸ್ತಾನ ತಂಡ, 25.3 ಓವರ್‌ಗಳಿಗೆ ಒಂದು ವಿಕೆಟ್‌ ನಷ್ಟಕ್ಕೆ 200 ರನ್‌ ಗಳಿಸಿತು. ಪಾಕ್ ಗೆಲ್ಲಲು ಇನ್ನೂ 93 ಎಸೆತಗಳಲ್ಲಿ 143 ರನ್‌ ಗಳಿಸಬೇಕಾಗಿತ್ತು. ಮಳೆ ನಿಲ್ಲದ ಕಾರಣ, ಪಾಕಿಸ್ತಾನ ತಂಡ ಡಿಎಲ್‌ಎಸ್‌ ನಿಯಮದ ಪ್ರಕಾರ ನ್ಯೂಜಿಲೆಂಡ್‌ ತಂಡಕ್ಕಿಂತ 21 ರನ್‌ಗಳ ಮುಂದಿತ್ತು. ಹೀಗಾಗಿ 21 ರನ್‌ಗಳ ಜಯ ಸಾಧಿಸಿದೆ.

    ಇದಕ್ಕೂ ಮುನ್ನ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್ 50 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 401 ರನ್ ಬಾರಿಸಿತ್ತು. 68 ರನ್‌ಗಳಿಗೆ ಮೊದಲ ವಿಕೆಟ್ ಕಳೆದುಕೊಂಡಿದ್ದ ಕಿವೀಸ್ ಬಳಿಕ 2ನೇ ವಿಕೆಟ್‌ಗೆ ಬೃಹತ್ ಮೊತ್ತ ಪೇರಿಸಿತು. ಸ್ಫೋಟಕ ಇನ್ನಿಂಗ್ಸ್ ಆರಂಭಿಸಿದ ಕೇನ್ ವಿಲಿಯಮ್ಸನ್ ಹಾಗೂ ರಚಿನ್ ರವೀಂದ್ರ ಜೋಡಿ 2ನೇ ವಿಕೆಟ್‌ಗೆ 142 ಎಸೆತಗಳಲ್ಲಿ ಬರೋಬ್ಬರಿ 180 ರನ್ ಬಾರಿಸಿತ್ತು. ಇದನ್ನೂ ಓದಿ: ಕೊಹ್ಲಿಗೂ ಮುನ್ನವೇ ಸಚಿನ್‌ ಶತಕ ದಾಖಲೆ ಉಡೀಸ್‌ ಮಾಡಿದ ರಚಿನ್‌..!

    ರಚಿನ್ ರವೀಂದ್ರ (Rachin Ravindra) 108 ರನ್ (94 ಎಸೆತ, 15 ಬೌಂಡರಿ, 1 ಸಿಕ್ಸರ್) ಚಚ್ಚುವ ಮೂಲಕ 23ನೇ ವಯಸ್ಸಿಗೆ ವಿಶ್ವಕಪ್‌ನಲ್ಲಿ 3 ಶತಕ ಸಿಡಿಸಿ, 2 ಶತಕ ಸಿಡಿಸಿದ್ದ ಸಚಿನ್ ತೆಂಡೂಲ್ಕರ್ ದಾಖಲೆ ನುಚ್ಚು ನೂರು ಮಾಡಿದರು. ಇದರೊಂದಿಗೆ ಮೊಣಕಾಲು ಗಾಯದ ಸಮಸ್ಯೆಯಿಂದ ಚೇತರಿಸಿಕೊಂಡ ನಂತರ ಮೊದಲ ಪಂದ್ಯವಾಡಿದ ಕೇನ್ ವಿಲಿಯಮ್ಸನ್ 95 ರನ್ (79 ಎಸೆತ, 10 ಬೌಂಡರಿ, 2 ಸಿಕ್ಸರ್) ಸಿಡಿಸಿ ಮಿಂಚಿದರು. ಜೊತೆಗೆ ಮಧ್ಯಮ ಕ್ರಮಾಂಕದಲ್ಲಿ ಡೇರಿಲ್ ಮಿಚೆಲ್ ಹಾಗೂ ಮಾರ್ಕ್ ಚಾಪ್ಮನ್ ಜೋಡಿ 32 ಎಸೆತಗಳಲ್ಲಿ 57 ರನ್, ಮಿಚೆಲ್ ಸ್ಯಾಂಟ್ನರ್ ಮತ್ತು ಗ್ಲೇನ್ ಫಿಲಿಪ್ಸ್ ಜೋಡಿ 26 ಎಸೆತಗಳಲ್ಲಿ 43 ರನ್‌ಗಳ ಜೊತೆಯಾಟ ನೀಡುವ ಮೂಲಕ ತಂಡದ ಮೊತ್ತ 400 ರನ್ ಗಡಿದಾಟಿಸುವಲ್ಲಿ ಯಶಸ್ವಿಯಾದರು.

    ಡೆವೋನ್ ಕಾನ್ವೆ 35 ರನ್, ಡೇರಿಲ್ ಮಿಚೆಲ್ 29 ರನ್, ಮಾರ್ಕ್ ಚಾಪ್ಮನ್ 39 ರನ್, ಗ್ಲೇನ್ ಫಿಲಿಪ್ಸ್ 41 ರನ್, ಮಿಚೆಲ್ ಸ್ಯಾಂಟ್ನರ್ 26 ರನ್, ಟಾಮ್ ಲಾಥಮ್ 2 ರನ್ ಗಳಿಸಿದರು. ಪಾಕಿಸ್ತಾನ ಪರ ಮೊಹಮ್ಮದ್ ವಸೀಮ್ 3 ವಿಕೆಟ್ ಕಿತ್ತರೆ, ಹಸನ್ ಅಲಿ, ಇಫ್ತಿಕಾರ್ ಅಹ್ಮದ್ ಮತ್ತು ಹ್ಯಾರಿಸ್ ರೌಫ್ ತಲಾ ಒಂದೊಂದು ವಿಕೆಟ್ ಪಡೆದರು. ಇದನ್ನೂ ಓದಿ: World Cup 2023: ಶತಕ ಸಿಡಿಸಿ ಮೆರೆದಾಡಿದ ರಚಿನ್‌ – ಪಾಕಿಸ್ತಾನಕ್ಕೆ 402 ರನ್‌ಗಳ ಗುರಿ

  • ಪಾಕ್‌-ಕಿವೀಸ್‌ ಹೈವೋಲ್ಟೇಜ್‌ ಪಂದ್ಯಕ್ಕೆ ಮಳೆ ಅಡ್ಡಿ – ಅಭಿಮಾನಿಗಳಿಗೆ ನಿರಾಸೆ

    ಪಾಕ್‌-ಕಿವೀಸ್‌ ಹೈವೋಲ್ಟೇಜ್‌ ಪಂದ್ಯಕ್ಕೆ ಮಳೆ ಅಡ್ಡಿ – ಅಭಿಮಾನಿಗಳಿಗೆ ನಿರಾಸೆ

    ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್‌ (Pakistan vs New Zealand) ನಡುವಿನ ಹೈವೋಲ್ಟೇಜ್‌ ಕದನಕ್ಕೆ ಮಳೆ ಅಡ್ಡಿಯುಂಟು ಮಾಡಿದೆ.

    ಕಿವೀಸ್‌ ನೀಡಿರುವ 400 ರನ್‌ಗಳ ಗುರಿ ಬೆನ್ನತ್ತಿರುವ ಪಾಕ್‌ ತಂಡ ಸ್ಫೋಟಕ ಇನ್ನಿಂಗ್ಸ್‌ ಆರಂಭಿಸಿದೆ. 4 ರನ್‌ಗಳಿಗೆ ಮೊದಲ ವಿಕೆಟ್‌ ಕಳೆಕೊಂಡರೂ ಫಖರ್‌ ಝಮಾನ್‌ ಮತ್ತು ನಾಯಕ ಬಾಬರ್‌ ಆಜಂ ಶತಕದ ಜೊತೆಯಾಟದಿಂದ 21.3 ಓವರ್‌ಗಳಲ್ಲಿ 160 ರನ್‌ ಗಳಿಸಿತ್ತು. ಈ ವೇಳೆ ಮಳೆ ಅಡ್ಡಿಯುಂಟುಮಾಡಿದೆ. ಸದ್ಯ ಮೈದಾನ ನೀರಿನಿಂದ ನೆನೆಯದಂತೆ ಟಾರ್ಪಾಲ್‌ಗಳಿಂದ ಕವರ್‌ ಮಾಡಲಾಗಿದೆ. ನ್ಯೂಜಿಲೆಂಡ್‌ ತಂಡ 21 ಓವರ್‌ಗಳಲ್ಲಿ 1 ವಿಕೆಟ್‌ಗೆ 133 ರನ್‌ ಗಳಿಸಿತ್ತು. ಆದ್ರೆ ಪಾಕಿಸ್ತಾನ 1 ವಿಕೆಟ್‌ಗೆ 159 ರನ್‌ ಬಾರಿಸಿದೆ. ಇದನ್ನೂ ಓದಿ: ಕೊಹ್ಲಿಗೂ ಮುನ್ನವೇ ಸಚಿನ್‌ ಶತಕ ದಾಖಲೆ ಉಡೀಸ್‌ ಮಾಡಿದ ರಚಿನ್‌..!

    213 ಓವರ್‌ನಲ್ಲಿ ಡಕ್ವರ್ತ್‌ ಲೂಯಿಸ್‌ ನಿಯಮಕ್ಕೆ (ಡಿಎಸ್‌ಎಲ್‌) 150 ರನ್‌ ಸಮಾನ ಸ್ಕೋರ್‌ ಆಗಿದೆ. ಆದ್ರೆ ಪಾಕಿಸ್ತಾನ 10 ರನ್‌ ಮುಂದಿದೆ. ಸದ್ಯ ಓವರ್‌ ಕಡಿತದ ಬಗ್ಗೆ ಇನ್ನೂ ಮಾತುಕತೆ ನಡೆದಿಲ್ಲ. ಒಂದು ವೇಳೆ ಡಕ್ವರ್ತ್‌ ಲೂಯಿಸ್‌ ನಿಯಮ ಅನ್ವಯಿಸಿದರೂ ಅದು ಪಾಕ್‌ ತಂಡಕ್ಕೆ ವರದಾನವಾಗುವ ಸಾಧ್ಯತೆಗಳಿವೆ.

    ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ್ದ ಕಿವೀಸ್‌ ಪಡೆ 50 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 401 ರನ್ ಪೇರಿಸಿದೆ. 68 ರನ್‌ಗಳಿಗೆ ಮೊದಲ ವಿಕೆಟ್ ಕಳೆದುಕೊಂಡಿದ್ದ ಕಿವೀಸ್ ಬಳಿಕ 2ನೇ ವಿಕೆಟ್‌ಗೆ ಬೃಹತ್ ಮೊತ್ತ ಪೇರಿಸಿತು. ಸ್ಫೋಟಕ ಇನ್ನಿಂಗ್ಸ್ ಆರಂಭಿಸಿದ ಕೇನ್ ವಿಲಿಯಮ್ಸನ್ ಹಾಗೂ ರಚಿನ್ ರವೀಂದ್ರ ಜೋಡಿ 2ನೇ ವಿಕೆಟ್‌ಗೆ 142 ಎಸೆತಗಳಲ್ಲಿ ಬರೋಬ್ಬರಿ 180 ರನ್ ಬಾರಿಸಿತ್ತು. ರಚಿನ್ ರವೀಂದ್ರ 108 ರನ್ (94 ಎಸೆತ, 15 ಬೌಂಡರಿ, 1 ಸಿಕ್ಸರ್) ಚಚ್ಚುವ ಮೂಲಕ 23ನೇ ವಯಸ್ಸಿಗೆ ವಿಶ್ವಕಪ್‌ನಲ್ಲಿ 3 ಶತಕ ಸಿಡಿಸಿ, 2 ಶತಕ ಸಿಡಿಸಿದ್ದ ಸಚಿನ್ ತೆಂಡೂಲ್ಕರ್ ದಾಖಲೆ ನುಚ್ಚು ನೂರು ಮಾಡಿದರು. ಇದನ್ನೂ ಓದಿ: World Cup 2023: ಶತಕ ಸಿಡಿಸಿ ಮೆರೆದಾಡಿದ ರಚಿನ್‌ – ಪಾಕಿಸ್ತಾನಕ್ಕೆ 402 ರನ್‌ಗಳ ಗುರಿ

    ಇದರೊಂದಿಗೆ ಮೊಣಕಾಲು ಗಾಯದ ಸಮಸ್ಯೆಯಿಂದ ಚೇತರಿಸಿಕೊಂಡ ನಂತರ ಮೊದಲ ಪಂದ್ಯವಾಡಿದ ಕೇನ್ ವಿಲಿಯಮ್ಸನ್ 95 ರನ್ (79 ಎಸೆತ, 10 ಬೌಂಡರಿ, 2 ಸಿಕ್ಸರ್) ಸಿಡಿಸಿ ಮಿಂಚಿದರು. ಇದರೊಂದಿಗೆ ಮಧ್ಯಮ ಕ್ರಮಾಂಕದಲ್ಲಿ ಡೇರಿಲ್ ಮಿಚೆಲ್ ಹಾಗೂ ಮಾರ್ಕ್ ಚಾಪ್ಮನ್ ಜೋಡಿ 32 ಎಸೆತಗಳಲ್ಲಿ 57 ರನ್, ಮಿಚೆಲ್ ಸ್ಯಾಂಟ್ನರ್ ಮತ್ತು ಗ್ಲೇನ್ ಫಿಲಿಪ್ಸ್ ಜೋಡಿ 26 ಎಸೆತಗಳಲ್ಲಿ 43 ರನ್‌ಗಳ ಜೊತೆಯಾಟ ನೀಡುವ ಮೂಲಕ ತಂಡದ ಮೊತ್ತ 400 ರನ್ ಗಡಿದಾಟಿಸುವಲ್ಲಿ ಯಶಸ್ವಿಯಾದರು.

    ಡೆವೋನ್ ಕಾನ್ವೆ 35 ರನ್, ಡೇರಿಲ್ ಮಿಚೆಲ್ 29 ರನ್, ಮಾರ್ಕ್ ಚಾಪ್ಮನ್ 39 ರನ್, ಗ್ಲೇನ್ ಫಿಲಿಪ್ಸ್ 41 ರನ್, ಮಿಚೆಲ್ ಸ್ಯಾಂಟ್ನರ್ 26 ರನ್, ಟಾಮ್ ಲಾಥಮ್ 2 ರನ್ ಗಳಿಸಿದರು. ಪಾಕಿಸ್ತಾನ ಪರ ಮೊಹಮ್ಮದ್ ವಸೀಮ್ 3 ವಿಕೆಟ್ ಕಿತ್ತರೆ, ಹಸನ್ ಅಲಿ, ಇಫ್ತಿಕಾರ್ ಅಹ್ಮದ್ ಮತ್ತು ಹ್ಯಾರಿಸ್ ರೌಫ್ ತಲಾ ಒಂದೊಂದು ವಿಕೆಟ್ ಪಡೆದರು. ಇದನ್ನೂ ಓದಿ: ವಿಶ್ವಕಪ್‌ನಿಂದ ಹೊರಗುಳಿದ ಪಾಂಡ್ಯ – ಉಪನಾಯಕನಾಗಿ ಕೆಎಲ್ ರಾಹುಲ್ ಆಯ್ಕೆ

    ರನ್ ಏರಿದ್ದು ಹೇಗೆ?
    94 ಎಸೆತ 100 ರನ್
    138 ಎಸೆತ 150 ರನ್
    209 ಎಸೆತ 250 ರನ್
    239 ಎಸೆತ 300 ರನ್
    300 ಎಸೆತ 401 ರನ್

  • ಬಾಬರ್‌ನ ಆಕ್ರಮಣ ಭಾರತಕ್ಕೆ ಒಡ್ಡಿದ ಅಪಾಯವನ್ನು ಗುರುನಾನಕ್‌ ಅರಿತಿದ್ದರು: ಮೋದಿ

    ಬಾಬರ್‌ನ ಆಕ್ರಮಣ ಭಾರತಕ್ಕೆ ಒಡ್ಡಿದ ಅಪಾಯವನ್ನು ಗುರುನಾನಕ್‌ ಅರಿತಿದ್ದರು: ಮೋದಿ

    ಅಹಮದಾಬಾದ್: ಬಾಬರ್‌ನ ಆಕ್ರಮಣದಿಂದ ಭಾರತಕ್ಕೆ ಒಡ್ಡಿದ ಅಪಾಯವನ್ನು ಗುರುನಾನಕ್‌ ಅರಿತಿದ್ದರು ಎಂದು  ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ.

    ಗುಜರಾತಿನ ಕಚ್ ಜಿಲ್ಲೆಯ ಲಖ್‍ಪತ್ ಗುರುದ್ವಾರದಲ್ಲಿ ಗುರುಪುರಬ್ ಆಚರಣೆಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಮ್ಮ ಗುರುಗಳು ಎಚ್ಚರಿಸುತ್ತಿದ್ದ ಅಪಾಯಗಳು ಇಂದಿಗೂ ಅದೇ ರೂಪದಲ್ಲಿವೆ. ನಾವು ಜಾಗೃತರಾಗಿ ನಮ್ಮ ದೇಶವನ್ನು ರಕ್ಷಿಸಬೇಕು. ಗುರುನಾನಕ್ ದೇವ್‍ಜಿಯವರ ಆಶೀರ್ವಾದದಿಂದ ನಾವು ನಮ್ಮ ಆಕಾಂಕ್ಷೆಗಳನ್ನು ಪೂರೈಸಲು ಸಾಧ್ಯವಾಗುತ್ತಿದ್ದು, ದೇಶವು ಇನ್ನಷ್ಟು ಎತ್ತರಕ್ಕೆ ತಲುಪುತ್ತದೆ ಎಂದು ನನಗೆ ಸಂಪೂರ್ಣ ನಂಬಿಕೆ ಇದೆ ಎಂದು ಹೇಳಿದ್ದಾರೆ.

    ಸಿಖ್ ಗುರುಗಳು ಎಚ್ಚರಿಸಿದ ಅಪಾಯಗಳು ಇನ್ನೂ ಅಸ್ತಿತ್ವದಲ್ಲಿವೆ. ಔರಂಗಜೇಬ್ ವಿರುದ್ಧ ಗುರು ತೇಜ್ ಬಹದ್ದೂರ್ ಅವರ ಕೆಚ್ಚೆದೆಯ ಹೋರಾಟಗಳು ಭಯೋತ್ಪಾದನೆ ಮತ್ತು ಧಾರ್ಮಿಕ ಉಗ್ರವಾದದ ವಿರುದ್ಧ ಹೇಗೆ ಹೋರಾಡಬೇಕೆಂದು ದೇಶಕ್ಕೆ ಕಲಿಸಿದೆ ಎಂದಿದ್ದಾರೆ. ಇದನ್ನೂ ಓದಿ: ಜ.3 ರಿಂದ 15 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ: ಮೋದಿ

    ಗುರುನಾನಕ್ ದೇವ್‍ಜಿ ಬೋಧನೆಗಳ ಕುರಿತು ಮಾತನಾಡಿದ ಮೋದಿ, ಸಿಖ್ ಗುರು ಜನಿಸಿದ ಅವಧಿಯಲ್ಲಿ ವಿದೇಶಿ ಆಕ್ರಮಣಕಾರರು ಭಾರತದ ಆತ್ಮವಿಶ್ವಾಸವನ್ನು ಹದಗೆಡಿಸುತ್ತಿದ್ದರು. ಗುರುನಾನಕ್ ದೇವ್ ಜೀ ತಮ್ಮ ಜ್ಞಾನದ ಬೆಳಕನ್ನು ಹರಡದಿದ್ದರೆ, ಆಗ ಏನಾಗುತ್ತಿತ್ತು? ಗುರು ನಾನಕ್‍ಜಿ ಮತ್ತು ನಂತರದ ಗುರುಗಳು ಭಾರತದ ಪ್ರಜ್ಞೆಯನ್ನು ಬೆಳಗುವಂತೆ ಮಾಡಿರುವುದಲ್ಲದೇ, ಭಾರತವನ್ನು ಸುರಕ್ಷಿತವಾಗಿಡಲು ಮಾರ್ಗವನ್ನು ರೂಪಿಸಿದರು ಎಂದು ಸ್ಮರಿಸಿದ್ದಾರೆ. ಇದನ್ನೂ ಓದಿ: ಕೃಷಿ ಕಾಯ್ದೆಗಳ ವಿರುದ್ಧ ಹೋರಾಡಿದ್ದ ರೈತರು ಪಂಜಾಬ್‌ ಚುನಾವಣೆಯಲ್ಲಿ ಕಣಕ್ಕೆ

    ಸಿಖ್ ಗುರುಗಳ ಕೊಡುಗೆ ಕೇವಲ ಸಾಮಾಜಿಕ ಸುಧಾರಣೆಗಳು ಮತ್ತು ಆಧ್ಯಾತ್ಮಿಕತೆಗೆ ಮಾತ್ರ ಸೀಮಿತವಾಗಿಲ್ಲ. ಗುರುಗಳು ದೇಶಕ್ಕೆ ನಾಯಕತ್ವವನ್ನು ಸಹ ನೀಡಿದ್ದಾರೆ. ಗುರು ತೇಜ್ ಬಹದ್ದೂರ್ ಮಾಡಿದ ತ್ಯಾಗದಿಂದಾಗಿ ಈಗಲೂ ಅವರ 400ನೇ ಜನ್ಮ ವಾರ್ಷಿಕೋತ್ಸವವನ್ನು ಆಚರಿಸಲಾಗುತ್ತಿದೆ. ಗುರುನಾನಕ್ ದೇವ್‍ಜಿ ನಂತರ ಬಂದ ಸಿಖ್ ಗುರುಗಳು ದೇಶಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಲು ಹಿಂಜರಿಯಲಿಲ್ಲ ಎಂದು ಕೊಂಡಾಡಿದ್ದಾರೆ. ಇದನ್ನೂ ಓದಿ: ಮತಾಂತರ ನಿಷೇಧ ಸರ್ಕಾರಿ ಪ್ರಾಯೋಜಿತ ಭಯೋತ್ಪಾದನಾ ಮಸೂದೆಯನ್ನು ಹಿಂಪಡೆಯಿರಿ: SDPI

  • ಗಣಪತಿಯೇ ನಮಗೆ ಮೊದಲ ಗುರು, ಕೃಷ್ಣನ ಶಂಖನಾದವೇ ನಮ್ಮ ಸಪ್ತಸ್ವರಗಳಿಗೆ ಪ್ರೇರಣೆ: ಉಡುಪಿಯಲ್ಲಿ ಉಸ್ತಾದ್ ಮೋಡಿ

    ಗಣಪತಿಯೇ ನಮಗೆ ಮೊದಲ ಗುರು, ಕೃಷ್ಣನ ಶಂಖನಾದವೇ ನಮ್ಮ ಸಪ್ತಸ್ವರಗಳಿಗೆ ಪ್ರೇರಣೆ: ಉಡುಪಿಯಲ್ಲಿ ಉಸ್ತಾದ್ ಮೋಡಿ

    ಉಡುಪಿ: ದೇಶಾದ್ಯಂತ ಅಯೋಧ್ಯೆಯ ರಾಮ ಮಂದಿರ ಕುರಿತಾದ ಚರ್ಚೆಗಳು ನಡೆಯುತ್ತಿದೆ. ರಾಮ ಮಂದಿರ, ಬಾಬ್ರಿ ಮಸೀದಿ ಅಂತ ರಾಜಕೀಯ ಪಕ್ಷಗಳು ಕಚ್ಚಾಡುತ್ತಿದೆ. ಹಿಂದೂಗಳು ಬಾಬ್ರಿ ಮಸೀದಿ ಧ್ವಂಸವಾದ ದಿನವನ್ನು ಶೌರ್ಯ ದಿನ ಅಂತ ಆಚರಿಸುತ್ತಿದ್ದಾರೆ. ಮುಸಲ್ಮಾನರು ಡಿಸೆಂಬರ್ ಆರನ್ನು ಕರಾಳ ದಿನ ಅಂತ ಆಚರಿಸುತ್ತಿದ್ದಾರೆ. ಈ ನಡುವೆ ಉಡುಪಿಯಲ್ಲಿ ಕಲೆಗೆ – ಕಲಾವಿದನಿಗೆ ಜಾತಿ, ಧರ್ಮವಿಲ್ಲ ಎಂಬುದು ಸಾಬೀತಾಗಿದೆ.

    ತಬಲ ಮಾಂತ್ರಿಕ ಝಾಕಿರ್ ಹುಸೇನ್ ಉಡುಪಿ ಶ್ರೀಕೃಷ್ಣಮಠದಲ್ಲಿ ಸಾವಿರಾರು ಪ್ರೇಕ್ಷಕರನ್ನು ತನ್ನ ಕೈಚಳಕದ ಮೂಲಕ ಮಂತ್ರಮುಗ್ಧಗೊಳಿಸಿದ್ದಾರೆ. ಮಠದೊಳಗೆ ಆಗಮಿಸಿ ಶ್ರೀಕೃಷ್ಣನ ದರ್ಶನ ಮಾಡಿ ಕನಕ ನವಗ್ರಹ ಕಿಂಡಿಯ ಮುಂದೆ ನಿಂತು ಭಕ್ತಿಪರವಶರಾಗಿದ್ದಾರೆ. ಶ್ರೀಕೃಷ್ಣನ ಮುಂದೆ ನಿಂತು ಕೈಮುಗಿದು ಕೆಲ ನಿಮಿಷಗಳ ಕಾಲ ಧ್ಯಾನ ಮಾಡಿದ್ದಾರೆ. ಶಿರಭಾಗಿ ಭಗವಂತನಿಗೆ ವಂದಿಸಿ ತಮ್ಮ ನಿವೇದನೆ ಅರ್ಪಿಸಿದ್ದಾರೆ.

    ಕೃಷ್ಣಮಠದ ರಾಜಾಂಗಣದಲ್ಲಿ ಎರಡೂವರೆ ಗಂಟೆಗಳ ಕಾಲ ಉಸ್ತಾದ್ ಝಾಕಿರ್ ಹುಸೇನ್ ತಬಲ ನುಡಿಸಿ ರಸದೌತಣ ಬಡಿಸಿದರು. ಬೆರಳಿನ ವೇಗಕ್ಕೆ ಸಾವಿರಾರು ಮಂದಿ ಅಭಿಮಾನಿಗಳು ತಮ್ಮನ್ನೇ ತಾವು ಮರೆತರು. ವಿದ್ವಾನ್ ಕುಮಾರೇಶ್ ವಯೋಲಿನ್, ವಿದೂಷಿ ಜಯಂತಿ ಕುಮಾರೇಶ್ ವೀಣೆ ನಾದ ತಬಲ ಮಾಂತ್ರಿಕ ಝಾಕಿರ್ ಹುಸೇನ್ ಗೆ ಸಾಥ್ ನೀಡಿದರು.

    ಝಾಕಿರ್ ಹುಸೇನ್ ರಿಂದ ಗಣಪತಿ ಸ್ತುತಿ- ಶಿವನಾಮ ಜಪ: ಕಾರ್ಯಕ್ರಮದ ನಡುವೆ ಝಾಕಿರ್ ಹುಸೇನ್ ಗಣಪತಿ, ಶ್ರೀಕೃಷ್ಣ ಮತ್ತು ಶಿವನನ್ನು ನೆನಪಿಸಿಕೊಂಡರು. ಗಣಪತಿಯ ಅನುಗ್ರಹ, ಕೃಷ್ಣನ ಶಂಖನಾದ, ಶಿವನ ಅನುಗ್ರಹ ನನ್ನ ಮೇಲೆ ಇರುವುದರಿಂದ ಈ ಹಂತಕ್ಕೆ ಬಂದು ನಿಂತಿದ್ದೇನೆ ಎಂದರು. ತಬಲದಲ್ಲಿ ಢಮರುಗ ನುಡಿಸಿ ಝಾಕಿರ್ ಚಪ್ಪಾಳೆ ಶಿಳ್ಳೆ ಗಿಟ್ಟಿಸಿದರು.

    ಕಾರ್ಯಕ್ರಮದ ಕೊನೆಗೆ ಪೇಜಾವರ ಹಿರಿಯ, ಕಿರಿಯ ಶ್ರೀ, ಸೋದೆ ವಿಶ್ವವಲ್ಲಭ ಸ್ವಾಮೀಜಿಯ ಪಾದ ಮುಟ್ಟಿ ಝಾಕಿರ್ ನಮಸ್ಕರಿಸಿದರು. ಸ್ವಾಮೀಜಿಗಳು ಆತ್ಮೀಯವಾಗಿ ಕಲಾವಿದ ಝಾಕಿರ್ ಹುಸೇನ್ ರನ್ನು ಸ್ಪರ್ಶಿಸಿ, ಅನುಗ್ರಹ ಮಂತ್ರಾಕ್ಷತೆ ನೀಡಿದರು. ಶಾಲು ಹೊದಿಸಿ – ಹಾರಹಾಕಿ, ಕೃಷ್ಣನ ವಿಗ್ರಹ ನೀಡಿ ಪೇಜಾವರ ಮಠ ಗೌರವಿಸಿತು.

    ಉಸ್ತಾದ್ ಝಾಕಿರ್ ಹುಸೇನ್ ಮಾತನಾಡಿ, ಮಠದಲ್ಲಿ ಕಾರ್ಯಕ್ರಮ ನೀಡಿದ್ದು ಬಹಳ ಸಂತೋಷವಾಗಿದೆ. ಕೃಷ್ಣ ಕರೆಸಿಕೊಂಡರೆ, ಸ್ವಾಮೀಜಿಯವರ ಆಶೀರ್ವಾದ ಇದ್ದರೆ ಮತ್ತೆ ಉಡುಪಿಯಲ್ಲಿ ಕಾರ್ಯಕ್ರಮ ಕೊಡುವುದಾಗಿ ಘೋಷಣೆ ಮಾಡಿದರು. ಗಣಪತಿಯೇ ಕಲಾವಿದರಿಗೆ ಮೊದಲ ಗುರು. ಕೃಷ್ಣನ ಶಂಖನಾದವೇ ನಮ್ಮ ಸಪ್ತಸ್ವರಗಳಿಗೆ ಪ್ರೇರಣೆ, ಶಿವನ ಢಮರುಗ ನಾದವೇ ನಮಗೆ ವೈಬ್ರೇಶನ್ ಅಂತ ತಮ್ಮ ಕಾರ್ಯಕ್ರಮದ ನಡುವೆ ಹೇಳಿದರು.

    ಪೇಜಾವರ ಕಿರಿಯ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಮಾತನಾಡಿ, ದೇವತೆಗಳಿಗೆ ಲಭ್ಯವಾದದ್ದು ಒಂದು ಬಿಂದು ಅಮೃತ. ಆದ್ರೆ ಝಾಕಿರ್ ಹುಸೇನರ ಕಾರ್ಯಕ್ರಮದ ಮೂಲಕ ನಮಗೆ ಅಮೃತದ ಸುಧೆಯೇ ಲಭ್ಯವಾಯ್ತು ಅಂತ ಹೇಳಿದರು.