Tag: Babar Azam

  • Asia Cup 2025 | ಹೊಸ ನಾಯಕತ್ವದಲ್ಲಿ ಪಾಕ್‌ ತಂಡ ಪ್ರಕಟ – ರಿಜ್ವಾನ್‌, ಬಾಬರ್‌ ಹೊರದಬ್ಬಿದ ಪಿಸಿಬಿ

    Asia Cup 2025 | ಹೊಸ ನಾಯಕತ್ವದಲ್ಲಿ ಪಾಕ್‌ ತಂಡ ಪ್ರಕಟ – ರಿಜ್ವಾನ್‌, ಬಾಬರ್‌ ಹೊರದಬ್ಬಿದ ಪಿಸಿಬಿ

    ಇಸ್ಲಾಮಾಬಾದ್‌: ಬಹುನಿರೀಕ್ಷಿತ 2025ರ ಟಿ20 ಏಷ್ಯಾ ಕಪ್ (Asia Cup 2025 T20I) ಟೂರ್ನಿಗಾಗಿ ಪಾಕಿಸ್ತಾನ ಕ್ರಿಕೆಟ್‌ ಬೋರ್ಡ್‌ ಅಚ್ಚರಿ ತಂಡವನ್ನು ಪ್ರಕಟಿಸಿದೆ.

    ಪಾಕ್‌ ತಂಡದ ಸ್ಟಾರ್‌ ಐಕಾನ್‌ಗಳಾದ ಮೊಹಮ್ಮದ್‌ ರಿಜ್ವಾನ್‌ (Mohammad Rizwan) ಹಾಗೂ ಬಾಬರ್‌ ಆಜಂ (Babar Azam) ಮತ್ತು ಸ್ಟಾರ್‌ ವೇಗಿ ನಸೀಮ್‌ ಶಾ ಅವರನ್ನ ಹೊರದಬ್ಬಿ ಹೊಸ ಮುಖದ ನಾಯಕತ್ವದಲ್ಲಿ ಹೊಸ ತಂಡವನ್ನು ಪ್ರಕಟಿಸಿದೆ. ಇದನ್ನ ಓದಿ: Asia Cup T20 | ಏಷ್ಯಾ ಕಪ್‌ ಟೂರ್ನಿಗೆ ದಿನಾಂಕ ಪ್ರಕಟ; ಭಾರತ – ಪಾಕ್ ಕದನಕ್ಕೆ ಮುಹೂರ್ತ ಫಿಕ್ಸ್!

    Ind vs Pak 2

    ಸಲ್ಮಾನ್ ಅಲಿ ಅಘಾಗೆ (Salman Ali Agha) ತಂಡದ ನಾಯಕತ್ವದ ಹೊಣೆ ನೀಡಲಾಗಿದೆ. ಉಳಿದಂತೆ ಸ್ಫೋಟಕ ಬ್ಯಾಟರ್‌ ಫಖರ್‌ ಜಮಾನ್‌, ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡಿದ ಖುಷ್ದಿಲ್ ಶಾಗೆ ಸ್ಥಾನ ನೀಡಲಾಗಿದೆ. ಜೊತೆ‌ಗೆ ಇದೇ ಟೂರ್ನಿಯಲ್ಲಿ ಮಿಂಚಿದ ಆಫ್‌ ಸ್ಪಿನ್ನರ್‌ ಅಬ್ರಾರ್ ಅಹ್ಮದ್‌‌ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಇದನ್ನ ಓದಿ: ಅನಗತ್ಯ ರನ್‌ ಕದಿಯಲು ಯತ್ನಿಸಿ ಯಡವಟ್ಟು – ಮೈದಾನದಲ್ಲೇ ಬ್ಯಾಟ್‌ ಎಸೆದು ಪಾಕ್‌ ಓಪನರ್ ಆಕ್ರೋಶ

    ಏಷ್ಯಾ ಕಪ್‌ಗೆ ಪಾಕ್‌ ತಂಡ
    ಸಲ್ಮಾನ್ ಅಲಿ ಅಘಾ (ನಾಯಕ), ಅಬ್ರಾರ್ ಅಹ್ಮದ್, ಫಹೀಮ್ ಅಶ್ರಫ್, ಫಖರ್ ಜಮಾನ್, ಹ್ಯಾರಿಸ್‌ ರೌಫ್‌, ಹಸನ್ ಅಲಿ, ಹಸನ್ ನವಾಜ್, ಹುಸೇನ್ ತಲತ್, ಖುಷ್ದಿಲ್ ಶಾ, ಮೊಹಮ್ಮದ್ ಹ್ಯಾರಿಸ್ (ವಿಕೆಟ್-ಕೀಪರ್), ಮೊಹಮ್ಮದ್ ನವಾಜ್, ಮೊಹಮ್ಮದ್ ನವಾಜ್, ಮೊಹಮ್ಮದ್ ನವಾಜ್ ಅಯೂಬ್, ಸಲ್ಮಾನ್ ಮಿರ್ಜಾ, ಶಾಹೀನ್ ಶಾ ಆಫ್ರಿದಿ ಮತ್ತು ಸುಫ್ಯಾನ್ ಮೊಕಿಮ್.

    ASIA CUP 1

    ಯಾವಾಗಿನಿಂದ ಏಷ್ಯಾಕಪ್‌ ಟೂರ್ನಿ
    2026ರ ಟಿ20 ವಿಶ್ವಕಪ್‌ ಗಮನದಲ್ಲಿಟ್ಟುಕೊಂಡು ಈ ಬಾರಿ ಟಿ20 ಮಾದರಿಯಲ್ಲಿ ಏಷ್ಯಾಕಪ್‌ ಟೂರ್ನಿ ಆಡಿಸಲು ನಿರ್ಧರಿಸಲಾಗಿದೆ. ಸೆಪ್ಟೆಂಬರ್‌ 9 ರಿಂದ 28ರ ವರೆಗೆ ಯುಎಇನಲ್ಲಿ ಟೂರ್ನಿ ನಡೆಯಲಿದೆ. ಇದನ್ನ ಓದಿ: 1,650 ಕೋಟಿ ವೆಚ್ಚ, 60,000 ಆಸನ ಸಾಮರ್ಥ್ಯ – ಬೆಂಗ್ಳೂರಲ್ಲಿ ತಲೆ ಎತ್ತಲಿದೆ ಚಿನ್ನಸ್ವಾಮಿಗಿಂತಲೂ ಬೃಹತ್‌ ಸ್ಟೇಡಿಯಂ

    ಜುಲೈ 24 ರಂದು ನಡೆದ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಸಭೆಯಲ್ಲಿ (Asian Cricket Council) ಟೂರ್ನಿಯ ಸ್ಥಳವನ್ನ ಅಧಿಕೃತಗೊಳಿಸಲಾಯಿತು. ಈ ಬಾರಿ ಟೂರ್ನಿಯ ಹಕ್ಕು ಬಿಸಿಸಿಐನದ್ದೇ (ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ) ಆಗಿದೆ. ಆದ್ರೆ ಭಾರತ ಮತ್ತು ಪಾಕ್‌ ನಡುವಿನ ಉದ್ವಿಗ್ನತೆಯಿಂದಾಗಿ 2027ರ ವರೆಗೂ ತಟಸ್ಥ ಸ್ಥಳಗಳಲ್ಲಿ ಟೂರ್ನಿ ನಡೆಸಲು ನಿರ್ಧರಿಸಲಾಗಿದೆ. ಸೆ.9 ರಿಂದ ಸೆ.28ರ ವರೆಗೆ ಟೂರ್ನಿ ನಿಗದಿಯಾಗಿದ್ದು, ಭಾರತ ಮತ್ತು ಪಾಕ್‌ ನಡುವಿನ ಪಂದ್ಯ ಸೆ.14ರಂದು ನಡೆಯಲಿದೆ.

    ಈ ಬಾರಿ 8 ತಂಡಗಳು
    ಇಷ್ಟು ವರ್ಷ 6 ತಂಡಗಳ ನಡುವೆ ನಡೆಯುತ್ತಿದ್ದ ಹಣಾಹಣಿ ಈ ಬಾರಿ 8 ತಂಡಗಳ ನಡುವೆ ನಡೆಯಲಿದೆ. ಭಾರತ ಮತ್ತು ಪಾಕಿಸ್ತಾನ ಒಂದೇ ಗುಂಪಿನಲ್ಲಿ ಇರಲಿವೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಭಾರತ ಮತ್ತು ಪಾಕಿಸ್ತಾನ (Ind vs Pak) ತಂಡಗಳು ಮೂರು ಬಾರಿ ಮುಖಾಮುಖಿಯಾಗುವ ಸಾಧ್ಯತೆಗಳೂ ಇವೆ. ಲೀಗ್‌ ಹಂತ, ಸೂಪರ್‌ ಸಿಕ್ಸ್‌ ಹಾಗೂ ಪ್ರಶಸ್ತಿ ಸುತ್ತಿಗೆ ತಲುಪಿದ್ರೆ ಮೂರು ಬಾರಿ ಮುಖಾಮುಖಿ ಆಗುವ ಸಾಧ್ಯತೆಗಳು ಇವೆ.

    ಕಳೆದ ಬಾರಿ ಪಾಕ್‌ ಮತ್ತು ಶ್ರೀಲಂಕಾ ಆತಿಥ್ಯದಲ್ಲಿ ಏಕದಿನ ಮಾದರಿಯಲ್ಲಿ ಏಷ್ಯಾಕಪ್‌ ಟೂರ್ನಿ ನಡೆದಿತ್ತು. ಭಾರತ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು. ಇದನ್ನ ಓದಿ: ಖ್ಯಾತ ಉದ್ಯಮಿಯ ಮೊಮ್ಮಗಳ ಜೊತೆ ಅರ್ಜುನ್‌ ತೆಂಡ್ಕೂಲರ್‌ ಎಂಗೇಜ್‌

  • Champions Trophy 2025 | ಟಾಸ್‌ಗೆದ್ದ ಪಾಕ್‌ ಬ್ಯಾಟಿಂಗ್‌ ಆಯ್ಕೆ

    Champions Trophy 2025 | ಟಾಸ್‌ಗೆದ್ದ ಪಾಕ್‌ ಬ್ಯಾಟಿಂಗ್‌ ಆಯ್ಕೆ

    ದುಬೈ: ಭಾರತ-ಪಾಕ್‌ ನಡುವಿನ ಹೈವೋಲ್ಟೇಜ್‌ ಕದನಕ್ಕೆ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣ ಸಜ್ಜಾಗಿದ್ದು, ಕೆಲವೇ ನಿಮಿಷಗಳಲ್ಲಿ ಪಂದ್ಯ ಆರಂಭವಾಗಲಿದೆ. ಮೊದಲಿಗೆ ಟಾಸ್‌ ಗೆದ್ದ ಮೊಹಮ್ಮದ್‌ ರಿಜ್ವಾನ್‌ ನಾಯಕತ್ವದ ಪಾಕ್‌ ತಂಡ ಬ್ಯಾಟಿಂಗ್‌ ಆಯ್ದುಕೊಂಡಿದೆ.

    ಇನ್ನೂ ಸತತ 12ನೇ ಬಾರಿಗೆ ಟಾಸ್‌ ಸೋತ ಭಾರತ ಫೀಲ್ಡಿಂಗ್‌ಗೆ ಇಳಿಯಲು ಮುಂದಾಗಿದೆ. ಸದ್ಯ ಪ್ಲೇಯಿಂಗ್‌-11ನಲ್ಲಿ  ಯಾವುದೇ ಬದಲಾವಣೆ ಮಾಡದ ಭಾರತ ಬಾಂಗ್ಲಾದೇಶದ ವಿರುದ್ಧ ಕಣಕ್ಕಿಳಿದ ತಂಡವನ್ನೇ ಅಖಾಡಕ್ಕಿಳಿಸಲು ಮುಂದಾಗಿ ಮೊಹಮ್ಮದ್‌ ಶಮಿ ಸಾರಥ್ಯದಲ್ಲಿ ಬೌಲಿಂಗ್‌ ಪಡೆ ಮುನ್ನಡೆಯಲಿದೆ. ಇದನ್ನೂ ಓದಿ: ಪಾಕ್ ವಿರುದ್ಧ ಭಾರತದ ಗೆಲುವಿಗಾಗಿ ವಿಶೇಷ ಪೂಜೆ- ಬೆಂಗಳೂರು ಕ್ರೀಡಾಭಿಮಾನಿಗಳಿಂದ ಶುಭ ಹಾರೈಕೆ 

    ಟೀಂ ಇಂಡಿಯಾದ ಪ್ಲೇಯಿಂಗ್‌-11 
    ರೋಹಿತ್‌ ಶರ್ಮಾ, ಶುಭಮನ್‌ ಗಿಲ್‌, ವಿರಾಟ್‌ ಕೊಹ್ಲಿ, ಶ್ರೇಯಸ್‌ ಅಯ್ಯರ್‌, ಅಕ್ಷರ್‌ ಪಟೇಲ್‌, ಕೆ.ಎಲ್‌ ರಾಹುಲ್‌, ಹಾರ್ದಿಕ್‌ ಪಾಂಡ್ಯ, ರವೀಂದ್ರ ಜಡೇಜಾ, ಹರ್ಷಿತ್‌ ರಾಣಾ, ಮೊಹಮ್ಮದ್‌ ಶಮಿ, ಕುಲ್ದೀಪ್‌ ಯಾದವ್‌.
    ಪಾಕಿಸ್ತಾನ ತಂಡದ ಪ್ಲೇಯಿಂಗ್‌-11
    ಇಮಾಮ್‌ ಉಲ್‌ಹಕ್‌, ಬಾಬರ್‌ ಆಜಂ, ಸೌದ್‌ ಶಕೀಲ್‌, ಮೊಹಮ್ಮದ್‌ ರಿಜ್ವಾನ್‌ (ನಾಯಕ), ತಯ್ಯಾಬ್‌ ತಾಹಿರ್‌, ಸಲ್ಮಾನ್‌ ಆಘ, ಖುಶ್ದಿಲ್ ಶಾ, ಶಾಹೀನ್ ಶಾ ಆಫ್ರಿದಿ, ನಸೀಮ್ ಶಾ, ಹ್ಯಾರಿಸ್ ರೌಫ್, ಅಬ್ರಾರ್ ಅಹ್ಮದ್.
  • Champions Trophy 2025 | ಆಲ್ ದಿ ಬೆಸ್ಟ್ ಟೀಂ ಇಂಡಿಯಾ – ನಾಡಿನಾದ್ಯಂತ ಅಭಿಮಾನಿಗಳಿಂದ ಶುಭ ಹಾರೈಕೆ

    Champions Trophy 2025 | ಆಲ್ ದಿ ಬೆಸ್ಟ್ ಟೀಂ ಇಂಡಿಯಾ – ನಾಡಿನಾದ್ಯಂತ ಅಭಿಮಾನಿಗಳಿಂದ ಶುಭ ಹಾರೈಕೆ

    ಹಾಸನ/ ಚಾಮರಾಜನಗರ/ ಚಿಕ್ಕಬಳ್ಳಾಪುರ: ಭಾರತ – ಪಾಕಿಸ್ತಾನ (Ind vs Pak) ನಡುವಿನ ಚಾಂಪಿಯನ್ಸ್‌ ಟ್ರೋಫಿ ಹೈವೋಲ್ಟೇಜ್‌ ಪಂದ್ಯಕ್ಕೆ ಕ್ಷಣಗಣನೆ ಬಾಕಿಯಿದೆ. ಬ್ಲಾಕ್‌ಬಸ್ಟರ್‌ ಸಂಡೇ (ಇಂದು)ಯಂದು ಮಧ್ಯಾಹ್ನ 2:30ರ ವೇಳೆ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ಶುರುವಾಗಲಿದೆ. ಈ ರಣರೋಚಕ ಕದನಕ್ಕೆ ಕಾದು ಕುಳಿತಿರುವ ರಾಜ್ಯದ ಕ್ರೀಡಾ ಅಭಿಮಾನಿಗಳು ವಿವಿಧ ದೇವಾಲಯಗಳಲ್ಲಿ ವಿಶೇ ಪೂಜೆ ಹಮ್ಮಿಕೊಂಡಿದ್ದರೆ, ಇನ್ನೂ ಕೆಲವರು ತಾವಿದ್ದಲ್ಲೇ ಗೆದ್ದು ಬಾ ಭಾರತ, ಆಲ್‌ ದಿ ಬೆಸ್ಟ್‌ ಟೀಂ ಇಂಡಿಯಾ ಅಂತ ಶುಭ ಹಾರೈಸಿದ್ದಾರೆ. ಯಾವ ಜಿಲ್ಲೆಯಲ್ಲಿ ಏನಾಗಿದೆ ಎಂಬುದನ್ನು ಮುಂದೆ ನೋಡೋಣ…

    ಹಾಸನ
    ಇಂದು ಭಾರತ-ಪಾಕಿಸ್ತಾನ ತಂಡಗಳ ನಡುವೆ ದುಬೈನಲ್ಲಿ ಹೈವೋಲ್ಟೇಜ್ ಪಂದ್ಯವಿದ್ದು ಟೀಂ ಇಂಡಿಯಾ ಗೆದ್ದೆ ಗೆಲ್ಲುತ್ತದೆ ಎಂದು ಹಾಸನದ ಕ್ರಿಕೆಟ್ ಅಭಿಮಾನಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಭಾರತ-ಪಾಕಿಸ್ತಾನ ಪಂದ್ಯವೆಂದರೆ ಯುದ್ಧದ ರೀತಿ ಇರುತ್ತದೆ. ಏನೇ ಆಗಲಿ ಭಾರತ ಗೆಲ್ಲಲಿ ಅಂತ ತಂಡಕ್ಕೆ ಶುಭಕೋರಿದ್ದಾರೆ.

    ಚಾಮರಾಜನಗರ
    ಪಾಕಿಸ್ತಾನದ ವಿರುದ್ಧ ಭಾರತದ ಗೆಲುವಿಗೆ ಚಾಮರಾಜನಗರದಲ್ಲಿ ಕ್ರಿಕೆಟ್ ಅಭಿಮಾನಿಗಳು ದೇವರ ಮೊರೆ ಹೋಗಿದ್ದಾರೆ. ಚಾಮರಾಜನಗರದ ಜನಾರ್ಧನಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಭಾರತ ಜಯಗಳಿಸಲಿ ಎಂದು ಸಂಕಲ್ಪ ಮಾಡಿದ್ದಾರೆ. ಕ್ಯಾಪ್ಟನ್ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿದಂತೆ ಎಲ್ಲ ಆಟಗಾರರ ಹೆಸರಿನಲ್ಲಿ ಅರ್ಚನೆ ಸಹ ಮಾಡಿಸಿದ್ದಾರೆ. ದೇವರ ಪಾದದ ಬಳಿ ಆಟಗಾರರ ಹೆಸರುಳ್ಳ ಕಾರ್ಡ್ ಇಟ್ಟು ಪೂಜೆ ಮಾಡಿಸಿದ್ದಾರೆ.

    ಚಿಕ್ಕಬಳ್ಳಾಪುರ
    ಬದ್ಧವೈರಿಗಳ ಕಾಳಗದಲ್ಲಿ ಭಾರತ ಗೆದ್ದು ಬೀಗಲಿ ಅಂತ ಚಿಕ್ಕಬಳ್ಳಾಪುರ ನಗರದ ಸರ್ ಎಂ.ವಿ ಕ್ರೀಡಾಂಗಣದಲ್ಲಿ ಪುಟಾಣಿ ಕ್ರಿಕೆಟಿಗರು ಶುಭ ಕೋರಿದ್ದಾರೆ.

    ದಾವಣಗೆರೆ
    ಇಂಡೋ ಪಾಕ್‌ ಹೈವೋಲ್ಟೇಜ್‌ ಪಂದ್ಯದಲ್ಲಿ ಟೀಂ ಇಂಡಿಯಾ ವಿಜಯಿಯಾಗಲಿ, ಟ್ರೋಫಿಯನ್ನೂ ಗೆಲ್ಲಲ್ಲಿ. 2017ರ ಸೋಲಿನ ಸೇಡು ತೀರಿಸಿಕೊಳ್ಳಲಿ ಅಂತ ದಾವಣಗೆರೆಯ ಕ್ರೀಡಾಭಿಮಾನಿಗಳು ಶುಭಕೋರಿದ್ದಾರೆ. ಭಾರತ ಖಂಡಿತಾ 2017ರ ಸೇಡು ತೀರಿಸಿಕೊಳ್ಳಲಿದೆ. ನಮ್ಮ ಆಟಗಾರರು ಕೂಡ ಉತ್ತಮ ಪ್ರದರ್ಶನ ನೀಡುತ್ತಿದ್ದು, ಬೌಲಿಂಗ್ ಲೈನ್ ಆಪ್, ಬ್ಯಾಂಟಿಂಗ್‌ ಹಾಗೂ ಫಿಲ್ಡಿಂಗ್ ಲೈನ್ನಪ್ ಕೂಡ ಉತ್ತಮವಾಗಿದೆ ಎಂದು ಕ್ರಿಕೇಟ್ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

    ಧಾರವಾಡ
    ವಿದ್ಯಾಕಾಶಿ ಧಾರವಾಡದಲ್ಲೂ ಭಾರತದ ಕ್ರಿಕೆಟ್ ತಂಡಕ್ಕೆ ಅಭಿಮಾನಿಗಳು ವಿಶ್‌ ಮಾಡಿದ್ದಾರೆ. ಧಾರವಾಡ ಕರ್ನಾಟಕ ವಿವಿಯಲ್ಲಿ ಇವತ್ತು ಡಿಪಿಎಲ್ ಮ್ಯಾಚ್ ನಡೆಯುವ ಸ್ಥಳದಿಂದಲೇ ಆಲ್ ದಿ ಬೆಸ್ಟ್ ಇಂಡಿಯಾ ಎಂದು ಶುಭ ಕೊರಿರುವ ಅಭಿಮಾನಿಗಳು, ಇವತ್ತು ಬದ್ಧ ವೈರಿ ಪಾಕಿಸ್ತಾನದ ಹುಟ್ಟಡಗಿಸಲಿ ಎಂದು ಹಾರೈಸಿದ್ದಾರೆ.

  • ಪಂದ್ಯಕ್ಕೂ ಮುನ್ನವೇ ಪಾಕ್‌ ಹೈಡ್ರಾಮಾ – ಏನೇ ಆದ್ರೂ ಭಾರತವನ್ನು ಸೋಲಿಸಬೇಕು ಎಂದ ಪಿಸಿಬಿ ಮುಖ್ಯಸ್ಥ

    ಪಂದ್ಯಕ್ಕೂ ಮುನ್ನವೇ ಪಾಕ್‌ ಹೈಡ್ರಾಮಾ – ಏನೇ ಆದ್ರೂ ಭಾರತವನ್ನು ಸೋಲಿಸಬೇಕು ಎಂದ ಪಿಸಿಬಿ ಮುಖ್ಯಸ್ಥ

    ದುಬೈ: ರೋಹಿತ್ ಶರ್ಮಾ ಸಾರಥ್ಯದ ಭಾರತ ತಂಡ ಚಾಂಪಿಯನ್ಸ್ ಟ್ರೊಫಿಯ (Champions Trophy) ʻಎʼ ಗುಂಪಿನ ತನ್ನ 2ನೇ ಪಂದ್ಯದಲ್ಲಿ ಭಾನುವಾರ (ಇಂದು) ಬದ್ಧ ವೈರಿ ಪಾಕಿಸ್ತಾನ ತಂಡದ ಸವಾಲು ಎದುರಿಸಲಿದೆ. ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮಧ್ಯಾಹ್ನ 2:30ಕ್ಕೆ ಪಂದ್ಯ ಆರಂಭವಾಗಲಿದೆ. ಇತ್ತ ಗೆಲುವಿನೊಂದಿಗೆ ಸೆಮಿಫೈನಲ್ ಪ್ರವೇಶ ಖಚಿತಪಡಿಸಿಕೊಳ್ಳುವ ಉತ್ಸಾಹದಲ್ಲಿ ಭಾರತ ಇದ್ದರೆ, ಮೊಹಮದ್ ರಿಜ್ವಾನ್ (Mohammad Rizwan) ನೇತೃತ್ವದ ಪಾಕಿಸ್ತಾನ, ಟೂರ್ನಿಯಿಂದ ಹೊರಗುಳಿಯುವುದನ್ನು ತಪ್ಪಿಸಬೇಕಾದ ಒತ್ತಡದಲ್ಲಿದೆ. ಈ ನಡುವೆ ಪಾಕ್‌ ತಂಡದಲ್ಲಿ ಹೈಡ್ರಾಮಾ ನಡೆದಿದೆ.

    ಪಾಕಿಸ್ತಾನದ (Pakistan) ಸ್ಟಾರ್‌ ಕ್ರಿಕೆಟರ್‌ ಬಾಬರ್‌ ಆಜಂ (Babar Azam) ಅಭ್ಯಾಸಕ್ಕೆ ಗೈರಾಗುತ್ತಿರುವುದು ಕಂಡುಬಂದಿದೆ. ಶನಿವಾರ ಪಾಕ್‌ ತಂಡದ ಅಭ್ಯಾಸ ವೇಳೆ ಬಾಬರ್‌ ಕಾಣದ ಹಿನ್ನೆಲೆಯಲ್ಲಿ ಅವರನ್ನು ಭಾನುವಾರದ ಪಂದ್ಯಕ್ಕೆ ಪರಿಗಣಿಸಲಾಗುವುದಿಲ್ಲ ಎಂಬ ವದಂತಿ ಹಬ್ಬಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಬಾಬರ್‌ ಕಣಕ್ಕಿಳಿಯುತ್ತಾರೆ ಎನ್ನುವ ಬಗ್ಗೆ ಪಿಸಿಬಿ ಯಾವುದೇ ಸ್ಪಷ್ಟನೆ ನೀಡಿಲ್ಲ. ಇದರ ಹೊರತಾಗಿ ʻಏನೇ ಆಗಲಿ ಭಾರತದ ವಿರುದ್ಧ ಗೆಲ್ಲಲೇಬೇಕುʼ ಎಂದು ಪಿಸಿಬಿ ಮುಖ್ಯಸ್ಥ ಮೊಹ್ಸಿನ್‌ ನಖ್ವಿ ಹೇಳಿದ್ದಾರೆ. ಇದನ್ನೂ ಓದಿ: `ಮಹಾ’ ಸಾರಿಗೆ ನಿಗಮಕ್ಕೆ `ಗ್ಯಾರಂಟಿ’ ಭಾರ; ಉಚಿತ ಯೋಜನೆಯಿಂದ ದಿನಕ್ಕೆ 3 ಕೋಟಿ ನಷ್ಟ: ಸಚಿವ ಪ್ರತಾಪ್

    ಬಾಬರ್ ಅಜಂ ಮೇಲೆ ಭಾರೀ ಒತ್ತಡ
    ಅತ್ತ ಪಾಕಿಸ್ತಾನ ಪ್ರಮುಖ ಬ್ಯಾಟರ್‌ಗಳ ಪೇಲವ ಪ್ರದರ್ಶನದಿಂದ ಚಿಂತಕ್ರಾಂತವಾಗಿದೆ. ತಂಡದ ಸ್ಟಾರ್ ಎನಿಸಿರುವ ಬಾಬರ್ ಅಜಂ, ಕಿವೀಸ್‌ ವಿರುದ್ಧ 90 ಎಸೆತಗಳಲ್ಲಿ 64 ರನ್ ಗಳಿಸಿ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ. ಗಾಯದಿಂದಾಗಿ ಫಖರ್ ಜಮಾನ್ ಹೊರಗುಳಿದಿರುವುದು ಕೂಡ ಪಾಕ್‌ನ ಒತ್ತಡವನ್ನು ತೀವ್ರಗೊಳಿಸಿದೆ. ಇವರ ಬದಲಿಗೆ ಇಮಾಮ್ ಉಲ್ ಹಕ್ ತಂಡವನ್ನು ಸೇರ್ಪಡೆಗೊಂಡಿದ್ದು, ಅವರ ಸ್ಥಾನವನ್ನು ಎಷ್ಟರ ಮಟ್ಟಿಗೆ ತುಂಬಲಿದ್ದಾರೆ ಎಂಬುದು ಪ್ರಶ್ನೆಯಾಗಿದೆ.

    ನಿವೃತ್ತಿ ಅಂಚಿನಲ್ಲಿರುವ ರನ್ ಮಷಿನ್ ವಿರಾಟ್ ಕೊಹ್ಲಿ, ಇತ್ತೀಚಿಗೆ ಉತ್ತಮ ಆಟವಾಡುವಲ್ಲಿ ಎಡವಿದ್ದಾರೆ. ಆದರೆ ಪಾಕಿಸ್ತಾನ ವಿರುದ್ಧದ ತಮ್ಮ ಅಮೋಘ ಫಾರ್ಮ್ ಮರುಕಳಿಸುವ ಜಾಣ್ಮೆಯನ್ನು ಹೊಂದಿದ್ದಾರೆ. ಇದನ್ನೂ ಓದಿ: Publictv Explainer: ದತ್ತು ಸ್ವೀಕಾರದ ಬಗ್ಗೆ ನಿಮಗೆಷ್ಟು ಗೊತ್ತು? – ನಿಯಮ ಏನು, ಪ್ರಕ್ರಿಯೆ ಹೇಗೆ?

    ಬೌಲಿಂಗ್ ವಿಭಾಗದಲ್ಲಿ ಲಯ ಕಂಡುಕೊಂಡಿರುವ ವೇಗಿ ಮೊಹಮ್ಮದ್ ಶಮಿಗೆ ಹರ್ಷಿತ್ ರಾಣಾ ಉತ್ತಮ ಸಾಥ್ ನೀಡುತ್ತಿದ್ದಾರೆ. ಹಿಂದಿನ ಪಂದ್ಯದಲ್ಲಿ 5 ವಿಕೆಟ್ ಕಬಳಿಸಿದ ಶಮಿ, ಗಾಯಾಳು ಜಸ್‌ಪ್ರೀತ್ ಬುಮ್ರಾ ಅವರ ಅಲಭ್ಯತೆಯನ್ನು ಕಾಡದಂತೆ ನೋಡಿಕೊಂಡಿದ್ದರು. 2017ರ ಫೈನಲ್‌ನಲ್ಲಿ ಅರ್ಧ ಶತಕ ಗಳಿಸಿಯೂ ತಂಡವನ್ನು ಸೋಲಿನಿಂದ ಪಾರು ಮಾಡಲು ವಿಫಲಗೊಂಡ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ, ಈ ಬಾರಿ ನಿರಾಸೆಯನ್ನು ಸರಿದೂಗಿಸುವ ವಿಶ್ವಾಸದಲ್ಲಿದ್ದಾರೆ. ಸದ್ಯ ಬದ್ಧವೈರಿಗಳ ನಡುವಿನ ಕಾದಾಟಕ್ಕೆ ದುಬೈ ಕ್ರೀಡಾಂಗಣ ಸಾಕ್ಷಿಯಾಗಲಿದ್ದು, ಕುತೂಹಲ ಹೇಗಿರಲಿದೆ ಎಂಬುದನ್ನು ಕಾದುನೋಡಬೇಕಿದೆ.  ಇದನ್ನೂ ಓದಿ: ಪಾಕ್ ವಿರುದ್ಧ ಭಾರತದ ಗೆಲುವುಗಾಗಿ ವಿಶೇಷ ಪೂಜೆ- ಬೆಂಗಳೂರು ಕ್ರೀಡಾಭಿಮಾನಿಗಳಿಂದ ಶುಭ ಹಾರೈಕೆ

  • ಐಸಿಸಿ ವರ್ಷದ ಟಿ20 ಕ್ರಿಕೆಟಿಗ ಪ್ರಶಸ್ತಿ – ರೇಸ್‌ನಲ್ಲಿರುವ ನಾಲ್ವರ ಪೈಕಿ ಭಾರತದ ಅರ್ಷ್‌ದೀಪ್‌ಗೆ ಸ್ಥಾನ!

    ಐಸಿಸಿ ವರ್ಷದ ಟಿ20 ಕ್ರಿಕೆಟಿಗ ಪ್ರಶಸ್ತಿ – ರೇಸ್‌ನಲ್ಲಿರುವ ನಾಲ್ವರ ಪೈಕಿ ಭಾರತದ ಅರ್ಷ್‌ದೀಪ್‌ಗೆ ಸ್ಥಾನ!

    ದುಬೈ: ಐಸಿಸಿ ಟಿ20 ವರ್ಷದ ಕ್ರಿಕೆಟಿಗ ಪ್ರಶಸ್ತಿಗೆ (ICC T20i Cricketer Of The Year) ನಾಲ್ವರು ಆಟಗಾರರ ಹೆಸರು ನಾಮನಿರ್ದೇಶನಗೊಂಡಿದೆ. ಈ ನಾಲ್ವರು ಆಟಗಾರರ ಪೈಕಿ ಭಾರತದ ಚಾಂಪಿಯನ್‌ ಬೌಲರ್‌ ಅರ್ಷ್‌ದೀಪ್‌ ಸಿಂಗ್‌ (Arshdeep Singh), ಆಸೀಸ್‌ ದೈತ್ಯ ಬ್ಯಾಟರ್‌ ಟ್ರಾವಿಸ್‌ಹೆಡ್‌, ಜಿಂಬಾಬ್ವೆ ಆಟಗಾರ ಸಿಖಂದರ್‌ ರಾಜಾ (Sikandar Raza) ಹಾಗೂ ಪಾಕ್‌ ತಂಡದ ಮಾಜಿ ನಾಯಕ ಬಾಬರ್‌ ಆಜಂ ಸ್ಥಾನ ಪಡೆದುಕೊಂಡಿದ್ದಾರೆ.

    ಪ್ರಸಕ್ತ ವರ್ಷ ಟಿ20 ಕ್ರಿಕೆಟ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಕ್ಕಾಗಿ ಈ ನಾಲ್ವರು ಆಟಗಾರರ ನಾಮನಿರ್ದೇಶನ ಮಾಡಲಾಗಿದೆ. ಈ ನಾಲ್ವರು ಆಟಗಾರರ ಪೈಕಿ ಯಾರಿಗೆ 2024ರ ಐಸಿಸಿ ವರ್ಷದ ಟಿ20 ಕ್ರಿಕೆಟಿಗ ಪ್ರಶಸ್ತಿ ಸಿಗಬಹುದು ಅನ್ನೋದನ್ನ ಕಾದುನೋಡಬೇಕಿದೆ.

    ಯಾರು ಆ ನಾಲ್ವರು ಆಟಗಾರರು?

    1. ಟ್ರಾವಿಸ್‌ ಹೆಡ್‌
    ಆಸ್ಟ್ರೇಲಿಯಾದ ಸ್ಪೋಟಕ ಎಡಗೈ ಬ್ಯಾಟರ್ ಟ್ರಾವಿಸ್‌ ಹೆಡ್ 2024ರ ಕ್ಯಾಲೆಂಡರ್ ವರ್ಷದಲ್ಲಿ ಅತ್ಯದ್ಭುತ ಪ್ರದರ್ಶನ ತೋರಿದ್ದಾರೆ. 2024ರಲ್ಲಿ ಆಸ್ಟ್ರೇಲಿಯಾ ಪರ ಒಟ್ಟು 15 ಟಿ20 ಪಂದ್ಯಗಳನ್ನಾಡಿ 178.47ರ ಸ್ಟ್ರೈಕ್‌ರೇಟ್‌ನಲ್ಲಿ 539 ರನ್ ಸಿಡಿಸಿ ಮಿಂಚಿದ್ದಾರೆ.

    2. ಸಿಖಂದರ್ ರಾಜಾ
    ಜಿಂಬಾಬ್ವೆ ಮೂಲದ ಸ್ಟಾರ್ ಆಲ್ರೌಂಡರ್ ಸಿಖಂದರ್ ರಾಜಾ ಅವರ ಪಾಲಿಗೆ 2024ರ ವರ್ಷ ಅವಿಸ್ಮರಣೀಯವಾಗಿದೆ. ಈ ವರ್ಷ ರಾಜಾ ಜಿಂಬಾಬ್ವೆ ಪರ 24 ಟಿ20 ಪಂದ್ಯಗಳನ್ನು ಆಡಿ 573 ರನ್ ಸಿಡಿಸಿದ್ದಾರೆ. ಇನ್ನು ಇದಷ್ಟೇ ಅಲ್ಲದೇ ಬೌಲಿಂಗ್‌ನಲ್ಲಿ ರಾಜಾ 24 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

    3. ಬಾಬರ್ ಆಜಂ
    ಪಾಕಿಸ್ತಾನ ಕ್ರಿಕೆಟ್‌ ತಂಡದ ಮಾಜಿ ನಾಯಕ ಬಾಬರ್ ಅಜಂ ಕೂಡಾ 2024ರಲ್ಲಿ ರನ್ ಹೊಳೆಯನ್ನೇ ಹರಿಸಿದ್ದಾರೆ. 2024ರಲ್ಲಿ ಬಾಬರ್ ಅಜಂ ಪಾಕಿಸ್ತಾನ ಪರ 24 ಟಿ20 ಪಂದ್ಯಗಳನ್ನಾಡಿ 738 ರನ್ ಸಿಡಿಸಿದ್ದಾರೆ.

    4. ಅರ್ಷ್‌ದೀಪ್‌ ಸಿಂಗ್
    ಟೀಂ ಇಂಡಿಯಾ ಎಡಗೈ ವೇಗಿ ಅರ್ಷ್‌ದೀಪ್‌ ಸಿಂಗ್, ಐಸಿಸಿ ವರ್ಷದ ಟಿ20 ಕ್ರಿಕೆಟಿಗ ಪ್ರಶಸ್ತಿಯ ರೇಸ್‌ನಲ್ಲಿರುವ ಏಕೈಕ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ. ಕಳೆದ ಕೆಲ ವರ್ಷಗಳಿಂದ ಅರ್ಶದೀಪ್ ಸಿಂಗ್ ಭಾರತ ಟಿ20 ತಂಡದ ಅವಿಭಾಜ್ಯ ಅಂಗವಾಗಿ ಗುರುತಿಸಿಕೊಂಡಿದ್ದಾರೆ. 2024ರಲ್ಲಿ ಅರ್ಷ್‌ದೀಪ್‌ ಭಾರತ ಪರ 18 ಟಿ20 ಪಂದ್ಯಗಳನ್ನಾಡಿ 36 ವಿಕೆಟ್ ಕಬಳಿಸಿದ್ದಾರೆ. 2024ರ ಟಿ20 ವಿಶ್ವಕಪ್‌ ಟೂರ್ನಿಯಲ್ಲೂ ಅರ್ಷ್‌ದೀಪ್‌ ಗರಿಷ್ಠ 17 ವಿಕೆಟ್‌ ಪಡೆದ ದಾಖಲೆ ಬರೆದಿದ್ದರು.

  • ತವರಲ್ಲೇ ಆಸ್ಟ್ರೇಲಿಯಾ ಬಗ್ಗು ಬಡಿದ ಪಾಕ್‌ – 22 ವರ್ಷಗಳ ಬಳಿಕ ಸರಣಿ ಗೆಲುವು

    ತವರಲ್ಲೇ ಆಸ್ಟ್ರೇಲಿಯಾ ಬಗ್ಗು ಬಡಿದ ಪಾಕ್‌ – 22 ವರ್ಷಗಳ ಬಳಿಕ ಸರಣಿ ಗೆಲುವು

    ಕ್ಯಾನ್ಬೆರಾ: ಇಲ್ಲಿನ ಪರ್ತ್‌ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ (Australia) ವಿರುದ್ಧ ನಡೆದ 3ನೇ ಏಕದಿನ ಪಂದ್ಯದಲ್ಲಿ ಪಾಕಿಸ್ತಾನ ಕ್ರಿಕೆಟ್‌ ತಂಡ (Pakistan) 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

    ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಲ್ಲಿ ಗೆದ್ದುಕೊಂಡಿದೆ. ಜೊತೆಗೆ ಕಳೆದ 22 ವರ್ಷಗಳಲ್ಲಿ ಇದೇ ಮೊದಲಬಾರಿಗೆ ಪಾಕ್‌, ಆಸ್ಟ್ರೇಲಿಯಾದಲ್ಲಿ ಸರಣಿಗೆದ್ದ ಸಾಧನೆ ಮಾಡಿದೆ. ಇದು ನೂತನ ಕ್ಯಾಪ್ಟನ್‌ ಮೊಹಮ್ಮದ್‌ ರಿಜ್ವಾನ್‌ (Mohammad Rizwan) ಅವರ ನಾಯಕತ್ವದಲ್ಲಿ ಗೆದ್ದ ಮೊದಲ ಸರಣಿಯೂ ಆಗಿದೆ. ಕೊನೆಯದ್ದಾಗಿ 2002ರಲ್ಲಿ ಪಾಕ್‌ ಆಸೀಸ್‌ ನೆಲದಲ್ಲಿ ಸರಣಿ ಗೆದ್ದಿತ್ತು. ಇದನ್ನೂ ಓದಿ: ಕೊಹ್ಲಿಗೆ ಕ್ಯಾಪ್ಟೆನ್ಸಿ ನೀಡುವ ಬಗ್ಗೆ ನಿರ್ಧಾರ ಆಗಿಲ್ಲ -‌ ಕೋಟ್ಯಂತರ ಅಭಿಮಾನಿಗಳ ಆಸೆಗೆ ಫ್ರಾಂಚೈಸಿ ತಣ್ಣೀರು

    141 ರನ್‌ಗಳ ಸುಲಭ ಗುರಿ ಬೆನ್ನತ್ತಿದ್ದ ಪಾಕ್‌ ಬ್ಯಾಟರ್‌ಗಳು ಉತ್ತಮ ಆರಂಭ ಪಡೆಯುವಲ್ಲಿ ಯಶಸ್ವಿಯಾದರು. ಮೊದಲ ವಿಕೆಟ್‌ಗೆ ಪಾಕ್ ‌84 ರನ್‌ಗಳ ಜೊತೆಯಾಟ ನೀಡಿತ್ತು. ಆರಂಭಿಕರ ವಿಕೆಟ್‌ ಪತನವಾದ ಬಳಿಕ ಕ್ರೀಸ್‌ಗಿಳಿದ ನಾಯಕ ಮೊಹಮ್ಮದ್‌ ರಿಜ್ವಾನ್‌ ಮತ್ತು ಬಾಬರ್‌ ಆಜಂ ಜೋಡಿ ವಿಕೆಟ್‌ ಬಿಟ್ಟುಕೊಡದೇ ತಂಡವನ್ನು ಗೆಲುವಿನ ದಡ ಸೇರಿಸಿದರು.

    ಪಾಕ್‌ ಪರ ಸೈಮ್‌ ಅಯೂಬ್‌ 42 ರನ್‌, ಅಬ್ದುಲ್ಲಾ ಶಫಿಕ್‌ 37 ರನ್‌ ಗಳಿಸಿ ಔಟಾದರೆ, ಮೊಹಮ್ಮದ್‌ ರಿಜ್ವಾನ್‌ 30 ರನ್‌ ಹಾಗೂ ಬಾಬರ್‌ ಆಜಂ (Babar Azam) 28 ರನ್‌ ಗಳಿಸಿ ಕ್ರೀಸ್‌ನಲ್ಲಿ ಉಳಿದರು. ಇನ್ನೂ ಆಸ್ಟ್ರೇಲಿಯಾ ಪಾರ ಲ್ಯಾನ್ಸ್‌ ಮೊರಿಸ್‌ 6 ಓವರ್‌ಗಳಲ್ಲಿ 24 ರನ್‌ ಬಿಟ್ಟುಕೊಟ್ಟು 2 ವಿಕೆಟ್‌ ಕಿತ್ತರು. ಇದನ್ನೂ ಓದಿ: ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರದಿದ್ದರೆ ಐಸಿಸಿ ಟೂರ್ನಿಗಳಿಗೆ ಬಹಿಷ್ಕಾರ: ಪಾಕ್‌

    ಇದಕ್ಕೂ ಮುನ್ನ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆತಿಥೇಯ ಆಸೀಸ್‌ ತಂಡವು 31.5 ಓವರ್‌ಗಳಲ್ಲಿ ಕೇವಲ 140 ರನ್​ಗಳಿಗೆ ಆಲೌಟ್ ಆಯಿತು. ಅಗ್ರ ಕ್ರಮಾಂಕದ ಬ್ಯಾಟರ್‌ಗಳು ಅಲ್ಪ ಮೊತ್ತಕ್ಕೆ ನೆಲಕಚ್ಚಿದರು. ಆದರೆ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶಾನ್ ಅಬಾಟ್ 41 ಎಸೆತಗಳಲ್ಲಿ 30 ರನ್ ಬಾರಿಸಿದರು. ಅತ್ತ ಸಂಘಟಿತ ದಾಳಿಯೊಂದಿಗೆ ಆಸ್ಟ್ರೇಲಿಯನ್ನರ ಮೇಲೆ ಹಿಡಿತ ಸಾಧಿಸಿದ ಪಾಕ್ ಬೌಲರ್​ಗಳು ಅಂತಿಮವಾಗಿ ಆತಿಥೇಯರನ್ನು 31.5 ಓವರ್​ಗಳಲ್ಲಿ 140 ರನ್​ಗಳಿಗೆ ಆಲೌಟ್ ಮಾಡಿದರು.

    ಪಾಕಿಸ್ತಾನ ಪರ ಶಾಹೀನ್ ಶಾ ಅಫ್ರಿದಿ 32 ರನ್ ನೀಡಿ 3 ವಿಕೆಟ್ ಪಡೆದರೆ, ನಸೀಮ್ ಶಾ 54 ರನ್ ನೀಡಿ 3 ವಿಕೆಟ್ ಕಬಳಿಸಿದರು. ಇನ್ನು ಹ್ಯಾರಿಸ್ ರೌಫ್ 24 ರನ್​ಗಳಿಗೆ 2 ವಿಕೆಟ್ ಕಬಳಿಸಿ ಮಿಂಚಿದರು. ಇದರೊಂದಿಗೆ ಸರಣಿಯಲ್ಲಿ ಒಟ್ಟು 10 ವಿಕೆಟ್‌ ಪಡೆಯುವ ಮೂಲಕ ಪಂದ್ಯ ಶ್ರೇಷ್ಠ ಹಾಗೂ ಸರಣಿಶೇಷ್ಠ ಪ್ರಶಸ್ತಿಗೂ ಪಾತ್ರರಾದರು. ಇದನ್ನೂ ಓದಿ: ಚಾಂಪಿಯನ್ಸ್ ಟ್ರೋಫಿಗಾಗಿ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರಲ್ಲ; ಹೊಸ ಷರತ್ತು ಮುಂದಿಟ್ಟ ಬಿಸಿಸಿಐ  

  • ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರದಿದ್ದರೆ ಐಸಿಸಿ ಟೂರ್ನಿಗಳಿಗೆ ಬಹಿಷ್ಕಾರ: ಪಾಕ್‌

    ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರದಿದ್ದರೆ ಐಸಿಸಿ ಟೂರ್ನಿಗಳಿಗೆ ಬಹಿಷ್ಕಾರ: ಪಾಕ್‌

    – ಭಾರತ-ಪಾಕ್‌ ಇರೋದ್ರಿಂದಲೇ ಐಸಿಸಿ ಅಸ್ತಿತ್ವದಲ್ಲಿದೆ ಎಂದ ರಶೀದ್ ಲತೀಫ್

    ಇಸ್ಲಾಮಾಬಾದ್‌: ಮುಂದಿನ ವರ್ಷ ನಡೆಯಲಿರುವ ಚಾಂಪಿಯನ್ಸ್‌ ಟ್ರೋಫಿಯಲ್ಲಿ‌ (hampions trophy) ಪಾಲ್ಗೊಳ್ಳುವ ವಿಚಾರದಲ್ಲಿ ಭಾರತ-ಪಾಕಿಸ್ತಾನದ ನಡುವೆ ಹಗ್ಗಜಗ್ಗಾಟ ಮುಂದುವರಿದಿದೆ. ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI) ಈಗಾಗಲೇ ಪಾಕ್‌ಗೆ ಪ್ರಯಾಣಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದರೂ, ಪಿಸಿಬಿ ಮಾತ್ರ ಬರಲೇಬೇಕೆಂದು ಪಟ್ಟು ಹಿಡಿದಿದೆ. ಈ ನಡುವೆ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (PCB) ಮಹತ್ವದ ಹೇಳಿಕೆಯೊಂದನ್ನು ನೀಡಿದೆ.

    ಪಾಕ್‌ ತಂಡದ ಮಾಜಿ ನಾಯಕ ರಶೀದ್ ಲತೀಫ್, ಭಾರತ ಈ ಬಾರಿ ಪಾಕಿಸ್ತಾನಕ್ಕೆ ಹೋಗದಿದ್ದರೆ, ಐಸಿಸಿ ಕಾರ್ಯಕ್ರಮಗಳನ್ನು ಬಹಿಷ್ಕರಿಸುವ ದೊಡ್ಡ ಹೆಜ್ಜೆಯನ್ನು ಪಿಸಿಬಿ ತೆಗೆದುಕೊಳ್ಳುತ್ತದೆ ಹೇಳಿದ್ದಾರೆ. ಇದನ್ನೂ ಓದಿ: ಚಾಂಪಿಯನ್ಸ್ ಟ್ರೋಫಿಗಾಗಿ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರಲ್ಲ; ಹೊಸ ಷರತ್ತು ಮುಂದಿಟ್ಟ ಬಿಸಿಸಿಐ

    ಇದು ದ್ವಿಪಕ್ಷೀಯ ಸರಣಿ ಅಥವಾ ಏಷ್ಯಾ ಕಪ್ ಆಗಿದ್ದರೆ, ಭಾರತವು ಆಡಬೇಕೆ ಅಥವಾ ಬೇಡವೇ ಎಂದು ತಂಡಗಳನ್ನು ಕೇಳಬಹುದಿತ್ತು. ಇದು ದ್ವಿಪಕ್ಷೀಯ ಪಂದ್ಯವಾಗಿದ್ದರೆ, ಪಂದ್ಯವನ್ನು ರದ್ದು ಮಾಡಬಹುದಿತ್ತು. ಆದ್ರೆ ನೀವು ಈಗಾಗಲೇ ಸಹಿ ಮಾಡಿರುವುದರಿಂದ ಐಸಿಸಿ ಒಪ್ಪಂದಗಳನ್ನು ನಿರಾಕರಿಸಲಾಗುವುದಿಲ್ಲ. ಭಾರತವು ಗಟ್ಟಿ ನಿಲುವು ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: WPL 2025 | 3ನೇ ಆವೃತ್ತಿಗೆ ಭರ್ಜರಿ ತಯಾರಿ – ರೀಟೆನ್‌ ಪಟ್ಟಿ ರಿಲೀಸ್‌

    ಈಗಾಗಲೇ ಎಲ್ಲಾ ಪ್ರಸಾರಕರು ಮತ್ತು ಪ್ರಾಯೋಜಕರು 2024-31ರ ಅವಧಿಗೆ ಸಹಿ ಮಾಡಿದ್ದಾರೆ. ಭಾರತ ತಂಡ ಭಾಗವಹಿಸಲು ನಿರಾಕರಿಸಿದ್ರೆ ಬಲವಾದ ಕಾರಣ ಇರಬೇಕು. ಬಿಸಿಸಿಐ ಭದ್ರತೆಯ ಕಾರಣಗಳನ್ನು ನೀಡಿ ಟೂರ್ನಿ ನಿರಾಕರಿಸಲು ಮುಂದಾಗುತ್ತಿದೆ. ಹಾಗಾದರೆ ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾದಂತಹ ತಂಡಗಳು ಪಾಕಿಸ್ತಾನಕ್ಕೆ ಬರುತ್ತಿಲ್ಲವೇ? ಭಾರತವು ಪಾಕಿಸ್ತಾನಕ್ಕೆ ಹೋಗದಿದ್ದರೆ, ಪಾಕಿಸ್ತಾನವು ಐಸಿಸಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ.

    ಮುಂದುವರಿದು ಪಾಕಿಸ್ತಾನ ಮತ್ತು ಭಾರತ ಇರುವುದರಿಂದಲೇ ಐಸಿಸಿ ಅಸ್ತಿತ್ವದಲ್ಲಿದೆ. ಭಾರತದಂತೆ ಪಾಕಿಸ್ತಾನ ಸರ್ಕಾರವೂ ನಾವು ಆಡುವುದಿಲ್ಲ ಎಂದು ಹೇಳಿದರೆ, ಯಾರೂ ಕೂಡ ಪಂದ್ಯವನ್ನು ವೀಕ್ಷಿಸುವುದಿಲ್ಲ. ಬಿಸಿಸಿಐನಿಂದಲೂ ಯಾವುದೇ ಪ್ರಯೋಜನ ಆಗೋದಿಲ್ಲ ಎಂದು ಕೆಣಕಿದ್ದಾರೆ. ಇದನ್ನೂ ಓದಿ: ಕೊಹ್ಲಿಗೆ ಕ್ಯಾಪ್ಟೆನ್ಸಿ ನೀಡುವ ಬಗ್ಗೆ ನಿರ್ಧಾರ ಆಗಿಲ್ಲ -‌ ಕೋಟ್ಯಂತರ ಅಭಿಮಾನಿಗಳ ಆಸೆಗೆ ಫ್ರಾಂಚೈಸಿ ತಣ್ಣೀರು

    ಚಾಂಪಿಯನ್ಸ್ ಟ್ರೋಫಿಯಲ್ಲಿ ಅಫ್ಘಾನಿಸ್ತಾನ, ಆಸ್ಟ್ರೇಲಿಯಾ, ಬಾಂಗ್ಲಾದೇಶ, ಇಂಗ್ಲೆಂಡ್, ಭಾರತ, ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ ಮತ್ತು ಹಾಲಿ ಚಾಂಪಿಯನ್ ಪಾಕಿಸ್ತಾನ ಸೇರಿದಂತೆ ತಲಾ 4 ತಂಡಗಳ ಎರಡು ಗುಂಪುಗಳನ್ನು ಒಳಗೊಂಡಿವೆ. ಈಗಾಗಲೇ ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ನಿಗದಿಯಾಗಿದ್ದು, ಪಾಕಿಸ್ತಾನದ ಮುಲ್ತಾನ್‌, ರಾವಲ್ಪಿಂಡಿ ಹಾಗೂ ಲಾಹೋರ್‌ ಕ್ರೀಡಾಂಗಣಗಳು ಆತಿಥ್ಯ ವಹಿಸಲು ಸಜ್ಜಾಗಿವೆ.

    ಬಿಸಿಸಿಐ ಷರತ್ತು ಏನು?
    ಚಾಂಪಿಯನ್ಸ್‌ ಟ್ರೋಫಿಗಾಗಿ ಭಾರತ ತಂಡವು ಪಾಕಿಸ್ತಾನಕ್ಕೆ (Pakistan) ಬರುವುದಿಲ್ಲ ಎಂದು ಬಿಸಿಸಿಐ ಹೇಳಿದೆ. ಜೊತೆಗೆ ಭಾರತದ ಎಲ್ಲಾ ಪಂದ್ಯಗಳನ್ನು ದುಬೈಗೆ ಸ್ಥಳಾಂತರಿಸುವಂತೆ ಬೇಡಿಕೆಯಿಟ್ಟಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: 6,6,6,6,6,W,6 – ಒಂದೇ ಓವರ್‌ನಲ್ಲಿ 37 ರನ್‌ ಬಿಟ್ಟುಕೊಟ್ಟ ರಾಬಿನ್ ಉತ್ತಪ್ಪ!

  • ಚಾಂಪಿಯನ್ಸ್ ಟ್ರೋಫಿಗಾಗಿ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರಲ್ಲ; ಹೊಸ ಷರತ್ತು ಮುಂದಿಟ್ಟ ಬಿಸಿಸಿಐ

    ಚಾಂಪಿಯನ್ಸ್ ಟ್ರೋಫಿಗಾಗಿ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರಲ್ಲ; ಹೊಸ ಷರತ್ತು ಮುಂದಿಟ್ಟ ಬಿಸಿಸಿಐ

    ಮುಂಬೈ: 2025ರ ಫೆಬ್ರವರಿಯಲ್ಲಿ ನಡೆಯಲಿರುವ ಚಾಂಪಿಯನ್ಸ್‌ ಟ್ರೋಫಿಗಾಗಿ ಭಾರತ ಪುರುಷರ ಕ್ರಿಕೆಟ್‌ ತಂಡ (Team India) ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ಹೇಳಿರುವ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI), ಹೊಸ ಷರತ್ತು ಮುಂದಿಟ್ಟಿದೆ.

    2025ರ ಫೆಬ್ರವರಿ 19ರಿಂದ ಮಾರ್ಚ್‌ 9ರ ವರೆಗೆ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ (Champions Trophy 2025) ಪಾಕ್‌ ಆತಿಥ್ಯದಲ್ಲಿ ನಡೆಯಲಿದೆ. ಈಗಾಗಲೇ ವೇಳಾಪಟ್ಟಿ ಸಹ ನಿಗದಿಯಾಗಿದ್ದು, ಭಾರತದ ಪಂದ್ಯಗಳಿಗೆ ಲಾಹೋರ್‌ ಕ್ರೀಡಾಂಗಣ ಆತಿಥ್ಯ ವಹಿಸಲು ಸಜ್ಜಾಗಿವೆ. ಈ ಸಂಬಂಧ ಬಿಸಿಸಿಐ ಪ್ರತಿಕ್ರಿಯೆ ನೀಡಿದ್ದು, ಭಾರತ ತಂಡವು ಪಾಕಿಸ್ತಾನಕ್ಕೆ (Pakistan) ಬರುವುದಿಲ್ಲ ಎಂದು ಹೇಳಿದೆ. ಜೊತೆಗೆ ಭಾರತದ ಎಲ್ಲಾ ಪಂದ್ಯಗಳನ್ನು ದುಬೈಗೆ ಸ್ಥಳಾಂತರಿಸುವಂತೆ ಬೇಡಿಕೆಯಿಟ್ಟಿದೆ ಎಂದು ವರದಿಯಾಗಿದೆ. ಆದ್ರೆ ವರದಿಗಳನ್ನು ತಳ್ಳಿಹಾಕಿರುವ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ಪಾಕಿಸ್ತಾನ ನೆಲದಲ್ಲೇ ಭಾರತ ತನ್ನ ಪಂದ್ಯಗಳನ್ನಾಡಲಿದೆ ಎಂದು ಹೇಳಿಕೊಂಡಿದೆ.

    ಪಾಕ್‌ ಆಶ್ವಾಸನೆ ಏನು?
    ಭಾರತಕ್ಕೆ ಭದ್ರತೆಯ ಕೊರತೆ ಇದೆ ಅನ್ನಿಸಿದ್ರೆ, ಲಾಹೋರ್‌ನಲ್ಲಿ ಪಂದ್ಯಗಳನ್ನು ಆಡಿದ ಬಳಿಕ ಅದೇ ದಿನ ಭಾರತಕ್ಕೆ ಪ್ರಯಾಣಿಸಬಹುದು. ಅದಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ಮಾಡಲಿದೆ. ಇದರೊಂದಿಗೆ ಭಾರತೀಯ ಕ್ರಿಕೆಟ್‌ ಅಭಿಮಾನಿಗಳಿಗೆ ವಿಶೇಷ ಕೋಟಾ, ವೀಸಾ ವ್ಯವಸ್ಥೆ ಮಾಡುತ್ತೇವೆ ಎಂದು ಪಿಸಿಬಿ ಅಧ್ಯಕ್ಷ ನಖ್ವಿ ಹೇಳಿದ್ದಾರೆ.

    ಹೈಬ್ರಿಡ್‌ ಮಾದರಿಯಲ್ಲೇ ಟೂರ್ನಿ?
    ಕಳೆದ ವರ್ಷ ಏಕದಿನ ಏಷ್ಯಾಕಪ್‌ ಟೂರ್ನಿಯನ್ನಾಡಲು ಭಾರತ ತಂಡವನ್ನು ಪಾಕ್‌ಗೆ ಕಳುಹಿಸಲು ಬಿಸಿಸಿಐ ನಿರಾಕರಿಸಿದ ನಂತರ ACC (ಏಷ್ಯನ್‌ ಕ್ರಿಕೆಟ್‌ ಸಮಿತಿ) ಹೈಬ್ರಿಡ್‌ ಮಾದರಿಯಲ್ಲಿ ಆಡಿಸಲು ನಿರ್ಧರಿಸಿತು. ಏಷ್ಯಾಕಪ್‌ ಟೂರ್ನಿಯ ಹಕ್ಕು ಪಾಕಿಸ್ತಾನದ ಬಳಿಯಿದ್ದರೂ ಪಾಕ್‌ನಲ್ಲಿ ಕೇವಲ 4 ಪಂದ್ಯಗಳನ್ನಾಡಲು ಮಾತ್ರವೇ ಅನುಮತಿ ನೀಡಿತು. ಉಳಿದ 9 ಪಂದ್ಯಗಳನ್ನ ಶ್ರೀಲಂಕಾದಲ್ಲಿ ಆಡಿಸಲು ನಿರ್ಧರಿಸಿತು. ಈ ಬಾರಿಯೂ ಅದೇ ರೀತಿ ಹೈಬ್ರಿಡ್‌ ಮಾದರಿಯಲ್ಲಿ ಪಂದ್ಯಗಳನ್ನು ಆಯೋಜಿಸುವುದು ಬಹುತೇಕ ಖಚಿತವಾಗಿದೆ. ಆದ್ರೆ ಈ ಬಗ್ಗೆ ಪಿಸಿಬಿ ಹಾಗೂ ಐಸಿಸಿ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ.

    ಪಾಕ್‌ಗೆ ಪ್ರಯಾಣಿಸಲು ಭಾರತ ಹಿಂದೇಟು ಏಕೆ?
    ಪಾಕಿಸ್ತಾನ ಮುಸ್ಲಿಂ ರಾಷ್ಟ್ರವಾಗಿ ಬೇರ್ಪಟ್ಟ ನಂತರ ಭಾರತದ ವಿರುದ್ಧ ದ್ವೇಷ ಸಾಧಿಸುತ್ತಲೇ ಬಂದಿತು. 1947-48ರಲ್ಲಿ ರಾಜ ಹರಿಸಿಂಗ್‌ ಭಾರತದೊಂದಿಗೆ ಕಾಶ್ಮೀರ ವಿಲೀನ ಒಪ್ಪಂದಕ್ಕೆ ಸಹಿ ಹಾಕಿದ ನಂತರ ಇಂಡೋ ಪಾಕ್‌ ಯುದ್ಧ (Indo Pak War) ನಡೆಯಿತು. ಆ ನಂತರ 1965ರಲ್ಲಿ ಕಾಶ್ಮೀರಕ್ಕಾಗಿ ನಡೆದ ಯುದ್ಧ, 1971ರಲ್ಲಿ ಪೂರ್ವ ಪಾಕಿಸ್ತಾನ (ಇಂದಿನ ಬಾಂಗ್ಲಾದೇಶ) ವಿಮೋಚನೆಗಾಗಿ ನಡೆದ ಯುದ್ಧ, 1999 ರಲ್ಲಿ ನಡೆದ ಕಾರ್ಗಿಲ್‌ ಯುದ್ಧ ಇವೆಲ್ಲವೂ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧವನ್ನ ಮತ್ತಷ್ಟು ಹದಗೆಡಿಸುತ್ತಾ ಹೋಯಿತು. ಆದ್ರೆ ಕ್ರೀಡೆಯಲ್ಲಿ ಯಾವುದೇ ಬದಲಾವಣೆ ಆಗಿರಲಿಲ್ಲ. ಕಾರ್ಗಿಲ್‌ ಯುದ್ಧದ ನಂತರವೂ ಭಾರತ ಮತ್ತು ಪಾಕ್‌ ತಂಡಗಳು ದ್ವಿಪಕ್ಷಿಯ ಸರಣಿ, ಏಕದಿನ ಹಾಗೂ ಟಿ20 ಸರಣಿಗಳಲ್ಲಿ ಮುಖಾಮುಖಿಯಾಗಿವೆ. ಭಾರತ ತಂಡವು ಸಹ ಪಾಕಿಸ್ತಾನದಲ್ಲೇ ದ್ವಿಪಕ್ಷಿಯ ಸರಣಿಗಳನ್ನಾಡಿದೆ. ಆದ್ರೆ 2008ರಲ್ಲಿ ನಡೆದ ಮುಂಬೈ ದಾಳಿ (Mumbai Attack) ಎರಡು ರಾಷ್ಟ್ರಗಳ ಮೇಲೆ ಭಾರೀ ಪರಿಣಾಮ ಬೀರಿತು.

    ಭಾರತ ತಂಡವು 2005-2006ರಲ್ಲಿ ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ಪಾಕಿಸ್ತಾನಕ್ಕೆ ತನ್ನ ಕೊನೆಯ ಪ್ರವಾಸ ಕೈಗೊಂಡಿತ್ತು. ಈ ಪಂದ್ಯದಲ್ಲಿ ಇತ್ತಂಡಗಳು 3 ಟೆಸ್ಟ್ ಹಾಗೂ 5 ಏಕದಿನ ಪಂದ್ಯಗಳನ್ನಾಡಿದ್ದವು. ಆದ್ರೆ 2008ರಲ್ಲಿ ನಡೆದ ಮುಂಬೈ ದಾಳಿಯ ನಂತರ ಉಭಯ ತಂಡಗಳ ನಡುವೆ ಯಾವುದೇ ದ್ವಿಪಕ್ಷೀಯ ಸರಣಿ ನಡೆದಿಲ್ಲ. ಐಸಿಸಿ ಟೂರ್ನಿ ಅಥವಾ ಏಷ್ಯಾಕಪ್ ಟೂರ್ನಿಗಳಲ್ಲಿ ಮಾತ್ರವೇ ಪರಸ್ಪರ ಮುಖಾಮುಖಿಯಾಗುತ್ತಿವೆ. ಕಳೆದ ವರ್ಷ ಪಾಕಿಸ್ತಾನ ತಂಡ ಭಾರತದಲ್ಲಿ ನಡೆದ ವಿಶ್ವಕಪ್‌ ಟೂರ್ನಿಯಲ್ಲಿ ಪಾಕ್‌ ತಂಡ ಪಾಲ್ಗೊಂಡಿತ್ತು.

  • ಓವರ್‌ ಕಾನ್ಫಿಡೆನ್ಸ್‌ನಿಂದ‌ ಪಾಕ್‌ಗೆ ತವರಿನಲ್ಲೇ ಹೀನಾಯ ಸೋಲು – ಬಾಂಗ್ಲಾಕ್ಕೆ 10 ವಿಕೆಟ್‌ಗಳ ಭರ್ಜರಿ ಗೆಲುವು!

    ಓವರ್‌ ಕಾನ್ಫಿಡೆನ್ಸ್‌ನಿಂದ‌ ಪಾಕ್‌ಗೆ ತವರಿನಲ್ಲೇ ಹೀನಾಯ ಸೋಲು – ಬಾಂಗ್ಲಾಕ್ಕೆ 10 ವಿಕೆಟ್‌ಗಳ ಭರ್ಜರಿ ಗೆಲುವು!

    ರಾವಲ್ಪಿಂಡಿ: ಪಾಕ್‌ (Pakistan) ತಂಡದ ಓವರ್‌ ಕಾನ್ಫಿಡೆನ್ಸ್‌ನಿಂದಾಗಿ ತವರಿನಲ್ಲೇ ನಡೆದ ಟೆಸ್ಟ್‌ ಪಂದ್ಯದಲ್ಲಿ ಬಾಂಗ್ಲಾದೇಶ (Bangladesh) ವಿರುದ್ಧ 10 ವಿಕೆಟ್‌ಗಳ ಹೀನಾಯ ಸೋಲು ಕಂಡಿದೆ. ಅಲ್ಲದೇ ಪಾಕ್‌ ನೆಲದಲ್ಲಿ ಇದೇ ಮೊದಲ ಬಾರಿಗೆ ಬಾಂಗ್ಲಾದೇಶ ಐತಿಹಾಸಿಕ ಗೆಲುವು ಸಾಧಿಸಿದೆ. ಈ ಮೂಲಕ 2 ಪಂದ್ಯಗಳ ಟೆಸ್ಟ್‌ ಸರಣಿಯನ್ನು (Test Series) 1-0 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

    ರಾವಲ್ಪಿಂಡಿಯಲ್ಲಿ (Rawalpindi) ನಡೆದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಪಾಕ್‌ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 6 ವಿಕೆಟ್‌ ನಷ್ಟಕ್ಕೆ 448 ರನ್‌ ಗಳಿಸಿ ಡಿಕ್ಲೇರ್‌ ಮಾಡಿಕೊಂಡಿತ್ತು. ಇದರಿಂದ ಪಾಕ್‌ ತಂಡದ ಆಟಗಾರರು ನಾಯಕನ ವಿರುದ್ಧ ಅಸಮಾಧಾನ ಹೊರಹಾಕಿದ್ದರು. 171 ರನ್‌ ಗಳಿಸಿ ದ್ವಿಶತಕ ಸಿಡಿಸುವ ಉತ್ಸಾಹದಲ್ಲಿದ್ದ ಮೊಹಮ್ಮದ್‌ ರಿಜ್ವಾನ್‌ (Mohammad Rizwan) ಬ್ಯಾಟ್‌ ಬಿಸಾಡಿ ಆಕ್ರೋಶ ಹೊರಹಾಕಿದ್ದರು. ಪಾಕ್‌ ತಂಡ ಮಾಡಿದ ಯಡವಟ್ಟಿನಿಂದಲೇ ಇದೀಗ ಹೀನಾಯ ಸೋಲು ಕಂಡಿದೆ.

    ಪಾಕ್‌ ಮೊದಲ ಇನ್ನಿಂಗ್ಸ್‌ನಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ 448 ರನ್‌ ಗಳಿಸಿ ಡಿಕ್ಲೇರ್‌ ಮಾಡಿಕೊಂಡಿತು. ಪಾಕ್‌ ಪರ ಸೌದ್‌ ಶಕೀಲ್‌ 261 ಎಸೆತಗಳಲ್ಲಿ 141 ರನ್‌ ಗಳಿದಿದ್ರೆ, ಮೊಹಮ್ಮದ್‌ ರಿಜ್ವಾನ್‌ 239 ಎಸೆತಗಳಲ್ಲಿ 171 ರನ್‌ (11 ಬೌಂಡರಿ, 3 ಸಿಕ್ಸರ್)‌, ಸೈಮ್ ಅಯೂಬ್ 56 ರನ್‌ ಗಳಿಸಿದ್ದರು. ಇದರಿಂದ ತಂಡದ ಮೊತ್ತ ಪಾಕ್‌ 113 ಓವರ್‌ಗಳಲ್ಲಿ 448 ರನ್‌ ಗಳಿಸಿತ್ತು. ಆದ್ರೆ ತನ್ನ ಸರದಿ ಆರಂಭಿಸಿದ್ದ ಬಾಂಗ್ಲಾದೇಶ ಮೊದಲ ಇನ್ನಿಂಗ್ಸ್‌ನಲ್ಲಿ 167.3 ಓವರ್‌ಗಳಲ್ಲಿ 565 ರನ್‌ ಪೇರಿಸಿತ್ತು. ಬ್ಯಾಟಿಂಗ್​ನಲ್ಲಿ ಮೊದಲ ಇನಿಂಗ್ಸ್​ನಲ್ಲಿ ಪಾಕ್‌ ಬೌಲರ್‌ಗಳ ಮೇಲೆ ಸವಾರಿ ಮಾಡಿದ್ದ ಅನುಭವಿ ಆಟಗಾರ ಮುಶ್ಫಿಕರ್‌ ರಹೀಂ 191 ರನ್‌ ಬಾರಿಸಿದ್ದರು. ಅವರ ಈ ಭರ್ಜರಿ ಆಟ ಬಾಂಗ್ಲಾ ತಂಡಕ್ಕೆ ಮೇಲುಗೈ ಸಾಧಿಸುವಂತೆ ಮಾಡಿತು. ಉಳಿದಂತೆ ಮೆಹಿದಿ ಹಸನ್ 77, ಶಾದ್ಮನ್ ಇಸ್ಲಾಂ 93 ರನ್‌ಗಳ ಕೊಡುಗೆ ನೀಡಿದ್ದರು.

    ಇನ್ನೂ 4ನೇ ದಿನ ದ್ವಿತೀಯ ಇನ್ನಿಂಗ್ಸ್‌ ಆರಂಭಿಸಿದ ಪಾಕಿಸ್ತಾನ 146 ರನ್‌ಗಳಿಗೆ ಸರ್ವಪತನ ಕಂಡಿತು. ಪಾಕ್‌ ಪರ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಮೊಹಮ್ಮದ್‌ ರಿಜ್ವಾನ್‌ 51 ರನ್‌, ಅದ್ಭುಲ್‌ ಶಫಿಕ್‌ 37 ರನ್‌, ಬಾಬರ್‌ ಆಜಂ (Babar Azam) 22 ರನ್‌ ಗಳಿಸಿದ್ದು ಬಿಟ್ಟರೆ ಉಳಿದ ಆಟಗಾರರು ಅಲ್ಪಮೊತ್ತಕ್ಕೆ ನೆಲ ಕಚ್ಚಿದ್ದರು. ಇದರಿಂದ ಗೆಲುವಿಗೆ ಕೇವಲ 30 ರನ್‌ ಗುರಿ ಪಡೆದ ಬಾಂಗ್ಲಾದೇಶ ವಿಕೆಟ್​ ನಷ್ಟವಿಲ್ಲದೇ ಗೆಲುವು ಸಾಧಿಸಿತು. ಅತಿಯಾದ ಆತ್ಮವಿಶ್ವಾಸವೇ ಪಾಕ್​ ತಂಡದ ಸೋಲಿಗೆ ಕಾರಣವಾಯಿತು.

    ಬಾಂಗ್ಲಾ ಪರ ದ್ವಿತೀಯ ಇನಿಂಗ್ಸ್​ನಲ್ಲಿ ಮಾರಕ ಬೌಲಿಂಗ್​ ದಾಳಿ ನಡೆಸಿದ ಮೆಹಿದಿ ಹಸನ್ ಮಿರಾಜ್ 21 ರನ್​ಗೆ 4 ವಿಕೆಟ್​ ಕಿತ್ತರೆ, ಆಲ್‌ರೌಂಡರ್‌ ಶಕಿಬ್​ ಅಲ್​ ಹಸನ್ 3 ವಿಕೆಟ್,ಶೊರಿಫುಲ್‌, ಹಸನ್‌ ಮೊಹಮ್ಮದ್‌ ಹಾಗೂ ನಹಿದ್‌ ರಾಣಾ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

    ದ್ವಿತೀಯ ಇನ್ನಿಂಗ್ಸ್‌ನಲ್ಲಿ ಬಾಂಗ್ಲಾ ಪರ ಜಾಕಿರ್‌ ಹಸನ್‌ 15 ರನ್‌, ಶಾದ್‌ಮನ್‌ ಇಸ್ಲಾಮ್‌ 9 ರನ್‌ ಗಳಿಸಿದ್ರೆ, ವೈಡ್‌ ಮತ್ತು ಲೆಗ್‌ಬೈಸ್‌ನಿಂದ ಹೆಚ್ಚುವರಿ 6 ರನ್‌ ತಂಡಕ್ಕೆ ಸೇರ್ಪಡೆಯಾಯಿತು.

    ಐತಿಹಾಸಿಕ ಗೆಲುವು:
    ಬಾಂಗ್ಲಾದೇಶ, ಪಾಕಿಸ್ತಾನ ನೆಲದಲ್ಲಿ ಸಾಧಿಸಿದ ಮೊದಲ ಗೆಲುವು ಇದಾಗಿದೆ. ಇದುವರೆಗೆ 13 ಟೆಸ್ಟ್​ ಪಂದ್ಯಗಳನ್ನು ಆಡಿತ್ತಾದರೂ ಒಂದೇ ಒಂದು ಗೆಲುವು ಸಾಧಿಸಲು ಸಾಧ್ಯವಾಗಿರಲಿಲ್ಲ. ಇದೀಗ 14ನೇ ಪ್ರಯತ್ನದಲ್ಲಿ ಮೊದಲ ಟೆಸ್ಟ್ ಪಂದ್ಯವನ್ನು ಗೆದ್ದು ಸಾಧನೆ ಮಾಡಿದೆ.

    ಸಂಕ್ಷಿಪ್ತ ಸ್ಕೋರ್‌
    ಮೊದಲ ಇನ್ನಿಂಗ್ಸ್‌
    ಪಾಕಿಸ್ತಾನ – 448/6d, ಬಾಂಗ್ಲಾದೇಶ – 565/10

    2ನೇ ಇನ್ನಿಂಗ್ಸ್‌
    ಪಾಕಿಸ್ತಾನ – 146/10, ಬಾಂಗ್ಲಾದೇಶ – 30/0

  • ಭದ್ರತಾ ಕಾರಣಕ್ಕಾಗಿ ಭಾರತ ಸರ್ಕಾರ ಅನುಮತಿ ನಿರಾಕರಿಸಿದ್ರೆ ಬಿಸಿಸಿಐ ಬರೆದುಕೊಡಲಿ – ಪಾಕ್‌ ಪಟ್ಟು!

    ಭದ್ರತಾ ಕಾರಣಕ್ಕಾಗಿ ಭಾರತ ಸರ್ಕಾರ ಅನುಮತಿ ನಿರಾಕರಿಸಿದ್ರೆ ಬಿಸಿಸಿಐ ಬರೆದುಕೊಡಲಿ – ಪಾಕ್‌ ಪಟ್ಟು!

    ಇಸ್ಲಾಮಾಬಾದ್‌: 2025ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ (Champions Trophy 2025) ಟೂರ್ನಿಗಾಗಿ ಭಾರತ ಕ್ರಿಕೆಟ್‌ ತಂಡವು ಪಾಕಿಸ್ತಾನಕ್ಕೆ ಬರುವುದಿಲ್ಲ ಎಂದು ಹೇಳಿದೆ. ಭಾರತ ಸರ್ಕಾರ ಭದ್ರತಾ ಕಾರಣಗಳಿಗಾಗಿ ಭಾರತ ತಂಡವನ್ನು ಕಳುಹಿಸಲು ಅನುಮತಿ ನಿರಾಕರಿಸಿದ್ದರೆ. ಬಿಸಿಸಿಐ (BCCI) ಲಿಖಿತ ರೂಪದಲ್ಲಿ ಬರೆದುಕೊಡಬೇಕು ಎಂದು ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (PCB) ಒತ್ತಾಯಿಸಿದೆ.

    ಭಾರತ ಕ್ರಿಕೆಟ್‌ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲು ಭಾರತ ಸರ್ಕಾರ ಅನುಮತಿ ನಿರಾಕರಿಸಿದರೆ, ಅದನ್ನು ಲಿಖಿತ ರೂಪದಲ್ಲಿ ಬರೆದುಕೊಡಬೇಕು. ಜೊತೆಗೆ ಆ ಪತ್ರವನ್ನು ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿಗೆ (ಐಸಿಸಿ) ಸಲ್ಲಿಸಬೇಕು. ಈಗಾಗಲೇ ಕರಡು ವೇಳಾಪಟ್ಟಿ ಸಿದ್ಧಗೊಂಡಿರುವುದರಿಂದ ಟೂರ್ನಿ ಪ್ರಾರಂಭವಾಗುವ 5-6 ತಿಂಗಳಿಗೆ ಮುಂಚಿತವಾಗಿಯೇ ಐಸಿಸಿಗೆ ತಿಳಿಸಬೇಕು ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ಹೇಳಿದೆ. ಇದನ್ನೂ ಓದಿ: ಮುಂಬೈನಲ್ಲಿ ದೇಶದ 2ನೇ ಅತಿದೊಡ್ಡ ಕ್ರಿಕೆಟ್‌ ಸ್ಟೇಡಿಯಂ ನಿರ್ಮಿಸಲು ಪ್ಲ್ಯಾನ್‌!

    2025ರ ಫೆಬ್ರವರಿ 19ರಿಂದ ಮಾರ್ಚ್‌ 9ರ ವರೆಗೆ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ (Champions Trophy) ಪಾಕ್‌ ಆತಿಥ್ಯದಲ್ಲಿ ನಡೆಯಲಿದೆ. ಫೈನಲ್‌ ಪಂದ್ಯಕ್ಕೆ ಮಳೆ ಅಡ್ಡಿಯಾದ್ರೆ ಮಾರ್ಚ್‌ 10 ರಂದು ಮೀಸಲು ದಿನ ಇರಲಿದೆ. ಪಾಕಿಸ್ತಾನದ (Pakistan) ಕರಾಚಿ, ಲಾಹೋರ್, ಮುಲ್ತಾನ್ ಮತ್ತು ರಾವಲ್ಪಿಂಡಿ ಕ್ರೀಡಾಂಗಣಗಳು ಆತಿಥ್ಯ ವಹಿಸಲಿವೆ. ಇದನ್ನೂ ಓದಿ: IPL ಟ್ರೋಫಿ ತಂದುಕೊಡದಿದ್ದಕ್ಕೆ ತಲೆದಂಡ – ಡೆಲ್ಲಿ ಕ್ಯಾಪಿಟಲ್ಸ್ ಕೋಚ್ ಹುದ್ದೆಯಿಂದ ರಿಕಿ ಪಾಂಟಿಂಗ್​ಗೆ ಕೊಕ್​!

    ಈಗಾಗಲೇ ಪಿಸಿಬಿ ತನ್ನ ಕರಡು ವೇಳಾಪಟ್ಟಿಯನ್ನ ಐಸಿಸಿಗೆ ಸಲ್ಲಿಸಿದೆ. ಸಂಭವನೀಯ ಸೆಮಿಫೈನಲ್ ಮತ್ತು ಫೈನಲ್ ಪಂದ್ಯ ಸೇರಿದಂತೆ ಭಾರತದ ಎಲ್ಲಾ ಪಂದ್ಯಗಳನ್ನು ಲಾಹೋರ್‌ನಲ್ಲಿ ನಿಗದಿಪಡಿಸಲಾಗಿದೆ. ಪಾಕಿಸ್ತಾನದ ಹೊರಗೆ ಕೆಲವು ಪಂದ್ಯಗಳನ್ನು ಆಡುವ ಅಗತ್ಯವಿದ್ದಲ್ಲಿ ಐಸಿಸಿ ಮ್ಯಾನೇಜ್‌ಮೆಂಟ್ ಹೆಚ್ಚುವರಿ ವೆಚ್ಚವನ್ನು ಶಿಫಾರಸು ಮಾಡಲಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: Paris Olympics | ಜಿಯೋ ಸಿನಿಮಾದಲ್ಲಿ ಉಚಿತವಾಗಿ ವೀಕ್ಷಿಸಿ