Tag: Babri Masjid Verdict

  • ತೀರ್ಪು ಬಹಳ ಸಂತಸ ತಂದಿದೆ – ಅಡ್ವಾಣಿ

    ತೀರ್ಪು ಬಹಳ ಸಂತಸ ತಂದಿದೆ – ಅಡ್ವಾಣಿ

    ನವದೆಹಲಿ: ಈ ತೀರ್ಪು ಬಹಳ ಸಂತಸ ತಂದಿದೆ ಎಂದು ಬಿಜೆಪಿಯ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಪ್ರತಿಕ್ರಿಯೆ ನೀಡಿದ್ದಾರೆ.

    ಸಿಬಿಐ ವಿಶೇಷ ನ್ಯಾಯಾಲಯ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ಪ್ರಕಟಿಸಿದ ಬಳಿಕ ಪ್ರತಿಕ್ರಿಯಿಸಿದ ಅವರು, ಈ ತೀರ್ಪು ರಾಮ ಜನ್ಮಭೂಮಿ ಚಳವಳಿಯ ಬಗ್ಗೆ ನನ್ನ ವೈಯಕ್ತಿಕ ಮತ್ತು ಬಿಜೆಪಿಯ ನಂಬಿಕೆ ಮತ್ತು ಬದ್ಧತೆಯನ್ನು ಸಮರ್ಥಿಸುತ್ತದೆ ಎಂದು ಹೇಳಿದ್ದಾರೆ.

    ಮತ್ತೊಬ್ಬ ಹಿರಿಯ ನಾಯಕ ಮುರಳಿ ಮನೋಹರ ಜೋಶಿ ಪ್ರತಿಕ್ರಿಯಿಸಿ, ನ್ಯಾಯಾಲಯದಿಂದ ಐತಿಹಾಸಿಕ ನಿರ್ಧಾರ ಪ್ರಕಟವಾಗಿದೆ. ಅಯೋಧ್ಯೆಯಲ್ಲಿ ಡಿಸೆಂಬರ್ 6ರ ಘಟನೆಗೆ ಯಾವುದೇ ಪಿತೂರಿ ನಡೆದಿಲ್ಲ ಎಂಬುದು ಈ ತೀರ್ಪಿನಿಂದ ಸಾಬೀತಾಗಿದೆ. ಅಂದು ನಡೆಸಿದ ಕಾರ್ಯಕ್ರಮ ಪಿತೂರಿಯ ಭಾಗವಾಗಿರಲಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಇಂದು ಭಾರತ ನ್ಯಾಯಾಂಗ ವ್ಯವಸ್ಥೆಯ ಕರಾಳ ದಿನ: ಓವೈಸಿ

    28ವರ್ಷಗಳ ಹಳೆಯ ಬಾಬ್ರಿ ಮಸೀದಿ ಧ್ವಂಸ ಪೂರ್ವನಿಯೋಜಿತ ಕೃತ್ಯ ಅಲ್ಲ. ಇದೊಂದು ಆಕಸ್ಮಿಕ ಘಟನೆ ಎಂದು ಅಭಿಪ್ರಾಯ ಪಟ್ಟ ಸಿಬಿಐ ವಿಶೇಷ ಕೋರ್ಟ್ ಎಲ್ಲ 32 ಆರೋಪಿಗಳನ್ನು ಖುಲಾಸೆಗೊಳಿಸಿದೆ.

    ನ್ಯಾ.ಸುರೇಂದ್ರ ಕುಮಾರ್ ಯಾದವ್‌ ಅವರು 2,000ರ ಪುಟಗಳು ಇರುವ ತೀರ್ಪನ್ನು ಬರೆದಿದ್ದಾರೆ. ಈ ತೀರ್ಪಿನಿಂದಾಗಿ ಮೂಲಕ ಎಲ್‌ಕೆ ಅಡ್ವಾಣಿ ಅವರಿಗಿದ್ದ ಎಲ್ಲ ಕಂಟಕ ಈಗ ದೂರವಾಗಿದೆ. ಇದನ್ನೂ ಓದಿ: ಬಿಜೆಪಿ ಭೀಷ್ಮನಿಗೆ ಬಿಗ್‌ ರಿಲೀಫ್‌ – ಅಡ್ವಾಣಿ ಖುಲಾಸೆಯಾಗಿದ್ದು ಹೇಗೆ? ಕೋರ್ಟ್‌ ಹೇಳಿದ್ದು ಏನು?

    ಈ ಆರೋಪಿಗಳು ಮಸೀದಿಯನ್ನು ಧ್ವಂಸಗೊಳಿಸಲು ಕರ ಸೇವಕರಿಗೆ ಪ್ರಚೋದನೆ ನೀಡಿದ್ದರು ಎಂದು ಸಿಬಿಐ ವಾದಿಸಿದ್ದರೆ ಆರೋಪಿಗಳು ತಮ್ಮ ವಿರುದ್ಧ ಯಾವುದೇ ಸಾಕ್ಷ್ಯಗಳು ಇಲ್ಲ. ಕಾಂಗ್ರೆಸ್‌ ಸರ್ಕಾರ ಉದ್ದೇಶಪೂರ್ವಕವಾಗಿ ನಮ್ಮನ್ನು ಸಿಕ್ಕಿ ಹಾಕಿಸಲು ರೂಪಿಸಿದ ರಾಜಕೀಯ ಸಂಚು ಎಂದು ವಾದಿಸಿದ್ದರು.

    ಅಂದಿನ ಉತ್ತರ ಪ್ರದೇಶ ಸರ್ಕಾರ ಬಿಜೆಪಿ ನಾಯಕರು ಮತ್ತು ಕರ ಸೇವಕರ ವಿರುದ್ಧ ಐಪಿಸಿ ಸೆಕ್ಷನ್ 120, 153, 295, 149, 395ರ ಅಡಿ ಪ್ರಕರಣ ದಾಖಲಿಸಿ ತನಿಖೆಗೆ ಆದೇಶಿಸಿತ್ತು.

  • ಬಿಜೆಪಿ ಭೀಷ್ಮನಿಗೆ ಬಿಗ್‌ ರಿಲೀಫ್‌ – ಅಡ್ವಾಣಿ ಖುಲಾಸೆಯಾಗಿದ್ದು ಹೇಗೆ? ಕೋರ್ಟ್‌ ಹೇಳಿದ್ದು ಏನು?

    ಬಿಜೆಪಿ ಭೀಷ್ಮನಿಗೆ ಬಿಗ್‌ ರಿಲೀಫ್‌ – ಅಡ್ವಾಣಿ ಖುಲಾಸೆಯಾಗಿದ್ದು ಹೇಗೆ? ಕೋರ್ಟ್‌ ಹೇಳಿದ್ದು ಏನು?

    ಲಕ್ನೋ: ಬಿಜೆಪಿ ಭೀಷ್ಮ ಮಾಜಿ ಉಪ ಪ್ರಧಾನಿ ಎಲ್‌ಕೆ ಅಡ್ವಾಣಿ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಖಲಾಸೆಯಾಗಿದ್ದಾರೆ.

    28ವರ್ಷಗಳ ಹಳೆಯ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆಯ ಅಂತಿಮ ತೀರ್ಪಿನಲ್ಲಿ ಇದು ಪೂರ್ವನಿಯೋಜಿತ ಕೃತ್ಯ ಅಲ್ಲ. ಇದೊಂದು ಆಕಸ್ಮಿಕ ಘಟನೆ ಎಂದು ಅಭಿಪ್ರಾಯ ಪಟ್ಟ ಸಿಬಿಐ ವಿಶೇಷ ಕೋರ್ಟ್ ಎಲ್ಲ 32 ಆರೋಪಿಗಳನ್ನು ಖುಲಾಸೆಗೊಳಿಸಿದೆ.

    ನ್ಯಾ.ಸುರೇಂದ್ರ ಕುಮಾರ್ ಯಾದವ್‌ ಅವರು 2,300 ಪುಟಗಳು ಇರುವ ತೀರ್ಪನ್ನು ಬರೆದಿದ್ದಾರೆ. ಈ ತೀರ್ಪಿನಿಂದಾಗಿ ಎಲ್‌ಕೆ ಅಡ್ವಾಣಿ ಅವರಿಗಿದ್ದ ಎಲ್ಲ ಕಂಟಕ ಈಗ ದೂರವಾಗಿದೆ.

    ಈ ಆರೋಪಿಗಳು ಮಸೀದಿಯನ್ನು ಧ್ವಂಸಗೊಳಿಸಲು ಕರ ಸೇವಕರಿಗೆ ಪ್ರಚೋದನೆ ನೀಡಿದ್ದರು ಎಂದು ಸಿಬಿಐ ವಾದಿಸಿದ್ದರೆ ಆರೋಪಿಗಳು ತಮ್ಮ ವಿರುದ್ಧ ಯಾವುದೇ ಸಾಕ್ಷ್ಯಗಳು ಇಲ್ಲ. ಕಾಂಗ್ರೆಸ್‌ ಸರ್ಕಾರ ಉದ್ದೇಶಪೂರ್ವಕವಾಗಿ ನಮ್ಮನ್ನು ಸಿಕ್ಕಿ ಹಾಕಿಸಲು ರೂಪಿಸಿದ ರಾಜಕೀಯ ಸಂಚು ಎಂದು ವಾದಿಸಿದ್ದರು.

    ಅಂದಿನ ಉತ್ತರ ಪ್ರದೇಶ ಸರ್ಕಾರ ಬಿಜೆಪಿ ನಾಯಕರು ಮತ್ತು ಕರ ಸೇವಕರ ವಿರುದ್ಧ ಐಪಿಸಿ ಸೆಕ್ಷನ್ 120, 153, 295,149, 395ರ ಅಡಿ ಪ್ರಕರಣ ದಾಖಲಿಸಿ ತನಿಖೆಗೆ ಆದೇಶಿಸಿತ್ತು.

    ಖುಲಾಸೆಗೆ ಕಾರಣ ಏನು?
    ಆರೋಪಿಗಳು ಯಾರು ಬಾಬ್ರಿ ಮಸೀದಿಯನ್ನು ಧ್ವಂಸ ಮಾಡುವ ಉದ್ದೇಶವನ್ನು ಹೊಂದಿರಲಿಲ್ಲ. ಇದೊಂದು ಆಕಸ್ಮಿಕ ಘಟನೆಯಾಗಿದೆ. ಅಶೋಕ್‌ ಸಿಂಘಾಲ್‌ ಮತ್ತು ಇತರ ಸಂಘ ಪರಿವಾರದ ನಾಯಕರು ಒಳಗಡೆಯಿಂದ ಮಸೀದಿ ರಕ್ಷಣೆಗೆ ಮುಂದಾಗಿದ್ದರು. ಈಗ ನೀಡಿರುವ ಸಾಕ್ಷ್ಯಗಳ ಆಧಾರದ ಮೇಲೆ ಆರೋಪಿಗಳ ಮೇಲೆ ಹೊರಿಸಲಾಗಿರುವ ಆರೋಪಗಳನ್ನು ಸಾಬೀತು ಪಡಿಸಲು ಸಾಧ್ಯವಿಲ್ಲ.

    ಐಪಿಸಿ ಸೆಕ್ಷನ್‌ 120 ಬಿ(ಒಳ ಸಂಚು) ಅಡಿ ಪ್ರಕರಣ ದಾಖಲಾಗಿದೆ. ಆದರೆ ಆರೋಪಿಗಳು ಪೂರ್ವಭಾವಿಯಾಗಿ ಒಟ್ಟಿಗೆ ಕುಳಿತುಕೊಂಡು ಒಳಸಂಚು ಮಾಡಿ ಈ ಕೃತ್ಯ ಎಸಗಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳನ್ನು ನೀಡಿಲ್ಲ.

    ಸೆಕ್ಷನ್ 153 ಬಿ (ರಾಷ್ಟ್ರೀಯ ಐಕ್ಯತೆಗೆ ಧಕ್ಕೆ ತರುವ ಹೇಳಿಕೆ) ಆರೋಪವನ್ನು ಒಪ್ಪಿಕೊಳ್ಳಲು ಬರುವುದಿಲ್ಲ. ವಿಚಾರಣೆ ವೇಳೆ ಕೋರ್ಟ್‌ಗೆ ಸಲ್ಲಿರುವ ವಿಡಿಯೋ ತಿರುಚಲಾಗಿದೆ. ಈ ವಿಡಿಯೋಗೆ ಸಂಬಂಧಿಸಿದ ನೆಗೆಟಿವ್‌ ಸಲ್ಲಿಸುವಂತೆ ಕೋರ್ಟ್‌ ಕೇಳಿತ್ತು. ಆದರೆ ತನಿಖಾ ತಂಡ ನೆಗೆಟಿವ್‌ ನೀಡಿಲ್ಲ.

    ಸೆಕ್ಷನ್‌ 295(ಯಾವುದೇ ವರ್ಗದವರ ಮತಕ್ಕೆ ಅವಮಾನ ಮಾಡುವ ಉದ್ದೇಶದಿಂದ ಪೂಜಾ ಸ್ಥಾನಕ್ಕೆ ಧಕ್ಕೆ ಉಂಟು ಮಾಡುವುದು ಅಥವಾ ಅಪವಿತ್ರಗೊಳಿಸುವುದು) ಅಡಿಯಲ್ಲಿ ಆರೋಪ ಮಾಡಲಾಗಿದೆ. ಆದರೆ ಈ ಜಾಗದಲ್ಲಿ ಮುಸ್ಲಿಮರು ಹಲವು ವರ್ಷಗಳಿಂದ ನಮಾಜ್‌ ಮಾಡುತ್ತಿರಲಿಲ್ಲ. ಪ್ರಾರ್ಥನೆ ಮಾಡದ ಕಾರಣ ಈ ಸ್ಥಳ ಅಪವಿತ್ರಗೊಂಡಿಲ್ಲ.

    ಸೆಕ್ಷನ್ 149( ಒಂದೇ ಉದ್ದೇಶಕ್ಕಾಗಿ ಅಕ್ರಮ ಗುಂಪು ಸೇರುವುದು) ಅಡಿಯ ಮಾಡಲಾಗಿರುವ ಆರೋಪ ಒಪ್ಪಲು ಬರುವುದಿಲ್ಲ. ಈ ಘಟನೆಯ ನಡೆದ ಸ್ಥಳದಲ್ಲಿ ಸರ್ಕಾರ ಸೆಕ್ಷನ್‌ 144 ಹಾಕಿರಲಿಲ್ಲ. ಹೀಗಾಗಿ ಗುಂಪು ಸೇರುವುದು ಅಕ್ರಮವಾಗುದಿಲ್ಲ. ಸಭೆ ನಡೆಸುವುದು ಕಾನೂನುಬಾಹಿರವಾಗುವುದಿಲ್ಲ.

    ಆರೋಪಿಗಳ ದರೋಡೆ ಮಾಡಿದ್ದಕ್ಕೆ ಸೆಕ್ಷನ್‌ 395ರ ಅಡಿ ಕೇಸ್‌ ಹಾಕಲಾಗಿದೆ. ಆರೋಪಿಗಳು ದರೋಡೆ ಮಾಡಿ ಸ್ಥಳದಿಂದ ಕಲಾಕೃತಿಗಳೊಂದಿಗೆ ಓಡಿ ಹೋಗುವುದನ್ನು ಯಾರು ನೋಡಿಲ್ಲ. ಈ ಕಾರಣಕ್ಕೆ ಈ ಆರೋಪವನ್ನು ಒಪ್ಪಲು ಬರುವುದಿಲ್ಲ ಎಂದು ಅಭಿಪ್ರಾಯಪಟ್ಟ ಕೋರ್ಟ್‌ ಎಲ್ಲ 32 ಆರೋಪಿಗಳನ್ನು ಖುಲಾಸೆಗೊಳಿಸಿದೆ.

    ಏನಿದು ಪ್ರಕರಣ?
    1992 ಡಿಸೆಂಬರ್‌ 6ರಂದು ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ 351 ಸಾಕ್ಷಿಗಳನ್ನು ಹಾಗೂ 600 ದಾಖಲೆ ಪ್ರತಿಗಳನ್ನು ವಿಶೇಷ ನ್ಯಾಯಾಲಯಕ್ಕೆ ನೀಡಿದೆ. ಆರಂಭಿಕವಾಗಿ 48 ಮಂದಿಯನ್ನು ಆರೋಪಿಗಳೆಂದು ಸಿಬಿಐ ಚಾರ್ಜ್‌ಶೀಟ್‌ ಸಲ್ಲಿಸಿತ್ತು. ಆದರೆ ಮೂರು ದಶಕಗಳಿಂದ ವಿಚಾರಣೆ ನಡೆಯುತ್ತಿದ್ದ ಕಾರಣ 48 ಜನ ಆರೋಪಿಗಳ ಪೈಕಿ 16 ಮಂದಿ ಈಗಾಗಲೇ ಸಾವನ್ನಪ್ಪಿದ್ದು, ಉಳಿದ 32 ಆರೋಪಿಗಳ ವಿರುದ್ಧ ವಿಚಾರಣೆ ನಡೆಯುತ್ತಿತ್ತು.

    ಖಲಾಸೆಯಾದ 32 ಮಂದಿ ಯಾರು?
    ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಸುಧೀರ್ ಕಕ್ಕರ್, ಸತೀಶ್ ಪ್ರಧಾನ್, ರಾಮ್ ಚಂದ್ರ ಖತ್ರಿ, ಸಂತೋಷ್ ದುಬೆ, ಓಂ ಪ್ರಕಾಶ್ ಪಾಂಡೆ, ಕಲ್ಯಾಣ್ ಸಿಂಗ್, ಉಮಾ ಭಾರತಿ, ರಾಮ್ ವಿಲಾಸ್ ವೇದಾಂತಿ, ವಿನಯ್ ಕಟಿಯಾರ್, ಪ್ರಕಾಶ್ ಶರ್ನಾ, ಗಾಂಧಿ ಸಿಂಗ್ ಕಮಲೇಶ್ ತ್ರಿಪಾಠಿ, ಬ್ರಿಜ್ ಭೂಷಣ್ ಸಿಂಗ್, ರಾಮ್ಜಿ ಗುಪ್ತಾ, ಮಹಂತ್ ನೃತ್ಯ ಗೋಪಾಲ್ ದಾಸ್, ಚಂಪತ್ ರಾಯ್, ಸಾಕ್ಷಿ ಮಹಾರಾಜ್, ವಿನಯ್ ಕುಮಾರ್ ರೈ, ನವೀನ್ ಭಾಯ್ ಶುಕ್ಲಾ, ಧರ್ಮದಾಸ್, ಜೈ ಭಗವಾನ್ ಗೋಯೆಲ್, ಅಮರನಾಥ್ ಗೋಯೆಲ್, ಸಾಧ್ವಿ ರಿತಂಬರ, ಪವನ್‌ ಪಾಂಡೆ, ವಿಜಯ್‌ ಬಹದ್ದೂರ್‌ ಸಿಂಗ್‌, ಆರ್‌ಎಂ ಶ್ರೀವತ್ಸ, ಧರ್ಮೇಂದ್ರ ಸಿಂಗ್ ಗುಜ್ಜರ್.

  • ಬಾಬ್ರಿ ಮಸೀದಿ ಧ್ವಂಸ ಆಕಸ್ಮಿಕ ಘಟನೆ – ಎಲ್ಲ ಆರೋಪಿಗಳು ಖುಲಾಸೆ

    ಬಾಬ್ರಿ ಮಸೀದಿ ಧ್ವಂಸ ಆಕಸ್ಮಿಕ ಘಟನೆ – ಎಲ್ಲ ಆರೋಪಿಗಳು ಖುಲಾಸೆ

    ಲಕ್ನೋ: ಬಾಬ್ರಿ ಮಸೀದಿ ಧ್ವಂಸ ಪೂರ್ವ ನಿಯೋಜಿತ ಅಲ್ಲ. ಇದೊಂದು ಆಕಸ್ಮಿಕ ಘಟನೆ ಎಂದು ಸಿಬಿಐ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ.

    ಕೋರ್ಟ್‌ ಈ ತೀರ್ಪು ಪ್ರಕಟಿಸುವ ಮೂಲಕ 28ವರ್ಷಗಳ ಹಳೆಯ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಮಾಜಿ ಉಪಪ್ರಧಾನಿ ಎಲ್ ಕೆ ಅಡ್ವಾಣಿ, ಬಿಜೆಪಿ ಹಿರಿಯ ಮುಖಂಡ ಮುರಳಿ ಮನೋಹರ್ ಜೋಶಿ ಸೇರಿದಂತೆ ಎಲ್ಲ ಆರೋಪಿಗಳನ್ನು ಕೋರ್ಟ್‌ ಖುಲಾಸೆಗೊಳಿಸಿದೆ.

    ತೀರ್ಪು ನೀಡುವ ದಿನದಂದು ಎಲ್ಲ 32 ಆರೋಪಿಗಳು ನ್ಯಾಯಾಲಯದಲ್ಲಿ ಹಾಜರಿರಬೇಕು ಎಂದು ನ್ಯಾ.ಸುರೇಂದ್ರ ಕುಮಾರ್ ಯಾದವ್‌ ಸೆ.16 ರಂದು ಸೂಚಿಸಿದ್ದ ಹಿನ್ನೆಲೆಯಲ್ಲಿ ಮಾಜಿ ಉಪಪ್ರಧಾನಿ ಎಲ್ ಕೆ ಅಡ್ವಾಣಿ, ಬಿಜೆಪಿ ಹಿರಿಯ ಮುಖಂಡ ಮುರಳಿ ಮನೋಹರ್ ಜೋಶಿ, ಉಮಾ ಭಾರತಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಹಾಜರಾಗಿದ್ದರು. ಉಳಿದಂತೆ ಕಲ್ಯಾಣ್‌ ಸಿಂಗ್‌, ವಿನಯ್‌ ಕಟಿಯಾರ್‌, ಸಾಕ್ಷಿ ಮಹಾರಾಜ್‌, ಲಾಲು ಸಿಂಗ್‌, ಬಿಬಿ ಶರಣ್‌ ಸಿಂಗ್‌ ಸೇರಿದಂತೆ ಎಲ್ಲ ಆರೋಪಿಗಳು ಕೋರ್ಟ್‌ ಕೊಠಡಿಯಲ್ಲಿ ಹಾಜರಿದ್ದರು.

    ತೀರ್ಪು ಪ್ರಕಟಿಸುವ ಹಿನ್ನೆಲೆಯಲ್ಲಿ ಕೋರ್ಟ್‌ ಸುತ್ತ ಮುತ್ತ ಬ್ಯಾರಿಕೇಡ್‌ ಅಳವಡಿಸಿ ಬಿಗಿ ಬಂದೋಬಸ್ತ್‌ ಮಾಡಲಾಗಿತ್ತು. ಕೋರ್ಟ್‌ ಇರುವ ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ಬದಲಾವಣೆ ಮಾಡಲಾಗಿತ್ತು.

    ಸುಪ್ರೀಂ ಸೂಚನೆ ಏನಿತ್ತು?
    2017ರ ಏಪ್ರಿಲ್‌ 19 ಎಂದು ಪ್ರತಿನಿತ್ಯ ವಿಚಾರಣೆ ನಡೆಸಿ 2 ವರ್ಷದ ಒಳಗಡೆ ತೀರ್ಪು ಪ್ರಕಟಿಸುವಂತೆ ಸಿಬಿಐ ವಿಶೇಷ ಕೋರ್ಟ್‌ಗೆ ಸುಪ್ರೀಂ ಕೋರ್ಟ್‌ ಸೂಚಿಸಿತ್ತು. ಬಾಬ್ರಿ ಮಸೀದಿ ಧ್ವಂಸಕ್ಕೆ ಸಂಬಂಧಿಸಿದಂತೆ ಎರಡು ಪ್ರಕರಣ ದಾಖಲಾಗಿತ್ತು. ಲಕ್ನೋ ಸಿಬಿಐ ನ್ಯಾಯಾಲಯದಲ್ಲಿ ಕರಸೇವಕರ ವಿರುದ್ಧದ ಪ್ರಕರಣದ ವಿಚಾರಣೆ ನಡೆಯುತ್ತಿದ್ದರೆ 8 ವಿಐಪಿಗಳ ವಿರುದ್ಧ ರಾಯಬರೇಲಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. 2017ರ ಏಪ್ರಿಲ್‌ನಲ್ಲಿ ರಾಯಬರೇಲಿ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆಯನ್ನು ಲಕ್ನೋ ಸಿಬಿಐ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್‌ ವರ್ಗಾಯಿಸಿತ್ತು.

    ಏನಿದು ಪ್ರಕರಣ?
    1992 ಡಿಸೆಂಬರ್‌ 6ರಂದು ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ 351 ಸಾಕ್ಷಿಗಳನ್ನು ಹಾಗೂ 600 ದಾಖಲೆ ಪ್ರತಿಗಳನ್ನು ವಿಶೇಷ ನ್ಯಾಯಾಲಯಕ್ಕೆ ನೀಡಿದೆ. ಆರಂಭಿಕವಾಗಿ 48 ಮಂದಿಯನ್ನು ಆರೋಪಿಗಳೆಂದು ಸಿಬಿಐ ಚಾರ್ಜ್‌ಶೀಟ್‌ ಸಲ್ಲಿಸಿತ್ತು. ಆದರೆ ಮೂರು ದಶಕಗಳಿಂದ ವಿಚಾರಣೆ ನಡೆಯುತ್ತಿದ್ದ ಕಾರಣ 48 ಜನ ಆರೋಪಿಗಳ ಪೈಕಿ 16 ಮಂದಿ ಈಗಾಗಲೇ ಸಾವನ್ನಪ್ಪಿದ್ದು, ಉಳಿದ 32 ಆರೋಪಿಗಳ ವಿರುದ್ಧ ವಿಚಾರಣೆ ನಡೆಯುತ್ತಿತ್ತು.

    ಯಾವೆಲ್ಲ ಸೆಕ್ಷನ್‌?
    ಸೆಕ್ಷನ್ 153 ಎ(ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು),ಸೆಕ್ಷನ್ 153 ಬಿ(ರಾಷ್ಟ್ರೀಯ ಐಕ್ಯತೆಗೆ ಧಕ್ಕೆ ತರುವ ಹೇಳಿಕೆ), ಸೆಕ್ಷನ್ 505( ಸಾರ್ವಜನಿಕ ಕಿಡಿಗೇಡಿತನಕ್ಕೆ ಕೇಡಿಗೆ ಕಾರಣವಾಗುವ ಹೇಳಿಕೆ) ಅಡಿ ಆರೋಪಿಗಳ ಮೇಲೆ ಪ್ರಕರಣ ದಾಖಲಾಗಿತ್ತು.

    ವಾದ ಏನಿತ್ತು?
    ಈ ಆರೋಪಿಗಳು ಮಸೀದಿಯನ್ನು ಧ್ವಂಸಗೊಳಿಸಲು ಕರ ಸೇವಕರಿಗೆ ಪ್ರಚೋದನೆ ನೀಡಿದ್ದರು ಎಂದು ಸಿಬಿಐ ವಾದಿಸಿದ್ದರೆ ಆರೋಪಿಗಳು ತಮ್ಮ ವಿರುದ್ಧ ಯಾವುದೇ ಸಾಕ್ಷ್ಯಗಳು ಇಲ್ಲ. ಕಾಂಗ್ರೆಸ್‌ ಸರ್ಕಾರ ಉದ್ದೇಶಪೂರ್ವಕವಾಗಿ ನಮ್ಮನ್ನು ಸಿಕ್ಕಿ ಹಾಕಿಸಲು ರೂಪಿಸಿದ ರಾಜಕೀಯ ಸಂಚು ಎಂದು ವಾದಿಸಿದ್ದರು.

    32 ಮಂದಿಆರೋಪಿಗಳು ಯಾರು?
    ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಸುಧೀರ್ ಕಕ್ಕರ್, ಸತೀಶ್ ಪ್ರಧಾನ್, ರಾಮ್ ಚಂದ್ರ ಖತ್ರಿ, ಸಂತೋಷ್ ದುಬೆ, ಓಂ ಪ್ರಕಾಶ್ ಪಾಂಡೆ, ಕಲ್ಯಾಣ್ ಸಿಂಗ್, ಉಮಾ ಭಾರತಿ, ರಾಮ್ ವಿಲಾಸ್ ವೇದಾಂತಿ, ವಿನಯ್ ಕಟಿಯಾರ್, ಪ್ರಕಾಶ್ ಶರ್ನಾ, ಗಾಂಧಿ ಸಿಂಗ್ ಕಮಲೇಶ್ ತ್ರಿಪಾಠಿ, ಬ್ರಿಜ್ ಭೂಷಣ್ ಸಿಂಗ್, ರಾಮ್ಜಿ ಗುಪ್ತಾ, ಮಹಂತ್ ನೃತ್ಯ ಗೋಪಾಲ್ ದಾಸ್, ಚಂಪತ್ ರಾಯ್, ಸಾಕ್ಷಿ ಮಹಾರಾಜ್, ವಿನಯ್ ಕುಮಾರ್ ರೈ, ನವೀನ್ ಭಾಯ್ ಶುಕ್ಲಾ, ಧರ್ಮದಾಸ್, ಜೈ ಭಗವಾನ್ ಗೋಯೆಲ್, ಅಮರನಾಥ್ ಗೋಯೆಲ್, ಸಾಧ್ವಿ ರಿತಂಬರ, ಪವನ್‌ ಪಾಂಡೆ, ವಿಜಯ್‌ ಬಹದ್ದೂರ್‌ ಸಿಂಗ್‌, ಆರ್‌ಎಂ ಶ್ರೀವತ್ಸ, ಧರ್ಮೇಂದ್ರ ಸಿಂಗ್ ಗುಜ್ಜರ್.

  • ಬಿಜೆಪಿಗೆ ಬಿಗ್‌ ಡೇ – ಇಂದು ಬಾಬ್ರಿ ಮಸೀದಿ ಧ್ವಂಸ ತೀರ್ಪು ಪ್ರಕಟ

    ಬಿಜೆಪಿಗೆ ಬಿಗ್‌ ಡೇ – ಇಂದು ಬಾಬ್ರಿ ಮಸೀದಿ ಧ್ವಂಸ ತೀರ್ಪು ಪ್ರಕಟ

    ಲಕ್ನೋ: 28ವರ್ಷಗಳ ಹಳೆಯ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ಮುಕ್ತಾಯಗೊಂಡಿದ್ದು ಇಂದು ಸಿಬಿಐ ವಿಶೇಷ ಕೋರ್ಟ್ ಅಂತಿಮ ತೀರ್ಪು ಪ್ರಕಟಿಸಲಿದೆ.

    ತೀರ್ಪು ನೀಡುವ ದಿನದಂದು ಆರೋಪಿಗಳು ನ್ಯಾಯಾಲಯದಲ್ಲಿ ಹಾಜರಿರಬೇಕು ಎಂದು ನ್ಯಾ.ಸುರೇಂದ್ರ ಕುಮಾರ್ ಯಾದವ್‌ ಸೆ.16 ರಂದು ಸೂಚಿಸಿದ್ದರು.

    ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಮಾಜಿ ಉಪಪ್ರಧಾನಿ ಎಲ್ ಕೆ ಅಡ್ವಾಣಿ, ಬಿಜೆಪಿ ಹಿರಿಯ ಮುಖಂಡ ಮುರಳಿ ಮನೋಹರ್ ಜೋಶಿ, ಕಲ್ಯಾಣ್ ಸಿಂಗ್, ಉಮಾಭಾರತಿ ಸೇರಿದಂತೆ 32 ಮಂದಿ ಆರೋಪಿಗಳಿದ್ದಾರೆ.

    ಸುಪ್ರೀಂ ಸೂಚನೆ ಏನಿತ್ತು?
    2017ರ ಏಪ್ರಿಲ್‌ 19 ಎಂದು ಪ್ರತಿನಿತ್ಯ ವಿಚಾರಣೆ ನಡೆಸಿ 2 ವರ್ಷದ ಒಳಗಡೆ ತೀರ್ಪು ಪ್ರಕಟಿಸುವಂತೆ ಸಿಬಿಐ ವಿಶೇಷ ಕೋರ್ಟ್‌ಗೆ ಸುಪ್ರೀಂ ಕೋರ್ಟ್‌ ಸೂಚಿಸಿತ್ತು. ಬಾಬ್ರಿ ಮಸೀದಿ ಧ್ವಂಸಕ್ಕೆ ಸಂಬಂಧಿಸಿದಂತೆ ಎರಡು ಪ್ರಕರಣ ದಾಖಲಾಗಿತ್ತು. ಲಕ್ನೋ ಸಿಬಿಐ ನ್ಯಾಯಾಲಯದಲ್ಲಿ ಕರಸೇವಕರ ವಿರುದ್ಧದ ಪ್ರಕರಣದ ವಿಚಾರಣೆ ನಡೆಯುತ್ತಿದ್ದರೆ 8 ವಿಐಪಿಗಳ ವಿರುದ್ಧ ರಾಯಬರೇಲಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. 2017ರ ಏಪ್ರಿಲ್‌ನಲ್ಲಿ ರಾಯಬರೇಲಿ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆಯನ್ನು ಲಕ್ನೋ ಸಿಬಿಐ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್‌ ವರ್ಗಾಯಿಸಿತ್ತು.

    ಏನಿದು ಪ್ರಕರಣ?
    1992 ಡಿಸೆಂಬರ್‌ 6ರಂದು ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ 351 ಸಾಕ್ಷಿಗಳನ್ನು ಹಾಗೂ 600 ದಾಖಲೆ ಪ್ರತಿಗಳನ್ನು ವಿಶೇಷ ನ್ಯಾಯಾಲಯಕ್ಕೆ ನೀಡಿದೆ. ಆರಂಭಿಕವಾಗಿ 48 ಮಂದಿಯನ್ನು ಆರೋಪಿಗಳೆಂದು ಸಿಬಿಐ ಚಾರ್ಜ್‌ಶೀಟ್‌ ಸಲ್ಲಿಸಿತ್ತು. ಆದರೆ ಮೂರು ದಶಕಗಳಿಂದ ವಿಚಾರಣೆ ನಡೆಯುತ್ತಿದ್ದ ಕಾರಣ 48 ಜನ ಆರೋಪಿಗಳ ಪೈಕಿ 16 ಮಂದಿ ಈಗಾಗಲೇ ಸಾವನ್ನಪ್ಪಿದ್ದು, ಉಳಿದ 32 ಆರೋಪಿಗಳ ವಿರುದ್ಧ ವಿಚಾರಣೆ ನಡೆಯುತ್ತಿತ್ತು.

    ಯಾವೆಲ್ಲ ಸೆಕ್ಷನ್‌?
    ಸೆಕ್ಷನ್ 153 ಎ(ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು),ಸೆಕ್ಷನ್ 153 ಬಿ(ರಾಷ್ಟ್ರೀಯ ಐಕ್ಯತೆಗೆ ಧಕ್ಕೆ ತರುವ ಹೇಳಿಕೆ), ಸೆಕ್ಷನ್ 505( ಸಾರ್ವಜನಿಕ ಕಿಡಿಗೇಡಿತನಕ್ಕೆ ಕೇಡಿಗೆ ಕಾರಣವಾಗುವ ಹೇಳಿಕೆ) ಅಡಿ ಆರೋಪಿಗಳ ಮೇಲೆ ಪ್ರಕರಣ ದಾಖಲಾಗಿತ್ತು.

    ವಾದ ಏನಿತ್ತು?
    ಈ ಆರೋಪಿಗಳು ಮಸೀದಿಯನ್ನು ಧ್ವಂಸಗೊಳಿಸಲು ಕರ ಸೇವಕರಿಗೆ ಪ್ರಚೋದನೆ ನೀಡಿದ್ದರು ಎಂದು ಸಿಬಿಐ ವಾದಿಸಿದ್ದರೆ ಆರೋಪಿಗಳು ತಮ್ಮ ವಿರುದ್ಧ ಯಾವುದೇ ಸಾಕ್ಷ್ಯಗಳು ಇಲ್ಲ. ಕಾಂಗ್ರೆಸ್‌ ಸರ್ಕಾರ ಉದ್ದೇಶಪೂರ್ವಕವಾಗಿ ನಮ್ಮನ್ನು ಸಿಕ್ಕಿ ಹಾಕಿಸಲು ರೂಪಿಸಿದ ರಾಜಕೀಯ ಸಂಚು ಎಂದು ವಾದಿಸಿದ್ದರು.

    32 ಮಂದಿಆರೋಪಿಗಳು ಯಾರು?
    ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಸುಧೀರ್ ಕಕ್ಕರ್, ಸತೀಶ್ ಪ್ರಧಾನ್, ರಾಮ್ ಚಂದ್ರ ಖತ್ರಿ, ಸಂತೋಷ್ ದುಬೆ, ಓಂ ಪ್ರಕಾಶ್ ಪಾಂಡೆ, ಕಲ್ಯಾಣ್ ಸಿಂಗ್, ಉಮಾ ಭಾರತಿ, ರಾಮ್ ವಿಲಾಸ್ ವೇದಾಂತಿ, ವಿನಯ್ ಕಟಿಯಾರ್, ಪ್ರಕಾಶ್ ಶರ್ನಾ, ಗಾಂಧಿ ಸಿಂಗ್ ಕಮಲೇಶ್ ತ್ರಿಪಾಠಿ, ಬ್ರಿಜ್ ಭೂಷಣ್ ಸಿಂಗ್, ರಾಮ್ಜಿ ಗುಪ್ತಾ, ಮಹಂತ್ ನೃತ್ಯ ಗೋಪಾಲ್ ದಾಸ್, ಚಂಪತ್ ರಾಯ್, ಸಾಕ್ಷಿ ಮಹಾರಾಜ್, ವಿನಯ್ ಕುಮಾರ್ ರೈ, ನವೀನ್ ಭಾಯ್ ಶುಕ್ಲಾ, ಧರ್ಮದಾಸ್, ಜೈ ಭಗವಾನ್ ಗೋಯೆಲ್, ಅಮರನಾಥ್ ಗೋಯೆಲ್, ಸಾಧ್ವಿ ರಿತಂಬರ, ಪವನ್‌ ಪಾಂಡೆ, ವಿಜಯ್‌ ಬಹದ್ದೂರ್‌ ಸಿಂಗ್‌, ಆರ್‌ಎಂ ಶ್ರೀವತ್ಸ, ಧರ್ಮೇಂದ್ರ ಸಿಂಗ್ ಗುಜ್ಜರ್.