Tag: baby shower ceremony

  • ವಿಶ್ವ ತಾಯಂದಿರ ದಿನಾಚರಣೆ – 600ಕ್ಕೂ ಹೆಚ್ಚು ಗರ್ಭಿಣಿಯರಿಗೆ ಸೀಮಂತ ಶಾಸ್ತ್ರ

    ವಿಶ್ವ ತಾಯಂದಿರ ದಿನಾಚರಣೆ – 600ಕ್ಕೂ ಹೆಚ್ಚು ಗರ್ಭಿಣಿಯರಿಗೆ ಸೀಮಂತ ಶಾಸ್ತ್ರ

    ಬೆಂಗಳೂರು: ವಿಶ್ವ ತಾಯಂದಿರ ದಿನಾಚರಣೆ ಹಿನ್ನೆಲೆಯಲ್ಲಿ 600ಕ್ಕೂ ಹೆಚ್ಚು ಗರ್ಭಿಣಿ ತಾಯಿಯರಿಗೆ ಸೀಮಂತ ಶಾಸ್ತ್ರ ಕಾರ್ಯಕ್ರಮವನ್ನು ಸಾಂಪ್ರದಾಯಿಕವಾಗಿ ನೆರವೇರಿಸಲಾಯಿತು.

    ಬೆಂಗಳೂರು ಹೊರವಲಯ ಟಿ.ದಾಸರಹಳ್ಳಿಯ ಎಂಇಐ ಮೈದಾನದಲ್ಲಿ ಯಾವುದೇ ಸಮಸ್ಯೆಗಳು ಎದುರಾಗದಂತೆ ಮೃತ್ಯುಂಜಯ, ಗಣಪತಿ ಹೋಮ ಹವನ ಮಾಡುವ ಮೂಲಕ ದೇವರಿಗೆ ಪೂಜೆ ಸಲ್ಲಿಸಿ ಸಾಮೂಹಿಕವಾಗಿ ಸೀಮಂತ ಶಾಸ್ತ್ರ ಮಾಡಲಾಯಿತು. ಟಿ. ದಾಸರಹಳ್ಳಿಯ ಕಾಂಗ್ರೆಸ್ ಮುಖಂಡೆ ಗೀತಾ ಶಿವರಾಂ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದನ್ನೂ ಓದಿ: ನಾನು ಒಳ್ಳೆಯದನ್ನೂ ಮಾಡಿದ್ದೀನಿ, ಅದನ್ನೂ ತೋರಿಸಿ – ಕ್ಯಾಮೆರಾ ಮುಂದೆ ಕೈ ಮುಗಿದ ಕಿಂಗ್‍ಪಿನ್ ಆರ್.ಡಿ.ಪಾಟೀಲ್

    ಕಾರ್ಯಕ್ರಮಕ್ಕೆ ಬಂದಿರುವ ಮಹಿಳೆಯರಿಗೆ ಅರಿಶಿನ ಕುಂಕುಮ, ಸೀರೆ, ಬಳೆ ಜೊತೆಗೆ ವಿಶೇಷ ಉಡುಗೊರೆ ನೀಡುವ ಮೂಲಕ ವಿಶ್ವ ತಾಯಂದಿರ ದಿನಾಚರಣೆ ಆಚರಣೆ ಮಾಡಲಾಯಿತು. ಟಿ.ದಾಸರಹಳ್ಳಿಯ ಕ್ಷೇತ್ರದ ಎಲ್ಲಾ ಬಡಾವಣೆಯ ತಾಯಿಯಂದಿರು ಕಾರ್ಯಕ್ರಮದಲ್ಲಿ ನೆರೆದಿದ್ದರು. ಇದನ್ನೂ ಓದಿ: ಪತಿ ಆಸೆ ಈಡೇರಿಸಿದ ಪತ್ನಿ: ಹುತಾತ್ಮ ಯೋಧನ ಪತ್ನಿ ಈಗ ಲೆಫ್ಟಿನೆಂಟ್

  • BBMP ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ

    BBMP ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ

    ಬೆಂಗಳೂರು: ಬಿಬಿಎಂಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತವನ್ನು ಮಾಡಲಾಗಿದೆ.

    ಬಸವನಗುಡಿಯ ಎನ್‍ಆರ್ ಕಾಲೋನಿಯ ಪಾಲಿಕೆ ಹೆರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 60 ಗರ್ಭಿಣಿ ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಇದನ್ನೂ ಓದಿ: ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ – ಶನಿವಾರ, ಭಾನುವಾರ ಕಂಪ್ಲೀಟ್‌ ಬಂದ್

    ಕಟ್ಟೆ ಸತ್ಯ ಫೌಂಡೇಷನ್ ಮತ್ತು ರಾಧಕೃಷ್ಣ ಆಸ್ಪತ್ರೆ ಸಹಯೋಗದೊಂದಿಗೆ ಡಾ.ಸಿ ಅಶ್ವಥ್ ಕಲಾ ಭವನನಲ್ಲಿನಡೆದ ಕಾರ್ಯಕ್ರಮವನ್ನ ನಟಿ ಸುಧಾರಣಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ನಟಿ ಸುಧಾರಾಣಿ, ಈ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ಸಂತೋಷವಾಗುತ್ತಿದೆ. ಎಷ್ಟೋ ಹೆಣ್ಣು ಮಕ್ಕಳಿಗೆ ಸೀಮಂತದ ಕ್ಷಣಗಳನ್ನ ಆನಂದಿಸೋಕೆ ಸಾಧ್ಯವಾಗುವುದಿಲ್ಲ. ಇಂತಹ ಕಾರ್ಯಕ್ರಮಗಳ ಮೂಲಕ ಸಾಧ್ಯವಾಗದ ಗರ್ಭಿಣಿಯರಿಗೆ ಸೀಮಂತ ಮಾಡುತ್ತಿರುವುದು ಬಹಳ ಸಂತೋಷ ಎಂದಿದ್ದಾರೆ. ಇದನ್ನೂ ಓದಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‍ಗೆ ಕೊರೊನಾ

    ಹೆಣ್ಣು ಮಕ್ಕಳಿಗೆ ತಾಯ್ತನದ ಹಂತ ಬಹಳ ಶ್ರೇಷ್ಠವಾದದ್ದು. ಇಂತಹ ಸಂಧರ್ಭದಲ್ಲಿ ಸಂತೋಷದಿಂದ ಮತ್ತು ಎಚ್ಚರದಿಂದಿರಬೇಕು. ನಿಮ್ಮೆಲ್ಲರಿಗೂ ಒಳ್ಳೆಯದಾಗಲಿ, ನಿಮ್ಮ ತಾಯಿ ತನದ ದಿನಗಳನ್ನ ಆರೋಗ್ಯದಿಂದ ಆನಂದಿಸಿ ಎಂದು ಹೇಳಿದ್ದಾರೆ. ಕಾರ್ಯಕ್ರಮದಲ್ಲಿ ನಿಕಟ ಪೂರ್ವ ಮೇಯರ್ ಸತ್ಯನಾರಾಯಣ, ಶಾಸಕ ರವಿ ಸುಬ್ರಹ್ಮಣ್ಯ, ಫೌಂಡೇಶನ್ ಅಧ್ಯಕ್ಷ ಸುಧೀಂದ್ರ ಭಾಗಿಯಾಗಿದ್ದರು.

  • ಗೌಡ್ರ ಕುಟುಂಬದಲ್ಲಿ ಹಬ್ಬದ ಸಂಭ್ರಮ – ನಿಖಿಲ್ ಪತ್ನಿಗೆ ಸೀಮಂತ

    ಗೌಡ್ರ ಕುಟುಂಬದಲ್ಲಿ ಹಬ್ಬದ ಸಂಭ್ರಮ – ನಿಖಿಲ್ ಪತ್ನಿಗೆ ಸೀಮಂತ

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಹಾಗೂ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿ ಸೀಮಂತ ಕಾರ್ಯಕ್ರಮ ಇಂದು ನಡೆಯುತ್ತಿದೆ.

    ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರ ಪ್ರೀತಿಯ ಪುತ್ರ ನಿಖಿಲ್ ಕುಮಾರ್ ಸ್ವಾಮಿ ಪತ್ನಿ ರೇವತಿಗೆ ಇದೀಗ ಎಂಟು ತಿಂಗಳು ತುಂಬಿದ್ದು, ನಗರದ ಹೆಚ್‍ಎಸ್‍ಆರ್ ಲೇಔಟ್‍ನ ಮಾನ್ವಿ ಕನ್ವೆನ್ಷನ್ ಹಾಲ್‍ನಲ್ಲಿ ಸೀಮಂತ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಅಲ್ಲದೇ ಕೊರೊನಾ ಕಾರಣದಿಂದಾಗಿ ಈ ಕಾರ್ಯಕ್ರಮಕ್ಕೆ ಕೇವಲ ಆಪ್ತರು, ಕುಟುಂಬಸ್ಥರಿಗೆ ಮಾತ್ರ ಆಹ್ವಾನ ನೀಡಲಾಗಿದೆ.

    nikil

    ಸದಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ನಿಖಿಲ್ ಆಗಾಗ ಪತ್ನಿ ಜೊತೆಗಿರುವ ಕೆಲವೊಂದು ಮುದ್ದಾದ ಫೋಟೋಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ಸದ್ಯ ಕಳೆದ ವಾರವಷ್ಟೇ ಗಣೇಶ ಹಬ್ಬದಂದು ಪತ್ನಿ ಜೊತೆ ಹಬ್ಬ ಆಚರಿಸಿದ ನಿಖಿಲ್ ಸಂಪ್ರದಾಯಿಕ ಉಡುಗೆಯಲ್ಲಿ ಫೋಟೋ ಕ್ಲಿಕ್ಕಿಸಿಕೊಂಡು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಂಡಿದ್ದರು. ಇದನ್ನೂ ಓದಿ: ನಿಖಿಲ್‍ಗೆ ಗಂಡು ಮಗುವಾಗಲಿದೆ: ವಿನಯ್ ಗುರೂಜಿ

    2020ರ ಏಪ್ರಿಲ್ 17ರಂದು ಲಾಕ್‍ಡೌನ್ ಸಮಯದಲ್ಲಿ ನಿಖಿಲ್ ಹಾಗೂ ರೇವತಿ ರಾಮನಗರ ತಾಲೂಕಿನ ಕೇತಗಾನಹಳ್ಳಿಯಲ್ಲಿರುವ ಫಾರ್ಮ್ ಹೌಸ್‍ನಲ್ಲಿ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಕೆಲವು ತಿಂಗಳ ಹಿಂದಷ್ಟೇ ಮಾಜಿ ಸಿಎಂ. ಹೆಚ್.ಡಿ ಕುಮಾರಸ್ವಾಮಿಯವರು ತಾವು ತಾತಾ ಆಗುತ್ತಿರುವ ಖುಷಿ ವಿಚಾರವನ್ನು ಮಾಧ್ಯಮದ ಮುಂದೆ ಹಂಚಿಕೊಂಡಿದ್ದರು. ಇದೀಗ ಮುದ್ದಿನ ಸೊಸೆ ಸೀಮಂತವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ಗೌಡರ ಕುಟುಂಬದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಇದನ್ನೂ ಓದಿ: ಎಂದಿಗೂ ಮರೆಯಲಾಗದ ದಿನದ ಫೋಟೋ ಹಂಚಿಕೊಂಡ ನಿಖಿಲ್