Tag: Baby

  • ಟಿಪ್ಪರ್ ಡಿಕ್ಕಿ – ಬೈಕಲ್ಲಿ ಹೋಗ್ತಿದ್ದ ತಾಯಿ, ಮಗು ಸಾವು

    ಟಿಪ್ಪರ್ ಡಿಕ್ಕಿ – ಬೈಕಲ್ಲಿ ಹೋಗ್ತಿದ್ದ ತಾಯಿ, ಮಗು ಸಾವು

    ಬೆಂಗಳೂರು: ನಗರದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದುಹೋಗಿದೆ. ಮಾರತ್ ಹಳ್ಳಿಯ ರಿಂಗ್‍ರೋಡ್‍ನಲ್ಲಿ ಟಿಪ್ಪರ್ ಡಿಕ್ಕಿ ಹೊಡೆದು ಬೈಕಲ್ಲಿ ಹೋಗ್ತಿದ್ದ ತಾಯಿ ಮತ್ತು 1 ವರ್ಷದ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ.

    ಬೈಕ್‍ನಲ್ಲಿ ಕೆಆರ್ ಪುರಂನ ಶಿವಕುಮಾರ್ ಕುಟುಂಬ ಸಮೇತರಾಗಿ ಸಂಚರಿಸುತ್ತಿದ್ದರು ಮಾರತ್ ಹಳ್ಳಿಯ ರಿಂಗ್‍ರೋಡ್ ಬಳಿ ಬರುತ್ತಿದ್ದಂತೆ ಟಿಪ್ಪರ್ ಒಂದು ಬಂದು ಶಿವಕುಮಾರ್ ಬೈಕ್‍ಗೆ ಗುದ್ದಿದೆ. ಪರಿಣಾಮ ಸಂಚರಿಸುತ್ತಿದ್ದ ಬೈಕ್‍ನಿಂದ ಎಡಕ್ಕೆ ಬಿದ್ದ ಬೈಕ್ ಸವಾರ ಶಿವಕುಮಾರ್ ಪ್ರಾಣಾಪಾಯದಿಂದ ಬಚಾವ್ ಆದರೆ, ಬಲಕ್ಕೆ ಬಿದ್ದ ತಾಯಿ ಮತ್ತು ಮಗುವಿನ ಮೇಲೆ ಟಿಪ್ಪರ್ ಹರಿದು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಬ್ಯಾಂಕ್ ನಲ್ಲಿ ಕಲೆಕ್ಷನ್ ಕೆಲಸ ಮಾಡಿಕೊಂಡು ಶಿವಕುಮಾರ್ ಜೀವನದ ಬಂಡಿ ಸಾಗಿಸುತ್ತಿದ್ದರು. ಇವತ್ತು ತಮಿಳುನಾಡಿನ ಧರ್ಮಪುರಿಯಲ್ಲಿ ಶಿವಕುಮಾರ್ ತಮ್ಮನ ನಿಶ್ಚಿತಾರ್ಥವಿತ್ತು. ಹೀಗಾಗಿ ಬೆಳಗ್ಗೆನೇ ಗಂಡ ಹೆಂಡ್ತಿ ಇಬ್ಬರೂ ಮಗುವನ್ನು ಕರೆದುಕೊಂಡು ಎನ್ ಫೀಲ್ಡ್ ಬೈಕ್ ಏರಿ ಲಗೇಜ್ ಸಮೇತ ಹೊರಟಿದ್ರು. ಆದ್ರೆ ವಿಧಿಯಾಟ ಮಾರತ್ ಹಳ್ಳಿಯ ಮಲ್ಟಿಪ್ಲೆಕ್ಸ್ ರಿಂಗ್ ರೋಡಲ್ಲಿ ಹೋಗ್ತಿದ್ದಾಗ ಹಿಂಬದಿಯಿಂದ ಯಮಧೂತನಂತೆ ಬಂದ ಟಿಪ್ಪರ್ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ತಾಯಿ ಮತ್ತು ಮಗು ಇಬ್ಬರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಸ್ನೇಹಿತ ಬಿಎಂಟಿಸಿ ಬಸ್ ಡ್ರೈವರ್​​​ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಅರ್ಪಿಸಿದ ರಜನಿಕಾಂತ್

    21 ವರ್ಷದ ಶ್ರೀದೇವಿ ಮತ್ತು ಅವರ ಒಂದು ವರ್ಷದ ಮಗು ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದರೆ, ವಿಪರ್ಯಾಸ ಎಂಬಂತೆ ಸ್ಥಳೀಯರು ಯಾರು ನೆರವಿಗೆ ಬಂದಿಲ್ಲ. ಕೊನೆಗೆ ಯಾರೋ ಸಹಾಯ ಮಾಡುವ ನೆಪದಲ್ಲಿ ಮೃತರ ಬಳಿಯಿದ್ದ ಮೊಬೈಲ್ ದೋಚಿದ್ದಾರೆ. ಮೃತರ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದ್ದು, ಮೂರು ದಿನಗಳ ಹಿಂದಷ್ಟೇ ಒಂದು ವರ್ಷದ ಮಗುವಿನ ಹುಟ್ಟುಹಬ್ಬ ಆಚರಿಸಲಾಗಿತ್ತು. ಸದ್ಯ ಎಚ್.ಎ.ಎಲ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಇದನ್ನೂ ಓದಿ: ಪತಿಗಾಗಿ ವ್ರತ ಮಾಡಿದ ಶಿಲ್ಪಾ ಶೆಟ್ಟಿ- ರಾಜ್ ಕುಂದ್ರಾ ಮಿಸ್ಸಿಂಗ್

  • 3 ತಿಂಗಳ ಮಗುವನ್ನು ಕತ್ತು ಹಿಸುಕಿ ಕೊಂದ ಕ್ರೂರಿ ತಾಯಿ

    3 ತಿಂಗಳ ಮಗುವನ್ನು ಕತ್ತು ಹಿಸುಕಿ ಕೊಂದ ಕ್ರೂರಿ ತಾಯಿ

    ಮುಂಬೈ: ಮೂರು ತಿಂಗಳ ಮಗುವನ್ನು ತಾಯಿಯೇ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಪುಣೆಯ ಯರವಾಡ ಪ್ರದೇಶದಲ್ಲಿ ನಡೆದಿದೆ.

    ಆರೋಪಿ ತಾಯಿಯನ್ನು ಪಲ್ಲವಿ ಭೋಂಗೆ ಎಂದು ಗುರುತಿಸಲಾಗಿದ್ದು, ಪಲ್ಲವಿ ಮತ್ತು ಆಕೆಯ 13 ವರ್ಷದ ಮಗನನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಅಲ್ಪಸಂಖ್ಯಾತ ವ್ಯಕ್ತಿ ಅನ್ನೋ ಕಾರಣಕ್ಕೆ ಸಲೀಂ ಮೇಲೆ ಕ್ರಮ ಕೈಗೊಂಡ್ರು: ಜಗದೀಶ್ ಶೆಟ್ಟರ್

    ಈ ಘಟನೆಗೆ ಸಂಬಂಧಿಸಿದಂತೆ ತನಿಖೆ ವೇಳೆ ಆರೋಪಿ ಮೂಲತಃ ಬುಲ್ಧಾನ ನಿವಾಸಿಯಾಗಿದ್ದು, ಈಕೆ ನುಕ್ಷನ್ ಜಿಲ್ಲೆಯಲ್ಲಿ ವಾಸಿಸುತ್ತಿದ್ದ ದಿನಗೂಲಿಕಾರನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬೇರೆ ಮನೆ ಮಾಡಲು ಒಪ್ಪದ ಪತಿ -ಕಂದನನ್ನು ನೀರಿನಲ್ಲಿ ಮುಳುಗಿಸಿ ಕೊಂದ ತಾಯಿ

    ಈಗಾಗಲೇ ಮಹಿಳೆ ತನ್ನ ಪತಿಯಿಂದ ದೂರ ವಾಸಿಸುತ್ತಿದ್ದು, ಆಕೆ ಅಕ್ರಮ ಸಂಬಂಧ ಹೊಂದಿ ಗರ್ಭಧಾರಣೆ ಮಾಡಿದ್ದಾಳೆ ಎಂಬ ವಿಚಾರ ಗ್ರಾಮದಲ್ಲಿ ಎಲ್ಲರಿಗೂ ತಿಳಿದಿತ್ತು. ಆದರೆ 3 ತಿಂಗಳ ನಂತರ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ನಂತರ ಮಗುವನ್ನು ಕೊಂದು ಮಹಿಳೆ ತನ್ನ 13 ವರ್ಷದ ಮಗನಿಗೆ ಶವವನ್ನು ತಮ್ಮ ಮನೆಯಿಂದ ಸ್ವಲ್ಪ ದೂರದಲ್ಲಿರುವ ನದಿಯಲ್ಲಿ ಎಸೆದು ಬರುವಂತೆ ತಿಳಿಸಿದ್ದಾಳೆ.

    ಈ ಕುರಿತಂತೆ ವಿಚಾರಣೆ ವೇಳೆ ಬಾಲಕ ತಪ್ಪನ್ನು ಒಪ್ಪಿಕೊಂಡಿದ್ದಾನೆ. ನಂತರ ಆತನನ್ನು ಸ್ಥಳಕ್ಕೆ ಕರೆದುಕೊಂಡು ಹೋಗಿ ಪರಿಶೀಲನೆ ನಡೆಸಿದ ಪೊಲೀಸರಿಗೆ ಈ ವೇಳೆ ಕಲ್ಲಿನ ಕೆಳಗೆ ಮಗುವನ್ನು ಹೂತಿದ್ದ ಚೀಲವೊಂದನ್ನು ಪತ್ತೆಯಾಗಿದೆ.

  • ಬೇರೆ ಮನೆ ಮಾಡಲು ಒಪ್ಪದ ಪತಿ -ಕಂದನನ್ನು ನೀರಿನಲ್ಲಿ ಮುಳುಗಿಸಿ ಕೊಂದ ತಾಯಿ

    ಬೇರೆ ಮನೆ ಮಾಡಲು ಒಪ್ಪದ ಪತಿ -ಕಂದನನ್ನು ನೀರಿನಲ್ಲಿ ಮುಳುಗಿಸಿ ಕೊಂದ ತಾಯಿ

    ಭೋಪಾಲ್: ಬೇರೆ ಮನೆ ಮಾಡಲು ಒಪ್ಪದ ಪತಿ ವಿರುದ್ಧವಾಗಿ ಸಿಟ್ಟು ತೀರಿಸಿಕೊಳ್ಳಲು ತನ್ನ ಮೂರು ತಿಂಗಳ ಕಂದಮ್ಮನನ್ನು ತಾಯಿಯೇ ಕೊಂದು ಹಾಕಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

    ಸ್ವಾತಿ ತನ್ನ 3 ತಿಂಗಳ ಮಗಳನ್ನು ಹತ್ಯೆ ಮಾಡಿದ್ದಾಳೆ. ಅಕ್ಟೋಬರ್ 12 ರಂದು ಮಗುವನ್ನು ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿದ್ದಾಳೆ. ಬಳಿಕ ಮಗು ಕಾಣೆಯಾಗಿದೆ ಎಂದು ಮನೆಯವರಿಗೆ ತಿಳಿಸಿದ್ದಾಳೆ. ಈ ಮಧ್ಯಪ್ರದೇಶದ ಉಜ್ಜಯಿನಿಯ ಕಚ್ರೋಡ್‍ನಲ್ಲಿ ನಡೆದಿದೆ.

    ಕಾಣೆಯಾದ ಮಗುವಿಗಾಗಿ ಮನೆಯವರೆಲ್ಲ ಮಗುವಿಗಾಗಿ ಹುಡುಕಾಟ ನಡೆಸಿದ್ದಾರೆ. ಮಗು ಸಿಗದೇ ಇದ್ದಾಗ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಪಕ್ರರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಶುರುಮಾಡಿದ್ದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮಗುವಿಗಾಗಿ ಹುಡುಕಾಟ ನಡೆಸಿದ್ದಾರೆ. ಮನೆ ಶೋಧದ ವೇಳೆ ಮೂರನೇ ಅಂತಸ್ತಿನಲ್ಲಿರುವ ನೀರಿನ ಟ್ಯಾಂಕರ್‌ನಲ್ಲಿ 3 ತಿಂಗಳ ಹೆಣ್ಣು ಮಗುವಿನ ಮೃತ ದೇಹ ಪತ್ತೆಯಾಗಿದೆ. ಆದರೆ ಕೊಲೆ ಮಾಡಿದ್ದು, ಯಾರು ಎಂಬುಂದು ಪೊಲೀಸರಿಗೆ ತಲೆ ನೋವಾಗಿತ್ತು. ಇದನ್ನೂ ಓದಿ:  2ರೂ. ಬೆಂಕಿ ಪೊಟ್ಟಣದಲ್ಲಿ 36 ಕಡ್ಡಿ ಬದ್ಲು 50 ಕಡ್ಡಿ

    ಹಿನ್ನೆಲೆ ಏನು?:
    ಮನೆಯಲ್ಲಿ ಒಟ್ಟು 4 ಮಂದಿ ಜೊತೆಯಾಗಿ ವಾಸವಿದ್ದರು, ಮಹಿಳೆ ಹಾಗೂ ಆಕೆಯ ಪತಿ, ಗಂಡನ ಅಪ್ಪ-ಅಪ್ಪಇವರೆಲ್ಲರೂ ಒಟ್ಟಿಗೆ ಇದ್ದರು. ಪೊಲೀಸರಿಗೆ ಎಲ್ಲರ ಮೇಲೆ ಅನುಮಾನ ಮೂಡಿತ್ತು. ಮಗು ಮೃತಪಟ್ಟ 10 ದಿನಗಳ ಕಾಲ ಪ್ರತಿದಿನ ತಾಯಿ ಠಾಣೆಗೆ ತೆರಳಿ ಮಗು ಹುಡುಕಿಕೊಂಡುವಂತೆ ಕಣ್ಣೀರು ಹಾಕುತ್ತಾ, ನನ್ನ ಮಗು ಸಿಗದೇ ಇದ್ದರೆ ನಾನು ಸತ್ತು ಹೋಗುತ್ತೇನೆ ಎಂದು ಹೇಳಿದ್ದಳು. ಇದನ್ನೂ ಓದಿ:  ಸಣ್ಣ ಪ್ರಮಾಣದ ಡ್ರಗ್ಸ್ ಸೇವಿಸಿದವರಿಗೆ ಜೈಲು ಶಿಕ್ಷೆ ಬೇಡ!

    ಮಗುವಿನ ಕುಟುಂಬಸ್ಥರನ್ನು ವಿಚಾರಣೆ ಮಾಡಿದ್ದಾರೆ. ಈ ವೇಳೆ ಮಗುವಿನ ತಾಯಿ ಮೋಬೈಲ್ ಫೋನ್ ಚೆಕ್ ಮಾಡಿದ್ದಾರೆ. ಆಗ ಗೂಗಲ್ ಹಾಗೂ ಯೂಟ್ಯೂಬ್‍ನಲ್ಲಿ ಮಗುವನ್ನು ಕೊಲ್ಲುವುದು ಹೇಗೆ ಎಂಬುದನ್ನು ತಾಯಿ ಸ್ವಾತಿ ಸರ್ಚ್ ಮಾಡಿರುವುದು ಕಂಡುಬಂದಿದೆ. ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ನಡೆಸುತ್ತಿದ್ದಂತೆ ನಡೆದ ಘಟನೆಯನ್ನೆಲ್ಲ ತಾಯಿ ಸ್ವಾತಿ ಹೇಳಿದ್ದಾಳೆ. ಪೊಲೀಸರ ಒಂದು ಕ್ಷಣ ದಂಗಾಗಿಹೋಗಿದ್ದಾರೆ. ಇದನ್ನೂ ಓದಿ:  ದಂಪತಿಯ ಹನಿ ಟ್ರ್ಯಾಪ್ ಬಲೆಗೆ ಬಿದ್ದ 300 ಮಂದಿ- ಒಂದೇ ವರ್ಷದಲ್ಲಿ 20 ಕೋಟಿ ಸುಲಿಗೆ!

    ನಾನು ನನ್ನ ಗಂಡ ಸಪರೇಟ್ ಆಗಿ ಸಂಸಾರ ಮಾಡುವ ಕನಸು ಕಂಡಿದ್ದೇ, ತುಂಬಾ ಸಲ ಗಂಡನ ಬಳಿ ಬೇರೆ ಮನೆ ಮಾಡುವಂತೆ ಹೇಳಿದ್ದೆ. ಆದರೆ ಗಂಡ ಇದಕ್ಕೆ ಒಪ್ಪಿಗೆ ನೀಡಿರಲಿಲ್ಲ ಹೀಗಾಗಿ ಈ ರೀತಿಯ ಕೃತ್ಯ ಮಾಡಿದ್ದೇನೆ ಎಂದು ತಪ್ಪೊಪ್ಪಿಕೊಂಡಿದ್ದಾಳೆ. ಇದನ್ನೂ ಓದಿ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಆನಂದ್ ಬರ್ಬರ ಕೊಲೆ

  • ಕಾಳಿ ನದಿಯಲ್ಲಿ ಗಾಳಹಾಕಿ ಮೀನು ಹಿಡಿಯಲು ಹೋದ ಬಾಲಕನನ್ನು ಎಳೆದೊಯ್ದ ಮೊಸಳೆ

    ಕಾಳಿ ನದಿಯಲ್ಲಿ ಗಾಳಹಾಕಿ ಮೀನು ಹಿಡಿಯಲು ಹೋದ ಬಾಲಕನನ್ನು ಎಳೆದೊಯ್ದ ಮೊಸಳೆ

    ಕಾರವಾರ: ನದಿ ದಂಡೆಯ ಮೇಲೆ ಮೀನು ಹಿಡಿಯಲು ಗಾಳಹಾಕಿ ಕುಳಿತಿದ್ದ ಬಾಲಕನನ್ನು ಮೊಸಳೆ ಎಳೆದೊಯ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಕಾಳಿ ನದಿ ದಡದಲ್ಲಿ ಇಂದು ಸಂಜೆ ನಡೆದಿದೆ.

    ಮೋಹಿನ್ ಮೆಹಬೂಬ್ (15) ಮೊಸಳೆ ಪಾಲಾದ ಬಾಲಕನಾಗಿದ್ದು, ಈತ ಮೀನು ಹಿಡಿಯಲು ದಾಂಡೇಲಿ-ಹಳಿಯಾಳ ರಸ್ತೆಯ ಕಾಳಿ ನದಿ ದಡದಲ್ಲಿ ಕುಳಿತಿದ್ದ. ಈ ವೇಳೆ ಮೊಸಳೆ ದಾಳಿಮಾಡಿದ್ದು ಈತನನ್ನು ಹೊತ್ತೊಯ್ದಿದೆ. ಇದನ್ನೂ ಓದಿ: ಕಾಳಿ ನದಿಯಿಂದ ಗ್ರಾಮಕ್ಕೆ ಬಂತು ಮೊಸಳೆ – ಆತಂಕದಲ್ಲಿ ಗ್ರಾಮಸ್ಥರು

    ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು, ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿ ಶೋಧ ಕಾರ್ಯ ಮುಂದುವರೆಸಿದ್ದು, ಸೂಪಾ ಜಲಶಾಯದಿಂದ ಹರಿದುಬರುತ್ತಿರುವ ನೀರನ್ನು ಸಹ ಬಂದ್ ಮಾಡಲಾಗಿದೆ. ಇದನ್ನೂ ಓದಿ: ಮೆಡಿಕಲ್‍ನಲ್ಲಿ ಗ್ರೈಪ್ ವಾಟರ್ ಬದಲು ಪಾಯಿಸನ್ ಕೊಟ್ರು

  • ತಾಯಿಯಾಗಿರುವ ವಿಚಾರ 2 ವರ್ಷಗಳ ನಂತ್ರ ಬಹಿರಂಗ ಪಡಿಸಿದ ಶ್ರಿಯಾ ಶರಣ್

    ತಾಯಿಯಾಗಿರುವ ವಿಚಾರ 2 ವರ್ಷಗಳ ನಂತ್ರ ಬಹಿರಂಗ ಪಡಿಸಿದ ಶ್ರಿಯಾ ಶರಣ್

    ಹೈದರಾಬಾದ್: ನಟಿ ಶ್ರಿಯಾ ಶರಣ್‍ಗೆ ಹೆಣ್ಣು ಮಗು ಜನಿಸಿದೆ. ಈ ವಿಚಾರವನ್ನು 2 ವರ್ಷಗಳ ನಂತರ ಅಭಿಮಾನಿಗಳ ಜೊತೆಗೆ ಹಂಚಿಕೊಂಡಿದ್ದಾರೆ. ಇಷ್ಟು ತಡವಾಗಿ ವಿಷಯವನ್ನು ಹಂಚಿಕೊಳ್ಳಲು ಕಾರಣವೇನು ಎಂದು ಸ್ಪಷ್ಟಪಡಿಸಿದ್ದಾರೆ.

    2020ರ ಕ್ವಾರಂಟೈನ್ ತುಂಬಾನೇ ಅದ್ಭುತವಾಗಿತ್ತು. ಇಡೀ ಪ್ರಪಂಚವು ಕಷ್ಟದಲ್ಲಿ ಸಾಗುತ್ತಿರುವಾಗ, ನಮ್ಮ ಪ್ರಪಂಚವು ಬದಲಾಯಿತು. ನಮಗೆ ಆ ಸಂದರ್ಭದಲ್ಲಿ ಹೆಣ್ಣುಮಗುವಾಗಿದೆ ಎಂದು ಬರೆದುಕೊಂಡು ಒಂದು ವೀಡಿಯೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ನಿಜಕ್ಕೂ ಅಚ್ಚರಿ ವ್ಯಕ್ತಪಡಿಸಿದ್ದಾರೆ. ನಟಿಗೆ ಕೆಲವು ಪ್ರಶ್ನೆಗಳು ಎದುರಾಗಿವೆ. ಕೋವಿಡ್ ಲಾಕ್‍ಡೌನ್ ಸಮಯದಲ್ಲಿ ನಮ್ಮ ಕುಟುಂಬಕ್ಕೆ ಹೊಸ ಅತಿಥಿ ಬಂದಿರುವ ವಿಚಾರವನ್ನು ತಿಳಿಸುವುದು ಸೂಕ್ತವಾಗಿರಲಿಲ್ಲ ಎಂದು ಈ ಬಗ್ಗೆ ತಿಳಿಸದಕ್ಕೆ ಕಾರಣ ಹೇಳಿದ್ದಾರೆ. ದನ್ನೂ ಓದಿ: ಯಶ್ ಹೇರ್ ಸ್ಟೈಲ್‍ಗೆ ಅಭಿಮಾನಿಗಳು ಫಿದಾ

     

    View this post on Instagram

     

    A post shared by Shriya Saran (@shriya_saran1109)

    2001ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಶ್ರಿಯಾ ಶರಣ್‍ಗೆ 2020ರ ಲಾಕ್‍ಡೌನ್ ಸಂದರ್ಭದಲ್ಲಿಯೇ ಮಗು ಜನಿಸಿತ್ತು. ಆದರೆ ಈ ವಿಚಾರವನ್ನು ಅವರು ಎಲ್ಲಿಯೂ ಹೇಳಿಕೊಂಡಿರಲಿಲ್ಲ. ಮಗು ಜನಿಸಿ ಸುಮಾರು ಎರಡು ವರ್ಷ ಆಗುತ್ತಾ ಬಂದಿದೆ. ಈಗ ಶ್ರಿಯಾ ಈ ವಿಚಾರ ಬಿಚ್ಚಿಟ್ಟಿದ್ದಾರೆ. 2 ವರ್ಷಗಳ ನಂತರ ಈ ವಿಚಾರವಾಗಿ ಬಾಯಿ ಬಿಟ್ಟಿರುವುದಕ್ಕೆ ಅಭಿಮಾನಿಗಳೂ ನಿಜಕ್ಕೂ ಆಶ್ಚರ್ಯವನ್ನು ವ್ಯಕ್ತಪಡಿಸಿದ್ದಾರೆ. ದನ್ನೂ ಓದಿ: ಯಶ್ ಜೊತೆ ಸೆಲ್ಫಿಗೆ ಮುಗಿಬಿದ್ದ ಮುಂಬೈ ಅಭಿಮಾನಿಗಳು

    ನಟಿ ಶ್ರಿಯಾ ಹೆಣ್ಣು ಮಗುವಿನ ತಾಯಿಯಾಗಿದ್ದಾರೆ. ರಷ್ಯಾದ ಗೆಳೆಯ ಆಂಡ್ರೆ ಕೊಶ್ಚೆವ್ ಜೊತೆ 2018ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಶ್ರಿಯಾ 2020ರಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಆದರೆ ಈ ವಿಚಾರವನ್ನು ಅವರು ಅಭಿಮಾನಿಗಳಿಗೆ ಇಂದು ಬಹಿರಂಗಪಡಿಸಿದ್ದಾರೆ. ದನ್ನೂ ಓದಿ: ಸಖತ್ ಸ್ಟೈಲಿಶ್ ಆಗಿ ಮುಂಬೈನಲ್ಲಿ ಕಾಣಿಸಿಕೊಂಡ ಯಶ್

    ಶ್ರಿಯಾ ಕನ್ನಡ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ಚಂದ್ರ, ಅರಸು ಸಿನಿಮಾ ಮೂಲಕವಾಗಿ ಕನ್ನಡ ಅಭಿಮಾನಿಗಳ ಪ್ರೀತಿಯನ್ನು ಸಂಪಾದಿಸಿಕೊಂಡಿದ್ದಾರೆ. ಈ ನಟಿ ಇದೀಗ ತಮ್ಮ ಮಗುವಿನ ಲಾಲನೆ ಪಾಲನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

  • ಆಟವಾಡ್ತಿದ್ದಾಗ ಕಾರು ಹರಿದು ಬಾಲಕ ದಾರುಣ ಸಾವು

    ಆಟವಾಡ್ತಿದ್ದಾಗ ಕಾರು ಹರಿದು ಬಾಲಕ ದಾರುಣ ಸಾವು

    ಚಿಕ್ಕಬಳ್ಳಾಪುರ: ಮನೆಯ ಮುಂದೆ ಆಟವಾಡುತ್ತಿದ್ದ ಮಗುವಿನ ಮೇಲೆ ಕಾರು ಹರಿದು, ದಾರುಣವಾಗಿ ಸಾವನ್ನಪ್ಪಿರುವ ಮನಕಲುಕುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿ ನಡೆದಿದೆ.

    ವೆಂಕಟೇಶ್ವರಲು-ಮೊನಿಷಾ ದಂಪತಿಯ ಗಿತಿಕ್(4) ಮೃತ ದುರ್ದೈವಿ ಮಗು. ಮಗುವಿನ ಮೇಲೆ ಕಾರು ಹರಿದ ದೃಶ್ಯ ಪಕ್ಕದ ಮನೆಯವರ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

    ಗಿತಿಕ್ ಹಾಗೂ ಅಣ್ಣ ಸೋಹನ್ ಇಬ್ಬರೂ ಮನೆಯ ಮುಂದೆ ಇದ್ದ ಫೀಲ್ಡ್ ನಲ್ಲಿ ಆಟ ಆಡಲು ಹೋಗಿದ್ದು ವಾಪಾಸ್ ಬರುವಾಗ ಅಣ್ಣ ಸೈಕಲ್ ತುಳಿಯುತ್ತಿದ್ದರೆ, ತಮ್ಮ ಗಿತಿಕ್ ತಿರುವಿನಲ್ಲಿನ ನಡುರಸ್ತೆಯಲ್ಲಿ ಕೂತು ಏನೋ ಮಾಡ್ತಿದ್ದ. ಇದನ್ನೂ ಓದಿ: ವಿಕೃತಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಪ್ರಕಟಿಸಿದ ಹೈಕೋರ್ಟ್

    ಇದೇ ವೇಳೆ ಮನೆಗಳ ಕಡೆಯಿಂದ ಪ್ರಮುಖ ರಸ್ತೆಯತ್ತ ಫೋರ್ಡೋ ಕಾರು ಬಂದಿದೆ. ರಸ್ತೆಯಲ್ಲಿ ತಿರುವು ಇದ್ದುದರಿಂದ ಮಗು ಇರೋದನ್ನ ಗಮನಿಸಿದ ಕಾರು ಚಾಲಕ, ಏಕಾಏಕಿ ಮಗು ಮೇಲೆ ಕಾರು ಹರಿಸಿದ್ದಾರೆ. ನಂತರ ಕಾರು ಯಾಕೆ ಮುಂದೆ ಹೋಗ್ತಿಲ್ಲ ಅಂತ ಚಾಲಕ ಕೂಡಲೇ ಕೆಳಗಿಳಿದು ನೋಡಿದಾಗ ಚಕ್ರದಡಿ ಮಗು ಸಿಲುಕಿರುವುದು ಬೆಳಕಿಗೆ ಬಂದಿದೆ.

    ತಕ್ಷಣ ಸ್ಥಳೀಯರೆಲ್ಲರೂ ಸೇರಿ ಮಗುವನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆಸ್ಪತ್ರೆಗೆ ಹೋಗಿ ಪ್ರಾಥಮಿಕ ಚಿಕಿತ್ಸೆ ನೀಡುವಷ್ಟರಲ್ಲಿ ಮಗು ಮೃತಪಟ್ಟಿದೆ. ಮಗುವಿನ ತಲೆ, ಮೂಗು, ಕೈ, ಕಾಲು ಹಾಗೂ ಎದೆ ಭಾಗದಲ್ಲಿ ಗಾಯಗಳಾಗಿ ರಕ್ತಸ್ರಾವವಾಗಿದೆ. ಮಗು ಮೃತಪಟ್ಟ ವಿಷಯ ತಿಳಿದ ಕಾರು ಚಾಲಕ ಕಾರು ಸಮೇತ ಎಸ್ಕೇಪ್ ಆಗಿದ್ದಾನೆ. ಇದನ್ನೂ ಓದಿ: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರ – ಶಿವನ ಭಕ್ತನಾಗಿದ್ದ ಗಾಂಜಾ ಆರೋಪಿ

    ಇತ್ತ ವಿಷಯ ತಿಳಿದು ಆಸ್ಪತ್ರೆಗೆ ಆಗಮಿಸಿದ ಚಿಂತಾಮಣಿ ನಗರ ಠಾಣೆ ಸಿಪಿಯ ರಂಗರಾಮಯ್ಯ, ಮೃತದೇಹವನ್ನ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಿ ಮರಣೋತ್ತರ ಪರೀಕ್ಷೆಗೆ ನಡೆಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. ಕಾರಿನ ನಂಬರ್ ಆಧರಿಸಿ ಕಾರು ಆಂಧ್ರ ಮೂಲದ ಮದನಪಲ್ಲಿಯವರದ್ದು ಅಂತ ತಿಳಿದು ಬಂದಿದ್ದು, ಕಾರಿನ ಚಾಲಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಇತ್ತ ಮಗು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

    ಈ ಸಂಬಂಧ ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸುಳ್ಯದಲ್ಲಿ ಯುವತಿಯ ಅತ್ಯಾಚಾರಕ್ಕೆ ಯತ್ನ- ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

  • ಮಗಳ ಹೆಸರು ರಿವೀಲ್ ಮಾಡಿದ ಯುವರತ್ನ ನಟಿ ಸಯೇಷಾ

    ಮಗಳ ಹೆಸರು ರಿವೀಲ್ ಮಾಡಿದ ಯುವರತ್ನ ನಟಿ ಸಯೇಷಾ

    ಹೈದರಾಬಾದ್: ಯುವರತ್ನ ನಟಿ ಸಯೇಷಾ, ಆರ್ಯ ದಂಪತಿ ಇತ್ತೀಚೆಗೆ ಮಗುವನ್ನು ಬರಮಾಡಿಕೊಂಡಿದ್ದರು. ದಂಪತಿ ಮಗುವಿಗೆ ವಿಭಿನ್ನವಾಗಿರುವ ಹೆಸರು ಇಡುವ ಮೂಲಕವಾಗಿ ಸುದ್ದಿಯಾಗಿದ್ದಾರೆ.

    ಸಯೇಷಾ ಮತ್ತು ಆರ್ಯಾ ದಂಪತಿಗೆ ಮುದ್ದಾದ ಹೆಣ್ಣು ಮಗು ಜನಿಸಿ ಎರಡು ತಿಂಗಳಾಗಿದೆ. ಈಗ ಮಗುವಿಗೆ ಅರಿಯಾನಾ ಎಂದು ನಾಮಕರಣ ಮಾಡಲಾಗಿದೆ. ಈ ಬಗ್ಗೆ ಕುಟುಂಬದ ಕಡೆಯಿಂದ ಅಧಿಕೃತ ಘೋಷಣೆ ಆಗಿದೆ. ಹೆಸರು ಕೇಳಿದ ಅಭಿಮಾನಿಗಳು ಸಾಕಷ್ಟು ಖುಷಿಯಾಗಿದ್ದಾರೆ. ಅರಿಯಾನಾ ಅಂದರೆ ಅತ್ಯಂತ ಪವಿತ್ರವಾದುದು ಎನ್ನುವ ಅರ್ಥವಿದೆ. ಮಗಳ ಹೆಸರನ್ನು ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡು ರಿವೀಲ್ ಮಾಡಿದ್ದಾರೆ. ಇದನ್ನೂ ಓದಿ: ರಾಜ್ಯದ ಆರು ನಗರಗಳಲ್ಲಿ ವಿಧಿವಿಜ್ಞಾನ ಪ್ರಯೋಗಾಲಯಗಳ ಸ್ಥಾಪನೆ: ಬೊಮ್ಮಾಯಿ

     

    View this post on Instagram

     

    A post shared by Shaheen (@shhaheen)

    ನನ್ನ ಮೊಮ್ಮಗಳಿಗೆ ಎರಡು ತಿಂಗಳು. ನೀವು ಅವಳ ಹೆಸರನ್ನು ತಿಳಿದಿರಬೇಕು. ಅರಿಯಾನಾ, ಇದರ ಅರ್ಥ ಶುದ್ಧ. ನಾವು ಅದನ್ನು ಇಷ್ಟಪಟ್ಟಿದ್ದೇವೆ. ಆಕೆಯ ತಂದೆ ಆರ್ಯ ಹೆಸರಿಗೆ ಹತ್ತಿರವಾಗಿರುವುದರಿಂದ ಉತ್ತಮವಾಗಿದೆ. ನಿಮ್ಮೆಲ್ಲರ ಪ್ರೀತಿ ಮತ್ತು ಆಶೀರ್ವಾದದಿಂದ ಅವಳು ಮುದ್ದಾಗಿದ್ದಾಳೆ. ಸ್ವಲ್ಪ ಸಮಯದಲ್ಲಿ ನಾವು ಅವಳ ಚಿತ್ರಗಳೊಂದಿಗೆ ಅವಳನ್ನು ನಿಮಗೆ ಪರಿಚಯಿಸುತ್ತೇವೆ. ದಯವಿಟ್ಟು ನಿಮ್ಮ ಆಶೀರ್ವಾದದಿಂದ ಅವಳನ್ನು ಆಶೀರ್ವದಿಸುವುದನ್ನು ಮುಂದುವರಿಸಿ ಎಂದು ಸಯೇಷಾ ಅವರ ತಾಯಿ ಇನ್‍ಸ್ಟಾಗ್ರಾಮ್‍ನಲ್ಲಿ ಬರೆದುಕೊಂಡು ಮೊಮ್ಮಗಳ ಹೆಸರನ್ನು ರಿವೀಲ್ ಮಾಡಿ, ಸಂತೋಷವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ನಾನು 35 ಅಂಕದ ಕೆಟಗೆರಿಯವರು ಅದಕ್ಕೆ ಕೈಗಾರಿಕಾ ಸಚಿವನಾದೆ: ಮುರುಗೇಶ್ ನಿರಾಣಿ

    arya daughter

    2019ರಲ್ಲಿ ಆರ್ಯ ಜೊತೆ ಸಯೇಷಾ ಮದುವೆ ನಡೆಯಿತು. ಇಬ್ಬರೂ ಕೂಡ ಅವರವರ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಸಯೇಷಾ ಗರ್ಭಿಣಿ ಆಗಿರುವ ವಿಷಯವನ್ನು ಬಹಿರಂಗಪಡಿಸಿರಲಿಲ್ಲ. ಹೆಣ್ಣು ಮಗು ಜನಿಸಿರುವ ಸುದ್ದಿಯನ್ನು ಕಾಲಿವುಡ್ ನಟ, ಆರ್ಯ ಅವರ ಸ್ನೇಹಿತ ವಿಶಾಲ್ ಬ್ರೇಕ್ ಮಾಡಿದ್ದರು. ಇದನ್ನೂ ಓದಿ: 60 ತಿಂಗಳಲ್ಲಿ 59 ತಿಂಗಳು ಅಭಿವೃದ್ಧಿ, ಒಂದು ತಿಂಗಳ ಮಾತ್ರ ರಾಜಕಾರಣ ಮಾಡೋಣ: ಬೊಮ್ಮಾಯಿ

    ನಾನು ಅಂಕಲ್ ಆಗಿದ್ದೇನೆ ಎಂಬ ಈ ಖುಷಿ ಹಂಚಿಕೊಳ್ಳಲು ಬಹಳ ಖುಷಿ ಆಗುತ್ತಿದೆ. ನನ್ನ ಸಹೋದರ ಜಮ್ಮಿ ಮತ್ತು ಸಯೇಷಾ ಅವರಿಗೆ ಹೆಣ್ಣು ಮಗು ಜನಿಸಿದೆ. ಚಿತ್ರೀಕರಣದ ನಡುವೆ ಈ ಭಾವುಕ ಕ್ಷಣವನ್ನು ನಿಯಂತ್ರಿಸಲು ಆಗುತ್ತಿಲ್ಲ. ಅವರಿಗೆ ಸದಾ ಒಳ್ಳೆಯದಾಗಲಿ. ತಾಯಿ-ಮಗಳಿಗೆ ದೇವರ ಕೃಪೆ ಇರಲಿ. ಅಪ್ಪನಾಗಿ ಹೊಸ ಜವಾಬ್ದಾರಿ ನಿಭಾಯಿಸುತ್ತಿರುವ ಆರ್ಯಾಗೆ ಆಲ್ ದಿ ಬೆಸ್ಟ್ ಎಂದು ವಿಶಾಲ್ ಟ್ವೀಟ್ ಮಾಡಿದ್ದರು.

  • ದಂಪತಿ ಜಗಳಕ್ಕೆ ಬಲಿಯಾದ 22ದಿನದ ಕಂದಮ್ಮ

    ದಂಪತಿ ಜಗಳಕ್ಕೆ ಬಲಿಯಾದ 22ದಿನದ ಕಂದಮ್ಮ

    ಹೈದರಾಬಾದ್: ಇಪ್ಪತ್ತೆರಡು ದಿನಗಳ ಹುಸುಗೂಸೊಂದು ತನ್ನ ಅಪ್ಪ, ಅಮ್ಮನ ಜಗಳದಲ್ಲಿ ಬಲಿಯಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

    ತೆಲಂಗಾಣದ ಸೈದಾಬಾದ್‍ನ ಪೂಸಲ ಬಸ್ತಿ ನಿವಾಸಿಗಳಾದ ಪಿ. ರಾಜೇಶ್ ಮತ್ತು ಜಾಹ್ನವಿ ಖಾಸಗಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ದಂಪತಿ ನಡುಗೆ ಶುರುವಾದ ಸಣ್ಣ ಜಗಳ ಮಗುವನ್ನು ಬಲಿ ಪಡೆದುಕೊಂಡಿದೆ. ಇದನ್ನೂ ಓದಿ: ಪೂಜಾ ಹೆಗ್ಡೆಗೆ ಸರ್ಪ್ರೈಸ್ ಕೊಟ್ಟ ಫೋಟೋಗ್ರಾಫರ್‌ಗಳು

    ಇತ್ತೀಚೆಗಷ್ಟೆ ಈ ದಂಪತಿಗೆ ಮುದ್ದಾದ ಗಂಡು ಮಗು ಜನನವಾಗಿತ್ತು. ಮಗುವಿಗೆ ಹಾಲು ಕುಡಿಸುವ ಬಗ್ಗೆ ವಾಗ್ವಾದವಾದ ಹಿನ್ನಲೆಯಲ್ಲಿ ರಾಜೇಶ್ ಜಾಹ್ನವಿಗೆ ಹೊಡೆಯಲು ಪೈಪ್ ಕೈಗೆತ್ತಿಕೊಂಡ. ಮಗುವನ್ನು ತನ್ನ ತೋಳಿನಲ್ಲಿ ಎತ್ತಿಕೊಂಡಿದ್ದ ಆ ತಾಯಿ ಅದನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದಳು. ಹೊಡೆತ ತಪ್ಪಿಸಿಕೊಳ್ಳಲು ಮನೆಯೆಲ್ಲಾ ಓಡಾಡಿದ್ದಳು ಎನ್ನಲಾಗಿದೆ. ಇದನ್ನೂ ಓದಿ:  ನೆಟ್ಟಿಗರ ಮನಗೆದ್ದ ನ್ಯೂಸ್‍ಪೇಪರ್ ಬಾಯ್

    ಸ್ವಲ್ಪ ಸಮಯದ ನಂತರ ಮಗು ಯಾವುದೇ ಪ್ರತಿಕ್ರಿಯೆ ನೀಡದೆ ಇದ್ದದನ್ನು ಗಮನಿಸಿದ ದಂಪತಿ, ತಕ್ಷಣ ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು. ಪರೀಕ್ಷೆ ನಡೆಸಿದ ವೈದ್ಯರು, ಮಗು ಉಸಿರುಗಟ್ಟಿ ಸತ್ತುಹೋಗಿದೆ ಎಂದು ತಿಳಿಸಿದರು. ಮಾಹಿತಿ ತಿಳಿದ ಸೈದಾಬಾದ್ ಪೊಲೀಸರು ದಂಪತಿ ಮೇಲೆ ಕೊಲೆ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

  • LOVE YOU MY SON: ನಿಖಿಲ್ ಕುಮಾರಸ್ವಾಮಿ

    LOVE YOU MY SON: ನಿಖಿಲ್ ಕುಮಾರಸ್ವಾಮಿ

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ನಿಖಿಲ್ ಕುಮಾರಸ್ವಾಮಿ ತಂದೆಯಾಗಿರುವ ಸಂತೋಷನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ.

    ನಮ್ಮ ಜೀವನದ ಈ ವಿಶೇಷ ಕ್ಷಣವನ್ನು ಇಡೀ ಜಗತ್ತಿಗೆ ಹಂಚಿಕೊಳ್ಳಲು ಸಂತೋಷವಾಗಿದೆ. LOVE YOU MY SON ಎಂದು ಬರೆದುಕೊಂಡು ಮಗುವನ್ನು ಎತ್ತಿಕೊಂಡಿರುವ ಮುದ್ದಾದ ಫೋಟೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡು ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. ಸಂತೋಷ ವಿಚಾರವನ್ನು ಕೇಳುತ್ತಿದ್ದಂತೆ ಅಭಿಮಾನಿಗಳು ಕಾಮೆಂಟ್ ಮಾಡಿ ಶುಭ ಕೋರುತ್ತಿದ್ದಾರೆ.

    nikhil kumaraswamy

    ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ದಂಪತಿಗೆ ಇಂದು ಗಂಡು ಮಗು ಜನಿಸಿದೆ. ಈ ಮೂಲಕ ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ರೇವತಿ ಜನ್ಮ ನಿಡಿದ್ದಾರೆ. ತಾಯಿ, ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಇದನ್ನೂ ಓದಿ: ಗೌಡ್ರ ಕುಟುಂಬದಲ್ಲಿ ಸಂಭ್ರಮ – ನಿಖಿಲ್, ರೇವತಿ ದಂಪತಿಗೆ ಗಂಡು ಮಗು

    ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ. ನಮ್ಮ ಪರಿವಾರಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ. ಕಂದನಿಗೆ ನಿಮ್ಮೆಲ್ಲರ ಹಾರೈಕೆ ಮತ್ತು ಆಶೀರ್ವಾದ ಇರಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದು ಹೆಚ್.ಡಿ ಕುಮಾರಸ್ವಾಮಿಯವರು ಟ್ವೀಟ್ ತಾವು ತಾತನಾಗಿರುವ ಸಂತೋಷವನ್ನು ವ್ಯಕ್ತ ಪಡಿಸಿದ್ದಾರೆ.

    ರೇವತಿ ಪ್ರೆಗ್ನೆಂಟ್ ಎಂಬ ಸುದ್ದಿ ಇತ್ತೀಚಿನ ಕೆಲವು ತಿಂಗಳುಗಳಿಂದ ಕೇಳಿಬರುತ್ತಿತ್ತು. ಈ ವರ್ಷ ಜೂನ್‍ನಲ್ಲಿ ಆ ಬಗ್ಗೆ ಸ್ವತಃ ನಿಖಿಲ್ ಪ್ರತಿಕ್ರಿಯೆ ನೀಡಿದ್ದರು. ಕೇಳಿಬರುತ್ತಿರುವ ಸುದ್ದಿ ನಿಜ. ನಾವು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ. ಶೀಘ್ರದಲ್ಲಿ ನಮ್ಮ ಕುಟುಂಬಕ್ಕೆ ಹೊಸ ಅತಿಥಿ ಬರಲಿದ್ದಾರೆ ಎಂದು ನಿಖಿಲ್ ಹೇಳಿದ್ದರು. ಕೆಲವು ದಿಬಗಳ ಹಿಂದೆ ಸೀಮಂತ ಕಾರ್ಯಕ್ರಮವನ್ನು ಮಾಡಲಾಗಿತ್ತು. ಈಗ ರೇವತಿ ಅವರಿಗೆ ಗಂಡು ಮಗು ಜನನವಾಗಿದೆ.

     

    2020ರ ಏಪ್ರಿಲ್ 17ರಂದು ಲಾಕ್‍ಡೌನ್ ಸಮಯದಲ್ಲಿ ನಿಖಿಲ್ ಹಾಗೂ ರೇವತಿ ರಾಮನಗರ ತಾಲೂಕಿನ ಕೇತಗಾನಹಳ್ಳಿಯಲ್ಲಿರುವ ಫಾರ್ಮ್ ಹೌಸ್‍ನಲ್ಲಿ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಕೆಲವು ತಿಂಗಳ ಹಿಂದಷ್ಟೇ ಮಾಜಿ ಸಿಎಂ. ಹೆಚ್.ಡಿ ಕುಮಾರಸ್ವಾಮಿಯವರು ತಾವು ತಾತಾ ಆಗುತ್ತಿರುವ ಖುಷಿ ವಿಚಾರವನ್ನು ಮಾಧ್ಯಮದ ಮುಂದೆ ಹಂಚಿಕೊಂಡಿದ್ದರು. ಇದೀಗ ಮುದ್ದಿನ ಸೊಸೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಗೌಡರ ಕುಟುಂಬದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಹೊಸ ಅತಿಥಿ ಆಗಮನವಾಗಿರುವ ಸಂತೋಷವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದಾರೆ.

  • ನಮ್ಮ ಪರಿವಾರಕ್ಕೆ ಹೊಸ ಸದಸ್ಯನ ಆಗಮನವಾಗಿದೆ: ಎಚ್‍ಡಿಕೆ

    ನಮ್ಮ ಪರಿವಾರಕ್ಕೆ ಹೊಸ ಸದಸ್ಯನ ಆಗಮನವಾಗಿದೆ: ಎಚ್‍ಡಿಕೆ

    ಬೆಂಗಳೂರು: ಹೆಚ್.ಡಿ ಕುಮಾರಸ್ವಾಮಿಯವರ ಪ್ರೀತಿಯ ಪುತ್ರ ನಿಖಿಲ್ ಕುಮಾರ್ ಸ್ವಾಮಿ ದಂಪತಿಗೆ ಗಂಡು ಮಗು ಜನನವಾಗಿದೆ. ಈ ಮೂಲಕವಾಗಿ ತಾವು ತಾತ ಆಗಿರುವ ಸಂತೋಷದ ವಿಚಾರವನ್ನು ಹೆಚ್‍ಡಿಕೆ ಟ್ವೀಟ್ ಮಾಡುವ ಮೂಲಕವಾಗಿ ತಿಳಿಸಿದ್ದಾರೆ.

    ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ. ನಮ್ಮ ಪರಿವಾರಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ. ಕಂದನಿಗೆ ನಿಮ್ಮೆಲ್ಲರ ಹಾರೈಕೆ ಮತ್ತು ಆಶೀರ್ವಾದ ಇರಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದು ಹೆಚ್.ಡಿ ಕುಮಾರಸ್ವಾಮಿಯವರು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ:  ಗೌಡ್ರ ಕುಟುಂಬದಲ್ಲಿ ಸಂಭ್ರಮ – ನಿಖಿಲ್, ರೇವತಿ ದಂಪತಿಗೆ ಗಂಡು ಮಗು

    ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ದಂಪತಿಗೆ ಇಂದು ಗಂಡು ಮಗು ಜನಿಸಿದೆ. ಈ ಮೂಲಕ ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ರೇವತಿ ಜನ್ಮ ನಿಡಿದ್ದಾರೆ. ತಾಯಿ, ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.

    ಹೆಚ್.ಡಿ ಕುಮಾರಸ್ವಾಮಿಯವರ ಪ್ರೀತಿಯ ಪುತ್ರ ನಿಖಿಲ್ ಕುಮಾರ್ ಸ್ವಾಮಿ ಪತ್ನಿ ರೇವತಿಗೆ ಕೆಲವು ದಿನಗಳ ಹಿಂದೆ ನಗರದ ಹೆಚ್‍ಎಸ್‍ಆರ್ ಲೇಔಟ್‍ನ ಮಾನ್ವಿ ಕನ್ವೆನ್ಷನ್ ಹಾಲ್‍ನಲ್ಲಿ ಸೀಮಂತ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕೊರೊನಾ ಕಾರಣದಿಂದಾಗಿ ಈ ಕಾರ್ಯಕ್ರಮಕ್ಕೆ ಕೇವಲ ಆಪ್ತರು, ಕುಟುಂಬಸ್ಥರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು.

    2020ರ ಏಪ್ರಿಲ್ 17ರಂದು ಲಾಕ್‍ಡೌನ್ ಸಮಯದಲ್ಲಿ ನಿಖಿಲ್ ಹಾಗೂ ರೇವತಿ ರಾಮನಗರ ತಾಲೂಕಿನ ಕೇತಗಾನಹಳ್ಳಿಯಲ್ಲಿರುವ ಫಾರ್ಮ್ ಹೌಸ್‍ನಲ್ಲಿ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಕೆಲವು ತಿಂಗಳ ಹಿಂದಷ್ಟೇ ಮಾಜಿ ಸಿಎಂ. ಹೆಚ್.ಡಿ ಕುಮಾರಸ್ವಾಮಿಯವರು ತಾವು ತಾತಾ ಆಗುತ್ತಿರುವ ಖುಷಿ ವಿಚಾರವನ್ನು ಮಾಧ್ಯಮದ ಮುಂದೆ ಹಂಚಿಕೊಂಡಿದ್ದರು. ಇದೀಗ ಮುದ್ದಿನ ಸೊಸೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಗೌಡರ ಕುಟುಂಬದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ.