Tag: Badruddin K

  • ಮಾಹಿತಿ ಹಕ್ಕು ಕಾಯ್ದೆಗೆ ಸರ್ಕಾರವನ್ನೇ ಬುಡಮೇಲು ಮಾಡುವ ಶಕ್ತಿ ಇದೆ, ಇದು ಸರಳವೂ ಹೌದು, ಗಂಭೀರವೂ ಹೌದು: ಬದ್ರುದ್ದೀನ್

    ಮಾಹಿತಿ ಹಕ್ಕು ಕಾಯ್ದೆಗೆ ಸರ್ಕಾರವನ್ನೇ ಬುಡಮೇಲು ಮಾಡುವ ಶಕ್ತಿ ಇದೆ, ಇದು ಸರಳವೂ ಹೌದು, ಗಂಭೀರವೂ ಹೌದು: ಬದ್ರುದ್ದೀನ್

    ರಾಮನಗರ: ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಸಾರ್ವಜನಿಕ ಮಾಹಿತಿ ಅಧಿಕಾರಿಗಳೊಂದಿಗೆ ಮಾಹಿತಿ ಹಕ್ಕು ಕಾಯ್ದೆ ಕುರಿತು ಜಾಗೃತಿ ಕಾರ್ಯಗಾರ ಹಾಗೂ ಅಧಿಕಾರಿಗಳೊಂದಿಗಿನ ಸಂವಾದದಲ್ಲಿ ಹಮ್ಮಿಕೊಳ್ಳಲಾಗಿತ್ತು.

    ಕಾರ್ಯಕ್ರಮದಲ್ಲಿ ಮಾತನಾಡಿದ ಮಾಹಿತಿ ಆಯೋಗದ ಆಯುಕ್ತರಾದ ಬದ್ರುದ್ದೀನ್ ಕೆ, ಗಳೂರು ದಕ್ಷಿಣ ಜಿಲ್ಲೆಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ 274, ಕಂದಾಯ ಇಲಾಖೆಯ 194, ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ 64, ಪೋಲಿಸ್ ಇಲಾಖೆಗೆ ಸಂಬಂಧಿಸಿದ 40 ಅರ್ಜಿಗಳು ಸೇರಿ ಒಟ್ಟಾರೆಯಾಗಿ ಜಿಲ್ಲೆಯಲ್ಲಿ 707 ಅರ್ಜಿಗಳು ದ್ವಿತೀಯ ಮೇಲ್ಮನವಿ ಪ್ರಾಧಿಕಾರವಾದ ಮಾಹಿತಿ ಆಯೋಗದಲ್ಲಿ ಬಾಕಿ ಉಳಿದಿವೆ. ಮೇಲ್ಮನವಿ ವಿಚಾರಣೆಗೆ ಸ್ವೀಕೃತವಾಗುವ ಕ್ರಮಾಂಕದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆ 21ನೇ ಸ್ಥಾನದಲ್ಲಿದ್ದು ಶೇ. 67ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಬೇಕಿದೆ.ಅವುಗಳನ್ನು ಶೂನ್ಯ ಸ್ಥಾನಕ್ಕೆ ತರಲು ಜಿಲ್ಲೆಯ ಎಲ್ಲಾ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಶ್ರಮಿಸಬೇಕು ಎಂದು ಹೇಳಿದರು.  ಇದನ್ನೂ ಓದಿ:  ಗುಜರಾತ್ | ಪಾವಗಡ ಬೆಟ್ಟದ ದೇವಾಲಯದಲ್ಲಿ ಭೀಕರ ದುರಂತ; ರೋಪ್‌ವೇ ಮುರಿದು 6 ಮಂದಿ ದುರ್ಮರಣ

    ನಾವು ಆಯುಕ್ತರಾಗಿ ಅಧಿಕಾರ ಸ್ವೀಕರಿಸುವ ಅವಧಿಯಲ್ಲಿ ಮಾಹಿತಿ ಹಕ್ಕು ಆಯೋಗದಲ್ಲಿ 52 ಸಾವಿರ ಪ್ರಕರಣಗಳು ವಿಲೇವಾರಿಗೆ ಬಾಕಿ ಉಳಿದಿದ್ದವು, ಕಳೆದ ಏಳು ತಿಂಗಳಲ್ಲಿ ವಿಚಾರಣೆ ನಡೆಸಿದ ಪರಿಣಾಮ ನಿನ್ನೆಯವರೆಗೆ 42,327 ಅರ್ಜಿಗಳು ವಿಲೇವಾರಿಗೆ ಬಾಕಿ ಉಳಿದಿವೆ. ಕೆಲವೊಂದು ಅರ್ಜಿಗಳು 2015ರಿಂದಲೂ ಇತ್ಯರ್ಥಕ್ಕೆ ಬಾಕಿ ಉಳಿದಿದ್ದು, ಅವುಗಳ ವಿಲೇವಾರಿಗೆ ಕ್ರಮ ವಹಿಸಲಾಗಿದೆ ಎಂದರು. ಇದನ್ನೂ ಓದಿ:  PublicTV Explainer: ಮತ್ತೊಮ್ಮೆ ಇಂಡೋ-ಚೀನಾ ಭಾಯಿ ಭಾಯಿ- ಭಾರತಕ್ಕೆ ಚೀನಾ ಯಾಕೆ ಬೇಕು?

    ಅಧಿಕಾರಿಗಳು ನಿರ್ಲಕ್ಷ್ಯ ಮಾಡಬಹುದಾದ ನಿಕೃಷ್ಟ ಕಾಯಿದೆಯಲ್ಲ ಇದು. ಅತ್ಯಂತ ಬಲಶಾಲಿಯಾದ ಕಾಯ್ದೆ. ಈ ಕಾಯ್ದೆಯ ಪರಿಣಾಮಗಳು ಹಾಗೂ ಬದಲಾವಣೆಗಳು ಸಮಾಜದಲ್ಲಿ ಕಂಡುಬಂದಿವೆ. ಜಿಲ್ಲೆಯ ನಿವೃತ್ತ ಅಧಿಕಾರಿಗಳು ಕೂಡ ಸಾಕಷ್ಟು ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಮಾಹಿತಿ ಹಕ್ಕು ಕಾಯ್ದೆ ಅಡಿ ಅರ್ಜಿ ಸ್ವೀಕೃತಗೊಂಡಾಗ ಅಧಿಕಾರಿಗಳು ತಾಯಿಯ ಸ್ಥಾನದಲ್ಲಿರಬೇಕು. ಅರ್ಜಿ ಬಂದ ಕೂಡಲೇ ಸಮಸ್ಯೆ ಇದೆ ಎಂದು ಉಡಾಫೆ ಮಾಡಬಾರದು. ನಿಗದಿ ಪಡಿಸಿದ ಅವಧಿಯಲ್ಲಿ ಮಾಹಿತಿದಾರನಿಗೆ ಲಭ್ಯವಿರುವ ಮಾಹಿತಿ ನೀಡಬೇಕು, ತಪ್ಪಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ 25 ಸಾವಿರ ರೂ. ವರೆಗೆ ದಂಡವಿಧಿಸುವುದರೊಂದಿಗೆ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

  • ಆರ್‌ಟಿಐಯಡಿ ಸಲ್ಲಿಸಿದ ಅರ್ಜಿಯನ್ನು ಉಡಾಫೆ ಮಾಡಬೇಡಿ – ಕೆ. ಬದ್ರುದ್ದೀನ್ ಎಚ್ಚರಿಕೆ

    ಆರ್‌ಟಿಐಯಡಿ ಸಲ್ಲಿಸಿದ ಅರ್ಜಿಯನ್ನು ಉಡಾಫೆ ಮಾಡಬೇಡಿ – ಕೆ. ಬದ್ರುದ್ದೀನ್ ಎಚ್ಚರಿಕೆ

    ಮಂಡ್ಯ: ಮಾಹಿತಿ ಹಕ್ಕು ಕಾಯ್ದೆಯಡಿ (Right to Information Act) ಸಲ್ಲಿಸಿರುವ ಅರ್ಜಿಯನ್ನು ಉಡಾಫೆ ಮಾಡಬೇಡಿ ಎಂದು ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ಕೆ. ಬದ್ರುದ್ದೀನ್ (Badruddin K) ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

    ಇಂದು ಮಂಡ್ಯ (Mandya) ಜಿಲ್ಲಾ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಮಾಹಿತಿ ಹಕ್ಕು ಕಾಯ್ದೆಯ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಧಿಕಾರಿಗಳು ಆರ್‌ಟಿಐ ಕಾಯ್ದೆಯ ಕುರಿತು ಮೊದಲು ಸಮರ್ಪಕವಾಗಿ ತಿಳಿದುಕೊಳ್ಳಿ, ಮಾಹಿತಿ ಹಕ್ಕು ಕಾಯ್ದೆಯ ಮೂಲ ಉದ್ದೇಶ ಆಡಳಿತದಲ್ಲಿ ಪಾರದರ್ಶಕತೆ ಕಾಪಾಡುವುದಾಗಿದೆ. ಅರ್ಜಿದಾರರು ಆರ್‌ಟಿಐ ಅಡಿ ಮಾಹಿತಿ ಕೋರಿದ 30 ದಿನದೊಳಗಾಗಿ ಅಗತ್ಯ ಮಾಹಿತಿ ನೀಡಬೇಕು ಎಂದು ಹೇಳಿದರು. ಇದನ್ನೂ ಓದಿ: `ಮನಿ’ ಕೊಟ್ಟರಷ್ಟೇ ಸರ್ಕಾರಿ `ಮನೆ’ – ಜಮೀರ್‌ಗೆ ಗೊತ್ತಿಲ್ಲ ಅಂದ್ರೆ ತನಿಖೆ ಮಾಡಿಸಲಿ: ಬಿ.ಆರ್ ಪಾಟೀಲ್ ಬಾಂಬ್‌

    ಮಾಹಿತಿ ಹಕ್ಕು ಕಾಯ್ದೆಯು ಅತ್ಯಂತ ಸರಳವಾಗಿದೆ, ಓದಿ ಅರ್ಥೈಸಿಕೊಳ್ಳಿ. ಯಾವುದೇ ಅರ್ಜಿದಾರರು ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಕೇಳಿರುವ ಮಾಹಿತಿಯನ್ನು ಒದಗಿಸಿ. ಅದಕ್ಕೂ ಮುನ್ನ ನೀಡಬಹುದಾದ ಹಾಗೂ ನೀಡಲಾಗದ ಮಾಹಿತಿಗಳನ್ನ ವರ್ಗೀಕರಿಸಿಟ್ಟುಕೊಳ್ಳಿ. ಬಂದ ಅರ್ಜಿ ಓದಿ ನಿಮ್ಮ ವ್ಯಾಪ್ತಿಗೆ ಬರುತ್ತದೆಯೋ ಇಲ್ಲವೂ ಎಂದು ಮೊದಲು ಖಚಿತಪಡಿಸಿಕೊಳ್ಳಿ, ನಿಮ್ಮ ವ್ಯಾಪ್ತಿಗೆ ಬಾರದಿರುವ ಅರ್ಜಿಗಳನ್ನು ಸಂಬಂಧ ಪಟ್ಟ ಇಲಾಖೆಗೆ ಅರ್ಜಿ ಸಲ್ಲಿಕೆಯಾದ 5 ದಿನದೊಳಗೆ ವರ್ಗಾಯಿಸಿ, ಗಮನಕ್ಕೆ ತನ್ನಿ ಎಂದು ತಿಳಿವಳಿಕೆ ನೀಡಿದರು. ಇದನ್ನೂ ಓದಿ: ನಾನು ಬಾಬಾ ರಾಮ್‍ದೇವ್ ಶಿಬಿರದಲ್ಲಿ ತರಬೇತಿ ಪಡೆದ ಯೋಗ ಪಟು: ಲಕ್ಷ್ಮಿ ಹೆಬ್ಬಾಳ್ಕರ್

    ಅಧಿಕಾರಿಗಳ ಕಣ್ತಪ್ಪಿನಿಂದ ಯಾವುದಾದರೂ ಮಾಹಿತಿ ನೀಡುವಲ್ಲಿ ಲೋಪ ಉಂಟಾದ್ರೆ ಅರ್ಜಿದಾರರು ಪ್ರಥಮ ಮೇಲ್ಮನವಿ ಪ್ರಾಧಿಕಾರದ ಅಧಿಕಾರಿಗಳ ಗಮನಕ್ಕೆ ತನ್ನಿ. ಮಂಡ್ಯ ಜಿಲ್ಲೆಗೆ ಸಂಬಂಧಿಸಿದಂತೆ 1,135 ಮೇಲ್ಮನವಿ ಅರ್ಜಿಗಳು ಬಾಕಿ ಇದೆ. ಎಲ್ಲಾ ಜಿಲ್ಲೆಗೆ ಹೋಲಿಸಿದ್ರೆ ಮಂಡ್ಯ ಜಿಲ್ಲೆಯ ಶೇ.3 ರಷ್ಟು ಮಾತ್ರ ಇದೆ. ಇದು ಶೂನ್ಯಕ್ಕೆ ಬರಬೇಕು. ಅಧಿಕಾರಿಗಳು ಅರ್ಜಿ ಸಲ್ಲಿಸಿದವರಿಗೆ ಅಗತ್ಯ ಮಾಹಿತಿ ಒದಗಿಸಿ, ಮಾಹಿತಿ ಇಲ್ಲದಿದ್ದಲ್ಲಿ ಮಾಹಿತಿ ಏಕೆ ಲಭ್ಯವಿಲ್ಲ ಎಂಬುದನ್ನೂ ಪರಿಶೀಲಿಸಿ ಎಂದು ಸಲಹೆ ನೀಡಿದರು. ಇದನ್ನೂ ಓದಿ: ಅಕ್ರಮ ಗಣಿಗಾರಿಕೆ ತನಿಖೆ ಏನಾಯ್ತು – ಪಾದಯಾತ್ರೆ ನೆನಪಿಸಿ ಸಿಎಂಗೆ ಪತ್ರ ಬರೆದ ಹೆಚ್.ಕೆ ಪಾಟೀಲ್