Tag: Bagadi Gautam

  • ಎರಡನೇ ಬಾರಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಹೋಂ ಕ್ವಾರಂಟೈನ್

    ಎರಡನೇ ಬಾರಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಹೋಂ ಕ್ವಾರಂಟೈನ್

    ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ ಎರಡನೇ ಬಾರಿ ಹೋಂ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ. ಮನೆಯಲ್ಲಿ ಅಡುಗೆ ಮಾಡುವವರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಜಿಲ್ಲಾಧಿಕಾರಿಗಳು ಕೂಡ ಹೋಂ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ.

    ಜಿಲ್ಲಾಧಿಕಾರಿಗಳ ಮನೆಯ ಅಡುಗೆ ಭಟ್ಟರಿಗೆ ಕೊರೊನಾ ಸೋಂಕು ತಗುಲಿದ್ದು, ಪ್ರಾಥಮಿಕ ಸಂಪರ್ಕದಲ್ಲಿ ಇರೋದರಿಂದ ಸ್ವಯಂ ಪ್ರೇರಿತವಾಗಿ ಹೋಂ ಕ್ವಾರಂಟೈನ್‍ನಲ್ಲಿದ್ದಾರೆ. ಬಗಾದಿ ಗೌತಮ್ ಹೋಂ ಕ್ವಾರಂಟೈನ್‍ಗೆ ಒಳಗಾಗ್ತಿರೋದು ಇದು ಎರಡನೇ ಬಾರಿ. ಕಂದಾಯ ಸಚಿವ ಆರ್. ಅಶೋಕ್ ಚಿಕ್ಕಮಗಳೂರಿಗೆ ಬಂದು ಹೋದ ಬಳಿಕ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿಯವರಿಗೂ ಕೊರೊನಾ ಪಾಸಿಟಿವ್ ಬಂದಿತ್ತು. ಆಗಲೂ ಡಿಸಿ ಬಗಾದಿ ಗೌತಮ್ ಹೋಂ ಕ್ವಾರಂಟೈನ್‍ಗೆ ಒಳಗಾಗಿದ್ದರು. ವೈದ್ಯರ ಸೂಚನೆ ಮೇರೆಗೆ ಜಿಲ್ಲಾಧಿಕಾರಿ ಬಗಾದಿ ಗೌತಮ್ ಒಂದು ವಾರಗಳ ಕಾಲ ಹೋಂ ಕ್ವಾರಂಟೈನ್‍ಗೆ ಮುಂದಾಗಿದ್ದಾರೆ.

    ಸದ್ಯಕ್ಕೆ ಡಿಸಿ ಬಗಾದಿ ಗೌತಮ್ ಅವರಿಗೆ ಕೊರೊನಾ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ. ಆದರೂ ಒಂದು ವಾರಗಳ ಕಾಲ ಡಿಸಿ ಹೋಂ ಕ್ವಾರಂಟೈನ್‍ಗೆ ಮುಂದಾಗಿದ್ದಾರೆ. ಇದೇ ವೇಳೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುವ ಮತ್ತೋರ್ವ ನೌಕರನಿಗೂ ಪಾಸಿಟಿವ್ ಬಂದಿದೆ. ಈಗಾಗಲೇ ಜಿಲ್ಲಾಧಿಕಾರಿ ಕಚೇರಿಯ 20ಕ್ಕೂ ಹೆಚ್ಚು ಸಿಬ್ಬಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ. ಅವರೆಲ್ಲರ ವರದಿಯೂ ನೆಗೆಟಿವ್ ಬಂದಿದೆ.

  • ಮೇ 17ರವರೆಗೆ ಚಿಕ್ಕಮಗಳೂರು ಜಿಲ್ಲಾದ್ಯಂತ 144 ಸೆಕ್ಷನ್ ಜಾರಿ

    ಮೇ 17ರವರೆಗೆ ಚಿಕ್ಕಮಗಳೂರು ಜಿಲ್ಲಾದ್ಯಂತ 144 ಸೆಕ್ಷನ್ ಜಾರಿ

    ಚಿಕ್ಕಮಗಳೂರು: ಕೆಲವೊಂದು ನಿಯಮಗಳನ್ನು ಹೊರತುಪಡಿಸಿ ಗ್ರೀನ್ ಜೋನ್‍ನಲ್ಲಿರೋ ಜಿಲ್ಲೆಗೆ ಮೂರನೇ ಹಂತದ ಲಾಕ್‍ಡೌನ್ ಅನ್ವಯವಾಗದ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲಾದ್ಯಂತ ಮೇ 4ರಿಂದ ಮೇ 17ರವರೆಗೆ 144 ಸೆಕ್ಷನ್ ಜಾರಿಗೊಳಿಸಲಾಗಿದೆ ಎಂದು ಚಿಕ್ಕಮಗಳೂರು ಡಿಸಿ ಸುತ್ತೋಲೆ ಹೊರಡಿಸಿದ್ದಾರೆ.

    ಸಂಜೆ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ಐದು ಜನ ಗುಂಪಾಗಿ ಸೇರದಂತೆ ಜಿಲ್ಲಾಧಿಕಾರಿ ಬಗಾದಿ ಗೌತಮ್ ಅವರು ಸೂಚನೆ ನೀಡಿದ್ದಾರೆ. ಕೊರೊನಾ ಆರಂಭವಾದಾಗಿನಿಂದ ಕಾಫಿನಾಡಲ್ಲಿ ಒಂದೇ ಒಂದು ಕೊರೊನಾ ಪಾಸಿಟಿವ್ ಕೇಸಿಲ್ಲ. ಹಾಗಾಗಿ ಚಿಕ್ಕಮಗಳೂರು ಗ್ರೀನ್ ಜೋನ್‍ನಲ್ಲಿದೆ. ಈಗ ಸರ್ಕಾರ ಗ್ರೀನ್ ಜೋನ್ ಜಿಲ್ಲೆಗಳಿಗೆ ಕೆಲವೊಂದು ಷರತ್ತುಗಳನ್ನು ವಿಧಿಸಿ ಲಾಕ್‍ಡೌನ್‍ನನ್ನು ಸಂಪೂರ್ಣ ಸಡಿಲಿಕೆ ಮಾಡಿದೆ.

    ಕೇಂದ್ರ ಸರ್ಕಾರ ಕೊರೊನಾ ಆತಂಕದಿಂದ ದೇಶದಲ್ಲಿ ಇನ್ನೆರಡು ವಾರಗಳ ಕಾಲ ಲಾಕ್‍ಡೌನ್ ವಿಸ್ತರಿಸೋದ್ರಿಂದ ಗ್ರೀನ್ ಜೋನ್‍ನಲ್ಲಿರೋ ಚಿಕ್ಕಮಗಳೂರಲ್ಲಿ ಎರಡು ವಾರಗಳ ಕಾಲವೂ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಮದುವೆ ಹಾಗೂ ಅಂತ್ಯಸಂಸ್ಕಾರದಂತಹಾ ಕಾರ್ಯಕ್ರಮಗಳಿಗೆ ಈ ಆದೇಶ ಅನ್ವಯವಾಗುವುದಿಲ್ಲ. ಉಳಿದಂತೆ ಜನ ಗುಂಪಾಗಿ ಸೇರುವಂತಿಲ್ಲ ಎಂದು ಡಿಸಿ ಆದೇಶ ಮಾಡಿದ್ದಾರೆ.

    ನಾಳೆಯಿಂದ ಜಿಲ್ಲಾದ್ಯಂತ ಸರ್ಕಾರಿ ಬಸ್‍ಗಳೂ ಓಡಾಡಲಿದ್ದು, ಜಿಲ್ಲಾದ್ಯಂತ 100-120 ಬಸ್‍ಗಳು ತಾಲೂಕು ಕೇಂದ್ರಗಳಿಗೆ ಸಂಚರಿಸಲಿವೆ. ಸರ್ಕಾರದ ಕೆಲವೊಂದು ಷರತ್ತುಗಳನ್ನ ಹೊರತುಪಡಿಸಿದರೆ ಚಿಕ್ಕಮಗಳೂರಿನಲ್ಲಿ ಎಲ್ಲ ಚಟುವಟಿಕೆಗಳು ಎಂದಿನಂತೆ ಆರಂಭವಾಗಲಿದೆ ಎಂದು ತಿಳಿಸಿಲಾಗಿದೆ.