Tag: Bagalagunte Police

  • ಮಗನ ಮದ್ವೆಗಾಗಿ ಇಟ್ಟಿದ್ದ 300 ಗ್ರಾಂ ಚಿನ್ನ, 10 ಲಕ್ಷ ಮೌಲ್ಯದ ಬೆಳ್ಳಿ, 3 ಲಕ್ಷ ಹಣ ಕಳವು

    ಮಗನ ಮದ್ವೆಗಾಗಿ ಇಟ್ಟಿದ್ದ 300 ಗ್ರಾಂ ಚಿನ್ನ, 10 ಲಕ್ಷ ಮೌಲ್ಯದ ಬೆಳ್ಳಿ, 3 ಲಕ್ಷ ಹಣ ಕಳವು

    – ಬಾಗಿಲು ಮುರಿಯದೇ, ಬೀಗ ಒಡೆಯದೇ ಚಿನ್ನದ ಗಣಿ ಹೊತ್ತೊಯ್ದ ಕಳ್ಳ

    ಬೆಂಗಳೂರು: ಎರಡು ಮೂರು ದಿನ ಮನೆ ಬಿಟ್ಟು ಹೊರಗೆ ಹೋಗುವ ಮುನ್ನ ಎಚ್ಚರ ವಹಿಸಬೇಕಾದ ಸ್ಟೋರಿ ಇದು. ಹೌದು. ಬರಿಗೈಯಲ್ಲಿ ಬಂದ ಕಳ್ಳನೊಬ್ಬ (Thief) ಬಾಗಿಲು ಮುರಿಯದೇ, ಬೀಗ ಒಡೆಯದೇ ಒಳಗೆ ನುಗ್ಗಿ ಚಿನ್ನದ ಗಣಿಯನ್ನೇ ದೋಚಿರುವ ಘಟನೆ ಸಿಲಿಕಾನ್‌ ಸಿಟಿಯಲ್ಲಿ ನಡೆದಿದೆ.

    ವಿಂಡೋ ಓಪನ್ ಮಾಡಿ ಲಾಕ್‌ನ ಸ್ಕ್ರೂ ಬಿಚ್ಚಿ ಮಗನ ಮದುವೆಗೆ ಮನೆಯಲ್ಲಿಟ್ಟಿದ್ದ ಹಣ, ಚಿನ್ನಾಭರಣವನ್ನ (Gold Jewellery) ಹೊತ್ತೊಯ್ದಿದ್ದಾನೆ. ಇದನ್ನೂ ಓದಿ: ಬೆಂಗಳೂರಲ್ಲಿ ಟ್ರಯಾಂಗಲ್ ಲವ್ ಸ್ಟೋರಿಗೆ ಯುವಕ ಬಲಿ

    ಬಗಲಗುಂಟೆ ರಾಮಯ್ಯ ಬಡಾವಣೆಯಲ್ಲಿ ದರ್ಶನ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿದ್ದು, 45 ಲಕ್ಷ ಬೆಲೆ ಬಾಳುವ ಚಿನ್ನಾಭರಣ ಮೂರು ಲಕ್ಷ ನಗದು ದೋಚಿ ಪರಾರಿಯಾಗಿದ್ದಾನೆ. ಒಂದೂವರೆ ಗಂಟೆಗಳ ಕಾಲ ಮನೆಯ ಮೂಲೆ ಮೂಲೆ ಹುಡುಕಿರುವ ಕತರ್ನಾಕ್ ಕಳ್ಳ ಬರುವಾಗ ಬರಿಗೈಲಿ ಬಂದು ವಾಪಸ್ ಆಗುವಾಗ ಬ್ಯಾಗ್ ಸಮೇತ ಹೋಗುವ ದೃಶ್ಯ ಲಭ್ಯವಾಗಿದೆ.

    300 ಗ್ರಾಂ ಗೋಲ್ಡ್, 10 ಲಕ್ಷ ಬೆಲೆ ಬಾಳುವ ಬೆಳ್ಳಿ, 3ಲಕ್ಷ ನಗದು ಒಂದು ಹೊಸ ಮೊಬೈಲ್ ಬಾಕ್ಸ್ ದೋಚಿ ಪರಾರಿಯಾಗಿದ್ದಾನೆ. ಖತರ್ನಾಕ್ ಕಳ್ಳ ಬರಿಗೈಲಿ ಬಂದು ಬ್ಯಾಗ್ ತುಂಬಿಕೊಂಡು ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ರೋಗಿ ಜೊತೆ ಸೆಕ್ಸ್ – ಕೆನಡಾದಲ್ಲಿ ಭಾರತ ಮೂಲದ ವೈದ್ಯೆಯ ಮೆಡಿಕಲ್ ಲೈಸೆನ್ಸ್ ಅಮಾನತು

    ಘಟನೆ ಸಂಬಂಧ ಬಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಬಗಲಗುಂಟೆ ಪೊಲೀಸರು ಕಳ್ಳನಿಗಾಗಿ ಹುಡುಕಾಟ ನಡೆಸ್ತಿದ್ದಾರೆ. ಇದನ್ನೂ ಓದಿ: ಭಟ್ಕಳ ಅರಣ್ಯದಲ್ಲಿ ಗೋವುಗಳ ನರಮೇಧ? – ನೂರಾರು ಗೋವುಗಳ ಎಲುಬುಗಳು ಪತ್ತೆ; ಪೊಲೀಸರಿಂದ ತನಿಖೆ

  • ಕುಡಿಯಲು ಹಣ ಕೊಡಲಿಲ್ಲ ಅಂತ ಹೆತ್ತ ತಾಯಿಯನ್ನೇ ಕೊಂದ ಪಾಪಿ ಮಗ

    ಕುಡಿಯಲು ಹಣ ಕೊಡಲಿಲ್ಲ ಅಂತ ಹೆತ್ತ ತಾಯಿಯನ್ನೇ ಕೊಂದ ಪಾಪಿ ಮಗ

    ಬೆಂಗಳೂರು: ಕತ್ತೆಗೆ ವಯಸ್ಸಾದಂತೆ ವಯಸ್ಸಾದ್ರು ಎಣ್ಣೆ (Drinks) ಕುಡಿಯಲು ವೃದ್ಧ ತಾಯಿಯ ಬಳಿ ಪ್ರತಿದಿನ ಹಣ ಕೇಳ್ತಿದ್ದ. ಆ ತಾಯಿ ತಾನೆ ಎಲ್ಲಿಂದ ಹಣ ತಂದು ಕೊಡಬೇಕು. ಇವತ್ತು ಹಣ ಕೊಡಲಿಲ್ಲ ಅಂತ 82 ವರ್ಷದ ವೃದ್ಧ ತಾಯಿಯನ್ನ ಪಾಪಿ ಮಗ ಹತ್ಯೆ ಮಾಡಿದ್ದಾನೆ.

    ವೃದ್ಧ ತಾಯಿಯನ್ನ ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಳ್ಳಬೇಕಾದ ಪಾಪಿ ಮಗ, ಕುಡಿಯಲು ಹಣ ಕೊಡಲಿಲ್ಲ ಅಂತ 82 ವರ್ಷದ ವೃದ್ಧ ತಾಯಿಯನ್ನು ಹತ್ಯೆ ಮಾಡಿದ್ದಾನೆ. 82 ವರ್ಷದ ಶಾಂತಾಬಾಯಿ ಕೊಲೆಯಾದ (Murder) ತಾಯಿ. ಇನ್ನು ಕೊಲೆ ಹಂತಕ ಮಗ 52 ವರ್ಷದ ಈ ಮಹೆಂದ್ರ ಸಿಂಗ್‌. ಬಗಲಗುಂಟೆಯ ಮುನೇಶ್ವರ ನಗರದಲ್ಲಿ ನಿನ್ನೆ (ಗುರುವಾರ) ತಡರಾತ್ರಿ 1.30ಕ್ಕೆ ಕೊಲೆ ಮಾಡಿ ಮಗ ಎಸ್ಕೇಪ್ ಆಗಿದ್ದಾನೆ. ಇದನ್ನೂ ಓದಿ: ಹೆಂಡತಿಯನ್ನು ಕೊಂದು ಚರಂಡಿಗೆಸೆದ ದೆಹಲಿ ಉದ್ಯಮಿ – ಪತ್ನಿಯ ಮೂಗುತಿಯಿಂದ ಗುರುತು ಪತ್ತೆ

    ಕುಡಿತದ ಚಟಕ್ಕೆ ಬಿದ್ದಿದ್ದ ಮಹೇಂದ್ರ ಸಿಂಗ್ ಕೆಲಸಕ್ಕೆ ಹೋಗದೇ ಅಲೆಯುತ್ತಿದ್ದನಂತೆ. ನಿತ್ಯ ಹಣಕ್ಕಾಗಿ ತಾಯಿಗೆ ಹಿಂಸೆ ಕೊಟ್ಟು, ನಿಂದಿಸುತ್ತಿದ್ದ. ಗುರುವಾರ ಹಣ ಕೊಡದೇ ಇದಿದ್ದಕ್ಕೆ ಕಿರಿಕ್ ತೆಗೆದು ಕಬ್ಬಿಣದ ರಾಡ್ ನಿಂದ (Iron Rod) ತಾಯಿಯ ತಲೆಗೆ ಹೊಡೆದು ಕೊಲೆ‌ಮಾಡಿ ತನ್ನ ಬೈಕ್ ನಲ್ಲಿ ಎಸ್ಕೇಪ್ ಆಗಿದ್ದಾನೆ. ಇದನ್ನೂ ಓದಿ: ಹೆಂಡತಿಯನ್ನು ಮನೆಗೆ ಕರೆದ ಗಂಡನಿಗೆ ಚಾಕು ಇರಿದ ಬಾಮೈದ!

    ಈ ಬಗ್ಗೆ ಬಗಲಗುಂಟೆ ಪೊಲೀಸ್ ಠಾಣೆಯಲ್ಲಿ (Bagalagunte Police Station) ಪ್ರಕರಣ ದಾಖಲಾಗಿದ್ದು, ಹಂತಕ ಮಗನಿಗಾಗಿ ಹುಡುಕಾಟ ನಡೆಯುತ್ತಿದೆ. ಇದನ್ನೂ ಓದಿ: ಜಾತಿಗಣತಿ ವರದಿ ಸೀಲ್ ಓಪನ್… ಕ್ಯಾಬಿನೆಟ್‌ನಲ್ಲಿ ಮಂಡನೆ; ಮುಂದಿನ‌ ಕ್ಯಾಬಿನೆಟ್‌ಗೆ ಕ್ಲೈಮ್ಯಾಕ್ಸ್..!

  • ಸಾಯಿ ಗೋಲ್ಡ್ ಪ್ಯಾಲೇಸ್‌ನಿಂದ ಚಿನ್ನ ದೋಚಿದ್ದ ಕಳ್ಳರು ಅರೆಸ್ಟ್ – 63 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

    ಸಾಯಿ ಗೋಲ್ಡ್ ಪ್ಯಾಲೇಸ್‌ನಿಂದ ಚಿನ್ನ ದೋಚಿದ್ದ ಕಳ್ಳರು ಅರೆಸ್ಟ್ – 63 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

    ಬೆಂಗಳೂರು: ಜೆಡಿಎಸ್ ಪರಿಷತ್ ಸದಸ್ಯ ಶರವಣ (Sharavana) ಮಾಲೀಕತ್ವದ ಸಾಯಿ ಗೋಲ್ಡ್ ಪ್ಯಾಲೇಸ್‌ನಿಂದ (Sai Gold Palace) ಚಿನ್ನ ಕದ್ದಿದ್ದ ಆರೋಪಿಗಳನ್ನು ಹಲಸೂರು ಗೇಟ್ (Halasuru Gate) ಪೊಲೀಸರು ಬಂಧಿಸಿ 63 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.

    ಮೌನೇಶ್, ಮಹಾವೀರ್ ಬಂಧಿತ ಆರೋಪಿಗಳು. ಮೌನೇಶ್ ಚಿನ್ನದ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ. ಕಳೆದ 15 ದಿನಗಳ ಹಿಂದೆ ಒಂದೂವರೆ ಕೆ.ಜಿ. ಚಿನ್ನ ಕೊಟ್ಟು ಹಾಲ್‌ಮಾರ್ಕ್ ಹಾಕಿಸಿಕೊಂಡು ಬರಲು ಕಳಿಸಿದ್ದಾರೆ. ಮೌನೇಶ್ ಚಿನ್ನ ತೆಗೆದುಕೊಂಡು ರಾಜಸ್ಥಾನಕ್ಕೆ ಪರಾರಿಯಾಗಿದ್ದ. ಈ ಘಟನೆ ಸಂಬಂಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದನ್ನೂ ಓದಿ: ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಅನುಮತಿ, ಅನುದಾನ ನೀಡಿ: ಕೇಂದ್ರಕ್ಕೆ ಡಿಕೆಶಿ ಮನವಿ

    ಕದ್ದ ಚಿನ್ನ ಮಾರಾಟ ಮಾಡಲು ಬಾರದೇ ಇದ್ದ ಕಾರಣ ಮೌನೇಶ್, ಮಹಾವೀರ್ ಎಂಬುವನ ಮನೆಯಲ್ಲಿ ಇಟ್ಟಿದ್ದ. ಎರಡು ದಿನ ಬಿಟ್ಟು ಸ್ನೇಹಿತ ಮಹಾವೀರ್ ಮನೆ ಮೇಲೆ ಪೊಲೀಸರು ರೇಡ್ ಮಾಡಿ ಚಿನ್ನ ತಗೆದುಕೊಂಡು ಹೋಗಿದ್ದಾರೆ ಎಂದು ಮೌನೇಶ್ ಬಳಿ ಕಥೆ ಕಟ್ಟಿದ್ದಾನೆ.

    ಹಲಸೂರು ಗೇಟ್ ಪೊಲೀಸರು ರಾಜಸ್ಥಾನದಲ್ಲಿ ಆರೋಪಿ ಮೌನೇಶ್‌ನನ್ನ ಬಂಧಿಸಿ ತನಿಖೆಗೆ ಒಳಪಡಿಸಿದಾಗ ಕದ್ದ ಚಿನ್ನ ಮಹಾವೀರ್‌ಗೆ ಕೊಟ್ಟಿರೋದಾಗಿ ಹೇಳಿದ್ದ. ಮಹಾವೀರ್‌ನನ್ನ ಬಂಧನ ಮಾಡಿ ವಿಚಾರಣೆ ಮಾಡಿದಾಗ ಮೌನೇಶ್‌ಗೆ ಗೊತ್ತಾಗದೆ ಬೇರೆ ಕಡೆ ಚಿನ್ನ ಮಾರಾಟ ಮಾಡಿ ಜಮೀನಿನ ಮೇಲೆ ಹಣ ಹಾಕಿರುವುದು ಬೆಳಕಿಗೆ ಬಂದಿದೆ. ಬಂಧಿತರಿಂದ 63 ಲಕ್ಷ ರೂ. ಮೌಲ್ಯದ 750 ಗ್ರಾಂ ಚಿನ್ನಾಭರಣವನ್ನ ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ಕೋರ್ಟ್ ಹಾಲ್‌ನಲ್ಲಿ ಪವಿತ್ರಾ, ದರ್ಶನ್ ದೂರ ದೂರಾ – ಕಣ್ಣೀರಿಡುತ್ತ ತೆರಳಿದ ಗೆಳತಿ!

    ಮನೆಗಳ್ಳತನ ಮಾಡುತ್ತಿದ್ದ ಕಳ್ಳರು ಅಂದರ್

    ಕದ್ದ ಬೈಕ್‌ನಲ್ಲಿ ಮನೆಗಳ್ಳತನ ಮಾಡುತ್ತಿದ್ದ ಆರೋಪಿಗಳನ್ನ ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ.

    ಅಂಧ್ರಹಳ್ಳಿ ನಿವಾಸಿಗಳಾಗಿರುವ ಗೋಲ್ಡ್ ವೆಂಕಿ ಅಲಿಯಾಸ್ ವೆಂಕಟೇಶ್, ಶ್ರೀನಿವಾಸ ಅಲಿಯಾಸ್ ಕರಾಟೆ ಸೀನ, ಸಾಗರ್ ಬಂಧಿತ ಆರೋಪಿಗಳು. ಕರಾಟೆ ಸೀನನ ಮೇಲೆ 44 ಕೇಸ್, ವೆಂಕಟೇಶ್ ಮೇಲೆ 8 ಕೇಸ್‌ಗಳು ದಾಖಲಾಗಿವೆ. ಇದನ್ನೂ ಓದಿ: ಪಂಜಾಬ್‌ನ ಆಪ್‌ ಸರ್ಕಾರದಿಂದ ಬುಲ್ಡೋಜರ್ ಅಸ್ತ್ರ – ಡ್ರಗ್ ಮಾಫಿಯಾ ಕಿಂಗ್‌ಗಳ ಮನೆ ನೆಲಸಮ

    ಸಾಗರ್, ವೆಂಕಟೇಶ್‌ನ ಸ್ನೇಹಿತನಾಗಿದ್ದ. ಜೈಲಿಗೆ ಹೋದಾಗ ವೆಂಕಟೇಶ್ ಮತ್ತು ಕರಾಟೆ ಸೀನ ಪರಿಚಯ ಆಗಿತ್ತು. ಬಳಿಕ ಸಾಗರ್ ಮಾತು ಕೇಳಿ ಮೂವರು ಬೈಕ್ ಕಳ್ಳತನ ಮಾಡುತ್ತಿದ್ದರು. ಕದ್ದ ಬೈಕ್‌ಗಳಲ್ಲಿ ಮನೆಗಳ್ಳತನ ಮಾಡುತ್ತಿದ್ದ ಆರೋಪಿಗಳಿಂದ 76 ಗ್ರಾಂ. ಚಿನ್ನಾಭರಣ, 16 ಬೈಕ್‌ಗಳು ವಶಕ್ಕೆ ಪಡೆಯಲಾಗಿದೆ.

    ಮೊಬೈಲ್ ಕಳ್ಳನ ಬಂಧನ
    ಖತರ್ನಾಕ್ ಮೊಬೈಲ್ ಕಳ್ಳ ಪೂಜಾರಿ ವನ್ನೂರುಸ್ವಾಮಿಯನ್ನು ಹೆಣ್ಣೂರು ಪೊಲೀಸರು ಬಂಧಿಸಿದ್ದಾರೆ. ಗಾರೆ ಕೆಲಸ ಮಾಡುತ್ತಿದ್ದ ಆರೋಪಿ ಶೋರೂಂಗಳಿಗೆ ನುಗ್ಗಿ 14 ಮೊಬೈಲ್ ಕಳ್ಳತನ ಮಾಡಿದ್ದಾನೆ. ವನ್ನೂರುಸ್ವಾಮಿ ಗಾರೆ ಕೆಲಸಕ್ಕೆ ಹೋಗುವಾಗ ಶೋರೂಂಗಳನ್ನು ಗುರುತಿಸಿ ಕಳ್ಳತನ ಮಾಡುತ್ತಿದ್ದನು. ಇದನ್ನೂ ಓದಿ: ಹಣ್ಣು ಹಂಚಿಕೆ ನೆಪದಲ್ಲಿ ಬಾಗಿಲು ಬಡಿದ ಕಳ್ಳರು – ವೃದ್ಧ ದಂಪತಿ ಕೈಕಾಲು ಕಟ್ಟಿ ದರೋಡೆ

  • ಮದ್ವೆಯಾಗಿದ್ರೂ ಮತ್ತಿಬ್ಬರೊಂದಿಗೆ ಲವ್ವಿ ಡವ್ವಿ; ಪ್ರಿಯಕರನಿಂದಲೇ ತಾಯಿ-ಮಗುವಿನ ಹತ್ಯೆ

    ಮದ್ವೆಯಾಗಿದ್ರೂ ಮತ್ತಿಬ್ಬರೊಂದಿಗೆ ಲವ್ವಿ ಡವ್ವಿ; ಪ್ರಿಯಕರನಿಂದಲೇ ತಾಯಿ-ಮಗುವಿನ ಹತ್ಯೆ

    ಬೆಂಗಳೂರು: ಇಲ್ಲಿನ ಬಾಗಲಗುಂಟೆ ಠಾಣಾ (Bagalagunte Police Station) ವ್ಯಾಪ್ತಿಯಲ್ಲಿ ನಡೆದಿದ್ದ ತಾಯಿ-ಮಗು ಹತ್ಯೆ ಪ್ರಕರಣದಲ್ಲಿ ಸ್ಫೋಟಕ ಸತ್ಯ ಬಯಲಾಗಿದ್ದು, ಮೃತಳ ಪ್ರಿಯಕರ ಶೇಖರ್‌ನನ್ನ ಪೊಲೀಸರು ಬಂಧಿಸಿದ್ದಾರೆ.

    ಕಳೆದ ಎರಡು ದಿನಗಳ ಹಿಂದೆಯಷ್ಟೇ ನವನೀತ (35) ಹಾಗೂ ಪುತ್ರ ಸಾಯಿ ಸೃಜನ್ (8) ಹತ್ಯೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಳ ಪ್ರಿಯಕರ ಶೇಖರ್‌ನನ್ನ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

    CRIME

    ಮದುವೆಯಾದ್ಮೇಲೂ ಮತ್ತಿಬ್ಬರೊಂದಿಗೆ ಪ್ರೇಮ:
    ಕೊಲೆಯಾದ ಮಹಿಳೆ (Women) ನವನೀತ ತನ್ನ ಪತಿ ಚಂದ್ರುವಿನಿಂದ ಬೇರ್ಪಟ್ಟು ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಕಳೆದ 2 ವರ್ಷಗಳಿಂದ ಮಗ ಸಾಯಿ ಸೃಜನ್ ಜೊತೆಗೆ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ನವನೀತ ಗಂಡಿನಿಂದ ದೂರಾದ ಮೇಲೆ ಆರೋಪಿ ಶೇಖರ್ ಜೊತೆಗೆ ಸ್ನೇಹ ಬೆಳೆಸಿದ್ದಳು. ಬಳಿಕ ಇಬ್ಬರು ಪ್ರೀತಿ ಮಾಡೋಕೆ ಶುರು ಮಾಡಿದ್ದರು. ಆದ್ರೆ ನವನೀತ ಇತ್ತೀಚೆಗೆ ಶೇಖರ್ ಬಿಟ್ಟು ಲೋಕೇಶ್ ಎಂಬಾತನೊಂದಿಗೆ ಸಂಪರ್ಕ ಹೊಂದಿದ್ದಳು. ಇದನ್ನ ಕಂಡ ಮೊದಲ ಪ್ರಿಯಕರ ಶೇಖರ್ ನವನೀತಳಿಗೆ ವಾರ್ನಿಂಗ್ ಕೊಟ್ಟಿದ್ದಾನೆ. ಲೋಕೇಶ್ ಸಹವಾಸ ಬಿಡುವಂತೆ ಎಚ್ಚರಿಕೆ ಕೊಟ್ಟಿದ್ದಾನೆ, ಆಕೆ ಮೇಲೆ ಹಲ್ಲೆಯನ್ನೂ ಮಾಡಿದ್ದಾನೆ. ಆದರೂ ನನವನೀತ ಲೋಕೇಶ್ ಜೊತೆಗೆ ಸಂಪರ್ಕ ಹೊಂದಿದ್ದಳು.

    ಇದರಿಂದ ಬೇಸತ್ತಿದ್ದ ಶೇಖರ್ ಶನಿವಾರ ಎಂದಿನಂತೆ ನವನೀತಳ ಮನೆಗೆ ಬಂದಿದ್ದಾನೆ. ನವನೀತಳ ಮಗನಿಗೆ ಜ್ಯೂಸ್ ತೆಗೆದುಕೊಂಡು ಬರುವಂತೆ ಹೇಳಿದ್ದಾನೆ. ಈ ವೇಳೆ ಆಕೆಯೊಂದಿಗೆ ಜಗಳ ಶುರು ಮಾಡಿ, ಚಾಕುವಿನಿಂದ ಕುತ್ತಿಗೆ ಹಿರಿದು ಕೊಲೆ ಮಾಡಿದ್ದಾನೆ. ನಂತರ ಅಂಗಡಿಯಿಂದ ಜ್ಯೂಸ್ ತೆಗೆದುಕೊಂಡುಬಂದ ಮಗುವಿಗೆ ಮ್ಯಾಜಿಕ್ ಹೇಳಿಕೊಡುತ್ತೇನೆ ಎಂದು ನಂಬಿಸಿ, ಸೀರೆಯಿಂದ ಮಗುವಿನ ಎರಡೂ ಕೈಕಾಲುಗಳನ್ನು ಕಟ್ಟಿದ್ದಾನೆ. ತಲೆ ದಿಂಬಿನಿಂದ ಉಸಿರುಗಟ್ಟಿಸಿ ಬಾಲಕನನ್ನೂ ಕೊಲೆ ಮಾಡಿದ್ದಾನೆ. ಎರಡು ಮೃತ ದೇಹಗಳನ್ನ ರೂಮಿನಲ್ಲಿ ಮಂಚದ ಮೇಲೆ ಎಸೆದು ಪರಾರಿಯಾಗಿದ್ದಾನೆ.

    ಅಕ್ಕ ಪಕ್ಕದ ಏರಿಯಾ ಜನರಿಗೆ ನನಗೆ ಮೋಸ ಮಾಡಿದ್ದಾಳೆ ಅದಕ್ಕಾಗಿ ಕೊಲೆ ಮಾಡಿರುವುದಾಗಿ ಹೇಳಿಕೊಂಡಿದ್ದ. ಸದ್ಯ ಆರೋಪಿಯನ್ನ ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿಲಿಕಾನ್ ಸಿಟಿ ಜನರೇ ಎಚ್ಚರ- ಬೆಂಗ್ಳೂರಿಗೆ ಕಾಲಿಟ್ಟಿದೆ ಯೂಟ್ಯೂಬ್ ಕಾರು ಕಳ್ಳರ ಗ್ಯಾಂಗ್

    ಸಿಲಿಕಾನ್ ಸಿಟಿ ಜನರೇ ಎಚ್ಚರ- ಬೆಂಗ್ಳೂರಿಗೆ ಕಾಲಿಟ್ಟಿದೆ ಯೂಟ್ಯೂಬ್ ಕಾರು ಕಳ್ಳರ ಗ್ಯಾಂಗ್

    -ಮನೆ ಮುಂದೆ ನಿಲ್ಲಿಸುವ ಕಾರುಗಳೇ ಟಾರ್ಗೆಟ್
    -ಆನ್‍ಲೈನ್‍ನಲ್ಲಿ ಕೀ ಓಪನರ್ ಬುಕ್ ಮಾಡ್ತಿದ್ರು

    ಬೆಂಗಳೂರು: ಮನೆ ಮುಂದೆ ಕಾರ್ ನಿಲ್ಲಿಸುವ ಸಿಲಿಕಾನ್ ಸಿಟಿ ಮಂದಿ ಎಚ್ಚರದಿಂದಿರಿ. ಯಾಕಂದ್ರೆ ಬೆಂಗಳೂರಿಗೆ ಯೂಟ್ಯೂಬ್ ಕಾರು ಕಳ್ಳರ ಗ್ಯಾಂಗ್ ಕಾಲಿಟಿದ್ದು, ಕೇವಲ 5 ನಿಮಿಷದಲ್ಲಿ ನಿಮ್ಮ ಕಾರು ಕದ್ದು ಎಸ್ಕೇಪ್ ಆಗುತ್ತಾರೆ.

    ಹೌದು. ಈ ಖರ್ತನಾಕ್ ಗ್ಯಾಂಗ್ ಯೂಟ್ಯೂಬ್ ಪ್ರಿಯರು, ಯೂಟ್ಯೂಬ್ ನಿಂದಲೇ ಲಕ್ಷಾಂತರ ರೂ. ಸಂಪಾದನೆ ಮಾಡಿದವರು. ಆ ಯ್ಯೂಟ್ಯೂಬ್ ನಿಂದಲೇ ಈಗ ಜೈಲನ್ನೂ ಕೂಡ ಸೇರಿದ್ದಾರೆ. ಆಶ್ಚರ್ಯ ಎನಿಸಿದರು ಇದು ನಿಜ. ಈ ಖತರ್ನಾಕ್ ಕಳ್ಳರು ಯೂಟ್ಯೂಬ್ ನೋಡಿಕೊಂಡೆ ಕಳ್ಳತನ ಮಾಡುತ್ತಾರೆ. ಯಾವ ಕಾರು ಕದಿಯೋಕೆ ಯಾವ ಟೆಕ್ನಿಕ್ ಬೇಕು ಅನ್ನೋದು ಯೂಟ್ಯೂಬ್ ವಿಡಿಯೋಗಳನ್ನು ನೋಡಿಯೇ ಫೈನಲ್ ಮಾಡಿ, ಮನೆ ಮುಂದೆ ನಿಲ್ಲಿಸುವ ಕಾರುಗಳನ್ನು ಸಲೀಸಾಗಿ ಕದ್ದು ಪರಾರಿಯಾಗಿ ಬಿಡುತ್ತಿದ್ದರು.

    ಈ ಕುಖ್ಯಾತ ಕಾರು ಕಳ್ಳರ ಗ್ಯಾಂಗ್‍ನಲ್ಲಿದ್ದ ಮೂವರು ಸದ್ಯ ಬಾಗಲಗುಂಟೆ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬಂಧಿತರನ್ನು ದಿಲೀಶ್, ಶಾಜಿ ಕೇಶವನ್, ಆಲಿ ಅಹಮ್ಮದ್ ಎಂದು ಗುರುತಿಸಲಾಗಿದೆ. ನಗರದ ಹಲವೆಡೆ ಸುಮಾರು 9ಕ್ಕೂ ಹೆಚ್ಚು ಕಾರನ್ನ ಆರೋಪಿಗಳು ಕಳ್ಳತನ ಮಾಡಿದ್ದರು. ಬಂಧಿತ ಆರೋಪಿ ದಿಲೀಶ್ ಆನ್ ಲೈನ್‍ನಲ್ಲಿ ಕೀ ಓಪನರ್ ಬುಕ್ ಮಾಡಿ, ತರಿಸಿ ಅದರ ಮೂಲಕ ಕಾರುಗಳನ್ನು ಕದಿಯುತ್ತಿದ್ದ. ಮನೆ ಮುಂದೆ ನಿಲ್ಲಿಸುತ್ತಿದ್ದ ಕಾರ್ ಗ್ಲಾಸ್‍ನ್ನ ಒಡೆದು ಸ್ಟೇರಿಂಗ್ ವಯರ್‍ಗೆ ಕೀ ಓಪನರ್ ಅಟಾಚ್ ಮಾಡಿ ಈ ಗ್ಯಾಂಗ್ ಕಳ್ಳತನ ಮಾಡುತ್ತಿದ್ದರು. ಸದ್ಯ ಸಿಸಿಟಿವಿ ಆಧರಿಸಿ ಮೂವರು ಖತರ್ನಾಕ್ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ ಯೂಟ್ಯೂಬ್ ಮೂಲಕ ಕಾರು ಕಳ್ಳತನ ಮಾಡುವ ಬಗ್ಗೆ ಆರೋಪಿಗಳು ಬಾಯ್ಬಿಟ್ಟಿದ್ದಾರೆ.

    ಈ ಗ್ಯಾಂಗ್ ಕದ್ದ ಕಾರುಗಳನ್ನ ಮಂಗಳೂರು, ಆಂಧ್ರಪ್ರದೇಶ ಹಾಗೂ ಇತರೆ ರಾಜ್ಯಗಳಿಗೆ ಮಾರಾಟ ಮಾಡಿದ್ದಾರೆ. ಕಾರು ಕಳ್ಳತನಕ್ಕೂ ಮುನ್ನ ಮೂರು, ಮೂರು ಬಾರಿ ವಿಡಿಯೋ ಅನ್ನು ಕೂಲಂಕುಷವಾಗಿ ನೋಡಿ ಕಳ್ಳತನಕ್ಕೆ ಆರೋಪಿಗಳು ತಯಾರಾಗುತ್ತಿದ್ದರು. ಕಾರು ಯಾವ ಮಾಡೆಲ್ ಇದೆ. ಹೇಗೆ ಕಳ್ಳತನ ಮಾಡಬಹುದು ಅನ್ನೋದನೆಲ್ಲಾ ಯೂಟ್ಯೂಬ್‍ನಲ್ಲಿ ನೋಡಿಕೊಂಡು, ಅದರಲ್ಲಿ ಇರುವ ಪ್ಲಾನ್ ರೀತಿಯಲ್ಲಿಯೇ ಕಾರನ್ನು ಕದ್ದು ಎಸ್ಕೇಪ್ ಆಗುತ್ತಿದ್ದರು ಎಂದು ಪೊಲೀಸರ ಬಳಿ ಕಳ್ಳರು ಹೇಳಿದ್ದಾರೆ.

    ಜೊತೆಗೆ ಖತರ್ನಾಕ್ ಗ್ಯಾಂಗ್ ಸಾಕಷ್ಟು ಪ್ರಕರಣಗಳನ್ನು ಇದೇ ರೀತಿ ಮಾಡಿರುವುದು ವಿಚಾರಣೆ ವೇಳೆ ಬಯಲಾಗಿದೆ. ಈ ಕಳ್ಳರು ಅದೆಷ್ಟು ಖತರ್ನಾಕ್ ಎಂದರೆ ಯೂಟ್ಯೂಬ್ ವಿಡಿಯೋಗಳನ್ನು ಡೌನ್‍ಲೋಡ್ ಮಾಡಿಟ್ಟುಕೊಂಡಿರುವುದು ಕೂಡ ಬೆಳಕಿಗೆ ಬಂದಿದೆ.