Tag: bagalagunte police station

  • 5 ವರ್ಷ ಪ್ರೀತಿಸಿ ಈಗ ನೀನು ಕಪ್ಪಗಿದ್ಯ ಎಂದು ಬೇಡ ಅಂದ್ಳು

    5 ವರ್ಷ ಪ್ರೀತಿಸಿ ಈಗ ನೀನು ಕಪ್ಪಗಿದ್ಯ ಎಂದು ಬೇಡ ಅಂದ್ಳು

    ಬೆಂಗಳೂರು: ಅವರಿಬ್ಬರದೂ ಎಂಜಿನಿಯರ್ ಕಾಲೇಜ್‍ನಲ್ಲಿ ಶುರುವಾದ ಪ್ರೀತಿ. ಮೊದಲ ನೋಟಕ್ಕೆ ಒಬ್ಬರಿಗೊಬ್ಬರು ಲವ್ ಮಾಡಲು ಶುರು ಮಾಡಿದ್ರು. ಇಬ್ಬರ ನಡುವೆ ಗಾಢವಾದ ಪ್ರೀತಿ ಬೆಳೆದುಬಿಟ್ಟಿತ್ತು. ಎಲ್ಲೇ ಹೋದ್ರೂ ಇಬ್ಬರೂ ಜೊತೆ ಜೊತೆಯಾಗೇ ಹೋಗ್ತಿದ್ರು. ಆದ್ರೆ ಈಗ 5 ವರ್ಷದ ಪ್ರೀತಿಯನ್ನೇ ಯುವತಿ ತಿರಸ್ಕರಿಸಿದ್ದಾಳೆ.

    ಹೌದು. ಅಜಯ್ ಮತ್ತು ನಂದಿನಿಯ ಪ್ರೀತಿ ಐದು ವರ್ಷಗಳಿಂದ ಅಡ್ಡಿ ಆತಂಕಗಳಿಲ್ಲದೇ ಸಾಗಿತ್ತು. ಆದ್ರೆ ಅವನು ನಮ್ಮ ಜಾತಿಯವನಲ್ಲ, ನೋಡಲು ಕಪ್ಪಗಿದ್ದಾನೆ, ಅವನನ್ನ ಬಿಟ್ಟು ಬಿಡು ಅಂತಾ ಯುವತಿಗೆ ಆಕೆಯ ತಂದೆ ಹೇಳಿದ ಮೇಲೆ ಯುವತಿ ಅಜಯ್‍ನನ್ನ ದೂರ ಮಾಡಲು ಶುರು ಮಾಡಿದ್ದಾಳಂತೆ.

    ಯಾಕ್ ಹೀಗೆ ಮಾಡ್ತಿದ್ಯ? ಅಂತಾ ಕೇಳಲು ಮನೆ ಬಳಿ ಹೋದ ಅಜಯ್ ಮೇಲೆ ಬಾಗಲಗುಂಟೆ ಪೊಲಿಸ್ ಠಾಣೆಯಲ್ಲಿ ದೂರು ನೀಡಿ ಅಜಯ್‍ನನ್ನ ಜೈಲಿಗೆ ಕಳಿಸಿದ್ದಾರೆ. ಇ-ಮೇಲ್ ಕಳುಹಿಸಿದ್ದೀಯಾ, ಅದು ಮಾಡಿದ್ದೀಯಾ, ಇದು ಮಾಡಿದ್ದೀಯಾ ಅಂತ ಪೊಲೀಸರು ಹುಡುಗನ ಮೇಲೆ ದರ್ಪ ಮೆರೆದಿದ್ದಾರೆಂದು ಆರೋಪಿಸಲಾಗಿದೆ. ಹುಡುಗನ ಕಡೆ ಕೌಂಟರ್ ಕಂಪ್ಲೆಂಟ್ ತಗೋಳಿ ಅಂದ್ರೆ ಬೇಕಾಬಿಟ್ಟಿ ಸತಾಯಿಸಿದ್ದಾರಂತೆ. ನನ್ನನ್ನ ಅವಳು ಜೈಲಿಗೆ ಕಳಿಸಿದ್ರೂ ಪರವಾಗಿಲ್ಲ. ನಾನು ಅವಳನ್ನೇ ಮದುವೆಯಾಗ್ಬೇಕು ಅಂತಾ ಕಾದು ಕೂತಿದ್ದಾರೆ ಅಜಯ್.

    ಆದ್ರೆ ಸ್ಟೇಟ್‍ಮೆಂಟ್ ಮಾಡಿಸಿಕೊಳ್ಳೋ ಹೆಸರಿನಲ್ಲಿ ಬಾಗಲಗುಂಟೆ ಪೊಲೀಸರು ಜೇಬಿಂದ ಒಂದು ಸಾವಿರ ರೂಪಾಯಿ ಎತ್ತಿದ್ದಾರೆ ಎನ್ನಲಾಗಿದೆ. ಇತ್ತ ಓದೋ ವಯಸ್ಸಲ್ಲಿ ಮಾಡೊ ಪ್ರೀತಿನ ಉಳಿಸಿಕೊಳ್ಳೋರು ತುಂಬಾನೆ ಕಡಿಮೆ. ಅಪ್ಪಂದೋ ಅಮ್ಮಂದೋ ಸೆಂಟಿಮೆಂಟ್ ಇಟ್ಕೊಂಡು ಪ್ರೀತಿನ ನೆಗ್ಲೆಟ್ ಮಾಡೋರಿಗೆ ಯಾಕ್ರಿ ಬೇಕು ಪ್ರೀತಿ ಅನ್ನೋದು ಅಜಯ್ ಮಾತು.

  • 8ನೇ ಕ್ಲಾಸ್ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ – ಆರೋಪಿ ಅರೆಸ್ಟ್

    8ನೇ ಕ್ಲಾಸ್ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ – ಆರೋಪಿ ಅರೆಸ್ಟ್

    ಬೆಂಗಳೂರು: 15 ವರ್ಷದ 8ನೇ ಕ್ಲಾಸ್ ಒದುತ್ತಿದ್ದ ಅಪ್ರಾಪ್ತ ಬಾಲಕಿಯನ್ನ ಅಪಹರಿಸಿ ಆಕೆಯ ಮೇಲೆ ಅತ್ಯಚಾರವೆಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದ 21 ವರ್ಷದ ವಿಕ್ಕಿ ಅಲಿಯಾಸ್ ನರಸಿಂಹಮೂರ್ತಿ ಬಂಧಿತ ಆರೋಪಿ. ಈತ ವಿದ್ಯಾರ್ಥಿನಿಯನ್ನ ಕಿಡ್ನಾಪ್ ಮಾಡಿ ಆಂಧ್ರಪ್ರದೇಶದ ಮಡಕಶಿರಕ್ಕೆ ಕರೆದೊಯ್ದಿದ್ದ. ಬಾಲಕಿ ಕಾಣೆಯಾಗಿರುವ ಬಗ್ಗೆ ಫೆಬ್ರವರಿ 9ರಂದು ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಹರಣ ಕೇಸ್ ದಾಖಲಾಗಿತ್ತು. ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ನರಸಿಂಹ ಮೂರ್ತಿಯ ಬಾಲಕಿಯನ್ನು 3 ದಿನಗಳ ಹಿಂದೆ ವಾಪಸ್ ತಂದು ಬಿಟ್ಟು ಹೋಗಿದ್ದಾನೆ.

    ಬಾಲಕಿಯನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ನಂತರ ಅತ್ಯಾಚಾರವಾಗಿರವುದು ಗೊತ್ತಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಇಂದು ಬೆಳಿಗ್ಗೆ ಪೊಲೀಸರು ಆರೋಪಿ ನರಸಿಂಹಮೂರ್ತಿಯನ್ನು ಬಂಧಿಸಿದ್ದಾರೆ.