Tag: Bagalakunte

  • ಕುಡಿಯಲು ಹಣ ಕೊಡದ ತಾಯಿಯನ್ನು ರಾಡ್‍ನಲ್ಲಿ ಹೊಡೆದು ಕೊಂದ ಮಗ

    ಕುಡಿಯಲು ಹಣ ಕೊಡದ ತಾಯಿಯನ್ನು ರಾಡ್‍ನಲ್ಲಿ ಹೊಡೆದು ಕೊಂದ ಮಗ

    ಬೆಂಗಳೂರು: ಕುಡಿಯಲು ಹಣ ಕೊಡದಿದ್ದಕ್ಕೆ ಹೆತ್ತ ತಾಯಿಯನ್ನೇ ಮಗನೊಬ್ಬ ರಾಡ್‍ನಿಂದ ಹಲ್ಲೆ ಮಾಡಿ ಹತ್ಯೆಗೈದ ಘಟನೆ ಬಗಲಗುಂಟೆಯ (Bagalakunte) ಮುನೇಶ್ವರ ನಗರದಲ್ಲಿ ನಡೆದಿದೆ.

    ಹತ್ಯೆಯಾದ ವೃದ್ಧೆಯನ್ನು ಶಾಂತಬಾಯಿ (82) ಎಂದು ಗುರುತಿಸಲಾಗಿದೆ. ಮಹೆಂದ್ರ ಸಿಂಗ್ (52) ಕೊಲೆಗೈದ ಆರೋಪಿಯಾಗಿದ್ದಾನೆ. ಗುರುವಾರ (ಏ.10) ತಾಯಿ ಹಾಗೂ ಮಗನ ನಡುವೆ ಹಣದ ವಿಚಾರಕ್ಕೆ ಜಗಳ ನಡೆದಿದೆ. ಈ ವೇಳೆ ಆತ ಹಲ್ಲೆ ಮಾಡಿ ಹತ್ಯೆ ಮಾಡಿದ್ದಾನೆ. ಇದನ್ನೂ ಓದಿ: ಶಾಸಕ ಯತ್ನಾಳ್‌ ಕೊಲೆಗೆ ಸಂಚು? – ಅನ್ಯಕೋಮಿನ ಯುವಕನ ಸ್ಫೋಟಕ ಆಡಿಯೋ ವೈರಲ್‌

    ಮಂಹೇಂದ್ರ ಸಿಂಗ್ ಕುಡಿತದ ಚಟಕ್ಕೆ ಬಿದ್ದು ಕೆಲಸಕ್ಕೆ ಹೋಗದೆ ಅಲೆಯುತ್ತಿದ್ದ. ಅಲ್ಲದೇ ನಿತ್ಯ ಹಣಕ್ಕಾಗಿ ತಾಯಿಗೆ ಹಿಂಸೆ ನೀಡಿ ನಿಂದಿಸುತ್ತಿದ್ದ ಎಂದು ತಿಳಿದು ಬಂದಿದೆ. ಆರೋಪಿ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

    ಈ ಸಂಬಂಧ ಬಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹಾಲಿನ ದರ ಹೆಚ್ಚಾದ ಬೆನ್ನಲ್ಲೇ ಹಾಲುಗಳ್ಳರ ಕಾಟ ಹೆಚ್ಚಳ

  • ವೀಡಿಯೋ ಕಾಲ್‍ನಲ್ಲಿ ಪತ್ನಿಗೆ ಹೆದರಿಸಲು ಹೋಗಿ ನೇಣಿಗೆ ಬಲಿಯಾದ ಜಿಮ್ ಟ್ರೈನರ್

    ವೀಡಿಯೋ ಕಾಲ್‍ನಲ್ಲಿ ಪತ್ನಿಗೆ ಹೆದರಿಸಲು ಹೋಗಿ ನೇಣಿಗೆ ಬಲಿಯಾದ ಜಿಮ್ ಟ್ರೈನರ್

    ಬೆಂಗಳೂರು: ಪತ್ನಿಗೆ ವೀಡಿಯೋ ಕಾಲ್ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೆದರಿಸಲು ಯತ್ನಿಸಿದ ಜಿಮ್ ಟ್ರೈನರ್ (Gym Trainer) ಸಾವಿಗೀಡಾದ ಘಟನೆ ನಗರದ ಬಾಗಲಗುಂಟೆಯಲ್ಲಿ (Bagalakunte) ನಡೆದಿದೆ.

    ಮೃತನನ್ನು ಬಿಹಾರ (Bihar) ಮೂಲದ ಅಮಿತ್ ಕುಮಾರ್ (28) ಎಂದು ಗುರುತಿಸಲಾಗಿದೆ. ಸುಮಾರು ಹತ್ತು ವರ್ಷಗಳಿಂದ ಬೆಂಗಳೂರಿನಲ್ಲಿ (Bengaluru) ವಾಸವಾಗಿದ್ದ ಅಮಿತ್, ಹಾಸನ ಮೂಲದ ಯುವತಿಯನ್ನ ಮದುವೆಯಾಗಿದ್ದ. ಇತ್ತೀಚೆಗೆ ಪತ್ನಿ ಹಾಗೂ ಅಮಿತ್ ನಡುವೆ ಗಲಾಟೆ ನಡೆದು, ಆಕೆ ತವರು ಮನೆ ಸೇರಿದ್ದಳು. ಇದರಿಂದ ಬೇಸತ್ತ ಅಮಿತ್ ಆಕೆಗೆ ವೀಡಿಯೋ ಕಾಲ್ ಮಾಡಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಲು ಮುಂದಾಗಿದ್ದಾನೆ. ಈ ವೇಳೆ ಮೊಬೈಲ್ ಕೆಳಗೆ ಬಿದ್ದಿದ್ದು, ನೇಣು ಬಿಗಿದುಕೊಂಡಿದೆ. ಇದರಿಂದ ಆತ ಸಾವಿಗೀಡಾಗಿದ್ದಾನೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಮನೆಯ ಬಾತ್‌ ರೂಂನಲ್ಲಿ ಯುವತಿ ಅನುಮಾನಾಸ್ಪದ ಸಾವು

    ಕಳೆದ ಮೂರು ವರ್ಷಗಳ ಹಿಂದೆ ಅಮಿತ್ ಯುವತಿಯನ್ನು ಮದುವೆಯಾಗಿದ್ದ. ಮೂರು ತಿಂಗಳ ಹಿಂದೆ ಅಮಿತ್ ಪತ್ನಿ ನಸಿರ್ಂಗ್ ಕೆಲಸಕ್ಕೆ ಸೇರಿದ್ದಳು. ಇದೇ ವಿಚಾರಕ್ಕೆ ಇಬ್ಬರ ನಡುವೆ ಈ ಹಿಂದೆ ಜಗಳ ನಡೆದಿತ್ತು. ಇದಾದ ಬಳಿ ಆಕೆ ತವರು ಮನೆ ಸೇರಿದ್ದಳು. ಕಳೆದ ವಾರ ಆಕೆಯನ್ನು ಕರೆದುಕೊಂಡು ಬಂದಿದ್ದ ಅಮಿತ್ ಮತ್ತೆ ಇದೇ ವಿಚಾರಕ್ಕೆ ಗಲಾಟೆ ಮಾಡಿದ್ದ. ಇದರಿಂದ ಮನನೊಂದ ಮಹಿಳೆ ಮರಳಿ ತವರು ಮನೆಗೆ ಹೋಗಿದ್ದಳು.

    ಘಟನಾ ಸ್ಥಳಕ್ಕೆ ಬಾಗಲಗುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಉಗ್ರ ಕೃತ್ಯಕ್ಕೆ ಸಹಕಾರ – ನಾಪತ್ತೆಯಾಗಿದ್ದ ಆರೋಪಿ ಮೈಸೂರಿನಲ್ಲಿ ಅರೆಸ್ಟ್‌