Tag: bagalkote

  • INDIA ಸಂಘಟನೆಯಿಂದ ಬಿಜೆಪಿ ಹೆದರಿದೆ.. ಎರಡು ಮಾತಿಲ್ಲ: ಸ್ವಪಕ್ಷ ವಿರುದ್ಧವೇ ಹೆಚ್.ವಿಶ್ವನಾಥ್ ಹೇಳಿಕೆ

    INDIA ಸಂಘಟನೆಯಿಂದ ಬಿಜೆಪಿ ಹೆದರಿದೆ.. ಎರಡು ಮಾತಿಲ್ಲ: ಸ್ವಪಕ್ಷ ವಿರುದ್ಧವೇ ಹೆಚ್.ವಿಶ್ವನಾಥ್ ಹೇಳಿಕೆ

    ಬಾಗಲಕೋಟೆ: INDIA ಸಂಘಟನೆಯಿಂದ ರಾಜ್ಯದಲ್ಲಿ ಬಿಜೆಪಿ (BJP) ಹೆದರಿದೆ, ಎರಡು ಮಾತಿಲ್ಲ. ನಾನು ಸಹ ಮೊದಮೊದಲು ಮೋದಿಯವರನ್ನು (Narendra Modi) ಅಭಿಮಾನಿಸುತ್ತಿದ್ದೆ. ಇಂದು ಮೋದಿಯವರು ಕೆಳಗಿಳಿಯುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ (H.Vishwanath) ತಮ್ಮ ಪಕ್ಷದ ವಿರುದ್ಧವೇ ಹೇಳಿಕೆ ನೀಡಿದ್ದಾರೆ.

    INDIA ಸಂಘಟನೆಯಿಂದ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ (JDS) ಮೈತ್ರಿ ಆಯ್ತಾ ಎಂಬ ಮಾಧ್ಯಮದವರ ಪ್ರಶ್ನೆಗೆ ಬಾಗಲಕೋಟೆಯಲ್ಲಿ (Bagalkote) ಅವರು ಪ್ರತಿಕ್ರಿಯಿಸಿದರು. ಬಿಜೆಪಿಯವರು ಎಲ್ಲಿಯಾದರೂ ಈ ದೇಶದ ಜನರ ಅಕ್ಷರ, ಆರೋಗ್ಯ, ಅನ್ನ, ನಮ್ಮ ಉದ್ಯೋಗದ ಬಗ್ಗೆ ಏನಾದರೂ ಮಾತನಾಡಿದ್ದಾರಾ? ಏನೂ ಮಾತನಾಡುತ್ತಿಲ್ಲ. ಬಿಜೆಪಿಯವರು ಭೂತ ಕಾಲದಲ್ಲಿದ್ದಾರೆ ಎಂದು ಬಿಜೆಪಿ ಪಕ್ಷವನ್ನು ಲೇವಡಿ ಮಾಡಿದರು. ಇದನ್ನೂ ಓದಿ: G20 Summit: ವಿಶ್ವ ನಾಯಕರಿಂದ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಪುಷ್ಪ ನಮನ

    1,200 ವರ್ಷಗಳ ಹಿಂದೆ ಇಲ್ಲಿ ರಾಮ ಇದ್ದ ಎನ್ನುವುದು ಯಾರಿಗೆ ಬೇಕು? ರಾಮ ಬೇಕು ನಿಜ. ಆದರೆ ಭೂತಕಾಲದ ಚರ್ಚೆ ಬಿಟ್ಟು ವರ್ತಮಾನಕ್ಕೆ ಬನ್ನಿ. ವರ್ತಮಾನಕ್ಕೆ ಬಂದು ಚರ್ಚೆ ಮಾಡಿ ಭವಿಷ್ಯವನ್ನು ಕಟ್ಟುವುದಾಗಬೇಕೆ ಹೊರತು, ಬರೀ ನೀವು ಭೂತಕಾಲದಲ್ಲೇ ಓಡಾಡುತ್ತಿದ್ದರೆ ಏನಾಗುತ್ತದೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಬೆಂಗ್ಳೂರು ಬಂದ್‌ಗೆ ಕರೆ; ಸರ್ಕಾರಿ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ: ಶಿಕ್ಷಣ ಇಲಾಖೆ

    ಸಿಎಂ ಸಿದ್ದರಾಮಯ್ಯ (Siddaramaiah) ಅವರನ್ನ ದೇವರಾಜ ಅರಸು (D. Devaraj Urs) ಜೊತೆ ಹೋಲಿಕೆ ಮಾಡಿಕೊಳ್ಳುತ್ತಾರೆ ಎಂಬ ಬಿಕೆ ಹರಿಪ್ರಸಾದ್ (B.K.Hariprasad) ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಹರಿಪ್ರಸಾದ್ ಕಾಮೆಂಟನ್ನು ನಾವು ಯಾರು ಒಪ್ಪಿಕೊಳ್ಳುವುದಿಲ್ಲ. ದೇವರಾಜ ಅರಸು ಕಾರಲ್ಲಿ ಕೂತುಕೊಂಡರೆ ಏನು? ದೇವರಾಜ ಅರಸು ಅವರದ್ದು ಸರ್ಕಾರಿ ಕಾರು. ಸರ್ಕಾರ ಕೊಟ್ಟ ಕಾರನ್ನು ದೇವರಾಜ ಅರಸು ಅವರು ಮತ್ತೆ ಸರ್ಕಾರಕ್ಕೆ ವಾಪಸ್ ಕೊಟ್ಟರು. ಅದರಲ್ಲಿ ಸರ್ಕಾರದ ಮುಖ್ಯಮಂತ್ರಿ ಕೂರುವುದರಲ್ಲಿ ತಪ್ಪೇನಿದೆ ಎಂದರು. ಇದನ್ನೂ ಓದಿ: ಹುಡ್ಗಿ ಚೆನ್ನಾಗಿದ್ದರೆ ಎಲ್ಲರೂ ಇಷ್ಟಪಡ್ತಾರೆ, ಹಾಗೇ ಬಿಜೆಪಿ ಕೂಡ ಬರ್ತಾ ಇದೆ: ಸಿ.ಎಂ ಇಬ್ರಾಹಿಂ

    ನಾನು ಸಂಗೊಳ್ಳಿ ರಾಯಣ್ಣ ಅವರನ್ನು ಆರಾಧನೆ ಮಾಡುತ್ತೇನೆ. ಹಾಗಂತ ನಾನು ಸಂಗೊಳ್ಳಿ ರಾಯಣ್ಣ ಆಗೋದಕ್ಕೆ ಆಗುತ್ತಾ? ಸಿದ್ದರಾಮಯ್ಯ ಸಹ ದೇವರಾಜ ಅರಸು ಅವರನ್ನು ಆರಾಧನೆ ಮಾಡುತ್ತಾರೆ. ಅದನ್ನು ಬಿಟ್ಟರೆ ನಾನೇ ದೇವರಾಜ ಅರಸು ಅಂತ ಎಲ್ಲಿ ಹೇಳಿದ್ದಾರೆ? ಇದೆಲ್ಲಾ ಅನವಶ್ಯಕ. ಹರಿಪ್ರಸಾದ್ ಅವರಿಗೆ ನಾನು ವಿನಂತಿ ಮಾಡುತ್ತೇನೆ. ನಿಜ ನಿಮ್ಮನ್ನು ಮಂತ್ರಿ ಮಾಡಬೇಕಿತ್ತು ಅನ್ನುತ್ತೀರಿ. ಆದರೆ ಅದು ನಮಗೆ ಸಂಬಂಧವಿಲ್ಲ. ಇಂದು ಈಡಿಗ ಸಮಾಜಕ್ಕೆ ಸಿದ್ದರಾಮಯ್ಯ ಸರ್ಕಾರದಲ್ಲಿ ಪ್ರಾತಿನಿಧ್ಯ ಕೊಟ್ಟಿದ್ದಾರೆ. ಬಂಗಾರಪ್ಪ ಅವರ ಮಗನೇ ಶಿಕ್ಷಣ ಮಂತ್ರಿಯಾಗಿದ್ದಾನೆ. ಹಾಗಾಗಿ ಕೊಟ್ಟೇ ಇಲ್ಲ ಅಂತಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ನಾಳೆ ಬೆಂಗಳೂರು ಬಂದ್; 500 ಹೆಚ್ಚುವರಿ ಬಸ್ ರಸ್ತೆಗಿಳಿಸಲು ಬಿಎಂಟಿಸಿ ನಿರ್ಧಾರ

    ನಿಮ್ಮ ಧ್ವನಿ ಯಾವ ತರಹ ಹೋಗುತ್ತಿದೆ ಅಂದರೆ ನಮ್ಮ ಸಮುದಾಯಕ್ಕೆ ಸಂಪುಟದಲ್ಲಿ ಆಧ್ಯತೆ ಕೊಟ್ಟಿಲ್ಲ ಅಂತ ಹೋಗ್ತಿದೆ. ಕಾಂಗ್ರೆಸ್ ಈಡಿಗ ಸಮುದಾಯಕ್ಕೆ ಕೊಟ್ಟಷ್ಟು ಪ್ರಾತಿನಿಧ್ಯ ಯಾವ ಪಕ್ಷವೂ ಕೊಟ್ಟಿಲ್ಲ. ಬಂಗಾರಪ್ಪ ಸಿಎಂ ಆಗಿದ್ದರು. ಹಿಂದೆ ಯಾವುದೇ ಸಂಪುಟವಿರಲಿ, ಮೂರು-ನಾಲ್ಕು ಜನ ಮಂತ್ರಿ ಇರುತ್ತಿದ್ದರು. ಕಾಗೋಡು ತಿಮ್ಮಪ್ಪ ಸ್ಪೀಕರ್ ಆಗಿದ್ದರು, ಮಂತ್ರಿಯೂ ಆಗಿದ್ದರು. ಹೌದು ದೇವರಾಜ ಅರಸು ಅವರ ಒಂದು ಕಾಲವಿತ್ತು. ಆ ಕಾಲ ವಾಪಸ್ ಬರಲ್ಲ. ನಾವು ಅದನ್ನೇ ಹೇಳುತ್ತಾ ಕೂತರೆ ಆಗಲ್ಲ. ಸೂಕ್ಷ್ಮಾತಿಸೂಕ್ಷ್ಮ ಸಮುದಾಯಗಳಿಗೆ ರಾಜಕೀಯ ಪ್ರಾತಿನಿಧ್ಯ ಕೊಡಬೇಕು. ಅದಕ್ಕೆ ತಾನೇ ಸಂವಿಧಾನಕ್ಕೆ ತಿದ್ದುಪಡಿ ತಂದಿದೆ. ನಾನು 40 ವರ್ಷ ಕಾಂಗ್ರೆಸ್‌ನಲ್ಲಿದ್ದು, ಜೆಡಿಎಸ್‌ಗೆ ಹೋಗಿ, ಬಿಜೆಪಿ ಹೋಗಿ ಬಂದಿದ್ದೇನೆ. ಇದಕ್ಕೆ ಹಲವಾರು ಕಾರಣಗಳಿವೆ. ಇದು ನನ್ನ ಪೊಲಿಟಿಕಲ್ ಜರ್ನಿ ಎಂದರು. ಇದನ್ನೂ ಓದಿ: ಕೂಡ್ಲಿಗಿ ಶಾಸಕನಾಗಿದ್ದಾಗ ದೇಹ ಬಿಜೆಪಿಯಲ್ಲಿದ್ರೂ, ನನ್ನ ಹೃದಯ ಕಾಂಗ್ರೆಸ್‌ನಲ್ಲಿತ್ತು: ಎನ್‌ವೈ ಗೋಪಾಲಕೃಷ್ಣ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಧಿಕಾರಕ್ಕೆ ಏರಿದ ಬಳಿಕ ಮಾತು ತಪ್ಪಿದ ಸಿದ್ದರಾಮಯ್ಯ – ಬಾದಾಮಿ ಜನ ಹೇಳೋದು ಏನು?

    ಅಧಿಕಾರಕ್ಕೆ ಏರಿದ ಬಳಿಕ ಮಾತು ತಪ್ಪಿದ ಸಿದ್ದರಾಮಯ್ಯ – ಬಾದಾಮಿ ಜನ ಹೇಳೋದು ಏನು?

    ಬಾಗಲಕೋಟೆ: ಕಾಂಗ್ರೆಸ್‌ ಸರ್ಕಾರವೂ (Congress Government) ಬಂದಾಯಿತು. ಸಿದ್ದರಾಮಯ್ಯ (Siddaramaiah) ಸಿಎಂ ಆಗಿದ್ದೂ ಆಯ್ತು. ಆದ್ರೆ ಚುನಾವಣೆ ಮೊದಲು ಕೊಟ್ಟ ಮಾತು ತಪ್ಪಿದ್ದಾರೆ ಎಂಬ ಅಭಿಪ್ರಾಯ ಬಾದಾಮಿ (Badami) ಜನರಲ್ಲಿ ವ್ಯಕ್ತವಾಗುತ್ತಿದೆ.

    ಈ ಹಿಂದೆ ಬಾದಾಮಿ‌ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಸಿದ್ದರಾಮಯ್ಯ ಈ ಬಾರಿಯ ಚುನಾವಣೆಯಲ್ಲಿ (Election) ಬಾದಾಮಿ ಕ್ಷೇತ್ರವನ್ನು ಬಿಟ್ಟು ವರುಣಾದಲ್ಲಿ (Varuna) ನಿಂತಿದ್ದರು. ಚುನಾವಣಾ ಸಮಯದಲ್ಲಿ ಬಾದಾಮಿಯಿಂದಲೇ ಸ್ಪರ್ಧಿಸಿ ಎಂದು ಬೆಂಬಲಿಗರ ಒತ್ತಾಯ ಮಾಡಿದಾಗ ಮನವೊಲಿಸಲು ಬಾದಾಮಿ‌ ಕ್ಷೇತ್ರವನ್ನು ದತ್ತು ಪಡೆದು ಮಾದರಿ ಕ್ಷೇತ್ರವನ್ನಾಗಿ ಮಾಡುವುದಾಗಿ ಭರವಸೆ ನೀಡಿದ್ದರು.

    ಅಧಿಕಾರಕ್ಕೆ ಬಂದು ನೂರು ದಿನಗಳು ದಾಟಿದರೂ ಬಾದಾಮಿ ಅಭಿವೃದ್ಧಿ ಬಗ್ಗೆ ಸಿಎಂ ಮಾತನಾಡುತ್ತಿಲ್ಲ. ಭರ್ಜರಿ ಗೆಲುವಿನೊಂದಿಗೆ ಅಧಿಕಾರಕ್ಕೆ ಬಂದ ಬಳಿಕ ತಮ್ಮ ಹಳೆ ಕ್ಷೇತ್ರವನ್ನು ಸಿದ್ದರಾಮಯ್ಯ ಮರೆತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಇದನ್ನೂ ಓದಿ: ಹೂ ದರ ಭಾರೀ ಇಳಿಕೆ – ಮಾರುಕಟ್ಟೆಯಲ್ಲೇ ಎಸೆದು ಹೋದ ರೈತರು

    ಬೆಟ್ಟದಷ್ಟು ಸಮಸ್ಯೆ ಎದುರಿಸುತ್ತಿರುವ ಕ್ಷೇತ್ರದ ಜನರಿಗೆ ಹೊಸ ಸರ್ಕಾರ ಬಂದ ಮೇಲೆ ಸಮಸ್ಯೆಗಳು ಪರಿಹಾರವಾಗುತ್ತದೆ ಎಂಬ ಭಾವನೆಯಲ್ಲಿದ್ದರು. ಆದರೆ ಸರ್ಕಾರ ಬಂದು ಇಷ್ಟು ‌ದಿನಗಳಾದರೂ ಬಾದಾಮಿ ಅಭಿವೃದ್ಧಿಗೆ ಯಾವುದೇ ಅನುದಾನ‌ ನೀಡಿಲ್ಲ. ಬಾದಾಮಿ ಪಟ್ಟಣದಲ್ಲಿ ಸುಸಜ್ಜಿತ ರಸ್ತೆ, ಮಾರುಕಟ್ಟೆ ಇಲ್ಲದೇ ಜನ ಸಮಸ್ಯೆ ಎದುರಿಸುತ್ತಿದ್ದಾರೆ. ಪ್ರವಾಸಿ ತಾಣಗಳ ಬಳಿ ಮೂಲಭೂತ ಸೌಕರ್ಯದ ಕೊರತೆ ಬಹಳಷ್ಟಿದೆ. ನೀರಾವರಿ ಯೋಜನೆಗಳು ಕುಂಠಿತವಾಗಿವೆ. ಇಷ್ಟೆಲ್ಲ ಸಮಸ್ಯೆ ಇರುವುದನ್ನು ಅರಿತ ಸಿದ್ದರಾಮಯ್ಯ ಒಮ್ಮೆಯೂ ತಮಗೆ ಪುನರ್ಜನ್ಮ ನೀಡಿದ ಕ್ಷೇತ್ರದ ಬಗ್ಗೆ ಚಿಂತಿಸುತ್ತಿಲ್ಲ ಎಂದು ಕ್ಷೇತ್ರದ ಜನರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಜೆಟ್‌ನಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ನಿರ್ಲಕ್ಷ್ಯ – ಸಿಎಂರಿಂದ ಸಿಗುತ್ತಾ ಪರಿಹಾರ?

    ಬಜೆಟ್‌ನಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ನಿರ್ಲಕ್ಷ್ಯ – ಸಿಎಂರಿಂದ ಸಿಗುತ್ತಾ ಪರಿಹಾರ?

    ಬಾಗಲಕೋಟೆ: ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದಲ್ಲಿ ಅಧಿಕಾರದ ಗದ್ದುಗೆಗೆ ಏರಿದ ಕಾಂಗ್ರೆಸ್ (Congress) ಪಕ್ಷ, ಸದ್ಯ ಆಡಳಿತದಲ್ಲಿದೆ. ರಾಜ್ಯದ ದೊರೆಯಾಗಿ ಸಿದ್ದರಾಮಯ್ಯ (Siddaramaiah) ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ್ದಾರೆ. ಆದರೆ ಇದೇ ಕಾಂಗ್ರೆಸ್ ನಾಯಕರು ಚುನಾವಣೆ ಪೂರ್ವದಲ್ಲಿ ಜಿಲ್ಲೆಯ ಜನರಿಗೆ ಅನೇಕ ಭರವಸೆಗಳನ್ನು ನೀಡಿದ್ದರು. ಆದರೆ ಆ ಭರವಸೆಗಳು ಕೇವಲ ಮಾತಾಗಿ ಉಳಿದಿವೆ.

    ಮುಳುಗಡೆ ಎನ್ನುವ ಹಣೆ ಪಟ್ಟಿ ಕಟ್ಟಿಕೊಂಡಿರುವ ವಿಜಯಪುರ-ಬಾಗಲಕೋಟೆ ಅಖಂಡ ಜಿಲ್ಲೆಗೆ ರಾಜ್ಯದ ಸಿಎಂ ಸಿದ್ದರಾಮಯ್ಯ ಇದೇ ಸೆಪ್ಟೆಂಬರ್ 2 ರಂದು ಆಲಮಟ್ಟಿ ಅಣೆಕಟ್ಟೆಗೆ ಗಂಗಾ ಪೂಜೆ ಮತ್ತು ಬಾಗಿನ ಅರ್ಪಿಸಲು ಆಗಮಿಸಲಿದ್ದಾರೆ. ಈ ನಡುವೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಕೇವಲ ಗ್ಯಾರಂಟಿ ಯೋಜನೆಗೆ ಒತ್ತು ನೀಡಿ ಉತ್ತರ ಕರ್ನಾಟಕ ಜ್ವಲಂತ ಸಮಸ್ಯೆಗಳ ಪರಿಹಾರ ನೀಡದೇ ನಿರ್ಲಕ್ಷ್ಯ ವಹಿಸಿದೆ ಎಂಬ ಆರೋಪ ಜಿಲ್ಲೆಯ ಜನರಲ್ಲಿದೆ.

    ಬಾಗಲಕೋಟೆ ಜಿಲ್ಲೆಯ ಕೃಷ್ಣ ಮೇಲ್ದಂಡೆ (Upper Krishna Project) 3ನೇ ಹಂತದ ಭೂಸ್ವಾಧೀನ ಕಾರ್ಯ ಆಮೆ ಗತಿಯಲ್ಲಿ ಸಾಗುತ್ತಿದೆ. ಮುಳುಗಡೆ ಸಂತ್ರಸ್ತರಿಗೆ ಶಾಶ್ವಾತ ಸೂರು ಕಲ್ಪಿಸುವುದು ಹಾಗೂ ಪರಿಹಾರ ಘೋಷಣೆ ಹೀಗೆ ಸಮಸ್ಯೆಗಳ ಸರಮಾಲೆ ಜಿಲ್ಲೆಗೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯಗೆ ಸವಾಲಾಗಿ ಪರಿಣಮಿಸಲಿದೆ.

    ನಮ್ಮ ಸರ್ಕಾರದ ಅವಧಿಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಪೂರ್ಣಗೊಳಿಸುವುದಾಗಿ ಹೇಳಿಕೊಂಡಿದ್ದ ಕಾಂಗ್ರೆಸ್ ಸರ್ಕಾರ, ಗ್ಯಾರಂಟಿ ಘೋಷಣೆಗಳ ನೆಪ ಹೇಳಿ ಮುಳುಗಡೆ ಪ್ರದೇಶದ ಭೂಸ್ವಾಧೀನ, ಪುನರ್ ವಸತಿ, ಪುನರ್ ನಿರ್ಮಾಣಕ್ಕಾಗಿ ಬಜೆಟ್‌ನಲ್ಲಿ ಯಾವುದೇ ವಿಶೇಷ ಅನುದಾನ ಇಡದೇ, ಜಿಲ್ಲೆಯ ಜನರು ನಿರಾಸೆಗೊಳ್ಳುವಂತೆ ಮಾಡಿದೆ. ಇನ್ನು 2014-15ರಲ್ಲಿ ಸಿದ್ದರಾಮಯ್ಯ ಅವರೇ ಸಿಎಂ ಆಗಿದ್ದಾಗ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ (ಮೆಡಿಕಲ್) ಕಾಲೇಜು ಘೋಷಣೆ ಮಾಡಿದ್ದರು. ಆದರೆ ಇಂದಿಗೂ ಅದರ ಕಾರ್ಯ ಒಂದು ಸಣ್ಣ ಪ್ರಗತಿ ಕಂಡಿಲ್ಲ.

    ಮೆಡಿಕಲ್ ಕಾಲೇಜಿಗೆ ಬೇಕಾದ ಭೂಮಿ ಈಗಾಗಲೇ 12 ಎಕರೆ ಜಾಗ ಕಾಯ್ದಿರಿಸಿ ಇಟ್ಟಿದ್ದರೂ ಸಹ ಕಟ್ಟಡ ಕಾರ್ಯವಾಗಲಿ ಅಥವಾ ಯಾವುದೇ ಕಾರ್ಯ ಶುರುವಾಗಿಲ್ಲ. ಬಜೆಟ್‌ನಲ್ಲಿ ಅನುದಾನ ಒದಗಿಸದೇ ನಿರ್ಲಕ್ಷ್ಯ ವಹಿಸಲಾಗಿದೆ. ಹೀಗೆ ಹಲವಾರು ಸವಾಲುಗಳು ಬರುವ ಸೆಪ್ಟೆಂಬರ್ 2ರಂದು ಜಿಲ್ಲೆಗೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಎದುರಾಗಲಿವೆ. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಚುನಾವಣೆ ನಡೆಸಲು ಸಿದ್ಧ – ಸುಪ್ರೀಂ ಕೋರ್ಟ್‍ಗೆ ಕೇಂದ್ರ

    ಹೀಗಿರುವಾಗಲೇ ಕೃಷ್ಣೆಯ ಬಾಗಿನ ಅರ್ಪಣೆ ಕಾರ್ಯಕ್ರಮಕ್ಕೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಹಾಗೂ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿಕೆಶಿ ಅವರು ಕೃಷ್ಣಾ ಮೇಲ್ದಂಡೆ ಯೋಜನೆಯ ಅಧಿಕಾರಿಗಳ ಜೊತೆ ಜಂಟಿ ಸಭೆ ನಡೆಸಲಿದ್ದಾರೆ. ಹೀಗಾಗಿ ಈ ಎಲ್ಲ ಸವಾಲುಗಳನ್ನು ಸಿಎಂ, ಡಿಸಿಎಂ ಹೇಗೆ ಎದುರಿಸುತ್ತಾರೆ? ಮುಳುಗಡೆ ಜಿಲ್ಲೆಯ ಜನರಿಗೆ ಸಿಹಿ ಸುದ್ದಿಯನ್ನು ಕೊಡ್ತಾರಾ? ಇಲ್ಲವೇ ಕೇವಲ ಬಾಗಿನ ಅರ್ಪಣೆ ಮಾಡಿ ಹೋಗ್ತಾರಾ? ಎಂಬುದನ್ನು ಕಾಯ್ದು ನೋಡಬೇಕಿದೆ. ಇದನ್ನೂ ಓದಿ: ಮಾರ್ಗ ಮಧ್ಯೆ ಕೈಕೊಟ್ಟ ಅಂಬುಲೆನ್ಸ್ – ಆನೆ ದಾಳಿಯಿಂದ ಗಾಯಗೊಂಡಿದ್ದ ಶಾರ್ಪ್ ಶೂಟರ್ ಅರಣ್ಯ ಸಿಬ್ಬಂದಿ ಸಾವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶಸ್ತ್ರಚಿಕಿತ್ಸೆ ಬಳಿಕ ಧ್ವಜಾರೋಹಣ ನೆರವೇರಿಸಿದ ಶತಾಯುಷಿ ಅಜ್ಜಿ!

    ಶಸ್ತ್ರಚಿಕಿತ್ಸೆ ಬಳಿಕ ಧ್ವಜಾರೋಹಣ ನೆರವೇರಿಸಿದ ಶತಾಯುಷಿ ಅಜ್ಜಿ!

    ಬಾಗಲಕೋಟೆ: ಶಸ್ತ್ರಚಿಕಿತ್ಸೆಗೆ ಬಂದಿದ್ದ ಶತಾಯುಷಿ ಅಜ್ಜಿಯೊಬ್ಬರು (Grandmother) ಗುಣಮುಖರಾಗಿ ಆಸತ್ರೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಘಟನೆ ಬಾಗಲಕೋಟೆಯ (Bagalkote) ಖಾಸಗಿ ಆಸತ್ರೆಯೊಂದರಲ್ಲಿ (Hospital) ನಡೆದಿದೆ.

    ಕಾಶಮ್ಮ ಹಿರೇಮಠ (103 ವರ್ಷ) ಎಂಬುವವರು ಧ್ವಜಾರೋಹಣ ನೆರವೇರಿಸಿದ ಶತಾಯುಷಿ. ಅಜ್ಜಿ ಆತ್ಮವಿಶ್ವಾಸದಿಂದ ಶಸ್ತ್ರಚಿಕಿತ್ಸೆಗೆ ಸಹಕರಿಸಿದ್ದು ವೈದ್ಯ ಲೋಕಕ್ಕೆ ಅಚ್ಚರಿಯಾಗಿದೆ. ಹೀಗಾಗಿ ಚೇತರಿಸಿಕೊಂಡ ಅಜ್ಜಿಯ ನೇತೃತ್ವದಲ್ಲೇ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ಧ್ವಜಾರೋಹಣ ನಡೆಸಿದ್ದಾರೆ. ಇದನ್ನೂ ಓದಿ: 77th Independence Day: ಸ್ವಾತಂತ್ರ್ಯ ದಿನ ಅರ್ಥಪೂರ್ಣವಾಗಿ ಆಚರಿಸಿದ ಸ್ಟಾರ್‌ ಕ್ರಿಕೆಟಿಗರು

    ತಳಗಿಹಾಳ ಗ್ರಾಮದ ಕಾಶಮ್ಮ ಅವರು ಕೆಲವು ದಿನಗಳ ಹಿಂದೆ ಆಯತಪ್ಪಿ ಬಿದ್ದು ಎಡಗಾಲು ಮುರಿದು ಹೋಗಿತ್ತು. ಹೀಗಾಗಿ ಅಜ್ಜಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು, ಅಜ್ಜಿ ಶಸ್ತ್ರಚಿಕಿತ್ಸೆಗೆ ಸ್ಪಂದಿಸುತ್ತಾರಾ ಎಂಬ ಅನುಮಾನದಿಂದಲೇ ಚಿಕಿತ್ಸೆ ನೀಡಿದ್ದರು. ಈಗ ವಾಕರ್ ಸಹಾಯದಿಂದ ಅಜ್ಜಿ ನಡೆದಾಡುತ್ತಿದ್ದಾರೆ. ಅಜ್ಜಿಯ ಆತ್ಮವಿಶ್ವಾಸಕ್ಕೆ ಆಸ್ಪತ್ರೆಯ ಸಿಬ್ಬಂದಿ ಸಂತೋಷ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕೆಂಪು ಕೋಟೆಯಲ್ಲಿ ಮೋದಿ ಭಾಷಣದ ವೇಳೆ ಖಾಲಿ ಕುರ್ಚಿಯಲ್ಲಿ ಸಂದೇಶ – ಏನಿತ್ತು?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಿಚ್ಚನ `ಹೆಬ್ಬುಲಿ’ ಹೇರ್‌ಕಟ್ ಸ್ಟೈಲ್ ಗೆ ಹೆಡ್‌ಮಾಸ್ಟರ್ ಗರಂ

    ಕಿಚ್ಚನ `ಹೆಬ್ಬುಲಿ’ ಹೇರ್‌ಕಟ್ ಸ್ಟೈಲ್ ಗೆ ಹೆಡ್‌ಮಾಸ್ಟರ್ ಗರಂ

    ಹೆಬ್ಬುಲಿ (Hebbuli) ಹೇರ್‌ಕಟ್. ಇದೊಂದು ಹೊಸ ಆವಿಷ್ಕಾರ. ಹೆಬ್ಬುಲಿ ಸಿನಿಮಾದ ಫಸ್ಟ್ ಲುಕ್‌ನಲ್ಲಿ ಕಿಚ್ಚ ಸುದೀಪ್ (Sudeep) ವಿಭಿನ್ನ ರೀತಿಯ ಹೇರ್‌ಕಟ್ ಮಾಡಿಸ್ಕೊಂಡು ಗಮನ ಸೆಳೆಯುತ್ತಾರೆ. ಅಲ್ಲಿಯವರೆಗೂ ಅದು ಕರ್ನಾಟಕದಲ್ಲಿ ಚಾಲ್ತಿ ಇರಲಿಲ್ಲ. ಯಾವ ಮಟ್ಟಕ್ಕೆ ಈ ಸ್ಟೈಲ್ ಫೇಮಸ್ ಆಯ್ತು ಅಂದ್ರೆ ಬಳಿಕ ಕಾಲೇಜು ವಿದ್ಯಾರ್ಥಿಗಳು, ಮಕ್ಕಳು ಇದೇ ಥರ ಹೆರ್‌ಕಟ್ ಮಾಡಿಸಿಕೊಳ್ಳಲು ಮುಗಿಬಿದ್ರು. ಹೆಬ್ಬುಲಿ ಸಿನಿಮಾ ರಿಲೀಸ್ ಆಗಿ 5 ವರ್ಷ ಕಳೆದೋದ್ರೂ ಟ್ರೆಂಡ್ ಮುಗಿದಿಲ್ಲ.

    ಅಂದಹಾಗೆ ಇದೀಗ ಹೆಬ್ಬುಲಿ ಹೇರ್‌ಕಟ್ ಮೇಲೆ ಜಿಗುಪ್ಸೆಗೊಂಡಿದ್ದು ಬಾಗಲಕೋಟೆ (Bagalkote) ಜಿಲ್ಲೆಯ ಜಮಖಂಡಿ ತಾಲೂಕಿನ ಹಳ್ಳಿಯೊಂದರ ಮೇಷ್ಟ್ರು. ಹಲವು ವರ್ಷಗಳಿಂದ ಹೆಬ್ಬುಲಿ ಸ್ಟೈಲ್ (Hair Style) ಹೇರ್‌ಕಟ್ ಮಾಡಿಸ್ಕೊಂಡು ಮಕ್ಕಳು ಶಾಲೆಗೆ ಬರ್ತಿದ್ರಂತೆ. ಹೆಡ್‌ಮಾಸ್ಟರ್‌ಗೆ ಇದೇ ಚಿಂತೆ. ಓದೋ ಟೈಮಲ್ಲಿ ಮಕ್ಕಳಿಗೆ ಇಂಥಹ ಸ್ಟೈಲ್ ಎಲ್ಲಾ ಬೇಕಾ? ಒಬ್ರು ಈ ಥರ ಹೇರ್‌ಕಟ್ ಮಾಡಿಸ್ಕೊಂಡ್ರು ಅಂತ ಇನ್ನೊಬ್ರು ಮತ್ತೊಬ್ರು ಹೀಗೆ ಮಕ್ಕಳು ಬರೀ ಸ್ಟೈಲ್ ಬಗ್ಗೆನೇ ಗಮನ ಕೊಡ್ತಾ ಓದಿನ ಬಗ್ಗೆ ಆಸಕ್ತಿ ಕಳೆದುಕೊಳ್ತಾ ಇದ್ರಂತೆ. ಇದರಿಂದ ಬೇಸರಗೊಂಡ ಹೆಡ್‌ಮಾಸ್ಟರ್ ಶಾಲೆಯ ಹತ್ತಿರದ ಎಲ್ಲಾ ಸಲೂನ್‌ಗಳಿಗೆ ಪಾಠ ಮಾಡಿದ್ದಾರೆ. ಇದನ್ನೂ ಓದಿ:ಬಿಕಿನಿಯಲ್ಲಿ ಅನನ್ಯಾ ಮಿಂಚಿಂಗ್, ಬಾಯ್‌ಫ್ರೆಂಡ್ ಎಲ್ಲಿ ಎಂದು ಕಾಲೆಳೆದ ನೆಟ್ಟಿಗರು

    ವಿದ್ಯಾರ್ಥಿಗಳಿಗೆ ಹೆಬ್ಬುಲಿ ಹೇರ್‌ಕಟ್ ಮಾಡಿಸಿಕೊಳ್ಳದಂತೆ ಎಷ್ಟೇ ಪಾಠ ಹೇಳಿದ್ರೂ ಕೇಳಲಿಲ್ಲ. ಇದೇ ಕಾರಣಕ್ಕೆ ಶಾಲೆಯಿಂದ ನೋಟೀಸ್ ಜಾರಿ ಮಾಡಿದ್ದಾರೆ. ಇದರಲ್ಲಿ ಹೆಬ್ಬುಲಿ ಹೇರ್‌ಕಟ್‌ನಿಂದ ಆಗ್ತಿರೋ ತೊಂದರೆ ಬಗ್ಗೆ ಹೆಡ್‌ಮಾಸ್ಟರು ಕ್ಲಾರಿಫಿಕೇಶನ್ ಕೊಟ್ಟಿದ್ದಾರೆ. ಹೀಗಾಗಿ ಸಲೂನ್‌ಗೆ ಬಂದು ಕೇಳಿದ್ರೂ ಹೆಬ್ಬುಲಿ ಹೇರ್‌ಕಟ್ ಮಾಡಬೇಡಿ ಎಂದು ನೋಟೀಸ್‌ನಲ್ಲಿ ಹೇಳಿದ್ದಾರೆ.

     

    ಇದು ತಮಾಶೆ ಅನ್ನಿಸಿದ್ರೂ ಇದ್ರಿಂದ ಅನುಕೂಲ ಹೆಚ್ಚು. ಹಳ್ಳಿಯಲ್ಲಿ ಬಡ ಮಕ್ಕಳು ಹೇರ್‌  ಸ್ಟೈಲ್ ಮೋಹಕ್ಕೆ ಬಿದ್ದು ಬಡ ತಂದೆ ತಾಯಿಗಳಿಗೆ ತೊಂದರೆ ಕೊಡುತ್ತಾರೆ. ಅದನ್ನು ಮಾಡಿಸದೇ ಇದ್ದರೆ ಶಾಲೆಯ ವಾತಾವರಣ ಎರಡೂ ಚೆನ್ನಾಗಿರುತ್ತೆ. ಹೀಗಾಗಿ 5 ವರ್ಷ ಕಳೆದ್ರೂ ಹೆಡ್‌ಮಾಸ್ಟರ್ ಮಾತು ಕೇಳದ ಮಕ್ಕಳ ಈ ಆಸೆಯನ್ನ ಬೇರಿಂದಲೇ ಕಿತ್ತೆಸೆಯಲು ಈ ಪ್ಲ್ಯಾನ್  ಮಾಡಿದ್ದಾರೆ ಆ ಮೇಷ್ಟ್ರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಿಜೆಪಿಯಲ್ಲಿ ತೀವ್ರಗೊಂಡ ಒಳಜಗಳ- ವೇದಿಕೆಯಲ್ಲಿಯೇ ಯತ್ನಾಳ್, ನಿರಾಣಿ ಪರಸ್ಪರ ಟಾಂಗ್

    ಬಿಜೆಪಿಯಲ್ಲಿ ತೀವ್ರಗೊಂಡ ಒಳಜಗಳ- ವೇದಿಕೆಯಲ್ಲಿಯೇ ಯತ್ನಾಳ್, ನಿರಾಣಿ ಪರಸ್ಪರ ಟಾಂಗ್

    ಬಾಗಲಕೋಟೆ: ರಾಜ್ಯ ಬಿಜೆಪಿಯಲ್ಲಿ ಅಡ್ಜಸ್ಟ್ ಮೆಂಟ್ ರಾಜಕಾರಣದ ಕದನ ತೀವ್ರಗೊಂಡಿದೆ. ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ನಿನ್ನೆ ಆಡಿದ್ದ ಮಾತುಗಳು ಮುರುಗೇಶ್ ನಿರಾಣಿ (Murugesh Nirani) ಕೋಪಕ್ಕೆ ಕಾರಣವಾಗಿದೆ.

    ಬಾಗಲಕೋಟೆ (Bagalkote) ಯಲ್ಲಿ ಮಾತಾಡಿದ ಅವರು, ಯಾರಾದ್ರೂ ಬಾಯಿಗೆ ಬಂದಂತೆ ಮಾತಾಡಿದ್ರೆ, ಅದಕ್ಕಿಂತ ಅಪ್ಪನಂತೆ ಮಾತಾಡಲು ನನಗೂ ಬರುತ್ತೆ. ಬೇರೆಯವರ ಬಗ್ಗೆ ಮಾತಾಡುವ ಮೊದಲು ತಾವೇನು ಮಾಡಿದ್ದೇವೆ ಎಂಬ ಬಗ್ಗೆ ಮೊದಲು ಮಾತಾಡ್ಬೇಕು. ಯಾರ್ಯಾರು ಯಾರ್ಯಾರಿಂದ ಸೋತಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಇಷ್ಟುದಿನ ನಾನು ಸುಮ್ಮನಿರೋದು ನನ್ನ ದೌರ್ಬಲ್ಯ ಅಲ್ಲ. ಇಲಿ ಹೊಡೆಯಲು ಹೋಗಿ, ಗಣಪತಿಗೆ ಪೆಟ್ಟು ಬೀಳಬಾರದು ಎಂದು ಸುಮ್ಮನಿದ್ದೇನೆ.. ಯಾರಾದ್ರೂ ನನ್ನ ಬಗ್ಗೆ ಮಾತನಾಡುವಾಗ ಎಚ್ಚರದಿಂದ ಇರಲಿ ಎಂದು ಗುಡುಗಿದ್ರು.

    ಈ ಮೂಲಕ ತಮ್ಮ ಸೋಲಿಗೆ ಯತ್ನಾಳ್ ಕಾರಣ ಎಂದು ಪರೋಕ್ಷವಾಗಿ ದೂಷಿಸಿದ್ರು. ಇದಕ್ಕೆ ಯತ್ನಾಳ್ ವೇದಿಕೆಯಲ್ಲೇ ತಿರುಗೇಟು ಕೊಟ್ರು. ನನ್ನ ಸೋಲಿಸಲು ಎಲ್ಲೆಲ್ಲಿಂದಲೋ ದುಡ್ಡು ಕಳಿಸಿದ್ರು. ನಾನು ನೋಡ್ತೀನಿ, ನಮ್ಮ ಕಡೆನೂ ತಾಕತ್ತಿದೆ ಎನ್ನುವ ಮೂಲಕ ನಿರಾಣಿಗೆ ಎಚ್ಚರಿಕೆ ಕೊಟ್ರು. ಇದಕ್ಕೆ ಮತ್ತೆ ನಿರಾಣಿ ಪ್ರತ್ಯುತ್ತರ ನೀಡಿದ್ರು. ನಾನು ಹಣ ಕೊಟ್ಟಿದ್ದು ಬಿಜೆಪಿಗರಿಗೆ, ಕಾಂಗ್ರೆಸ್ಸಿಗರಿಗಲ್ಲ. ಈ ಅವಮಾನಕ್ಕೆ ಸರಿಯಾದ ಸಮಯದಲ್ಲಿ ಉತ್ತರ ಕೊಡ್ತೀನಿ ಅಂತಾ ವಾರ್ನಿಂಗ್ ನೀಡಿದ್ರು.

    ಈ ಮಧ್ಯೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಈಶ್ವರಪ್ಪ, ರವಿಕುಮಾರ್ ಈ ಬೆಳವಣಿಗೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಲೇ, ಶೀಘ್ರವೇ ಎಲ್ಲಾ ಸರಿ ಹೋಗುವ ಭರವಸೆ ವ್ಯಕ್ತಪಡಿಸ್ತಿದ್ದಾರೆ. ಇದನ್ನೂ ಓದಿ: ಕೇಂದ್ರದ ಅಕ್ಕಿ ಬೇಕಿದ್ದರೆ ನಮ್ಮನ್ನು ಕೇಳಿಯೇ ಘೋಷಣೆ ಮಾಡ್ಬೇಕು: ಪ್ರಲ್ಹಾದ್ ಜೋಶಿ

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ʻಟಗರು ಪಲ್ಯʼ ಚಿತ್ರದಲ್ಲಿ ನಟಿಸಿದ 7 ಸ್ಟಾರ್‌ ಸುಲ್ತಾನ್‌ ಕುರ್ಬಾನಿಗೆ ಭಾರೀ ವಿರೋಧ

    ʻಟಗರು ಪಲ್ಯʼ ಚಿತ್ರದಲ್ಲಿ ನಟಿಸಿದ 7 ಸ್ಟಾರ್‌ ಸುಲ್ತಾನ್‌ ಕುರ್ಬಾನಿಗೆ ಭಾರೀ ವಿರೋಧ

    ಬಾಗಲಕೋಟೆ: ಸೋಲಿಲ್ಲದ ಸರದಾರ ಎಂದೇ ಖ್ಯಾತಿ ಪಡೆದಿರುವ ʻ7 ಸ್ಟಾರ್ ಸುಲ್ತಾನ್ ಖಾನ್ʼ ಎಂಬ ಟಗರನ್ನ (Tagaru) ಕುರ್ಬಾನಿಗೆ ಮಾಡಲು ಭಾರೀ ವಿರೋಧ ವ್ಯಕ್ತವಾಗುತ್ತಿದೆ.

    ಬಾಗಲಕೋಟೆ (Bagalkote) ತಾಲೂಕಿನ ಸುತಗುಂಡಾರ್ ಗ್ರಾಮದ ಯುನೀಸ್ ಗಡೇದ್ ಎಂಬ ವ್ಯಕ್ತಿ, ಬಕ್ರೀದ್‌ ಹಬ್ಬಕ್ಕೆ (Bakrid Festival) ಕುರ್ಬಾನಿಗಾಗಿ ಎರಡೂವರೆ ವರ್ಷದ ಹಿಂದೆ ರಾಂಪುರ್ ಗ್ರಾಮದ ಬಸು ಎಂಬುವರಿಂದ 1.88 ಲಕ್ಷ ರೂ. ನೀಡಿ ಈ ‌ಟಗರನ್ನ ಖರೀದಿಸಿದ್ದರು. ಆದ್ರೆ ಕುರ್ಬಾನಿ ಕೊಡೋ ಮುನ್ನ ಆ ಟಗರನ್ನ ಕಾಳಗಕ್ಕೆ ಇಳಿಸಿದ್ದರು. ಕಾಳಗದಲ್ಲಿ ಟಗರು ಜಯಭೇರಿ ಬಾರಿಸಿತ್ತು. ಇದನ್ನೂ ಓದಿ: 2ನೇ ವೀಕೆಂಡ್‌ನಲ್ಲೂ ಮಹಿಳೆಯರ ‘ಶಕ್ತಿ’ ಪ್ರದರ್ಶನ – ಯಾವ ಬಸ್‌ನಲ್ಲಿ ಎಷ್ಟು ಮಂದಿ ಪ್ರಯಾಣ?

    ಆ ನಂತರ ಯುನೀಸ್‌ ಎಲ್ಲ ಕಾಳಗಗಳಿಗೂ ಟಗರನ್ನ ಇಳಿಸಲು ಮುಂದಾರು. ಟಗರು ಹೋದಲೆಲ್ಲಾ ಜಯಭೇರಿ ಬಾರಿಸುತ್ತಾ ತನ್ನದೇ ಅಭಿಮಾನಿ ವರ್ಗವನ್ನ ಸೃಷ್ಟಿಸಿಕೊಂಡಿತು. ಆದ್ದರಿಂದ ಮಾಲೀಕ ಯುನೀಸ್‌ ಈ ಟಗರಿಗೆ ಪ್ರೀತಿಯಿಂದ ʻ7 ಸ್ಟಾರ್ ಸುಲ್ತಾನ್ʼ ಎಂಬ ಹೆಸರನ್ನಿಟ್ಟರು. ಇಲ್ಲಿಯ ವರೆಗೆ ಈ ಸೆವನ್ ಸ್ಟಾರ್ ಸುಲ್ತಾನ್ ಟಗರು 34 ಕಾಳಗದಲ್ಲಿ ಜಯ ಸಾಧಿಸಿ, 20 ಲಕ್ಷಕ್ಕೂ ಹೆಚ್ಚು ಹಣವನ್ನ ಸಂಪಾದಿಸಿಕೊಟ್ಟಿದೆ. ಅಷ್ಟು ಸಾಲದೆಂಬಂತೆ 3 ಎಚ್‌ಎಫ್‌ ಡೀಲಕ್ಸ್‌ ಬೈಕ್‌ ಇನ್ನೂ ಅನೇಕ ಬಹುಮಾನಗಳನ್ನ ಗೆದ್ದುಕೊಟ್ಟಿದೆ. ಇದನ್ನೂ ಓದಿ: 1,500 ಮಹಿಳೆಯರಿಂದ ಸೇನಾ ವಾಹನಗಳಿಗೆ ಮುತ್ತಿಗೆ – 12 ದಾಳಿಕೋರರ ಬಿಡುಗಡೆ

    ಅಲ್ಲದೇ ತೆರೆ ಕಾಣದ ಡಾಲಿ ಧನಂಜಯ್ ಅಭಿನಯದ ʻಟಗರು ಪಲ್ಯʼ ಚಿತ್ರದಲ್ಲಿ ಅಭಿನಯಿಸಿ, ಈ ಸೆವನ್ ಸ್ಟಾರ್ ಸುಲ್ತಾನ್‌ ಮತ್ತಷ್ಟು ಸುದ್ದಿಯಾಗಿತ್ತು. ಇದೀಗ ಯುನೀಸ್‌ ಗಡೇದ್‌ ಈ ಬಾರಿಯ ಬಕ್ರೀದ್ ಹಬ್ಬಕ್ಕೆ ಟಗರನ್ನ ಕುರ್ಬಾನಿ ಮಾಡಲು ನಿರ್ಧರಿಸಿದ್ದಾರೆ. ಇದು ಸುಲ್ತಾನ್ ಟಗರು ಅಭಿಮಾನಿಗಳಿಗೆ ಬೇಸರ ತರಿಸಿದೆ. ಹೀಗಾಗಿ ಈ ಸುಲ್ತಾನ್ ಅಭಿಮಾನಿಗಳು ಸಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಮೂಲಕ ಟಗರನ್ನ ಕುರ್ಬಾನಿ ಮಾಡದಂತೆ ಮನವಿ ಮಾಡುವ ಅಭಿಯಾನ ಶುರುಮಾಡಿಕೊಂಡಿದ್ದಾರೆ.

  • 81ರ ಇಳಿ ವಯಸ್ಸಿನಲ್ಲೂ ಇಂಗ್ಲಿಷ್ ಎಂಎ ಪರೀಕ್ಷೆ ಬರೆದು ಯುವಕರಿಗೆ ಸ್ಫೂರ್ತಿಯಾದ ವೃದ್ಧ

    81ರ ಇಳಿ ವಯಸ್ಸಿನಲ್ಲೂ ಇಂಗ್ಲಿಷ್ ಎಂಎ ಪರೀಕ್ಷೆ ಬರೆದು ಯುವಕರಿಗೆ ಸ್ಫೂರ್ತಿಯಾದ ವೃದ್ಧ

    ವಿಜಯಪುರ: ಕಲಿಕೆಗೆ ವಯಸ್ಸು ಎಂಬುವುದಿಲ್ಲ. ದೇಹಕ್ಕೆ ವಯಸ್ಸಾಗಬಹುದೇ ಹೊರತು ಕಲಿಕಾಸಕ್ತಿಗೆ ಇಲ್ಲ ಎಂಬುದನ್ನು ವಿಜಯಪುರದ (Vijayapura) 81 ವರ್ಷದ ಹಿರಿಯ ನಾಗರಿಕರೊಬ್ಬರು ಪರೀಕ್ಷೆ ಬರೆಯುವ ಮೂಲಕ ತೋರಿಸಿ ಕೊಟ್ಟಿದ್ದಾರೆ.

    ನಗರದ ಪ್ರತಿಷ್ಠಿತ ಬಿಎಲ್‌ಡಿಇ (BLDE) ಸಂಸ್ಥೆಯ ನರ್ಸಿಂಗ್ ಕಾಲೇಜಿನಲ್ಲಿ ನಡೆಯುತ್ತಿರುವ ಇಗ್ನೋ (ಇಂದಿರಾ ಗಾಂಧಿ ಮುಕ್ತ ವಿಶ್ವವಿದ್ಯಾಲಯ) ಪರೀಕ್ಷೆಯಲ್ಲಿ ಎಂಎ ಇಂಗ್ಲಿಷ್ (MA English) ಅಂತಿಮ ವರ್ಷದ ಪರೀಕ್ಷೆ ಬರೆಯುವ ಮೂಲಕ ನಿಂಗಯ್ಯ ಒಡೆಯರ ಎಲ್ಲರ ಗಮನ ಸೆಳೆದಿದ್ದಾರೆ. ನಿಂಗಯ್ಯ ಒಡೆಯರ ಅವರ 5ನೇ ಸ್ನಾತಕೋತ್ತರ ಪರೀಕ್ಷೆ ಇದಾಗಿದ್ದು, ಅವರಲ್ಲಿ ಓದಿನ ಬಗ್ಗೆ ಇರುವ ಹಂಬಲ ಮತ್ತು ಇಚ್ಛಾಶಕ್ತಿ, ವಿದ್ಯಾಭ್ಯಾಸವನ್ನು ಅರ್ಧಕ್ಕೆ ಮೊಟಕುಗೊಳಿಸುವವರಿಗೆ ಮಾದರಿಯಾಗಿದೆ. ಇದನ್ನೂ ಓದಿ: ಕರೆಂಟ್ ಬಿಲ್ ಏರಿಕೆಯ ಬೆನ್ನಲ್ಲೇ ಸದ್ದಿಲ್ಲದೆ ಮದ್ಯ ಬೆಲೆ ಏರಿಕೆ ಮಾಡಿದ ಅಬಕಾರಿ ಇಲಾಖೆ

    ಬಾಗಲಕೋಟೆ (Bagalkote) ಜಿಲ್ಲೆಯ ಇಳಕಲ್ (Ilkal) ತಾಲೂಕಿನ ಗುಡೂರು ಬಳಿಯ ಎಸ್‌ಸಿ ಹಳ್ಳಿಯವರಾಗಿರುವ ನಿಂಗಯ್ಯ ಒಡೆಯರ ಅವರಿಗೆ ಇಬ್ಬರು ಗಂಡು ಮತ್ತು ಓರ್ವ ಹೆಣ್ಣು ಮಗಳಿದ್ದಾಳೆ. ಅಲ್ಲದೇ ಐದು ಜನ ಮೊಮ್ಮಕ್ಕಳಿದ್ದಾರೆ. ಆದರೆ ಇವರ ವಿದ್ಯಾರ್ಜನೆಗೆ ಯಾವುದೂ ಅಡ್ಡಿಯಾಗಿಲ್ಲ. ಇವರ ಮಗಳು ಕೂಡ ಪಿಎಚ್‌ಡಿ (PhD) ಪದವಿ ಪಡೆದಿದ್ದಾರೆ. ಇನ್ನು ಗಂಡು ಮಕ್ಕಳು ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ಅಪಘಾತದಲ್ಲಿ ಬದುಕುಳಿದ ಯಾತ್ರಿಕ ಹೃದಯಾಘಾತದಿಂದ ಸಾವು

    ಸರ್ಕಾರಿ ನೌಕರಿಯಲ್ಲಿದ್ದ ಇವರು ಸೇವಾ ನಿವೃತ್ತಿಯ ನಂತರ ಮತ್ತಷ್ಟು ಕಲಿಯಬೇಕು ಎಂಬ ಹಂಬಲದಿಂದ ಈಗಾಗಲೇ ಕನ್ನಡ, ಹಿಂದಿ ಮತ್ತು ಇಂಗ್ಲಿಷ್ ವಿಷಯಗಳಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅಲ್ಲದೇ ಇಗ್ನೋದಿಂದ (IGNOU) ಸಮಾಜಶಾಸ್ತ್ರ ಸ್ನಾತಕೋತ್ತರ ಪದವಿಯನ್ನೂ ಇವರು ಪಡೆದಿದ್ದಾರೆ. ಆದರೂ ಇವರಿಗೆ ಓದುವ ಮತ್ತು ಪರೀಕ್ಷೆ ಬರೆಯುವ ಹವ್ಯಾಸ ಮಾತ್ರ ಕಡಿಮೆಯಾಗದಿರುವುದು ಗಮನಾರ್ಹವಾಗಿದೆ. ಇದನ್ನೂ ಓದಿ: ಇಲಿ ಕೊಲ್ಲಲೆಂದು ವಿಷ ಸವರಿ ಇಟ್ಟ ಹಣ್ಣು ತಿಂದು ಯುವತಿ ಸಾವು!

    ತಮ್ಮ ಈ ಸಾಧನೆಗೆ ತಮ್ಮ ಧರ್ಮ ಪತ್ನಿ ಕಾರಣ ಎಂದು ಸಂತಸದಿಂದ ಹೇಳುವ ನಿಂಗಯ್ಯ ಒಡೆಯರ, 81ರ ಇಳಿ ವಯಸ್ಸಿನಲ್ಲಿಯೂ ಯೋಗಪಟುವಾಗಿದ್ದಾರೆ. ವಿಶಿಷ್ಠವಾದ ಸಾಹಸಗಳನ್ನ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಇದೀಗ ನಡೆಯುತ್ತಿರುವ ಸ್ನಾತಕೋತ್ತರ ಪರೀಕ್ಷೆಯಲ್ಲಿ ನಿಂಗಯ್ಯ ಒಡೆಯರ ಎಲ್ಲರ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದು, ಪರೀಕ್ಷೆಗೆ ಹಾಜರಾಗುತ್ತಿರುವ ಇತರ ಅಭ್ಯರ್ಥಿಗಳಿಗೆ ಸ್ಪೂರ್ತಿಯಾಗಿದ್ದಾರೆ ಎಂದು ಇಗ್ನೋ ಅಧ್ಯಯನ ಕೇಂದ್ರದ ಸಂಯೋಜಕ ಡಾ. ನಿಂಗನಗೌಡ ಪಾಟೀಲ್ ಹೇಳಿದ್ದಾರೆ. ಇದನ್ನೂ ಓದಿ: ಕರಾವಳಿಯಿಂದ 640 ಕಿ.ಮೀ ದೂರದಲ್ಲಿರೋ ಬಿಪರ್ಜೋಯ್ ಚಂಡಮಾರುತ – ಕರ್ನಾಟಕ ಸೇರಿ 3 ರಾಜ್ಯಗಳಿಗೆ ಅಲರ್ಟ್

    ನಿಂಗಯ್ಯ ಒಡೆಯರ ಅವರ ಈ ಹುಮ್ಮಸ್ಸಿನ ಬಗ್ಗೆ ಇಗ್ನೋ ಪ್ರಾಂತ ನಿರ್ದೇಶಕ ಡಾ.ಎ.ವರದರಾಜನ್, ಸಹಾಯಕ ನಿರ್ದೇಶಕ ಡಾ.ಬಿ.ಎನ್.ದೇವೇಂದ್ರ, ಬಿ.ಎಲ್.ಡಿ.ಇ ನರ್ಸಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಶಾಲ್ಮೊನ್ ಚೋಪಡೆ, ಇಗ್ನೋ ಸಹ ಸಂಯೋಜಕ ಡಾ. ಸತೀಶ್ ನಡಗಡ್ಡಿ ಸಂತಸ ವ್ಯಕ್ತಪಡಿಸಿದ್ದು, ಅಭಿನಂದನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಬಳ್ಳಾರಿಯಲ್ಲಿ ಆರಂಭವಾಯ್ತಾ ದ್ವೇಷ ರಾಜಕಾರಣ?- ಪರೋಕ್ಷವಾಗಿ ಶ್ರೀರಾಮುಲುಗೆ ಎಚ್ಚರಿಕೆ ಕೊಟ್ಟ ಸಚಿವ ನಾಗೇಂದ್ರ

  • ಬಾಗಲಕೋಟೆಯಲ್ಲಿದೆ ಸೆಂಗೊಲ್ ರಾಜದಂಡ ಹೋಲುವ ಕಲಾಕೃತಿ – ಏನಿದರ ವಿಶೇಷತೆ?

    ಬಾಗಲಕೋಟೆಯಲ್ಲಿದೆ ಸೆಂಗೊಲ್ ರಾಜದಂಡ ಹೋಲುವ ಕಲಾಕೃತಿ – ಏನಿದರ ವಿಶೇಷತೆ?

    ಬಾಗಲಕೋಟೆ: ನೂತನ ಸಂಸತ್ ಭವನದ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಸಂಸತ್ ಭವನದ ಆಕರ್ಷಣಾ ಕೆಂದ್ರಬಿಂದುವಾಗಿರುವ ಸೆಂಗೊಲ್ (Sengol) ಪ್ರತಿಷ್ಠಾಪನೆ ದೇಶದಾದ್ಯಂತ ಚರ್ಚೆಗೆ ಕಾರಣವಾಗಿದೆ. ಇದರ ಮಧ್ಯೆ ಸೆಂಗೊಲ್ ರಾಜದಂಡದ ನಂಟು ಬಾಗಲಕೋಟೆ (Bagalkote) ಜಿಲ್ಲೆಗೂ ವ್ಯಾಪಿಸಿದೆ. ಐತಿಹಾಸಿಕ ತಾಣವಾದ ಬಾಗಲಕೋಟೆಯಲ್ಲಿ ಸೆಂಗೊಲ್ ಪ್ರತಿರೂಪ ಕಲಾಕೃತಿಯಲ್ಲಿ ಕಂಡು ಬಂದಿರುವುದು ಕುತೂಹಲಕ್ಕೆ ಕಾರಣವಾಗಿದೆ.

    ಬಾದಾಮಿ (Badami) ತಾಲೂಕಿನ ಪಟ್ಟದಕಲ್ಲು (Pattadakal) ಗ್ರಾಮದ ವಿರೂಪಾಕ್ಷ ದೇವಾಲಯದ (Virupaksha Temple) ಬಲ ಗೋಡೆಯ ಮೇಲೆ ಸೆಂಗೋಲ್ ಪ್ರತಿರೂಪದ ಕಲಾಕೃತಿ ಎಲ್ಲರ ಗಮನ ಸೆಳೆಯುತ್ತಿದೆ. ದೇವಾಲಯದ ಗೋಡೆಯ ಮೇಲೆ ಕಲಾವಿದನಿಂದ ಕೆತ್ತಲ್ಪಟ್ಟ ಕಲಾಕೃತಿ ಸೆಂಗೊಲ್‌ಗೆ ಸಾಮ್ಯತೆ ಹೊಂದಿದೆ. ಕಲಾಕೃತಿಯಲ್ಲಿ ನಾಟ್ಯರೂಪದ ಚತುರ್ಭುಜದ ಶಿವನ ಎಡಗೈನಲ್ಲಿ ಸೆಂಗೊಲ್ ಕಾಣಿಸುತ್ತಿದೆ. ಸೆಂಗೊಲ್ ಮೇಲೆ ನಂದಿಯ ಕೆತ್ತನೆಯಾಗಿದೆ. ಅಜ್ಞಾನದ ಸಂಕೇತವಾಗಿರುವ ಮೂರ್ತಿಯನ್ನು ನಾಶಪಡಿಸಿ, ದುಷ್ಟಶಕ್ತಿಯನ್ನು ಕಾಲಿನಿಂದ ನಿರ್ನಾಮ ಮಾಡುವ ರೂಪದಲ್ಲಿ ಶಿವನ ಮೂರ್ತಿಯ ಕಲಾಕೃತಿ ಕೆತ್ತನೆಯಾಗಿದೆ. ಇದನ್ನೂ ಓದಿ: ಹೊಸ ಸಂಸತ್‌ನಲ್ಲಿ `ಸೆಂಗೋಲ್’ ಸಮರ – ಅಧಿಕಾರ ಹಸ್ತಾಂತರದ ರಾಜದಂಡಕ್ಕೆ ಸಾಕ್ಷ್ಯವೇ ಇಲ್ಲ ಅಂತಿದೆ ಕಾಂಗ್ರೆಸ್

    ಚಾಲುಕ್ಯರ ಲೋಕಮಹಾದೇವಿ ಕಟ್ಟಿಸಿದ ದೇವಾಲಯದಲ್ಲಿ ಈ ಕಲಾಕೃತಿ ಕಂಡು ಬಂದಿದ್ದು, ಈ ಒಂದು ರಾಜಮುದ್ರೆ ಸೆಂಗೊಲ್ 7ನೇ ಶತಮಾನದಲ್ಲಿ ಚಾಲನೆಯಲ್ಲಿತ್ತು ಎನ್ನುವುದಕ್ಕೆ ಸಾಕ್ಷಿಯಾಗಿದೆ. ಚಾಲುಕ್ಯ ದೊರೆ ಎರಡನೇ ವಿಕ್ರಮಾದಿತ್ಯ ಕಂಚಿ ಪಲ್ಲವರ ಮೇಲೆ ಯುದ್ಧಸಾರಿ ಜಯ ಸಾಧಿಸಿದ ನೆನಪಿಗಾಗಿ ಕಟ್ಟಿಸಲ್ಪಟ್ಟಿರುವ ವಿರೂಪಾಕ್ಷ ದೇವಾಲಯದ ಗೋಡೆಯ ಮೇಲೆ ಕಂಡುಬಂದಿರುವುದು ಕುತೂಹಲಕ್ಕೆ ಕಾರಣವಾಗಿದೆ. ಇದನ್ನೂ ಓದಿ: ನೂತನ ಸಂಸತ್ ಭವನದಲ್ಲಿ ಇಡಲಾಗುತ್ತದೆ ಚಿನ್ನದ ರಾಜದಂಡ – ಸೆಂಗೊಲ್ ವಿಶೇಷತೆ ಏನು?