ಬೆಂಗಳೂರು : ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯವನ್ನು (Bagalkote Horticulture University) ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ (Chaluvaraya Swamy) ಸ್ಪಷ್ಟಪಡಿಸಿದರು.
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಹನುಮಂತ ನಿರಾಣಿ ಪ್ರಶ್ನೆ ಕೇಳಿದ್ರು. ಸರ್ಕಾರ ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯವನ್ನ ಸಮಗ್ರ ವಿವಿ ಮಾಡಲು ಸರ್ಕಾರ ಹೊರಟಿದೆ .ಮಂಡ್ಯದಲ್ಲಿ ಸಮಗ್ರ ವಿವಿ ಮಾಡಲು ಸರ್ಕಾರ ಹೊರಟಿದೆ. ಈ ಮೂಲಕ ಬಾಗಲಕೋಟೆ ವಿವಿ ಮುಚ್ಚುವ ಹುನ್ನಾರ ಮಾಡುತ್ತಿದೆ. ಯಾವುದೇ ಕಾರಣಕ್ಕೂ ಬಾಗಲಕೋಟೆ ತೋಟಗಾರಿಕೆ ವಿವಿಯನ್ನು ಮುಚ್ಚಬಾರದು, ಮಂಡ್ಯಗೆ ಬದಲಾವಣೆ ಮಾಡಬಾರದು ಅಂತ ಒತ್ತಾಯ ಮಾಡಿದರು. ಇದನ್ನೂಓದಿ: ಧರ್ಮಸ್ಥಳ ಬುರುಡೆ ಕೇಸ್| ಯಾರದ್ದೋ ಫೋಟೋ ತೋರಿಸಿ ಪುತ್ರಿ ಎಂದು ಸುಳ್ಳು ಹೇಳಿದ ಸುಜಾತ ಭಟ್!
ಇದಕ್ಕೆ ಸಚಿವ ಚೆಲುವರಾಯಸ್ವಾಮಿ ಉತ್ತರ ನೀಡಿ, ಸಮಗ್ರ ವಿವಿ ಮಾಡುವ ಹಿನ್ನೆಲೆಯಲ್ಲಿ ವಿಜಯ್ ಭಾಸ್ಕರ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ. ಇನ್ನು ವರದಿ ಬಂದಿಲ್ಲ. ವರದಿ ಬಂದ ಮೇಲೆ ಚರ್ಚೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ. ಯಾವುದೇ ಕಾರಣಕ್ಕೂ ಬಾಗಲಕೋಟೆ ತೋಟಗಾರಿಕೆ ವಿವಿಯನ್ನ ಮುಚ್ಚುವುದಿಲ್ಲ ಮತ್ತು ವಿಲೀನ ಮಾಡುವುದಿಲ್ಲ. ಯಾವುದೇ ಕಡೆ ಶಿಫ್ಟ್ ಕೊಡೋದು ಇಲ್ಲ ಎಂದು ಹೇಳಿದರು.
ಬಾಗಲಕೋಟೆ: ಚಾಲಕನ ಅಚಾತುರ್ಯದಿಂದ ಎರಡು ಬಸ್ಸುಗಳಿಗೆ ಲಾರಿ (Lorry) ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ಬಾಗಲಕೋಟೆ (Bagalkote) ತಾಲೂಕಿನ ಸಿದ್ನಾಳ್ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 218 ರಲ್ಲಿ ರಲ್ಲಿ ನಡೆದಿದೆ.
ಮುಧೋಳ ಮೂಲದ ಲಾರಿ ಇದಾಗಿದ್ದು, ಸುಣ್ಣದ ಕಲ್ಲು ಲೋಡ್ ತುಂಬಿಕೊಂಡು ಹುಬ್ಬಳ್ಳಿ ಕಡೆಗೆ ಹೊರಟಿತ್ತು. ಈ ವೇಳೆ ಚಾಲಕ ಅಚಾತುರ್ಯದಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಬಸ್ಸಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು, ನಂತರ ವಿಜಯಪುರ ಕಡೆಗೆ ಹೊರಟಿದ್ದ ಬಸ್ಸಿನ ಮುಂಭಾಗಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.
ಎರಡು ಬಸ್ಸುಗಳಿಗೆ ಲಾರಿ ಗುದ್ದಿದ್ದರಿಂದ ನಿರ್ವಾಹನ ತಲೆಗೆ ಗಾಯವಾಗಿದ್ದು, ಲಾರಿ ಚಾಲಕನ ಕೈ ಕಾಲಿಗೆ ಗಂಭೀರ ಗಾಯವಾಗಿದೆ. ಇಬ್ಬರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಲಾರಿ ಚಾಲಕ ವೇಗವಾಗಿ ವಾಹನ ಚಲಾಯಿಸಿದ್ದರಿಂದ ಈ ಘಟನೆ ಸಂಭವಿಸಿದೆ.
ಯಾವುದೇ ಪ್ರಾಣಹಾನಿ ಸಂಭವಿಸದ ಕಾರಣ ನಡೆಯಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದೆ. ಬಸ್ಸಿನಲ್ಲಿದ್ದ ಸುಮಾರು ಐದಾರು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾರಿಗೂ ದೊಡ್ಡ ಪ್ರಮಾಣದ ಹಾನಿಯಾಗಿಲ್ಲ. ಸ್ಥಳಕ್ಕೆ ಆಗಮಿಸಿದ ಕಲಾದಗಿ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
– ಮುಧೋಳ ಹಿಂದುಳಿದ ವರ್ಗಗಳ ಕಲ್ಯಾಣ ಕಚೇರಿಗೆ ಬರುತ್ತಿಲ್ಲ ಜನ – ನಗರದಿಂದ 3 ಕಿ.ಮೀ ದೂರದಲ್ಲಿದೆ ಆಫೀಸ್
ಬಾಗಲಕೋಟೆ: ಸರ್ಕಾರದ ಯೋಜನೆಗಳನ್ನು ಪಡೆಯಬೇಕು ಎನ್ನುವ ಕನಸು, ಆಸೆ ಎಲ್ಲ ಹಿಂದುಳಿದ ವರ್ಗದವರಿಗೂ ಇರುತ್ತದೆ. ಆದರೆ ಮೂರು ಮೈಲಿ ದೂರದಲ್ಲಿರುವ ಕಚೇರಿ ತಲುಪುವುದೇ ಹರಸಾಹಸ. ಕಚೇರಿ ಮೆಟ್ಟಿಲು ಹತ್ತುವುದೊರಳಗೆ ಸಾಕಪ್ಪ ಸಾಕು ಎನಿಸಿ ಬಿಡುತ್ತದೆ.
ಹೌದು, ಬಾಗಲಕೋಟೆ (Bagalkote) ಜಿಲ್ಲೆಯಲ್ಲಿ, ಹಿಂದುಳಿದ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿರುವ ಅದರಲ್ಲೂ ಹಿಂದುಳಿದವರಿಗಾಗಿ ಮೀಸಲಿರುವ ಹಿಂದುಳಿದ ವರ್ಗಗಳ ತಾಲೂಕ ಕಚೇರಿಯ ಕಥೆ-ವ್ಯಥೆ ಇದು. ಮುಧೋಳ (Mudhol) ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ (BCM Office) ಕಛೇರಿಯ ಸ್ಥಿತಿ ಇದು. ನಗರದ ಪ್ರಮುಖ ಜನ ವಸತಿ ಪ್ರದೇಶ, ಪ್ರಮುಖ ಬೀದಿಗಳಲ್ಲಿ ಇರಬೇಕಿದ್ದ ಇಲಾಖೆ ಕಚೇರಿ, ನಗರದಿಂದ ಬರೋಬ್ಬರಿ 3 ಕಿ.ಮೀ ದೂರದಲ್ಲಿದೆ. ಇದು ಸಾರ್ವಜನಿಕರಿಗೆ ವರದಾನ ಆಗುವ ಬದಲು ನತದೃಷ್ಟ ಇಲಾಖೆ ಎನ್ನುವ ಹಣೆಪಟ್ಟಿ ಕಟ್ಟಿಕೊಂಡಿದೆ.
ಅತೀ ಹೆಚ್ಚಿನ ಪ್ರಮಾಣದಲ್ಲಿ ಯೋಜನೆಗಳು ಇರುವುದೇ ಹಿಂದುಳಿದ ವರ್ಗಗಗಳ ಇಲಾಖೆಯಲ್ಲ. ಮುಖ್ಯವಾಗಿ ವಿದ್ಯಾರ್ಥಿಗಳ ಶಿಕ್ಷಣ, ವಸತಿ, ರೈತರಿಗೆ ಗಂಗಾ ಕಲ್ಯಾಣ ಸೇರಿ ಅನೇಕ ಯೋಜನೆಗಳು ಜಾರಿಯಲ್ಲಿವೆ. ಮುಧೋಳ ತಾಲೂಕಿನಲ್ಲಿ ಹತ್ತಾರು ಸರ್ಕಾರಿ ವಸತಿ ನಿಲಯಗಳು ಈ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಈವರೆಗೆ ಸ್ವಂತ ಜಾಗ, ಕಟ್ಟಡ ಹೊಂದಿಲ್ಲ. ಈ ಬಗ್ಗೆ ಅಧಿಕಾರಿಗಳು, ಜನಪ್ರತಿನಿಧಿಗಳು ಗಮನ ಹರಿಸಿಲ್ಲ ಎನ್ನುವುದೇ ದುರಂತದ ಸಂಗತಿ. ಇದನ್ನೂಓದಿ: ಧರ್ಮಸ್ಥಳ ಬುರುಡೆ ರಹಸ್ಯ – 13ನೇ ಸ್ಥಳದಲ್ಲಿ ಮೂಳೆ ಸಿಗದೇ ಇದ್ರೆ ತನಿಖೆ ಸ್ಥಗಿತ?
ಬೀಳಗಿ, ಗಲಗಲಿ ರಸ್ತೆ ಪಕ್ಕದ ಸೈಯದಸಾಬ ದರ್ಗಾ ಹಿಂಭಾಗದಲ್ಲಿರುವ ದೇವರಾಜ ಅರಸು ಭವನ ಕಟ್ಟಡದಲ್ಲಿ ಹಿಂದುಳಿದ ವರ್ಗಗಳ ಇಲಾಖೆ ಕಚೇರಿ ಕಾರ್ಯನಿರ್ವಹಿಸುತ್ತಿದೆ. ಅದು ಕೂಡ ಕಳಪೆ ಕಟ್ಟಡ ಎನ್ನುವುದು ಕಚೇರಿ ಒಳಗೆ ಕಾಲಿಟ್ಟರೆ ಸಾಕು ಗೋಡೆಗಳೇ ಸಾರಿ ಸಾರಿ ಹೇಳುತ್ತವೆ. ಈ ಕಚೇರಿ ತಲುಪಬೇಕಾದರೆ ಸ್ವಂತ ವಾಹನ ಖಂಡಿತ ಬೇಕು. ಇಲ್ಲವಾದಲ್ಲಿ ಕಾಲ್ನಡಿಗೆಯಲ್ಲಿ ಕನಿಷ್ಠ ಮೂರು ಕಿಲೋ ಮೀಟರ್ ನಡೆದೇ ಸಾಗಬೇಕು. ಕಚೇರಿ ತಲುಪಬೇಕಾದ್ರೆ ಸರ್ಕಾರಿ ಬಸ್, ವಾಹನದ ಸೌಲಭ್ಯ ಇಲ್ಲ. ಅದರಲ್ಲೂ ಗ್ರಾಮೀಣ ಪ್ರದೇಶದ ಜನರು ಈ ಕಚೇರಿಯನ್ನೇ ಅವಲಂಬಿಸಿದ್ದಾರೆ.
ಕಚೇರಿ ಸ್ಥಳ ಪತ್ತೆ ಮಾಡಲು ಪರದಾಡುವುದನ್ನು ನೋಡಿದರ ಅಯ್ಯೋ ಭಗವಂತ ಯಾಕ ಬೇಕು ಹರಸಾಹಸ ಅಂತ ಅನಿಸಿ ಬಿಡುತ್ತದೆ. ನಿರ್ಜನ ಪ್ರದೇಶವಾಗಿರುವುದರಿಂದ ಆಟೋ ಸಂಚಾರ ದುರ್ಲಭ. ಜನಸಂದಣಿ ಇಲ್ಲದಿರುವುದು ಮತ್ತು ಪಕ್ಕದಲ್ಲಿ ಸ್ಮಶಾನ, ಕಲ್ಲಿನ ಕಣಿವೆಗಳು ಇರುವುದರಿಂದ ಒಂಟಿಯಾಗಿ ಮಹಿಳೆಯರು, ವಯೋವೃದ್ಧರು, ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕಚೇರಿಗೆ ಹೋಗಲು ಭಯ ಪಡುತ್ತಿದ್ದಾರೆ. ಕಚೇರಿ ಒಳಪ್ರವೇಶ ಮಾಡಲು ಅಂಗವಿಕಲರಿಗೆ ಬಹಳಷ್ಟು ತೊಂದರೆ ಎದುರಾಗುತ್ತದೆ. ಅವರ ಗೋಳಾಟ ದೇವರೇ ಬಲ್ಲ. ಕಚೇರಿಗೆ ದೂರವಾಣಿ ಸಂಪರ್ಕವೂ ಇಲ್ಲ. ಕಚೇರಿಯಲ್ಲಿನ ಅಧಿಕಾರಿಗಳು, ಸಿಬ್ಬಂದಿಯ ನಿಷ್ಕಾಳಜಿ, ಅಸಮರ್ಪಕ ಕಾರ್ಯನಿರ್ವಹಣೆ ಬೇಸರ ಉಂಟು ಮಾಡುತ್ತದೆ. ಆಡಳಿತ ವ್ಯವಸ್ಥೆ ಜನರಿಗೆ ಹತ್ತಿರವಿರಲಿ ಅಂತ ಸರ್ಕಾರ ಬಯಸುತ್ತಿದೆ. ಆದರೆ ಮುಧೋಳ ಹಿಂದುಳಿದ ವರ್ಗಗಳ ಇಲಾಖೆ ಜನರ ಸೇವೆಯಿಂದ ಬಹು ದೂರವಾಗುತ್ತಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲೂಕು ಕಚೇರಿ ನಗರದಿಂದ ಮೂರು ಕಿ.ಮೀ. ದೂರದಲ್ಲಿದೆ. ಪಕ್ಕದಲ್ಲಿ ಸ್ಮಶಾನ, ಕಲ್ಲಿನ ಕ್ವಾರಿ ಇದೆ. ಜನರ ಓಡಾಟ ಇಲ್ಲವೇ ಇಲ್ಲ. ಸೌಲಭ್ಯ ಪಡೆಯಲು ಹರಸಾಹಸ ಪಡಬೇಕು. ತಾಲೂಕು ಆಡಳಿತ ಭವನಕ್ಕೆ ಸ್ಥಳಾಂತರ ಮಾಡಬೇಕು. ಇಲ್ಲವೆ ಬಂದ್ ಮಾಡುವುದು ಒಳಿತು ಎಂದು ಜನರು ಆಕ್ರೋಶ ಹೊರ ಹಾಕ್ತಿದ್ದಾರೆ.
ಅವರ ಪ್ರೀತಿ, ಮಮತೆ ಮತ್ತು ಆಶೀರ್ವಾದ ನಮ್ಮ ಹೃದಯದಲ್ಲಿ ಸದಾ ಹಸಿರಾಗಿರುತ್ತದೆ. ಜೀವನದಲ್ಲಿ ಅವರು ಕಲಿಸಿದ ಸರಳತೆ ಮತ್ತು ನೀತಿ ಪಾಠಗಳು ನನಗೆ ಸನ್ಮಾರ್ಗದಲ್ಲಿ ನಡೆಯಲು ಸದಾ ಪ್ರೇರಣೆ ನೀಡುತ್ತಿರುತ್ತವೆ.
ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಕೋರುತ್ತೇನೆ.
2/2
ತಾಯಿಯ ಪ್ರೀತಿ, ಮಮತೆ ಮತ್ತು ಆಶೀರ್ವಾದ ನಮ್ಮ ಹೃದಯದಲ್ಲಿ ಸದಾ ಹಸಿರಾಗಿರುತ್ತದೆ. ಜೀವನದಲ್ಲಿ ಅವರು ಕಲಿಸಿದ ಸರಳತೆ ಮತ್ತು ನೀತಿ ಪಾಠಗಳು ನನಗೆ ಸನ್ಮಾರ್ಗದಲ್ಲಿ ನಡೆಯಲು ಸದಾ ಪ್ರೇರಣೆ ನೀಡುತ್ತಿರುತ್ತವೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಕೋರುತ್ತೇನೆ ಎಂದು ಲಿಂಬಾವಳಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಈ ಸಂಬಂಧ ವರ್ಷಾ ಜಮ್ಮನಕಟ್ಟಿ ಹಾಗೂ ಪ್ರದೀಪ್ ಅಳಗುಂದಿ ಇನ್ನಿತರರ ಮೇಲೆ ಗುಳೇದಗುಡ್ಡ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಡೆತ್ನೋಟ್ನಲ್ಲೇನಿದೆ?
ನನ್ನ ಸಾವಿಗೆ ಕಾರಣ ಈ ಮೂವರು ವ್ಯಕ್ತಿಗಳು. ನನ್ನ ಬದುಕಿನಲ್ಲಿ ಅವರು ಪರಿಣಾಮವನ್ನು ಬೀರಿದ್ದಾರೆ. ಅವರುಗಳೆಂದರೆ ವರ್ಷಾ, ಪ್ರದೀಪ್ ಮತ್ತು ಇನ್ನಿತರ ಸ್ನೇಹಿತರು. ನನ್ನ ಬಗ್ಗೆಯೇ ಮಾತನಾಡಿ ನನ್ನನ್ನು ಮಾನಸಿಕವಾಗಿ ಕುಗ್ಗಿಸಿದ್ದಾರೆ. ಅವರು ನನ್ನ ಬದುಕಿನ ಮಾರಕ ವ್ಯಕ್ತಿಗಳಾಗಿರುತ್ತಾರೆ. ಇವರನ್ನು ಸುಮ್ಮನೆ ಬಿಡಬಾರದು. ಸೇಯಿಂಗ್ ಗುಡ್ ಬೈ ಎಂದು ಸಹಿ ಹಾಕಿ ಅಂಜಲಿ ಡೆತ್ನೋಟ್ ಬರೆದಿದ್ದಾಳೆ.
ಬಾಗಲಕೋಟೆ: ಪಿಯುಸಿಯಲ್ಲಿ ಉತ್ತಮ ಅಂಕಗಳಿಸಿದ್ರೂ ಪದವಿ ಪ್ರವೇಶಾತಿಗೆ ಹಣವಿಲ್ಲದೇ ಪರದಾಡುತ್ತಿದ್ದ ವಿದ್ಯಾರ್ಥಿನಿಗೆ ಟೀಂ ಇಂಡಿಯಾ ಆಟಗಾರ ರಿಷಭ್ ಪಂತ್ (Rishabh Pant) ಆರ್ಥಿಕ ನೆರವು ನೀಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ.
ಮಗಳು ಕಲಿಕೆಗೆ ಪರದಾಡುತ್ತಿದ್ದ ಈ ಸಂದರ್ಭದಲ್ಲಿ ಗ್ರಾಮದವರಾದ ಗುತ್ತಿಗೆದಾರ ಅನಿಲ್ ಹುಣಶಿಕಟ್ಟಿ ಅವರನ್ನು ಜಮಖಂಡಿ ಬಿಎಲ್ಡಿಇ ಸಂಸ್ಥೆಯ ಕಾಲೇಜಿನಲ್ಲಿ ಬಿಸಿಎಗೆ ಸೀಟ್ ಕೊಡಿಸುವಂತೆ ಕೋರಿಕೊಂಡಿದ್ದರು. ಅವರು ಸೀಟ್ ಕೊಡಿಸುವ ಜೊತೆಗೆ ಆರ್ಥಿಕ ನೆರವು ಒದಗಿಸುವುದಕ್ಕೂ ಪ್ರಯತ್ನಿಸುವ ಭರವಸೆ ನೀಡಿದ್ದರು.
ಅನಿಲ್ ಅವರು ರಿಷಭ್ ಪಂತ್ ಅವರಿಗೆ ಆತ್ಮೀಯರಾಗಿರುವ ಹಿನ್ನೆಲೆ ಈ ವಿಚಾರವನ್ನು ಪಂತ್ ಅವರ ಗಮನಕ್ಕೆ ತಂದಿದ್ದರು. ವಿಷಯ ತಿಳಿಯುತ್ತಿದ್ದಂತೆ ಟೀಂ ಇಂಡಿಯಾ ಆಟಗಾರ ಪಂತ್ ಅವರು ಜುಲೈ 17ರಂದು ಬಿಎಲ್ಡಿಇ ಕಾಲೇಜಿನ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡುವ ಮೂಲಕ ವಿದ್ಯಾರ್ಥಿನಿ ಜ್ಯೋತಿಗೆ ಆರ್ಥಿಕ ಬೆಂಬಲವನ್ನು ನೀಡಿದ್ದಾರೆ. ಇದನ್ನೂ ಓದಿ: ಯೆಲ್ಲೋ ಲೈನ್ ಮೆಟ್ರೋ ಉದ್ಘಾಟನೆಗೆ ಮೋದಿ ಆಗಮನ ಖಚಿತ – ಬಿಜೆಪಿ ಕಾರ್ಯಕರ್ತರ ಸಮಾವೇಶ, ರೋಡ್ ಶೋಗೆ ಕೊಕ್
ವಿದ್ಯಾರ್ಥಿನಿ ಜ್ಯೋತಿಯ ಮೊದಲ ಸೆಮಿಸ್ಟರ್ನ ಶುಲ್ಕ 40 ಸಾವಿರ ರೂ. ಹಣವನ್ನು ರಿಷಭ್ ಪಂತ್ ಪಾವತಿಸಿ ಮಾನವೀಯತೆ ಮರೆದ್ದಾರೆ. ಪುಟ್ಟ ಗ್ರಾಮದ ವಿದ್ಯಾರ್ಥಿನಿಗೆ ಯಾವುದೇ ಅಪೇಕ್ಷೆ ಇಲ್ಲದೆ ರಿಷಬ್ ಪಂತ್ ಅವರು ನೆರವಾಗುವುದರ ಮೂಲಕ ಎಲ್ಲರ ಗಮನ ಸೆಳೆದಿದ್ದು, ಅವರ ಈ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಅಪಾರ ಮೆಚ್ಚುಗೆ ವ್ಯಕ್ತವಾಗ್ತಿದೆ.
ಅಲ್ಲದೇ ರಿಷಭ್ ಪಂತ್ ಅವರ ಸಹಾಯಕ್ಕೆ ನಾನು ಚಿರಋಣಿಯಾಗಿರುತ್ತೇನೆ. ಅವರಿಗೆ ದೇವರು ಆಯುಸ್ಸು, ಅಂತಸ್ತು ಆರೋಗ್ಯ ಕೊಟ್ಟು ಕಾಪಾಡಲಿ. ಇನ್ನಷ್ಟು ಬಡ ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಶಕ್ತಿ ದೇವರು ಕರುಣಿಸಲಿ ಎಂದು ಅವರ ಸಹಾಯವನ್ನ ನೆನೆಸಿಕೊಂಡಿದ್ದಾರೆ.
ಬಾಗಲಕೋಟೆ: ಬೈಕ್ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಕಾರಿನ ಮೇಲೆ ಲಾರಿ (Lorry) ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ 218ರ ಸೀಮಿಕೇರಿ (Simikeri) ಬಳಿ ನಡೆದಿದೆ.
ಎದುರಿಗೆ ಬಂದ ಬೈಕ್ ಡಿಕ್ಕಿಯಾಗುವುದನ್ನೂ ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಲಾರಿ, ಕಾರಿನ ಮೇಲೆ ಪಲ್ಟಿಯಾಗಿ ಬೈಕ್ಗೂ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ದುರ್ಮರಣಕ್ಕಿಡಾಗಿದ್ದು, ಕಾರು ಸಂಪೂರ್ಣ ಅಪ್ಪಚ್ಚಿಯಾಗಿದೆ. ಬೈಕ್ನಲ್ಲಿದ್ದ ಓರ್ವನಿಗೆ ಗಂಭೀರ ಗಾಯಗಳಾಗಿವೆ. ಇದನ್ನೂ ಓದಿ: ತೆಲಂಗಾಣ | ಡಿವೈಡರ್ಗೆ ಪೊಲೀಸ್ ವಾಹನ ಡಿಕ್ಕಿ – ಇಬ್ಬರು ಡಿಎಸ್ಪಿ ಸಾವು
ಕಾರು ಮತ್ತು ಬೈಕ್ ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದು, ವಿಜಯಪುರದ ಕಡೆಗೆ ಪ್ಲಾಸ್ಟಿಕ್ ಚೀಲಗಳಿರುವ ಬ್ಯಾಗ್ ಹೊತ್ತುಕೊಂಡು ಲಾರಿ ಹೊರಟಿತ್ತು. ಸ್ಥಳಕ್ಕೆ ಕಲಾದಗಿ ಪೊಲೀಸರು ಭೇಟಿ ನೀಡಿದ್ದು, ಕಲಾದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಗಲಕೋಟೆ: ವ್ಯಕ್ತಿಯೊಬ್ಬ ತನ್ನ ಸಹೋದರನ 3 ವರ್ಷದ ಮಗುವನ್ನೇ ಕತ್ತು ಕೊಯ್ದು ಭೀಕರವಾಗಿ ಹತ್ಯೆ ಮಾಡಿರುವುದು ಹುನಗುಂದ ತಾಲೂಕಿನ ಬೆನಕನವಾರಿ ಗ್ರಾಮದಲ್ಲಿ ನಡೆದಿದೆ.
ಮಾರುತಿ ವಾಲಿಕಾರ ಎಂಬವರ 3 ವರ್ಷದ ಮಗು ಅಂಗನವಾಡಿಗೆ ತೆರಳಿತ್ತು. ಈ ವೇಳೆ, ಮಾರುತಿಯ ಸಹೋದರ ಭೀಮಪ್ಪ ವಾಲಿಕಾರ ಅಲ್ಲಿಗೆ ತೆರಳಿ, ಅಂಗನವಾಡಿಯ ಹಿಂಭಾಗದಲ್ಲಿ ಮಗುವಿನ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಬಾಗಲಕೋಟೆ ಮಾಜಿ ಶಾಸಕ ವೀರಣ್ಣ ಚರಂತಿಮಠ, ಸಂಸದ ಪಿಸಿ ಗದ್ದಿಗೌಡರ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಮಧ್ಯಾಹ್ನ ಆಸ್ಪತ್ರೆಗೆ ಧಾರವಾಡದ ಶಾಸಕ ಅರವಿಂದ್ ಬೆಲ್ಲದ್ ಭೇಟಿ ನೀಡಲಿದ್ದಾರೆ.
ಲೋ ಬಿಪಿ, ವಾಂತಿ, ಎದೆ ನೋವು, ತಲೆ ನೋವಿನಿಂದ ಬಳಲುತ್ತಿರುವ ಸ್ವಾಮೀಜಿ ಶನಿವಾರ ಆಸ್ಪತ್ರೆಗೆ ದಾಖಲಾಗಿದ್ದರು.