Tag: bagappa harijan

  • ಭೀಮಾತೀರದ ಬಾಗಪ್ಪ ಹರಿಜನ್ ಕೊಲೆ ಕೇಸ್ – 24 ಗಂಟೆಗಳಲ್ಲಿ ನಾಲ್ವರು ಆರೋಪಿಗಳು ಅರೆಸ್ಟ್

    ಭೀಮಾತೀರದ ಬಾಗಪ್ಪ ಹರಿಜನ್ ಕೊಲೆ ಕೇಸ್ – 24 ಗಂಟೆಗಳಲ್ಲಿ ನಾಲ್ವರು ಆರೋಪಿಗಳು ಅರೆಸ್ಟ್

    ವಿಜಯಪುರ: ಭೀಮಾತೀರದ ಬಾಗಪ್ಪ ಹರಿಜನ್ ಹತ್ಯೆ ಪ್ರಕರಣದ ಹಂತಕರಾದ ಪಿಂಟ್ಯಾ ಅಗರಖೇಡ್ ಸೇರಿ ನಾಲ್ವರನ್ನು ಗಾಂಧಿಚೌಕ ಪೊಲೀಸರು ಬಂಧಿಸಿದ್ದಾರೆ.

    ಎ1 ಆರೋಪಿ ಪ್ರಕಾಶ ಅಲಿಯಾಸ್ ಪಿಂಟ್ಯಾ ಅಗರಖೇಡ್ (25), ಎ2 ರಾಹುಲ್ ತಳಕೇರಿ (20), ಎ3 ಗದಿಗೆಪ್ಪ ಅಲಿಯಾಸ್ ಮಣಿಕಂಠ ದನಕೊಪ್ಪ (27), ಎ4 ಸುದೀಪ್ ಕಾಂಬಳೆ (23) ಬಂಧಿತ ಆರೋಪಿಗಳು.

    ಎಸ್ಪಿ ಲಕ್ಷ್ಮಣ ನಿಂಬರಗಿ, ಎಎಸ್ಪಿ ಶಂಕರ್ ಮಾರಿಹಾಳ, ಎಎಸ್ಪಿ ಹಟ್ಟಿ, ಡಿವೈಎಸ್ಪಿ ಬಸವರಾಜ್ ಎಲಿಗಾರ್, ಸಿಪಿಐ ಪ್ರದೀಪ್ ತಳಕೇರಿ, ಪಿಎಸ್‌ಐ ರಾಜು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ಕೇವಲ 24 ಗಂಟೆಯಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.

    ಆರೋಪಿ ಪಿಂಟ್ಯಾ, 2024 ಅಕ್ಟೋಬರ್ 8ರಂದು ಬಾಗಪ್ಪನ ಶಿಷ್ಯನಿಂದ ಹತನಾಗಿದ್ದ ರವಿ ಅಗರಖೇಡ್‌ನ ತಮ್ಮ. ಪಿಂಟ್ಯಾ ಸೇರಿ ಬಂಧಿತರೆಲ್ಲರೂ ಗೆಳೆಯರಾಗಿದ್ದರು.

  • ನನ್ ತಂಟೆಗೆ ಬಂದ್ರೆ ಹಣೆಗೆ ಗುಂಡು ಹೊಡೀತೀನಿ: ಭೀಮಾತೀರದ ಹಂತಕನ ಬಲಗೈ ಬಂಟ

    ನನ್ ತಂಟೆಗೆ ಬಂದ್ರೆ ಹಣೆಗೆ ಗುಂಡು ಹೊಡೀತೀನಿ: ಭೀಮಾತೀರದ ಹಂತಕನ ಬಲಗೈ ಬಂಟ

    ವಿಜಯಪುರ: ನನ್ನ ತಂಟೆಗೆ ಬಂದರೆ ಸುಮ್ಮನೆ ಬಿಡಲ್ಲ. ಹಣೆಗೆ ಬಂದೂಕು ಹಚ್ಚಿ ಹೊಡೆಯುತ್ತೇನೆಂದು ವಿಜಯಪುರದಲ್ಲಿ ಭೀಮಾತೀರದ ಹಂತಕನ ಬಲಗೈ ಬಂಟ ಬಾಗಪ್ಪ ಹರಿಜನ ಅವಾಜ್ ಹಾಕಿದ್ದಾನೆ.

    ಭೀಮಾತೀರದ ಹಂತಕ ಚಂದಪ್ಪ ಹರಿಜನ ಬಲಗೈ ಬಂಟನಾಗಿದ್ದ ಬಾಗಪ್ಪ ಈ ರೀತಿ ಆವಾಜ್ ಹಾಕಿದ್ದಾನೆ. ಚಂದಪ್ಪ ಹರಿಜನ ಸಂಬಂಧಿಗಳು ನನಗೆ ಕಿರುಕುಳ ನೀಡುತ್ತಿದ್ದಾರೆ. ಚಂದಪ್ಪನ ಸಂಬಂಧಿಕರಿಂದ ತೊಂದರೆಯಾಗುತ್ತಿದೆ ಎಂದು ಬಾಗಪ್ಪ ಆರೋಪಿಸಿದ್ದಾನೆ.

    ಯಾರ ಸಹವಾಸ ಬೇಡ ಎಂದು ನಾನಿದ್ದೇನೆ. ನನ್ನ ವಿಚಾರಕ್ಕೆ ಬಂದರೆ 24 ಗಂಟೆಗಳಲ್ಲಿ ಬಂದೂಕು ಹಿಡಿಯುತ್ತೇನೆ. ಪೊಲೀಸ್ ಇಲಾಖೆ ಮತ್ತು ಸಮಾಜಕ್ಕೆ ತೊಂದರೆ ಆಗಬಾರದು ಎಂದು ಉದ್ದೇಶದಿಂದ ಎಲ್ಲ ವಿಚಾರಗಳಿಂದಲೂ ದೂರವಾಗಿದ್ದೇನೆ. ಈ ಬದಲಾವಣೆಯನ್ನು ನನ್ನ ಅಶಕ್ತನೆಂದು ತಿಳಿಯಬೇಡಿ ಎಂದು ಬಾಗಪ್ಪ ವೈರಿಗಳಿಗೆ ಎಚ್ಚರಿಕೆಯ ಸಂದೇಶವನ್ನು ರವಾನಿಸಿದ್ದಾನೆ.

  • ಭೀಮಾತೀರದ ಹಂತಕನ ಮೇಲೆ ಕೋರ್ಟ್ ಆವರಣದಲ್ಲೇ ಗುಂಡಿನ ದಾಳಿ -ಸಾವು ಬದುಕಿನ ಮಧ್ಯೆ ಬಾಗಪ್ಪ ನರಳಾಟ

    ಭೀಮಾತೀರದ ಹಂತಕನ ಮೇಲೆ ಕೋರ್ಟ್ ಆವರಣದಲ್ಲೇ ಗುಂಡಿನ ದಾಳಿ -ಸಾವು ಬದುಕಿನ ಮಧ್ಯೆ ಬಾಗಪ್ಪ ನರಳಾಟ

    ವಿಜಯಪುರ: ಭೀಮಾ ತೀರದ ಹಂತಕ ಚಂದಪ್ಪ ಹರಿಜನ ಸಹಚರ ಬಾಗಪ್ಪನ ಮೇಲೆ ವಿಜಯಪುರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಗುಂಡಿನ ದಾಳಿ ನಡೆದಿದೆ.

    ಮಂಗಳವಾರ ಬೆಳಗ್ಗೆ ವಿಚಾರಣೆಗೆ ಬಂದಿದ್ದ ಬಾಗಪ್ಪನ ಮೇಲೆ ಅಪರಿಚಿತ ವ್ಯಕ್ತಿ ಗುಂಡಿನ ದಾಳಿ ನಡೆಸಿದ್ದಾನೆ. ಮೂರು ಗುಂಡುಗಳು ಬಾಗಪ್ಪನ ದೇಹ ಹೊಕ್ಕಿದ್ದು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ತಿಂಗಳಷ್ಟೇ ಬಾಗಪ್ಪ ಕಸ್ಟಡಿಯಿಂದ ಹೊರಬಂದಿದ್ದು, ಇದು ಎರಡನೇ ವಿಚಾರಣೆಯಾಗಿತ್ತು. ಸಹೋದರ ಸಂಬಂಧಿಗಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ಇತ್ತು.

    ಬಾಗಪ್ಪ ನ್ಯಾಯಾಲಯಕ್ಕೆ ಒಬ್ಬೊಂಟಿಯಾಗಿಯೇ ಬರುತ್ತಿದ್ದುದನ್ನು ಗಮನಿಸಿಯೇ ಈ ದಾಳಿ ನಡೆದಿದೆ ಎಂದು ಹೇಳಲಾಗ್ತಿದೆ. ಕೆಲ ದಿನಗಳ ಹಿಂದೆ ಸಾಕ್ಷಿದಾರನಿಗೂ ಬಾಗಪ್ಪ ಜೀವ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಸದ್ಯ ನ್ಯಾಯಾಲಯದ ಆವರಣದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

    ಈ ಬಗ್ಗೆ ಮಾತನಡಿದ ಎಸ್‍ಪಿ ಕುಲ್‍ದೀಪ್ ಕುಮಾರ್, ಕೋರ್ಟ್ ಆವರಣದಲ್ಲಿ ಶೂಟೌಟ್ ನಡೆದಿದೆ. ಸ್ಥಳದಲ್ಲಿ ನಾಲ್ಕು ಕಾಟ್ರಿಡ್ಜ್ ಸಿಕ್ಕಿದೆ. ಈ ಸಂಬಂಧ ಸ್ಥಳೀಯರಿಂದ ಮಾಹಿತಿ ಪಡೆದು ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಅಂದ್ರು.

    ಆರೋಪಿಗಳನ್ನು ಕೆಲವರು ನೋಡಿದ್ದಾಗಿ ಹೇಳಿದ್ದಾರೆ. ಪಲ್ಸರ್ ಬೈಕ್‍ನಲ್ಲಿ ಬಂದಿದ್ದಂತೆ ಕಾಣುತ್ತದೆ. ಐ ವಿಟ್‍ನೆಸ್ ಏನು ಹೇಳ್ತಾರೆ ಅದರ ಪ್ರಕಾರ ತನಿಖೆ ನಡೆಸುತ್ತೇವೆ. ಗಾಯಾಳು ಬಾಗಪ್ಪ ಹರಿಜನ ಅವರಿಗೆ 4 ಗುಂಡು ತಾಗಿದೆ. ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಯುತ್ತಿದೆ. ಬಾಗಪ್ಪ ಬೇಲ್ ಮೇಲಿದ್ದು, 302ಕೇಸ್‍ನಲ್ಲಿ ಇಂದು ವಿಚಾರಣೆಗೆ ಬಂದಿದ್ದಾಗಿ ಹೇಳಿದ್ರು.

    ಯಾರು ಈ ಬಾಗಪ್ಪ?: ಬಾಗಪ್ಪ ಹರಿಜನ್ ಚಂದಪ್ಪ ಹರಿಜನ್ ಬಲಗೈ ಬಂಟ. ಚಂದಪ್ಪ ಹರಿಜನ್ ತಮ್ಮ ಬಸವರಾಜ್ ಹರಿಜನ್ ಬಾಗಪ್ಪನಿಂದ ಕೊಲೆಯಾಗಿದ್ದ. 2013ರ ಜನವರಿ 3ರಂದು ಬಾಗಪ್ಪ ಹರಿಜನ್ ಬಸವರಾಜ್ ಮೇಲೆ 7 ಸುತ್ತಿನ ಗುಂಡು ಹಾರಿಸಿ ಕೊಲೆ ಮಾಡಿದ್ದ. ಸಿಂದಗಿ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ಈ ಕೊಲೆ ನಡೆದಿತ್ತು. 2 ಕೊಲೆ 2 ಕೊಲೆ ಯತ್ನ ಪ್ರಕರಣದಲ್ಲಿ ಬಾಗಪ್ಪ ಆರೋಪಿಯಾಗಿದ್ದ.