Tag: baiyappanahalli

  • ವಿದ್ಯುತ್ ಕಂಬ ಬಿದ್ದು ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವು

    ವಿದ್ಯುತ್ ಕಂಬ ಬಿದ್ದು ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವು

    ಬೆಂಗಳೂರು: ರಸ್ತೆ ಕಾಮಗಾರಿ ವೇಳೆ ವಿದ್ಯುತ್ ಕಂಬಕ್ಕೆ ಜೆಸಿಬಿ ಡಿಕ್ಕಿಯಾಗಿ ವಿದ್ಯುತ್ ಕಂಬ ತುಂಡಾಗಿ ಬಿದ್ದ ಪರಿಣಾಮ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೈಯ್ಯಪ್ಪನಹಳ್ಳಿ (Baiyyappanahalli) ಬಳಿಯ ಸದ್ದುಗುಂಟೆಪಾಳ್ಯದಲ್ಲಿ ನಡೆದಿದೆ.

    ಸದ್ದುಗುಂಟೆಪಾಳ್ಯ (Sudduguntepalya) ನಿವಾಸಿಗಳಾದ ಸುಮತಿ(35) ಮತ್ತು ಸೋನಿ ಕುಮಾರಿ (35) ಮೃತ ದುರ್ದೈವಿಗಳು.

    ಸೋಮವಾರ ಸಂಜೆ 4 ಗಂಟೆ ಸುಮಾರಿಗೆ ಸದ್ದುಗುಂಟೆಪಾಳ್ಯ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದೆ. ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: Aurangzeb Tomb Row| ಧರ್ಮಗ್ರಂಥ ಸುಟ್ಟ ವದಂತಿಯಿಂದ ನಾಗ್ಪುರದಲ್ಲಿ ಹಿಂಸಾಚಾರ, ಕರ್ಫ್ಯೂ ಜಾರಿ

    ಈ ದುರಂತಕ್ಕೆ ಜೆಸಿಬಿ ಡ್ರೈವರ್‌ನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ರಸ್ತೆ ಕಾಮಗಾರಿಯ ವೇಳೆ ಜೆಸಿಬಿ ಡ್ರೈವರ್‌ ಕಿವಿಗೆ ಹೆಡ್‌ಫೋನ್ ಹಾಕಿಕೊಂಡು ಕೆಲಸ ಮಾಡುತ್ತಿದ್ದ. ಈ ವೇಳೆ ಲೈಟ್ ಕಂಬದಿಂದ ಮನೆಗೆ ಬೇರೆ ಕಡೆಗೆ ಕನೆಕ್ಟ್ ಮಾಡಿದ್ದ ವೈಯರ್‌ಗೆ ಜೆಸಿಬಿಯ ಮುಂಭಾಗ ಟಚ್ ಆಗಿದೆ. ಜನ ಜೋರಾಗಿ ಕೂಗಿಕೊಂಡರೂ ಡ್ರೈವರ್‌ ಕೇಳಿಸಿಕೊಳ್ಳದೇ ವೈಯರ್ ಎಳೆದಿರುವುದೇ ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಉಗ್ರರ ದಾಳಿ ಭೀತಿ – ಪಾಕ್‌ ಸೇನೆ ತೊರೆಯುತ್ತಿದ್ದಾರೆ ಯೋಧರು!

    ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದರು. ಜೆಸಿಬಿಯನ್ನು ಜಪ್ತಿ ಮಾಡಿ, ಜೆಸಿಬಿ ಚಾಲಕನ್ನು ವಶಕ್ಕೆ ಪಡೆದಿದ್ದಾರೆ. ಬೈಯ್ಯಪ್ಪನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಎಂಜಿ ರೋಡ್- ಬೈಯಪ್ಪನಹಳ್ಳಿ ಮೆಟ್ರೋ ಸಂಚಾರದಲ್ಲಿ ತಾತ್ಕಾಲಿಕ ಸ್ಥಗಿತ- ಪ್ರಯಾಣಿಕರ ಪರದಾಟ

    ಎಂಜಿ ರೋಡ್- ಬೈಯಪ್ಪನಹಳ್ಳಿ ಮೆಟ್ರೋ ಸಂಚಾರದಲ್ಲಿ ತಾತ್ಕಾಲಿಕ ಸ್ಥಗಿತ- ಪ್ರಯಾಣಿಕರ ಪರದಾಟ

    ಬೆಂಗಳೂರು: ನೇರಳೆ ಮಾರ್ಗದಲ್ಲಿ ತಾತ್ಕಾಲಿಕವಾಗಿ ಮೆಟ್ರೋ (Namma Metro) ಸಂಚಾರ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಪರದಾಟ ಅನುಭವಿಸುತ್ತಿದ್ದಾರೆ.

    ಎಂಜಿ ರೋಡ್ ನಿಂದ (MG Road) ಬೈಯಪ್ಪನಹಳ್ಳಿ (Baiyappanahalli) ಮಾರ್ಗ ಸಂಚಾರ ಬಂದ್ ಆಗಿದ್ದು, ಮೊದಲು ತಾಂತ್ರಿಕ ಸಮಸ್ಯೆ ಹಿನ್ನೆಲೆ ಎಂದು ಬಿಎಂಆರ್ ಸಿಎಲ್ ವಿಷಾದ ವ್ಯಕ್ತಪಡಿಸಿದೆ. ಜೊತೆಗೆ ಶೀಘ್ರವೇ ಬಗೆಹರಿಸುವ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿತ್ತು. ಇದನ್ನೂ ಓದಿ: ಇಡೀ ವಿಶ್ವವೇ ತಿರುಗಿ ನೋಡುವ ಕೆಲಸ ಮಾಡಿದ್ದಾರೆ: ಮೋದಿ ಹೊಗಳಿದ ರೆಡ್ಡಿ

    ಆದರೆ ಇದೀಗ ಮೆಟ್ರೋ ಪವರ್ ಡಿಸ್ಟ್ರಿಬ್ಯೂಷನ್ ನಲ್ಲಿ ಸಮಸ್ಯೆಯಾಗಿದೆ. ಅದನ್ನ ಸರಿಪಡಿಸಲು ಪ್ರಯತ್ನ ಮಾಡಲಾಗುತ್ತಿದೆ. ಕಳೆದ ಒಂದು ಗಂಟೆಯಿಂದ ಸಮಸ್ಯೆ ಪರಿಹಾರಕ್ಕೆ ಪ್ರಯತ್ನ ಮಾಡಲಾಗುತ್ತಿದೆ. ಇನ್ನೂ ಒಂದು ಗಂಟೆ ಹೆಚ್ಚಾಗುವ ಸಾಧ್ಯತೆಯಿದೆ. ಯಾವ ಕಾರಣಕ್ಕೆ ಈ ಸಮಸ್ಯೆ ಆಯ್ತು ಅಂತ ಇನ್ನೂ ಪರಿಶೀಲನೆ ಮಾಡುತ್ತಿದ್ದೇವೆ ಎಂದು ಬಿಎಂಆರ್ ಸಿಎಲ್ ಉನ್ನತ ಮೂಲಗಳು ಮಾಹಿತಿ ನೀಡಿವೆ.

    ಹೋಯ್ಸಳ ಪೊಲೀಸರು ಪ್ರಯಾಣಿಕರಿಗೆ ಈ ಕುರಿತು ಅನೌನ್ಸ್ ಮೆಂಟ್ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಆಟೋ, ಕ್ಯಾಬ್ ಗಳ ಮೂಲಕ ಜನ ಹೋಗುತ್ತಿದ್ದಾರೆ.

  • ಇಂದಿನಿಂದ 15 ದಿನ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

    ಇಂದಿನಿಂದ 15 ದಿನ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

    ಬೆಂಗಳೂರು: ನಗರದ ನೇರಳೆ ಮಾರ್ಗದ (Purple Line) ಮೆಟ್ರೋ (Bengaluru Metro) ಸೇವೆಯಲ್ಲಿ ಇಂದಿನಿಂದ 15 ದಿನಗಳವರೆಗೆ ವ್ಯತ್ಯಯವಾಗಲಿದೆ. ಇಂದು ಕೆಂಗೇರಿ ಹಾಗೂ ಮೈಸೂರು ರಸ್ತೆಯ ಮೆಟ್ರೋ ನಿಲ್ದಾಣಗಳ ನಡುವೆ ಯಾವುದೇ ರೈಲುಗಳು ಸಂಚರಿಸುತ್ತಿಲ್ಲ.

    ನೇರಳೆ ಮಾರ್ಗದ ಕೆಂಗೇರಿ ಮತ್ತು ಚಲ್ಲಘಟ್ಟ, ಬೈಯಪ್ಪನಹಳ್ಳಿ ಹಾಗೂ ಕೃಷ್ಣರಾಜಪುರ ಮೆಟ್ರೋ ನಿಲ್ದಾಣಗಳ ನಡುವಿನ ಸಿಗ್ನಲಿಂಗ್ ವ್ಯವಸ್ಥೆಗಳ ಪರೀಕ್ಷೆ ನಡೆಯಲಿರುವ ಕಾರಣ 15 ದಿನಗಳವರೆಗೆ ಮೆಟ್ರೋ ಸೇವೆಯಲ್ಲಿ ವ್ಯತ್ಯಯವಾಗಲಿದೆ. ಮೈಸೂರು ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳಲ್ಲಿ ಮಾತ್ರ ಬೆಳಗ್ಗೆ 5 ರಿಂದ ರಾತ್ರಿ 11 ರವರೆಗೆ ರೈಲು ಸೇವೆ ಲಭ್ಯವಿರಲಿದೆ.

    ಯಾವ ದಿನ, ಯಾವ ಸಮಯ ವ್ಯತ್ಯಯ?
    ಆಗಸ್ಟ್ 17:
    ಕೆಂಗೇರಿ ಮತ್ತು ಮೈಸೂರು ರಸ್ತೆಯ ಮೆಟ್ರೋ ನಿಲ್ದಾಣಗಳ ನಡುವೆ ಯಾವುದೇ ರೈಲು ಸೇವೆ ಲಭ್ಯವಿರುವುದಿಲ್ಲ. ಮೈಸೂರು ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳಲ್ಲಿ ಮಾತ್ರ ಬೆಳಗ್ಗೆ 5 ರಿಂದ ರಾತ್ರಿ 11 ರವರೆಗೆ ರೈಲು ಸೇವೆ ಲಭ್ಯವಿರಲಿದೆ.

    ಆಗಸ್ಟ್ 23 ಮತ್ತು 24:
    ಕೆಂಗೇರಿ ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಬೆಳಗ್ಗೆ 7 ಗಂಟೆಯವರೆಗೆ ಮೆಟ್ರೋ ಸೇವೆ ಇರುವುದಿಲ್ಲ. ಈ ವೇಳೆ ಮೈಸೂರು ರಸ್ತೆ ಮತ್ತು ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ರೈಲು ಸೇವೆ ಲಭ್ಯವಿರುತ್ತದೆ. ಬೆಳಗ್ಗೆ 7 ಗಂಟೆ ನಂತರ ಕೆಂಗೇರಿಯಿಂದ ಬೈಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಎಂದಿನಂತೆ ಮೆಟ್ರೋ ಸೇವೆ ಲಭ್ಯವಿರಲಿದೆ. ಇದನ್ನೂ ಓದಿ: ಬೆಂಗಳೂರಿನಲ್ಲೊಂದು ವಿಚಿತ್ರ ಘಟನೆ- ಬಾಡಿಗೆದಾರನನ್ನ ಗಮನಿಸದೇ ಮನೆ ಸೀಜ್

    ಆಗಸ್ಟ್ 20 ರಿಂದ 29:
    ಬೈಯಪ್ಪನಹಳ್ಳಿ ಟರ್ಮಿನಲ್ ಮತ್ತು ಸ್ವಾಮಿ ವಿವೇಕಾನಂದ ರಸ್ತೆ ಕೃಷ್ಣರಾಜಪುರ ಮತ್ತು ವೈಟ್‌ಫೀಲ್ (ಕಾಡುಗೋಡಿ) ಮಾರ್ಗಗಳ ನಡುವೆ ಬೆಳಗ್ಗೆ 7 ಗಂಟೆಯವರೆಗೆ ಮೆಟ್ರೋ ಸೇವೆ ಸ್ಥಗಿತವಿರಲಿದೆ. ಈ ಅವಧಿಯಲ್ಲಿ ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣದಿಂದ ಮಾತ್ರ ರೈಲು ಸೇವೆ ಲಭ್ಯವಿರುತ್ತದೆ.

    ಆಗಸ್ಟ್ 23 ಮತ್ತು 24:
    ಬೆಳಗ್ಗೆ 5 ರಿಂದ 7 ಗಂಟೆಯವರೆಗೆ ಮೈಸೂರು ರಸ್ತೆ ನಿಲ್ದಾಣದಲ್ಲಿ ರೈಲು ಸೇವೆ ಕೊನೆಗೊಳ್ಳುವುದು. ಇನ್ನುಳಿದ ದಿನಗಳಲ್ಲಿ ರೈಲು ಸೇವೆ ಕೆಂಗೇರಿ ನಿಲ್ದಾಣದವರೆಗೆ ಲಭ್ಯವಿರಲಿದೆ. ಇದನ್ನೂ ಓದಿ: ಕರುನಾಡ ಮಂದಿಗೆ ಮತ್ತೊಂದು ಶಾಕ್- ಬೇಳೆ, ತರಕಾರಿ ಬಳಿಕ ಅಕ್ಕಿ ಬೆಲೆಯೂ ದುಬಾರಿ

    ಹಸಿರು ಮಾರ್ಗದ ರೈಲು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶೀಘ್ರವೇ ಬೈಯ್ಯಪ್ಪನಹಳ್ಳಿ – ಕೆ.ಆರ್. ಪುರಂ ಮೆಟ್ರೋ ಟೆಸ್ಟ್ ಟ್ರಯಲ್

    ಶೀಘ್ರವೇ ಬೈಯ್ಯಪ್ಪನಹಳ್ಳಿ – ಕೆ.ಆರ್. ಪುರಂ ಮೆಟ್ರೋ ಟೆಸ್ಟ್ ಟ್ರಯಲ್

    ಬೆಂಗಳೂರು: ಸಿಲಿಕಾನ್ ಸಿಟಿ ಮಂದಿಗೆ ಗುಡ್ ನ್ಯೂಸ್ ಕೊಡುವುದಕ್ಕೆ ಬಿಎಂಆರ್‌ಸಿಎಲ್ ಮುಂದಾಗಿದೆ.

    ಸೆಪ್ಟೆಂಬರ್‌ನಿಂದ ಪರ್ಪಲ್ ಲೈನ್ ಎಕ್ಸ್‌ಟೆನ್ಷನ್ ಟ್ರಯಲ್ ರನ್ ಶುರುವಾಗುತ್ತಿದೆ. ಇದರಿಂದ ಟ್ರಾಫಿಕ್ ದಟ್ಟಣೆಯ ಬೈಯಪ್ಪನಹಳ್ಳಿಯಿಂದ, ಕೆ.ಆರ್ ಪುರಂವರೆಗಿನ ಟೆಸ್ಟ್ ಟ್ರಯಲ್ ಮಾಡಲಿದೆ. ವೈಟ್‌ಫೀಲ್ಡ್‌ವರೆಗಿನ ವಿಸ್ತರಣೆಯನ್ನು ಇದೇ ಡಿಸೆಂಬರ್ ಹೊತ್ತಿಗೆ ಮುಗಿಸುವ ಯೋಜನೆಯಲ್ಲಿ ಬಿಎಂಆರ್‌ಸಿಎಲ್ ಇದ್ದು, 2ನೇ ಹಂತದಲ್ಲಿ ಮುಖ್ಯವಾಗಿ ಎಲೆಕ್ಟ್ರಾನಿಕ್ ಸಿಟಿ ಮಾರ್ಗ, ಸಿಲ್ಕ್ ಬೋರ್ಡ್ ಟು ಕೆಆರ್ ಪುರಂ ಮಾರ್ಗ, ಹಾಗೇ ವೈಟ್ ಫೀಲ್ಡ್ ಮಾರ್ಗದಲ್ಲಿ ಮೆಟ್ರೋ ಸಂಚರಿಸಲಿದೆ.  ಇದನ್ನೂ ಓದಿ: ಕಾಂಗೋದಲ್ಲಿ ಯುಎನ್ ವಿರೋಧಿ ಪ್ರತಿಭಟನೆ: 3 ಶಾಂತಿಪಾಲನ ಸೈನಿಕರು, 12 ನಾಗರಿಕರು ಮೃತ

    ಇಲ್ಲೆಲ್ಲಾ ಐಟಿ, ಬಿಟಿ ಕಂಪನಿಗಳು ಹೆಚ್ಚಾಗಿದ್ದು, ಪೀಕ್ ಅವರ್ಸ್‍ನಲ್ಲಿ ಸಾಕಷ್ಟು ರಷ್ ಆಗುವ ಬಗ್ಗೆ ತಜ್ಞರು ಎಚ್ಚರಿಸಿದ್ದಾರೆ. ಅಲ್ಲದೇ ಮೆಟ್ರೋ ಬೋಗಿಗಳನ್ನು 6ರ ಬದಲಾಗಿ 8ಕ್ಕೆ ಏರಿಸಲು ಸಲಹೆ ನೀಡಲಾಗಿತ್ತು. ಆದರೆ ಬಿಎಂಆರ್‌ಸಿಎಲ್ 8 ಬೋಗಿ ಮಾಡಿದರೆ ಸ್ಟೇಷನ್ ಸ್ಟ್ರಕ್ಚರ್ ಬದಲಾಯಿಸಬೇಕು. ದೊಡ್ಡ ಸ್ಟೇಷನ್ ನಿರ್ಮಾಣಕ್ಕೆ ಭೂಸ್ವಾಧೀನ ಸೇರಿ ಹೆಚ್ಚಿನ ಹಣ ವೆಚ್ಚವಾಗಲಿದೆ. ಹೀಗಾಗಿ ಬೋಗಿ ಜಾಸ್ತಿ ಮಾಡುವುದಕ್ಕಿಂತ ರೈಲಿನ ಸಂಖ್ಯೆ ಹೆಚ್ಚಿಸುವುದು ಸೂಕ್ತ ಎಂದು ತೀರ್ಮಾನಿಸಿದೆ. ಹಾಗಾಗಿ ಎರಡನೇ ಹಂತದಲ್ಲಿ ಪ್ರತಿ ಎರಡು ನಿಮಿಷಕ್ಕೊಂದು ಟ್ರೈನ್ ಓಡಿಸುವಂತಾ ತಂತ್ರಜ್ಞಾನವನ್ನು ಅಳವಡಿಸುವುದಕ್ಕೆ ಬಿಎಂಆರ್‌ಸಿಎಲ್ ಮುಂದಾಗಿದೆ. ಇದನ್ನೂ ಓದಿ: 6 ವರ್ಷ ತುಂಬಿದರಷ್ಟೇ 1ನೇ ಕ್ಲಾಸ್‌ಗೆ ಪ್ರವೇಶ – ಗೊಂದಲಕ್ಕೆ ಕಾರಣವಾದ ಆದೇಶ

    Live Tv
    [brid partner=56869869 player=32851 video=960834 autoplay=true]

  • ಬೈಯಪ್ಪನಹಳ್ಳಿ ನೂತನ ರೈಲ್ವೆ ಟರ್ಮಿನಲ್‍ಗೆ ಕೆಂದ್ರ ಸಚಿವ ಅಶ್ವಿನಿ ವೈಷ್ಣವ್ ಭೇಟಿ, ಪರಿಶೀಲನೆ

    ಬೈಯಪ್ಪನಹಳ್ಳಿ ನೂತನ ರೈಲ್ವೆ ಟರ್ಮಿನಲ್‍ಗೆ ಕೆಂದ್ರ ಸಚಿವ ಅಶ್ವಿನಿ ವೈಷ್ಣವ್ ಭೇಟಿ, ಪರಿಶೀಲನೆ

    ಆನೇಕಲ್: ದೇಶದಲ್ಲೆ ಮೊಟ್ಟಮೊದಲ ಹವಾನಿಯಂತ್ರಿತ ರೈಲ್ವೆ ನಿಲ್ದಾಣ ಎಂಬ ಹೆಗ್ಗಳಿಕೆ ಪಡೆದಿರುವ ವಿಮಾನ ನಿಲ್ದಾಣ ಮಾದರಿಯಲ್ಲಿ ನಿರ್ಮಿಸಲಾದ ಮತ್ತು ಉದ್ಘಾಟನೆಗೆ ಸಿದ್ಧವಾಗಿರುವ ಬೈಯಪ್ಪನಹಳ್ಳಿ ನೂತನ ರೈಲ್ವೆ ನಿಲ್ದಾಣದ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಗೆ ಇಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ ನೀಡಿ ಪರಿಶೀಲನೆ ಮಾಡಿದರು. ರೈಲ್ವೆ ಯಾರ್ಡ್ ನ ಕಾರ್ಯಕಾರಿ ಅಂಶಗಳು, ಸೌಲಭ್ಯಗಳು ಮತ್ತು ನಿಲ್ದಾಣದಲ್ಲಿ ಒದಗಿಸಲಾದ ನವೀನ ವೈಶಿಷ್ಟ್ಯಗಳನ್ನು ಪರಿಶೀಲಿಸಿದರು. ಪರಿಶೀಲನೆಗೂ ಮುನ್ನ ಸಚಿವರಿಗೆ ರೈಲ್ವೆ ಪೊಲೀಸರಿಂದ ಗೌರವ ಗೌರವ ವಂದನೆ ಅರ್ಪಿಸಲಾಯಿತು.

    ಜನರಲ್ ಮ್ಯಾನೇಜರ್ ಸಂಜೀವ್ ಕಿಶೋರ್ ನೇತೃತ್ವದ ಎಸ್‍ಡಬ್ಲ್ಯೂಆರ್‍ನ ಹಿರಿಯ ಅಧಿಕಾರಿಗಳೊಂದಿಗೆ ಅವರು ಈ ಟರ್ಮಿನಲ್ ನಿಂದ ಪಾರ್ಸೆಲ್ ಸಾಗಿಸುವ ಸಾಮರ್ಥ್ಯದ ಕುರಿತು ಚರ್ಚಿಸಿದರು. ನಿಲ್ದಾಣ ನಿರ್ಮಾಣವನ್ನು ನೋಡಿ ತುಂಬಾನೆ ಸಂತೋಷ ವ್ಯಕ್ತಪಡಿಸಿದ ಸಚಿವರು ಟರ್ಮಿನಲ್ ನ ಇಂಚಿಂಚೂ ಮಾಹಿತಿಯನ್ನ ಅಧಿಕಾರಿಗಳಿಂದ ಪಡೆದರು. ನಂತರ ಮಾತನಾಡಿದ ಸಚಿವರು, ಈ ಪ್ರದೇಶದಲ್ಲಿ ತಯಾರಿಸಿದ ಬಿಳಿ ಸರಕುಗಳು, ಕೈಗಾರಿಕಾ ಉಪಕರಣಗಳು, ಜವಳಿ ಮತ್ತು ಇತರ ಉತ್ಪನ್ನಗಳನ್ನು ಸಾಗಿಸಲು ಪಾರ್ಸೆಲ್ ವಿಶೇಷ ರೈಲುಗಳ ಓಡಾಟದಿಂದ ಆದಾಯವನ್ನು ಗಳಿಸಲು ಪ್ರಸ್ತಾಪಗಳನ್ನು ರೂಪಿಸಲು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ಟೋಕಿಯೋ ಪ್ಯಾರಾಲಂಪಿಕ್ಸ್ ಭಾರತೀಯ ಕ್ರೀಡಾ ಇತಿಹಾಸದಲ್ಲಿ ವಿಶೇಷ: ಮೋದಿ

    ಈ ವಿಮಾನ ನಿಲ್ದಾಣ ರೀತಿಯಲ್ಲಿ ರೂಪಿಸಿದ ಮತ್ತು ಕಾರ್ಯಗತಗೊಳಿಸಿದ ಎಂಜಿನಿಯರ್‍ಗಳ ತಂಡವನ್ನು ವೈಷ್ಣವ್ ಶ್ಲಾಘಿಸಿದರು. ಸರ್ ಎಂವಿ ಟರ್ಮಿನಲ್‍ನಲ್ಲಿ ಪ್ರಯಾಣಿಕರ ಸೌಕರ್ಯ ಮತ್ತು ಸೌಕರ್ಯವನ್ನು ಹೆಚ್ಚಿಸಲು ಒದಗಿಸಲಾದ ಸೌಲಭ್ಯಗಳು ಮತ್ತು ಸೌಕರ್ಯಗಳು ಭವಿಷ್ಯದಲ್ಲಿ ದೇಶದಾದ್ಯಂತ ನಿರ್ಮಾಣಗೊಳ್ಳುವ ನಿಲ್ದಾಣಗಳಿಗೆ ಮಾನದಂಡವಾಗಲಿದೆ ಎಂದು ಹೇಳಿದರು. ಇದನ್ನೂ ಓದಿ: ಅವರು ನಿರ್ಧರಿಸಿದ್ದ ಗುರಿಯನ್ನು ತಲುಪಿದ್ದಾರೆ- ಸುಹಾಸ್ ಸಾಧನೆಗೆ ಪತ್ನಿಯ ಮೆಚ್ಚುಗೆ

    ಇಡೀ ದೇಶಕ್ಕೆ ಮಾದರಿಯಾದ ನಿಲ್ದಾಣ:
    ಈ ನಿಲ್ದಾಣವು 7 ಪ್ಲಾಟ್‍ಫಾರ್ಮ್‍ಗಳನ್ನು ಹೊಂದಿದ್ದು, ದಿನಕ್ಕೆ 1 ಲಕ್ಷ ಪ್ರಯಾಣಿಕರು ಪ್ರಯಾಣ ಮಾಡುವ ಸಾಮಥ್ರ್ಯವನ್ನು ಹೊಂದುವಂತೆ ವಿನ್ಯಾಸಗೊಳಿಸಲಾಗಿದೆ. ಎಸ್ಕಲೇಟರ್‍ಗಳು ಮತ್ತು ಲಿಫ್ಟ್‍ಗಳನ್ನು ಹೊರತುಪಡಿಸಿ ಸಬ್‍ವೇಗೆ ಪ್ರವೇಶಿಸಲು ಬ್ರೈಲ್ ಚಿಹ್ನೆಗಳು, ಅಂಡರ್ ಪಾಸ್ ಗಳ ವೈಶಿಷ್ಟ್ಯಗಳನ್ನು ಹೊಂದಿದೆ. ಇದು ದಿವ್ಯಾಂಗ(ಅಂಗವಿಕಲರ) ಸ್ನೇಹಿ ನಿಲ್ದಾಣವಾಗಿದೆ. ನಿಲ್ದಾಣದಲ್ಲಿ ಪರಿಸರ ಸ್ನೇಹಿ ನೀರಿನ ಮರುಬಳಕೆ ಘಟಕವೂ ಇದೆ. ಬಿಬಿಎಂಪಿಯೊಂದಿಗೆ ಸಮಾಲೋಚಿಸಿ ಟರ್ಮಿನಲ್‍ಗೆ ಪ್ರವೇಶಕ್ಕೆ ಕಿರಿದಾದ ರಸ್ತೆಗಳ ಪ್ರವೇಶದ ಸಮಸ್ಯೆಯನ್ನು ಶೀಘ್ರದಲ್ಲೇ ಬಗೆಹರಿಸಿ ಶೀಘ್ರದಲ್ಲೇ ನಿಲ್ದಾಣ ಉದ್ಘಾಟನೆ ಆಗಲಿದೆ ಎಂದು ಸಚಿವರು ಹೇಳಿದರು.

    ಇದೇ ಸಂದರ್ಭದಲ್ಲಿ ರೈಲ್ವೆ ನಿಲ್ದಾಣ ಪರಿಶೀಲನೆಗೆ ಸಚಿವ ಜೊತೆಗೆ ಸಂಸದ ಪಿ.ಸಿ.ಮೋಹನ್, ಜನರಲ್ ಮ್ಯಾನೇಜರ್ ಎಸ್ ಡಬ್ಲ್ಯುಆರ್ ಸಂಜೀವ್ ಕಿಶೋರ್, ಪ್ರಿನ್ಸಿಪಾಲ್ ಚೀಫ್ ಆಪರೇಷನ್ ಮ್ಯಾನೇಜರ್ ಹರಿ ಶಂಕರ್ ವರ್ಮಾ, ಡಿ ಆರ್ ಎಂ ಬೆಂಗಳೂರು ಶ್ಯಾಮ್ ಸಿಂಗ್, ಮುಖ್ಯ ಆಡಳಿತಾಧಿಕಾರಿ, ನಿರ್ಮಾಣ ದೇಶ್ ರತನ್ ಗುಪ್ತಾ, ಮತ್ತು ರೈಲ್ವೇಸ್ ನ ಹಿರಿಯ ಅಧಿಕಾರಿಗಳು ಭಾಸ್ಕರ್ ರಾವ್, ಮುಖ್ಯ ಆಯುಕ್ತ ಬಿಬಿಎಂಪಿ ಗೌರವ್ ಗುಪ್ತಾ ಭಾಗವಹಿಸಿದ್ದರು.

  • ಬೆಂಗಳೂರಿನಲ್ಲಿ ಭಾರತದ ಮೊದಲ ಎಸಿ ರೈಲ್ವೆ ನಿಲ್ದಾಣ

    ಬೆಂಗಳೂರಿನಲ್ಲಿ ಭಾರತದ ಮೊದಲ ಎಸಿ ರೈಲ್ವೆ ನಿಲ್ದಾಣ

    ಬೆಂಗಳೂರು: ರೈಲ್ವೆ ಸಚಿವ ಪಿಯೂಷ್ ಗೋಯಲ್ ನಗರದಲ್ಲಿ ನಿರ್ಮಾಣವಾಗುತ್ತಿರುವ 314 ಕೋಟಿ ರೂ ವೆಚ್ಚದ ರೈಲ್ವೆ ನಿಲ್ದಾಣವು ದೇಶದ ಮೊದಲ ಹವಾನಿಯಂತ್ರಿತ(ಏಸಿ)  ರೈಲ್ವೇ ನಿಲ್ದಾಣವಾಗಲಿದೆ  ಎಂದು ತಿಳಿಸಿದ್ದಾರೆ.

    ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಭಾರತದ ಮೊಟ್ಟ ಮೊದಲ ಕೇಂದ್ರೀಕೃತ ಹವಾನಿಯಂತ್ರಿತ ರೈಲ್ವೆ ನಿಲ್ದಾಣಕ್ಕೆ ಆದಷ್ಟು ಬೇಗ ಚಾಲನೆ ನೀಡಲಾಗುತ್ತದೆ ಎಂದು ಕ್ಯಾಪ್ಷನ್ ಹಾಕಿದ್ದಾರೆ.

    ಬೈಯಪ್ಪನಹಳ್ಳಿಯ ಹೊಸ ಟರ್ಮಿನಲ್‍ಗೆ 2015-16ರಂದು ಅನುಮತಿ ನೀಡಲಾಗಿದ್ದು, ಈ ರೈಲ್ವೆ ನಿಲ್ದಾಣ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮಾದರಿಯಲ್ಲಿಯೇ ನಿರ್ಮಿಸಲಾಗಿದೆ. ಅಲ್ಲದೆ ಪ್ಲಾಟ್‍ಫಾರಂಗಳು, ಶೌಚಾಲಯ, ವಿಶ್ರಾಂತಿ ಕೋಣೆ, ಪಾರ್ಕಿಂಗ್, ಬಸ್‍ಬೇ ಹೀಗೆ ಹಲವು ಸೌಲಭ್ಯಗಳನ್ನು ಒದಗಿಸಲಾಗಿದ್ದು, ವಿಮಾನ ನಿಲ್ದಾಣದ ಮಾದರಿಯಲ್ಲಿಯೇ ರೈಲ್ವೆ ನಿಲ್ದಾಣವನ್ನು ನಿರ್ಮಿಸಲಾಗಿದೆ. ಇದನ್ನೂ ಓದಿ: ಒಂದು ಹನಿ ನೀರು ಹೊರ ಬೀಳಲ್ಲ – ಮೈಸೂರು, ಬೆಂಗಳೂರು ಹಳಿ ನಿರ್ವಹಣೆಗೆ ಗೋಯಲ್‌ ಮೆಚ್ಚುಗೆ

    ಮೆಜಿಸ್ಟಿಕ್‍ನಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಯಶವಂತಪುರ ರೈಲು ನಿಲ್ದಾಣದ ಬಳಿಕ ಬೈಯಪ್ಪನಹಳ್ಳಿಯ ಟರ್ಮಿನಲ್ ನಗರದ ಮೂರನೇ ರೈಲ್ವೆ ನಿಲ್ದಾಣವಾಗಿದೆ. ಜೊತೆಗೆ 4200 ಚದರ ಮೀಟರ್ ವ್ಯಾಪ್ತಿ ಇರುವ ಈ ನಿಲ್ದಾಣದಲ್ಲಿ ಏಳು ಪ್ಲಾಟ್‍ಫಾರಂ, ಏಳು ಸ್ಲಾಬಿಂಗ್ ಲೈನ್, ಮೂರು ಪಿನ್‍ಲೈನ್‍ಗಳಿವೆ ಹಾಗೂ ಎಲ್ಲಾ ಕಡೆ ಎಲ್‍ಇಡಿ ಲೈಟ್‍ಗಳನ್ನು ಅಳವಡಿಸಲಾಗಿದೆ.

    ವಿಐಪಿ ಲಾಂಚ್, ಫುಡ್‍ಕೋರ್ಟ್, ಎಸ್ಕಲೇಟರ್, ಲಿಫ್ಟ್, ಫ್ಲಾಟ್‍ಫಾರಂ ಹಾಗೂ ಸಬ್ ವೇಗಳನ್ನು ನಿರ್ಮಿಸಲಾಗಿದ್ದು, 50 ರೈಲು ಸಂಚರಿಸುವ ವ್ಯವಸ್ಥೆ, ಸಾವಿರಕ್ಕೂ ಅಧಿಕ ದ್ವಿಚಕ್ರ ವಾಹನ, 250ಕ್ಕೂ ಹೆಚ್ಚು ಕಾರುಗಳಿಗೆ ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸಕೊಡಲಾಗಿದೆ.

  • ಮೊಬೈಲ್ ಕಳ್ಳತನ ಪ್ರಕರಣ- 1 ಲಕ್ಷ ಲಂಚ ಕೇಳಿದ್ದ ಲೇಡಿ ಎಸ್‍ಐ ಎಸಿಬಿ ಬಲೆಗೆ

    ಮೊಬೈಲ್ ಕಳ್ಳತನ ಪ್ರಕರಣ- 1 ಲಕ್ಷ ಲಂಚ ಕೇಳಿದ್ದ ಲೇಡಿ ಎಸ್‍ಐ ಎಸಿಬಿ ಬಲೆಗೆ

    ಬೆಂಗಳೂರು: 1 ಲಕ್ಷ ರೂ. ಲಂಚ ಕೇಳಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಯಪ್ಪನಹಳ್ಳಿ ಪೊಲೀಸ್ ಠಾಣೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಸಬ್ ಇನ್‍ಸ್ಪೆಕ್ಟರ್ ಸೌಮ್ಯ ಹಾಗೂ ಹೆಡ್ ಕಾನ್‍ಸ್ಟೇಬಲ್ ಜೆಪಿ ರೆಡ್ಡಿಯವರನ್ನು ಟ್ರ್ಯಾಪ್ ಮಾಡಿದ್ದಾರೆ.

    ಮೊಬೈಲ್ ಕಳ್ಳತನ ಪ್ರಕರಣದಲ್ಲಿ ಸಬ್ ಇನ್ಸ್‍ಪೆಕ್ಟರ್ ಸೌಮ್ಯ 1 ಲಕ್ಷ ರೂ. ಲಂಚ ಕೇಳಿದ್ದರು. ಲಂಚ ಪಡೆಯುವ ವೇಳೆ ಪಿಎಸ್‍ಐ ಮತ್ತು ಹೆಡ್ ಕಾನ್‍ಸ್ಟೇಬಲ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಇಬ್ಬರನ್ನೂ ಬಂಧಿಸಿ ಎಸಿಬಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

    ಎಸಿಬಿ ಅಧಿಕಾರಿಗಳನ್ನು ಕಂಡು ತಪ್ಪಿಸಿಕೊಳ್ಳಲು ಯತ್ನಿಸಿ ಪೇದೆ ಕುಮಾರ್ ಸ್ಟೇಷನ್ ಮೇಲಿಂದ ಕೆಳಗೆ ಜಿಗಿದಿದ್ದು, ಘಟನೆಯಲ್ಲಿ ಕಾನ್‍ಸ್ಟೆಬಲ್ ಕುಮಾರ್ ಕಾಲು ಮುರಿದಿದೆ. ಒಂದು ಲಕ್ಷ ರೂ. ಲಂಚ ಪಡೆದಿದ್ದ ಹಣವನ್ನು ಪಿಎಸ್‍ಐ ಸೌಮ್ಯ ಕುಮಾರ್ ಕೈಗೆ ಕೊಟ್ಟಿದ್ದರು. ಹೀಗಾಗಿ ಕುಮಾರ್ ಎಸಿಬಿ ಅಧಿಕಾರಿಗಳನ್ನು ಕಂಡು ತಪ್ಪಿಸಿಕೊಳ್ಳುವ ಭರದಲ್ಲಿ ಮೇಲಿಂದ ಜಿಗಿದು ಕಾಲು ಮುರಿದುಕೊಂಡಿದ್ದಾರೆ.

  • ಗಂಡನ ಕಾಮದಾಟ ಬೇಸತ್ತು ಸುಪಾರಿ ಕೊಟ್ಟು ಗಂಡನನ್ನೇ ಕೊಲ್ಲಿಸಿದ್ಳು!

    ಗಂಡನ ಕಾಮದಾಟ ಬೇಸತ್ತು ಸುಪಾರಿ ಕೊಟ್ಟು ಗಂಡನನ್ನೇ ಕೊಲ್ಲಿಸಿದ್ಳು!

    ಬೆಂಗಳೂರು: ಬಡ್ಡಿಗೆ ಹಣ ಕೊಡುತ್ತಿದ್ದ ಗಂಡ ವಾಪಸ್ಸು ಹಣಕೊಡದೇ ಇದ್ರೆ ಮಹಿಳೆಯರನ್ನು ಬೆಡ್‍ರೂಂಗೆ ಕರಿಯುತ್ತಿದ್ದ ಗಂಡನ ಲಂಪಟತನವನ್ನು ನೋಡಿದ ಪತ್ನಿ ಸುಪಾರಿ ಕೊಟ್ಟು ಕೊಲ್ಲಿಸಿದ್ದಾಳೆ.

    ಕುಮಾರ್ ಕೊಲೆಯಾದ ವ್ಯಕ್ತಿ. ಡೋರಿನ್ ಗಂಡನನ್ನು ಕೊಲೆ ಮಾಡಿಸಿದ ಪತ್ನಿ. ಡೋರಿನ್ ಪತಿಯ ಬಳಿ ಸಾಲ ಪಡೆದಿದ್ದ ಬೈಯಪ್ಪನಹಳ್ಳಿ ನಿವಾಸಿ ಶ್ರೀಧರ್ ಎಂಬಾತನಿಗೆ ಪತಿಯನ್ನು ಕೊಲ್ಲಲು 30 ಲಕ್ಷ ರೂ.ಗೆ ಸುಪಾರಿ ಕೊಟ್ಟಿದ್ದಳು.

    ಏನಿದು ಪ್ರಕರಣ?
    ಏಪ್ರಿಲ್ 6 ರಂದು ಸಂಜೆ ಪುಲಕೇಶಿ ನಗರದ ಬಳಿಯ ಕಲ್ಪಳ್ಳಿ ಸ್ಮಶಾನದ ಬಳಿಯಲ್ಲಿ ಕುಮಾರ್‍ನನ್ನು ಕೊಲೆ ಮಾಡಲಾಗಿತ್ತು. ಫೈನಾನ್ಸ್ ವ್ಯವಹಾರ ಮಾಡಿಕೊಂಡಿದ್ದ ಕುಮಾರ್‍ನನ್ನು ಹಳೆಯ ದ್ವೇಷದಲ್ಲಿ ಯಾರೋ ಕೊಲೆ ಮಾಡಿರಬಹುದು ಎಂದು ಪೊಲೀಸರು ಮೊದಲಿಗೆ ಅನುಮಾನ ವ್ಯಕ್ತಪಡಿಸಿದ್ದರು.

    ಪೊಲೀಸರು ತನಿಖೆ ಆರಂಭಿಸಿದಾಗ ಅವರಿಗೆ ದೊಡ್ಡ ಶಾಕ್ ಕಾದಿತ್ತು. ಕುಮಾರ್ ಹೆಂಗಸರಿಗೆ ಸಾಲ ಕೊಡುತ್ತಿದ್ದ. ಸಾಲ ಏನಾದ್ರೂ ಹಿಂದಿರುಗಿಸಿ ಕೊಡದೇ ಇದ್ರೆ ಅವರನ್ನು ಬೆದರಿಸಿ ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ. ಕೊನೆ ಕೊನೆಗೆ ಹೆಂಗಸರನ್ನು ಮನೆಗೆ ಕರೆದುಕೊಂಡು ಬರುತ್ತಿದ್ದ. ಇದ್ರಿಂದ ಬೇಸತ್ತ ಹೆಂಡತಿ ಗಂಡನಿಂದ ಮುಕ್ತಿ ಹೊಂದಬೇಕು ಎಂದು ತೀರ್ಮಾನಿಸಿ ಗಂಡನ ಬಳಿ ಸುಮಾರು 5 ಲಕ್ಷ ರೂ. ಸಾಲ ಪಡೆದು ಬಡ್ಡಿ ಕಟ್ಟುತ್ತಿದ್ದ ಶ್ರೀಧರ್ ಜೊತೆ ಸೇರಿ ಪ್ಲಾನ್ ಹಾಕಿದ್ದಳು.

    ಡೋರಿನ್‍ನೊಂದಿಗೆ ಮಂಚವನ್ನು ಹಂಚಿಕೊಂಡಿದ್ದ ಶ್ರೀಧರ್ ತನ್ನ ಗ್ಯಾಂಗ್ ಜೊತೆಗೂಡಿ ಕುಮಾರ್‍ನನ್ನು ಮುಗಿಸೋಕೆ ಹುಡ್ಗೀರ ಜೊತೆಯಲ್ಲಿ ಫೋನ್ ಮಾಡಿ ಕರೆಸಿ ಕೊಲೆ ಮಾಡಿದ್ದನು.

    ಸುಳಿವೇ ಇಲ್ಲದ ಪ್ರಕರಣದ ಹಿಂದೆ ಬಿದ್ದಿದ್ದ ಬೈಯಪ್ಪನಹಳ್ಳಿ ಪೊಲೀಸ್ರು ಕುಮಾರ್‍ನ ಹೆಂಡತಿ ಡೋರಿನ್, ಶ್ರೀಧರ್ ಮತ್ತು ಗ್ಯಾಂಗ್‍ನ ಸದಸ್ಯರನ್ನು ಈಗ ಸೆರೆಮನೆಗೆ ಕಳುಹಿಸುವಲ್ಲಿ ಯಶ್ವಸಿಯಾಗಿದ್ದಾರೆ.