ಧಾರವಾಡ: ಮುಸ್ಲಿಮರ ಪವಿತ್ರ ಹಬ್ಬಗಳಲ್ಲಿ ಒಂದಾದ ಬಕ್ರೀದ್ ಹಬ್ಬ ಸಮೀಪಿಸುತ್ತಿದ್ದು, ಪ್ರಾಣಿಯನ್ನು ಕೊಯ್ದು ಮಾಂಸ ವಿತರಿಸುವ ಕುರ್ಬಾನಿ ನಡೆಸಲು ಸಿದ್ಧತೆ ಎಲ್ಲೆಡೆ ನಡೆದಿದೆ. ಬಕ್ರೀದ್ ಹಬ್ಬದ (Bakrid Festival) ದಿನ ಸೇರಿದಂತೆ ಮೂರು ದಿನಗಳಲ್ಲಿ ಆಡು, ಟಗರು ಮೊದಲಾದ ಪ್ರಾಣಿಗಳನ್ನು ಕೊಂದು ಮಾಂಸ ಮಾಡಿ, ಸಂಬಂಧಿಕರು, ನೆರೆಹೊರೆಯವರು, ಬಡವರಿಗೆ ಹಂಚುವುದು ಸಂಪ್ರದಾಯ. ಇದಕ್ಕಾಗಿಯೇ ಕೆಲ ವ್ಯಾಪಾರಿಗಳು ಹೊರ ರಾಜ್ಯಗಳಿಂದಲೂ ಪ್ರಾಣಿಗಳನ್ನ ತಂದು ದುಬಾರಿ ಬೆಲೆಗೆ ಮಾರಾಟ ಮಾಡುತ್ತಾರೆ.

ಈ ಬಾರಿ ಬಕ್ರೀದ್ ಹಬ್ಬದಂದು ರಾಜ್ಯದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯ್ದೆ-2020 ಹಾಗೂ ಕರ್ನಾಟಕ ಪ್ರಾಣಿ ಬಲಿ ನಿಷೇಧ-1959 ಕಾಯ್ದೆ ಅಡಿಯಲ್ಲಿ ಪ್ರಾಣಿ ಬಲಿಯನ್ನು ನಿಷೇಧಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ (VHP) ಮತ್ತು ಬಜರಂಗದಳದ (Bajarangadala) ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್: ತಪ್ಪಿತಸ್ಥರಿಗೆ ಶಿಕ್ಷೆಯಾಗೋವರೆಗೂ ಪ್ರಾಮಾಣಿಕ ತನಿಖೆ ನಡೆಸಬೇಕು: ಬೊಮ್ಮಾಯಿ
ಯಾವುದೇ ಗೋವುಗಳ (Cows) ಕುರ್ಬಾನಿ ಮಾಡುವುದನ್ನು ನಿಷೇಧಿಸಬೇಕು, ಇತರೇ ಪ್ರಾಣಿಗಳ ಬಲಿಯನ್ನು ನಿಲ್ಲಿಸಬೇಕು ಹಾಗೂ ಅಕ್ರಮ ಗೋವುಗಳ ಸಾಗಾಟ ಆಗದಂತೆ ಕ್ರಮ ಕೈಗೊಳ್ಳಬೇಕು. ಜೊತೆಗೆ ಗೋವು ಸಾಕಾಣಿಕೆ ಮಾಡುವವರ ಮನೆಗಳಿಂದ, ಬೀದಿಗಳಿಂದ, ಗುಡ್ಡಗಳಿಂದ ಗೋವುಗಳ ಕಳ್ಳತನವಾಗದಂತೆ ನೋಡಿಕೊಳ್ಳಬೇಕು ಎಂದು ಬಜರಂಗದಳದ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಪೊಲೀಸರು ಅಹೋರಾತ್ರಿ ಗಸ್ತು ಹಾಗೂ ಅಗತ್ಯ ಇರುವ ಕಡೆ ನಾಕಾಬಂದಿ ಹಾಕಬೇಕು. ಜೂನ್ 18ರ ತನಕ ಯಾರೂ ಸಹ ಖಾಲಿ ಜಾಗದಲ್ಲಿ ಅಥವಾ ಮನೆಯ ಅಂಗಳದಲ್ಲಿ ಗೋವಂಶವನ್ನು ತಂದು ಕಟ್ಟಿ ಹಾಕಿ ಶೇಖರಿಸದಂತೆ ಎಚ್ಚರಿಕೆ ವಹಿಸಬೇಕು. ಯಾರಾದರೂ ಗೋ ವಧೆ ಮಾಡಿದ್ದು ಕಂಡುಬಂದಲ್ಲಿ ಅವರ ಮೇಲೆ ಗೋ ಹತ್ಯೆ ನಿಷೇಧ ಕಾಯ್ದೆ-2020ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದಿಂದ ಮಾಂಜ್ರಾನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ; ಬೀದರ್ ರೈತರ ಜಮೀನುಗಳಿಗೆ ನುಗ್ಗಿದ ನೀರು











ಎರಡು ದಿನಗಳ ಹಿಂದೆ ಕಾರ್ಕಳದ ಆನೆಕೆರೆಯಲ್ಲಿ ವಿಭಿನ್ನ ಕೋವಿನ ಜೋಡಿ ಬಗ್ಗೆ ಅನಿಲ್ ಪೊಲೀಸರಿಗೆ ಮಾಹಿತಿ ನೀಡಿದ್ದರು. ಯುವಕನನ್ನು ಹಿಡಿದು ನಾವು ಪೊಲೀಸರ ವಶಕ್ಕೆ ನೀಡಿದ್ದು ಎಂದು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದರೆ, ಭಜರಂಗದಳದವರು ಅದು ನಮ್ಮಿಂದಾದ ಕಾರ್ಯವೆಂದು ಹರಿಯಬಿಟ್ಟಿದ್ದಾರೆ. ಇದು ಇತ್ತಂಡಗಳಿಗೆ ಪ್ರತಿಷ್ಠೆಯ ವಿಚಾರವಾಗಿದ್ದು, ಹಲ್ಲೆಗೆ ಮೂಲ ಕಾರಣ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದೀಗ ಸುನೀಲ್ ನಿಟ್ಟೆ, ಪ್ರಸಾದ್, ಶರತ್ ಎಂಬ ಮೂವರನ್ನು ಬಂಧಿಸಲಾಗಿದೆ. ಇಬ್ಬರು ಪ್ರಮುಖ ಆರೋಪಿಗಳಿಗೆ ಪೊಲೀಸರು ಬಲೆಬೀಸಿದ್ದಾರೆ.























