Tag: bakery

  • ಬೆಂಗ್ಳೂರಲ್ಲಿದ್ದ ಪ್ರತಿಷ್ಠಿತ ಕರಾಚಿ ಬೇಕರಿ ಬೋರ್ಡ್ ಮುಚ್ಚಿಸಿದ ಯುವಕರು

    ಬೆಂಗ್ಳೂರಲ್ಲಿದ್ದ ಪ್ರತಿಷ್ಠಿತ ಕರಾಚಿ ಬೇಕರಿ ಬೋರ್ಡ್ ಮುಚ್ಚಿಸಿದ ಯುವಕರು

    ಬೆಂಗಳೂರು: ಪುಲ್ವಾಮಾದಲ್ಲಿ ಯೋಧರ ಮೇಲೆ ಉಗ್ರರ ದಾಳಿ ನಡೆದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿದ್ದ ಪ್ರತಿಷ್ಠಿತ ಕರಾಚಿ ಬೇಕರಿ ಬೋರ್ಡ್ ಅನ್ನು ಯುವಕರು ಮುಚ್ಚಿಸಿದ್ದಾರೆ.

    ಬೆಂಗಳೂರಿನ ಇಂದಿರಾನಗರದ 100 ಅಡಿ ರಸ್ತೆಯಲ್ಲಿ ಈ ಬೇಕರಿ ಇದೆ. ಈ ಬೇಕರಿಯ ಹೆಸರು ಕರಾಚಿ ಆಗಿದ್ದು, ಈ ಹೆಸರನ್ನು ತೆಗೆಯುವಂತೆ ಯುವಕರು ಗಲಾಟೆ ಮಾಡಿದ್ದಾರೆ.

    ನಮ್ಮ ಯೋಧರ ಮೇಲೆ ದಾಳಿ ನಡೆಸಿದ ಪಾಕಿಸ್ತಾನ ನಗರದ ಹೆಸರಲ್ಲಿ ಇಲ್ಲಿ ವ್ಯಾಪಾರ ಮಾಡುವುದು ಸರಿಯಲ್ಲ. ಇದು ನಮಗೆ ಇಷ್ಟವಾಗುತ್ತಿಲ್ಲ. ನೀವು ವ್ಯಾಪಾರ ಬೇಕಾದರೆ ಮಾಡಿಕೊಳ್ಳಿ. ಆದರೆ ಕರಾಚಿ ಹೆಸರು ತೆಗೆಯಿರಿ ಎಂದು ಯುವಕರ ಗಲಾಟೆ ಮಾಡಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಮಾಲೀಕ ಖಾನ್ ಚೆಂದ್ ರಾಮಾನಿ ಯುವಕರ ಮಾತಿನಂತೆ ಕರಾಚಿ ಹೆಸರಿಗೆ ಪ್ಲೆಕ್ಸ್ ಕಟ್ಟಿ ಮುಚ್ಚಿದ್ದಾರೆ.

    1953ರಲ್ಲಿ ಈ ಬೇಕರಿ ಸ್ಥಾಪನೆಯಾಗಿದ್ದು, ಪಾಕಿಸ್ತಾನದ ರಾಜಧಾನಿ ಕರಾಚಿ ಹೆಸರಿನಲ್ಲಿ ಬೇಕರಿಯನ್ನು ನಡೆಸಲಾಗುತ್ತಿದೆ. ಇದೇ ಹೆಸರಿನಲ್ಲಿ ಬೆಂಗಳೂರು ಸೇರಿದಂತೆ ದೇಶದ ಹಲವೆಡೆ ಬೇಕರಿ ನಡೆಯುತ್ತಿದೆ. ಅಲ್ಲದೆ ಇಂದಿರಾನಗರ ಪೊಲೀಸರು ಬೇಕರಿಯಿದ್ದ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

    1947ರಲ್ಲಿ ಭಾರತ ಮತ್ತು ಪಾಕಿಸ್ತಾನ ಬೇರೆಯಾದ ವೇಳೆ ಖಾನ್ ಚೆಂದ್ ರಾಮಾನಿ ಪಾಕಿಸ್ತಾನದಿಂದ ಹೈದರಾಬಾದ್‍ಗೆ ಬಂದು ನೆಲೆಸಿದ್ದರು. ಹೈದರಾಬಾದ್‍ನಲ್ಲಿ ಮೊದಲ ಬಾರಿಗೆ ಕರಾಚಿ ಬೇಕರಿ ಓಪನ್ ಮಾಡಿದ್ದಾರೆ. ಬಳಿಕ ಬೆಂಗಳೂರಿನ ಇಂದಿರಾ ನಗರ ಮತ್ತು ಮಹದೇವಪುರದಲ್ಲಿ ಬೇಕರಿ ಓಪನ್ ಮಾಡಿದ್ದಾರೆ. ಅಷ್ಟೇ ಅಲ್ಲದೆ ಮಹಾರಾಷ್ಟ್ರ, ಮಧ್ಯಪ್ರದೇಶ, ಕರ್ನಾಟಕ, ಆಂಧ್ರಪ್ರದೇಶ, ಆಗ್ರಾ ಸೇರಿದಂತೆ ಹತ್ತಾರು ಬ್ರಾಂಚ್ ಗಳನ್ನು ಹೊಂದಿದ್ದಾರೆ.

    ಈ ಸಂಬಂಧ ಬೇಕರಿ ಮಾಲೀಕ ಖಾನ್ ಚೆಂದ್ ರಾಮಾನಿ ದೂರು ನೀಡಿದ್ದಾರೆ. ಹೀಗಾಗಿ ಪೊಲೀಸರು ಯುವಕರ ವಿರುದ್ಧ ಕ್ರಮಕೈಗೊಳ್ಳುವ ಭರವಸೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಾಲಕ್ಕೆ ಸಿಗರೇಟ್ ಕೊಡಲ್ಲ ಎಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!

    ಸಾಲಕ್ಕೆ ಸಿಗರೇಟ್ ಕೊಡಲ್ಲ ಎಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!

    – ಪ್ರಕರಣ ದಾಖಲಾಗಿದ್ದರೂ ಆರೋಪಿಳನ್ನು ಬಂಧಿಸದ ಪೊಲೀಸರು

    ಬೆಂಗಳೂರು: ಸಾಲಕ್ಕೆ ಸಿಗರೇಟ್ ಕೊಡಲ್ಲ ಅಂತ ಹೇಳಿದ ಯುವಕನೊಬ್ಬನ ಮೇಲೆ ಪುಂಡರ ಗ್ಯಾಂಗ್ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ನಗರ ಹೊರವಲಯದ ಕೆ.ಆರ್.ಪುರದಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

    ಕುಂದಾಪುರ ಮೂಲದ ಅಭಿನವ್ ಹಲ್ಲೆಗೆ ಒಳಗಾದ ಯುವಕ. ಕೆ.ಆರ್.ಪುರದ ಸೆಂಟ್ ಅಂತೋನಿ ಸ್ಕೂಲ್ ರಸ್ತೆಯಲ್ಲಿರುವ ಬೇಕರಿಯಲ್ಲಿ ಅಭಿನವ್ ಕೆಲಸ ಮಾಡುತ್ತಿದ್ದ. ಘಟನೆಯು ಕಳೆದ ಶನಿವಾರ ಸಂಜೆ ಸುಮಾರು 8 ರಿಂದ 10 ಜನ ದುಷ್ಕರ್ಮಿಗಳ ತಂಡ ಹಲ್ಲೆ ಮಾಡಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದ್ದರೂ ಪೊಲೀಸರು ಆರೋಪಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

    ಘಟನೆಯ ವಿವರ:
    ಭರತ್ ಅಂಡ್ ಟೀಂ ಕಳೆದ ಶನಿವಾರ ಸೆಂಟ್ ಅಂತೋನಿ ಸ್ಕೂಲ್ ರಸ್ತೆಯಲ್ಲಿರುವ ಬೇಕರಿಗೆ ಹೋಗಿದ್ದಾರೆ. ಸಾಲವಾಗಿ ಸಿಗರೇಟ್ ನೀಡುವಂತೆ ಕೇಳಿದ್ದಾರೆ. ಆದರೆ ಇದಕ್ಕೆ ಒಪ್ಪದ ಅಭಿನವ್ ಕೊಡುವುದಿಲ್ಲವೆಂದು ಹೇಳಿದ್ದಾರೆ. ಇದರಿಂದಾಗಿ ಕೋಪಗೊಂಡ ಭರತ್ ಅಂಡ್ ಟೀಂ ಬೇಕರಿಗೆ ನುಗ್ಗಿ ಗ್ಲಾಸು ಹಾಗೂ ಬೆಲೆ ಬಾಳುವ ವಸ್ತುಗಳನ್ನು ಪುಡಿಪುಡಿ ಮಾಡಿದ್ದಾರೆ. ಅಷ್ಟೇ ಅಲ್ಲದೆ ಅಭಿನವ್ ಮೇಲೂ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ.

    ಹಲ್ಲೆಯ ದೃಶ್ಯವನ್ನು ಮೊಬೈಲ್‍ನಲ್ಲಿ ಸೆರೆಹಿಡಿಯುತ್ತಿದ್ದ ಯುವಕನಿಗೂ ಭರತ್ ಅಂಡ್ ಟೀಂ ಬೆದರಿಕೆ ಹಾಕಿದ್ದಾರೆ. ವಿಡಿಯೋ ಮಾಡಿದ್ರೆ ಕೈ ಕತ್ತರಿಸಿಯೇ ಜೈಲಿಗೆ ಹೋಗ್ತಿನಿ ಎಂದು ಅವಾಜ್ ಹಾಕಿದ್ದಾರೆ. ಇದರಿಂದಾಗಿ ಹೆದರಿದ ಯುವಕ ವಿಡಿಯೋ ಮಾಡುವುದನ್ನು ನಿಲ್ಲಿಸಿದ್ದಾನೆ.

    ಹಲ್ಲೆ ಮಾಡಿದ ಆರೋಪಿಗಳು ಸ್ಥಳೀಯ ನಿವಾಸಿಗಳು ಎನ್ನಲಾಗಿದ್ದು, ಈ ಕುರಿತು ಕೆ.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೂ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸದೆ ಕಾಲ ಕಳೆಯುತ್ತಿದ್ದಾರೆ. ಹಲ್ಲೆ ಮಾಡಿದ ಆರೋಪಿಗಳು ಏನು ನಡೆದಿಲ್ಲ ಎನ್ನುವಂತೆ ಇದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಡೇಂಜರ್ ಬಿಸ್ಕೆಟ್- ಕೊಬ್ಬರಿ ಬಿಸ್ಕೆಟ್‍ನಲ್ಲಿ ಸಿಕ್ತು ಸ್ಕ್ರೂ

    ಡೇಂಜರ್ ಬಿಸ್ಕೆಟ್- ಕೊಬ್ಬರಿ ಬಿಸ್ಕೆಟ್‍ನಲ್ಲಿ ಸಿಕ್ತು ಸ್ಕ್ರೂ

    ತುಮಕೂರು: ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುತ್ತಿದ್ದ ಸಭೆಯಲ್ಲಿ ಕೊಬ್ಬರಿ ಬಿಸ್ಕೆಟ್ ಹಂಚಲಾಗಿತ್ತು. ಈ ವೇಳೆ ಡಿ.ಸಿ ರಾಕೇಶ್ ಕುಮಾರ್ ತಿನ್ನುತ್ತಿದ್ದ ಬಿಸ್ಕೆಟ್ ಒಂದರಲ್ಲಿ ಸ್ಕ್ರೂ ಪತ್ತೆಯಾಗಿದೆ.

    ಹೌದು, ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುತಿದ್ದ ಸಭೆಯಲ್ಲಿ ಮಯೂರ್ ಬೇಕ್ ಲ್ಯಾಂಡ್ ಎಂಬ ಬೇಕರಿಯಿಂದ ಕೊಬ್ಬರಿ ಬಿಸ್ಕೆಟ್ ತರಿಸಿ ಎಲ್ಲರಿಗೂ ಹಂಚಲಾಗಿತ್ತು. ಎಲ್ಲರೊಡನೆ ಡಿ.ಸಿ. ರಾಕೇಶ್ ಅವರು ಕೂಡ ಬಿಸ್ಕೆಟ್ ತಿನ್ನುತ್ತಿದ್ದರು. ಈ ವೇಳೆ ಬಿಸ್ಕೆಟ್ ಒಂದರಲ್ಲಿ ಸ್ಕ್ರೂ ಪತ್ತೆಯಾಗಿದೆ. ಸ್ಕ್ರೂ ಕಂಡ ತಕ್ಷಣ ಜಿಲ್ಲಾಧಿಕಾರಿಗಳು ಒಂದು ಕ್ಷಣ ಗಲಿಬಿಲಿಯಾದ್ರು. ಅಲ್ಲದೆ ಈ ಬಿಸ್ಕೆಟ್ ನನಗೆ ಸಿಕ್ಕಿದೆ ಓಕೆ ಆದರೆ ಇಂತಹ ತಿನಿಸುಗಳನ್ನು ಮಕ್ಕಳು ತಿಂದರೆ ಏನೂ ಗತಿ ಎಂದು ಗುಡುಗಿದ್ದಾರೆ.

    ಈ ಘಟನೆ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ರಾಕೇಶ್ ಅವರು, ಆಹಾರ ಸುರಕ್ಷತೆ ಕಾಯ್ದೆ ಪ್ರಕಾರ ಜಿಲ್ಲೆಯಲ್ಲಿರುವ ಎಲ್ಲಾ ಬೇಕರಿಗಳು ಹಾಗೂ ಆಹಾರ ಮಾರಾಟದ ಅಂಗಡಿಗಳು ತಾವು ತಯಾರಿಸುವ ಆಹಾರಗಳ ಗುಣಮಟ್ಟದ ವರದಿಯನ್ನು ಜಿಲ್ಲಾಧಿಕಾರಿ ಕಚೇರಿಗೆ ನೀಡಬೇಕು. ನಿನ್ನೆ ನಡೆದ ಘಟನೆಯಿಂದ ಎಚ್ಚೆತ್ತುಕೊಂಡು ಆಹಾರ ಸುರಕ್ಷತೆ ಅಧಿಕಾರಿಗಳಿಗೆ ಈ ಕುರಿತು ಪರಿಶೀಲನೆ ಮಾಡುವಂತೆ ಆದೇಶಿಸಿದ್ದೇನೆ. ಮುಂದೆ ಈ ತರಹದ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳುತ್ತೇವೆ, ಎಲ್ಲಾ ಬೇಕರಿ ಹಾಗೂ ತಿಂಡಿ ತಿನಿಸು ಅಂಗಡಿ ಮಾಲೀಕರಿಗೂ ಆಹಾರ ಗುಣಮಟ್ಟದ ವರದಿಯನ್ನು ಸಲ್ಲಿಸುವ ನಿಯಮವನ್ನು ಕಡ್ಡಾಯಗೊಳಿಸುತ್ತೇವೆ ಎಂದು ಹೇಳಿದರು.

    ಬಿಸ್ಕೆಟ್ ತಯಾರು ಮಾಡಿದ್ದ ಮಯೂರ್ ಬೇಕ್ ಲ್ಯಾಂಡ್ ಬೇಕರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿ.ಸಿ ಆದೇಶಿಸಿದ್ದರು. ಜಿಲ್ಲಾಧಿಕಾರಿಗಳ ಆದೇಶದಂತೆ ಮಯೂರ್ ಬೇಕ್ ಲ್ಯಾಂಡ್ ತಿನಿಸುಗಳನ್ನ ಜಪ್ತಿ ಮಾಡಿದ ಅಧಿಕಾರಿಗಳು ಬೇಕರಿಗೆ ಬೀಗಮುದ್ರೆ ಹಾಕಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಟೀ ಕುಡಿದ ಹಣ ಕೇಳಿದಕ್ಕೆ ಬೇಕರಿ ಮಾಲೀಕನಿಗೆ ಹಲ್ಲೆ

    ಟೀ ಕುಡಿದ ಹಣ ಕೇಳಿದಕ್ಕೆ ಬೇಕರಿ ಮಾಲೀಕನಿಗೆ ಹಲ್ಲೆ

    ಬೆಂಗಳೂರು: ಟೀ ಮತ್ತು ಸಿಗರೇಟ್ ಪಡೆದ ಪುಂಡರಿಗೆ ಹಣ ಕೇಳಿದ್ದಕ್ಕೆ ಬೇಕರಿ ಮಾಲೀಕ ಸೇರಿ ಅಲ್ಲಿ ಕೆಲಸ ಮಾಡುವಂತವರ ಮೇಲೆ ನಾಲ್ಕು ಜನ ಕಿಡಿಗೇಡಿಗಳು ಹಲ್ಲೆ ನಡೆಸಿರುವಂತಹ ಘಟನೆ ಆನೇಕಲ್ ತಾಲೂಕಿನ ಸರ್ಜಾಪುರ ಸಮೀಪದ ಬಿಲ್ಲಾಪುರಗೇಟ್ ಪಿಂಪಲ್ಸ್ ಮಾರ್ಟ್ ಬಳಿ ನಡೆದಿದೆ.

    ಈ ಘಟನೆ ಗುರುವಾರ ರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನಾಲ್ಕು ಜನ ಕಿಡಿಗೇಡಿಗಳು ಬೇಕರಿಗೆ ಬಂದು ಟೀ ಕುಡಿದಿದ್ದಾರೆ. ನಂತರ ಹಣ ಕೇಳಿದ ಬೇಕರಿ ಮಾಲೀಕ ಸೇರಿ ಅಲ್ಲಿ ಕೆಲಸ ಮಾಡುವಂತವರ ಮೇಲೆ ಈ ನಾಲ್ಕು ಜನ ಕಿಡಿಗೇಡಿಗಳು ಮನಬಂದಂತೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

    ಈ ಕಿಡಿಗೇಡಿಗಳ ದುಂಡಾವರ್ತನೆಯ ದೃಶ್ಯಗಳು ಬೇಕರಿಯಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಯುವಕರು ಸ್ಥಳೀಯ ನಿವಾಸಿಗಳಾಗಿದ್ದು ಪೊಲೀಸರ ಹಾಗು ಜನಪ್ರತಿನಿಧಿಗಳು ಇವರ ಬೆಂಬಲಕ್ಕೆ ನಿಂತಿದ್ದಾರೆ. ಇಂತಹ ಪ್ರಕರಣಗಳು ಪದೇ ಪದೇ ನಡೆಯುತ್ತಿದ್ದರು ಪೊಲೀಸರು ಯಾವ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅಲ್ಲಿನ ನಿವಾಸಿಗಳು ಆರೋಪಿಸುತ್ತಾರೆ.

    ಸದ್ಯ ಹಲ್ಲೆಗೊಳಗಾದ ಬೇಕರಿ ಮಾಲೀಕ ಬದ್ರುದ್ದೀನ್ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿ ಆ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ರಕ್ಷಣೆ ಕೋರಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬೇಕರಿ ತಿನಿಸು ತಿಂದು ಗರ್ಭಿಣಿ ಸೇರಿದಂತೆ 9 ಮಕ್ಕಳು ಅಸ್ವಸ್ಥ

    ಬೇಕರಿ ತಿನಿಸು ತಿಂದು ಗರ್ಭಿಣಿ ಸೇರಿದಂತೆ 9 ಮಕ್ಕಳು ಅಸ್ವಸ್ಥ

    ಮಂಡ್ಯ: ಬೇಕರಿಯಲ್ಲಿ ಖರೀದಿಸಿದ ತಿನಿಸು ತಿಂದು ಗರ್ಭಿಣಿ ಸೇರಿದಂತೆ 9 ಮಕ್ಕಳು ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ ಘಟನೆ ಮಂಡ್ಯ ಜಿಲ್ಲೆಯ ಕೆಆರ್ ಪೇಟೆಯಲ್ಲಿ ನಡೆದಿದೆ.

    ಕೆಆರ್ ಪೇಟೆ ಪಟ್ಟಣದ ಬೇಕರಿಯೊಂದರಲ್ಲಿ ವಿವಿಧ ಗ್ರಾಮಗಳ ಜನ ಕೇಕ್ ಖರೀದಿಸಿ ಮನೆಗೆ ತೆಗೆದುಕೊಂಡು ಹೋಗಿದ್ದರು. ಕೇಕ್ ತಿಂದ ನಂತರ ಗರ್ಭಿಣಿ ಸೇರಿದಂತೆ 9 ಮಕ್ಕಳು ವಾಂತಿ ಮಾಡಿಕೊಂಡು ಅಸ್ವಸ್ಥರಾಗಿದ್ದಾರೆ.

    ಗುರುವಾರ ಸಂಜೆ 6 ಗಂಟೆಯಿಂದ ಒಬ್ಬರಾದ ಮೇಲೆ ಒಬ್ಬರಂತೆ ರಾತ್ರಿ 11 ಗಂಟೆವರೆಗೂ ಅಸ್ವಸ್ಥಗೊಂಡಿದ್ದು, ಕೂಡಲೇ ಅವರನ್ನು ಕೆಆರ್ ಪೇಟೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯಲ್ಲಿ ಮಕ್ಕಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.

    ಏಳು ಮಕ್ಕಳನ್ನು ಮುಂಜಾಗ್ರತಾ ಕ್ರಮವಾಗಿ ಮೈಸೂರು ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಎಲ್ಲರ ಆರೋಗ್ಯದಲ್ಲೂ ಚೇತರಿಕೆ ಕಂಡುಬಂದಿದ್ದು, ಈ ಪ್ರಕರಣದಿಂದಾಗಿ ಪೋಷಕರಲ್ಲಿ ಆತಂಕ ಮೂಡಿದೆ. ಘಟನೆ ನಡೆದ ತಕ್ಷಣ ಬೇಕರಿಗೆ ದೌಡಾಯಿಸಿದ ಅಧಿಕಾರಿಗಳು ಅನಾರೋಗ್ಯಕ್ಕೆ ಕಾರಣವಾದ ಕೇಕ್ ವಶಪಡಿಸಿಕೊಂಡು ತನಿಖೆ ನಡೆಸಿದ್ದಾರೆ.

  • ಕೇಕ್ ತಿಂದು ಮಂಡ್ಯದ 5 ಮಕ್ಕಳು ಅಸ್ವಸ್ಥ

    ಕೇಕ್ ತಿಂದು ಮಂಡ್ಯದ 5 ಮಕ್ಕಳು ಅಸ್ವಸ್ಥ

    ಮಂಡ್ಯ: ಕೇಕ್ ತಿಂದು 5 ಮಕ್ಕಳು ವಾಂತಿ ಭೇದಿಯಿಂದ ನರಳಾಡಿದಂತ ಘಟನೆ ಮಂಡ್ಯದಲ್ಲಿ ನಡೆದಿದೆ.

    ಬುಧವಾರ ಸಂಜೆ ಮಂಡ್ಯದ ಕೆ.ಎಂ ದೊಡ್ಡಿಯ ಭೈರವೇಶ್ವರ ಬೇಕರಿಯಲ್ಲಿ ಸುತ್ತಮುತ್ತಲ ಗ್ರಾಮದ ಕೆಲವರು ಕೇಕ್ ಖರೀದಿಸಿದ್ದಾರೆ. ಬಳಿಕ ಆ ಕೇಕನ್ನು ಮನೆಗೆ ತೆಗೆದುಕೊಂಡು ಹೋಗಿ ತಮ್ಮ ಮಕ್ಕಳಿಗೆ ತಿನ್ನಿಸಿದ್ದಾರೆ. ಪರಿಣಾಮ ಕೆಎಂ ದೊಡ್ಡಿ ಪಕ್ಕದ ಮಾದರಹಳ್ಳಿ ಗ್ರಾಮದ ಧನುಷ್ (6), ಹುಲಿಗೆರೆಪುರ ಗ್ರಾಮದ ದರ್ಶನ್ (9), ಕೊಳ್ಳೇಗಾಲದ ಶ್ರೇಯ (3), ಅಜ್ಜಳ್ಳಿಯ ಅನುಷಾ (4) ಹಾಗೂ ನಿಶ್ಚಿತ ಕೇಕ್ ತಿಂದು ಅಸ್ವಸ್ಥಗೊಂಡಿದ್ದಾರೆ.

    ಬಳಿಕ ಆತಂಕಗೊಂಡ ಮಕ್ಕಳ ಪೋಷಕರು ಕೆಎಂ ದೊಡ್ಡಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಮಿಮ್ಸ್ ನಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡಲಾಗಿದ್ದು, ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.

  • ಅಡ್ಡಾದಿಡ್ಡಿ ಕಾರು ಚಾಲಾಯಿಸಿ ಬೇಕರಿಗೆ ನುಗ್ಗಿಸಿದ ಚಾಲಕ- ನಾಲ್ವರಿಗೆ ಗಾಯ

    ಅಡ್ಡಾದಿಡ್ಡಿ ಕಾರು ಚಾಲಾಯಿಸಿ ಬೇಕರಿಗೆ ನುಗ್ಗಿಸಿದ ಚಾಲಕ- ನಾಲ್ವರಿಗೆ ಗಾಯ

    – ಕಾರು ಚಾಲಕ ಎಂದು ಬೇರೊಬ್ಬರಿಗೆ ಥಳಿಸಿದ ಸಾರ್ವಜನಿಕರು

    ಮಂಡ್ಯ: ಚಾಲಕ ಅಡ್ಡಾದಿಡ್ಡಿಯಾಗಿ ಕಾರು ಚಾಲನೆ ಮಾಡಿ ಬೇಕರಿಯೊಳಗೆ ನುಗ್ಗಿಸಿದ ಪರಿಣಾಮ ಬೇಕರಿಯ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿ, ನಾಲ್ವರು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆ, ಕೆಆರ್ ಪೇಟೆ ಪಟ್ಟಣದಲ್ಲಿ ನಡೆದಿದೆ.

    ಜಿಲ್ಲೆಯ ಕೆಆರ್ ಪೇಟೆ ಪಟ್ಟಣ ಅಮೂಲ್ಯ ಬೇಕರಿಗೆ ಇದ್ದಕ್ಕಿದ್ದಂತೆ ವೇಗವಾಗಿ ಬಂದ ಕಾರು ನುಗ್ಗಿದೆ. ಪರಿಣಾಮ ಬೇಕರಿ ಮುಂದೆ ಕುಳಿತಿದ್ದ ಶರೀಫ್ ಮತ್ತು ಗೋವಿಂದ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರಿನ ಮುಂಬದಿ ಕುಳಿತಿದ್ದ ರೋಷನ್ ಪಟೇಲ್ ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನ ಮೈಸೂರಿನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ತುಳಸೀರಾಮ್ ಕಾರು ಚಾಲನೆ ಮಾಡಿದ ವ್ಯಕ್ತಿಯಾಗಿದ್ದು, ವೇಗವಾಗಿ ಅಡ್ಡಾದಿಡ್ಡಿ ಕಾರು ಓಡಿಸಿದ್ದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಕಾರು ಬೇಕರಿಯೊಳಗೆ ನುಗ್ಗಿದ ಪರಿಣಾಮ ಬೇಕರಿಯಲ್ಲಿದ್ದ ತಿಂಡಿ ತಿನಿಸುಗಳೆಲ್ಲ ಚೆಲ್ಲಾಪಿಲ್ಲಿಯಾಗಿವೆ. ಇದೇ ವೇಳೆ ಕಾರು ಚಾಲಕ ಎಂದು ಸಾರ್ವಜನಿಕರು ಬೇರೊಬ್ಬರಿಗೆ ಥಳಿಸಿದ ಘಟನೆಯೂ ನಡೆದಿದೆ. ಘಟನೆ ಸಂಬಂಧ ಕೆಆರ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಕಳ್ಳತನಕ್ಕೆ ಬಂದು ಬೇಕರಿಯನ್ನೇ ಬ್ಲಾಸ್ಟ್ ಮಾಡಲು ಯತ್ನಿಸಿದ ಕಳ್ಳ

    ಕಳ್ಳತನಕ್ಕೆ ಬಂದು ಬೇಕರಿಯನ್ನೇ ಬ್ಲಾಸ್ಟ್ ಮಾಡಲು ಯತ್ನಿಸಿದ ಕಳ್ಳ

    ವಿಜಯಪುರ: ಕಳ್ಳನೊಬ್ಬ ಬೇಕರಿ ಕಳ್ಳತನಕ್ಕೆ ಮುಂದಾಗಿ, ಕ್ಯಾಶ್ ಕೌಂಟರ್ ನಲ್ಲಿ 3 ಸಾವಿರ ಹಣವನ್ನೇನೋ ದೋಚಿದ. ಆದ್ರೆ ತಾನು ಕಳ್ಳತನ ಮಾಡಿದ್ದ ದೃಶ್ಯ ಸಿಸಿಟಿಯಲ್ಲಿ ರಿಕಾರ್ಡ್ ಆಗಿದ್ದು ಗೊತ್ತಾಗಿತ್ತು. ಹೀಗಾಗಿ ತಾನು ಕಳ್ಳತನ ಮಾಡಿದ್ದು ಗೊತ್ತಾಗಬಾರದೆಂದು ಆತ ಕಂಡುಕೊಂಡಿದ್ದ ಉಪಾಯ ಮಾತ್ರ ಭಾರಿ ಅನಾಹುತವನ್ನೇ ಸೃಷ್ಟಿಸಿಬಡಬಹುದಿತ್ತು.

    ನಗರದ ಬಸವೇಶ್ವರ ವೃತ್ತದಲ್ಲಿರುವ ಕೇಕ್ ವಾಲಾ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಈ ಖದೀಮ ತನ್ನ ಮುಖ ಸಿಸಿಟಿವಿಯಲ್ಲಿ ಬರಬಾರದೆಂಬ ಉದ್ದೇಶದಿಂದ ಬೇಕರಿಯಲ್ಲಿದ್ದ ಸಿಲಿಂಡರ್ ವಾಲ್ ತೆಗೆದು ಇಡೀ ಕಟ್ಟಡವನ್ನೇ ಧ್ವಂಸ ಮಾಡಲು ಮುಂದಾಗಿದ್ದ. ಆದ್ರೆ ಅದೃಷ್ಟವಷಾತ್ ಬೆಳಗ್ಗೆ ಬೇಕರಿಗೆ ಬಂದ ಮಾಲೀಕರು ಗ್ಯಾಸ್ ವಾಸನೆ ಗಮನಿಸಿ ತಕ್ಷಣ ಸಿಲಿಂಡರ್ ಕಂಪನಿಯವರನ್ನು ಕರೆಸಿ ತಪಾಸಣೆ ನಡೆಸಿದ್ದಾರೆ. ನಂತರ ಎಲ್ಲಾ ಸಿಲಿಂಡರ್‍ಗಳನ್ನು ಹೊರಹಾಕಿದ್ದಾರೆ.

    ಬಳಿಕ ಸಿಸಿಟಿವಿ ಚೆಕ್ ಮಾಡಿದಾಗಲೇ ಗೊತ್ತಾಗಿದ್ದು ಖದೀಮನ ಕೃತ್ಯದ ಅಸಲಿ ಕಹಾನಿ. ಸದ್ಯ ಕೇಕ್ ವಾಲಾ ಮಾಲೀಕರು ಗಾಂಧಿಚೌಕ ಠಾಣೆಯಲ್ಲಿ ದೂರನ್ನು ನೀಡಿದ್ದು ಖದೀಮನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

    ಒಂದು ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದರೆ ಈ ಕಟ್ಟಡದಲ್ಲಿ ಮಲಗುತ್ತಿದ್ದ 20 ಕ್ಕೂ ಹೆಚ್ಚು ಜನರು ಸಾವು ನೋವು ಅನುಭವಿಸುತ್ತಿದ್ದರು. ದೇವರು ದೊಡ್ಡವನು ಭಾರಿ ಅನಾಹುತ ತಪ್ಪಿದಂತಾಗಿದೆ ಎಂದು ಬೇಕರಿ ಮಾಲೀಕರು ನಿಟ್ಟುಸಿರುಬಿಟ್ಟಿದ್ದಾರೆ.

  • ಬೇಕರಿ ಕೇಕ್ ನಲ್ಲಿ ಹುಳ-ಹುಪ್ಪಟೆ, ಗ್ರಾಹಕ ಕಂಗಾಲು

    ಬೇಕರಿ ಕೇಕ್ ನಲ್ಲಿ ಹುಳ-ಹುಪ್ಪಟೆ, ಗ್ರಾಹಕ ಕಂಗಾಲು

    ಮಂಗಳೂರು: ಬೇಕರಿಗಳಲ್ಲಿ ಖರೀದಿಸಿ ತಂದ ಪ್ಯಾಕೇಜ್ಡ್ ಉತ್ಪನ್ನಗಳನ್ನ ಒಂದೆರಡು ದಿನವಾದ್ರೂ ಮನೆಯಲ್ಲಿಟ್ಟುಕೊಂಡು ಸೇವಿಸಬಹುದು ಅಂದ್ಕೊಂಡಿರ್ತೀವಿ. ಆದ್ರೆ ಗ್ರಾಹಕರೊಬ್ಬರು ಖರೀದಿಸಿದ ಕಪ್ ಕೇಕ್ ಪ್ಯಾಕೆಟ್‍ನಲ್ಲಿ ಹುಳ ಕಂಡುಬಂದ ಘಟನೆ ಮಂಗಳೂರಿನಲ್ಲಿ ನಡೆದಿದೆ.

    ಮಂಗಳೂರಿನ ಉರ್ವ ಸ್ಟೋರ್ ಬಳಿಯಿರುವ ಬೇಕರಿಯಲ್ಲಿ ಗ್ರಾಹಕ ದೀಪಕ್ ಸುವರ್ಣ ಎಂಬವರು ಕಪ್ ಕೇಕ್ ಖರೀದಿಸಿದ್ದರು. ತಯಾರಿಸಿದ ದಿನಾಂಕ ಸೆಪ್ಟೆಂಬರ್ 12 ಅಂತಾ ನಮೂದಿಸಿದ್ದಲ್ಲದೆ 15 ದಿನಗಳ ಕಾಲ ಬಳಕೆಗೆ ಯೋಗ್ಯ ಅನ್ನುವುದನ್ನೂ ಪ್ಯಾಕೆಟ್ ಮೇಲೆ ಹಾಕಲಾಗಿದೆ. ಹೀಗಿದ್ದರೂ ತಯಾರಿಸಿದ ದಿನಾಂಕದ ನಾಲ್ಕೇ ದಿನದಲ್ಲಿ ಹುಳ ಕಾಣಿಸಿದೆ.

    ಮಂಗಳೂರಿನಲ್ಲಿ ಹೆಸರು ಗಳಿಸಿರುವ ನರನ್ಸ್ ಕಂಪೆನಿಯ ಕಪ್ ಕೇಕ್ ನಲ್ಲಿ ಇಂತಹ ಹುಳ ಕಂಡುಬಂದಿದೆ.

  • ಬೇಕರಿ ತಿನಿಸುಗಳಂದ್ರೆ ಇಷ್ಟನಾ? ಹಾಗಿದ್ರೆ ನೀವು ಈ ಸ್ಟೋರಿ ಓದ್ಲೇಬೇಕು

    ಬೇಕರಿ ತಿನಿಸುಗಳಂದ್ರೆ ಇಷ್ಟನಾ? ಹಾಗಿದ್ರೆ ನೀವು ಈ ಸ್ಟೋರಿ ಓದ್ಲೇಬೇಕು

    ಕೊಪ್ಪಳ: ನೀವು ಬೇಕರಿ ತಿನಿಸುಗಳ ಪ್ರಿಯರಾಗಿದ್ರೆ ಖಂಡಿತವಾಗ್ಲೂ ಈ ಸ್ಟೋರಿ ಓದ್ಲೇಬೇಕು. ರುಚಿ ರುಚಿಯಾದ ಬೇಕರಿ ತಿನಿಸು, ಎಗ್ ರೈಸ್ ಚಪ್ಪರಿಸೋ ಮುನ್ನ ಆ ಮೊಟ್ಟೆ ಎಂಥದ್ದು ಎಂಬ ಬಗ್ಗೆ ಒಮ್ಮೆ ಯೋಚಿಸಿ. ಇಲ್ಲವಾದ್ರೆ ನಿಮ್ಮ ಆರೋಗ್ಯ ಹದಗೆಡೋದು ಗ್ಯಾರಂಟಿ.

    ಹೌದು. ರಾಜ್ಯದಲ್ಲಿಯೇ ಕುಕ್ಕಟ ಉದ್ದಿಮೆಗೆ ಖ್ಯಾತಿ ಪಡೆದಿರೋ ಜಿಲ್ಲೆಯಲ್ಲಿ ಡ್ಯಾಮೇಜ್ ಮೊಟ್ಟೆ ದಂಧೆ ನಡೀತಿದೆ. ಮೊಟ್ಟೆ ವಿಷಯದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಇಂಥದ್ದೊಂದು ಎಚ್ಚರಿಕೆ ಮಾತು ಕೇಳಿ ಬರ್ತಿದೆ. ಯಾಕಂದ್ರೆ ಜಿಲ್ಲೆಯಲ್ಲಿ ಕೆಟ್ಟು, ಕೊಳಕು ನಾರುವ ಮೊಟ್ಟೆಗಳನ್ನ ಬೇಕರಿ ಅಂಗಡಿಗೆ ಬಿಕರಿ ಮಾಡ್ತಿದ್ದಾರೆ ಕೆಲ ಕೋಳಿ ಫಾರ್ಮ್ ಮಾಲೀಕರು. ಇದ್ರಿಂದ ಕಡಿಮೆ ದರದಲ್ಲಿ ಮೊಟ್ಟೆ ಖರೀದಿಸಿ ಬೇಕರಿ ಮಾಲೀಕರು ಹಣ ಜೇಬಿಗಿಳಿಸ್ತಿದ್ರೆ ಕೊಳಕು ಮೊಟ್ಟೆಯಿಂದ ತಯಾರಿಸಿದ ತಿನಿಸು ತಿಂದು ಜನರ ಆರೋಗ್ಯ ಹದಗೆಡ್ತಿದೆ.

    ಇಂಥದ್ದೊಂದು ದಂಧೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ಹೊರವಲಯದ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರೋ ಮಾಣಿಕ್ಯಂ ಕೋಳಿ ಫಾರಂನಲ್ಲಿ ಎಗ್ಗಿಯಿಲ್ಲದೆ ನಡೀತಿತ್ತು. ಇದರ ಮೇಲೆ ಕಣ್ಣಿಟ್ಟಿದ್ದ ಯುವಬ್ರಿಗೇಡ್ ಕಾರ್ಯಕರ್ತರು ಕೊಳಕು ಮೊಟ್ಟೆ ಸಾಗಿಸ್ತಿದ್ದ ಟಂಟಂ ತಡೆದು ಪೊಲೀಸರಿಗೊಪ್ಪಿಸಿದ್ದಾರೆ. ಈ ಮೂಲಕ ಕೊಳಕು ಮೊಟ್ಟೆ ಮಾರಾಟ ದಂಧೆಯ ಜಾಲ ಪತ್ತೆ ಹಚ್ಚಿದ್ದಾರೆ.

    ಇದನ್ನೂ ಓದಿ: ಪ್ರತಿದಿನ ಮೊಟ್ಟೆ ತಿಂತೀರಾ? ಹಾಗಿದ್ರೆ ನೀವು ಈ ಸುದ್ದಿ ಓದ್ಲೇಬೇಕು

    ಇಂಥದ್ದೊಂದು ಜಾಲ ಪತ್ತೆಯಾಗುತ್ತಿದ್ದಂತೆ ಮೊಟ್ಟೆಪ್ರಿಯರು ತಳಮಳಗೊಂಡಿದ್ದಾರೆ. ಮೊಟ್ಟೆಯಿಂದ ತಯಾರಿಸಿದ ಬೇಕರಿ ತಿನಿಸುಗಳನ್ನ ಖರೀದಿಸಲು ಹಿಂದೇಟು ಹಾಕ್ತಿದ್ದಾರೆ. ಒಡೆದ, ಹುಳುಗಳು ತುಂಬಿಕೊಂಡು ಗಬ್ಬು ನಾರುವ ಮೊಟ್ಟೆಗಳನ್ನು ಪಾತ್ರೆಗಳಲ್ಲಿ ತುಂಬಿ ವಾಹನಗಳಲ್ಲಿ ಕುಷ್ಟಗಿ ಸೇರಿದಂತೆ ಗಂಗಾವತಿ, ಕೊಪ್ಪಳ, ಇಲಕಲ್ ಇನ್ನಿತರ ಕಡೆ ಇರುವ ಬೇಕರಿಗಳಿಗೆ ಸಾಗಣೆ ಮಾಡ್ತಿದ್ರು ಮಾಣಿಕ್ಯಂ ಕೋಳಿ ಫಾರ್ಮ್ ಮಾಲೀಕ ರಾಮಮನೋಹರ್. ಜಿಲ್ಲೆಯಲ್ಲಿ ಇಂಥಹ ಸಾಕಷ್ಟು ಪ್ರಕರಣಗಳಿವೆ. ಪೊಲೀಸರು ಪತ್ತೆಹಚ್ಚಬೇಕು ಅಂತಾರೆ ಹೋರಾಟಗಾರರು.

    ಇದನ್ನೂ ಓದಿ: ಅಕ್ಕಿ, ಮೊಟ್ಟೆ ಆಯ್ತು ಈಗ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ಪ್ಲಾಸ್ಟಿಕ್ ಕ್ಯಾಬೇಜ್ – ವಿಡಿಯೋ ನೋಡಿ

    ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರು ಕೂಡ ಬೇಕರಿ ತಿನಿಸು ತಿನ್ನಲು ಮುಗಿಬೀಳ್ತಾರೆ. ಅದನ್ನ ಸೇವಿಸೋ ಮುನ್ನ ಯೋಚಿಸಿ ಅನ್ನೋದು ನಮ್ಮ ಕಾಳಜಿ.