Tag: Bala

  • ನಿರ್ದೇಶಕ ಬಾಲಾ ನನಗೆ ಹೊಡೆದರು: ಖ್ಯಾತ ನಟಿಯ ಮಮಿತಾ ಆರೋಪ

    ನಿರ್ದೇಶಕ ಬಾಲಾ ನನಗೆ ಹೊಡೆದರು: ಖ್ಯಾತ ನಟಿಯ ಮಮಿತಾ ಆರೋಪ

    ಮಿಳು ಸಿನಿಮಾ ರಂಗದ ಖ್ಯಾತ ನಿರ್ದೇಶಕ, ರಾಷ್ಟ್ರ ಪ್ರಶಸ್ತಿ ವಿಜೇತ ಬಾಲಾ (Bala) ಅವರು ತಮ್ಮ ಸಿನಿಮಾದ ನಟಿಯೊಬ್ಬರ ಮೇಲೆ ಕೈ ಮಾಡಿದ್ದಾರಂತೆ. ಈ ವಿಷಯವನ್ನು ಹೊಡೆತಕ್ಕೆ ಒಳಗಾದ ನಟಿಯೇ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಆ ಕಾರಣಕ್ಕಾಗಿಯೇ ತಾವು ಆ ಸಿನಿಮಾದಿಂದ ಹೊರಬರಬೇಕಾಯಿತು ಎಂದಿದ್ದಾರೆ.

    ಪಿತಾಮಗನ್, ಸೇತು, ನಾನ್ ಕಡವುಲ್ ಸೇರಿದಂತೆ ಸೂಪರ್ ಹಿಟ್ ಚಿತ್ರಗಳನ್ನು ನೀಡಿದವರು ಬಾಲಾ. ತಮ್ಮ ಸಿನಿಮಾದಿಂದಾಗಿ ರಾಷ್ಟ್ರ ಮಟ್ಟದಲ್ಲಿ ಸುದ್ದಿಯೂ ಆದವರು. ದೇಸಿ ಗುಣದ ಸಿನಿಮಾಗಳ ಜನಕ ಎಂದೆಲ್ಲ ಕರೆಯಿಸಿಕೊಂಡವರು. ಅಂಥ ನಿರ್ದೇಶಕರು ತಮ್ಮದೇ ಸಿನಿಮಾದ ನಟಿಯನ್ನು ಹೊಡೆದಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

    ಮಲಯಾಳಂ ಮೂಲದ ನಟಿ ಮಮತಾ ಬಿಜು (Mamitha Biju), ವಾನಂಗನ್ ಸಿನಿಮಾದಲ್ಲಿ ನಟಿಸುತ್ತಿದ್ದರು. ಈ ಸಿನಿಮಾದಲ್ಲಿ ವಿಲ್ಲಡಿಚ್ಚಾಂಪಾಟನ್ ಕಲಾವಿದೆಯಂತೆ ವಾದ್ಯ ನುಡಿಸುತ್ತಾ ಡಾನ್ಸ್ ಮಾಡಬೇಕಿತ್ತಂತೆ. ನುರಿತ ಕಲಾವಿದರ ಜೊತೆ ಸಡನ್ನಾಗಿ ಬೆರೆಯೋದು ಕಷ್ಟವಾಯಿತು. ಹಾಗಾಗಿ ಮೂರು ಟೇಕ್ ತೆಗೆದುಕೊಂಡೆ. ಈ ಕಾರಣಕ್ಕಾಗಿ ನಿರ್ದೇಶಕರು ಹೊಡದೇ ಬಿಟ್ಟರು ಎಂದಿದ್ದಾರೆ ಮಮಿತಾ.

    ಸೆಟ್ ನಲ್ಲಿ ನಾನು ಕೋಪಿಷ್ಠ. ಬೈದರೆ ಮನಸ್ಸಿಗೆ ತಗೋಬೇಡಿ ಎಂದು ಬಾಲಾ ಅವರು ಮೊದಲೇ ಹೇಳಿದ್ದರೂ, ಅವರು ಬೈದಾಗೊಮ್ಮೆ ಕಿರಿಕಿರಿ ಅನಿಸೋದು. ಆದರೆ, ಅವರು ನನಗೆ ಹೊಡೆದ ಮೇಲೆ ಕೆಲಸ ಮಾಡಲು ಮನಸ್ಸಾಗಲಿಲ್ಲ. ಹಾಗಾಗಿ ಸಿನಿಮಾದಿಂದ ಹೊರ ನಡೆದೆ ಎಂದಿದ್ದಾರೆ ಮಮಿತಾ.

  • ಚಿತ್ರರಂಗದಲ್ಲಿ ಮುಂದುವರೆದ ವಿಚ್ಚೇದನ ಸರದಿ : ದಾಂಪತ್ಯ ಜೀವನಕ್ಕೆ ಸ್ಟಾರ್ ನಿರ್ದೇಶಕ ಬಾಲ ವಿದಾಯ

    ಚಿತ್ರರಂಗದಲ್ಲಿ ಮುಂದುವರೆದ ವಿಚ್ಚೇದನ ಸರದಿ : ದಾಂಪತ್ಯ ಜೀವನಕ್ಕೆ ಸ್ಟಾರ್ ನಿರ್ದೇಶಕ ಬಾಲ ವಿದಾಯ

    ಮಿಳಿನ ಸೂಪರ್ ಸ್ಟಾರ್ ನಿರ್ದೇಶಕ ಬಾಲ ತಮ್ಮ 18 ವರ್ಷದ ದಾಂಪತ್ಯ ಜೀವನಕ್ಕೆ ವಿದಾಯ ಹೇಳಿದ್ದಾರೆ. ತಮಿಳಿನ ಖ್ಯಾತ ನಟ, ರಜನಿಕಾಂತ್ ಅಳಿಯ ಧನುಷ್ ವಿಚ್ಛೇದನದ ಬೆನ್ನೆಲ್ಲೆ ಬಾಲ ನಿರ್ಧಾರ ಸಿನಿಮಾ ರಂಗದವರ ಬಗ್ಗೆ ಅನುಮಾನ ಪಡುವಂತೆ ಮಾಡಿದೆ. ಇದನ್ನೂ ಓದಿ : ರಾಜಮೌಳಿ ಹೊಸ ಸಿನಿಮಾದಲ್ಲಿ ಕಿಚ್ಚ ಸುದೀಪ್ : ಏನಿದು ಹೊಸ ಸುದ್ದಿ?

    ನಿರ್ದೇಶಕ ಬಾಲ ಮತ್ತು ಮುತ್ತು ಮಲಾರ್ 2004 ಜುಲೈ 7ರಂದು ಮಧುರೈನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇವರ ಸುಖಿ ದಾಂಪತ್ಯಕ್ಕೆ ಸಾಕ್ಷಿಯಾಗಿ ಮಗಳೊಬ್ಬಳು ಇದ್ದಾರೆ. ಇತ್ತೀಚಿನ ದಿನಗಳಲ್ಲಿ ದಂಪತಿಯ ನಡುವೆ ಹೊಂದಾಣಿಕೆ ಆಗದ ಕಾರಣಕ್ಕಾಗಿ ಚೆನ್ನೈನ ಕೌಟುಂಬಿಕ ನ್ಯಾಯಾಲಯಕ್ಕೆ ಮೊರೆ ಹೋಗಿದ್ದರು. ಈಗಾಗಲೇ ನಾಲ್ಕು ವರ್ಷಗಳಿಂದ ಅವರು ಪ್ರತ್ಯೇಕವಾಗಿಯೇ ವಾಸಿಸುತ್ತಿದ್ದರಿಂದ ಬೇಗ ವಿಚ್ಛೇದನ ಸಿಕ್ಕಿದೆ. ಮಾರ್ಚ್ 5 ರಿಂದ ಕಾನೂನಾತ್ಮಕವಾಗಿ ಅವರು ಬೇರೆಯಾಗಿದ್ದಾರೆ. ಇದನ್ನೂ ಓದಿ : ಮಾ.11ರ 12:46 ವೇಳೆ ಸೇವ್ ಮಾಡ್ಕೊಳ್ಳಿ: ಕನ್ ಫ್ಯೂಸ್ ಮಾಡಿದ ಉಪೇಂದ್ರ

    ತಮಿಳಿನ ಸೂಪರ್ ಸ್ಟಾರ್ ಗಳಿಗೆ ನಿರ್ದೇಶನ ಮಾಡಿದ ಕೀರ್ತಿ ಬಾಲ ಅವರದ್ದು. ಸದ್ಯ ಸೂರ್ಯ ಅವರಿಗಾಗಿ ಬಾಲ ಹೊಸ ಸಿನಿಮಾವೊಂದನ್ನು ಕೈಗೆತ್ತಿಕೊಂಡಿದ್ದಾರೆ.

  • ಒಬ್ಬನಿಂದ ಕಾಯಕವಾಗುವುದಿಲ್ಲ, ಎಲ್ಲರೂ ಕೈ ಜೋಡಿಸಬೇಕು: ತಲ್ಲೂರು ಕೆರೆಗೆ ಯಶ್, ರಾಧಿಕಾ ಬಾಗಿನ ಅರ್ಪಣೆ

    ಒಬ್ಬನಿಂದ ಕಾಯಕವಾಗುವುದಿಲ್ಲ, ಎಲ್ಲರೂ ಕೈ ಜೋಡಿಸಬೇಕು: ತಲ್ಲೂರು ಕೆರೆಗೆ ಯಶ್, ರಾಧಿಕಾ ಬಾಗಿನ ಅರ್ಪಣೆ

    ಕೊಪ್ಪಳ: ತಲ್ಲೂರು ಕೆರೆ ಭರ್ತಿಯಾದ ಹಿನ್ನೆಲೆಯಲ್ಲಿ ಸೋಮವಾರ ಯಶ್-ರಾಧಿಕಾ ದಂಪತಿ ಬಾಗಿನ ಅರ್ಪಿಸಿದ್ದಾರೆ.

    ಇಂದು ಹೆಲಿಕಾಪ್ಟರ್ ಮೂಲಕ ಯಶ್ ದಂಪತಿ ಸುಮಾರು 11 ಗಂಟೆಗೆ ಕೊಪ್ಪಳಕ್ಕೆ ಬಂದಿಳಿದರು. ಅವರಿಗಾಗಿ ಶಾಮಿಯಾನ, ಬ್ಯಾನರ್ ಎಲ್ಲವನ್ನು ಹಾಕಿ ಸಿದ್ಧ ಮಾಡಿಕೊಂಡು ಅಭಿಮಾನಿಗಳು ಕೆರೆಯ ಬಳಿ ಕಾಯುತ್ತಿದ್ದರು. ಹೆಲಿಕಾಪ್ಟರ್ ಮೂಲಕ ಮೇಲಿಂದ ತಲ್ಲೂರು ಕೆರೆಯನ್ನು ಸಂಪೂರ್ಣವಾಗಿ ದಂಪತಿ ವೀಕ್ಷಿಸಿ ಆನಂದ ಪಟ್ಟರು.

    ಕೆರೆ ಬಳಿ ಬಂದು ಇಬ್ಬರು ಪೂಜೆ ಸಲ್ಲಿಸಿ ನಂತರ ಬಾಗಿನವನ್ನು ಅರ್ಪಿಸಿದರು. ನಂತರ ಕಾರ್ಯಕ್ರಮದಲ್ಲಿ ಭಾಗಿಯಾಗಿ ಯಶೋಮಾರ್ಗದ ಕಾರ್ಯದ ಬಗ್ಗೆ ರೈತರೊಂದಿಗೆ, ಗ್ರಾಮಸ್ಥರೊಂದಿಗೆ ಸಂತಸದಿಂದ ಮಾತನಾಡಿದ್ದಾರೆ. ರಾಜಕೀಯಕ್ಕೆ ಬರುತ್ತೀರಾ ಎಂದು ಅಭಿಮಾನಿಗಳು ಕೇಳಿದಕ್ಕೆ ಯಶ್, ನಾನು ರಾಜಕೀಯಕ್ಕೆ ಬರುವುದಿಲ್ಲ. ಒಂದು ವೇಳೆ ರಾಜಕೀಯಕ್ಕೆ ಬರಬೇಕಿದ್ದರೆ ಇಲ್ಲಿಗೆ ಬಂದು ಕೆರೆ ಕಾಯಕ ಮಾಡಬೇಕಿರಲಿಲ್ಲ. ನಮ್ಮ ಭಾಗದಲ್ಲಿಯೇ ಈ ಕಾರ್ಯವನ್ನು ಮಾಡಬಹುದಿತ್ತು ಎಂದು ಹೇಳಿದರು.

    ಬತ್ತಿಹೋಗಿದ್ದ ಕೆರೆ ಈಗ ನೀರಿನಿಂದ ತುಂಬಿ ಹೂಳೆಯುತ್ತಿದೆ. ಇದರಿಂದ ನನಗೆ ತುಂಬಾ ಖುಷಿಯಾಗುತ್ತಿದೆ. ಇದು ಕೇವಲ ಯಶ್ ಒಬ್ಬನಿಂದ ಇಂತಹ ಕೆರೆ ಕಾಯಕ ಆಗೋದಿಲ್ಲ. ಕೆರೆ ಅಭಿವೃದ್ಧಿಗೆ ಎಲ್ಲರೂ ಮುಂದೆ ಬರಬೇಕು ಎಂದು ಅವರು ಜನರಲ್ಲಿ ಮನವಿ ಮಾಡಿದರು.

    ಸತತ ಮೂರ್ನಾಲ್ಕು ವರ್ಷಗಳ ಬರದಿಂದ ಸಂಪೂರ್ಣವಾಗಿ 96 ಎಕರೆ ವಿಸ್ತೀರ್ಣದ ತಲ್ಲೂರು ಕೆರೆ ಬತ್ತಿ ಹೋಗಿತ್ತು. ಅಲ್ಲದೇ ಸಂಪೂರ್ಣವಾಗಿ ಹೂಳು ಕೂಡಾ ತುಂಬಿಕೊಂಡಿತ್ತು. ಕೆರೆಯಲ್ಲಿ ತುಂಬಿರೋ ಹೂಳು ತಗೆಯಲು ಕಳೆದ ಫೆಬ್ರವರಿ ತಿಂಗಳಲ್ಲಿ ಹೂಳು ತಗೆಯಲು ಯಶ್ ದಂಪತಿ ಚಾಲನೆ ನೀಡಿದ್ದರು. ಅಂದು ನೀಡಿದ್ದ ಕೆರೆ ಕಾಯಕಕ್ಕೆ ಈಗ ಸಾರ್ಥಕತೆ ಸಿಕ್ಕಿದೆ. ಇದರಿಂದ ಸುಮಾರು 10 ಕ್ಕೂ ಹೆಚ್ಚು ಗ್ರಾಮಗಳಲ್ಲಿನ ರೈತರಿಗೆ ಅನುಕೂಲವಾಗಲಿದೆ.

    ನಟ ಯಶ್ ಮಾಡಿರುವ ಈ ಕಾರ್ಯವನ್ನ ರೈತರು ಕೊಂಡಾಡುತ್ತಿದ್ದು, ಬರದ ನಾಡಿನ ಭಗೀರಥ ಬಂದಂಗ ಬಂದು ನಮ್ಮೂರು ಕೆರೆ ಅಭಿವೃದ್ಧಿ ಪಡಿಸಿದ್ದಾರೆ. ಈ ಬಾರಿ ಮಳೆಯೂ ಚೆನ್ನಾಗಿ ಆಯ್ತು, ಕೆರೆನೂ ತುಂಬಿದೆ ಅಂತ ಗ್ರಾಮಸ್ಥರು ಸಂತಸವನ್ನು ಹಂಚಿಕೊಂಡಿದ್ದಾರೆ.

    ಯಶೋಮಾರ್ಗದ ಮೂಲಕ ತಲ್ಲೂರು ಕೆರೆಯನ್ನು ಸುಮಾರು 4 ಕೋಟಿ ರೂಪಾಯಿ ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಮಾಡಲಾಗಿದೆ.

    https://www.youtube.com/watch?v=hKy92VBhRAY

    https://www.youtube.com/watch?v=JRN6dKohV5k

    https://www.youtube.com/watch?v=n1r_Ui38aCI