Tag: Bala mandira

  • ಬಾಲ ಮಂದಿರದಲ್ಲಿದ್ದ 35 ವಿದ್ಯಾರ್ಥಿನಿಯರಿಗೆ ಕೋವಿಡ್ ಪಾಸಿಟಿವ್

    ಬಾಲ ಮಂದಿರದಲ್ಲಿದ್ದ 35 ವಿದ್ಯಾರ್ಥಿನಿಯರಿಗೆ ಕೋವಿಡ್ ಪಾಸಿಟಿವ್

    ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳನ್ನು ಓಪನ್ ಮಾಡಲು ಈಗಾಗಲೇ ಶಿಕ್ಷಣ ಇಲಾಖೆ ತಯಾರಿ ನಡೆಸುತ್ತಿರುವ ವೇಳೆಯಲ್ಲಿ ಮಡಿಕೇರಿ ನಗರದ ಬಾಲಕಿಯರ ಬಾಲ ಮಂದಿರದ 35 ವಿದ್ಯಾರ್ಥಿನಿಯರಿಗೆ ಕೊರೋನಾ ಪಾಸಿಟಿವ್ ದೃಢಪಡಿಟ್ಟಿದೆ.

    ಬಾಲಮಂದಿರಲ್ಲಿ ಇರುವ ಒಟ್ಟು 47 ವಿದ್ಯಾರ್ಥಿಗಳ ಪೈಕಿ 35 ವಿದ್ಯಾರ್ಥಿನಿಯರಿಗೆ ಪಾಸಿಟಿವ್ ದೃಢವಾಗಿದೆ. ಬಾಲ ಮಂದಿರದಲ್ಲಿ ಇಬ್ಬರು ಪಿಯು ವಿದ್ಯಾರ್ಥಿನಿಯರು ಕಾಲೇಜಿಗೆ ಹೋಗಿ ಬಂದಿದ್ದ ಹಿನ್ನೆಲೆಯಲ್ಲಿ ಆ ವಿದ್ಯಾರ್ಥಿನಿಯರಿಗೆ ಸೋಂಕು ಬಂದಿತ್ತು. ಅವರಿಂದ ಉಳಿದ 33 ವಿದ್ಯಾರ್ಥಿನಿಯರಿಗೆ ಸೋಂಕು ಹರಡಿದೆ ಎಂದು ಹೇಳಲಾಗುತ್ತಿದೆ. ಅಷ್ಟೇ ಅಲ್ಲದೇ ಒಟ್ಟೋಟಿಗೆ ಗುಂಪು ಗುಂಪಾಗಿ ವಿದ್ಯಾರ್ಥಿನಿಯರು ಬಾಲಮಂದಿರದಲ್ಲಿರುವುದು ಸೋಂಕು ಹರಡಿರುವ ಸಾಧ್ಯತೆ ಹೆಚ್ಚಿದೆ. ಇದನ್ನೂ ಓದಿ: 10-14 ವಾರಗಳ ಅಂತರದಲ್ಲಿ ಕೋವಿಶೀಲ್ಡ್ ಲಸಿಕೆ ಪಡೆಯುವುದು ಉತ್ತಮ- ಅಧ್ಯಯನ ವರದಿ

    ಬಾಲ ಮಂದಿರದಲ್ಲಿ ಕೋವಿಡ್ ನಿಯಮಗಳು ಸರಿಯಾದ ರೀತಿಯಲ್ಲಿ ಪಾಲನೆ ಅಗದೇ ಇರುವುದರಿಂದ ಒಂದೇ ಬಾರೀ 33 ವಿದ್ಯಾರ್ಥಿನಿಯರಿಗೆ ಪಾಸಿಟಿವ್ ಬಂದಿದ್ದು, ವಿದ್ಯಾರ್ಥಿನಿಯರಿಗೆ ಕೊರೋನಾ ಪಾಸಿಟಿವ್ ಪತ್ತೆಯಾದ ತಕ್ಷಣ ಬಾಲ ಮಂದಿರದ ಸಿಬ್ಬಂದಿ ಉಳಿದ ಮಕ್ಕಳಿಗೆ ಬೇರೆ ಕೊಠಡಿಯಲ್ಲಿ ಉಳಿದುಕೊಳ್ಳುವ ವ್ಯವಸ್ಥೆ ಮಾಡಡಿದ್ದಾರೆ.  ಇದನ್ನೂ ಓದಿ:ಗುಟ್ಕಾ ಸಾಲ ಕೊಡದ್ದಕ್ಕೆ ಪಾನ್ ಶಾಪ್ ಮಾಲೀಕನನ್ನೇ ಕೊಂದ 

    ಈಗಾಗಲೇ ಬಾಲಮಂದಿರದ 12 ಸಿಬ್ಬಂದಿಗಳಿಗೂ ಆರೋಗ್ಯ ಇಲಾಖೆಯಿಂದ ಕೋವಿಡ್ ಟೆಸ್ಟ್ ಮಾಡಲಾಗಿದೆ. ಸದ್ಯ ಎಲ್ಲಾ ವಿದ್ಯಾರ್ಥಿಗಳನ್ನು ಬಾಲ ಮಂದಿರದಲ್ಲೇ ಕ್ವಾರಂಟೈನ್ ಮಾಡಲಾಗಿದ್ದು, ಅವರಿಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಅರೋಗ್ಯ ಇಲಾಖೆ ಒದಗಿಸುತ್ತಿದೆ. ಒಟ್ಟಿನಲ್ಲಿ ಶಾಲೆ ಕಾಲೇಜಿಗೆ ಶುಕ್ರವಾರದಿಂದ ಮಕ್ಕಳನ್ನು ಕಳುಹಿಸಲು ಯೋಚನೆ ಮಾಡಿದ ಪೊಷಕರಲ್ಲಿ ಮತ್ತೆ ಆತಂಕ ಮನೆ ಮಾಡಿದೆ.

     

  • ಬಾಲ ಮಂದಿರದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಸೆಕ್ಯೂರಿಟಿ ಗಾರ್ಡ್

    ಬಾಲ ಮಂದಿರದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಸೆಕ್ಯೂರಿಟಿ ಗಾರ್ಡ್

    – ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿದ ಇಬ್ಬರು ಅಧಿಕಾರಿಗಳ ಅಮಾನತು

    ರಾಯಚೂರು: ಬೇಲಿಯೆ ಎದ್ದು ಹೊಲ ಮೇಯ್ದಂತೆ ಅನ್ನೋ ಹಾಗೆ ಬಾಲಕಿಯರನ್ನು ರಕ್ಷಣೆ ಮಾಡಬೇಕಾದ ರಾಯಚೂರಿನ ಸರ್ಕಾರಿ ಬಾಲಮಂದಿರದ ಓರ್ವ ಸೆಕ್ಯೂರಿಟಿ ಗಾರ್ಡ್ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ.

    ಜಿಲ್ಲೆಯ ಬಾಲಮಂದಿರವೊಂದರಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಸೇವೆ ಸಲ್ಲಿಸುತ್ತಿದ್ದ ಸಿದ್ದಯ್ಯ ಅತ್ಯಾಚಾರ ಎಸೆಗಿದ ಆರೋಪಿ. ಸಿದ್ದಯ್ಯ ನವೆಂಬರ್ 11ರಂದು ಶಾಲೆಗೆ ಕರೆದುಕೊಂಡು ಹೋಗುವ ನೆಪದಲ್ಲಿ ಎಸ್‍ಎಸ್‍ಎಲ್‍ಸಿ ಓದುತ್ತಿರುವ ಬಾಲಕಿಯನ್ನು ತನ್ನ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.

    ಪ್ರಕರಣದ ಬಗ್ಗೆ ಮಾಹಿತಿ ತಿಳಿದ ಬಾಲಕಿಯ ಅಣ್ಣ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ದೂರು ನೀಡಿದ್ದಾರೆ. ಆದರೆ ಈ ದೂರಿನ ಬಳಿಕವೂ ಬಾಲಮಂದಿರ ಅಧಿಕಾರಿಗಳಾದ ಸಯ್ಯದ್ ಪಾಷಾ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗುರುಪ್ರಸಾದ ಕ್ರಮ ಕೈಗೊಳ್ಳಲು ವಿಳಂಬ ಮಾಡಿದ್ದಾರೆ. ಬಳಿಕ ಒತ್ತಡದ ಮೇರೆಗೆ ಕೊನೆಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ರಾಯಚೂರಿನ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಈ ದೂರಿನ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ ವೇದಮೂರ್ತಿ ಬಾಲಮಂದಿರಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

    ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ ಅವರು ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿದ ಸಯ್ಯದ್ ಪಾಷಾ ಹಾಗೂ ಗುರುಪ್ರಸಾದ್ ಅವರನ್ನ ಅಮಾನತು ಮಾಡಿದ್ದಾರೆ. ಘಟನೆಯನ್ನ ಗಂಭೀರವಾಗಿ ತೆಗೆದುಕೊಂಡಿರುವ ಜಿಲ್ಲಾಡಳಿತ ಬಾಲಕಿಯರ ಬಾಲಮಂದಿರದಲ್ಲಿಯ ಲೋಪಗಳ ಕುರಿತು ಪರಿಶೀಲಿಸಿ ವರದಿ ನೀಡಲು ಸಹಾಯಕ ಆಯುಕ್ತರಿಗೆ ಸೂಚಿಸಿದ್ದು, ತನಿಖಾ ತಂಡಗಳನ್ನ ರಚಿಸಲಾಗಿದೆ.

    ಆರೋಪಿ ಸಿದ್ದಯ್ಯ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಕ್ರಮ ಕೈಗೊಂಡಿರುವುದಾಗಿ ಎಸ್‍ಪಿ ಡಾ.ಸಿ.ಬಿ.ವೇದಮೂರ್ತಿ ಹೇಳಿದ್ದಾರೆ. ನಾನಾ ಕಾರಣಕ್ಕೆ ಬಾಲಮಂದಿರ ಸೇರುವ ವಿದ್ಯಾರ್ಥಿನಿಯರಿಗೆ ರಕ್ಷಣೆ ಸಿಗಬೇಕಾದ ಸ್ಥಳದಲ್ಲೇ ರಕ್ಷಣೆ ಇಲ್ಲದಿರುವುದು ದುರಂತವೇ ಸರಿ. ಈಗಲಾದರೂ ಅಧಿಕಾರಿಗಳು ಬಾಲಮಂದಿರದ ವಾತಾವರಣವನ್ನೇ ಬದಲಿಸಬೇಕಿದೆ.