ಬಳ್ಳಾರಿ: ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ಆರೋಪಿ ದರ್ಶನ್ (Actor Darshan) ಅವರ ಮೆಡಿಕಲ್ ರಿಪೋರ್ಟ್ ಬಳ್ಳಾರಿ (Ballary) ಜೈಲಧಿಕಾರಿಗಳ ಕೈ ಸೇರಿದೆ.
ಕಳೆದ ವಾರವಷ್ಟೇ ಬಳ್ಳಾರಿ ವಿಮ್ಸ್ ಆಸ್ಪತ್ರೆಯ (VIMS) ಆರ್ಥೋಪಿಡಿಷನ್ ಹಾಗೂ ನ್ಯೂರೋ ವೈದ್ಯರು ದರ್ಶನ್ ಅವರ ಆರೋಗ್ಯ ತಪಾಸಣೆ ನಡೆಸಿದ್ದರು. ಇದೀಗ ಮೆಡಿಕಲ್ ರಿಪೋರ್ಟ್ (Medical Report) ಸಲ್ಲಿಸಿರುವ ವೈದ್ಯರು ಒಂದಷ್ಟು ಸಲಹೆ ಕೊಟ್ಟಿದ್ದಾರೆ. ಬೆನ್ನು ನೋವು ನಿಯಂತ್ರಣಕ್ಕೆ ಫಿಜಿಯೋ ಜೊತೆಗೆ ಎರಡು ಬಾರಿ ಸ್ಕ್ಯಾನಿಂಗ್ ಮಾಡಿಸಿಕೊಳ್ಳಬೇಕು ಹಾಗೂ ಕೆಲವು ಮಾತ್ರೆ, ಮುಲಾಮು ನೀಡುವಂತೆ ಉಲ್ಲೇಖಿಸಿದ್ದಾರೆ.ಇದನ್ನೂ ಓದಿ: ದರ್ಶನ್, ಪವಿತ್ರಾಗೆ ನೋ ರಿಲೀಫ್ – ಕೋರ್ಟ್ ಜಾಮೀನು ನೀಡದ್ದು ಯಾಕೆ?
ವಿಮ್ಸ್ನ ನರರೋಗ ತಜ್ಞ ವೈದ್ಯ ಡಾ.ವಿಶ್ವನಾಥ್ ಸಲ್ಲಿಕೆ ಮಾಡಿರುವ ಮೆಡಿಕಲ್ ರಿಪೋರ್ಟ್ನಲ್ಲಿ ಆರೋಪಿ ದರ್ಶನ್ಗೆ ನರಗಳಿಂದ ಬೆನ್ನು ನೋವಾಗುತ್ತಿದೆ ಹೌದು. ಹೀಗಾಗಿ ಇಂದಿನಿಂದಲೇ ಜೈಲಿನಲ್ಲಿ ಫಿಜಿಯೋಥೆರಪಿ ನೀಡಬೇಕು ಎಂದು ಜೈಲಧಿಕಾರಿಗಳಿಗೆ ಸೂಚಿಸಿದ್ದಾರೆ. ಮತ್ತೊಂದೆಡೆ ಮೆಡಿಕಲ್ ಬೆಡ್, ಚೇರ್ ಬಗ್ಗೆಯೂ ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ.
ಇನ್ನೂ ದರ್ಶನ್ ಮೆಡಿಕಲ್ ರಿಪೋರ್ಟ್ನ್ನು ಬಳ್ಳಾರಿ ಜೈಲಧಿಕಾರಿಗಳು ಮೇಲಧಿಕಾರಿಗಳಿಗೆ ಮೇಲ್ ಮಾಡಿದ್ದಾರೆ. ಜೊತೆಗೆ ಮುಂದಿನ ಚಿಕಿತ್ಸಾ ಕ್ರಮ, ಮೆಡಿಕಲ್ ಬೆಡ್, ಚೇರ್, ವೈದ್ಯಕೀಯ ಸಲಕರಣೆ ಹಾಗೂ ಕೆಲವು ಮಾತ್ರೆಗಳ ನೀಡಲು ಸಲಹೆ ಕೇಳಿದ್ದಾರೆ. ಜೈಲು ವಿಭಾಗದ ಹಿರಿಯ ಅಧಿಕಾರಿಗಳ ಅನುಮತಿ ಸಿಕ್ಕ ಬಳಿಕ ಬಳ್ಳಾರಿ ಜಿಲ್ಲಾಸ್ಪತ್ರೆಯಿಂದ ಮೆಡಿಕಲ್ ಬೆಡ್, ಚೇರ್ ನೀಡುವ ಸಾಧ್ಯತೆಯಿದೆ.ಇದನ್ನೂ ಓದಿ:ಕೊಲೆ ಆರೋಪಿ ದರ್ಶನ್, ಪವಿತ್ರಾಗೆ ಬಿಗ್ ಡೇ – ಜಾಮೀನು ಭವಿಷ್ಯ ಇಂದು ನಿರ್ಧಾರ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಸದ್ಯ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಅವರನ್ನು ಆದಾಯ ತೆರಿಗೆ ಇಲಾಖೆ (Income Tax Department) ವಿಚಾರಣೆ ನಡೆಸಲಿದೆ.
ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿದ್ದ ದರ್ಶನ್ ಅವರನ್ನು ರಾಜಾತಿಥ್ಯ ಪ್ರಕರಣದ ಬಳಿಕ ಬಳ್ಳಾರಿ ಸೆಂಟ್ರಲ್ ಜೈಲಿಗೆ (Ballary Central Jail) ವರ್ಗಾಯಿಸಲಾಗಿತ್ತು. ಇಂದು (ಸೆ.23ರಂದು) ನಡೆಯಬೇಕಿದ್ದ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ.ಇದನ್ನೂ ಓದಿ:ರೇಣುಕಾ ಹತ್ಯೆ ಕೇಸ್ – ಮೂವರಿಗೆ ಜಾಮೀನು ಮಂಜೂರು
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 70 ಲಕ್ಷ ರೂ. ಸಿಕ್ಕಿರುವ ಕಾರಣ ಐಟಿ ಅಧಿಕಾರಿಗಳು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ (Magistrate Court) ಮನವಿ ಸಲ್ಲಿಸಿದ್ದರು. ಬಳ್ಳಾರಿ ಜೈಲಿನಲ್ಲಿರುವ ಕೊಲೆ ಆರೋಪಿ ದರ್ಶನ್ (Darshan) ಅವರನ್ನು ವಿಚಾರಣೆ ನಡೆಸಲು ಅನುಮತಿ ನೀಡುವಂತೆ ಕೋರಿದ್ದರು. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಮನವಿಗೆ ಕೋರ್ಟ್ ಒಪ್ಪಿಗೆ ಸೂಚಿಸಿದೆ.
-ನನ್ನದು ಸಾಯಿಸುವ ಮನಸಲ್ಲ, ನಾನಂತೂ ಕೊಲೆ ಮಾಡಿಲ್ಲ ಎಂದ ಆರೋಪಿ
ಬಳ್ಳಾರಿ: ಹೊರಗಡೆ ಹೋದ್ಮೇಲೆ ರೇಣುಕಾಸ್ವಾಮಿ ಕುಟುಂಬಕ್ಕೆ ಸಹಾಯ ಮಾಡ್ತೀನಿ ಎಂದು ಕೊಲೆ ಆರೋಪಿ ದರ್ಶನ್ (Actor Darshan) ಪಶ್ಚಾತಾಪದ ಮಾತುಗಳನ್ನಾಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಆರೋಪದ (Renukaswamy Murder Case) ಹಿನ್ನೆಲೆ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ (Ballary Central Jail) ದರ್ಶನ್, ರೇಣುಕಾಸ್ವಾಮಿ ಹತ್ಯೆ ಬಗ್ಗೆ ಪಶ್ಚಾತಾಪ ಕಾಡಲಾರಂಭಿಸಿದೆ. ನಾನು ಇಲ್ಲಿಂದ ಹೊರಗಡೆ ಹೋದಮೇಲೆ ರೇಣುಕಾಸ್ವಾಮಿ ಕುಟುಂಬವನ್ನು ಭೇಟಿಯಾಗ್ತೀನಿ, ಸಹಾಯ ಮಾಡ್ತೀನಿ ಎಂದು ಜೈಲು ಸಿಬ್ಬಂದಿಯೊಬ್ಬರ ಜೊತೆ ಮನ ಬಿಚ್ಚಿ ಮಾತನಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ: ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ಆರೋಪ – ಭಾರತಕ್ಕೆ ಅಮೆರಿಕ ಕೋರ್ಟ್ ಸಮನ್ಸ್
ಏನೋ ಮಾಡಲು ಹೋಗಿ ಏನೋ ಆಗಿದೆ. ನನ್ನದು ಸಾಯಿಸುವ ಮನಸಲ್ಲ, ನಾನಂತೂ ಕೊಲೆ ಮಾಡಿಲ್ಲ, ಮೇಲೊಬ್ಬನಿದ್ದಾನೆ ಎಂದು ಜೈಲು ಸಿಬ್ಬಂದಿಯೊಬ್ಬರ ಜೊತೆ ತಮ್ಮ ನೋವನ್ನು ತೋಡಿಕೊಂಡಿದ್ದಾರೆ. ಕಳೆದ ಎರಡು ದಿನದಿಂದ ಆಕ್ಟೀವ್ ಆಗಿರುವ ದರ್ಶನ್ ರೇಣುಕಾಸ್ವಾಮಿ ಕುಟುಂಬದ ಬಗ್ಗೆ ಪತ್ನಿ ವಿಜಯಲಕ್ಷ್ಮಿ ಬಳಿಯೂ ಮಾತನಾಡಿದ್ದಾರೆ. ಕಳೆದ ಬಾರಿ ಪತ್ನಿ ಬಂದಾಗಲೂ ರೇಣುಕಾಸ್ವಾಮಿ ಪತ್ನಿ ಹಾಗೂ ಕುಟುಂಬದ ನೋವು, ಸಮಸ್ಯೆ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದು ಜೈಲು ಮೂಲಗಳಿಂದ ತಿಳಿದು ಬಂದಿದೆ.
ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಾಧ್ಯತೆ:
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ಗೆ ಬಳ್ಳಾರಿ ಸೆಂಟ್ರಲ್ ಜೈಲು ಕಾದ ಕಬ್ಬಿಣದಂತಾಗಿದೆ. ಏನು ಕೇಳಿದರೂ ಕಷ್ಟ ಎನ್ನುವಂತ ಸ್ಥಿತಿ ಬಂದಿದೆ. ಇದೀಗ ಆರೋಪಿ ದರ್ಶನ್ ಜೈಲಧಿಕಾರಿಗಳಿಗೆ ಬೆಡ್, ತಲೆದಿಂಬು ಮತ್ತು ಚೇರ್ಗೆ ಬೇಡಿಕೆ ಇಟ್ಟಿದ್ದು, ಅಧಿಕಾರಿಗಳು ಸರಾಸಗಟವಾಗಿ ನಿರಾಕರಿಸಿದ್ದಾರೆ. ಇದೇ ಕಾರಣಕ್ಕೆ ಬಳ್ಳಾರಿ ಜೈಲಧಿಕಾರಿಗಳ ಮೇಲೆಯೇ ದರ್ಶನ್ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ (Karnataka State Human Rights Commision) ದೂರು ನೀಡುವ ಸಾಧ್ಯತೆಯಿದೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ.
ಇನ್ನೂ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಪ್ರಕರಣದಿಂದಾಗಿ ಜೈಲಧಿಕಾರಿಗಳ ತಲೆದಂಡ ಆಗಿತ್ತು. ಹೀಗಾಗಿ ಬಳ್ಳಾರಿ ಸೆಂಟ್ರಲ್ ಜೈಲು ಸಿಬ್ಬಂದಿ ಭೀತಿಯಲ್ಲಿದ್ದಾರೆ. ಜೊತೆಗೆ ದರ್ಶನ್ ಬೇಡಿಕೆಯನ್ನು ತಿರಸ್ಕರಿಸುತ್ತಿರುವುದು ಹಾಗೂ ಮ್ಯಾನುವಲ್ನಲ್ಲಿರುವ ಸೌಲಭ್ಯ ಕೊಡುವ ವಿಚಾರದಲ್ಲೂ ಅಷ್ಟೇ ಗಮನಹರಿಸುತ್ತಿದ್ದಾರೆ. ಇದೇ ಕಾರಣದಿಂದಾಗಿ ಬಳ್ಳಾರಿ ಜೈಲಿನ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿ ಎಚ್ಚರಿಕೆ ನಡೆ ಇಡುತ್ತಿದ್ದಾರೆ.ಇದನ್ನೂ ಓದಿ: ಹೃದಯಾಘಾತದಿಂದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಿಧನ
ಈ ಕಾರಣದಿಂದಾಗಿ ದರ್ಶನ್ ಕುಟುಂಬಸ್ಥರು ಜೈಲಧಿಕಾರಿಗಳು ಮೇಲೆ ಕೋಪ ತೋರಿಸುತ್ತಿದ್ದಾರೆ. ಸೌಲಭ್ಯ ಕೊಟ್ಟರೆ ಇಲಾಖೆ ಮತ್ತು ಸರಕಾರದಿಂದ ತಲೆದಂಡ ಆಗೋ ಭೀತಿ ಇದೆ. ಇದರ ನಡುವೆ ಸೌಲಭ್ಯ ಕೊಡುತ್ತಿಲ್ಲವೆಂದು ಹೇಳಿ ದರ್ಶನ್ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಕೊಡುವ ಸಾಧ್ಯತೆಯಿದೆ.
ಬಳ್ಳಾರಿ: ಇಲ್ಲಿನ ಸೆಂಟ್ರಲ್ ಜೈಲಿಗೆ ಶಿಫ್ಟ್ ಆದ ಬಳಿಕ ಒಂದೊಂದೇ ಬೇಡಿಕೆ ಇಡುತ್ತಿರುವ ದರ್ಶನ್ ಇದೀಗ ಚೇರ್ಗೆ ಬೇಡಿಕೆ ಇಟ್ಟಿದ್ದು, ದರ್ಶನ್ ಬೇಡಿಕೆಗೆ ಜೈಲಧಿಕಾರಿಗಳು ತಣ್ಣೀರು ಎರಚಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಿಂದಾಸ್ ಆಗಿ ಎಂಜಾಯ್ ಮಾಡುತ್ತಿದ್ದ ಕೊಲೆ ಆರೋಪಿ ದರ್ಶನ್ಗೆ ಬಳ್ಳಾರಿ ಸೆಂಟ್ರಲ್ ಜೈಲು (Ballary Central Jail) ನರದಕರ್ಶನ ಮಾಡಿಸುತ್ತಿದೆ. ಮ್ಯಾನುವಲ್ ಬಿಟ್ಟು ಹೆಚ್ಚುವರಿಯಾಗಿ ಅದೇನೇ ಬೇಡಿಕೆ ಇಟ್ಟರೂ ಜೈಲಧಿಕಾರಿಗಳು ತಲೆಕೆಡಿಸಿಕೊಳ್ಳುತ್ತಿಲ್ಲ. ಸರ್ಜಿಕಲ್ ಕಮೋಡ್, ವಿಟಮಿನ್ ಟ್ಯಾಬ್ಲೇಟ್ ಹಾಗೂ ಟಿವಿ ಬಳಿಕ ಇದೀಗ ಕುಳಿತುಕೊಳ್ಳೋಕೆ ಚೇರ್ಗಾಗಿ ಬೇಡಿಕೆ ಇಟ್ಟಿದ್ದಾರೆ. ಆದರೆ ದರ್ಶನ್ಗೆ ಜೈಲಧಿಕಾರಿಗಳು ನಿಜ ಜೈಲು ಹೇಗಿರುತ್ತದೆ ಎಂಬ ರುಚಿಯನ್ನು ತೋರಿಸುತ್ತಿದ್ದಾರೆ.ಇದನ್ನೂ ಓದಿ: ರೇಣುಕಾಸ್ವಾಮಿ ಪ್ರಾಣಭಿಕ್ಷೆಗೆ ಅಂಗಲಾಚುತ್ತಿರೋದು ‘ಎಐ’ ಫೋಟೊ? – ಆರೋಪಿ ಮೊಬೈಲ್ ಮತ್ತೆ FSL ಪರೀಕ್ಷೆಗೆ
ಆರೋಪಿ ದರ್ಶನ್ (Actor Darshan) ಎಂತಹ ದೊಡ್ಡ ಸ್ಟಾರ್ ಆಗಿದ್ದರೂ ಬಳ್ಳಾರಿ ಸೆಂಟ್ರಲ್ ಜೈಲಧಿಕಾರಿಗಳು ಅವರನ್ನು ಸ್ಟ್ರಿಕ್ಟ್ ಆಗಿ ನಡೆಸಿಕೊಳ್ಳುತ್ತಿದ್ದಾರೆ. ಆದ ಕಾರಣ ದರ್ಶನ್ ಜೈಲಿನ ಮ್ಯಾನುವಲ್ ಪ್ರಕಾರವೇ ಇರಬೇಕಾದ ಅನಿವಾರ್ಯತೆ ಎದುರಾಗಿದೆ. ಹೀಗಾಗಿ ಯಾವುದೂ ಸುಲಭವಾಗಿ ಸಿಗದೇ ಇರುವ ಕಾರಣಕ್ಕೆ ಒಂದೊಂದೇ ಬೇಡಿಕೆಯನ್ನ ಜೈಲಧಿಕಾರಿಗಳ ಮುಂದೆ ಇಡುತ್ತಿದ್ದಾರೆ.
ಜೈಲಧಿಕಾರಿಗಳು ಟಿವಿ ನೀಡಿದ ಬಳಿಕ ವಿಟಮಿನ್ ಟ್ಯಾಬ್ಲೇಟ್ ಬೇಡಿಕೆಯನ್ನು ತಿರಸ್ಕರಿಸಿದ್ದರು. ಆರೋಪಿ ದರ್ಶನ್ ಚೇರ್ ಬೇಡಿಕೆ ಇಟ್ಟ ಬಳಿಕ ಜೈಲಧಿಕಾರಿಗಳು ಚೇರ್ ಕೊಡೋದಕ್ಕೆ ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ.
ನಿನ್ನೆ (ಸೆ.17) ನ್ಯಾಯಾಂಗ ಬಂಧನದ ಅವಧಿ ಮುಕ್ತಾಯ ಆಗಿದ್ದರಿಂದ ಎಲ್ಲಾ ಆರೋಪಿಗಳನ್ನು ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಆ ವೇಳೆ ಆರೋಪಿ ದರ್ಶನ್ ಪರ ವಕೀಲರು ದರ್ಶನ್ಗೆ ತುಂಬಾ ಬೆನ್ನು ನೋವು ಇದೆ. ನೆಲದ ಮೇಲೆ ಕೂಡುವುದಕ್ಕೂ ಅಗುತ್ತಿಲ್ಲ. ಪ್ಲಾಸ್ಟಿಕ್ ಚೇರ್ ವ್ಯವಸ್ಥೆ ಮಾಡೋಕೆ ಜೈಲಧಿಕಾರಿಗಳು ಆಗಲ್ಲ ಎಂದು ಹೇಳುತ್ತಿದ್ದಾರೆ. ಬೇರೆ ಕೈದಿಗಳಿಗೆ ಎಲ್ಲ ವ್ಯವಸ್ಥೆ ಇದೆ. ಎನ್ಐಎ ಕೇಸ್ನಲ್ಲಿರುವ ಆರೋಪಿಗಳಿಗೆ ವ್ಯವಸ್ಥೆ ಇದೆ. ಆದರೆ ದರ್ಶನ್ಗೆ ಚೇರ್ ವ್ಯವಸ್ಥೆ ಮಾಡುತ್ತಿಲ್ಲ. ದರ್ಶನ್ ಅವರನ್ನು ಯಾರು ಏನು ಅಂದುಕೊಂಡಿದ್ದಾರೋ ಗೊತ್ತಿಲ್ಲ. ಫುಲ್ ಹೈ ಸೆಕ್ಯೂರಿಟಿ ಎಂದು ಹೇಳುತ್ತಾರೆ. ಸರಿಯಾದ ವ್ಯವಸ್ಥೆ ಕೂಡ ಸಿಗುತ್ತಿಲ್ಲ ಎಂದು ಬಳ್ಳಾರಿ ಸೆಂಟ್ರಲ್ ಜೈಲಧಿಕಾರಿಗಳು ವಿರುದ್ಧ ಮಾರುದ್ದ ಆರೋಪ ಮಾಡಿದ್ದರು.
ಆರೋಪಿ ದರ್ಶನ್ ಜೈಲಿನಲ್ಲಿ ಚೇರ್ ಕೇಳೇ ಇಲ್ಲವಂತೆ. ಬೆನ್ನು ನೋವಿದೆ ಎಂದು ಒಂದು ದಿಂಬನ್ನು ಕೇಳಿದ್ದರು. ಜೈಲು ಮ್ಯಾನುಯಲ್ ಪ್ರಕಾರ ಇದ್ದರೆ ಕೊಡುತ್ತಾರೆ ಅಂದಿದ್ದರು. ಆದರೆ ಜೈಲಿನ ಮ್ಯಾನುವಲ್ ಕಟ್ಟುನಿಟ್ಟಾಗಿ ಪಾಲಿಸುತ್ತಿರುವ ಜೈಲಧಿಕಾರಿಗಳು ದಿಂಬನ್ನು ಕೊಟ್ಟಿಲ್ಲ. ಚೇರ್ ಕೊಡುವ ಬಗ್ಗೆ ಕೋರ್ಟ್ ಆದೇಶ ಮಾಡಿದರೆ ಮಾತ್ರ ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ ಎಂದು ಬಳ್ಳಾರಿ ಜೈಲಿನ ಮೂಲಗಳ ಪ್ರಕಾರ ಮಾಹಿತಿ ತಿಳಿದು ಬಂದಿದೆ.
ಒಟ್ಟಿನಲ್ಲಿ ಆರೋಪಿ ದರ್ಶನ್ ಅವರನ್ನ ಹೈ ಸೆಕ್ಯೂರಿಟಿ ಸೆಲ್ನಲ್ಲಿ ಇಟ್ಟ ನಂತರ ಭದ್ರತೆ ದೃಷ್ಟಿಯಿಂದ ರಕ್ತ ಸಂಬಂಧಿಕರನ್ನು ಬಿಟ್ಟು ಯಾರೊಬ್ಬರನ್ನು ಭೇಟಿ ಅವಕಾಶ ಇರಲಿಲ್ಲ. ಕೋರ್ಟ್ ಅನುಮತಿ ನೀಡಿದ ಬಳಿಕ ಆಪ್ತರ ಬೇಟಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ಹೀಗಾಗಿ ನಿನ್ನೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಜೊತೆಗೆ ನಟ ಧನ್ವೀರ್ ಹಾಗೂ ಆಪ್ತ ಹೇಮಂತ್ ಬಂದಿದ್ದರು.ಇದನ್ನೂ ಓದಿ: ಜೈಲಲ್ಲಿ ಕಿರಿಕಿರಿ ಮಾಡಿದ್ರೆ ಬೇಲ್ಗೆ ಕಷ್ಟವಾಗುತ್ತೆ – ವಕೀಲರ ಎಚ್ಚರಿಕೆ ಬಳಿಕ ಎಚ್ಚೆತ್ತುಕೊಂಡ ದರ್ಶನ್!
ಇನ್ನೂ ಚೇರ್ ವಿಚಾರದಲ್ಲೂ ಕ್ಲೀಯರ್ ಆಗಿರುವ ಬಳ್ಳಾರಿ ಜೈಲಧಿಕಾರಿಗಳು ಯಾವುದನ್ನೂ ಮೈ ಮೇಲೆ ಎಳೆದುಕೊಳ್ಳದೇ ಕೋರ್ಟ್ ಅವಕಾಶ ಕೊಟ್ಟರೆ ಮಾತ್ರ ಕೊಡುತ್ತೇವೆ ಎಂದು ನಿರ್ಧಾರಕ್ಕೆ ಬಂದಿರುವುದು ದರ್ಶನ್ ಅವರ ಆಸೆಗೆ ತಣ್ಣೀರು ಎರಚಿದಂತಾಗಿದೆ.
ವಕೀಲರು ದರ್ಶನ್ಗೆ ಬರೆದ ಪತ್ರದಲ್ಲಿ ಅನಗತ್ಯ ಕಿರಿಕ್ ಮಾಡಿಕೊಳ್ಳಬೇಡಿ. ಮಾಧ್ಯಮಗಳ ಮೇಲೆ ದುರ್ನಡತೆ ತೋರುವ ಕುರಿತು, ಜೈಲಿನಲ್ಲಿ ಕಿರಿ ಕಿರಿ ಮಾಡಬೇಡಿ. ವರ್ತನೆ ಬದಲಿಸಿಕೊಳ್ಳದಿದ್ದರೇ ಜಾಮೀನು ಅರ್ಜಿ ಹಾಕಿದಾಗ ಸಮಸ್ಯೆ ಆಗುತ್ತದೆ ಎಂದು ಉಲ್ಲೇಖಿಸಿದ್ದರು.
ಇದೇ ಕಾರಣಕ್ಕೆ ನಿನ್ನೆ (ಸೆ.17) ಪತ್ನಿ ವಿಜಯಲಕ್ಷ್ಮಿ (Vijayalakshmi) ಹಾಗೂ ಆಪ್ತರು ಜೈಲಿಗೆ ಭೇಟಿ ನೀಡಿದ್ದರು. ಅವರ ಭೇಟಿಗೆ ಆರೋಪಿ ದರ್ಶನ್ ನಗು ನಗುತ್ತಾ ಸೆಲ್ನಿಂದ ಹೊರ ಬಂದಿದ್ದರು. ಪತ್ನಿ ಹಾಗೂ ಆಪ್ತರ ಭೇಟಿ ಬಳಿಕವೂ ನಗುತ್ತಲೇ ಸೆಲ್ಗೆ ಹೋಗಿದ್ದರು. ವಕೀಲರ ಪತ್ರ ತಲುಪಿದ ಬಳಿಕ ಕೊನೆಗೂ ಎಚ್ಚೆತ್ತುಕೊಂಡ ದರ್ಶನ್ ಜೈಲಿನಲ್ಲಿ ತಮ್ಮ ವರ್ತನೆ ಬದಲಾಯಿಸಿಕೊಂಡಿದ್ದಾರೆ.
ಇನ್ನೊಂದು ಕಡೆ ದರ್ಶನ್ಗೆ ಜಾಮೀನು ಚಿಂತೆಯಾಗಿದ್ದು, ಪತ್ನಿ ವಿಜಯಲಕ್ಷ್ಮಿಯವರು ಭೇಟಿಗೆ ಬಂದಾಗಲೂ ಜಾಮೀನು ವಿಚಾರವಾಗಿ ಚರ್ಚೆ ಮಾಡಿದ್ದು, ಜಾಮೀನಿಗೆ ಅರ್ಜಿ ಸಲ್ಲಿಸುವುದು ಯಾವಾಗ? ಎಂದು ಪ್ರಶ್ನಿಸಿದ್ದಾರೆ.
ದರ್ಶನ್ ವಿರುದ್ಧ ಸಿಕ್ಕಿರುವ ಪ್ರಬಲ ಸಾಕ್ಷಿಗಳ ಬಗ್ಗೆ ದರ್ಶನ್ ಗಮನಕ್ಕೆ ತಂದಿದ್ದ ವಿಜಯಲಕ್ಷ್ಮಿ, ಏನೇ ಸಾಕ್ಷಿ ಸಿಕ್ಕಿದ್ದರೂ ನಮ್ಮ ವಕೀಲರು ಸ್ಟ್ರಾಂಗ್ ಆಗಿ ವಾದ ಮಾಡುತ್ತಿದ್ದಾರೆ. ಆದಷ್ಟು ಬೇಗ ಜಾಮೀನಿಗೆ ಅರ್ಜಿ ಹಾಕೋಣ. ಅದರ ಬಗ್ಗೆಯೇ ನಾನು ವಕೀಲರ ಜೊತೆ ನಿತ್ಯ ಸಂಪರ್ಕದಲ್ಲಿದ್ದೇನೆ. ಯಾವುದಕ್ಕೂ ಆತಂಕ ಪಡಬೇಡಿ, ಆದಷ್ಟು ಬೇಗ ಜಾಮೀನಿಗೆ ಅರ್ಜಿ ಹಾಕುತ್ತೇವೆ ಎಂದು ಹೇಳಿದ್ದಾರೆ.ಇದನ್ನೂ ಓದಿ: ಬಿಯರ್ ಪ್ರಿಯರಿಗೆ ಮತ್ತೆ ಶಾಕ್ – ಅಕ್ಟೋಬರ್ 1ರಿಂದಲೇ ಪರಿಷ್ಕೃತ ದರ ಜಾರಿಗೆ ಸಾಧ್ಯತೆ!
ಬಹುತೇಕ ಇನ್ನೆರಡು ದಿನಗಳಲ್ಲಿ ಜಾಮೀನಿಗೆ ಅರ್ಜಿ ಹಾಕುವ ಸಾಧ್ಯತೆ ಇದೆ. ಎಲ್ಲಾ ಸಾಧಕ, ಬಾಧಕಗಳನ್ನು ನೋಡಿಕೊಂಡು ಜಾಮೀನಿಗೆ ಅರ್ಜಿ ಹಾಕುವುದಾಗಿ ಪ್ರತಿಕ್ರಿಯಿಸಿದ್ದಾರೆ. ಈ ವಿಚಾರಗಳ ಕುರಿತು ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ ಅರ್ಧ ಗಂಟೆ ಚರ್ಚಿಸಿದ್ದಾರೆ.