Tag: Ballet Paper

  • ಕೊಪ್ಪಳದಲ್ಲಿ ಮತವನ್ನ ಸ್ಕೇಲ್‍ನಿಂದ ಅಳೆದ ಸಿಬ್ಬಂದಿ

    ಕೊಪ್ಪಳದಲ್ಲಿ ಮತವನ್ನ ಸ್ಕೇಲ್‍ನಿಂದ ಅಳೆದ ಸಿಬ್ಬಂದಿ

    ಕೊಪ್ಪಳ: ಬ್ಯಾಲೆಟ್ ಪೇಪರ್ ನ್ನು ಚುನಾವಣಾ ಸಿಬ್ಬಂದಿ ಸ್ಕೇಲ್ ನಿಂದ ಅಳೆದಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ಗವಿಸಿದ್ದೇಶ್ವರ ಪ್ರೌಢ ಶಾಲೆಯ ಮತ ಎಣಿಕೆ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಇಬ್ಬರು ಅಭ್ಯರ್ಥಿಗಳ ಚಿಹ್ನೆ ನಡುವೆ ಮತದಾರರ ಮತ ಚಲಾಯಿಸಿದ್ದರು.

    ಗೊಂಡಬಾಳ ಗ್ರಾಪಂನ ಮುದ್ದಾಬಳ್ಳಿ ಒಂದನೇ ವಾರ್ಡಿನ ಮತ ಎಣಿಕೆ ನಡೆದಿತ್ತು. ಟಿವಿ ಚಿನ್ಹೆಯ ಗಾಳೆಪ್ಪ ಪೂಜಾರ ಹಾಗೂ ಆಟೋ ಚಿನ್ಹೆಯ ಮಧ್ಯೆ ಮತದಾರನೋರ್ವ ಮತ ಚಲಾಯಿಸಿದ್ದ. ಈ ಮತ ಎಣಿಕೆಯಿಂದ ಹೊರ ಗಿಟ್ಟು ಮತ ಎಣಿಕೆ ಮಾಡಲಾಗಿತ್ತು.

    ಕೊನೆಗೆ ಚುನಾವಣಾ ಅಧಿಕಾರಿ ಬ್ಯಾಲೆಟ್ ಪೇಪರ್ ಸ್ಕೇಲ್ ನಿಂದ ಅಳತೆ ಮಾಡಲಾಯ್ತು. ಟಿವಿ ಚಿನ್ಹೆಗೆ ಮತಕ್ಕೆ ಹೆಚ್ಚು ಪ್ರಾಶಸ್ತ್ಯ ಬಂದ ಹಿನ್ನೆಲೆ ಗಾಳೆಪ್ಪ ಪೂಜಾರ ಅವರಿಗೆ ಮತ ಎಂದು ಘೋಷಣೆ ಮಾಡಲಾಯ್ತು.

     

  • ನಿಜಾಮಾಬಾದ್ ಕ್ಷೇತ್ರದಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಮೊರೆ ಹೋದ ಆಯೋಗ

    ನಿಜಾಮಾಬಾದ್ ಕ್ಷೇತ್ರದಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಮೊರೆ ಹೋದ ಆಯೋಗ

    ಹೈದರಾಬಾದ್: ಇಡೀ ದೇಶವೇ ಇವಿಎಂ ಎಲೆಕ್ಷನ್‍ಗೆ ಸಜ್ಜಾಗುತ್ತಿದ್ದರೆ, ತೆಲಂಗಾಣದ ನಿಜಾಮಾಬಾದ್‍ನಲ್ಲಿ ಮಾತ್ರ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ನಲ್ಲಿ ಸ್ಪರ್ಧೆ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ.

    ತೆಲಂಗಾಣ ಸಿಎಂ ಕೆ. ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ.ಕವಿತಾ ಸ್ಪರ್ಧಿಸುತ್ತಿರುವ ನಿಜಾಮಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ 185 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಇದರಲ್ಲಿ 170 ಮಂದಿ ರೈತರೇ ಇದ್ದಾರೆ. ಹೀಗಾಗಿ, ಇವಿಎಂನಲ್ಲಿ ಚುನಾವಣೆ ನಡೆಸುವುದು ಅಸಾಧ್ಯ ಎಂದು ಆಯೋಗ ಹೇಳಿದೆ.

    ತೆಲಂಗಾಣ ರಾಜ್ಯದಲ್ಲಿ ಒಟ್ಟು 545 ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದು, ನಿಜಾಮಾಬಾದ್‍ನಲ್ಲಿ ಮಾತ್ರ 185 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಪರಿಣಾಮ ಇವಿಎಂ ಯಂತ್ರದಲ್ಲಿ ನೋಟಾ ಸೇರಿದಂತೆ 64 ಅಭ್ಯರ್ಥಿಗಳಿಗೆ ಮಾತ್ರ ಸ್ಥಾನ ಕಲ್ಪಿಸಲು ಅವಕಾಶ ಇದೆ. ಪರಿಣಾಮ ಚುನಾವಣಾ ಆಯೋಗ ಬ್ಯಾಲೆಟ್ ಪೇಪರಿನಲ್ಲೇ ಸ್ಪರ್ಧೆ ನಡೆಸಲು ಸಿದ್ಧತೆ ನಡೆಸಿದೆ.

    ಕಾರಣವೇನು:
    ಜೋಳ ಹಾಗೂ ಅರಿಶಿನ ಬೆಲೆಗೆ ಕನಿಷ್ಠ ಬೆಂಬಲ ಬೆಲೆ, ಅರಿಶಿನ ಮಂಡಳಿ ರಚಿಸುವುದರಲ್ಲಿ ತೆಲಂಗಾಣ ಪಾರ್ಟಿ (ಟಿಆರ್‍ಎಸ್) ವಿಫಲವಾಗಿದೆ ಎಂದು ಪ್ರತಿಭಟನಾರ್ಥ 170 ರೈತರು ನಾಮಪತ್ರ ಸಲ್ಲಿಸಿದ್ದಾರೆ.

    ಇದೇ ಮೊದಲಲ್ಲ: ಸಮೂಹಿಕವಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದು ಇದೇ ಮೊದಲಲ್ಲ. ಈ ಹಿಂದೆ ಕೂಡ ಅಂದರೆ 1996 ರಲ್ಲಿ ಆಂಧ್ರಪ್ರದೇಶದ ನಾಲ್ಗೊಂಡ ಕ್ಷೇತ್ರದಲ್ಲಿ 480 ಮಂದಿ ಸ್ಪರ್ಧೆ ನಡೆಸಿದ್ದರು. ಆ ವೇಳೆ ಬ್ಯಾಲೆಟ್ ಪೇಪರನ್ನೇ ಒಂದು ಬುಕ್ ಲೆಟ್ ಮಾದರಿಯಲ್ಲಿ ಚುನಾವಣಾ ಆಯೋಗ ಮುದ್ರಣ ಮಾಡಿತ್ತು.

    ಸದ್ಯ ಉಂಟಾಗಿರುವ ಬಿಕ್ಕಟ್ಟಿನ ಪರಿಸ್ಥಿತಿಯಿಂದ ಕ್ಷೇತ್ರದ ಚುನಾವಣಾ ದಿನಾಂಕವನ್ನು ಬದಲಾವಣೆ ಮಾಡುವ ಸಾಧ್ಯತೆ ಇದೆ. ನಿಗದಿಯಂತೆ ಆಯೋಗ ತೆಲಂಗಾಣ ರಾಜ್ಯದಲ್ಲಿ ಒಂದೇ ಹಂತದಲ್ಲಿ ಮಾತದಾನ ನಡೆಸಲು ನಿರ್ಧಾರ ಮಾಡಿ ಏಪ್ರಿಲ್ 11 ಮತದಾಣ ನಿಗದಿ ಮಾಡಿತ್ತು. ಜಿಲ್ಲಾ ಚುನಾವಣಾ ಅಧಿಕಾರಿಗಳು ಕೂಡ ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

    ಇತ್ತ ತಮಿಳುನಾಡಿನ ಸೇಲಂನ ವೈದ್ಯ ಡಾ.ಪದ್ಮರಾಜನ್ 170 ಬಾರಿ ಸೋತರೂ ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. 1988ರಿಂದ ಸತತವಾಗಿ ಸ್ಪರ್ಧಿಸುತ್ತಿರುವ 60 ವರ್ಷದ ಪದ್ಮರಾಜನ್ ಲಿಮ್ಕಾ ಪುಸ್ತಕದಲ್ಲಿ ದಾಖಲೆ ಬರೆದಿದ್ದಾರೆ.

  • ಇವಿಎಂ ಬದಲು ಬ್ಯಾಲೆಟ್ ಪೇಪರ್‌ನಲ್ಲಿ ಚುನಾವಣೆಗೆ ಆಗ್ರಹಿಸಿದ್ದ ಪ್ರತಿಪಕ್ಷಗಳಿಗೆ ಮುಖಭಂಗ

    ಇವಿಎಂ ಬದಲು ಬ್ಯಾಲೆಟ್ ಪೇಪರ್‌ನಲ್ಲಿ ಚುನಾವಣೆಗೆ ಆಗ್ರಹಿಸಿದ್ದ ಪ್ರತಿಪಕ್ಷಗಳಿಗೆ ಮುಖಭಂಗ

    ನವದೆಹಲಿ: ಮುಂದಿನ ಲೋಕಸಭಾ ಚುನಾವಣೆಗೆ ಇವಿಎಂ ಬದಲು ಬ್ಯಾಲೆಟ್ ಬಾಕ್ಸ್ ಬಳಸಲು ಆದೇಶ ನೀಡಬೇಕೆಂದು ಸಲ್ಲಿಸಿದ್ದ ಸಾರ್ವಜನಿಕಾ ಹಿತಾಸಕ್ತಿ ಅರ್ಜಿ(ಪಿಐಎಲ್) ಅನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

    ಟಿಎಂಸಿ ನಾಯಕಿ ಮಹಿಯಾ ಮೈತ್ರ ಅವರು ವಿಧಾನಸಭಾ ಚುನಾವಣೆ ಮತ್ತು ಲೋಕಸಭಾ ಚುನಾವಣೆಯನ್ನು ಬ್ಯಾಲೆಟ್ ಪೇಪರ್ ನಲ್ಲಿ ನಡೆಸಲು ಕೇಂದ್ರ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಪಿಐಎಲ್ ಸಲ್ಲಿಸಿ ಮನವಿ ಮಾಡಿಕೊಂಡಿದ್ದರು.

    ಈ ಅರ್ಜಿಯ ವಿಚಾರಣೆ ವೇಳೆ, ಎಲ್ಲ ವ್ಯವಸ್ಥೆ ಮತ್ತು ಯಂತ್ರಗಳಲ್ಲಿ ಲೋಪ ದೋಷಗಳು ಇರುತ್ತದೆ. ಇವಿಎಂ ಅನ್ನು ಯಾರು ಬಳಸುತ್ತಾರೋ ಎನ್ನುವುದರ ಆಧಾರದ ಮೇಲೆ ಅದರ ಬಳಕೆ ಮತ್ತು ದುರ್ಬಳಕೆ ನಿರ್ಧರಿಸಬೇಕಾಗುತ್ತದೆ ಎಂದು ಮುಖ್ಯ ನ್ಯಾ. ರಂಜನ್ ಗಗೋಯಿ ನೇತೃತ್ವದ ಪೀಠ ಹೇಳಿತು.

    ನೀವು ಇವಿಎಂ ಅನ್ನು ತಪ್ಪು ತಿಳಿದುಕೊಂಡಿದ್ದೀರಿ. ಈಗಿನ ವ್ಯವಸ್ಥೆ ಉತ್ತಮವಾಗಿದೆ ಎಂದು ಅಭಿಪ್ರಾಯಪಟ್ಟು ಅರ್ಜಿಯನ್ನು ಪೀಠ ವಜಾಗೊಳಿಸಿತು.

    ಆಧಾರ್ ಬಳಸಿಕೊಂಡು ಭಾರತೀಯ ವಿಶಿಷ್ಟ ಗುರುತು ಚೀಟಿ ಪ್ರಾಧಿಕಾರ(ಯುಐಡಿಎಐ) ಜನರ ಮೇಲೆ ಬೇಹುಗಾರಿಕೆ ಮಾಡುತ್ತಿದೆ ಎಂದು ಅರ್ಜಿದಾರರು ಆರೋಪಿಸಿದ್ದರು. ಈ ಆರೋಪಕ್ಕೆ ಸಾಕ್ಷಿ ನೀಡುವಂತೆ ಅರ್ಜಿದಾರರಿಗೆ ಕೋರ್ಟ್ 2 ವಾರಗಳ ಸಮಯವಕಾಶ ನೀಡಿತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • `ಇವಿಎಂ ಬೇಡ, ಬ್ಯಾಲೆಟ್‍ನಲ್ಲೇ ಲೋಕಸಭಾ ಚುನಾವಣೆ ನಡೆಸಿ’

    `ಇವಿಎಂ ಬೇಡ, ಬ್ಯಾಲೆಟ್‍ನಲ್ಲೇ ಲೋಕಸಭಾ ಚುನಾವಣೆ ನಡೆಸಿ’

    ನವದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ ಎಲೆಕ್ಟ್ರಾನಿಕ್ ಮತಯಂತ್ರಗಳ ಬದಲು ಬ್ಯಾಲೆಟ್ ಪೇಪರ್ ನಲ್ಲೇ ಚುನಾವಣೆ ನಡೆಸುವಂತೆ 17 ಪಕ್ಷಗಳು ಕೇಂದ್ರ ಚುನಾವಣೆ ಆಯೋಗದ (ಇಸಿಐ) ಮೊರೆ ಹೋಗುವ ಸಾಧ್ಯತೆ ಇದೆ.

    ಮುಂದಿನ ವಾರ ಈ ಕುರಿತು ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಲು ಹಲವು ರಾಜಕೀಯ ಪಕ್ಷಗಳು ಸಮಯ ನಿಗದಿ ಪಡಿಸಿವೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

    ಇವಿಎಂ ಯಂತ್ರಗಳನ್ನ ಸುಲಭವಾಗಿ ಟ್ಯಾಂಪರಿಂಗ್ ಮಾಡಲು ಸಾಧ್ಯ ಎಂಬ ವಾದ ಮಂಡಿಸಲಿರುವ ಪಕ್ಷಗಳು, ಬ್ಯಾಲೆಟ್ ಪೇಪರ್ ಮೂಲಕವೇ ಚುನಾವಣೆ ನಡೆಸಲು ಮನವಿ ಸಲ್ಲಿಸಲಿದೆ. ಈಗಾಗಲೇ ಹಲವು ಪಕ್ಷಗಳ ಮುಖಂಡರು ಈ ಕುರಿತು ಆಡಳಿತರೂಢ ಕೇಂದ್ರ ಸರ್ಕಾರದ ವಿರುದ್ಧವೂ ಆರೋಪಗಳನ್ನು ಮಾಡಿದ್ದಾರೆ.

    ಪ್ರಮುಖವಾಗಿ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಈ ಕುರಿತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು, ತಮ್ಮ ಪಕ್ಷದ ನಾಯಕರು ಇವಿಎಂ ಯಂತ್ರಗಳ ಬಗ್ಗೆ ಎಚ್ಚರಿಕೆ ವಹಿಸಬೇಕು. ಕೇಂದ್ರ ಸರ್ಕಾರ ಕೇಂದ್ರ ಚುನಾವಣಾ ಆಯೋಗದ ಮೇಲೂ ತನ್ನ ಪ್ರಭಾವನ್ನು ಉಂಟು ಮಾಡಿದೆ ಎಂದು ಆರೋಪಿದ್ದರು.

    ಉತ್ತರ ಪ್ರದೇಶ ಉಪ ಚುನಾವಣೆಯ ಸಂದರ್ಭದಲ್ಲಿ ಕೆಲ ಮತಯಂತ್ರಗಳಲ್ಲಿ ದೋಷ ಕಂಡು ಬಂದಾಗ ಸಮಾಜವಾದಿ ಪಕ್ಷ ನಾಯಕ ಅಖಿಲೇಶ್ ಯಾದವ್, ಇವಿಎಂ ಯಂತ್ರಗಳ ಮೇಲಿನ ನಂಬಿಕೆಯನ್ನು ಜನರು ಕಳೆದುಕೊಂಡಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ ಮಾಡಲು ಮನವಿ ಮಾಡುವುದಾಗಿ ತಿಳಿಸಿದ್ದರು.

    ಮಹಾರಾಷ್ಟ್ರ ಸರ್ಕಾರದಲ್ಲಿ ಬಿಜೆಪಿಯ ಮಿತ್ರ ಪಕ್ಷವಾಗಿರುವ ಶಿವಸೇನೆ, ಈ ಕುರಿತು ಹಲವು ಅನುಮಾನಗಳನ್ನು ವ್ಯಕ್ತಪಡಿಸಿದ್ದು, ಅವುಗಳ ನಿವಾರಣೆಗಾಗಿ ಬ್ಯಾಲೆಟ್ ಪೇಪರ್ ಬಳಕೆ ಮಾಡಿ ಎಂದು ಸಲಹೆ ನೀಡಿತ್ತು.

    ವಿರೋಧಿ ಪಕ್ಷಗಳ ಆರೋಪಗಳನ್ನು ಅಲ್ಲಗೆಳೆದಿದ್ದ ಕೇಂದ್ರ ಚುನಾವಣಾ ಆಯೋಗ ಇವಿಎಂ ಯಂತ್ರಗಳಲ್ಲಿ ಮತ್ತಷ್ಟು ಸುಧಾರಣೆ ತರಲು ವಿವಿ ಪ್ಯಾಟ್ ಬಳಕೆ ಸಹ ಮಾಡಿತ್ತು. ಆದರು ಸದ್ಯ ಹಲವು ರಾಜಕೀಯ ಪಕ್ಷಗಳು ಕೇಂದ್ರ ಚುನಾವಣಾ ಆಯೋಗದಲ್ಲಿ ಮನವಿ ಮಾಡಲು ಸಿದ್ಧತೆ ನಡೆಸಿವೆ.

  • ರಾಜ್ಯದಲ್ಲೂ ಶುರುವಾಯ್ತು ಇವಿಎಂ ಗದ್ದಲ

    ರಾಜ್ಯದಲ್ಲೂ ಶುರುವಾಯ್ತು ಇವಿಎಂ ಗದ್ದಲ

    ರಾಯಚೂರು: ಗುಜರಾತ್ ಚುನಾವಣೆ ಮುಗಿಯುತ್ತಿದ್ದಂತೆ ಕರ್ನಾಟಕದಲ್ಲಿ `ಇವಿಎಂ’ ಗದ್ದಲ ಆರಂಭವಾಗಿದ್ದು, ಕರ್ನಾಟಕದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ವಿದ್ಯುನ್ಮಾನ ಮತಯಂತ್ರದ ಬದಲಾಗಿ ಬ್ಯಾಲೆಟ್ ಪೇಪರ್ ಬಳಕೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

    ರಾಯಚೂರಿನಲ್ಲಿ ಇಂದು ಮಾತನಾಡಿದ ಅವರು, ಈಗಾಗಲೇ ದೇಶಾದ್ಯಂತ ಸಾಕಷ್ಟು ಜನ ಇವಿಎಂ ಮತದಾನವನ್ನು ವಿರೋಧಿಸಿದ್ದಾರೆ. ಕರ್ನಾಟಕದಲ್ಲಿಯೂ ಮುಂದಿನ ವಿಧಾನ ಸಭಾ ಚುನಾವಣೆ ವೇಳೆಯಲ್ಲಿ ಇವಿಎಂ ರದ್ದು ಮಾಡಿ ಹಳೆ ಬ್ಯಾಲೆಟ್ ಪೇಪರ್ ಪದ್ಧತಿಯಲ್ಲೇ ಮತದಾನ ಮಾಡಬೇಕು. ನಾನು ಇವಿಎಂ ವಿಚಾರವಾಗಿ ತಜ್ಞರ ಬಳಿ ಮಾತನಾಡಿದ್ದೇನೆ, ಇವಿಎಂ ದುರ್ಬಳಕೆ ಮಾಡುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ ಎಂದರು.

    ಈಗಾಗಲೇ ಅಮೆರಿಕ ಸೇರಿದಂತೆ ಹಲವು ದೇಶಗಳಲ್ಲಿ ಇವಿಎಂ ಬಳಕೆ ಮಾಡಿ ಮತ್ತೆ ಹಳೆ ಪದ್ಧತಿಗೆ ಮರಳಿದ್ದಾರೆ. ಇದನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರಕ್ಕೆ ಕಷ್ಟ ಯಾಕೆ? ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿದೆ. ಚುನಾವಣಾ ಆಯೋಗ ಸ್ವಾತಂತ್ರ ಸಂಸ್ಥೆಯಾದರೂ ಅದರ ಮುಖ್ಯಸ್ಥರನ್ನು ನೇಮಕ ಮಾಡುವುದು ಕೇಂದ್ರ ಸರ್ಕಾರವೇ. ಅದ್ದರಿಂದ ಅವರ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಈ ಕುರಿತು ಚುನಾವಣಾ ಆಯೋಗದ ಮುಖ್ಯಸ್ಥರನ್ನು ಭೇಟಿ ಮಾಡಿ ಮಾತನಾಡುತ್ತೇನೆ. ಅಲ್ಲದೇ ಪತ್ರವನ್ನು ಬರೆಯುತ್ತೇನೆ ಎಂದರು. (ಇದನ್ನೂ ಓದಿ: ಕಾಂಗ್ರೆಸ್‍ನಿಂದ ಕರ್ನಾಟಕ ವಿಧಾನಸಭಾ ಚುನಾವಣೆ ಬಹಿಷ್ಕಾರ? )

    ಇವಿಎಂ ಬಳಕೆ ಮಾಡುವ ವಿಚಾರವಾಗಿ ದೇಶದ್ಯಾಂತ ಹಲವು ರಾಜಕೀಯ ಪಕ್ಷಗಳು ವಿರೋಧ ಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದವು. ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಇವಿಎಂಗಳ ದುರ್ಬಳಕೆಯಾಗಿದೆ. ಯಾರೇ ವೋಟ್ ಮಾಡಿದ್ರು ಅದು ಬಿಜೆಪಿಗೆ ಹೋಗ್ತಿದೆ ಅಂತ ಬಿಎಸ್‍ಪಿ ಅಧಿನಾಯಕಿ ಮಾಯಾವತಿ ಗಂಭೀರ ಆರೋಪ ಮಾಡಿದ್ದರು. ಬಳಿಕ ಎಎಪಿ, ಎಡಪಕ್ಷಗಳೂ ದನಿಗೂಡಿಸಿದ್ದವು. ಅದರಲ್ಲೂ ಆಪ್ ಅಂತು ಚುನಾವಣಾ ಆಯೋಗಕ್ಕೆ ಸವಾಲು ಎಸೆದಿತ್ತು. ಅಷ್ಟೇ ಅಲ್ಲದೆ ವಿಶೇಷ ಅಧಿವೇಶನ ನಡೆಸಿ ಡಮ್ಮಿ ಇವಿಎಂ ಬಳಸಿ ಹೇಗೆಲ್ಲಾ ದುರ್ಬಳಕೆ ಮಾಡಬಹುದು ಅನ್ನೋದರ ಡೆಮೋ ತೋರಿಸಿತ್ತು. ಈ ವಿವಾದ ವ್ಯಾಪಕ ಚರ್ಚೆಯಾದ ಬೆನ್ನಲ್ಲಿ ಕೇಂದ್ರ ಚುನಾವಣಾ ಆಯೋಗವೇ ರಾಜಕೀಯ ಪಕ್ಷಗಳಿಗೆ ಪಂಥಾಹ್ವಾನ ನೀಡಿ, ಪರೀಕ್ಷೆ ನಡೆಸಿತ್ತು. ಆದರೆ ಉತ್ತರ ಪ್ರದೇಶ ಚುನಾವಣೆಗೆ ಬಳಸಿ ಇವಿಎಂ ಕೊಡದಿದ್ದ ಕಾರಣ ಆಪ್ ದೂರ ಉಳಿದಿತ್ತು.

    ಉತ್ತರ ಪ್ರದೇಶದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಗೆಲುವು ಪಡೆದ ನಂತರ ಇವಿಎಂ ಬಳಕೆ ಕುರಿತು ಮತ್ತೆ ಅಪಸ್ವರ ಕೇಳಿ ಬಂದಿತ್ತು. ಇವಿಎಂ ಬಳಕೆ ಮಾಡದೆ ನಡೆದ ಚುನಾವಣೆಯಲ್ಲಿ ಬೇರೆ ಪಕ್ಷದವರು ಮತ್ತು ಪಕ್ಷೇತರ ಅಭ್ಯರ್ಥಿಗಳು ಜಯಗಳಿಸಿದ್ದರು. ಈ ವಿಚಾರವಾಗಿ ಮತ್ತೊಮ್ಮೆ ಮಾಯಾವತಿ, ಅಖಿಲೇಶ್, ಮಮತಾ ಬ್ಯಾನರ್ಜಿ, ಅರವಿಂದ್ ಕೇಜ್ರಿವಾಲ್, ಲಾಲೂ ಪ್ರಸಾದ್ ಹಾಗೂ ಸೀತಾರಾಂ ಯಚೂರಿ ಸೇರಿದಂತೆ ವಿಪಕ್ಷ ನಾಯಕರು ಬಿಜೆಪಿ ವಿರುದ್ಧ ಆರೋಪ ಮಾಡಿದ್ದರು.

     

     

  • ಕಾಂಗ್ರೆಸ್‍ನಿಂದ ಕರ್ನಾಟಕ ವಿಧಾನಸಭಾ ಚುನಾವಣೆ ಬಹಿಷ್ಕಾರ?

    ಕಾಂಗ್ರೆಸ್‍ನಿಂದ ಕರ್ನಾಟಕ ವಿಧಾನಸಭಾ ಚುನಾವಣೆ ಬಹಿಷ್ಕಾರ?

    ನವದೆಹಲಿ: ಗುಜರಾತ್ ಬೆನ್ನಲ್ಲೇ ಕರ್ನಾಟಕದಲ್ಲಿ ಇನ್ನೈದು ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈ ಚುನಾವಣೆಯನ್ನು ಬಹಿಷ್ಕರಿಸಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

    ಇವಿಎಂ ಬಳಕೆ ಮಾಡಿದರೆ ಚುನಾವಣೆ ಬಹಿಷ್ಕಾರಕ್ಕೆ ಚಿಂತನೆ ನಡೆಸಿದ್ದು ಮತ್ತೆ ಬ್ಯಾಲೆಟ್ ಪೇಪರ್ ಚುನಾವಣೆಗೆ ಕಾಂಗ್ರೆಸ್ ಪಟ್ಟು ಹಿಡಿದಿದೆ. ಸೋಮವಾರದ ದೆಹಲಿ ಭೇಟಿ ವೇಳೆ ಸಿದ್ದರಾಮಯ್ಯ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಈ ವಿಚಾರವನ್ನು ಮನವರಿಕೆ ಮಾಡಿದ್ದಾರೆ ಎನ್ನುವ ಮಾಹಿತಿ ಮೂಲಗಳಿಂದ ಸಿಕ್ಕಿದೆ.

    ಇವಿಎಂ ಬಳಕೆ ಕರ್ನಾಟಕದಿಂದಲೇ ರದ್ದಾಗಬೇಕು. ಬ್ಯಾಲೆಟ್ ಪೇಪರ್ ಬಳಕೆ ಮಾಡದೇ ಇದ್ದಲ್ಲಿ ಚುನಾವಣೆಯನ್ನು ಬಹಿಷ್ಕರಿಸಲು ರಾಷ್ಟ್ರಮಟ್ಟದ ವಿಪಕ್ಷಗಳು ಚರ್ಚೆ ನಡೆಸಿವೆ ಅಂತ ತಿಳಿದುಬಂದಿದೆ.

    ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಇವಿಎಂಗಳ ದುರ್ಬಳಕೆಯಾಗಿದೆ. ಯಾರೇ ವೋಟ್ ಮಾಡಿದ್ರು ಅದು ಬಿಜೆಪಿಗೆ ಹೋಗ್ತಿದೆ ಅಂತ ಬಿಎಸ್‍ಪಿ ಅಧಿನಾಯಕಿ ಮಾಯಾವತಿ ಗಂಭೀರ ಆರೋಪ ಮಾಡಿದ್ದರು. ( ಇದನ್ನೂ ಓದಿ: ಚುನಾವಣೆ ಸಮಯದಲ್ಲಿ ರಾಜ್ಯಕ್ಕೆ ಅಮಿತ್ ಶಾ ಆಗಮನಕ್ಕೆ ನಿಷೇಧ? )

    ಬಳಿಕ ಎಎಪಿ, ಎಡಪಕ್ಷಗಳೂ ದನಿಗೂಡಿಸಿದ್ದವು. ಅದರಲ್ಲೂ ಆಪ್ ಅಂತು ಚುನಾವಣಾ ಆಯೋಗಕ್ಕೆ ಸವಾಲು ಎಸೆದಿತ್ತು. ಅಷ್ಟೇ ಅಲ್ಲದೆ ವಿಶೇಷ ಅಧಿವೇಶನ ನಡೆಸಿ ಡಮ್ಮಿ ಇವಿಎಂ ಬಳಸಿ ಹೇಗೆಲ್ಲಾ ದುರ್ಬಳಕೆ ಮಾಡಬಹುದು ಅನ್ನೋದರ ಡೆಮೋ ತೋರಿಸಿತ್ತು. ಈ ವಿವಾದ ವ್ಯಾಪಕ ಚರ್ಚೆಯಾದ ಬೆನ್ನಲ್ಲಿ ಕೇಂದ್ರ ಚುನಾವಣಾ ಆಯೋಗವೇ ರಾಜಕೀಯ ಪಕ್ಷಗಳಿಗೆ ಪಂಥಾಹ್ವಾನ ನೀಡಿ, ಪರೀಕ್ಷೆ ನಡೆಸಿತ್ತು. ಆದ್ರೆ, ಉತ್ತರ ಪ್ರದೇಶ ಚುನಾವಣೆಗೆ ಬಳಸಿ ಇವಿಎಂ ಕೊಡದಿದ್ದ ಕಾರಣ ಆಪ್ ದೂರ ಉಳಿದಿತ್ತು.

    ನಂತರ ತಣ್ಣಗಾಗಿದ್ದ ಇವಿಎಂ ದುರ್ಬಳಕೆ ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಫಲಿತಾಂಶದ ಬಳಿಕ ಮತ್ತೆ ಸುದ್ದಿಗೆ ಬಂದಿದೆ. ಇವಿಎಂ ಬಳಕೆ ಮಾಡಿದ ಹಿನ್ನೆಲೆಯಲ್ಲಿ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದೆ. ಇವಿಎಂ ಬಳಕೆ ಮಾಡದೆ ನಡೆದ ಚುನಾವಣೆಯಲ್ಲಿ ಬೇರೆ ಪಕ್ಷದವರು ಮತ್ತು ಪಕ್ಷೇತರ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಈ ವಿಚಾರವನ್ನು ಮುಂದಿಟ್ಟುಕೊಂಡು ಈಗ ಮತ್ತೊಮ್ಮೆ ಮಾಯಾವತಿ, ಅಖಿಲೇಶ್, ಮಮತಾ ಬ್ಯಾನರ್ಜಿ, ಅರವಿಂದ್ ಕೇಜ್ರಿವಾಲ್, ಲಾಲೂ ಪ್ರಸಾದ್ ಹಾಗೂ ಸೀತಾರಾಂ ಯಚೂರಿ ಸೇರಿದಂತೆ ವಿಪಕ್ಷ ನಾಯಕರು ದನಿಯೇರಿಸಿದ್ದಾರೆ. ಈ ಸಂಬಂಧ, ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಲು ಸಜ್ಜಾಗಿದ್ದಾರೆ ಅಂತ ತಿಳಿದು ಬಂದಿದೆ.