Tag: Banakal

  • ಲಾಕ್‌ಡೌನ್‌ ಮಧ್ಯೆ ಸುತ್ತಾಟ – ಪ್ರವಾಸಿಗರ ಚಳಿ ಬಿಡಿಸಿದ ಬಣಕಲ್‌ ಪೊಲೀಸರು

    ಲಾಕ್‌ಡೌನ್‌ ಮಧ್ಯೆ ಸುತ್ತಾಟ – ಪ್ರವಾಸಿಗರ ಚಳಿ ಬಿಡಿಸಿದ ಬಣಕಲ್‌ ಪೊಲೀಸರು

    ಚಿಕ್ಕಮಗಳೂರು: ಇವತ್ತು ಲಾಕ್‍ಡೌನ್ ಅಂತ ಗೊತ್ತಿದ್ದರೂ ಸ್ನೇಹಿತರು-ಸಂಬಂಧಿಕರ ಜೊತೆ ಊರೂರು ಸುತ್ತುತ್ತಾ ಪ್ರವಾಸಕ್ಕೆ ಬಂದಿದ್ದ ಹೊರಜಿಲ್ಲೆಯ ಪ್ರವಾಸಿಗರು ಹಾಗೂ ಜನಸಾಮಾನ್ಯರಿಗೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸರು ನೀರಿಳಿಸಿದ್ದಾರೆ.

    ಲಾಕ್‍ಡೌನ್ ಹಿನ್ನೆಲಯಲ್ಲಿ ಮೂಡಿಗೆರೆ ತಾಲೂಕಿನ ಬಣಕಲ್, ಕೊಟ್ಟಿಗೆಹಾರದಲ್ಲೂ ಅಂಗಡಿ-ಮುಂಗಟ್ಟುಗಳನ್ನ ಸಂಪೂರ್ಣ ಬಂದ್ ಮಾಡಿ ಯಾರೂ ಮನೆಯಿಂದ ಹೊರಬಂದಿರಲಿಲ್ಲ. ಬಣಕಲ್ ಪೊಲೀಸರು ಕೂಡ ಬೆಳಗ್ಗೆಯಿಂದ ಗಸ್ತು ತಿರುಗುತ್ತಿದ್ದು ಅನಾವಶ್ಯಕವಾಗಿ ರೋಡಲ್ಲಿ ತಿರುಗಾಡುತ್ತಿದ್ದವರಿಗೆ ಚಳಿ ಬಿಡಿಸಿ ಮನೆಗೆ ಕಳಿಸಿದ್ದರು.

    ಬೆಳಗ್ಗೆ 10 ಗಂಟೆ ಸುಮಾರಿಗೆ ಪ್ರವಾಸಿಗರು ಹಾಗೂ ಹೊರಜಿಲ್ಲೆಗೆ ಹೋಗುವವರ ಕಾಟ ಆರಂಭವಾಗಿದೆ. ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರಿಗೆ ಸಂಪರ್ಕ ಕಲ್ಪಿಸುವ ಕೊಟ್ಟಿಗೆಹಾರದಲ್ಲಿ ಪ್ರವಾಸಿಗರು ಹಾಗೂ ಬೆಂಗಳೂರು, ದಾವಣಗೆರೆ, ಮಂಗಳೂರು, ಚಿತ್ರದುರ್ಗ, ಉಡುಪಿ ಮುಂತಾದ ಭಾಗಗಳಿಂದ ಬಂದ ಜನರನ್ನು ಪೊಲೀಸರು ಅಡ್ಡಗಟ್ಟಿದ್ದಾರೆ.

    ಹೊರಜಿಲ್ಲೆಗಳಿಂದ ಬಂದ ಪ್ರವಾಸಿಗರಿಗೆ ಪೊಲೀಸರು ಕೊಟ್ಟಿಗೆಹಾರದಲ್ಲಿ ಪ್ರವಾಸಿ ತಾಣಗಳ ದರ್ಶನ ಮಾಡಿಸಿದ್ದಾರೆ. ಮಂಗಳೂರು ಕಡೆಯಿಂದಲೂ ಹಲವು ವಾಹನಗಳು ಬಂದಿದ್ದು ಕೊಟ್ಟಿಗೆಹಾರ ಚೆಕ್‍ಪೋಸ್ಟ್‌ನಲ್ಲಿ ಯಾರನ್ನೂ ಬಿಡದೆ ಪೊಲೀಸರು ಅಡ್ಡಗಟ್ಟಿದ್ದರು.

    ಸುಮಾರು ಒಂದು ಗಂಟೆಯ ಬಳಿಕ ಎಲ್ಲರಿಗೂ ವಾರ್ನ್ ಮಾಡಿ ಬಿಟ್ಟಿದ್ದಾರೆ. ಆದರೆ, ಮಂಗಳೂರಿನಿಂದ ಬಂದ ಅವರಿಗೆ ಮಾರ್ಗ ಮಧ್ಯೆ ಪೊಲೀಸರು ಫೈನ್ ಹಾಕಿ ಬಿಟ್ಟಿದ್ದಾರೆ ಎಂದು ಹೇಳಲಾಗ್ತಿದೆ. ಆದರೆ ಬಣಕಲ್ ಪೊಲೀಸರು ಎಲ್ಲರಿಗೂ ಕಾಯಿಸಿ, ಎಚ್ಚರಿಕೆ ನೀಡಿದ್ದಾರೆ.

    ಲಾಕ್‍ಡೌನ್ ಕಾನೂನನ್ನ ಉಲ್ಲಂಘಿಸಿ ಬಂದ ನೂರಾರು ವಾಹನಗಳು ಕೊಟ್ಟಿಗೆಹಾರದಲ್ಲಿ ಸಾಲಾಗಿ ನಿಂತಿದ್ದು, ಅಗತ್ಯ ವಸ್ತುಗಳನ್ನ ಸಾಗಿಸುವ ವಾಹನಗಳ ಓಡಾಟಕ್ಕೆ ತೊಂದರೆಯೂ ಆಗಿತ್ತು. ತದನಂತರ ಬಣಕಲ್ ಪೊಲೀಸರು ಎಲ್ಲರಿಗೂ ಎಚ್ಚರಿಸಿ ಬಿಟ್ಟಿದ್ದಾರೆ.

  • ಬಣಕಲ್ ಪೊಲೀಸರಿಂದ ಮಂಗ್ಳೂರು ತಾಲೂಕು ಪಂಚಾಯತ್ ಅಧ್ಯಕ್ಷನ ಗಾಡಿ ಸೀಜ್

    ಬಣಕಲ್ ಪೊಲೀಸರಿಂದ ಮಂಗ್ಳೂರು ತಾಲೂಕು ಪಂಚಾಯತ್ ಅಧ್ಯಕ್ಷನ ಗಾಡಿ ಸೀಜ್

    ಚಿಕ್ಕಮಗಳೂರು: ಪೊಲೀಸರು ಅಡ್ಡ ಹಾಕಿದರು ಗಾಡಿ ನಿಲ್ಲಸದೆ ಮೂಡಿಗೆರೆ ತಾಲೂಕಿನ ಬಣಕಲ್‍ಗೆ ಬಂದು ಹಿಂದಿರುಗಿದ ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷನ ಗಾಡಿಯನ್ನು ಬಣಕಲ್ ಪೊಲೀಸರು ಸೀಜ್ ತಂದು ಠಾಣೆಯಲ್ಲಿ ನಿಲ್ಲಿಸಿದ್ದಾರೆ.

    ದಿನದಿಂದ ದಿನಕ್ಕೆ ಕೊರೊನಾ ಆತಂಕ ಹೆಚ್ಚಾಗುತ್ತಿದೆ. ರಾಜ್ಯ ಸರ್ಕಾರ ಎಲ್ಲಾ ಜಿಲ್ಲೆ ಹಾಗೂ ರಾಜ್ಯಗಳ ಗಡಿಗಳನ್ನು ಬಂದ್ ಮಾಡಿ ಆದೇಶ ಹೊರಡಿಸಿದೆ. ಈ ಮಧ್ಯೆ ಕೊರೊನಾ ವೈರಸ್ ಆತಂಕದಲ್ಲಿ ಮಂಗಳೂರು ರೆಡ್ ಝೋನ್‍ನಲ್ಲಿದೆ. ಮಂಗಳೂರಿನಿಂದ ಚಾರ್ಮಾಡಿ ಮೂಲಕ ಚಿಕ್ಕಮಗಳೂರಿಗೆ ಬರುವ ಪ್ರತಿಯೊಂದು ಗಾಡಿಯನ್ನು ಅಣ್ಣಪ್ಪ ಸ್ವಾಮಿ ದೇವಾಲಯದ ಬಳಿ ತೊಳೆದುಕೊಂಡು ಬರುವಂತೆ ಹೇಳಿ, ಚೆಕ್ ಮಾಡಿ ಜಿಲ್ಲೆಯೊಳಗೆ ಬರುವಂತೆ ಸೂಚಿಸಿದ್ದಾರೆ.

    ಮಂಗಳೂರಿನಿಂದ ಎರಡು ದಿನಗಳ ಹಿಂದೆ ತಾಲೂಕು ಪಂಚಾಯತ್ ಅಧ್ಯಕ್ಷರ ಗಾಡಿ ಕೊಟ್ಟಿಗೆಹಾರದಲ್ಲಿ ಪೊಲೀಸರು ಅಡ್ಡ ಹಾಕಿದರು ನಿಲ್ಲಿಸದೆ ಬಣಕಲ್ ಬಂದಿದ್ದರು. ಪುನಃ ಹೋಗುವಾಗಲೂ ಗಾಡಿ ನಿಲ್ಲಿಸದೆ ಹೋಗಿದ್ದರು. ಗಾಡಿಯಲ್ಲಿ ಡ್ರೈವರ್ ಸೇರಿ ನಾಲ್ಕೈದು ಜನ ಇದ್ದರೆಂದು ಹೇಳಲಾಗಿದೆ.

    ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಗಡಿಗಳು ಬಂದ್ ಮಾಡಿ ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ಹೋಗಲು ಎಸ್‍ಪಿ ಹಾಗೂ ಡಿಸಿ ಅನುಮತಿ ಬೇಕು. ಆದರೆ ಅನುಮತಿ ಇದ್ಯೋ-ಇಲ್ಲವೋ ಎರಡನೇ ಮಾತು. ಪೊಲೀಸರು ಕೈ ಅಡ್ಡ ಹಾಕದರು ಗಾಡಿ ನಿಲ್ಲಿಸಿಲ್ಲ. ಗಾಡಿಯ ಮುಂದೆ ಅಧ್ಯಕ್ಷರು ತಾಲೂಕು ಪಂಚಾಯತ್ ಎಂಬ ಬೋರ್ಡ್ ಇತ್ತು. ಸರ್ಕಾರದ ನಿಯಮವನ್ನ ಉಲ್ಲಂಘಿಸಿದ ಆರೋಪದಡಿ ಬಣಕಲ್ ಪೊಲೀಸರು ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷರ ಗಾಡಿಯನ್ನ ಸೀಜ್ ಮಾಡಿ ಸ್ಟೇಷನ್‍ಗೆ ತಂದು ನಿಲ್ಲಸಿದ್ದಾರೆ.