Tag: Banasiddeshwara Temple

  • ಪತ್ನಿಯ ಕಣ್ಣೆದುರೇ ಗಂಡನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್- ಐನಾತಿ ಹೆಂಡತಿ ಅರೆಸ್ಟ್

    ಪತ್ನಿಯ ಕಣ್ಣೆದುರೇ ಗಂಡನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್- ಐನಾತಿ ಹೆಂಡತಿ ಅರೆಸ್ಟ್

    ಬೆಳಗಾವಿ: ಅಮವಾಸ್ಯೆ ಹಿನ್ನೆಲೆ ಗಂಡನೊಂದಿಗೆ ದೇವಸ್ಥಾನಕ್ಕೆ ಬಂದಿದ್ದ ಪತ್ನಿ (Wife) ಎದುರೇ ಗಂಡನ (Husband) ಕೊಲೆ ಮಾಡಿದ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಐನಾತಿ ಹೆಂಡತಿ ಪ್ರಿಯಾಂಕಾ ಜಗಮತ್ತಿಯನ್ನ ಮೂಡಲಗಿ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

    ಸೋಮವಾರ ಭೀಮನ ಅಮವಾಸ್ಯೆಯಾಗಿದ್ದರಿಂದ ಶಂಕರ್ ಜಗಮತ್ತಿ ಮತ್ತು ಪ್ರಿಯಾಂಕಾ ಜಗಮತ್ತಿ ದಂಪತಿ ಮೂಡಲಗಿ (Mudalagi) ತಾಲೂಕಿನ ವಡೇರಹಟ್ಟಿ ಗ್ರಾಮದ ಬನಸಿದ್ದೇಶ್ವರ ದೇವಸ್ಥಾನಕ್ಕೆ (Banasiddeshwara Temple) ಬಂದಿದ್ದರು. ಈ ವೇಳೆ ಪತ್ನಿಯ ಕಣ್ಣೆದುರೇ ದುಷ್ಕರ್ಮಿಗಳು ಪತಿಯ ಹತ್ಯೆ ಮಾಡಿದ್ದು, ಸ್ಥಳದಲ್ಲೇ ಶಂಕರ್ ಜಗಮತ್ತಿ ಸಾವನ್ನಪ್ಪಿದ್ದರು. ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌; 4 ಉಗ್ರರ ಹತ್ಯೆ

    ಕೊಲೆ ಪ್ರಕರಣದಲ್ಲಿ ಆರೋಪಿಗಳಾದ ಪ್ರಿಯಾಂಕಾಳ ಪ್ರಿಯಕರ ಶ್ರೀಧರ್ ತಳವಾರ(21), ಶಂಕರ್ ಪತ್ನಿ ಪ್ರಿಯಾಂಕ ಜಗಮತ್ತಿಯನ್ನು (21) ಬಂಧಿಸಲಾಗಿದೆ. ಮೊದಲೇ ಪಕ್ಕಾ ಪ್ಲಾನ್ ಮಾಡಿಕೊಂಡಿದ್ದ ಪ್ರಿಯಾಂಕಾ ಮನೆ ಬಿಡುವ ವೇಳೆ ಪ್ರಿಯಕರ ಶ್ರೀಧರ್‌ಗೆ ಕರೆ ಮಾಡಿ ದೇವಸ್ಥಾನಕ್ಕೆ ಬಂದಿದ್ದಳು. ದೇವರ ದರ್ಶನ ಮುಗಿಸಿಕೊಂಡು ವಾಪಾಸ್ ಬರುತ್ತಿದ್ದಂತೆ ಆರೋಪಿ ಶ್ರೀಧರ್ ಪ್ರಿಯಾಂಕಾ ಪತಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ಎಸ್ಕೇಪ್ ಆಗಿದ್ದ. ಇದನ್ನೂ ಓದಿ: ಕೋಳಿ ರಕ್ತ ಗುಪ್ತಾಂಗಕ್ಕೆ ಹಚ್ಚಿಕೊಂಡು ಉದ್ಯಮಿ ವಿರುದ್ಧ ಸುಳ್ಳು ರೇಪ್‌ ಕೇಸ್‌ – ಕಿಲಾಡಿ ಲೇಡಿ ಗ್ಯಾಂಗ್‌ ಅರೆಸ್ಟ್‌

    ಇತ್ತ ಏನು ಗೊತ್ತಿಲ್ಲದಂತೆ ನಾಟಕ ಆಡಿದ್ದ ಪ್ರಿಯಾಂಕಾ ಬೈಕ್ ತನ್ನಿ ಎಂದು ದೂರದಲ್ಲಿ ನಿಂತಿದ್ದಳು. ಕೊಲೆ ಬಳಿಕ ಏನೂ ಗೊತ್ತಿಲ್ಲದಂತೆ ಸುಪನಾತಿ ಹೆಂಡತಿ ಭರ್ಜರಿ ನಾಟಕ ಆಡಿದ್ದಳು. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮೂಡಲಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಪ್ರಾಥಮಿಕ ತನಿಖೆಯಲ್ಲಿ ಶ್ರೀಧರ್ ಮತ್ತು ಪ್ರಿಯಾಂಕಾ ನಡುವೆ ಸಂಬಂಧ (Relationship) ಇರುವುದು ಬೆಳಕಿಗೆ ಬಂದಿದೆ. ಈ ವೇಳೆ ಕಾಲ್ ರೆಕಾರ್ಡ್, ಕಾಲ್ ಡಿಟೈಲ್ಸ್ ಹೀಗೆ ಟೆಕ್ನಿಕಲ್ ಎವಿಡೆನ್ಸ್ ಆಧಾರದ ಮೇಲೆ ಪ್ರಿಯಾಂಕಾಳನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಮಗನ ಮೇಲೆಯೇ ಪೆಟ್ರೋಲ್ ಎರಚಿ ಸುಟ್ಟು ಹಾಕಿದ ತಾಯಿ!

    ಈ ಕುರಿತು ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಏಕಾಏಕಿ ರೂಮ್ ಲಾಕ್ ಮಾಡ್ಕೊಂಡು ಮಹಿಳಾ ಟೆಕ್ಕಿ ನೇಣಿಗೆ ಶರಣು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಮಾವಾಸ್ಯೆ ದಿನ ದೇವಸ್ಥಾನದಲ್ಲಿ ಪತ್ನಿಯ ಕಣ್ಣೆದುರೇ ಪತಿಯ ಬರ್ಬರ ಹತ್ಯೆ

    ಅಮಾವಾಸ್ಯೆ ದಿನ ದೇವಸ್ಥಾನದಲ್ಲಿ ಪತ್ನಿಯ ಕಣ್ಣೆದುರೇ ಪತಿಯ ಬರ್ಬರ ಹತ್ಯೆ

    ಬೆಳಗಾವಿ: ಅಮಾವಾಸ್ಯೆ ಎಂದು ದೇವಸ್ಥಾನಕ್ಕೆ ಹೋದ ಸಂದರ್ಭ ಪತ್ನಿಯ (Wife) ಎದುರೇ ಗಂಡನ ಬರ್ಬರ ಹತ್ಯೆ (Murder) ಮಾಡಿರುವ ಘಟನೆ ಮೂಡಲಗಿ (Mudalagi) ತಾಲೂಕಿನ ಬನಸಿದ್ದೇಶ್ವರ ದೇವಸ್ಥಾನ (Banasiddeshwara Temple) ಮುಂದೆ ನಡೆದಿದೆ.

    ಬೆಳಗಾವಿ (Belagavi) ಜಿಲ್ಲೆಯ ಮೂಡಲಗಿ ತಾಲೂಕಿನ ವಡೇರಟ್ಟಿ ಬನಸಿದ್ದೇಶ್ವರ ದೇವಸ್ಥಾನದ ಮುಂದೆ ಹೆಂಡತಿಯ ಕಣ್ಣೆದುರೇ ಗಂಡನ (Husband) ಮೇಲೆ ಮಚ್ಚು ಲಾಂಗುಗಳಿಂದ ಹಲ್ಲೆ ಮಾಡಿ ದುಷ್ಕರ್ಮಿಗಳು ಪರಾರಿ ಆಗಿದ್ದಾರೆ. ಘಟನೆಯಲ್ಲಿ ಶಂಕರ್ ಸಿದ್ದಪ್ಪ ಜಗಮುತ್ತಿ(25) ಮೃತಪಟ್ಟಿದ್ದಾರೆ. ಇದನ್ನೂ ಓದಿ: ಯುವಕನ ಹಲ್ಲೆಗೈದು ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ- ಆರೋಪಿಗಳ ಬಂಧನ

    ಮೃತ ಶಂಕರ್ ಕಳೆದ ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು. ಅಮಾವಾಸ್ಯೆ ಹಿನ್ನೆಲೆ ಇಂದು ಪತ್ನಿ ಪ್ರಿಯಾಂಕಾ ಜೊತೆಗೆ ದೇವಸ್ಥಾನಕ್ಕೆಂದು ಬಂದಿದ್ದರು. ವಡೇರಟ್ಟಿ ಗ್ರಾಮದ ಬನಸಿದ್ದೇಶ್ವರ ದೇವಸ್ಥಾನಕ್ಕೆ ಬಂದ ವೇಳೆ ಘಟನೆ ನಡೆದಿದ್ದು, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಮೂಡಲಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಜೈನಮುನಿ ಹತ್ಯೆ ಪ್ರಕರಣ – ಅಂಡರ್‌ವೇರ್ ಸಹಿತ ಕೊಲೆ ಮಾಡಲು ಬಳಸಿದ್ದ ಬಟ್ಟೆಗಳನ್ನು ಸುಟ್ಟಿದ್ದ ಹಂತಕರು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]