Tag: Bande Mutt Swamiji

  • ಬಂಡೆ ಶ್ರೀಗೆ ಖೆಡ್ಡಾ ತೋಡಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಅರೆಸ್ಟ್‌

    ಬಂಡೆ ಶ್ರೀಗೆ ಖೆಡ್ಡಾ ತೋಡಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಅರೆಸ್ಟ್‌

    ರಾಮನಗರ: ಮಾಗಡಿ (Magadi) ತಾಲೂಕಿನ ಬಂಡೆ ಮಠದ (Bande Mutt) ಬಸವಲಿಂಗ ಶ್ರೀಗಳ (Basavalinga Shree) ಆತ್ಮಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಯುವತಿ ಎಂಜಿನಿಯರಿಂಗ್‌ ಓದುತ್ತಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ.

    ದೊಡ್ಡಬಳ್ಳಾಪುರ ಮೂಲದ ನೀಲಾಂಬಿಕಾ ಅಲಿಯಾಸ್ ಚಂದು ಎಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿದ್ದು ರಜೆಯಲ್ಲಿ ತುಮಕೂರಿನಲ್ಲಿರುವ ಅಜ್ಜಿಯ ಮನೆಗೆ ಬರುತ್ತಿದ್ದಳು. ಈ ಸಂದರ್ಭದಲ್ಲಿ ಕಣ್ಣೂರು ಮೃತ್ಯಂಜಯ ಶ್ರೀಗಳ ಸಂಪರ್ಕಕ್ಕೆ ಯುವತಿ ಬಂದಿದ್ದಾಳೆ. ಇದನ್ನೂ ಓದಿ: ಬಂಡೆಮಠ ಶ್ರೀ ಆತ್ಮಹತ್ಯೆ ಕೇಸ್ – ಕಣ್ಣೂರು ಶ್ರೀ, ಯುವತಿ ಅರೆಸ್ಟ್


    ಈಕೆ ತಾನು ಹೇಳಿದಂತೆ ಕೇಳುತ್ತಾಳೆ ಎನ್ನುವುದು ತಿಳಿಯುತ್ತಿದ್ದಂತೆ ಬಂಡೇ ಮಠದ ಶ್ರೀಗಳನ್ನು ಸಿಕ್ಕಿ ಹಾಕಿಸಲು ಕಣ್ಣೂರು ಶ್ರೀ ತಂತ್ರ ಹೂಡಿದ್ದಾರೆ. ಇದಾದ ಬಳಿಕ ಯುವತಿ ಬಂಡೇ ಮಠದ ಶ್ರೀಗಳ ಪರಿಚಯ ಮಾಡಿಕೊಂಡಿದ್ದಾಳೆ.

    ಸಲುಗೆ ಜಾಸ್ತಿ ಆಗುತ್ತಿದ್ದಂತೆ ಬಂಡೇ ಮಠದ ಶ್ರೀಗಳನ್ನು ತನ್ನ ತಾಳಕ್ಕೆ ತಕ್ಕಂತೆ ನೀಲಾಂಬಿಕಾ ಕುಣಿಸಿದ್ದಾಳೆ. ವೀಡಿಯೋ ಚಾಟ್ ಆರಂಭಿಸಿದ್ದು ಅಲ್ಲದೇ ಚಾಟಿಂಗ್‌ ವೇಳೆ ನಗ್ನವಾಗುವಂತೆ ಹೇಳಿದ್ದಾಳೆ. ಆಕೆಯ ವೈಯ್ಯಾರದ ಮಾತಿಗೆ ಮರುಳಾದ ಶ್ರೀ ನಗ್ನವಾಗಿದ್ದಾರೆ. ಈ ಸಂದರ್ಭದಲ್ಲಿ ವೀಡಿಯೋ ಕರೆಗಳನ್ನು ಆಕೆ ರೆಕಾರ್ಡ್‌ ಮಾಡುತ್ತಿದ್ದಳು. ಆ ವೀಡಿಯೋ ಚಾಟಿಂಗ್ ರೆಕಾರ್ಡ್ ಅನ್ನು ಯುವತಿ ಮಹಾದೇವಯ್ಯನಿಗೆ ನೀಡುತ್ತಾಳೆ. ಮಹಾದೇವಯ್ಯ‌ ಆ ವೀಡಿಯೋವನ್ನು ಸಿಡಿ ಮಾಡಿ ಮುಖಂಡರಿಗೆ ಹಂಚಿದ್ದ ವಿಚಾರ ಈಗ ಪೊಲೀಸ್‌ ತನಿಖೆಯಿಂದ ಬಳಕಿಗೆ ಬಂದಿದೆ.

    Live Tv
    [brid partner=56869869 player=32851 video=960834 autoplay=true]

  • ಬಂಡೇ ಮಠದ ಶ್ರೀ ಬರೆದಿದ್ದು ಒಟ್ಟು 6 ಪುಟಗಳ ಡೆತ್‍ನೋಟ್ – ಈಗಾಗಲೇ 20 ಮಂದಿಯ ವಿಚಾರಣೆ

    ಬಂಡೇ ಮಠದ ಶ್ರೀ ಬರೆದಿದ್ದು ಒಟ್ಟು 6 ಪುಟಗಳ ಡೆತ್‍ನೋಟ್ – ಈಗಾಗಲೇ 20 ಮಂದಿಯ ವಿಚಾರಣೆ

    ರಾಮನಗರ: ಮಾಗಡಿ ತಾಲೂಕಿನ ಬಂಡೇ ಮಠದ (Bande Mutt)  ಬಸವಲಿಂಗ ಶ್ರೀಗಳ (Basavalinga Swamiji) ಆತ್ಮಹತ್ಯೆ ಪ್ರಕರಣ ಸಂಬಂಧ ಮತ್ತೊಂದು ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.

    ಒಟ್ಟು 6 ಪುಟಗಳ ಡೆತ್‍ನೋಟ್ (Death Note)  ಪತ್ತೆ ಆಗಿರುವ ಬಗ್ಗೆ ಸ್ವತಃ ರಾಮನಗರ ಎಸ್‍ಪಿ (SP) ಸಂತೋಷ್ ಬಾಬು ಮಾಹಿತಿ ನೀಡಿದ್ದಾರೆ. ಡೆತ್‍ನೋಟ್, ವೀಡಿಯೋ ಸೇರಿ ಎಲ್ಲ ಸಾಕ್ಷಿ ಸಂಗ್ರಹಿಸಿ ಪ್ರಕರಣದ ತನಿಖೆ ಮಾಡುತ್ತಿದ್ದೇವೆ. ಇನ್ನೊಂದು ಡೆತ್‍ನೋಟ್ ಇದೆ ಎಂದು ನಮಗೆ ತಿಳಿದುಬಂದಿದೆ ಈ ಬಗ್ಗೆ ತನಿಖೆ ಮಾಡುತ್ತಿದ್ದೇವೆ. ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ನಾವು ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಬಂಡೆಮಠದ ಸ್ವಾಮೀಜಿಗೆ ಮಹಿಳೆಯಿಂದ ಬರುತ್ತಿತ್ತು ದೂರವಾಣಿ ಕರೆ- ಡೆತ್‍ನೋಟ್‍ನಲ್ಲಿ ರಹಸ್ಯ ಬಯಲು

    ಈವರೆಗಿನ ವಿಚಾರಣೆಯಲ್ಲಿ ಯಾರನ್ನೂ ಸಹ ಬಂಧಿಸಿಲ್ಲ. ಅಲ್ಲದೇ ಮಾಗಡಿ ಠಾಣೆಗೆ ಈ ಕೇಸ್ (Case) ವರ್ಗಾವಣೆ ಆಗಿದ್ದು ಮಾಗಡಿ ಇನ್ಸ್‌ಪೆಕ್ಟರ್‌ ರಿಂದ ತನಿಖೆ ನಡೆಯುತ್ತಿದೆ. ತಾಂತ್ರಿಕ ಸಾಕ್ಷಿ ಕೂಡಾ ಕಲೆ ಹಾಕಲಾಗುತ್ತಿದೆ. ಮಠದ ಸಿಬ್ಬಂದಿ ಹಾಗೂ ಶ್ರೀಗಳ ಆಪ್ತರ ಮೊಬೈಲ್ (Mobile) ಫೋನ್‌ ಕೂಡಾ ವಿಚಾರಣೆ ನಡೆಸುತ್ತಿದ್ದೇವೆ ಎಂದು ಎಸ್‍ಪಿ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ನಾನು ತಪ್ಪು ಮಾಡಿಲ್ಲ, ಯಾರನ್ನೂ ವಿಚಾರಣೆ ಮಾಡ್ಬೇಡಿ: ಮಡಿವಾಳೇಶ್ವರ ಸ್ವಾಮೀಜಿ ಡೆತ್‍ನೋಟ್

    Live Tv
    [brid partner=56869869 player=32851 video=960834 autoplay=true]