Tag: Bandi Sanjay Kumar

  • 10ನೇ ತರಗತಿಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ – ಬಿಜೆಪಿಯ ಬಂಡಿ ಸಂಜಯ್ ಕುಮಾರ್ ಬಂಧನ

    10ನೇ ತರಗತಿಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ – ಬಿಜೆಪಿಯ ಬಂಡಿ ಸಂಜಯ್ ಕುಮಾರ್ ಬಂಧನ

    ಹೈದರಾಬಾದ್: ತೆಲಂಗಾಣ (Telangana) ಬಿಜೆಪಿ (BJP) ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ (Bandi Sanjay Kumar) ಅವರನ್ನು ಎಸ್‍ಎಸ್‍ಎಲ್‍ಸಿ ಹಿಂದಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಮೇಳೆ ಪೊಲೀಸರು ಬಂಧಿಸಿದ್ದಾರೆ.

    10ನೇ ತರಗತಿ ಹಿಂದಿ ಪರೀಕ್ಷೆ ಸೋಮವಾರ ಬೆಳಗ್ಗೆ 9.30ಕ್ಕೆ ಆರಂಭಗೊಂಡಿತ್ತು. ಆದರೆ ಬೆಳಗ್ಗೆ 10 ಗಂಟೆಗೆ ವಾರಂಗಲ್ ಜಿಲ್ಲೆಯಲ್ಲಿ ಮೊದಲು ವಾಟ್ಸಾಪ್ ಗ್ರೂಪ್‍ಗಳಲ್ಲಿ ಪ್ರಶ್ನೆ ಪತ್ರಿಕೆಯ ಫೋಟೋಗಳು ಹರಿದಾಡಿದ್ದು, ಅದಾದ ಬಳಿಕ ರಾಜ್ಯಾದ್ಯಂತ ಹರಿದಾಡುತ್ತಿದೆ.

    ವಾರಂಗಲ್ ಪೊಲೀಸ್ ಕಮಿಷನರ್ ಎ ವಿ ರಂಗನಾಥ್ ಮಾತನಾಡಿ, ಪರೀಕ್ಷೆ ಆರಂಭಕ್ಕೂ ಮುನ್ನವೇ ಪ್ರಶ್ನೆ ಪತ್ರಿಕೆ ಹೊರಬಿದ್ದಿದ್ದರೆ ಸೋರಿಕೆಯಾಗಿದೆಯೇ ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ. ಆದರೆ ಪರೀಕ್ಷೆ ಪ್ರಾರಂಭವಾದ ಅರ್ಧ ಗಂಟೆಯ ನಂತರ ಪ್ರಶ್ನೆ ಪತ್ರಿಕೆಯ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ಹನಮಕೊಂಡದ ಕಮಲಾಪುರದ ಪರೀಕ್ಷಾ ಕೇಂದ್ರದಲ್ಲಿ ಸೋರಿಕೆಯಾಗಿದೆ ಎಂದರು.

    ಘಟನೆಯಲ್ಲಿ ಸಂಜಯ್‌ ಕುಮಾರ್‌ ನೇರವಾಗಿ ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಕರೀಂನಗರ ಪೊಲೀಸರ ವಿಶೇಷ ತಂಡವು ಸಂಜಯ್ ಅವರ ನಿವಾಸಕ್ಕೆ ತೆರಳಿ ಬಂಧಿಸಿದರು. ಈ ವೇಳೆ ಬಂಧನವನ್ನು ತಡೆಯಲು ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದ್ದು, ಅವರನ್ನು ವಶಕ್ಕೆ ಪಡೆಯಲಾಯಿತು. ಇದನ್ನೂ ಓದಿ: ಖಾನಾಪುರದಲ್ಲಿ ಪೊಲೀಸರ ದಾಳಿ- ದಾಖಲೆ ಇಲ್ಲದ 53 ಲಕ್ಷ ಮೌಲ್ಯದ ವಸ್ತುಗಳು ಜಪ್ತಿ

    ಈ ಬಗ್ಗೆ ಸಂಜಯ್ ಮಾತನಾಡಿ, ಏಪ್ರಿಲ್ 8 ರಂದು ಸಿಕಂದರಾಬಾದ್‍ನಿಂದ ತಿರುಪತಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಅವರು ತೆಲಂಗಾಣಕ್ಕೆ ಆಗಮಿಸಲಿದ್ದಾರೆ. ಅವರ ವ್ಯವಸ್ಥೆಗೆ ಅಡ್ಡಿಪಡಿಸಲು ಬಿಆರ್‌ಎಸ್ ಸರ್ಕಾರದ ಪ್ರಯತ್ನವಾಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಕಾಂಗ್ರೆಸ್‌ನಿಂದ ಗುಬ್ಬಿ ಟಿಕೆಟ್ ಆಕಾಂಕ್ಷಿ ಪ್ರಸನ್ನಕುಮಾರ್ ಉಚ್ಚಾಟನೆ

  • ಪಕ್ಷ ಅಧಿಕಾರಕ್ಕೆ ಬಂದ್ರೆ ಹೆಣ್ಮಕ್ಕಳಿಗೆ ತೊಂದ್ರೆ ಕೊಟ್ಟವರ ಮನೆಗೆ ಬುಲ್ಡೋಜರ್ ನುಗ್ಗಿಸ್ತೇವೆ: ಬಂಡಿ ಸಂಜಯ್

    ಪಕ್ಷ ಅಧಿಕಾರಕ್ಕೆ ಬಂದ್ರೆ ಹೆಣ್ಮಕ್ಕಳಿಗೆ ತೊಂದ್ರೆ ಕೊಟ್ಟವರ ಮನೆಗೆ ಬುಲ್ಡೋಜರ್ ನುಗ್ಗಿಸ್ತೇವೆ: ಬಂಡಿ ಸಂಜಯ್

    ಹೈದರಾಬಾದ್: ಪಕ್ಷ ಅಧಿಕಾರಕ್ಕೆ ಬಂದರೆ ಹೆಣ್ಣು ಮಕ್ಕಳಿಗೆ ತೊಂದರೆ ಕೊಟ್ಟವರ ಮನೆಗೆ ಬುಲ್ಡೋಜರ್ ನುಗ್ಗಿಸುತ್ತೇವೆ ಎಂದು ತೆಲಂಗಾಣ (Telangana) ಬಿಜೆಪಿ ಘಟಕದ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ (Bandi Sanjay Kumar) ಹೇಳಿದ್ದಾರೆ.

    ತೆಲಂಗಾಣದಲ್ಲಿ ಹೆಣ್ಣು ಮಕ್ಕಳ ಮೇಲೆ ಆಗುತ್ತಿರುವ ದೌರ್ಜನ್ಯ ವಿರೋಧಿಸಿ ಹೈದರಾಬಾದ್‍ನಲ್ಲಿರುವ ತಮ್ಮ ಪಕ್ಷದ ಕಚೇರಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

    ತೆಲಂಗಾಣದಲ್ಲಿ ಬಿಜೆಪಿ (BJP) ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಅಲ್ಲದೆ ಪಕ್ಷ ಆದಿಕಾರಕ್ಕೆ ಬಂದ ಬಳಿಕ ಉತ್ತರಪ್ರದೇಶ (Uttarpradesh) ದ ಮಾದರಿಯಂತೆ ಅಪರಾಧಿಗಳ ಮನೆಯನ್ನು ಬುಲ್ಡೋಜರ್ ಬಳಸಿ ಕೆಡವುದಾಗಿ ತಿಳಿಸಿದರು. ಇದನ್ನೂ ಓದಿ: ಮತ್ತೆ ಸಾವಿರಾರು ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾದ ಮೆಟಾ

    ಇದೇ ವೇಳೆ ಹಿರಿಯರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡ ಕಕ್ತಿಯಾ ವೈದ್ಯಕೀಯ ಕಾಲೇಕಿನ (ಕೆಎಂಸಿ) ಎಂಡಿ ವಿದ್ಯಾರ್ಥಿನಿ ಪ್ರೀತಿ ಎಂಬಾಕೆಯ ಸಾವಿನ ಕುರಿತು ಮಾತನಾಡಿದರು. ಪ್ರೀತಿ ಸಾವಿನ ಕುರಿತು ಸರ್ಕಾರ ತನಿಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿದರು.

  • ಬಿಜೆಪಿ ಅಧಿಕಾರಕ್ಕೆ ಬಂದ್ರೆ ಸರ್ಕಾರಿ ಕಟ್ಟಡದ ಮೇಲಿನ ಗುಮ್ಮಟ ಕೆಡವುತ್ತೇವೆ – ಬಂಡಿ ಸಂಜಯ್

    ಬಿಜೆಪಿ ಅಧಿಕಾರಕ್ಕೆ ಬಂದ್ರೆ ಸರ್ಕಾರಿ ಕಟ್ಟಡದ ಮೇಲಿನ ಗುಮ್ಮಟ ಕೆಡವುತ್ತೇವೆ – ಬಂಡಿ ಸಂಜಯ್

    ಹೈದರಾಬಾದ್: ಈ ಬಾರಿ ತೆಲಂಗಾಣ (Telangana) ರಾಜ್ಯದಲ್ಲಿ ಬಿಜೆಪಿ (BJP) ಅಧಿಕಾರಕ್ಕೆ ಬಂದ್ರೆ ನಿಜಾಮರ ಸಂಸ್ಕೃತಿ ಬಿಂಬಿಸುವ ರಚನೆಗಳನ್ನ ಅಳಿಸಿ ಹಾಕ್ತೇವೆ. ರಾಜ್ಯ ಕಾರ್ಯದರ್ಶಿಗಳ ಭವನದ ಮೇಲೆ ನಿರ್ಮಿಸಿರುವ ಗುಮ್ಮಟವನ್ನೂ ಕೆಡವುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಕುಮಾರ್‌ (Bandi Sanjay Kumar) ಹೇಳಿದ್ದಾರೆ.

    ಇಲ್ಲಿನ ಕುಕಟ್‌ಪಲ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಓವೈಸಿ ಅವರನ್ನ ಸಮಾಧಾನಪಡಿಸುವುದಕ್ಕಾಗಿ ಸಿಎಂ ಕೆ.ಚಂದ್ರಶೇಖರ ರಾವ್ (K. Chandrashekar Rao), ಸರ್ಕಾರಿ ಭವನಗಳನ್ನು ತಾಜ್‌ಮಹಲ್‌ನಂತಹ (Taj Mahal) ಸಮಾಧಿ ರೀತಿಯಾಗಿ ಪರಿವರ್ತಿಸಿದ್ದಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಕರ್ನಾಟಕಕ್ಕೆ 100 ರೂ. ನೀಡಿದರೆ, ದೇಶಕ್ಕೆ ಕರ್ನಾಟಕ ಸಾವಿರ ರೂ. ನೀಡಲಿದೆ: ತೇಜಸ್ವಿ ಸೂರ್ಯ

    ಈ ಬಾರಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ನಿಜಾಮರ ಸಂಸ್ಕೃತಿ ಬಿಂಬಿಸುವ, ನಿಜಾಮ್ ಆಡಳಿತ ಸಂಕೇತಗಳಾಗಿರುವ ಎಲ್ಲಾ ರೀತಿಯ ರಚನೆಗಳನ್ನು ಅಳಿಸಿ ಹಾಕುತ್ತೇವೆ. ಅಲ್ಲದೇ ರಾಜ್ಯ ಕಾರ್ಯದರ್ಶಿ ಆಡಳಿತ ಭವನದ ಮೇಲೆ ನಿರ್ಮಿಸಲಾದ ಗುಮ್ಮಟವನ್ನೂ ಕೆಡವುತ್ತೇವೆ. ಮುಖ್ಯಮಂತ್ರಿಗಳ ಅಧಿಕೃತ ಬಂಗಲೆಯಾದ ಪ್ರಗತಿ ಭವನವನ್ನು ಪ್ರಜಾ ದರ್ಬಾರ್ ಆಗಿ ಬದಲಾಯಿಸುತ್ತೇವೆ ಎಂದು ಘೋಷಣೆ ಮಾಡಿದರು. ಇದನ್ನೂ ಓದಿ: ವಾಲ್ಮೀಕಿ ಜಾತ್ರೆಯಲ್ಲಿ ಕಿಚ್ಚನ ಫ್ಯಾನ್ಸ್ ಗಲಾಟೆ : ಸುದೀಪ್ ಬೆನ್ನಿಗೆ ನಿಂತ ಶಾಸಕ ರಾಜುಗೌಡ

    ಇದೇ ವೇಳೆ `ರಸ್ತೆ ಅಗಲೀಕರಣಕ್ಕೆ ಅಡ್ಡಿ ಉಂಟುಮಾಡುವ ಪ್ರಾರ್ಥನಾ ಮಂದಿರಗಳನ್ನ ಸರ್ಕಾರ ಕೆಡವಲಿದೆ’ ಎಂಬ ಸಿಎಂ ಕೆಸಿಆರ್ ಹೇಳಿಕೆಗೆ ಪ್ರತಿಕ್ರಿಯಿಸಿ, ಸಾಧ್ಯವಾದರೇ ರಸ್ತೆ ಮಧ್ಯೆ ನಿರ್ಮಿಸಿರುವ ಮಸೀದಿಗಳನ್ನ ಕೆಡವಲಿ ಎಂದು ಸವಾಲು ಹಾಕಿದರು.

    ಹೈದರಾಬಾದ್ ನಗರದ ಕುಕಟ್ ಪಲ್ಲಿಯಲ್ಲಿ ಆಡಳಿತ ಪಕ್ಷದ ನಾಯಕರು ಬಡವರ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಜನರು ಇದರ ವಿರುದ್ಧ ಪ್ರತಿಭಟನೆ ನಡೆಸಿದ್ದಕ್ಕೆ ಅವರನ್ನ ಬಂಧಿಸಿ, ಸುಳ್ಳು ಕೇಸ್‌ಗಳನ್ನ ದಾಖಲಿಸಿದ್ದಾರೆ. ಅಂಥಹವರ ವಿರುದ್ಧ ಮೊದಲು ಕ್ರಮ ಕೈಗೊಳ್ಳಿ ಎಂದು ತಿರುಗೇಟು ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಟಿಆರ್‌ಎಸ್, ಕಾಂಗ್ರೆಸ್ ಕೈಜೋಡಿಸಿದರೂ ಬಿಜೆಪಿಯನ್ನು ಎದುರಿಸಲಾಗಲ್ಲ: ಸಂಸದ

    ಟಿಆರ್‌ಎಸ್, ಕಾಂಗ್ರೆಸ್ ಕೈಜೋಡಿಸಿದರೂ ಬಿಜೆಪಿಯನ್ನು ಎದುರಿಸಲಾಗಲ್ಲ: ಸಂಸದ

    ಹೈದರಾಬಾದ್: ತೆಲಂಗಾಣ ರಾಷ್ಟ್ರ ಸಮಿತಿ ಮತ್ತು ಕಾಂಗ್ರೆಸ್ ಕೈಜೋಡಿಸಿ ಒಟ್ಟಾಗಿ ಚುನಾವಣೆ ಎದುರಿಸಿದರೂ ರಾಜ್ಯದ ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಸಾಧ್ಯವಿಲ್ಲ ಎಂದು ತೆಲಂಗಾಣ ಬಿಜೆಪಿ ಮುಖ್ಯಸ್ಥ ಮತ್ತು ಕರೀಂನಗರ ಸಂಸದ ಬಂಡಿ ಸಂಜಯ್ ಕುಮಾರ್ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಟಿಆರ್‌ಎಸ್ ನಡುವೆ ತಿಳುವಳಿಕೆ ಇದೆ. ಅದಕ್ಕಾಗಿಯೇ ಪ್ರಶಾಂತ್ ಕಿಶೋರ್ ಅವರನ್ನು ನೇಮಿಸಿಕೊಳ್ಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

    ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ಸೋನಿಯಾ ಗಾಂಧಿ ಮತ್ತು ತೆಲಂಗಾಣದಲ್ಲಿ ಕೆಸಿಆರ್ ಅವರೊಂದಿಗೆ ಸರಣಿ ಸಭೆ ನಡೆಸಿದ್ದಾರೆ. ಅವರು ಒಟ್ಟಾಗಿ ಅಥವಾ ಪ್ರತ್ಯೇಕವಾಗಿ ಹೋರಾಡಿದರೂ ಕೇಂದ್ರದಲ್ಲಿ ಹಾಗೂ ತೆಲಂಗಾಣದಲ್ಲಿ ಬಿಜೆಪಿಯನ್ನು ಗೆಲ್ಲಲು ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: . ರೇವಣ್ಣನಿಗೆ ಶಿಕ್ಷಣ ಅಂದರೆ ಏನು ಅಂತ ಗೊತ್ತಿಲ್ಲ: ಅಶ್ವತ್ಥ್ ನಾರಾಯಣ್

    ಕಾಂಗ್ರೆಸ್ ನಾಯಕ ಚುನಾವಣೆಯಲ್ಲಿ ಗೆದ್ದರೆ ಪಕ್ಷಾಂತವಾಗುತ್ತಾನೆ, ಇಲ್ಲದಿದ್ದರೆ ಪಕ್ಷವನ್ನೇ ಮಾರಿಕೊಳ್ಳುತ್ತಾರೆ ಎಂದು ವ್ಯಂಗ್ಯವಾಡಿದ ಅವರು, ಈಗ ಪ್ರಶಾಂತ್ ಕಿಶೋರ್ ಟಿಆರ್‌ಎಸ್‍ಅನ್ನು ಕಾಂಗ್ರೆಸ್‍ಗೆ ಮಾರಲು ಬಂದಿದ್ದಾರೋ ಅಥವಾ ಕಾಂಗ್ರೆಸ್‍ನ್ನು ಟಿಆರ್‌ಎಸ್‍ಗೆ ಮಾರಲು ಬಂದಿದ್ದಾರಾ ಎಂಬುದನ್ನು ಅರ್ಥಮಾಡಿಕೊಳ್ಳಿ ಎಂದು ವ್ಯಂಗ್ಯವಾಡಿದರು ಇದನ್ನೂ ಓದಿ: ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಹದಗೆಟ್ಟಿದೆ: ಅಮೆರಿಕ