Tag: Bandipur National Park

  • ಓವರ್ ಟೇಕ್ ಭರದಲ್ಲಿ ಅಪಘಾತ- ಒಂದೇ ಕುಟುಂಬದ ನಾಲ್ವರ ದುರ್ಮರಣ

    ಓವರ್ ಟೇಕ್ ಭರದಲ್ಲಿ ಅಪಘಾತ- ಒಂದೇ ಕುಟುಂಬದ ನಾಲ್ವರ ದುರ್ಮರಣ

    ಚಾಮರಾಜನಗರ: ಸಂಕ್ರಾಂತಿ ಹಬ್ಬದ ರಜೆಯ ಗುಂಗಿನಲ್ಲಿ ಕುಟುಂಬದ ಜೊತೆ ಬಂಡೀಪುರದ ಸಫಾರಿಗೆ (Bandipur National Park) ತೆರಳಲು ಹೋಗುತ್ತಿದ್ದ ಒಂದೇ ಕುಟುಂಬದ ನಾಲ್ವರು ರಸ್ತೆ ಅಪಘಾತದಲ್ಲಿ (Accident) ಸಾವಿಗೀಡಾದ ಘಟನೆ ಕೊಳ್ಳೆಗಾಲದ ಸಮೀಪದ ಪಾಳ್ಯ ಗ್ರಾಮದ ಬಳಿ ನಡೆದಿದೆ.

    ಮೃತರನ್ನು ಸಂತೋಷ್, ಸೌಮ್ಯ ಹಾಗೂ ದಂಪತಿಯ ಮಕ್ಕಳಾದ ನಿತ್ಯ ಸಾಕ್ಷಿ ಹಾಗೂ ಅಭಿಷೇಕ್ ಎಂದು ಗುರುತಿಸಲಾಗಿದೆ. ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅಭಿಷೇಕ್ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಲವ್ ಜಿಹಾದ್ ಆರೋಪ – ಮಂಡ್ಯದ ಹಿಂದೂ ಬಾಲಕಿ ಜೊತೆ ಯುವಕ ಪರಾರಿ!

    ಇವರೆಲ್ಲ ಸಂಕ್ರಾಂತಿ ರಜೆಯ ಪ್ರಯುಕ್ತ ಬೈಕ್‍ನಲ್ಲಿ ಬಂಡೀಪುರ ಸಫಾರಿ ತೆರಳಲು ಸಜ್ಜಾಗಿದ್ದರು. ಬೆಳಗ್ಗೆ 11 ಗಂಟೆಗೆ ರೆಡಿಯಾದ ನಾಲ್ವರು ಬೈಕ್ ಏರಿ ಕೊಳ್ಳೆಗಾಲದ ಚರ್ಚ್‍ಗೆ ತೆರಳಿ ಪ್ರಾರ್ಥನೆ ಮಾಡಿ ಬಳಿಕ ಹೊರಟಿದ್ದರು. ಈ ವೇಳೆ ಓವರ್ ಟೇಕ್ ಮಾಡುವ ವೇಳೆ ಎದುರಿಗೆ ಬಂದ ಭತ್ತ ಕಟಾವು ಮಾಡುವ ಯಂತ್ರಕ್ಕೆ ಬೈಕ್ ಡಿಕ್ಕಿಯಾಗಿದೆ. ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

    ಅಪಘಾತದ ಭೀಕರತೆ ಎಷ್ಟಿತ್ತೆಂದರೆ ಮೃತದೇಹಗಳು ಯಂತ್ರದ ಚೂಪಾದ ಭಾಗಗಳಲ್ಲಿ ಸಿಲುಕಿದ್ದು ಮನಕಲಕುವಂತಿತ್ತು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಳ್ಳೆಗಾಲದ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹಗಳನ್ನು ಕುಟುಂಬಸ್ಥರಿಗೆ ಒಪ್ಪಿಸಲಾಗಿದೆ. ಇದನ್ನೂ ಓದಿ: ಕಲಬುರಗಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಮನೆಗೆಲಸ, ಟಾಯ್ಲೆಟ್ ಕ್ಲಿನಿಂಗ್ – ಮುಖ್ಯಶಿಕ್ಷಕಿ ವಿರುದ್ಧ FIR

  • ಮೋದಿ ಬಂಡೀಪುರ ಭೇಟಿ – ಏ.8ರಿಂದ ವಾಹನ ಸಂಚಾರ ಬಂದ್‌

    ಮೋದಿ ಬಂಡೀಪುರ ಭೇಟಿ – ಏ.8ರಿಂದ ವಾಹನ ಸಂಚಾರ ಬಂದ್‌

    ಚಾಮರಾಜನಗರ: ಬಂಡೀಪುರ ಹುಲಿ ಯೋಜನೆಗೆ (Bandipur Tiger Project) 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಏಪ್ರಿಲ್ 9 ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಬಂಡೀಪುರಕ್ಕೆ ಭೇಟಿ ಕೊಡಲಿದ್ದಾರೆ. ಬಂಡೀಪುರ (Bandipur Tiger Reserve) ಹೊರ ವಲಯದ ಮೇಲುಕಾಮನಹಳ್ಳಿ ಬಳಿ 3 ಹೆಲಿಪ್ಯಾಡ್‌ ನಿರ್ಮಾಣ ಮಾಡಲಾಗಿದ್ದು, ಮೋದಿ ಭೇಟಿಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

    ಭದ್ರತಾ ಕ್ರಮವಾಗಿ ಶುಕ್ರವಾರ ಸಂಜೆ 4 ಗಂಟೆಯಿಂದಲೇ ಬಂಡೀಪುರ ಮಾರ್ಗವಾಗಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ (National Highway) ಭಾರೀ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಶನಿವಾರ ಸಂಜೆ 4 ಗಂಟೆಯಿಂದ ಎಲ್ಲಾ ರೀತಿ ವಾಹನಗಳ ಸಂಚಾರಕ್ಕೂ ನಿರ್ಬಂಧ ಇರಲಿದೆ. ಇದನ್ನೂ ಓದಿ: ಏ. 9ಕ್ಕೆ ಮೋದಿ ಬಂಡೀಪುರ ಭೇಟಿ – ಪ್ರವಾಸಿಗರಿಗೆ ಇಂದಿನಿಂದ 4 ದಿನ ಸಫಾರಿ, ರೆಸಾರ್ಟ್ ವಾಸ್ತವ್ಯ ಬಂದ್

    ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 181 ಹಾಗೂ ಕೇರಳಕ್ಕೆ ಸಂಪರ್ಕ ಕಲ್ಪಿಸುವ NH 766 ರಲ್ಲಿ ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ. ಏಪ್ರಿಲ್ 8ರ ಸಂಜೆ 4 ಗಂಟೆಯಿಂದ ಏಪ್ರಿಲ್‌ 9ರ ಮಧ್ಯಾಹ್ನ 12 ಗಂಟೆವರೆಗೆ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಇದನ್ನೂ ಓದಿ: ರಾಷ್ಟ್ರ ರಾಜಕಾರಣಕ್ಕೆ ಹೋಗಲು ಯತ್ನಿಸಿ ಸೋತರು; ರಾಜ್ಯ ರಾಜಕಾರಣದಲ್ಲೇ ಗೆಲುವು ಕಂಡರು!

    ಈಗಾಗಲೇ ಏಪ್ರಿಲ್‌ 6ರಿಂದಲೇ ಸಫಾರಿ, ರೆಸಾರ್ಟ್, ಹೋಂ ಸ್ಟೇ, ರೆಸಾರ್ಟ್ ‌ಗಳಲ್ಲಿ ಪ್ರವಾಸಿಗರ ವಾಸ್ತವ್ಯಕ್ಕೆ ನಿಷೇಧ ಹೇರಲಾಗಿದೆ. ಎಲ್ಲಾ ರೀತಿಯ ಡ್ರೋನ್ ಹಾರಾಟಕ್ಕೂ ಕಡಿವಾಣ ಹಾಕುವಂತೆ ಜಿಲ್ಲಾಧಿಕಾರಿ ರಮೇಶ್ ಆದೇಶ ಹೊರಡಿಸಿದ್ದಾರೆ.

  • ಏ. 9ಕ್ಕೆ ಮೋದಿ ಬಂಡೀಪುರ ಭೇಟಿ – ಪ್ರವಾಸಿಗರಿಗೆ ಇಂದಿನಿಂದ 4 ದಿನ ಸಫಾರಿ, ರೆಸಾರ್ಟ್ ವಾಸ್ತವ್ಯ ಬಂದ್

    ಏ. 9ಕ್ಕೆ ಮೋದಿ ಬಂಡೀಪುರ ಭೇಟಿ – ಪ್ರವಾಸಿಗರಿಗೆ ಇಂದಿನಿಂದ 4 ದಿನ ಸಫಾರಿ, ರೆಸಾರ್ಟ್ ವಾಸ್ತವ್ಯ ಬಂದ್

    ಚಾಮರಾಜನಗರ: ವಿಧಾನಸಭಾ ಚುನಾವಣೆ (Assembly Election) ಹಿನ್ನೆಲೆ ರಾಜ್ಯಕ್ಕೆ ಮೇಲಿಂದ ಮೇಲೆ ಪ್ರವಾಸ ಕೈಗೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಇದೀಗ ಮತ್ತೊಮ್ಮೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಈ ಬಾರಿ ಮೋದಿ ಅವರು ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ (Bandipur National Park) ಭೇಟಿ ನೀಡಿ ಸಫಾರಿ ನಡೆಸಲಿದ್ದಾರೆ.

    ಏಪ್ರಿಲ್ 9 ರಾಷ್ಟ್ರೀಯ ಹುಲಿ ದಿನ. ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದು, ಸಫಾರಿ ನಡೆಸಲಿದ್ದಾರೆ. ಹುಲಿ ಯೋಜನೆಗೆ 50 ವರ್ಷ ತುಂಬಿದ ಹಿನ್ನೆಲೆ ರಾಜ್ಯಕ್ಕೆ ಆಗಮಿಸಲಿರುವ ಮೋದಿ, ಮೈಸೂರಿನಲ್ಲಿ 3 ದಿನಗಳ ಮೆಗಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಇತ್ತೀಚಿನ ಹುಲಿ ಗಣತಿ ವರದಿ, ಹುಲಿ ಸಂರಕ್ಷಣೆಗಾಗಿ ಸರ್ಕಾರ ಕೈಗೊಂಡ ಕ್ರಮಗಳ ವರದಿ, ಮತ್ತು ನಾಣ್ಯ ಸ್ಮರಣಿಕೆಯನ್ನು ಮೈಸೂರಿನಲ್ಲಿ ಬಿಡುಗಡೆ ಮಾಡಲಿದ್ದಾರೆ.

    ಪ್ರಧಾನಿ ಭೇಟಿ ಹಿನ್ನೆಲೆ ಭದ್ರತಾ ದೃಷ್ಟಿಯಿಂದ ಏಪ್ರಿಲ್ 6 ರಿಂದ 9 ರವರೆಗೆ ಬಂಡೀಪುರದಲ್ಲಿ ಸಫಾರಿ ಬಂದ್ ಇರಲಿದೆ. ಅಲ್ಲದೇ ಬಂಡೀಪುರ ವ್ಯಾಪ್ತಿಯ ಎಲ್ಲಾ ಹೋಂ ಸ್ಟೇ, ರೆಸಾರ್ಟ್, ಲಾಡ್ಜ್‌ಗಳನ್ನು ತಾತ್ಕಾಲಿಕವಾಗಿ ಮುಚ್ಚಲು ಡಿಸಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ ಅಭ್ಯರ್ಥಿಗಳ 2ನೇ ಪಟ್ಟಿ ಇಂದು ರಿಲೀಸ್?

    ಇದೇ ವೇಳೆ ಮುದುಮಲೈ ಹುಲಿ ರಕ್ಷಿತಾರಣ್ಯದಲ್ಲಿಯೂ 4 ದಿನ ಸಫಾರಿ ಬಂದ್ ಇರಲಿದೆ. ಪ್ರಧಾನಿ ತಮ್ಮ ಭೇಟಿ ವೇಳೆ ಆಸ್ಕರ್ ಖ್ಯಾತಿಯ ದಿ ಎಲಿಫೆಂಟ್ ವಿಸ್ಪರರ್ಸ್ ಸಾಕ್ಷ್ಯಚಿತ್ರದ ನಿಜ ಪಾತ್ರಧಾರಿಗಳನ್ನು ಭೇಟಿಮಾಡಲಿದ್ದಾರೆ.

    ಚುನಾವಣೆ ದಿನಾಂಕ ಹಾಗೂ ನೀತಿ ಸಂಹಿತೆ ಜಾರಿಯಾದ ನಂತರ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ ಚುನಾವಣೆ ದೃಷ್ಟಿಯಲ್ಲಿ ಜನರನ್ನು ಯಾವ ರೀತಿ ಮೋಡಿ ಮಾಡಲಿದ್ದಾರೆಂದು ಕಾದು ನೋಡಬೇಕಿದೆ. ಇದನ್ನೂ ಓದಿ: ಯುಪಿಎಯಿಂದ ನಿರೀಕ್ಷಿಸಿದ್ದೆ, ಬಿಜೆಪಿ ಮುಸ್ಲಿಮರಿಗೆ ಪದ್ಮ ಪ್ರಶಸ್ತಿ ನೀಡಲ್ಲ ಎಂದು ಭಾವಿಸಿದ್ದೆ: ಮೋದಿಗೆ ರಶೀದ್ ಅಹ್ಮದ್ ಖಾದ್ರಿ ಧನ್ಯವಾ

  • ಕರ್ನಾಟಕದ ಕಾಶ್ಮೀರ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್‌ ಸಂಚಾರ ಬಂದ್‌

    ಕರ್ನಾಟಕದ ಕಾಶ್ಮೀರ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್‌ ಸಂಚಾರ ಬಂದ್‌

    ಚಾಮರಾಜನಗರ: ಕರ್ನಾಟಕದ ಕಾಶ್ಮೀರ ಎಂದೇ ಕರೆಯಲ್ಪಡುವ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ (Himavad Gopalaswamy Hills) ಬಸ್‌ ಸಂಚಾರ ಸ್ಥಗಿತಗೊಳಿಸಲಾಗಿದೆ.

    ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ನಿರಂತರ ಮಳೆಯಿಂದಾಗಿ (Rain) ಬೆಟ್ಟಕ್ಕೆ ಹೋಗುವ ರಸ್ತೆಗಳಲ್ಲಿ ಕೊರಕಲು ಉಂಟಾಗಿದೆ. ರಸ್ತೆ ಬದಿಗಳಲ್ಲಿ ಮಣ್ಣು ಕೊಚ್ಚಿಹೋಗಿದ್ದು, ದುರಸ್ತಿಗೆ ಬಂದಿದೆ. ಇನ್ನೂ ಮಳೆ ಹೆಚ್ಚಾದರೆ ರಸ್ತೆಯೇ ಕುಸಿಯುವ ಭೀತಿ ಎದುರಾಗಿದೆ. ಆದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಬಸ್‌ ಸಂಚಾರ ಸ್ಥಗಿತಗೊಳಿಸಲಾಗಿದೆ. ಇದನ್ನೂ ಓದಿ: ಚಿನ್ನ ಕಳ್ಳಸಾಗಣೆ ಪ್ರಕರಣ ಕರ್ನಾಟಕಕ್ಕೆ ವರ್ಗಾಯಿಸಲು ಕೋರಿದ್ದ ED ಮನವಿಗೆ ವಿರೋಧ – ಸುಪ್ರೀಂಗೆ ಕೇರಳ ಸರ್ಕಾರ ಅಫಿಡವಿಟ್‌

    ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟವು ಬಂಡೀಪುರ ರಾಷ್ಟ್ರೀಯ ಉದ್ಯಾನವನದ (Bandipur National Park) ಹೃದಯ ಭಾಗದಲ್ಲಿದೆ.

    Live Tv
    [brid partner=56869869 player=32851 video=960834 autoplay=true]

  • ವರ್ಷದ ಕಡೆಯ ಭಾನುವಾರ ಬಂಡೀಪುರಕ್ಕೆ ಹರಿದು ಬಂದ ಜನಸಾಗರ

    ವರ್ಷದ ಕಡೆಯ ಭಾನುವಾರ ಬಂಡೀಪುರಕ್ಕೆ ಹರಿದು ಬಂದ ಜನಸಾಗರ

    ಚಾಮರಾಜನಗರ: ಇಂದು ತಿಂಗಳ ಕಡೆಯ ಭಾನುವಾರ ಕೂಡ ಹೌದು. ಅಷ್ಟೇ ಏಕೆ ಈ ವರ್ಷದ ಕಡೆ ಭಾನುವಾರ ಕೂಡ ಹೌದು. ಹೀಗಾಗಿಯೇ ಗಡಿ ಜಿಲ್ಲೆ ಚಾಮರಾಜನಗರದ ಪ್ರವಾಸಿ ತಾಣಗಳಲ್ಲಿ ಈಗ ಜನವೋ ಜನ. ಅದರಲ್ಲೂ ವನ್ಯಜೀವಿ ಮತ್ತು ಪ್ರಕೃತಿ ಪ್ರಿಯರು ಜಿಲ್ಲೆಯತ್ತ ಹೆಚ್ಚಿನ ಸಂಖ್ಯೆಯಲ್ಲಿ ಹೆಜ್ಜೆ ಹಾಕುತ್ತಿದ್ದಾರೆ. ರಾಜ್ಯಗಳಿಂದ ಮಾತ್ರವಲ್ಲದೆ ಹೊರ ರಾಜ್ಯಗದಳಿಂದಲೂ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಸಾಗರೋಪಾದಿಯಲ್ಲಿ ಆಗಮಿಸುತ್ತಿರುವ ಪ್ರವಾಸಿಗರನ್ನು ನಿಯಂತ್ರಿಸಲು ಅರಣ್ಯ ಇಲಾಖೆ ಹರಸಾಹಸ ಪಡುತ್ತಿದೆ. ಇದರ ಜೊತೆಗೆ ವನ್ಯಜೀವಿಗಳ ದರ್ಶನ ಪ್ರವಾಸಿಗರನ್ನು ಮತ್ತಷ್ಟು ದಿಲ್ ಖುಷ್ ಮಾಡಿಸಿದೆ.

    29 ಡಿಸೆಂಬರ್ 2019ರ ಕಡೆಯ ಭಾನುವಾರ. ನೂತನ ವರ್ಷಾರಂಭ ಸ್ವಾಗತಕ್ಕೆ ಎಲ್ಲರೂ ಕಾತುರರಾಗಿದ್ದಾರೆ. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಎಲ್ಲೆಡೆ ಪ್ರವಾಸಿ ತಾಣಗಳಿಗೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ಕೊಡುತ್ತಿದ್ದಾರೆ. ಹೊಸ ವರ್ಷಾಚರಣೆ ಸಂಭ್ರಮ ಆಚರಿಸಲು ತಮಿಳುನಾಡಿನ ಊಟಿ. ಕೇರಳ ಸೇರಿದಂತೆ ಇತರೆ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಸಾಗರೋಪಾದಿಯಲ್ಲಿ ಕುಟುಂಬಸ್ಥರೊಂದಿಗೆ, ಸ್ನೇಹಿತರೊಂದಿಗೆ ತೆರಳುತ್ತಿದ್ದಾರೆ. ಊಟಿ, ಕೇರಳಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿಯೇ ಬಂಡೀಪುರ ರಾಷ್ಟ್ರೀಯ ಉದ್ಯಾನ ಇರುವುದರಿಂದ ಬಂಡೀಪುರಕ್ಕೂ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ.

    ಸಾಮಾನ್ಯವಾಗಿ ರಜೆ ದಿನಗಳಲ್ಲಿ ಮೈಸೂರು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಇಲ್ಲಿಗೆ ಪ್ರವಾಸಿಗರು ಬರುತ್ತಾರೆ. ಆದರೆ ನೂತನ ವರ್ಷಾಚರಣೆ ಹಿನ್ನೆಲೆಯಲ್ಲಿ ಈಗ ಮಹಾರಾಷ್ಟ್ರ, ಒಡಿಶಾ, ಮಧ್ಯಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಿಂದಲೂ ಪ್ರವಾಸಿಗರು ಆಗಮಿಸುತ್ತಿದ್ದಾರೆ.

    ತಮಿಳುನಾಡಿನ ಊಟಿಗೆ ಸಂಪರ್ಕ ಕಲ್ಪಿಸುವ ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಿದ್ದಾರೆ. ದಟ್ಟ ಕಾನನದ ನಡುವೆ ಹಸಿರು ಸೀರೆಯುಟ್ಟು ಕಂಗೊಳಿಸುವ ಅರಣ್ಯ ಪ್ರದೇಶದಲ್ಲಿ ತಂಪಾದ ವಾತಾರಣ ಇರುವುದರಿಂದ ಪೋಷಕರು ಮಕ್ಕಳೊಂದಿಗೆ, ಸ್ನೇಹಿತರೊಂದಿಗೆ ಬಂಡೀಪುರಕ್ಕೆ ಭೇಟಿ ನೀಡಿ ಒಂದು ಸುತ್ತು ಸಫಾರಿ ಮುಗಿಸಿಕೊಂಡು ನೂತನ ವರ್ಷಾಚರಣೆಗೆ ಊಟಿ ಹಾಗೂ ಕೇರಳದತ್ತ ಪ್ರವಾಸಿಗರು ತೆರಳುತ್ತಿದ್ದಾರೆ.

    ಅತ್ತ ಸುಡುವ ಬಿಸಿಲು ಇಲ್ಲದೆ, ಇತ್ತ ಮಳೆಯೂ ಇಲ್ಲದೆ ಇರುವುದರಿಂದ ಹುಲಿ, ಆನೆ, ಚಿರತೆ, ಜಿಂಕೆ, ಸೀಳುನಾಯಿ, ಕಾಡೆಮ್ಮೆಗಳಂತಹ ವನ್ಯಜೀವಿಗಳು ಹೇರಳವಾಗಿ ನೋಡಲು ಸಿಗುತ್ತಿರುವುದು ಪ್ರವಾಸಿಗರಲ್ಲಿ ಮತ್ತಷ್ಟು ಸಂತಸ ತರುತ್ತಿದೆ. ಪೂರ್ವ ಮುಂಗಾರಿನಲ್ಲಿ ಉತ್ತಮ ಮಳೆಯಾಗಿರುವುದರಿಂದ ಬಂಡೀಪುರ ಸಂಪೂರ್ಣವಾಗಿ ಹಸಿರಿನಿಂದ ಕಂಗೊಳಿಸುತ್ತಿದೆ. ಹಸಿರು ಸೀರೆಯುಟ್ಟ ಮದುವಣಗಿತ್ತಿ ರೀತಿಯ ಬಂಡೀಪುರ ಎಲ್ಲಾ ವರ್ಗದವರನ್ನು ಹೆಚ್ಚು ಹೆಚ್ಚು ಅಕರ್ಷಿಸುತ್ತಿದೆ.

    ಪ್ರವಾಸಿಗರು ನೂತನ ವರ್ಷಾಚರಣೆಗೆ ಸಾಗರೋಪಾದಿಯಲ್ಲಿ ಆಗಮಿಸುತ್ತಿದ್ದರೆ ಬರುವ ಪ್ರವಾಸಿಗರನ್ನು ನಿಯಂತ್ರಣ ಮಾಡಲು ಅರಣ್ಯ ಇಲಾಖೆ ಹೈರಣಾಗಿ ಹೋಗಿದೆ. ಕೆಲವರಿಗೆ ಸಫಾರಿ ಹೋಗಲು ಟಿಕೆಟ್ ಸಿಗದೆ ನಿರಾಸೆಯಿಂದ ವಾಪಸ್ ಹೋದ ಪ್ರಸಂಗ ಕೂಡ ನಡೆದಿದೆ. ಪ್ರವಾಸಿಗರ ಆಗಮನದಿಂದ ಅಷ್ಟೇ ಪ್ರಮಾಣದಲ್ಲಿ ಅರಣ್ಯ ಇಲಾಖೆಗೆ ಆದಾಯ ಹರಿದು ಬರುತ್ತಿರುವುದು ಸಂತಸದ ವಿಷಯವಾಗಿದೆ.

  • ಬಂಡೀಪುರ ಉಳಿಸಿ – ಅಭಿಮಾನಿಗಳಲ್ಲಿ ‘ದಚ್ಚು’ ಮನವಿ

    ಬಂಡೀಪುರ ಉಳಿಸಿ – ಅಭಿಮಾನಿಗಳಲ್ಲಿ ‘ದಚ್ಚು’ ಮನವಿ

    ಬೆಂಗಳೂರು/ಚಾಮರಾಜನಗರ: ಬಂಡೀಪುರ ಹುಲಿರಕ್ಷಿತಾರಣ್ಯ ಉಂಟಾಗಿರುವ ಕಾಡ್ಗಿಚ್ಚಿನಿಂದ ಸಾಕಷ್ಟು ವನ್ಯಜೀವಿ ಸಂಕುಲಕ್ಕೆ ತೊಂದರೆಯಾಗಿದ್ದು, ಬೆಂಕಿ ನಂದಿಸಲು ಸ್ವಯಂ ಸೇವಕರು ಸರ್ಕಾರದ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ನಟ ದರ್ಶನ್ ಅಭಿಮಾನಿಗಳಲ್ಲಿ ವಿನಂತಿ ಮಾಡಿದ್ದಾರೆ.

    ಕಳೆದ 5 ದಿನಗಳಿಂದ ಬಂಡೀಪುರ ಅಭಯಾರಣ್ಯದಲ್ಲಿ ಪದೇ ಪದೇ ಕಾಡ್ಗಿಚ್ಚು ಕಾಣಿಸಿಕೊಳ್ಳುತ್ತಿದ್ದು, ಅಗ್ನಿಶಾಮಕ ಇಲಾಖೆ ಸೇರಿದಂತೆ ಹಲವು ಸ್ವಯಂ ಸೇವಕರು ಈಗಾಗಲೇ ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದ್ದಾರೆ. ಸತತ ಪ್ರಯತ್ನ ನಡುವೆಯೂ ಬೆಂಕಿ ನರ್ತನ ಮುಂದುವರಿದಿದ್ದು, ಅನೇಕ ಪ್ರಾಣಿಗಳು ಬೆಂಕಿಯಲ್ಲಿ ಸಿಕ್ಕಿ ಭಸ್ಮವಾಗಿದೆ. ಈ ಕುರಿತಂತೆ ದರ್ಶನ ಅವರು ಕೂಡ ಫೋಟೋ ಟ್ವೀಟ್ ಮಾಡಿದ್ದು, ಮೊಲವೊಂದು ಸುಟ್ಟು ಕರಕಲಾಗಿರುವ ದೃಶ್ಯವನ್ನು ಕಾಣಬಹುದಾಗಿದೆ.

    ಸಫಾರಿ ಬಂದ್:
    ಇಂದು ಬೆಳಗಿನ ವೇಳೆ ನಿಯಂತ್ರಣಕ್ಕೆ ಬಂದಿದ್ದ ಬೆಂಕಿ ಮತ್ತೆ ಮತ್ತೆ ಕಾಣಿಸಿಕೊಳ್ಳುತ್ತಿದೆ. ಕಳೆದ ಐದು ದಿನಗಳಿಂದ ಬಂಡೀಪುರದ ಗೋಪಾಲಸ್ವಾಮಿ ಬೆಟ್ಟ ಮತ್ತು ಕುಂದಕೆರೆ ವಲಯದ ಸಾವಿರಾರು ಎಕರೆ ಅರಣ್ಯ ಪ್ರದೇಶ ನಾಶವಾಗಿದೆ. ಇದೀಗ ಮತ್ತೆ ಗೋಪಾಲಸ್ವಾಮಿ ಬೆಟ್ಟದ ವಲಯದಲ್ಲಿ ಬೆಂಕಿ ಕಾಣಿಸಿಕೊಂಡು ಭಾರೀ ಅನಾಹುತವನ್ನೇ ಸೃಷ್ಟಿಸಿದೆ. ಪರಿಣಾಮ ಅರಣ್ಯದಲ್ಲಿ ಒಂದು ವಾರದ ಕಾಲ ಸಫಾರಿಯನ್ನು ಸ್ಥಗಿತಗೊಳಿಸಲಾಗಿದೆ.

    ಹಸಿರಿನಿಂದ ಕಂಗೊಳಿಸುತ್ತಿದ್ದ ಬಂಡೀಪುರ ಹುಲಿರಕ್ಷಿತಾರಣ್ಯ ಇದೀಗ ಬೆಂದ ಕಾಡಾಗಿದ್ದು, ಹುಲಿ, ಕರಡಿ, ಚಿರತೆ, ಆನೆ, ಜಿಂಕೆ ಮೊದಲಾದ ವನ್ಯಪ್ರಾಣಿಗಳ ಆವಾಸ ಸ್ಥಾನವಾದ ಬಂಡೀಪುರ ಇದೀಗ ಅಕ್ಷರಶ: ಸ್ಮಶಾನದಂತೆ ಗೋಚರಿಸುತ್ತಿದೆ. ಸ್ಥಳೀಯರ ಪ್ರಕಾರ ಸುಮಾರು ಹತ್ತು ಸಾವಿರ ಎಕರೆ ಅರಣ್ಯ ಪ್ರದೇಶ ಸುಟ್ಟು ಕರಕಲಾಗಿದ್ದಾರೆ, ಅಪರೂಪದ ಸರಿಸೃಪಗಳು ಕೂಡ ಬೆಂಕಿಯ ಕೆನ್ನಾಲಿಗೆ ಭಸ್ಮವಾಗಿದೆ.

    ಕಳೆದ ಐದು ದಿನಗಳಿಂದ ನೂರಾರು ಅರಣ್ಯ ಸಿಬ್ಬಂದಿ, ಅಗ್ನಿಶಾಮಕದಳ ಹಾಗು ಸ್ವಯಂ ಸೇವಕರ ಸತತ ಕಾರ್ಯಾಚರಣೆ ಫಲವಾಗಿ ಬೆಂಕಿ ಹತೋಟಿ ಪ್ರಯತ್ನಿಸುತ್ತಿದ್ದಾರೆ. ಆದರೆ ಗಾಳಿಯ ರಭಸಕ್ಕೆ ವ್ಯಾಪಕವಾಗಿ ಹರಡುತ್ತಿದೆ.

    ಅಧಿಕ ನಷ್ಟ: ಬೆಂಕಿಯ ನರ್ತನಕ್ಕೆ ಆಪಾರ ಪ್ರಮಾಣದ ವನ್ಯ ಸಂಪತ್ತು ನಾಶವಾಗಿ ನಷ್ಟ ಅನುಭವಿಸಿದೆ. ಇದರೊಂದಿಗೆ ಸಫಾರಿಗೆ ಆಗಮಿಸುತ್ತ ಸಾವಿರಾರು ಪ್ರವಾಸಿಗರಿಗೂ ನಿರಾಸೆಯಾಗಿದ್ದು, ಸಫಾರಿ ನಿಷೇಧ ಮಾಡಿರುವುದರಿಂದ ಅರಣ್ಯ ಇಲಾಖೆಗೆ ಲಕ್ಷಾಂತರ ರೂಪಾಯಿ ಆದಾಯ ಕೂಡ ನಷ್ಟವಾಗಿದೆ.

    ಕಳೆದ ವರ್ಷ ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಯಾವುದೇ ಬೆಂಕಿ ಅವಘಡ ಸಂಭವಿಸಿರಲಿಲ್ಲ. ಆದರೆ ಈ ವರ್ಷದ ಬೇಸಿಗೆ ಆರಂಭದಲ್ಲೇ ಕಾಡ್ಗಿಚ್ಚಿಗೆ ಸಾವಿರಾರು ಎಕರೆ ಅರಣ್ಯ ಪ್ರದೇಶ ಸುಟ್ಟು ಕರಕಲಾಗಿರುವುದು ಆತಂಕ ಮೂಡಿಸಿದೆ.

     

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಎಚ್‍ಡಿ ಕೋಟೆಯಲ್ಲಿ ಕಬ್ಬಿನ ಗದ್ದೆಗೆ ನುಗ್ಗಿ ಕಾಡಾನೆಗಳಿಂದ ದಾಂಧಲೆ-ಬೆಳೆ ನಾಶ

    ಎಚ್‍ಡಿ ಕೋಟೆಯಲ್ಲಿ ಕಬ್ಬಿನ ಗದ್ದೆಗೆ ನುಗ್ಗಿ ಕಾಡಾನೆಗಳಿಂದ ದಾಂಧಲೆ-ಬೆಳೆ ನಾಶ

    ಮೈಸೂರು: ಕಾಡಿನಿಂದ ನಾಡಿಗೆ ಬಂದ ಆನೆಗಳು ಕಬ್ಬಿನ ಗದ್ದೆಗೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಬಸಾಪುರದಲ್ಲಿ ನಡೆದಿದೆ.

    5 ಆನೆಗಳ ಹಿಂಡು ಬಸಾಪುರ ಗ್ರಾಮ ಹೊಲಕ್ಕೆ ನುಗ್ಗಿ 5 ಎಕರೆ ಕಬ್ಬು, 2 ಎಕರೆ ಜೋಳ ಬೆಳೆ ನಾಶ ಮಾಡಿವೆ. ಗ್ರಾಮದ ನಾಗರಾಜು, ಸೌಮ್ಯ ಹಾಗೂ ನಾಗಮ್ಮ ಎಂಬುವವರ ಜಮೀನಿನಲ್ಲಿ ಆನೆಗಳು ಪುಂಡಾಟ ಮಾಡಿವೆ.

    ಈ ಕಾರಣ ಸ್ಥಳಕ್ಕೆ ಆಗಮಿಸಿದ ಹಿರಿಯ ಅರಣ್ಯ ಅಧಿಕಾರಿ ಪರಮೇಶ್, ಕಬ್ಬಿನ ಗದ್ದೆಯೊಳಗೆ ಸೇರಿಕೊಂಡಿರುವ ಆನೆಗಳನ್ನು ಸಂಜೆವರೆಗೂ ಓಡಿಸುವುದು ಕಷ್ಟ. ಇದೀಗ ಕಾರ್ಯಚರಣೆ ನಡೆಸಿದರೆ ಗ್ರಾಮದ ಒಳಗಡೆ ಆನೆಗಳು ಬರುವ ಭೀತಿ ಇದೆ. ಹೀಗಾಗಿ ಕಾರ್ಯಾಚರಣೆ ಆರಂಭಿಸಿಲ್ಲ ಎಂದು ಹೇಳಿದ್ದಾರೆ. ಈಗ ಸ್ಥಳದಲ್ಲೇ ಎಸಿಎಫ್ ಹಾಗೂ ಆರ್‍ಎಫ್‍ಓ ಹಾಗೂ ಸಿಬ್ಬಂದಿ ಬೀಡು ಬಿಟ್ಟಿದ್ದಾರೆ.

  • ಬಿಳಿಗಿರಿ ರಂಗನ ಬೆಟ್ಟದಲ್ಲಿ ನಿಯಂತ್ರಣಕ್ಕೆ ಬಂದ ಬೆಂಕಿ

    ಬಿಳಿಗಿರಿ ರಂಗನ ಬೆಟ್ಟದಲ್ಲಿ ನಿಯಂತ್ರಣಕ್ಕೆ ಬಂದ ಬೆಂಕಿ

    ಚಾಮರಾಜನಗರ: ಕಳೆದ ಎಂಟು ದಿನಗಳಿಂದ ಬಂಡೀಪುರ ರಾಷ್ಟ್ರೀಯ ಉದ್ಯಾನವನ, ಮೂರು ದಿನಗಳಿಂದ ಬಿಳಿಗಿರಿರಂಗನ ಬೆಟ್ಟದ ಹುಲಿ ಸಂರಕ್ಷಣಾ ಪ್ರದೇಶ ಅಕ್ಷರಶಃ ಬೆಂಕಿಯಿಂದ ಹೊತ್ತಿ ಉರಿದಿತ್ತು. ಇದೀಗ ಬೆಂಕಿಯನ್ನು ನಂದಿಸುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.

    ಬೆಂಕಿ ಜ್ವಾಲೆಯ ನಡುವೆ ಅರಣ್ಯ ಇಲಾಖೆ ಸಿಬ್ಬಂದಿಗಳು ಹಗಲಿರುಳು ನಿದ್ದೆ, ಊಟವಿಲ್ಲದೇ ನಡೆಸಿದ ಕಾರ್ಯಚರಣೆಯ ಫಲವಾಗಿ ಬೆಂಕಿ ಸಂಪೂರ್ಣ ಹತೋಟಿಗೆ ಬಂದಿದೆ. ಕಿಡಿಗೇಡಿಗಳು ಹಚ್ಚಿದ್ದ ಬೆಂಕಿಗೆ ಬಂಡೀಪುರ ರಾಷ್ಟ್ರೀಯ ಉದ್ಯಾನವನ ಹಾಗೂ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಣಾ ಪ್ರದೇಶದಲ್ಲಿ ಸಾವಿರಕ್ಕೂ ಅಧಿಕ ಎಕರೆ ಅರಣ್ಯ ಪ್ರದೇಶ ನಾಶವಾಗಿದೆ. ಅಲ್ಲದೇ ಅಲವಾರು ಪ್ರಾಣಿ ಸಂಕುಲ ಬೆಂಕಿಯ ಕಿನ್ನಾಲೆಗೆ ತುತ್ತಾಗಿವೆ.

    ಬಂಡೀಪುರದ ಕಲ್ಕರೆ, ಗುಂಡ್ರೆ, ಮದ್ದೂರು ಅರಣ್ಯ ಪ್ರದೇಶ ಹಾಗೂ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಣಾ ಪ್ರದೇಶದ ಮದಲೆಮಾವು, ಪುಣಜೂರು, ಬೆಡಗುಳಿ ಪ್ರದೇಶದಲ್ಲಿ ಬಿದ್ದಿದ್ದ ಬೆಂಕಿ ಸಂಪೂರ್ಣ ಹತೋಟಿಗೆ ಬಂದಿದೆ.