ಚಾಮರಾಜನಗರ: ಫೋಟೊ ತೆಗೆಯಲು ಹೋದವನ ಮೇಲೆ ಕಾಡಾನೆಯೊಂದು ದಾಳಿ ನಡೆಸಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ.
ರಸ್ತೆ ಬದಿಯಲ್ಲಿ ಕಾಡಾನೆ ನಿಂತಿತ್ತು. ಈ ವೇಳೆ ಕಾರಿನಿಂದ ಇಳಿದು ಪ್ರವಾಸಿಗರು ಹುಚ್ಚಾಟ ಮೆರೆದಿದ್ದರು. ಪ್ರವಾಸಿಗರು ಕಿರುಚಾಡಿ ಆನೆಯನ್ನು ಉದ್ವೇಗಗೊಳಿಸಿದರು. ಓರ್ವ ಪ್ರವಾಸಿಗ ಆನೆ ಸಮೀಪವೇ ತೆರಳಿ ಪೋಟೊ ಕ್ಲಿಕ್ಕಿಸಿಕೊಳ್ಳಲು ಯತ್ನಿಸಿದ. ಈ ವೇಳೆ ಕೆರಳಿದ ಆನೆ ಏಕಾಏಕಿ ದಾಳಿ ನಡೆಸಿತು.
ಓಡಿ ಹೋಗುತ್ತಿದ್ದ ಪ್ರವಾಸಿಗ ರಸ್ತೆ ಮೇಲೆ ಪಲ್ಟಿ ಹೊಡೆದ. ಕೊನೆಗೆ ಅಟ್ಟಾಡಿಸಿ ಆನೆ ದಾಳಿ ನಡೆಸಿದೆ. ಗಾಯಗೊಂಡ ಪ್ರವಾಸಿಗನನ್ನು ಕುಟುಂಬಸ್ಥರು ಆಸ್ಪತ್ರೆಗೆ ಸೇರಸಿದ್ದಾರೆ.
ಆನೆ ದಾಳಿಗೆ ಒಳಗಾದವನ ಬಗ್ಗೆ ಅರಣ್ಯ ಇಲಾಖೆ ಮಾಹಿತಿ ಪಡೆಯಲು ಮುಂದಾಗಿದೆ. ಆದರೆ, ಇಲ್ಲಿಯವರೆಗೂ ಮಾಹಿತಿ ಪತ್ತೆಯಾಗಿಲ್ಲ.
ಬಂಡೀಪುರ ಭಾಗದಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶ ಇಲ್ಲದಿರುವುದರಿಂದ ನಿಮಗೆ ಎಷ್ಟು ಸಮಸ್ಯೆ ಆಗ್ತಿದೆ ಎಂಬುದು ನನಗೆ ಗೊತ್ತಾಗಿದೆ. ಈ ವಿಷಯ ನನಗೆ ಬಿಡಿ.. ಈ ಸಮಸ್ಯೆ ಇತ್ಯರ್ಥ ಮಾಡುವುದೇ ನನ್ನ ಗುರಿ ಎಂದು ತಿಳಿಸಿದ್ದಾರೆ.
ನನಗೆ ನೈಟ್ ಬ್ಯಾನ್ ವಿಚಾರವೂ ಗೊತ್ತು. ಮನುಷ್ಯ-ಪ್ರಾಣಿಗಳ ನಡುವಿನ ಸಂಘರ್ಷದ ವಿಚಾರವೂ ಗೊತ್ತು. ನಿಮ್ಮೆಲ್ಲರ ಪರವಾಗಿ ನಾನು ಹೋರಾಡುತ್ತೇನೆ. ನನ್ನ ಮನೆ, ಕಚೇರಿ ನಿಮಗಾಗಿ ತೆರೆದಿರುತ್ತದೆ. ನಾನು ನಿಮ್ಮನ್ನು ನಿರಾಸೆಗೊಳಿಸಲ್ಲ ಎಂದು ಜನರಿಗೆ ಅಭಯ ನೀಡಿದ್ದಾರೆ. ಇದನ್ನೂ ಓದಿ: ಡಿ.10ರ ವರೆಗೆ ಸಂಭಾಲ್ಗೆ ಹೊರಗಿನವರ ಪ್ರವೇಶ ನಿಷೇಧ; ಎಸ್ಪಿ ಮುಖಂಡರಿಗೆ ಗೃಹ ಬಂಧನ
ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಯುಡಿಎಫ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಅವರ ಪರ ಪ್ರಚಾರದ ರ್ಯಾಲಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ರಾತ್ರಿ ಪ್ರಯಾಣದ ನಿರ್ಬಂಧವನ್ನು ತೆಗೆದುಹಾಕಲು ಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದರು.
ಪ್ರಿಯಾಂಕಾ ಗಾಂಧಿ ಅವರು ಎರಡು ದಿನಗಳ ಹಿಂದೆ ತಮ್ಮನ್ನು ಕರೆದಿದ್ದರು. ರಾಷ್ಟ್ರೀಯ ಹೆದ್ದಾರಿ 766 ರಲ್ಲಿ ರಾತ್ರಿ ಸಂಚಾರ ನಿಷೇಧ ಹೇರಿರುವ ಬಗ್ಗೆ ಚರ್ಚೆ ಮಾಡಲು ಕರ್ನಾಟಕಕಕ್ಕೆ ಬರುವುದಾಗಿ ಹೇಳಿದ್ದರೆಂದು ಡಿಕೆಶಿ ಆಗ ತಿಳಿಸಿದ್ದರು.
ಏನಿದು ನೈಟ್ ಬ್ಯಾನ್?
2009ರಿಂದ ಬಂಡೀಪುರದಲ್ಲಿ ಊಟಿ ಕಡೆಗೆ ರಾಷ್ಟ್ರೀಯ ಹೆದ್ದಾರಿ 67 ಹಾಗೂ ಕೇರಳದ ಸುಲ್ತಾನ್ ಬತ್ತೇರಿ ಕಡೆಗೆ ರಾಷ್ಟ್ರೀಯ ಹೆದ್ದಾರಿ 766ರಲ್ಲಿ ರಾತ್ರಿ ವೇಳೆ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ವನ್ಯಜೀವಿ ರಕ್ಷಣೆ ಮತ್ತು ಮಾನವ-ವನ್ಯಜೀವಿ ಸಂಘರ್ಷ ತಡೆಗಟ್ಟುವ ಉದ್ದೇಶದಿಂದ ರಾಜ್ಯ ಸರ್ಕಾರ 2009 ರಲ್ಲಿ ಎರಡೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಾತ್ರಿ 9 ರಿಂದ ಬೆಳಗ್ಗೆ 6 ಗಂಟೆ ವರೆಗೆ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿತ್ತು. ಇದಕ್ಕೆ ಕೇರಳದಿಂದ ಭಾರಿ ವಿರೋಧ ವ್ಯಕ್ತವಾಗಿತ್ತು. ಆದರೆ, ಕರ್ನಾಟಕ ತನ್ನ ನಿಲುವನ್ನು ಸಡಿಲಿಸಿರಲಿಲ್ಲ.
ಚಾಮರಾಜನಗರ: ಇತ್ತೀಚೆಗೆ ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳಲ್ಲಿ (South States) ಆನೆ-ಮಾನವ ಸಂಘರ್ಷದ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ವೈಜ್ಞಾಕವಾಗಿ ಪರಿಹಾರೋಪಾಯಗಳನ್ನು ರೂಪಿಸಲು ಕರ್ನಾಟಕ, ಕೇರಳ, ತಮಿಳುನಾಡು ಹಾಗೂ ಆಂಧ್ರ ಪ್ರದೇಶದ ಗಡಿ ಅರಣ್ಯ ಪ್ರದೇಶಗಳಲ್ಲಿ (Forest) ಏಕಕಾಲದಲ್ಲಿ 3 ದಿನಗಳ ಕಾಲ ಆನೆ ಗಣತಿ ನಡೆಸಲು ಅರಣ್ಯ ಇಲಾಖೆ (Forest Department) ಮುಂದಾಗಿದೆ.
ಹೌದು. ನೀಲಗಿರಿ ಶ್ರೇಣಿಯ ಸಂರಕ್ಷಿತ ಪ್ರದೇಶಗಳಲ್ಲಿ ಇತ್ತೀಚಿನ ವರ್ಷಗಳಲ್ಲಿ ನಿರಂತರವಾಗಿ ಮಾನವ ಆನೆ ಸಂಘರ್ಷ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಮಾನವ ಸಂಘರ್ಷ ತಡೆಗಾಗಿ ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯಗಳ ಅರಣ್ಯ ಇಲಾಖೆಗಳು ಅಂತರರಾಜ್ಯ ಸಮನ್ವಯ ಸಮಿತಿ ರಚಿಸಿಕೊಂಡಿವೆ. ಸೂಕ್ತ ಯೋಜನೆ ರೂಪಿಸಲು ಹಾಗೂ ವೈಜ್ಞಾನಿಕ ಪರಿಹಾರೋಪಾಯ ಕಂಡುಕೊಳ್ಳಲು ಮುಂದಾಗಿವೆ. ಹಾಗಾಗಿ ಕರ್ನಾಟಕ, ಕೇರಳ ಮತ್ತು ತಮಿಳುನಾಡು ಜೊತೆಗೆ ಆಂಧ್ರಪ್ರದೇಶ ಗಡಿ ಭಾಗಗಳಲ್ಲಿನ ಆನೆಗಳ ಸಂಖ್ಯೆ ಪತ್ತೆ ಮಾಡುವ (Elephant Census) ಕಾರ್ಯಕ್ಕೆ ಅರಣ್ಯ ಇಲಾಖೆ ಮುಂದಾಗಿದೆ.
ಪ್ರಮುಖವಾಗಿ ರಾಜ್ಯದ ಬಂಡೀಪುರ, ನಾಗರಹೊಳೆ, ಕಾವೇರಿ ವನ್ಯಧಾಮ, ಮಲೆಮಹದೇಶ್ವರ ವನ್ಯಧಾಮದಲ್ಲಿ ಆನೆ ಗಣತಿ ನಡೆಯಲಿದೆ. ಅಲ್ಲದೇ, ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಪ್ರದೇಶ, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ, ಮಡಿಕೇರಿ ವನ್ಯಜೀವಿಧಾಮ ಹಾಗೂ ವಿರಾಜಪೇಟೆ ವಿಭಾಗ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಆನೆಗಣತಿ ನಡೆಸಲಾಗುತ್ತದೆ. ಜೊತೆಗೆ ನೆರೆಯ ರಾಜ್ಯಗಳಾದ ಕೇರಳ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಸಂಯೋಜಿತ ಆನೆಗಳ ಸಂಖ್ಯೆ ಪತ್ತೆಗೆ ಗಣತಿ ನಡೆಸಲಾಗುತ್ತದೆ.
ಆನೆ ಗಣತಿ ನಡೆಸುವುದು ಹೇಗೆ?
ಆನೆ ಗಣತಿಗೆ ವಿವಿಧ ವಿಧಾನಗಳನ್ನು ಅನುಸರಿಲಾಗುತ್ತದೆ. ಆನೆಯ ಲದ್ದಿಯ ಮಾದರಿ ಸಂಗ್ರಹ ಮಾಡೋದು. ಅರಣ್ಯ ಪ್ರದೇಶವನ್ನು ಬ್ಲಾಕ್ಗಳನ್ನಾಗಿ ವಿಂಗಡಿಸಿ ಸಿಬ್ಬಂದಿ ನಿಯೋಜಿಸಿ ಗಣತಿ ಮಾಡೋದು. ಗುಂಪಿನಲ್ಲಿ ಕಾಣುವ ಆನೆಗಳ ಛಾಯಾಚಿತ್ರ ತೆಗೆದು ಆನೆಗಣತಿ ಮಾಡೋದು ಹೀಗೆ ನಾನಾ ಮಾರ್ಗಗಳಲ್ಲಿ ಆನೆ ಗಣತಿ ನಡೆಸಲಾಗುತ್ತದೆ.
ಆನೆ ಗಣತಿ ಕಾರ್ಯದಲ್ಲಿ ಈ ಬಾರಿ ಸ್ವಯಂ ಸೇವಕರಿಗೆ ಅವಕಾಶ ಇಲ್ಲವಾಗಿದ್ದು, ಅರಣ್ಯ ಸಿಬ್ಬಂದಿಗೆ ಮಾತ್ರ ಗಣತಿ ಕಾರ್ಯದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಆನೆಗಳ ಅಂಕಿ-ಅಂಶಗಳ ಪತ್ತೆ ಜೊತೆಗೆ ಆನೆ ಕಾರಿಡಾರ್ಗಳನ್ನು ಪುನರ್ ಸ್ಥಾಪಿಸಬೇಕು ಎಂಬುದು ಪರಿಸರವಾದಿಗಳ ಆಗ್ರಹವಾಗಿದೆ.
ಚಾಮರಾಜನಗರ: ಹುಲಿ ಸಂರಕ್ಷಿತಾರಣ್ಯ ಬಂಡೀಪುರ (Bandipur Tiger Reserve) ಈಗ ರಾಜ್ಯದಲ್ಲೇ ಅತಿಹೆಚ್ಚು ಆನೆಗಳನ್ನು (Elephants) ಹೊಂದಿದ ಅರಣ್ಯ ಪ್ರದೇಶವಾಗಿಯೂ ಗುರುತಿಸಿಕೊಂಡಿದೆ.
ಚಾಮರಾಜನಗರ (Chamarajanagar) ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅರಣ್ಯ ವ್ಯಾಪ್ತಿಯಲ್ಲಿ 1,116 ಆನೆಗಳು ಪತ್ತೆಯಾಗಿದ್ದು, ರಾಜ್ಯದಲ್ಲೇ ನಂ.1 ಅರಣ್ಯ ಪ್ರದೇಶವಾಗಿದೆ. ಜೊತೆಗೆ ವನ್ಯಪ್ರಿಯರ ಹಾಟ್ಸ್ಪಾಟ್ ಆಗಿಯೂ ಬಂಡೀಪುರ ಗುರುತಿಸಿಕೊಂಡಿದೆ ಎಂದು ಬಂಡೀಪುರ ಮುಖ್ಯ ಅರಣ್ಯಾಧಿಕಾರಿ ರಮೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬಿಜೆಪಿ ವಿರುದ್ಧದ 40% ಆರೋಪ ಸತ್ಯ, ಡಿಕೆಶಿ ವಿರುದ್ಧ 15% ಕಮಿಷನ್ ಆರೋಪ ಸುಳ್ಳು: ರಾಮಲಿಂಗಾ ರೆಡ್ಡಿ
ಬಂಡೀಪುರ ನಂ.1:
ರಾಜ್ಯದಲ್ಲಿ ಒಟ್ಟು 23 ಅರಣ್ಯ ಪ್ರದೇಶಗಳಿವೆ. ಈ ಪೈಕಿ ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ 1,116 ಆನೆಗಳಿದ್ದು, ರಾಜ್ಯದಲ್ಲೇ ಅತಿಹೆಚ್ಚು ಆನೆಗಳನ್ನು ಹೊಂದಿರುವ ಅರಣ್ಯವಾಗಿದೆ. ನಾಗರಹೊಳೆ ಅರಣ್ಯ (Nagarahole Forest) ವ್ಯಾಪ್ತಿಯಲ್ಲಿ 831, ಯಲ್ಲಾಪುರ, ಹಳಿಯಾಳ, ಕುದುರೆಮುಖ ಮತ್ತು ಭದ್ರಾವತಿ ಅರಣ್ಯದಲ್ಲಿ ಅತಿ ಕಡಿಮೆ ಆನೆಗಳಿವೆ. ಯಲ್ಲಾಪುರದಲ್ಲಿ 2, ಹಳಿಯಾಳದಲ್ಲಿ 3, ಕುದುರೆಮುಖದಲ್ಲಿ 5 ಮತ್ತು ಭದ್ರಾವತಿಯಲ್ಲಿ 8 ಆನೆಗಳಿವೆ. ಇದರೊಂದಿಗೆ ಮಲೆ ಮಹದೇಶ್ವರ ವನ್ಯಧಾಮದಲ್ಲಿ 706, ಬಿಳಿಗಿರಿ ರಂಗನಬೆಟ್ಟ ಹುಲಿ ಸಂರಕ್ಷಿತಾರಣ್ಯದಲ್ಲಿ 619 ಆನೆಗಳು ಪತ್ತೆಯಾಗಿದ್ದು, ರಾಜ್ಯದಲ್ಲಿರುವ ಒಟ್ಟು 6,395 ಆನೆಗಳಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಆನೆ ಗಣತಿ ನಡೆದಿದ್ದು ಹೇಗೆ?
ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯಗಳ ಮುಂದಾಳತ್ವದೊಂದಿಗೆ 2023ರ ಮೇ 19-19ರ ವರೆಗೆ ಏಕಕಾಲದಲ್ಲಿ ಆನೆಗಳ ಗಣತಿ ನಡೆಸಲಾಯಿತು. ಅದೇ ದಿನಾಂಕದಂದು ಆಂಧ್ರ ಪ್ರದೇಶದಲ್ಲಿಯೂ ಇದೇ ರೀತಿ ಗಣತಿ ಕಾರ್ಯ ನಡೆಸಲಾಯಿತು. ಭಾರತೀಯ ವಿಜ್ಞಾನ ಸಂಸ್ಥೆಯ ತಾಂತ್ರಿಕ ನೆರವಿನೊಂದಿಗೆ ಕರ್ನಾಟಕ ಅರಣ್ಯ ಇಲಾಖೆಯು ಆನೆಗಳ ಗಣತಿ ನಡೆಸಿದೆ. ರಾಜ್ಯದ 32 ವಿಭಾಗಗಳಿಂದ 3,400ಕ್ಕೂ ಹೆಚ್ಚು ಸಿಬ್ಬಂದಿ ಆನೆಗಳ ಗಣತಿ ಕಾರ್ಯದಲ್ಲಿ ಭಾಗವಹಿಸಿದ್ದರು. ಆನೆಗಣತಿಯನ್ನು ನೇರ ಎಣಿಕೆ, ಬ್ಲಾಕ್ ಎಣಿಕೆ, ಲದ್ದಿ ಎಣಿಕೆ ಮತ್ತು ವಾಟರ್ ಹೋಲ್ ಎಣಿಕೆ ಮೂಲಕ ಕೈಗೊಳ್ಳಲಾಗಿತ್ತು.
ಪ್ರತಿ 5 ವರ್ಷಗಳಿಗೊಮ್ಮೆ ಅರಣ್ಯ ಇಲಾಖೆ ಆನೆ ಗಣತಿ ನಡೆಸಲಿದೆ. ಅದರಂತೆ ಕಳೆದ ಮೇ ತಿಂಗಳಲ್ಲಿ ಆನೆ ಗಣತಿ ನಡೆಸಲಾಗಿತ್ತು. ಗಣತಿಯನ್ವಯ ಬಂಡೀಪುರ ನಂ.1 ಆನೆಗಳ ಆವಾಸಸ್ಥಾನವಾಗಿದೆ. ಹುಲಿಗಳ ಸಂಖ್ಯೆಯಲ್ಲಿ ದೇಶದಲ್ಲೇ 2ನೇ ಸ್ಥಾನ ಪಡೆದಿರುವ ಬಂಡೀಪುರ ರಾಜ್ಯಕ್ಕೆ ನಂ.1 ಸ್ಥಾನದಲ್ಲಿದೆ.
ಚಾಮರಾಜನಗರ: ಬಂಡೀಪುರ ಹುಲಿ ಯೋಜನೆಗೆ (Bandipur Tiger Project) 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಏಪ್ರಿಲ್ 9 ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಬಂಡೀಪುರಕ್ಕೆ ಭೇಟಿ ಕೊಡಲಿದ್ದಾರೆ. ಬಂಡೀಪುರ (Bandipur Tiger Reserve) ಹೊರ ವಲಯದ ಮೇಲುಕಾಮನಹಳ್ಳಿ ಬಳಿ 3 ಹೆಲಿಪ್ಯಾಡ್ ನಿರ್ಮಾಣ ಮಾಡಲಾಗಿದ್ದು, ಮೋದಿ ಭೇಟಿಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 181 ಹಾಗೂ ಕೇರಳಕ್ಕೆ ಸಂಪರ್ಕ ಕಲ್ಪಿಸುವ NH 766 ರಲ್ಲಿ ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ. ಏಪ್ರಿಲ್ 8ರ ಸಂಜೆ 4 ಗಂಟೆಯಿಂದ ಏಪ್ರಿಲ್ 9ರ ಮಧ್ಯಾಹ್ನ 12 ಗಂಟೆವರೆಗೆ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಇದನ್ನೂ ಓದಿ: ರಾಷ್ಟ್ರ ರಾಜಕಾರಣಕ್ಕೆ ಹೋಗಲು ಯತ್ನಿಸಿ ಸೋತರು; ರಾಜ್ಯ ರಾಜಕಾರಣದಲ್ಲೇ ಗೆಲುವು ಕಂಡರು!
ಈಗಾಗಲೇ ಏಪ್ರಿಲ್ 6ರಿಂದಲೇ ಸಫಾರಿ, ರೆಸಾರ್ಟ್, ಹೋಂ ಸ್ಟೇ, ರೆಸಾರ್ಟ್ ಗಳಲ್ಲಿ ಪ್ರವಾಸಿಗರ ವಾಸ್ತವ್ಯಕ್ಕೆ ನಿಷೇಧ ಹೇರಲಾಗಿದೆ. ಎಲ್ಲಾ ರೀತಿಯ ಡ್ರೋನ್ ಹಾರಾಟಕ್ಕೂ ಕಡಿವಾಣ ಹಾಕುವಂತೆ ಜಿಲ್ಲಾಧಿಕಾರಿ ರಮೇಶ್ ಆದೇಶ ಹೊರಡಿಸಿದ್ದಾರೆ.