Tag: Bandipur

  • ಕನ್ನಡಕ್ಕೆ ಬಂದಿದೆ ಹೊಸ ಫಾಂಟ್ ಬಂಡೀಪುರ!

    ಕನ್ನಡಕ್ಕೆ ಬಂದಿದೆ ಹೊಸ ಫಾಂಟ್ ಬಂಡೀಪುರ!

    ಚಾಮರಾಜನಗರ: ಕನ್ನಡ ಅಕ್ಷರ ಶೈಲಿಗೆ ಬಂಡೀಪುರ ಹೆಸರಿನ ಹೊಸ ಫಾಂಟ್ ಸೇರ್ಪಡೆಗೊಂಡಿದೆ.

    KANNADA FLAG

    ಟಿ.ನರಸೀಪುರ ಮೂಲದ ಅನಿಮೇಷನ್ ಕೋರ್ಸ್ ಹಾಗು ಗ್ರಾಫಿಕ್ ಡಿಸೈನ್ ಶಿಕ್ಷಕ ಆರ್.ಮಂಜುನಾಥ್ ಬಂಡೀಪುರ ಹೆಸರಿನಲ್ಲಿ ಕನ್ನಡಕ್ಕೆ ಮತ್ತೊಂದು ಹೊಸ ಯುನಿಕೋಡ್ ಫಾಂಟ್ ವಿನ್ಯಾಸಗೊಳಿಸಿ ಬಿಡುಗಡೆ ಮಾಡಿದ್ದಾರೆ. ಇದನ್ನೂ ಓದಿ:  ಪರ್ಯಾಯ ಅಂದ್ರೆ ಏನು? ಮಧ್ವಾಚಾರ್ಯರು ಕೊಟ್ಟಿರುವ ಅಕ್ಷಯ ಪಾತ್ರೆ, ಸಟ್ಟುಗವೇ ಅಧಿಕಾರ ಹಸ್ತಾಂತರಕ್ಕೆ ಅಂಕಿತ

    ಆನೆಗಳಿಂದ ಪ್ರೇರಣೆ!
    ಮಂಜುನಾಥ್ ಅವರು ತಮ್ಮ ಅಕ್ಷರ ಟೈಪ್ ಸ್ಟುಡಿಯೋದಿಂದ ಬಂಡೀಪುರ ಹೆಸರಿನಲ್ಲಿ ಹೊಸ ಫಾಂಟ್ ಬಿಡುಗಡೆ ಮಾಡಿದ್ದು, ಬಂಡೀಪುರದ ಆನೆಗಳಿಂದ ಪ್ರೇರಣೆಗೊಂಡು ಫಾಂಟ್ ರಚಿಸಿದ್ದಾರೆ. ಫಾಂಟ್ ಚೂಪಾದ ಅಂಚುನ್ನು ಎಷ್ಟು ಬೇಕಾದರು ಹಿಗ್ಗಿಸಬಹುದು. ದಪ್ಪ ಇರುವ ಈ ಹೊಸ ಯುನಿಕೋಡ್ ಫಾಂಟ್ ಆನೆಯ ದಂತ ಹಾಗು ಆನೆಯ ಸೊಂಡಿಲನ್ನು ಬಿಂಬಿಸುತ್ತಿದೆ.

    ಕನ್ನಡ ಯುನಿಕೋಡ್ ನಲ್ಲಿ ಕೆಲವೇ ಕೆಲವು ಅಕ್ಷರ ಶೈಲಿಗಳು ಲಭ್ಯವಿದ್ದು, ಯುನಿಕೋಡ್ ಕನ್ನಡ ಫಾಂಟ್ ಕೊರತೆ ನೀಗಿಸುವ ಯತ್ನವಾಗಿ ಬಂಡೀಪುರ ಫಾಂಟ್ ಬಿಡುಗಡೆ ಮಾಡಲಾಗಿದೆ. ಕನ್ನಡದ ಜೊತೆಗೆ ಇಂಗ್ಲೀಷ್, ಲ್ಯಾಟಿನ್ ಲಿಪಿಗಳ ಸಹಾಯದಿಂದ ಬಂಡೀಪುರ ಫಾಂಟ್ ರಚನೆ ಮಾಡಲಾಗಿದೆ. ಶೀರ್ಷಿಕೆಗಳಿಗೆ ಬಳಸಲು, ದೊಡ್ಡಗಾತ್ರದಲ್ಲಿ ಬ್ಯಾನರ್ ಗಳಲ್ಲಿ ಬಳಸಲು ಉತ್ತಮ ಫಾಂಟ್ ಇದಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಕೊರೊನಾ ಸ್ಫೋಟ – 41,457 ಪಾಸಿಟಿವ್, ಬೆಂಗಳೂರಿನಲ್ಲಿ 25,595 ಕೇಸ್ ಪತ್ತೆ

     

    ಡೌನ್‍ಲೋಡ್ ಮಾಡಲು ಕ್ಲಿಕ್ ಮಾಡಿ: https://aksharatypestudio.in/fonts/bandipura/

     

  • ಸಫಾರಿಗರಿಗೆ ಒಟ್ಟಿಗೆ ದರ್ಶನ ನೀಡಿದ 3 ಚಿರತೆಗಳು: ಅಪರೂಪದ ದೃಶ್ಯ ಸೆರೆ!

    ಸಫಾರಿಗರಿಗೆ ಒಟ್ಟಿಗೆ ದರ್ಶನ ನೀಡಿದ 3 ಚಿರತೆಗಳು: ಅಪರೂಪದ ದೃಶ್ಯ ಸೆರೆ!

    ಚಾಮರಾಜನಗರ: ಚಿರತೆ ಎಂದಾಕ್ಷಣ ರಸ್ತೆ ದಾಟುವುದು, ಮರದ ಮೇಲೆ ಬೇಟೆಯಾಡಿದ ಆಹಾರವನ್ನು ತಿನ್ನುವ ದೃಶ್ಯ ಸಾಮಾನ್ಯ. ಆದರೆ ಒಟ್ಟಿಗೆ ಮೂರು ಚಿರತೆಗಳು ಕಾಣಿಸಿಕೊಂಡಿರುವ ರೋಮಾಂಚಕ ಘಟನೆಯೊಂದು ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.

    ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಸಫಾರಿ ವೇಳೆ ಈ ಘಟನೆ ನಡೆದಿದೆ. ವನ್ಯಜೀವಿ ಛಾಯಾಗ್ರಾಹಕ ಅಬ್ದುಲ್ ಶೇಜ್ ಎಂಬವರ ಕ್ಯಾಮರಾ ಕಣ್ಣಿಗೆ ಅಪರೂಪದ ದೃಶ್ಯ ಸೆರೆಯಾಗಿದೆ. 14 ಸೆಕೆಂಡ್‌ಗಳ ಈ ವೀಡಿಯೋ ಇದಾಗಿದ್ದು, ಸಫಾರಿಗರನ್ನೇ ಚಿರತೆಗಳು ದಿಟ್ಟಿಸಿ ನೋಡುತ್ತಿರುವ ದೃಶ್ಯ ಸೆರೆಯಾಗಿದೆ.

    ವೀಡಿಯೋದಲ್ಲಿ ಏನಿದೆ?: ಮರವೊಂದರ ರೆಂಬೆಯ ಮೇಲೆ 3 ಚಿರತೆಗಳು ಒಟ್ಟಿಗೆ ಕುಳಿತುಕೊಂಡಿದೆ. ಸಫಾರಿಗರನ್ನೇ ಈ 3 ಚಿರತೆಗಳು ಕೆಲವು ಸೆಕೆಂಡ್‌ಗಳ ಕಾಲ ದಿಟ್ಟಿಸಿ ನೋಡುತ್ತಿದೆ. ನಂತರದಲ್ಲಿ ಒಂದು ಚಿರತೆ ರೆಂಬೆಯಿಂದ ಕೆಳಗೆ ಇಳಿಯುತ್ತದೆ. ಮತ್ತೆರಡು ಚಿರತೆಗಳು ಆ ಚಿರತೆಯನ್ನು ನೋಡುವ ದೃಶ್ಯ ಸೆರೆಯಾಗಿದೆ. ಇದನ್ನೂ ಓದಿ: ಮಾಧುಸ್ವಾಮಿ ವಿರುದ್ಧ ಮಾತಾಡಿಲ್ಲ, ಅಧಿಕಾರಿಗಳಿಗೆ ಛೀಮಾರಿ ಹಾಕಿ ಅಂದೆ ಅಷ್ಟೇ: ಬಸವರಾಜ್

    ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸಫಾರಿಗರಿಗೆ ವನ್ಯಪ್ರಾಣಿಗಳು ಸಖತ್ ದರ್ಶನ ಕೊಡುತ್ತಿದೆ. ಹುಲಿ, ಆನೆ ಹಿಂಡುಗಳು ಕೂಡ ಪ್ರವಾಸಿಗರ ಕಣ್ಣಿಗೆ ಆಗಾಗ್ಗೆ ಕಾಣಿಸಿಕೊಳ್ಳುತ್ತಿವೆ. ಇದನ್ನೂ ಓದಿ: ಜಾರ್ಖಂಡ್‍ ಭೀಕರ ರಸ್ತೆ ಅಪಘಾತ- ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಣೆ

  • ಬಂಡೀಪುರದಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಬ್ರೇಕ್

    ಬಂಡೀಪುರದಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಬ್ರೇಕ್

    ಚಾಮರಾಜನಗರ: ಬಂಡೀಪುರದಲ್ಲಿ ಈ ಬಾರಿ ಹೊಸ ವರ್ಷದ ಸಂಭ್ರಮಾಚರಣೆಗೆ ಬ್ರೇಕ್ ಹಾಕಲಾಗಿದೆ. ಡಿಸೆಂಬರ್ 31 ಹಾಗೂ ಜನವರಿ 1 ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯವನ್ನು ನಿಷೇಧಿಸಲಾಗಿದೆ.

    ಪ್ರತಿವರ್ಷ ವರ್ಷದ ಕೊನೆ ದಿನ ಇಲ್ಲಿಗೆ ಅಸಂಖ್ಯಾತ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಾರೆ. ಆದರೆ ಈ ವರ್ಷ ಕೊರೊನಾ ಮುನ್ನೆಚ್ಚರಿಕಾ ಕ್ರಮವಾಗಿ ಅರಣ್ಯ ಇಲಾಖೆ ಪ್ರವಾಸಿಗರ ವಾಸ್ತವ್ಯಕ್ಕೆ ನಿರ್ಬಂಧ ಹೇರಿದೆ. ಪ್ರವಾಸಿಗರು ಹೊಸ ವರ್ಷಾರಣೆಗೆ ಕೆಲದಿನಗಳ ಮುಂಚೆಯೇ ಇಲ್ಲಿನ ಅರಣ್ಯ ಇಲಾಖೆಯ ಕಾಟೇಜ್‍ಗಳು ಹಾಗೂ ಡಾರ್ಮೆಟರಿಗಳನ್ನು ಆನ್‍ಲೈನ್ ಮೂಲಕ ಬುಕ್ ಮಾಡುತ್ತಿದ್ದರು. ಆದರೆ ಈ ಬಾರಿ ಡಿಸೆಂಬರ್ 31 ಹಾಗು ಜನವರಿ 1ಕ್ಕೆ ಆನ್ ಲೈನ್ ಮೂಲಕ ಬುಕ್ ಮಾಡುವುದನ್ನು ಬ್ಲಾಕ್ ಮಾಡಲಾಗಿದೆ. ಇದನ್ನೂ ಓದಿ: ರಕ್ಷಿಸಬೇಕಾದ ಆರಕ್ಷಕನೇ ಕಳ್ಳನಾದ – ಬೈಕ್ ಕಳ್ಳತನ ಮಾಡಿಸ್ತಿದ್ದ ಕಾನ್‍ಸ್ಟೇಬಲ್ ಅರೆಸ್ಟ್

    ಎಂದಿನಂತೆ ಬೆಳಗ್ಗೆ ಹಾಗೂ ಸಂಜೆ ಸಫಾರಿ ಇರಲಿದೆ. ಪ್ರವಾಸಿಗರು ಇಲ್ಲಿಗೆ ಬಂದು ಪ್ರಾಣಿಗಳನ್ನು ಕಣ್ತುಂಬಿಕೊಳ್ಳಬಹುದಾಗಿದೆ. ಆದರೆ ವಾಸ್ತವ್ಯ ಮಾಡುವಂತಿಲ್ಲ ಎಂದು ಬಂಡೀಪುರ ಹುಲಿ ಯೋಜನೆ ನಿರ್ದೇಶಕ ನಟೇಶ್ ತಿಳಿಸಿದ್ದಾರೆ. ಇದನ್ನೂ ಓದಿ: ಮೀಟರ್ ಬಡ್ಡಿ ದಂಧೆಗೆ ಮಹಿಳೆ ಬಲಿ – ಸೆಲ್ಫಿ ವೀಡಿಯೋ ಮಾಡಿ ಆತ್ಮಹತ್ಯೆ

  • ಹೆದ್ದಾರಿ ಅಗಲೀಕರಣಕ್ಕೆ ಪ್ರಸ್ತಾಪ – ಬಂಡೀಪುರಕ್ಕೆ ಎದುರಾಗಲಿದ್ಯಾ ಕಂಟಕ?

    ಹೆದ್ದಾರಿ ಅಗಲೀಕರಣಕ್ಕೆ ಪ್ರಸ್ತಾಪ – ಬಂಡೀಪುರಕ್ಕೆ ಎದುರಾಗಲಿದ್ಯಾ ಕಂಟಕ?

    ಚಾಮರಾಜನಗರ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವಿಶ್ವ ವಿಖ್ಯಾತ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಸ್ತೆ ಅಗಲೀಕರಣಕ್ಕೆ ಮುಂದಾಗಿದೆ. ಆದರೆ ರಸ್ತೆಯ ಅಗಲೀಕರಣಕ್ಕೆ ಲಕ್ಷಾಂತರ ಮರಗಳನ್ನು ಕಡಿಯುವ ಸಾಧ್ಯತೆಗಳಿರುವುದರಿಂದ ಹುಲಿ, ಆನೆ ಸೇರಿದಂತೆ ವನ್ಯಜೀವಿಗಳ ಆವಾಸ ಸ್ಥಾನವಾಗಿರುವ ಬಂಡೀಪುರಕ್ಕೆ ಕಂಟಕ ಎದುರಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

    ಗುಂಡ್ಲುಪೇಟೆಯಿಂದ ತಮಿಳುನಾಡಿನ ಊಟಿಗೆ ಸಂಪರ್ಕ ಕಲ್ಪಿಸುವ ಬಂಡೀಪುರದ ಅರಣ್ಯದ ನಡುವೆ ಹಾದು ಹೋಗುವ ಹೆದ್ದಾರಿ ಸಂಖ್ಯೆ 181 ರಲ್ಲಿ ಮೇಲು ಕಾಮನಹಳ್ಳಿಯಿಂದ ಕೆಕ್ಕನಹಳ್ಳದವರೆಗಿನ 13.2 ಕಿ.ಮೀ ರಸ್ತೆಯನ್ನು ಅಗಲೀಕರಣ ಮಾಡುವ ಪ್ರಸ್ತಾಪವನ್ನು ಅರಣ್ಯ ಇಲಾಖೆಗೆ ಸಲ್ಲಿಸಿದೆ. ಇದಕ್ಕಾಗಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸುಮಾರು 24 ಎಕರೆಗಳಷ್ಟು ಜಾಗವನ್ನು ನೀಡಬೇಕೆಂದು ಕೇಂದ್ರ ಪರಿಸರ ಮತ್ತು ಅರಣ್ಯ ಖಾತೆಯ ಅನುಮತಿ ಕೋರಿದೆ. ಇದನ್ನೂ ಓದಿ: ನಂದಿಬೆಟ್ಟಕ್ಕೆ ಶಾಶ್ವತ ರಸ್ತೆ ನಿರ್ಮಾಣ ಆಗೋವರೆಗೂ ಪ್ರವಾಸಿಗರಿಗೆ ನಿಷೇಧ 

    ಈಗಾಗಲೇ 2 ಹೆದ್ದಾರಿಗಳು ಬಂಡೀಪುರ ಹುಲಿ ಸಂರಕ್ಷಣಾಧಾಮದ ಮೂಲಕ ಹಾದು ಹಾದುಹೋಗುತ್ತಿವೆ. ಈ ಹೆದ್ದಾರಿಗಳಿಂದ ಈಗಾಗಲೇ ವನ್ಯಜೀವಿಗಳ ಸ್ವಚ್ಛಂದ ಓಡಾಟದ ಮೇಲೆ ತೀವ್ರ ಪರಿಣಾಮ ಬೀರಿದೆ. ಅತಿಯಾದ ವಾಹನಗಳ ಓಡಾಟದಿಂದ ಶಬ್ದ ಮಾಲಿನ್ಯ, ಘನ ತ್ಯಾಜ್ಯ ಇತ್ಯಾದಿಗಳಿಂದಾಗುವ ಮಾಲಿನ್ಯ, ವನ್ಯಜೀವಿಗಳ ವರ್ತನೆಗಳ ಮೇಲೆ ಪ್ರಭಾವ ಮತ್ತು ಇತರ ಹಲವಾರು ತೊಂದರೆಗಳನ್ನು ವನ್ಯಜೀವಿಗಳು ಈ ಹೆದ್ದಾರಿಗಳಿಂದ ಎದುರಿಸುತ್ತಿವೆ. ಇದನ್ನೂ ಓದಿ: ಸೆಕ್ಸ್ ವೇಳೆ ಕಾಂಡೋಮ್ ಬದಲು ಗಮ್ ಹಚ್ಚಿ ಪ್ರಾಣವೇ ಕಳ್ಕೊಂಡ! 

    ಅರಣ್ಯದಲ್ಲಿ ಹುಲಿಯೂ ಸೇರಿದಂತೆ ಆನೆ, ಚಿರತೆ, ಜಿಂಕೆ, ಕಡವೆ ಹಾಗೂ ಇನ್ನಿತರೇ ಪ್ರಾಣಿಗಳು ಅತೀ ವೇಗವಾಗಿ ಸಂಚರಿಸುವ ವಾಹನಗಳಿಗೆ ಸಿಲುಕಿ ಮೃತಪಟ್ಟಿವೆ. ಲೆಕ್ಕವಿರದಷ್ಟು ಉಭಯ ಚರಜೀವಿಗಳು, ಸರೀಸೃಪಗಳು, ಹಕ್ಕಿಗಳು ತಮ್ಮ ಜೀವ ಕಳೆದುಕೊಂಡಿವೆ. ಈಗ ರಸ್ತೆ ಅಗಲೀಕರಣ ಮಾಡಲು ಲಕ್ಷಾಂತರ ಮರಗಳನ್ನು ಕಡಿಯಬೇಕಾಗುತ್ತದೆ. ವನ್ಯ ಪ್ರಾಣಿಗಳ ಆವಾಸಸ್ಥನಕ್ಕೆ ಧಕ್ಕೆಯಾಗಲಿದೆ ಎಂದು ವನ್ಯಜೀವಿ ತಜ್ಞರು ಪರಿಸರವಾದಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

    ಅರಣ್ಯ ಪರಿಸರಕ್ಕೆ ಮಾರಕವಾಗಿರುವ ಹೆದ್ದಾರಿ ಅಗಲೀಕರಣಕ್ಕೆ ಅವಕಾಶ ನೀಡಬಾರದು. ಅವಕಾಶ ನೀಡಿದಲ್ಲಿ ಸೂಕ್ಷ್ಮ ಪರಿಸರ ವಲಯದ ನೀತಿ ನಿಯಮಗಳ ಉಲ್ಲಂಘನೆಯಾಗಲಿದೆ ಎಂಬುದು ಪರಿಸರವಾದಿಗಳ ಅಭಿಮತವಾಗಿದೆ.

  • ಬಂಡೀಪುರದಲ್ಲಿ ಸರಹದ್ದಿಗಾಗಿ ವ್ಯಾಘ್ರಗಳ ನಡುವೆ ಕಾದಾಟ- ಗಂಡು ಹುಲಿ ಸಾವು

    ಬಂಡೀಪುರದಲ್ಲಿ ಸರಹದ್ದಿಗಾಗಿ ವ್ಯಾಘ್ರಗಳ ನಡುವೆ ಕಾದಾಟ- ಗಂಡು ಹುಲಿ ಸಾವು

    ಚಾಮರಾಜನಗರ: ಎರಡು ಹುಲಿಗಳ ನಡುವೆ ನಡೆದ ಕಾದಾಟದಲ್ಲಿ ಗಂಡು ಹುಲಿಯೊಂದು ಸಾವನ್ನಪ್ಪಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯ ವ್ಯಾಪ್ತಿಯಲ್ಲಿ ನಡೆದಿದೆ.

    ಸರಹದ್ದಿನ ಕದನದಲ್ಲಿ ಹುಲಿಯೊಂದು ಮೃತಪಟ್ಟಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಎಲಚೆಟ್ಟಿ ಗಸ್ತಿನ ಆಲದಮರದ ಹಳ್ಳದಲ್ಲಿ ನಡೆದಿದೆ. ಅಂದಾಜು 4 ರಿಂದ 5 ವರ್ಷದ ಗಂಡು ಹುಲಿ ಮೃತಪಟ್ಟಿದ್ದು, ಹುಲಿಗಳ ನಡುವಿನ ಸರಹದ್ದಿನ ಕಾದಾಟದಲ್ಲಿ ಸತ್ತಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ. ಮೃತ ಹುಲಿ ಮೈಮೇಲೆ ತೀವ್ರತರ ಗಾಯಗಳಾಗಿದ್ದು, ಉಗುರು, ಹಲ್ಲುಗಳು, ಅಂಗಾಂಗಗಳು ಸುರಕ್ಷಿತವಾಗಿವೆ.

    ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಎನ್‍ಟಿಸಿಎ ಪ್ರತಿನಿಧಿ, ಪಶು ವೈದ್ಯರ ಸಮ್ಮುಖದಲ್ಲಿ ಹುಲಿಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಸುಡಲಾಗಿದೆ.

  • ಕಾಡುಕೋಣದ ಜೊತೆ ಕಾದಾಡಿ ಪ್ರಾಣ ಬಿಟ್ಟ ಹುಲಿ

    ಕಾಡುಕೋಣದ ಜೊತೆ ಕಾದಾಡಿ ಪ್ರಾಣ ಬಿಟ್ಟ ಹುಲಿ

    ಚಾಮರಾಜನಗರ: ಕಾಡುಕೋಣದ ಜೊತೆ ಕಾದಾಡಿ ಹುಲಿಯೊಂದು ಮೃತಪಟ್ಟಿರುವ ಘಟನೆ ಹುಲಿ ಸಂರಕ್ಷಿತ ಪ್ರದೇಶವಾದ ಬಂಡಿಪುರ ವಲಯದ ಒಳಕಲ್ಲಾರೆ ಗಸ್ತಿನಲ್ಲಿ ನಡೆದಿದೆ.

    ಮೃತ ಹೆಣ್ಣು ಹುಲಿಯು 9-10 ವರ್ಷ ಎಂದು ಅಂದಾಜಿಸಲಾಗಿದ್ದು, ಮೇಲ್ನೋಟಕ್ಕೆ ಕಾಡುಕೋಣದ ಜೊತೆ ಕಾದಾಟದಿಂದ ಮೃತಪಟ್ಟಿರುವುದು ಕಂಡು ಬಂದಿತ್ತು. ಮರಣೋತ್ತರ ಪರೀಕ್ಷೆಯಲ್ಲಿ ಕಾದಾಟದಿಂದ ಗಾಯಗೊಂಡಿರುವುದು ಖಚಿತವಾಗಿದೆ. ಇದನ್ನೂ ಓದಿ: ಏನ್ ಹೇಳ್ಬೇಕೋ ಅದನ್ನು ಕರ್ನಾಟಕದಲ್ಲೇ ಹೇಳ್ತೀನಿ: ಅರುಣ್ ಸಿಂಗ್

    ಹುಲಿಯ ಉಗುರು, ಹಲ್ಲು, ಇತರ ದೇಹದ ಅಂಗಾಂಗಳು ಸುರಕ್ಷಿತವಾಗಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ. ಪಶು ವೈದ್ಯ ಡಾ.ವಾಸೀಂ ಮಿರ್ಜಾ ಶವ ಪರೀಕ್ಷೆ ನಡೆಸಿದ ಬಳಿಕ ಮಾರ್ಗಸೂಚಿಯಂತೆ ಹುಲಿಯ ದೇಹವನ್ನು ಸುಡಲಾಗಿದೆ. ಐದು ದಿನಗಳ ಹಿಂದೆಯಷ್ಟೇ ಮದ್ದೂರು ವಲಯದಲ್ಲಿ ಹುಲಿಯ ಕಳೇಬರವೊಂದು ಪತ್ತೆಯಾಗಿತ್ತು. ಇದನ್ನೂ ಓದಿ: ಯಡಿಯೂರಪ್ಪ ಸಮರ್ಥ ನಾಯಕ, ಅವರನ್ನೇ ಮುಂದುವರಿಸಿ – ವೀರಶೈವ ಲಿಂಗಾಯತ ಯುವ ವೇದಿಕೆ

  • ಬಂಡೀಪುರದಲ್ಲಿ ಪ್ರಾಣಿಗಳಿಗೆ ನೀರಿನ ದೊಡ್ಡ ಅಭಾವವಿದೆ: ಲಿಂಬಾವಳಿ

    ಬಂಡೀಪುರದಲ್ಲಿ ಪ್ರಾಣಿಗಳಿಗೆ ನೀರಿನ ದೊಡ್ಡ ಅಭಾವವಿದೆ: ಲಿಂಬಾವಳಿ

    ಚಾಮರಾಜನಗರ: ಬಂಡೀಪುರದಲ್ಲಿ ಪ್ರಾಣಿಗಳಿಗೆ ನೀರಿನ ದೊಡ್ಡ ಅಭಾವವಿದೆ. ಈ ಬಗ್ಗೆ ಅಧಿಕಾರಿಗಳ ಜೊತೆ ಸಭೆ ನಡೆಸಿ ತೊಂದರೆಯಾಗದಂತೆ ಕ್ರಮವಹಿಸಲು ಸೂಚಿಸಲಾಗಿದೆ ಎಂದು ಅರಣ್ಯ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು.

    ಗಡಿ ಜಿಲ್ಲೆಯ ಬಂಡೀಪುರಕ್ಕೆ ಭೇಟಿ ನೀಡಿ, ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕೈಗೊಳ್ಳಬೇಕಾದ ಕೆಲಸದ ಬಗ್ಗೆ ಮಾತುಕತೆ ನಡೆಸಿದರು. ಈ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬೇಸಿಗೆ ಆರಂಭವಾಗಿದೆ, ಈ ಹಿನ್ನಲೆಯಲ್ಲಿ ಕಾಡಿನಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇನೆ. ಬೇಸಿಗೆ ಇರುವುದರಿಂದ ಪ್ರಾಣಿಗಳ ಸಮಸ್ಯೆ ಕೂಡ ಆಲಿಸಲಾಗಿದೆ. ಸೋಲಾರ್ ಪಂಪ್ ಗಳ ಮೂಲಕ ಕೆಲವೆಡೆ ನೀರು ತುಂಬಿಸಲಾಗುತ್ತಿದೆ. ಮುಂದಿನ ಬೇಸಿಗೆ ವೇಳೆಗೆ ಪ್ರಾಣಿಗಳಿಗೆ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಬೇಕಿದೆ. ಬಂಡೀಪುರದಲ್ಲಿ ಪ್ರಾಣಿಗಳಿಗೆ ನೀರಿನ ದೊಡ್ಡ ಅಭಾವವಿದೆ. ಈ ಬಗ್ಗೆ ಅಧಿಕಾರಿಗಳ ಸಭೆ ನಡೆಸಿ ತೊಂದರೆಯಾಗದಂತೆ ಕ್ರಮವಹಿಸುವಂತೆ ತಿಳಿಸಿದರು.

    ಇದೇ ವೇಳೆ ಹುಲಿಸಂರಕ್ಷಿತಾರಣ್ಯಕ್ಕೆ ಭೇಟಿ ನೀಡಿ, ಅಧಿಕಾರಿಗಳೊಟ್ಟಿಗೆ ಬಂಡೀಪುರ ಫಾರೆಸ್ಟ್ ರೌಂಡ್ ಹಾಕಿದ್ದರು. ಈ ವೇಳೆ ಎರಡು ಕಡೆ ಹುಲಿ ಪ್ರತ್ಯಕ್ಷವಾಗಿವೆ. ತೀರಾ ಅಪರೂಪಕ್ಕೆ ದರ್ಶನ ಕೊಡುವ ಹುಲಿಗಳು ಸಚಿವರಿಗೆ ಎರಡು ಕಡೆ ದರ್ಶನ ಕೊಟ್ಟಿರೋದು ವಿಶೇಷ. ಬಂಡೀಪುರದ ಕಡುಬನಕಟ್ಟೆ, ಗಾರೆಪಾಲದ ಬಳಿ ಹುಲಿ ದರ್ಶನವಾಗಿದೆ. ಕಡುಬನಕಟ್ಟೆ ಬಳಿ ನೀರಿನಲ್ಲಿ ಕುಳಿತಿದ್ದ ಹುಲಿ ದರ್ಶನವಾಗಿದೆ. ಇದರ ಜೊತೆಗೆ ಆನೆಗಳ ಹಿಂಡಿನ ದರ್ಶನ ಸಹ ಆಗಿದೆ.

  • ಬಂಡೀಪುರ ಸಫಾರಿ, ಕಾಟೇಜ್ ದರ ಏರಿಕೆ- ಪ್ರವಾಸಿಗರಿಗೆ ಬೆಲೆ ಏರಿಕೆ ಶಾಕ್

    ಬಂಡೀಪುರ ಸಫಾರಿ, ಕಾಟೇಜ್ ದರ ಏರಿಕೆ- ಪ್ರವಾಸಿಗರಿಗೆ ಬೆಲೆ ಏರಿಕೆ ಶಾಕ್

    ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತಾರಣ್ಯದ ಸಫಾರಿ, ಕಾಟೇಜ್ ದರ ಏರಿಸಲಾಗಿದೆ. ಸಫಾರಿ ದರ ಡಬಲ್ ಮಾಡಿದ್ದು ವನ್ಯಪ್ರಿಯರು, ಪ್ರವಾಸಿಗರಿಂದ ಇದಕ್ಕೆ ವಿರೋಧ ವ್ಯಕ್ತವಾಗಿದೆ.

    ಹುಲಿಗಳ ಸಂಖ್ಯೆಯಲ್ಲಿ ರಾಜ್ಯದಲ್ಲೆ ಎರಡನೇ ಸ್ಥಾನದಲ್ಲಿರುವ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತಾರಣ್ಯ. ಕಾಡು ಪ್ರಾಣಿಗಳ ವೀಕ್ಷಣೆಗೆ ಸಫಾರಿ ಮಾಡಲೆಂದೇ ದೇಶ-ವಿದೇಶಗಳಿಂದ ನಿತ್ಯ ನೂರಾರು ಮಂದಿ ಪ್ರವಾಸಿಗರು ಬರುತ್ತಾರೆ. ಕಳೆದ ನಾಲ್ಕು ವರ್ಷಗಳಿಂದ ಸಫಾರಿ, ಕೊಠಡಿ ಬಾಡಿಗೆ, ಪಾರ್ಕಿಂಗ್ ಶುಲ್ಕ ಹೀಗೆ ಯಾವುದೇ ರೀತಿಯ ದರಗಳಲ್ಲೂ ಬದಲಾವಣೆ ಮಾಡಿರಲಿಲ್ಲ. ಇದೀಗ ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿಗಳು ದರ ಹೆಚ್ಚಳ ಮಾಡುವ ಬಗ್ಗೆ ಕಳೆದ ಜನವರಿ 29 ರಂದು ಬರೆದಿರುವ ಪತ್ರವನ್ನು ಉಲ್ಲೇಖಿಸಿ ಪ್ರಧಾನ ಮುಖ್ಯ ಅರಣ್ಯಸಂರಕ್ಷಣಾಧಿಕಾರಿ ಅವರು ಸಫಾರಿ ಮತ್ತಿತರ ದರಗಳನ್ನು ಏಪ್ರಿಲ್ 1 ರಿಂದ ಜಾರಿಗೆ ಬರುವಂತೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದ್ದಾರೆ.

    ಬಂಡೀಪುರದಲ್ಲಿ ಮಾರ್ಚ್ 31 ರ ತನಕ ಒಬ್ಬರಿಗೆ ಪ್ರವೇಶ ಶುಲ್ಕ 250 ರೂಪಾಯಿ ಮತ್ತು ಸಫಾರಿಗೆ 100 ರೂಪಾಯಿ ಇತ್ತು. ಆದರೆ ಏಪ್ರಿಲ್ 1 ರಿಂದ ಪ್ರವೇಶ ಶುಲ್ಕ 300 ರೂಪಾಯಿ ಹಾಗೂ ಸಫಾರಿಗೆ 300 ರೂಪಾಯಿ ದರ ನಿಗದಿಪಡಿಸಲಾಗಿದೆ. ಹಾಗಾಗಿ ಪ್ರವಾಸಿಗರು ಇನ್ನು ಮುಂದೆ 600 ರೂಪಾಯಿ ಕೊಟ್ಟು ಸಫಾರಿ ಹೋಗಬೇಕಾಗಿದೆ. ಹಾಗೆಯೇ ಮಕ್ಕಳು ವಿದ್ಯಾರ್ಥಿಗಳಿಗೆ ಪ್ರವೇಶ ಶುಲ್ಕ ಹಾಗೂ ಸಫಾರಿ ಸೇರಿದಂತೆ 300 ರೂಪಾಯಿ, ವಿದೇಶಿ ಪ್ರವಾಸಿಗರಿಗೆ 1,000 ರೂಪಾಯಿ ದರ ನಿಗದಿಪಡಿಸಲಾಗಿದೆ.

    ಸಫಾರಿ ಜಿಪ್ಸಿ ಬಾಡಿಗೆ ಭಾರತೀಯರಿಗೆ 3,500 ರೂಪಾಯಿ, ವಿದೇಶಿಯರಿಗೆ 5,000 ರೂಪಾಯಿ, 9 ಸೀಟಿನ ಕ್ಯಾಂಪರ್ ಗೆ ಭಾರತೀಯರಿಗೆ 5,000 ರೂಪಾಯಿ, ವಿದೇಶಿಯರಿಗೆ 7,000 ರೂಪಾಯಿ ನಿಗದಿಪಡಿಸಲಾಗಿದೆ.

    ಬಂಡೀಪುರ ಕ್ಯಾಂಪಸ್ ನಲ್ಲಿರುವ ಕೊಠಡಿ ಬಾಡಿಗೆ ಒಂದು ದಿನಕ್ಕೆ 2,000 ರೂಪಾಯಿ, ವಿದೇಶಿಯರಿಗೆ 4,000 ರೂಪಾಯಿ, ಗಜೇಂದ್ರ ವಿಐಪಿ ಕೊಠಡಿ(1) ಬಾಡಿಗೆ 3,000 ರೂಪಾಯಿಯಿಂದ 6000 ರೂಪಾಯಿ ಗೆ ಏರಿಗೆ ಮಾಡಲಾಗಿದೆ. ಗಜೇಂದ್ರ ವಿಐಪಿ ಕೊಠಡಿ (2)ರ ಬಾಡಿಗೆಯನ್ನು 2,500 ಹಾಗೂ ವಿದೇಶಿಯರಿಗೆ 5,000 ರೂ. ನಿಗದಿ ಮಾಡಲಾಗಿದೆ.

    ಗಜೇಂದ್ರ ವಿಐಪಿ ಕೊಠಡಿ(3)ರ ಬಾಡಿಗೆಯನ್ನು 2,000 ರೂಪಾಯಿ ವಿದೇಶಿಯರಿಗೆ 4,000 ರೂಪಾಯಿ ನಿಗದಿ ಮಾಡಲಾಗಿದೆ. 10 ಬೆಡ್ ಗಳ ಡಾರ್ಮೆಟರಿ ಬಾಡಿಗೆಯನ್ನು 2,500 ವಿದೇಶಿಯರಿಗೆ 5000 ರೂಪಾಯಿ, 20 ಬೆಡ್ ಗಳ ಡಾರ್ಮೆಟರಿ ಬಾಡಿಗೆಯನ್ನು 5000 ರೂಪಾಯಿ, ವಿದೇಶಿಯರಿಗೆ 10,000 ರೂಪಾಯಿಗೆ ಏರಿಕೆ ಮಾಡಲಾಗಿದೆ. ಇದರ ಜೊತೆಗೆ ಕ್ಯಾಮೆರಾ ಹಾಗೂ ವಾಹನಗಳ ಪಾರ್ಕಿಂಗ್ ಶುಲ್ಕವನ್ನು ಸಹ ಹೆಚ್ಚಳ ಮಾಡಲಾಗಿದೆ.

    ಒಟ್ನಲ್ಲಿ ದರ ಏರಿಕೆ ಕ್ರಮ ಸರಿಯಾದುದಲ್ಲ, ಜನಸಾಮಾನ್ಯರಿಗೆ ಕೈಗೆಟುಕವ ದರದಲ್ಲಿ ಹೆಚ್ಚಳ ಮಾಡಲಾಗಿಲ್ಲ. ಇಷ್ಟೊಂದು ದರ ಭರಿಸಲಾಗದೆ ಬಡವರು, ಮಧ್ಯಮ ವರ್ಗದವರು, ಶಾಲಾ ಮಕ್ಕಳು ಸಫಾರಿಯಿಂದ ದೂರ ಉಳಿಯುವಂತಾಗುತ್ತದೆ. ಕಾಡಿನ ಸೊಬಗನ್ನು ಸವಿಯುವುದರಿಂದ ವಂಚಿತರಾಗಬೇಕಾಗುತ್ತದೆ. ಉಳ್ಳವರಿಗೆ ಬೇಕಾದರೆ ದರ ಏರಿಕೆ ಮಾಡಲಿ, ಆದರೆ ಸ್ಥಳೀಯರಿಗೆ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಲ್ಕ ಕಡಿಮೆ ಮಾಡಬೇಕು ಎಂಬ ಒತ್ತಾಯವೂ ಕೇಳಿಬಂದಿದೆ.

  • ಬಂಡೀಪುರ ಪ್ರವಾಸ ಮಾಡಿ ಗಿಡ ನೆಟ್ಟ ಪ್ರೇಮಲೋಕ ಚೆಲುವೆ ಜೂಹಿ ಚಾವ್ಲಾ

    ಬಂಡೀಪುರ ಪ್ರವಾಸ ಮಾಡಿ ಗಿಡ ನೆಟ್ಟ ಪ್ರೇಮಲೋಕ ಚೆಲುವೆ ಜೂಹಿ ಚಾವ್ಲಾ

    ಬೆಂಗಳೂರು: ಬುಹುಭಾಷಾ ನಟಿ, ಕಿಂದರಿಜೋಗಿ ಬೆಡಗಿ ಜೂಹಿ ಚಾವ್ಲಾ ಮೂಸೂರು ಸುತ್ತಮುತ್ತ ಪ್ರವಾಸ ಮಾಡಿ ಎಂಜಾಯ್ ಮಾಡಿದ್ದಾರೆ. ಈ ಫೋಟೋಗಳನ್ನು ನಟಿ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ಶಾಂತಿ ಕ್ರಾಂತಿ ಚೆಲುವೆ ಜನಪ್ರಿಯ ಬಾಲಿವುಡ್ ನಟಿ ಜೂಹಿ ಚಾವ್ಲಾ ತಮ್ಮ ಕುಟುಂಬದವರೊಂದಿಗೆ ಇತ್ತೀಚೆಗೆ ಮೈಸೂರು ಭಾಗದಲ್ಲಿ ಪ್ರವಾಸ ಕೈಗೊಂಡು ಹಿಂದಿರುಗಿದ್ದಾರೆ. ಈ ಬಗ್ಗೆ ಖುದ್ದು ಅವರೇ ಸೋಷಿಯಲ್ ಮೀಡಿಯಾದಲ್ಲಿ ವಿಷಯವನ್ನು ಹಂಚಿಕೊಂಡಿದ್ದಾರೆ. ಈ ಫೋಟೋ ಮತ್ತು ವೀಡಿಯೋಗಳು ಸಾಮಾಜಿಕಜಾಲತಾಣದಲ್ಲಿ ಹರಿದಾಡುತ್ತಿದೆ.

    ಎಚ್.ಡಿ. ಕೋಟೆ ತಾಲೂಕಿನಲ್ಲಿರುವ ಕಬಿನಿ ಅಣೆಕಟ್ಟೆಗೆ ಜೂಹಿ ತೆರಳಿದ್ದರು. ಅಲ್ಲಿನ ನಿಸರ್ಗ ತಾಣಗಳನ್ನು ವೀಕ್ಷಿಸಿದ ಬಳಿಕ ಕಾರಾಪುರ ಜಂಗಲ್ ಲಾಡ್ಜ್‌ನಲ್ಲಿ ತಂಗಿದ್ದರು. ನಂತರ ನಾಗರಹೊಳೆ ಸುತ್ತಮುತ್ತಲಿನ ಸುಂದರ ತಾಣಗಳನ್ನು ವೀಕ್ಷಿಸಿದ್ದ ಅವರು ಇಲ್ಲಿನ ಪರಿಸರದ ಭವ್ಯತೆಯನ್ನು ಹಾಡಿಹೊಗಳಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

    ಬಂಡೀಪುರ ಪ್ರವಾಸದ ವೇಳೆ ರೆಸಾರ್ಟ್‍ನಲ್ಲಿ ಉಳಿದುಕೊಂಡಿದ್ದರು. ಪ್ರವಾಸದ ನೆನಪಿನಾರ್ಥವಾಗಿ ನಾವು ಉಳಿದುಕೊಂಡಿದ್ದ ರೇಸಾರ್ಟ್‍ನಲ್ಲಿ ಒಂದು ಗಿಡವನ್ನು ಸಹ ನೆಟ್ಟಿದ್ದೇವೆ ಎಂದು ಗಿಡ ನೆಡುತ್ತಿರುವ ವೀಡಿಯೋ ಶೇರ್ ಮಾಡಿದ್ದಾರೆ. ಕರ್ನಾಟಕದ ಕಬಿನಿ ನದಿಯ ಹೊರತಾಗಿ, ನಾಗರ ಹೊಳೆ ವನ್ಯಜೀವಿಗಳಿಗೆ ಮೀಸಲು ಇರುವ ಪ್ರದೇಶದಲ್ಲಿ ಟೈಗರ್ ಸಫಾರಿಗೆ ಹೋಗುತ್ತಿದ್ದೇವೆ ಎಂದು ಬರೆದುಕೊಂಡು ಅದರ ಒಂದು ಫೋಟೋವನ್ನು ಜೂಹಿ ಚಾವ್ಲಾ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ.

     

    View this post on Instagram

     

    A post shared by Juhi Chawla (@iamjuhichawla)

    ಬಂಡೀಪುರ ಹಲವಾರು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತದೆ. ಹೀರುವಾಗ ಇಂತಹ ಅದ್ಭುತವಾದ ಭೌವ್ಯ ತಾಣಕ್ಕೆ ಬಾಲಿವುಡ್ ನಟರು, ಸೆಲೆಬ್ರಿಟಿಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಬರುತ್ತಿದ್ದಾರೆ. ಈ ಹಿಂದೆ ಹಲವು ನಟ-ನಟಿಯರು ಬಂದು ಹೋಗಿದ್ದಾರೆ. ಇಲ್ಲಿನ ಪ್ರಕೃತಿಯ ಸೊಬಗಿಗೆ ಮನಸೋತಿರುವುದು ಸ್ಥಳೀಯರಿಗೆ ಸಂತಸ ತರಿಸಿದೆ.

  • ಬಂಡೀಪುರ, ಬಿಆರ್‌ಟಿಯಲ್ಲಿ ಹೊಸ ವರ್ಷದ ಮೋಜು, ಮಸ್ತಿಗೆ ಬ್ರೇಕ್

    ಬಂಡೀಪುರ, ಬಿಆರ್‌ಟಿಯಲ್ಲಿ ಹೊಸ ವರ್ಷದ ಮೋಜು, ಮಸ್ತಿಗೆ ಬ್ರೇಕ್

    – ಡಿ.31, ಜ.1ರಂದು ವಾಸ್ತವ್ಯಕ್ಕೆ ನಿರ್ಬಂಧ

    ಚಾಮರಾಜನಗರ: ಜಿಲ್ಲೆ ಪ್ರವಾಸಿಗರ ನೆಚ್ಚಿನ ತಾಣವಾಗಿದ್ದು, ದೇಶ, ವಿದೇಶದಿಂದ ಹಲವರು ಪ್ರವಾಸಕ್ಕೆ ಆಗಮಿಸುತ್ತಾರೆ. ಎರಡು ಹುಲಿ ಸಂರಕ್ಷಿತಾರಣ್ಯ ಹೊಂದಿರುವ ಜಿಲ್ಲೆ ಎಂಬ ಹೆಗ್ಗಳಿಕೆ ಕೂಡ ಚಾಮರಾಜನಗರಕ್ಕಿದೆ. ಬಂಡೀಪುರ, ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯದಲ್ಲಿ ಈ ಬಾರಿ ಹೊಸ ವರ್ಷಾಚರಣೆಗೆ ಬ್ರೇಕ್ ಬಿದ್ದಿದೆ. ಕೊರೊನಾ ಹಿನ್ನೆಲೆ ಮೋಜು, ಮಸ್ತಿಗೆ ಕಡಿವಾಣ ಹಾಕಲಾಗಿದೆ.

    ಬಂಡೀಪುರ, ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯದಲ್ಲಿ ಹೊಸ ವರ್ಷಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಆದರೆ ಈ ಬಾರಿ ಇದಕ್ಕೆ ಬ್ರೇಕ್ ಬಿದ್ದಿದೆ. ಡಿಸೆಂಬರ್ 31 ಹಾಗೂ ಜನವರಿ 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯಕ್ಕೆ ನಿಷೇಧ ಹೇರಲಾಗಿದೆ. ಪ್ರತಿವರ್ಷದ ಕೊನೆ ದಿನ ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಿದ್ದರು. ಆದರೆ ಈ ವರ್ಷ ಕೊರೊನಾ ಹಿನ್ನೆಲೆ ಅರಣ್ಯ ಇಲಾಖೆ ಪ್ರವಾಸಿಗರ ವಾಸ್ತವ್ಯಕ್ಕೆ ನಿರ್ಬಂಧ ಹೇರಿದೆ.

    ಹೊಸ ವರ್ಷಾಚರಣೆಗೆ ಕೆಲದಿನಗಳ ಮುಂಚೆಯೇ ಇಲ್ಲಿನ ಕಾಟೇಜ್ ಹಾಗೂ ಡಾರ್ಮೆಟರಿಗಳನ್ನು ಪ್ರವಾಸಿಗರು ಆನ್‍ಲೈನ್ ಮೂಲಕ ಬುಕ್ ಮಾಡುತ್ತಿದ್ದರು. ಆದರೆ ಈ ಬಾರಿ ಡಿಸೆಂಬರ್ 31 ಹಾಗೂ ಜನವರಿ 1ಕ್ಕೆ ಆನ್‍ಲೈನ್ ಮೂಲಕ ಬುಕ್ ಮಾಡುವುದನ್ನು ಬ್ಲಾಕ್ ಮಾಡಲಾಗಿದೆ. ಎಂದಿನಂತೆ ಬೆಳಗ್ಗೆ ಹಾಗೂ ಸಂಜೆ ಸಫಾರಿ ಇರಲಿದೆ. ಪ್ರವಾಸಿಗರು ಪ್ರಾಣಿಗಳನ್ನು ಕಣ್ತುಂಬಿಕೊಳ್ಳಬಹುದಾಗಿದೆ. ಆದರೆ ವಾಸ್ತವ್ಯ ಮಾಡುವಂತಿಲ್ಲ ಎಂದು ಬಂಡೀಪುರ ಹುಲಿ ಯೋಜನೆ ನಿರ್ದೇಶಕ ನಟೇಶ್ ತಿಳಿಸಿದ್ದಾರೆ.

    ಬಿಳಿಗಿರಿ ರಂಗನ ಬೆಟ್ಟದ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿಯೂ ಕಾಟೇಜಸ್ ಹಾಗೂ ಡಾರ್ಮೇಟರಿಗಳಿಗೆ ಡಿ.31 ಮತ್ತು ಜ.1 ರಂದು ನಿಷೇಧಿಸಿದೆ ಎಂದು ಬಿ.ಆರ್.ಟಿ ಯ ಸಿಎಫ್ ಸಂತೋಷ್ ಮಾಹಿತಿ ನೀಡಿದ್ದಾರೆ. ಈ ಮೂಲಕ ಹೊಸ ವರ್ಷ ಸಂಭ್ರಮಾಚರಣೆಯ ಖುಷಿಯಲ್ಲಿದ್ದ ಪ್ರವಾಸಿಗರ ಆಸೆಗೆ ತಣ್ಣೀರೆರಚಿದಂತಾಗಿದೆ. ಅಲ್ಲದೆ ಬಂಡೀಪುರದಲ್ಲಿ ಕೊರೊನಾ ಮುಂಜಾಗೃತಾ ಕ್ರಮವಾಗಿ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಶೇ.50ರಷ್ಟು ಮಾತ್ರ ಕಾಟೇಜ್, ಡಾರ್ಮೇಟರಿಗಳ ಬುಕ್ಕಿಂಗ್ ವ್ಯವಸ್ಥೆ ಕಲ್ಪಿಸುತ್ತಿದೆ. ಹೊಸ ವರ್ಷಕ್ಕೆ ಸಂಪೂರ್ಣ ನಿಷೇಧ ಹೇರಿರುವುದು ಪ್ರವಾಸಿಗರಲ್ಲಿ ಬೇಸರ ಮೂಡಿಸಿದೆ.