Tag: Bandipur

  • ಬಂಡೀಪುರದಲ್ಲಿ 6 ದಿನವಾದರೂ ಆರದ ಕಾಡ್ಗಿಚ್ಚು

    ಬಂಡೀಪುರದಲ್ಲಿ 6 ದಿನವಾದರೂ ಆರದ ಕಾಡ್ಗಿಚ್ಚು

    – ವನಸಂಪತ್ತಿನ ಜೊತೆಗೆ ಜೀವ ಸಂಕುಲವೂ ಕರಕಲು
    – ಬೆಂಕಿಯಿಟ್ಟ ಶಂಕಿತನೋರ್ವನ ಬಂಧನ

    ಚಾಮರಾಜನಗರ: ಬಂಡೀಪುರ ಹುಲಿಸಂರಕ್ಷಿತಾರಣ್ಯದಲ್ಲಿ ಬೆಂಕಿಯ ರೌದ್ರಾವತಾರಕ್ಕೆ ಸರಿಸುಮಾರು ಹತ್ತು ಸಾವಿರ ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಕಳೆದ ಐದು ದಿನಗಳ ಹಿಂದೆ ಹಬ್ಬಿದ ಕಾಡ್ಗಿಚ್ಚು ಇದೀಗ ನಿಯಂತ್ರಣಕ್ಕೆ ಬಂದಿದೆ.

    ಸದಾ ಹಸಿರಿನಿಂದ ಕಂಗೊಳಿಸುತ್ತಿದ್ದ ಬಂಡೀಪುರ ಅರಣ್ಯ ಇದೀಗ ಬೆಂದ ಕಾಡಾಗಿದೆ. ಹುಲಿ, ಕರಡಿ, ಚಿರತೆ, ಆನೆ, ಜಿಂಕೆ ಸೇರಿದಂತೆ ವನ್ಯಜೀವಿಗಳ ಆವಾಸ ಸ್ಥಾನ ಬೆಂದು ಬೋಳು-ಬೋಳಾಗಿದೆ. ಐದು ದಿನಗಳ ಹಿಂದಷ್ಟೇ ಕಾಣಿಸಿಕೊಂಡ ಕಾಡ್ಗಿಚ್ಚಿನಿಂದ ಬಂಡೀಪುರದ ಸುಮಾರು 10 ಸಾವಿರ ಎಕರೆ ಅರಣ್ಯದ ಪ್ರದೇಶ, ಅಪಾರ ಪ್ರಮಾಣದ ವನ್ಯ ಸಂಪತ್ತು ಬೆಂಕಿಗಾಹುತಿಯಾಗಿದೆ.

    ನಿನ್ನೆ ಸಂಜೆವರೆಗೆ ನಿಯಂತ್ರಣಕ್ಕೆ ಬಂದಿದ್ದ ಅರಣ್ಯ ಪ್ರದೇಶದಲ್ಲೇ ಸಂಜೆ ಮತ್ತೆ ಬೆಂಕಿ ಕಾಣಿಸಿಕೊಂಡಿದೆ. ಬಂಡೀಪುರದ ಗೋಪಾಲಸ್ವಾಮಿ ಬೆಟ್ಟ ಮತ್ತು ಕುಂದಕೆರೆ ವಲಯದ ಅಂದಾಜು ಎರಡೂವರೆ ಸಾವಿರ ಹೆಕ್ಟೇರ್ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಇದೀಗ ಮತ್ತೆ ಯಾರೋ ಕಿಡಿಗೇಡಿಗಳು ಗೋಪಾಲಸ್ವಾಮಿ ಬೆಟ್ಟದ ವಲಯಕ್ಕೆ ಬೆಂಕಿ ಹಾಕಿದ್ದಾರೆ. ಇದರಿಂದಾಗಿ 20 ಸಾವಿರಕ್ಕೂ ಅಧಿಕ ಎಕರೆ ಅರಣ್ಯ ಪ್ರದೇಶವನ್ನು ಬೆಂಕಿ ನಾಶ ಮಾಡಿದೆ.

    ಬಂಡಿಪುರದ ಗೋಪಾಲಸ್ವಾಮಿ ಬೆಟ್ಟ ಹಾಗೂ ಕುಂದಕೆರೆ ವಲಯದಲ್ಲಿ ಬೆಂಕಿಯೇ ಹತೋಟಿಗೆ ಬರುತ್ತಿಲ್ಲ. ರಾತ್ರಿ ಇಡೀ ಬಂಡಿಪುರದಲ್ಲಿ ಬೆಂಕಿ ಉರಿಯುತ್ತಿದ್ದು, ಇದರಿಂದ ಲಕ್ಷಾಂತರ ಪ್ರಮಾಣದಲ್ಲಿ ಆಲದಮರ, ಬೀಟೆ, ನೀಲಗಿರಿ, ತೇಗ, ಹೊಂಗೆಮರ ಸೇರಿದಂತೆ ಇನ್ನಿತರ ಮರಗಳು ನಾಶವಾಗಿವೆ. ಬಂಡಿಪುರದಲ್ಲಿ ಆಕರ್ಷಣೆ ಅಂದ್ರೆ ಸಫಾರಿ ಝೋನ್. ನಿನ್ನೆ ರಾತ್ರಿ ಸಫಾರಿ ವಲಯಕ್ಕೂ ಬೆಂಕಿ ಆವರಿಸಿ ಇಡೀ ಸಫಾರಿ ಝೋನ್ ನಾಶವಾಗಿದ್ದು ಒಂದು ವಾರ ಕಾಲ ಸಫಾರಿ ಬಂದ್ ಮಾಡಲಾಗಿದೆ.

    ಬಂಡೀಪುರ ಹುಲಿ ರಕ್ಷಿತಾರಣ್ಯದಲ್ಲಿ ಬೆಂಕಿ ಬಿದ್ದ ಘಟನೆಗೆ ಸಂಬಂಧಿಸಿದಂತೆ ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಸ್ಥಳಕ್ಕೆ ಭೇಟಿ ನೀಡಿದರು. ಅರಣ್ಯಕ್ಕೆ ಕಿಡಿಗೇಡಿಯೊಬ್ಬ ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗಿದ್ದು ಓರ್ವನನ್ನು ಬಂಧಿಸಲಾಗಿದೆ. ಬೆಂಕಿ ಹರಡದಂತೆ ಸರ್ವ ರೀತಿಯ ಪ್ರಯತ್ನ ಮಾಡಲಾಗುವುದು ಎಂದರು.

    ಈ ಮಧ್ಯೆ, ಅರಣ್ಯ ಸಂರಕ್ಷಣಾ ರಾಯಭಾರಿಯಾಗಿರೋ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಡೀಪುರ ಅಭಯಾರಣ್ಯದಲ್ಲಿ ಉಂಟಾಗಿರುವ ಕಾಡ್ಗಿಚ್ಚಿನಿಂದಾಗಿ ನೊಂದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಕಾಡು ಸುಟ್ಟಿರುವ ಫೋಟೋ ಹಾಕಿ ಆಸಕ್ತಿಯುಳ್ಳ ಸ್ವಯಂಸೇವಕರು ಅಭಿಯಾನದಲ್ಲಿ ಪಾಲ್ಗೊಳ್ಳಿ ಎಂದು ಕರೆಕೊಟ್ಟಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಂಡೀಪುರದಲ್ಲಿ ಸಫಾರಿಗೆ ಹೋದಾಗ ದಾಳಿಗೆ ಮುಂದಾದ ಮರಿಯಾನೆ!

    ಬಂಡೀಪುರದಲ್ಲಿ ಸಫಾರಿಗೆ ಹೋದಾಗ ದಾಳಿಗೆ ಮುಂದಾದ ಮರಿಯಾನೆ!

    ಚಾಮರಾಜನಗರ: ಸಫಾರಿಗೆ ತೆರಳಿದ್ದ ವೇಳೆ ಕಾಡಾನೆ ದಾಳಿಯಿಂದ ಪ್ರವಾಸಿಗರು ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ.

    ಭಾನುವಾರ ಸಂಜೆ ಪ್ರವಾಸಿಗರು ಬಂಡೀಪುರಕ್ಕೆ ಬಂದಿದ್ದರು. ಹೀಗೆ ಬಂದವರು ಸಫಾರಿ ಹೋಗುತ್ತಿದ್ದ ವೇಳೆ ನಾಲ್ಕು ಆನೆಗಳಿದ್ದ ಗುಂಪೊಂದನ್ನು ನೋಡಿದ್ದಾರೆ. ಆದ್ರೆ ಪ್ರವಾಸಿಗರು ತಮ್ಮ ಪಾಡಿಗೆ ತಾವು ಹೋಗುತ್ತಿದ್ದರು. ಇದೇ ಸಂದರ್ಭದಲ್ಲಿ ಗುಂಪಿನಲ್ಲಿದ್ದ ಆನೆಗಳ ಪೈಕಿ ಮರಿಯಾನೆಯೊಂದು ಏಕಾಏಕಿ ದಾಳಿ ಮಾಡಲು ಮುಂದಾಗಿದೆ.

    ಅದೃಷ್ಟವಶಾತ್ ವಾಹನದ ಚಾಲಕನ ಸಮಯ ಪ್ರಜ್ಞೆಯಿಂದ ಪ್ರವಾಸಿಗರು ಪಾರಾಗಿದ್ದಾರೆ. ಮರಿಯಾನೆಗೆ ಪ್ರವಾಸಿಗರು ತೊಂದರೆ ಮಾಡಬಹುದು ಎಂದು ಭಾವಿಸಿ ಈ ದಾಳಿ ಮಾಡಲು ಮುಂದಾಗಿರಬಹುದು ಎಂದು ಅಂದಾಜಿಸಲಾಗಿದೆ.

     ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=o9_ovJwjnIY

  • `ಪಬ್ಲಿಕ್’ ಇಂಪ್ಯಾಕ್ಟ್: ಬಂಡೀಪುರದಲ್ಲಿ ರಾತ್ರಿ ಸಂಚಾರ ನಿರ್ಬಂಧ ತೆರವು ಇಲ್ಲ- ಎಚ್‍ಡಿಕೆ ಸ್ಪಷ್ಟನೆ

    `ಪಬ್ಲಿಕ್’ ಇಂಪ್ಯಾಕ್ಟ್: ಬಂಡೀಪುರದಲ್ಲಿ ರಾತ್ರಿ ಸಂಚಾರ ನಿರ್ಬಂಧ ತೆರವು ಇಲ್ಲ- ಎಚ್‍ಡಿಕೆ ಸ್ಪಷ್ಟನೆ

    ಬೆಂಗಳೂರು: ಬಂಡೀಪುರದಲ್ಲಿ ರಾತ್ರಿ ವೇಳೆ ವಾಹನ ಸಂಚಾರ ಮತ್ತು ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಮಾಡುವ ವಿಚಾರವನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ.

    ಈ ಬಗ್ಗೆ ನಿಮ್ಮ ಪಬ್ಲಿಕ್ ಟಿವಿ ವರದಿ ಪ್ರಸಾರ ಮಾಡಿತ್ತು. ವರದಿಗೆ ಸ್ಪಂದಿಸಿದ ಕುಮಾರಸ್ವಾಮಿ, ಬಂಡಿಪುರದಲ್ಲಿ ರಾತ್ರಿ ವೇಳೆ ವಾಹನ ಸಂಚಾರವನ್ನು ತೆರವು ಮಾಡಬೇಕೆಂಬ ಕೋರಿಕೆಯ ಬಗ್ಗೆ ನಾನು ಪರಾಮರ್ಶಿಸಿದ್ದೇನೆ. ರಾತ್ರಿ ಸಂಚಾರವನ್ನು ತೆರವು ಮಾಡುವುದಿಲ್ಲ. ಈಗಿರುವ ನಿರ್ಬಂಧ ಮುಂದುವರಿಯಲಿದೆ ಅಂತ ಸ್ಪಷ್ಟಪಡಿಸಿದ್ದಾರೆ.  ಇದಲ್ಲದೆ ಎಲಿವೆಟೆಡ್ ರಸ್ತೆ ನಿರ್ಮಾಣ ಕಾರ್ಯಸಾಧುವಲ್ಲ ಎಂದೂ ತೀರ್ಮಾನಿಸಿದ್ದೇನೆ ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: ಬಂಡೀಪುರದಲ್ಲಿ ರಾತ್ರಿ ವಾಹನ ಸಂಚಾರಕ್ಕೆ ಅನುಮತಿ- ಕೇರಳದ ಲಾಬಿಗೆ ಮಣಿದ್ರಾ ಸಿಎಂ? ಏನಿದು ವಿವಾದ?

    ಈ ಬಗ್ಗೆ ಶುಕ್ರವಾರ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು ಸುದ್ದಿಗಾರರ ಪ್ರಶ್ನೆಗೆ ಗರಂ ಆಗಿ ಉತ್ತರಿಸಿದ್ದರು. ಬಂಡೀಪುರ ಅರಣ್ಯ ಪ್ರದೇಶದ ಕುರಿತಾಗಿ ಸರ್ಕಾರದ ನಿರ್ಧಾರ ಏನು ಎಂದು ಪ್ರಶ್ನಿಸಿದಕ್ಕೆ ಸಿಡಿಮಿಡಿಗೊಂಡ ಅವರು, ಸುಪ್ರೀಂ ಕೋರ್ಟ್ ನಿಂದ ಆದೇಶ ಹೊರ ಬರದೇ ನಾನು ವೈಯಕ್ತಿಕವಾಗಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ತಮ್ಮ ಹಿಂದಿನ ಹೇಳಿಯನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದರು. ಇದನ್ನೂ ಓದಿ:  ಬಂಡೀಪುರದಲ್ಲಿ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಅವಕಾಶವಿಲ್ಲ: ಸಚಿವ ಆರ್ ಶಂಕರ್

    ಸುಪ್ರೀಂ ಕೋರ್ಟ್, ಅರಣ್ಯ ಹಾಗೂ ಪರಿಸರ ಇಲಾಖೆ ಸೇರಿ ಒಪ್ಪಿಗೆ ನೀಡದೇ ನಾನು ಒಪ್ಪಿಕೊಂಡರೆ ಸಮಸ್ಯೆ ಇತ್ಯರ್ಥ ಆಗುವುದಿಲ್ಲ. ನಾನು ಹೀಗೆ ತೀರ್ಪು ನೀಡಿ ಅಂತಾ ಸುಪ್ರೀಂ ಕೋರ್ಟ್ ಗೆ ಹೇಳಲು ಬರುವುದಿಲ್ಲ. ರಸ್ತೆ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್ ಒಪ್ಪಿಗೆ ಕೊಟ್ಟರೆ ಬೇಡ ಅಂತಾ ಹೇಳುವುದಕ್ಕೆ ನಾನು ಯಾರು? ಆದರೆ ಪತ್ರದ ಬಗ್ಗೆ ನನಗೆ ಕೇಳಬೇಡಿ, ಮುಖ್ಯ ಕಾರ್ಯದರ್ಶಿಗಳನ್ನು ವಿಚಾರಿಸಿ ಎಂದು ಹೇಳಿದ್ದರು. ಇದನ್ನೂ ಓದಿ: ಅಣ್ಣ ಬಂಡೀಪುರದಲ್ಲಿ ಫ್ಲೈಓವರ್ ಬಗ್ಗೆ ಮಾತನಾಡಿದ್ರೆ, ತಮ್ಮ ಇಲ್ಲ ಅಂದ್ರು!

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಬಂಡೀಪುರದಲ್ಲಿ ರಸ್ತೆ ನಿರ್ಮಾಣ ಮಾಡಿ ಅನ್ನೋದಕ್ಕೆ ನಾನ್ಯಾರು: ಸಚಿವ ರೇವಣ್ಣ ಪ್ರಶ್ನೆ

    ಬಂಡೀಪುರದಲ್ಲಿ ರಸ್ತೆ ನಿರ್ಮಾಣ ಮಾಡಿ ಅನ್ನೋದಕ್ಕೆ ನಾನ್ಯಾರು: ಸಚಿವ ರೇವಣ್ಣ ಪ್ರಶ್ನೆ

    ಬೆಂಗಳೂರು: ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ವೇಳೆ ವಾಹನ ಸಂಚಾರಗೆ ಹೇರಿದ ನಿಷೇಧವನ್ನು ತೆರವುಗೊಳಿಸುವ ಬಗ್ಗೆ ಮುಖ್ಯ ಕಾರ್ಯದರ್ಶಿಯನ್ನೇ ಕೇಳಿ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಗರಂ ಆಗಿ ಹೇಳಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಬಂಡೀಪುರ ಅರಣ್ಯ ಪ್ರದೇಶದ ಕುರಿತಾಗಿ ಸರ್ಕಾರದ ನಿರ್ಧಾರ ಏನು ಎಂದು ಪ್ರಶ್ನಿಸಿದಕ್ಕೆ ಸಿಡಿಮಿಡಿಗೊಂಡ ಅವರು, ಸುಪ್ರೀಂ ಕೋರ್ಟ್ ನಿಂದ ಆದೇಶ ಹೊರ ಬರದೇ ನಾನು ವೈಯಕ್ತಿಕವಾಗಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ತಮ್ಮ ಹಿಂದಿನ ಹೇಳಿಯನ್ನು ಮುಚ್ಚಿಹಾಕಲು ಪ್ರಯತ್ನಿಸಿದರು.

    ಸುಪ್ರೀಂ ಕೋರ್ಟ್, ಅರಣ್ಯ ಹಾಗೂ ಪರಿಸರ ಇಲಾಖೆ ಸೇರಿ ಒಪ್ಪಿಗೆ ನೀಡದೇ ನಾನು ಒಪ್ಪಿಕೊಂಡರೆ ಸಮಸ್ಯೆ ಇತ್ಯರ್ಥ ಆಗುವುದಿಲ್ಲ. ನಾನು ಹೀಗೆ ತೀರ್ಪು ನೀಡಿ ಅಂತಾ ಸುಪ್ರೀಂ ಕೋರ್ಟ್ ಗೆ ಹೇಳಲು ಬರುವುದಿಲ್ಲ. ರಸ್ತೆ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್ ಒಪ್ಪಿಗೆ ಕೊಟ್ಟರೆ ಬೇಡ ಅಂತಾ ಹೇಳುವುದಕ್ಕೆ ನಾನು ಯಾರು? ಆದರೆ ಪತ್ರದ ಬಗ್ಗೆ ನನಗೆ ಕೇಳಬೇಡಿ, ಮುಖ್ಯ ಕಾರ್ಯದರ್ಶಿಗಳನ್ನು ವಿಚಾರಿಸಿ ಎಂದು ಹೇಳಿದರು.

    ಸುದ್ದಿಗೋಷ್ಠಿ ಮುಕ್ತಾಯದವರೆಗೂ ಮಾಧ್ಯಮಗಳ ಪ್ರಶ್ನೆಗಳಿಗೆ, ನಾನ್ಯಾರು ಅದನ್ನು ಹೇಳುವುದಕ್ಕೆ? ನಾನು ಹೇಗೆ ಹೇಳೋದು ಎಂದು ಪ್ರಶ್ನಾರ್ಥಕ ಉತ್ತರಗಳನ್ನು ನೀಡುತ್ತಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

     

     

  • ಅಣ್ಣ ಬಂಡೀಪುರದಲ್ಲಿ ಫ್ಲೈಓವರ್ ಬಗ್ಗೆ ಮಾತನಾಡಿದ್ರೆ, ತಮ್ಮ ಇಲ್ಲ ಅಂದ್ರು!

    ಅಣ್ಣ ಬಂಡೀಪುರದಲ್ಲಿ ಫ್ಲೈಓವರ್ ಬಗ್ಗೆ ಮಾತನಾಡಿದ್ರೆ, ತಮ್ಮ ಇಲ್ಲ ಅಂದ್ರು!

    ಬೆಂಗಳೂರು: ಬಂಡೀಪುರದಲ್ಲಿ ಫ್ಲೈ ಓವರ್ ರಸ್ತೆ ನಿರ್ಮಾಣದ ಕುರಿತು ಚಿಂತನೆ ನಡೆದಿದೆ ಎಂದು ಸಚಿವ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿಕೆ ನೀಡಿದ್ದರೆ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅದು ಸುಳ್ಳು, ಸುಮ್ಮನೆ ಈ ಕುರಿತು ಗೊಂದಲ ಸೃಷ್ಟಿ ಮಾಡಲಾಗುತ್ತಿದೆ ಎಂದು ಗರಂ ಆಗಿ ಪ್ರತಿಕ್ರಿಯಿಸಿದ್ದಾರೆ.

    ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿ, ಬಂಡೀಪುರದ ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿದೆ. ಆದರೂ ಏಕೆ ಫ್ಲೈ ಓವರ್ ರಸ್ತೆ ನಿರ್ಮಾಣದ ಕುರಿತು ಸುಮ್ಮನೆ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ರಾತ್ರಿ ವೇಳೆ ರಸ್ತೆ ಸಂಚಾರ ಪುನರಾರಂಭಕ್ಕೆ ಅವಕಾಶ ನೀಡುವುದು ಹಾಗೂ ಕೇರಳಕ್ಕೆ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಫ್ಲೈ ಓವರ್ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ ಎನ್ನುವುದು ಸುಳ್ಳು ಮಾಹಿತಿ ಎಂದು ಹೇಳಿದರು.

    ರೇವಣ್ಣ ಹೇಳಿದ್ದು ಏನು?
    ಬಂಡೀಪುರ ರಕ್ಷಿತಾರಣ್ಯದಲ್ಲಿ ರಾತ್ರಿ ವಾಹನ ಸಂಚಾರ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಗುರುವಾರ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ್ದ ಸಚಿವ ರೇವಣ್ಣ, ಈ ಕುರಿತು ಕೇರಳ ಸರ್ಕಾರ ಸುಪ್ರೀಂಗೆ ಹೋಗಿದೆ. ಅದನ್ನು ಗಮನದಲ್ಲಿಟ್ಟು ಇದರ ಕುರಿತು ಸೂಕ್ತವಾಗಿ ಕ್ರಮ ಕೈಗೊಳ್ಳುತ್ತೇವೆ. ಬಂಡೀಪುರ ಅರಣ್ಯದಲ್ಲಿಯೂ ಕೆಲವೆಡೆಗಳಲ್ಲಿ ಫ್ಲೈಓವರ್ ನಿರ್ಮಾಣಕ್ಕೆ ಚಿಂತನೆ ನಡೆದಿದೆ. ಕಾಡು ಪ್ರಾಣಿಗಳ ಮತ್ತು ಪರಿಸರಕ್ಕೆ ಹಾನಿಯಾಗದಂತೆ ಕಾಮಗಾರಿ ಮಾಡುವ ಕುರಿತು ಚರ್ಚಿಸಲಾಗುವುದು. ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ಸಂಚಾರ ಬಗ್ಗೆ ಇನ್ನು ನಿರ್ಧಾರವಾಗಿಲ್ಲ. ಮುಖ್ಯ ಕಾರ್ಯದರ್ಶಿ ಜೊತೆ ಈ ಕುರಿತು ಸಭೆಯ ನಂತರ ಓಡಾಟದ ಬಗ್ಗೆ ತೀರ್ಮಾನ ಮಾಡಲಾಗುವುದು ಅಂತ ಅವರು ತಿಳಿಸಿದ್ದರು. ಇದನ್ನು ಓದಿ: ಬಂಡೀಪುರದಲ್ಲಿ ರಾತ್ರಿ ವಾಹನ ಸಂಚಾರಕ್ಕೆ ಅನುಮತಿ- ಕೇರಳದ ಲಾಬಿಗೆ ಮಣಿದ್ರಾ ಸಿಎಂ? ಏನಿದು ವಿವಾದ?

    ಬಂಡೀಪುರದಲ್ಲಿ ರಾತ್ರಿ 9 ಗಂಟೆಗೆ 6 ವಾಹನ ಸಂಚಾರ ನಿಷೇಧಿಸಲಾಗಿದ್ದು, ಜುಲೈ 18ರಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಜೊತೆ ನಡೆದ ಸಭೆಯ ವೇಳೆ ಸಿಎಂ ಹಾಗೂ ಸಚಿವ ರೇವಣ್ಣ ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗಿದೆ. ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಕೇಂದ್ರ ರಸ್ತೆ ಮತ್ತು ಸಾರಿಗೆ ಕಾರ್ಯದರ್ಶಿ ವೈ.ಎಸ್ ಮಲ್ಲಿಕ್ ಜು.21 ರಂದು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಪ್ರಕರಣ ಈಗ ಸುಪ್ರೀಂಕೋರ್ಟ್‍ನಲ್ಲಿದ್ದರೂ ಅನುಮತಿ ನೀಡಿರುವುದು ಎಷ್ಟು ಸರಿ ಎಂದು ವನ್ಯಜೀವಿ ಹೋರಾಟಗಾರರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.

  • ಬಂಡೀಪುರದಲ್ಲಿ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಅವಕಾಶವಿಲ್ಲ: ಸಚಿವ ಆರ್ ಶಂಕರ್

    ಬಂಡೀಪುರದಲ್ಲಿ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಅವಕಾಶವಿಲ್ಲ: ಸಚಿವ ಆರ್ ಶಂಕರ್

    ಬೆಂಗಳೂರು: ಬಂಡೀಪುರದಲ್ಲಿ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಅರಣ್ಯ ಸಚಿವರಾದ ಆರ್. ಶಂಕರ್ ಸ್ಪಷ್ಟನೆ ನೀಡಿದ್ದಾರೆ.

    ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಸಿಎಂರವರು ಕೇಂದ್ರ ಸಚಿವ ಗಡ್ಕರಿ ಅವರಿಗೆ ಭರವಸೆಯನ್ನು ನೀಡಿರುವುದು ಕೇವಲ ಮಾತುಕತೆಯಾಗಿತ್ತು. ವನ್ಯಜೀವಿಗಳ ಮೇಲಿನ ತೊಂದರೆಯಿಂದಾಗಿ ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ನಿರಾಕರಿಸಿ, ಈ ಸಂಬಂಧ ರಾಜ್ಯ ಸರ್ಕಾರದ ಪರವಾಗಿ ಕೇಂದ್ರಕ್ಕೆ ಪತ್ರ ಬರೆದಿದ್ದೇನೆ ಎಂದು ತಿಳಿಸಿದರು.

    ಕೇರಳ ಹಾಗೂ ಕೇಂದ್ರ ಸರ್ಕಾರ ಬಂಡೀಪುರದಲ್ಲಿ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದೆ. ಈ ಮೊದಲಿನಂತೆ ರಾತ್ರಿ 9 ರಿಂದ ಬೆಳಗ್ಗೆ 6 ಗಂಟೆವರೆಗೆ ವಾಹನ ಸಂಚಾರಕ್ಕೆ ಹೆದ್ದಾರಿಯಲ್ಲಿ ಅವಕಾಶವಿಲ್ಲ. ಕೇವಲ ಕರ್ನಾಟಕದ ಹಾಗೂ ಕೇರಳದ ತುರ್ತು ವಾಹನಗಳ ಓಡಾಟಕ್ಕೆ ಮಾತ್ರ ಅವಕಾಶ ನೀಡಲಾಗಿದೆ ಎಂದರು.

    ಬಂಡೀಪುರ ಅರಣ್ಯ ಪ್ರದೇಶದಲ್ಲಿ ವನ್ಯಜೀವಿಗಳಿಗೆ ತೊಂದರೆಯಾಗುತ್ತದೆ ಎನ್ನುವ ಕಾರಣದಿಂದ ಈ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದೇವೆ. ಕೇರಳ ಎರ್ಕಾರವು ಎಲಿವೇಟೆಡ್ ರಸ್ತೆ ನಿರ್ಮಾಣಕ್ಕೆ ಬೇಡಿಕೆಯನ್ನು ಇಟ್ಟಿತ್ತು ಎಂದು ಆರ್. ಶಂಕರ್ ಹೇಳಿದರು. ಇದನ್ನೂ ಓದಿ: ಬಂಡೀಪುರದಲ್ಲಿ ರಾತ್ರಿ ವಾಹನ ಸಂಚಾರವನ್ನು ನಿಷೇಧಿಸಿದ್ದು ಯಾಕೆ? ಇಲ್ಲಿದೆ ಪೂರ್ಣ ವಿವರ

  • ರಂಜಾನ್ ಯುದ್ಧ ವಿರಾಮ ಬಳಿಕ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

    ರಂಜಾನ್ ಯುದ್ಧ ವಿರಾಮ ಬಳಿಕ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

    ಶ್ರೀನಗರ: ರಂಜಾನ್ ಹಬ್ಬರ ಕದನ ವಿರಾಮ ಹಿಂತೆಗೆದುಕೊಂಡ ಬಳಿಕ ನಡೆದ ಭಾರತೀಯ ಸೇನೆಯ ಮೊದಲ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರನ್ನು ಹೊಡೆದುರುಳಿಸಿದೆ.

    ಉತ್ತರ ಕಾಶ್ಮೀರದ ಬಂಡಿಪೊರಾ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ನಡೆದ ಭಾರತೀಯ ಸೈನಿಕರು ಹಾಗೂ ಉಗ್ರರ ನಡುವಿನ ಎನ್‍ಕೌಂಟರ್ ನಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ.

    ಕಳೆದ ಜೂನ್ 14 ರಂದು ಬಂಡಿಪೊರಾ ಜಿಲ್ಲೆಯಲ್ಲಿ ಯೋಧರನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ 2 ಯೋಧರು ಹುತಾತ್ಮರಾಗಿದ್ದರು. ಇದೇ ವೇಳೆ ಭಾರತ ಸರ್ಕಾರ ರಂಜಾನ್ ಕದನ ವಿರಾಮ ಒಪ್ಪಂದವನ್ನು ಹಿಂಪಡೆಯುತ್ತಿದ್ದಾಗಿ ತಿಳಿಸಿ ಸೈನಿಕರಿಗೆ ಕಾರ್ಯಾರಚಣೆ ನಡೆಸಲು ಸೂಚನೆ ನೀಡಿತ್ತು. ಸದ್ಯ ಎನ್‍ಕೌಂಟರ್ ನಲ್ಲಿ ಹತ್ಯೆಯಾದ ಉಗ್ರರ ಗುರುತು ಪತ್ತೆಯಾಗಿಲ್ಲ ಎಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾಗಿ ವರದಿಯಾಗಿದೆ. ಅಲ್ಲದೇ ಈ ಪ್ರದೇಶದಲ್ಲಿ ಹೆಚ್ಚಿನ ಉಗ್ರರು ಅಡಗಿರುವ ಶಂಕೆ ಮೇಲೆ ಕಾರ್ಯಾಚರಣೆಯನ್ನು ಮುಂದುವರಿಸಲಾಗಿದೆ.

    ಸತತ 1,220 ಗಂಟೆಗಳ ರಂಜಾನ್ ಕದನ ವಿರಾಮದ ಬಳಿಕ ಈ ಕುರಿತು ಟ್ವೀಟ್ ಮಾಡಿದ್ದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಕಾಶ್ಮೀರಿ ಕಣಿವೆಯಲ್ಲಿ ಶಾಂತಿಯನ್ನು ಕದಡಲು ಯತ್ನಿಸುವವರ ವಿರುದ್ಧ ಹಾಗೂ ಉಗ್ರರ ವಿರುದ್ಧ ಕಾರ್ಯಾಚರಣೆಯನ್ನು ಕೈಗೊಳ್ಳಲು ಸೂಚನೆ ನೀಡಿದ್ದಾಗಿ ತಿಳಿಸಿದ್ದರು.

  • 7 ಸಾಕಾನೆಗಳು ಕಾಡಾನೆಯನ್ನು ಲಾರಿಯಲ್ಲಿರುವ ಕ್ರಾಲ್‍ಗೆ ದೂಡಿದ್ದು ಹೀಗೆ- ವಿಡಿಯೋ ನೋಡಿ

    7 ಸಾಕಾನೆಗಳು ಕಾಡಾನೆಯನ್ನು ಲಾರಿಯಲ್ಲಿರುವ ಕ್ರಾಲ್‍ಗೆ ದೂಡಿದ್ದು ಹೀಗೆ- ವಿಡಿಯೋ ನೋಡಿ

    ಮಡಿಕೇರಿ: ಕಳೆದ ಅನೇಕ ದಿನಗಳಿಂದ ಕುಶಾಲನಗರ ಮತ್ತು ಮಡಿಕೇರಿ ರಾಜ್ಯ ಹೆದ್ದಾರಿಯಲ್ಲಿ ರಾಜರೋಷವಾಗಿ ನಡೆದಾಡಿಕೊಂಡು ವಾಹನ ಸವಾರರಿಗೆ ಹೆದರಿಸುತ್ತಿದ್ದ ಕಾಡಾನೆಯನ್ನು ಹೆಡೆಮುರಿ ಕಟ್ಟುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.

     

    ಕಳೆದ ಒಂದುವರೆ ತಿಂಗಳ ಹಿಂದೆ ಕೂಲಿ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಬಲಿ ತೆಗೆದುಕೊಂಡ ಹಿನ್ನೆಲೆಯಲ್ಲಿ ಸಾರ್ವಜನಿಕರು ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿ ಆನೆಯನ್ನು ಹಿಡಿಯಲು ಪಣ ತೊಟ್ಟಿದ್ದ ಸಿಬ್ಬಂದಿ ಕೊನೆಗೂ ಯಶಸ್ವಿಯಾಗಿದ್ದಾರೆ.

    ಹಿಡಿದಿದ್ದು ಹೀಗೆ?
    ಸೋಮವಾರಪೇಟೆ ತಾಲ್ಲೂಕಿನ 7 ಹೊಸಕೋಟೆ ಗ್ರಾಮದ ಅತ್ತೂರು ಮೀಸಲು ಅರಣ್ಯ ಪ್ರದೇಶದಲ್ಲಿ ಪಶುವೈದ್ಯಾಧಿಕಾರಿ ಉಮಾಶಂಕರ್ ಆನೆಗೆ ಅರಿವಳಿಕೆ ಮದ್ದು ನೀಡಿದರು. ಮದ್ದು ನೀಡಿದ ಬಳಿಕ ಸ್ವಲ್ಪ ದೂರ ಓಡಿದ ಕಾಡಾನೆ ಕೆಳಗೆ ಬಿತ್ತು. ಬಿದ್ದ ಕಾಡಾನೆಯೆ ಕಾಲುಗಳಿಗೆ ಮತ್ತು ಕುತ್ತಿಗೆ ಅರಣ್ಯ ಇಲಾಖೆಯ ಸಿಬ್ಬಂದಿ ಹಗ್ಗಗಳನ್ನು ಕಟ್ಟಿದರು. ನಂತರ ಬಿದ್ದ ಕಾಡಾನೆಯನ್ನು ಲಾರಿಯಲ್ಲಿರುವ ಕ್ರಾಲ್‍ಗೆ ಹಾಕುವ ಕಾರ್ಯಾಚರಣೆ ಆರಂಭವಾಯಿತು.

    ಹರ್ಷ, ವಿಕ್ರಮ, ಅಭಿಮನ್ಯು, ಕೃಷ್ಣ ಸೇರಿದಂತೆ ಒಟ್ಟು 7 ಸಾಕಾನೆಯ ಮುಂದೆ ಕಾಡಾನೆ ತನ್ನ ಮೊಂಡಾಟವನ್ನು ಪ್ರದರ್ಶನ ಮಾಡಿತ್ತು. ಆದರೆ ಸಾಕಾನೆಗಳು ತಮ್ಮ ಶಕ್ತಿಯಿಂದ ಬಲವಂತವಾಗಿ ಕಾಡಾನೆಯನ್ನು ಲಾರಿಗೆ ಹತ್ತಿಸುವಲ್ಲಿ ಯಶಸ್ವಿಯಾದವು. 75ಕ್ಕೂ ಹೆಚ್ಚು ಆರಣ್ಯಧಿಕಾರಿಗಳು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಕಾಡಾನೆಯನ್ನು ಬಂಡೀಪುರ ಮೀಸಲು ಅರಣ್ಯ ಪ್ರದೇಶಕ್ಕೆ ಬಿಡಲು ತೆಗೆದುಕೊಂಡು ಹೋಗಲಾಯಿತು.

    https://www.youtube.com/watch?v=PHhpL1Qy9w8

  • ವೀಡಿಯೋ: ಕಬ್ಬಿಣದ ಕಂಬಿಯ ಕೆಳಗೆ ಸಿಲುಕಿದ್ದ ಆನೆಯ ರಕ್ಷಣೆ

    ವೀಡಿಯೋ: ಕಬ್ಬಿಣದ ಕಂಬಿಯ ಕೆಳಗೆ ಸಿಲುಕಿದ್ದ ಆನೆಯ ರಕ್ಷಣೆ

    ಚಾಮರಾಜನಗರ: ಆಹಾರ ಅರಸಿ ಕಾಡಿನಿಂದ ನಾಡಿನತ್ತ ಪ್ರಯಾಣ ಬೆಳಸಿದ್ದ ಆನೆಯೊಂದು ಕಬ್ಬಿಣದ ಕಂಬಿಯಡಿ ಸಿಲುಕಿದ್ದು, ಇದೀಗ ಆನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.

    ಕಾಡಿನಿಂದ ಪ್ರಾಣಿಗಳು ನಾಡಿನತ್ತ ಬರಬಾರದೆಂದು ಕಾಡಿನಂಚಿನಲ್ಲಿ ಕಬ್ಬಿಣದ ಕಂಬಿಗಳನ್ನು ಅರಣ್ಯ ಇಲಾಖೆ ಅಳವಡಿಸಿತ್ತು. ಆದ್ರೆ ಜಿಲ್ಲೆಯ ಬಂಡೀಪುರ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಆನೆಯೊಂದು ಕಾಡಿನಿಂದ ಆಚೆ ಬರಲು ಪ್ರಯತ್ನಿಸಿ ಕಬ್ಬಿಣದ ಕಂಬಿಯಲ್ಲಿ ಸಿಲುಕೊಂಡಿದ್ದ ದೃಶ್ಯ ವೈರಲ್ ಆಗಿತ್ತು.

    ಇದನ್ನೂ ಓದಿ: ಬಂಡೀಪುರದಲ್ಲಿ ಕಬ್ಬಿಣದ ಕಂಬಿಗಳನ್ನು ದಾಟಿ ಆನೆ ನಾಡಿಗೆ ಬರೋದನ್ನು ನೋಡಿ

    ಆನೆ ಕಾಡಿನಿಂದ ಆಚೆ ಬರಲು ಪ್ರಯತ್ನಿಸಿ ಕಂಬಿಯ ಬೇಲಿಯ ಕೆಳಗೆ ಸಿಲುಕಿ ನರಳಾಡುತ್ತಿತ್ತು. ಈ ವೇಳೆ ಅರಣ್ಯದಲ್ಲಿ ಗಸ್ತು ತಿರುಗುತ್ತಿದ್ದ ಸಿಬ್ಬಂದಿ ಗಮನಿಸಿ ಆನೆಯನ್ನು ರಕ್ಷಣೆ ಮಾಡಿದ್ದಾರೆ.

    ಈ ವರ್ಷ ರಾಜ್ಯದಲ್ಲಿ ಭೀಕರ ಬರಗಾಲವಿದ್ದು, ಕಾಡು ಪ್ರಾಣಿಗಳು ಆಹಾರಕ್ಕಾಗಿ ನಾಡಿನತ್ತ ಪ್ರಯಾಣ ಬೆಳಸಿ ಜೀವವನ್ನು ಕಳೆದುಕೊಳ್ಳುತ್ತಿವೆ. ಆನೆಗಳು ನಾಡಿಗೆ ಬಾರದಂತೆ ಸೋಲಾರ್ ಬೇಲಿ, ಕಂದಕ, ಕಬ್ಬಿಣದ ಕಂಬಿಗಳನ್ನು ಅಳವಡಿಸಲಾಗಿದೆ. ಆದ್ರೆ ಆನೆಗಳು ಮಾತ್ರ ಇದ್ಯಾವುದನ್ನು ಲೆಕ್ಕಿಸದೆ ತಮ್ಮದೇ ಮತ್ತೊಂದು ದಾರಿಯನ್ನು ಹುಡುಕುತ್ತಿವೆ.

    ಇದನ್ನೂ ಓದಿ: ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿದ ಆನೆಯ ರಕ್ಷಣೆ

    https://youtu.be/KBbFW3WwKdw

    https://www.youtube.com/watch?v=wYq7yw565mk

     

  • ಬಂಡೀಪುರದಲ್ಲಿ ಕಬ್ಬಿಣದ ಕಂಬಿಗಳನ್ನು ದಾಟಿ ಆನೆ ನಾಡಿಗೆ ಬರೋದನ್ನು ನೋಡಿ

    ಬಂಡೀಪುರದಲ್ಲಿ ಕಬ್ಬಿಣದ ಕಂಬಿಗಳನ್ನು ದಾಟಿ ಆನೆ ನಾಡಿಗೆ ಬರೋದನ್ನು ನೋಡಿ

    ಚಾಮರಾಜನಗರ:ಆನೆ ನಡೆದದ್ದೆ ದಾರಿ ಅಂತ ಹೇಳ್ತಾರೆ. ಆ ಮಾತಿಗೆ ಪುಷ್ಟಿ ನೀಡುವಂತಹ ದೃಶ್ಯವೊಂದು ಕ್ಯಾಮೆರಾ ದಲ್ಲಿ ಸೆರೆಯಾಗಿದೆ

    ಹೌದು ಆನೆಗಳು ಆಹಾರ ಅರಸಿ ನಾಡಿನ ಕಡೆ ಬರುತ್ತಿರುವುದು ಇತ್ತೀಚಿನ ದಿನಗಳಲ್ಲಿ ಸಾಕಷ್ಟು ವರದಿಯಾಗುತ್ತಿದೆ. ಕಾಡಾನೆಗಳು ಆಹಾರ ಅರಸಿ ನಾಡಿನತ್ತ ಬರುವುದನ್ನು ತಪ್ಪಿಸಲು ಬಂಡೀಪುರ ರಾಷ್ಟ್ರೀಯ ಉದ್ಯಾನವನ ಮತ್ತು ನಾಗರಹೊಳೆ ವ್ಯಾಪ್ತಿಯಲ್ಲಿ ಕಾಡಂಚಿನಲ್ಲಿ ರೈಲ್ವೇ ಕಂಬಿಗಳನ್ನು ಅಳವಡಿಸಲಾಗಿದೆ. ಆದರೆ ಆನೆಗಳು ಮಾತ್ರ ಕಬ್ಬಿಣದ ಕಂಬಿಯನ್ನು ದಾಟಿ ನಾಡಿನ ಕಡೆ ಧಾವಿಸಿ ಬರುತ್ತಿವೆ.

    ಬಂಡೀಪುರದ ಒಂದು ದೃಶ್ಯದಲ್ಲಿ ಆನೆ ರೈಲ್ವೆ ಕಂಬಿಯನ್ನು ದಾಟಲು ಶತ ಪ್ರಯತ್ನ ನಡೆಸುತ್ತಿರುವ ದೃಶ್ಯ ಸೆರೆಯಾಗಿದ್ದರೆ, ಮತ್ತೊಂದು ಚಿತ್ರಗಳಲ್ಲಿ ಆನೆ ರೈಲು ಕಂಬಿಗಳನ್ನು ಸುಲಭವಾಗಿ ದಾಟಿ ನಾಡಿನ ಕಡೆ ಬಂದಿರುವ ದೃಶ್ಯ ಸೆರೆಯಾಗಿದೆ.

     

    https://www.youtube.com/watch?v=wYq7yw565mk