Tag: Bangalore riots

  • ಎಸ್‍ಡಿಪಿಐ, ಪಿಎಫ್‍ಐ ಕಚೇರಿಗಳು ಸೇರಿದಂತೆ 43 ಕಡೆ ಎನ್‍ಐಎ ದಾಳಿ

    ಎಸ್‍ಡಿಪಿಐ, ಪಿಎಫ್‍ಐ ಕಚೇರಿಗಳು ಸೇರಿದಂತೆ 43 ಕಡೆ ಎನ್‍ಐಎ ದಾಳಿ

    ಬೆಂಗಳೂರು: ಡಿಜೆ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಎಸ್‍ಡಿಪಿಐ, ಪಿಎಫ್‍ಐ ಕಚೇರಿಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ದಾಳಿ ನಡೆಸಿದೆ.

    ನಾಲ್ಕು ಎಸ್‍ಡಿಪಿಐ ಕಚೇರಿ ಮತ್ತು ಪಿಎಫ್‍ಐ ಕಚೇರಿ ಸೇರಿದಂತೆ ಬೆಂಗಳೂರು ನಗರದ 43 ಕಡೆ ಎನ್‍ಐಎ ದಾಳಿ ನಡೆಸಿದೆ. ದಾಳಿ ವೇಳೆ ಎಸ್‍ಡಿಪಿಐ ಮತ್ತು ಪಿಎಫ್‍ಐ ಗೆ ಸೇರಿದ ವಸ್ತುಗಳು ವಶಕ್ಕೆ ಪಡೆಯಲಾಗಿದೆ. ದಾಳಿಯ ಕೆಲ ಸ್ಥಳಗಳಲ್ಲಿ ಚಾಕು, ಕಬ್ಬಿಣದ ರಾಡ್ ಸೇರಿದಂತೆ ಹಲವು ಆಯುಧಗಳನ್ನ ತನಿಖಾ ಸಂಸ್ಥೆ ವಶಕ್ಕೆ ಪಡೆದು ಎಂದು ತಿಳಿದು ಬಂದಿದೆ.

    ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ವ್ಯಾಪ್ತಿಯಲ್ಲಿ ಭಯದ ವಾತಾವರಣ ಉಂಟು ಮಾಡುವ ಉದ್ದೇಶದಿಂದ ಗಲಭೆಕೋರರು ಗಲಾಟೆ ಆರಂಭಿಸಿದ್ದರು. ಮಾರಾಕಸ್ತ್ರಗಳ ಮೂಲಕ ಪೊಲೀಸರು, ಸಾರ್ವಜನಿಕ ಆಸ್ತಿ ಪಾಸ್ತಿ, ಖಾಸಗಿ ಆಸ್ತಿ ಪಾಸ್ತಿ, ವಾಹನಗಳು, ಎರಡು ಪೊಲೀಸ್ ಠಾಣೆಗಳ ಮೇಲೆ ದಾಳಿ ನಡೆಸಿದ್ದರು. ಇದೇ ಗಲಭೆಯಲ್ಲಿ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೂ ಬೆಂಕಿ ಇಡಲಾಗಿತ್ತು. ಗಲಭೆ ಪ್ರಕರಣದ 52ನೇ ಆರೋಪಿ ಸಂಪತ್ ರಾಜ್ ನನ್ನು ಸೋಮವಾರ ರಾತ್ರಿ ಸಿಸಿಬಿ ಪೊಲೀಸರು ಬಂಧಿಸಿ ತಮ್ಮ ವಶಕ್ಕೆ ಪಡೆದುಕೊಂಡು ಡ್ರಿಲ್ ನಡೆಸುತ್ತಿದ್ದಾರೆ.

  • ಗಲಭೆಕೋರರು 1 ಸಾವಿರ ಕಿಮೀ ದೂರ ಹೋದ್ರೂ ಬಂಧಿಸುತ್ತೇವೆ: ಪ್ರವೀಣ್ ಸೂದ್

    ಗಲಭೆಕೋರರು 1 ಸಾವಿರ ಕಿಮೀ ದೂರ ಹೋದ್ರೂ ಬಂಧಿಸುತ್ತೇವೆ: ಪ್ರವೀಣ್ ಸೂದ್

    ಕೋಲಾರ: ಬೆಂಗಳೂರಿನ ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಗಲಭೆ ಪ್ರಕರಣಗಳಲ್ಲಿ ಭಾಗಿಯಾದವರು ಎಷ್ಟೇ ದೂರ ಹೋದರು ಸಹ ಅವರಿಗೆ ಶಿಕ್ಷೆ ನೀಡಲಾಗುವುದು ಎಂದು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದ್ದಾರೆ.

    ಕೋಲಾರಕ್ಕೆ ಭೇಟಿ ನೀಡಿ ನಗರದ ಹೊರ ವಲಯದ ಟಮಕ ಬಳಿಯ ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿಯಲ್ಲಿ ಗಲಭೆ ಮಾಡಿ ನಂತರ ಕೋಲಾರಕ್ಕೆ ಬಂದಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ನಿಮ್ಮ ಕೋಲಾರವೇ ಅಲ್ಲ 1 ಸಾವಿರ ಕಿಮೀ ಹೋಗಿದ್ದರೂ ಸಹ ಅವರನ್ನು ಬಂಧಿಸಲಾಗುವುದು ಎಂದು ಹೇಳಿದರು.

    ಅಂದು ರಾತ್ರಿ ಗಲಭೆಯಲ್ಲಿ ತೊಡಗಿದವರ ಬಗ್ಗೆ ಪೊಲೀಸ್ ಇಲಾಖೆ ಗಂಭೀರವಾಗಿ ತನಿಖೆ ನಡೆಸುತ್ತಿದೆ. ಪ್ರಕರಣದಲ್ಲಿ ಭಾಗಿಯಾದವರು ಕೋಲಾರದಲ್ಲಿ ತಲೆ ಮರೆಸಿಕೊಂಡಿರುವ ಕುರಿತು ವರದಿಗಳು ಬಂದಿವೆ. ಕೋಲಾರ ಅಲ್ಲ ರಾಜ್ಯದ ಯಾವುದೇ ಮೂಲೆಗೆ ಹೋದರೂ ಸಹ ಬಿಡುವುದಿಲ್ಲ. ಅವರನ್ನು ಬಂಧಿಸಲಾಗುವುದು ಎಂದರು. ಕೋಲಾರ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಲಾಗುವುದು, ಈಗಾಗಲೇ ಪೊಲೀಸ್ ಪೇದೆ ಹಾಗೂ ಪಿಎಸ್‍ಐ ಹುದ್ದೆಗೆ ನೇಮಕಾತಿ ನಡೆಯುತ್ತಿದ್ದು, ಮುಂದಿನ ತಿಂಗಳು ಪರೀಕ್ಷೆ ನಡೆಯುತ್ತದೆ ಎಂದು ತಿಳಿಸಿದರು.

    ನರಸಾಪುರ ಸೇರಿದಂತೆ ಕೋಲಾರ ಜಿಲ್ಲೆಯ ಕೆಲ ಪೊಲೀಸ್ ಠಾಣೆಗಳನ್ನು ಮೇಲ್ದರ್ಜೆಗೆ ಏರಿಸಲು ಚಿಂತನೆ ನಡೆಯುತ್ತಿದೆ. ರಾಜ್ಯದಲ್ಲಿ ಕೋವಿಡ್ ಆರಂಭ ನಂತರ ಪೊಲೀಸ್ ಸಿಬ್ಬಂದಿ ಸಾಕಷ್ಟು ಶ್ರಮವಹಿಸಿದೆ ಜೊತೆಗೆ ಕೆಲವರು ಪ್ರಾಣಗಳನ್ನು ಕಳೆದುಕೊಂಡಿದ್ದಾರೆ. ಅವರಿಗೆ ಪೊಲೀಸ್ ಇಲಾಖೆ ಕೃತಜ್ಞತೆ ತಿಳಿಸುತ್ತೇವೆ ಎಂದರು. ಇದೆ ವೇಳೆ ಕೇಂದ್ರ ವಲಯದ ಐಜಿ ಸೀಮಂತ್ ಕುಮಾರ್ ಸಿಂಗ್, ಕೋಲಾರ ಎಸ್‍ಪಿ ಕಾರ್ತಿಕ್ ರೆಡ್ಡಿ, ಕೆಜಿಎಫ್ ಎಸ್‍ಪಿ ಇಲಕ್ಕೀಯಾ ಕರುಣಾಗರನ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

  • ಬೆಂಗ್ಳೂರು ಗಲಭೆ ವೇಳೆ ಸಿಕ್ಕ ಓರ್ವ ಆರೋಪಿಗೆ ಐಸಿಸ್ ನಂಟಿದೆ: ಮುತಾಲಿಕ್

    ಬೆಂಗ್ಳೂರು ಗಲಭೆ ವೇಳೆ ಸಿಕ್ಕ ಓರ್ವ ಆರೋಪಿಗೆ ಐಸಿಸ್ ನಂಟಿದೆ: ಮುತಾಲಿಕ್

    – ಸೂಕ್ತ ತನಿಖೆಯಾಗಬೇಕು

    ಧಾರವಾಡ: ಬೆಂಗಳೂರು ಗಲಾಟೆಯ ಆರೋಪಿಯೋರ್ವನಿಗೆ ಐಸಿಸ್ ನಂಟಿರುವ ವಿಚಾರಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಸಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ ಆಗ್ರಹಿಸಿದ್ದಾರೆ.

    ಧಾರವಾಡದಲ್ಲಿ ಈ ಸಂಬಂಧ ಪತ್ರಿಕ್ರಿಯೆ ನೀಡಿರುವ ಅವರು, ಬೆಂಗಳೂರು ಗಲಭೆಯ ಆರೋಪಿಯೊಬ್ಬನಿಗೆ ಐಸಿಸ್ ನಂಟು ಇರುವುದು ಬೆಳಕಿಗೆ ಬಂದಿದೆ. ಇದರ ಬಗ್ಗೆ ಇನ್ನೂ ಹೆಚ್ಚಿನ ತನಿಖೆಯಾಗಬೇಕಿದೆ. ಈ ರೀತಿಯ ಗಲಾಟೆಯ ಸಾಕಷ್ಟು ಪ್ರಕ್ರಿಯೆಗಳು ನಮ್ಮ ಕರ್ನಾಟಕದಲ್ಲಿ ಆಗಿವೆ. ಈಗ ಅದೆನ್ನೆಲ್ಲವನ್ನೂ ಶೋಧನೆ ಮಾಡಬೇಕು ಎಂದರು.

    ಬೆಂಗಳೂರಿನಲ್ಲಿ ಗಲಾಟೆಗಳು ನಡೆದ ಬಳಿಕ ಮಾತ್ರವೇ ಸರ್ಕಾರ, ಪೊಲೀಸರು ಮತ್ತು ಗುಪ್ತಚರ ಇಲಾಖೆ ಜಾಗೃತ ಆಗುತ್ತದೆ. ಆದರೆ ನಿತ್ಯ 24 ಗಂಟೆಯೂ ಸರ್ಕಾರ, ಪೊಲೀಸರು ಮತ್ತು ಗುಪ್ತಚರ ಇಲಾಖೆ ಕಣ್ಣು, ಕಿವಿ ತೆರೆದು ಕೆಲಸ ಮಾಡಬೇಕಿದೆ. ಇಂಥಹ ಧಂಗೆಕೋರರನ್ನು ಹದ್ದುಬಸ್ತಿನಲ್ಲಿಡಬೇಕಿದೆ. ಇಲ್ಲದೇ ಹೋದಲ್ಲಿ ಮುಂದೆ ಅನಾಹುತಗಳು ತಪ್ಪಿದ್ದಲ್ಲ ಎಂದು ಹೇಳಿದ್ದಾರೆ.

  • ಬೆಂಗಳೂರು ಗಲಭೆ – ಇಬ್ಬರು ಕಾಂಗ್ರೆಸ್ ಕಾರ್ಪೋರೇಟರ್​ಗಳಿಗೆ ನೋಟಿಸ್

    ಬೆಂಗಳೂರು ಗಲಭೆ – ಇಬ್ಬರು ಕಾಂಗ್ರೆಸ್ ಕಾರ್ಪೋರೇಟರ್​ಗಳಿಗೆ ನೋಟಿಸ್

    – ಮಾಜಿ ಮೇಯರ್ ಆಪ್ತ ವಶಕ್ಕೆ
    – ಮಧ್ಯರಾತ್ರಿ ಮತ್ತೆ 30 ಮಂದಿ ಬಂಧನ

    ಬೆಂಗಳೂರು: ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಕಾಂಗ್ರೆಸ್ ಕಾರ್ಪೋರೇಟರ್ ಗಳಿಗೆ ನೋಟಿಸ್ ನೀಡಿದ್ದಾರೆ. ಮಾಜಿ ಮೇಯರ್ ಸಂಪತ್‍ರಾಜ್ ಮತ್ತು ಪುಲಕೇಶಿನಗರ ಕಾರ್ಪೋರೇಟರ್ ಅಬ್ದುಲ್ ರಕೀಬ್ ಝಾಕೀರ್ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

    ಶಾಸಕ ಅಖಂಡ ಶ್ರೀನಿವಾಸ್‍ಮೂರ್ತಿ ಮನೆ ಮೇಲಿನ ದಾಳಿ, ಡಿ ಜೆ ಹಳ್ಳಿ, ಕೆಜಿಹಳ್ಳಿ ಮತ್ತು ಕಾವಲ್‍ಬೈರಸಂದ್ರದಲ್ಲಿ ನಡೆದಿದ್ದ ದಳ್ಳುರಿ ಹಿಂದೆ ರಾಜಕೀಯ ದ್ವೇಷದ ಕಾರಣವಿದೆ ಎಂಬ ಕಾರಣಕ್ಕಾಗಿ ಇಬ್ಬರು ಕಾಂಗ್ರೆಸ್ ಪಾಲಿಕೆ ಸದಸ್ಯರನ್ನ ವಿಚಾರಣೆಗೆ ಕರೆಯಲಾಗಿದೆ. ಗಲಭೆ ಸಂಬಂಧ ಸಂಪತ್‍ರಾಜ್ ಆಪ್ತ ಅರುಣ್ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅರುಣ್ ಬಳಿ ಇದ್ದ ಮೊಬೈಲ್‍ನ್ನು ಸಂಪತ್‍ರಾಜ್ ಬಳಸುತ್ತಿದ್ದರು ಮತ್ತು ಆ ಮೊಬೈಲ್‍ನಲ್ಲಿ ಗಲಭೆಗೆ ಸಂಬಂಧಿಸಿದ ಮಹತ್ವದ ಸಾಕ್ಷ್ಯಗಳಿರಬಹುದು ಎಂಬ ಶಂಕೆಯಿಂದ ಖಾಕಿಗಳು ವಶಕ್ಕೆ ಪಡೆದಿದ್ದಾರೆ. ಮೊಬೈಲ್‍ನಲ್ಲಿರುವ ಮಾಹಿತಿಗಳನ್ನು ಪೊಲೀಸರು ಕಲೆ ಹಾಕಿದ್ದು ಅದರಲ್ಲಿನ ಸಾಕ್ಷ್ಯಗಳನ್ನ ಆಧರಿಸಿ ಕಾರ್ಪೋರೇಟರ್ ಗಳ ವಿಚಾರಣೆ ನಡೆಸಲಿದ್ದಾರೆ. ಇದನ್ನೂ ಓದಿ: ಬೆಂಗಳೂರು ಗಲಭೆ ಹಿಂದೆ ಉಗ್ರ ಸಂಘಟನೆಯ ನಂಟು – ಏನಿದು ಅಲ್ ಹಿಂದ್?

    ಅವಹೇಳನಕಾರಿ ಪೋಸ್ಟ್ ಹಾಕಿದ್ದ ನವೀನ್ ವಿರುದ್ಧ ದೂರು ನೀಡಿದ್ದ ಫಿದೋಸ್ ಪಾಷಾ ಅನ್ನೋರ ಸ್ಕೂಟರ್‍ಗೂ ಡಿಜೆ ಹಳ್ಳಿ ಠಾಣೆ ಎದುರು ಬೆಂಕಿ ಹಚ್ಚಲಾಗಿತ್ತು. ದಂಗೆ ಸಂಬಂಧ ಮಧ್ಯರಾತ್ರಿ ಮತ್ತೆ 30 ಮಂದಿಯನ್ನು ಡಿಜೆ ಹಳ್ಳಿ ಮತ್ತು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಗಲಭೆಯಲ್ಲಿ ಬಂಧಿತರಾದವರ ಸಂಖ್ಯೆ 380ಕ್ಕೆ ಏರಿಕೆ ಆಗಿದೆ. ಇದನ್ನೂ ಓದಿ: ಕೊತ್ತಂಬರಿ, ಕರಿಬೇವಿನ ಸೊಪ್ಪು ತರೋಕೆ ಹೋದವ್ರ ಲಿಸ್ಟ್ ಇದೆ: ಅಶೋಕ್

  • ಡಿಜೆ ಹಳ್ಳಿ ಗಲಭೆ ಹಿಂದೆ ಲೋಕಲ್ ಪಾಲಿಟಿಕ್ಸ್

    ಡಿಜೆ ಹಳ್ಳಿ ಗಲಭೆ ಹಿಂದೆ ಲೋಕಲ್ ಪಾಲಿಟಿಕ್ಸ್

    ಬೆಂಗಳೂರು: ಡಿಜೆ ಹಳ್ಳಿ ಗಲಭೆ ಹಿಂದೆ ಇರೋದು ಲೋಕಲ್ ಪಾಲಿಟಿಕ್ಸ್ ಅನ್ನೋದು ಮತ್ತೆ ಮತ್ತೆ ಸ್ಪಷ್ಟವಾಗ್ತಿದೆ. ಅಖಂಡ ಶ್ರೀನಿವಾಸಮೂರ್ತಿ ವಿರುದ್ಧ ಅವರ ವಿರೋಧಿಗಳೆಲ್ಲಾ ಸೇರಿ ಪಿತೂರಿ ನಡೆಸಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸುತ್ತಿದ್ದಾರೆ. ಅಖಂಡ ಶ್ರೀನಿವಾಸಮೂರ್ತಿಯವರ ಕೈಯಲ್ಲಿರುವ ಪುಲಕೇಶಿ ಪಟ್ಟಕ್ಕಾಗಿ ಕೇವಲ ಕಾಂಗ್ರೆಸ್‍ನ ಮಾಜಿ ಮೇಯರ್ ಮಾತ್ರ ಫೈಟ್ ನಡೆಸುತ್ತಿರಲಿಲ್ಲ. ಎಸ್‍ಡಿಪಿಐ, ಜೆಡಿಎಸ್‍ನ ಲೋಕಲ್ ನಾಯಕರು ಕೂಡ ಮಸಲತ್ತು ನಡೆಸ್ತಿದ್ದರು ಎಂಬ ಮಾತು ಕೇಳಿಬರುತ್ತಿದೆ.

    ಬಿಜೆಪಿಯೇತರರು ಸುಲಭವಾಗಿ ಗೆಲ್ಲುವ ಕ್ಷೇತ್ರಗಳ ಪೈಕಿ ಒಂದಾದ ಪುಲಕೇಶಿ ನಗರದ ಮೇಲೆ ಕಣ್ಣಾಕಿದ್ದ ಮಾಜಿ ಮೇಯರ್ ಸಂಪತ್‍ರಾಜ್, ತಮ್ಮ ವ್ಯಾಪ್ತಿಗೆ ಬಾರದ ವಾರ್ಡ್ ನಲ್ಲೂ ಹೋಗಿ ರೇಷನ್ ಹಂಚಿಕೆ ಮಾಡಿದ್ರು. ಈ ವಿಚಾರದಲ್ಲಿ ಅಖಂಡ ಮತ್ತು ಸಂಪತ್‍ರಾಜ್ ನಡುವೆ ಗಲಾಟೆ ಆಗಿ, ಪ್ರಕರಣ ಸ್ಟೇಷನ್ ಮೆಟ್ಟಿಲು ಹತ್ತಿತ್ತು. ಆಗ ನೋಡು, ಮುಂದಿನ ಚುನಾವಣೆಯಲ್ಲಿ ನಾನೇ ಕಾಂಗ್ರೆಸ್ ಟಿಕೆಟ್ ತರ್ತೀನಿ ನೋಡ್ತಿರು ಎಂದು ಸವಾಲು ಹಾಕಿದ್ರಂತೆ. ಅಲ್ಲಿಂದ ಶುರುವಾದ ಇಬ್ಬರ ನಡುವಿನ ಕದನ ಇನ್ನೂ ನಿಂತಿಲ್ಲ ಎನ್ನಲಾಗಿದೆ.

    ಗಲಭೆಯಲ್ಲಿ ಮೂವರು ಕಾರ್ಪೋರೇಟತಗ ಗಳ ಪಾತ್ರ ಇರೋ ಬಗ್ಗೆ ಸನ್ಮಾನ್ಯ ಮಂತ್ರಿಗಳೊಬ್ಬರಿಗೆ ಅಖಂಡ ಶ್ರೀನಿವಾಸಮೂರ್ತಿ ದೂರು ನೀಡಿದ್ದರು. ಸದ್ಯ ರಾಜಕೀಯ ಒಳಸಂಚಿನ ಬಗ್ಗೆ ಮಾಹಿತಿ ಕಲೆ ಹಾಕ್ತಿರೋ ಸಿಸಿಬಿ, ಮಾಜಿ ಮೇಯರ್ ಸಂಪತ್‍ರಾಜ್‍ಗೆ ನೊಟೀಸ್ ಕೊಡಲು ತಯಾರಿ ನಡೆಸಿದೆ. 2 ತಿಂಗಳ ಹಿಂದೆ ಅಖಂಡ ಮಿಸ್ಸಿಂಗ್ ಎಂದು ಸೋಷಿಯಲ್ ಮೀಡಿಯಾದಲ್ಲಿ ಜೆಡಿಎಸ್‍ನ ವಾಜೀದ್ ಪಾಷಾ ಪೋಸ್ಟ್ ಮಾಡಿದ್ದ. ಇದನ್ನು ಖಂಡಿಸಿ ಅಖಂಡ ಕಡೆಯವರು ದೂರು ನೀಡಿದ್ದರು. ಪೊಲೀಸ್ರು ವಿಚಾರಣೆಗೆ ಇಳಿದ ಕೂಡಲೇ ವಾಜೀದ್ ಕ್ಷಮೆಯಾಚಿಸಿದ್ದರು. ನಂತರ ಪೊಲೀಸರು ಅಖಂಡ ಮತ್ತು ವಾಜೀದ್‍ರನ್ನು ಕರೆಯಿಸಿ ಸಂಧಾನ ಮಾಡಿದ್ದರು.

    ಈ ಶೀತಲ ಸಮರ ಇದು ಇಲ್ಲಿಗೆ ನಿಲ್ಲಲಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ಪರಸ್ಪರ ಆರೋಪ-ಪ್ರತ್ಯಾರೋಪ ಹೆಚ್ಚಾಗಿತ್ತು. ನವೀನ್ ಅರೆಸ್ಟ್ ವೇಳೆ ಠಾಣೆಗೆ ಬಂದಿದ್ದ ವಾಜೀದ್, ಇದೀಗ ಎಸ್ಕೇಪ್ ಆಗಿದ್ದಾನೆ. ಇನ್ನು ಗಲಭೆಯಲ್ಲಿ ಪುಲಕೇಶಿನಗರ ವಾರ್ಡ್ ಕಾರ್ಪೋರೇಟರ್ ಜಾಕೀರ್ ಪಾತ್ರ ಸಹ ಇರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಈತನ ಬಂಧನಕ್ಕೂ ಪೊಲೀಸರು ಬಲೆ ಬೀಸಿದ್ದಾರೆ ಎನ್ನಲಾಗಿದೆ.

  • ಸಿದ್ದರಾಮಯ್ಯ, ಡಿಕೆಶಿ ದಲಿತ ಪರವೋ ಇಲ್ಲ ಭಯೋತ್ಪಾದಕರ ಪರವೋ: ಕಟೀಲ್ ಪ್ರಶ್ನೆ

    ಸಿದ್ದರಾಮಯ್ಯ, ಡಿಕೆಶಿ ದಲಿತ ಪರವೋ ಇಲ್ಲ ಭಯೋತ್ಪಾದಕರ ಪರವೋ: ಕಟೀಲ್ ಪ್ರಶ್ನೆ

    ಕೊಪ್ಪಳ: ಬೆಂಗಳೂರು ಗಲಭೆ ಪೂರ್ವ ಯೋಜಿತ ಕೃತ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್ ಹೇಳಿದ್ದಾರೆ.

    ಕೊಪ್ಪಳದಲ್ಲಿ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಪೋಸ್ಟ್ ಮಾಡಿದ್ದಕ್ಕೆ ನನ್ನ ವಿರೋಧ ಇದೆ. ಪೋಸ್ಟ್ ಹಾಕಿದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುತ್ತದೆ. ಆದರೆ ಪೋಸ್ಟ್ ನೆಪದ ಹಿನ್ನೆಲೆಯಲ್ಲಿ ಗಲಭೆ ಮಾಡಿದ್ದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದ ಕಟೀಲ್, ಏಕಾಏಕಿ ಜನರು ಹೇಗೆ ಸೇರಿದರು, ಪೆಟ್ರೋಲ್ ಬಾಂಬ್‍ಗಳು, ಕಲ್ಲುಗಳು ಎಲ್ಲಿಂದ ಬಂದವು ಎಂದರು.

    ಈ ಗಲಭೆಯಲ್ಲಿ ಎಸ್‍ಡಿಪಿಐ, ಕೆಎಫ್‍ಡಿ ಸಂಘಟನೆಯ ಕೈವಾಡ ಇದೆ ಎನ್ನುವ ಮಾತುಗಳಿದ್ದು, ಇವುಗಳನ್ನು ನಿಷೇಧ ಮಾಡಬೇಕು. ಜೊತೆಗೆ ಇದರ ಹಿಂದೆ ಯಾರ್ಯಾರು ಇದ್ದಾರೆ ತನಿಖೆ ಆಗಬೇಕೆಂದರು. ಬೆಂಗಳೂರು ಗಲಭೆ ಪ್ರಕರಣದಲ್ಲಿ ಸರ್ಕಾರ ದೃಢವಾದ ನಿರ್ಧಾರ ತೆಗೆದುಕೊಂಡಿದ್ದು, ಸರಕಾರಕ್ಕೆ, ಸಿಎಂ, ಗೃಹ ಸಚಿವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

    ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಟ್ವೀಟ್‍ನಲ್ಲಿ ಹಿಂದೂಗಳ ಕುರಿತು ಪ್ರಸ್ತಾಪಿಸಿದ ಕುರಿತು ಪ್ರತಿಕ್ರಿಯಿಸಿದ ಕಟೀಲ್, ಸಿದ್ದರಾಮಣ್ಣನಿಂದ ಹೆಚ್ಚು ನೀರಿಕ್ಷೆ ಮಾಡಲು ಆಗಲ್ಲ. ಸಿದ್ದರಾಮಯ್ಯ ಈ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಮಾತ್ರ ಇದ್ದರು. ಆದರೆ ಮುಖ್ಯಮಂತ್ರಿವಾಗಿ ವರ್ತನೆ ಮಾಡಲಿಲ್ಲ. ಅಧಿಕಾರದಲ್ಲಿ ಇದ್ದಾಗ ಗಲಭೆಗಳು ಆದಾಗ ಕಠಿಣ ಕ್ರಮ ತೆಗೆದುಕೊಂಡಿದ್ದರೆ ಇವತ್ತು ಇದು ನಡೆಯುತ್ತಿರಲಿಲ್ಲ. 21 ಹಿಂದೂ ಕಾರ್ಯಕರ್ತರ ಹತ್ಯೆ ಆದಾಗ ಕ್ರಮ ತಗೆದುಕೊಳ್ಳಲಿಲ್ಲ. ಎಸ್‍ಡಿಪಿಐ, ಸಿಮಿ ಸಂಘಟನೆಯವರ ಮೇಲಿನ ಕೇಸ್ ಗಳಿಗೆ ಬಿ ರಿಪೋರ್ಟ್ ಹಾಕಿದರು. ಇದರಿಂದ ಅವರಿಗೆ ಧೈರ್ಯ ಬಂತು, ಆ ಧೈರ್ಯವೇ ಇವತ್ತು ಇದನ್ನು ಮಾಡಿಸುತ್ತಿದೆ ಎಂದು ಗುಡುಗಿದರು.

    ಈ ವಿಚಾರದಲ್ಲಿ ಸಿದ್ದರಾಮಯ್ಯ ಮೌನವಾಗಿರಬೇಕಾಗಿದೆ. ಇದರ ಹಿಂದೆ ಅವರದ್ದೆ ಶಕ್ತಿ ಇದೆ. ಈ ಘಟನೆಗೆ ಸಿದ್ದರಾಮಯ್ಯ ನೇರ ಕಾರಣ ಎಂದು ನಾನು ಹೇಳಲ್ಲ. ಆದರೆ ಸಿದ್ದರಾಮಯ್ಯ ಸರಿಯಾಗಿ ಆಡಳಿತ ನೀಡದಿರುವುದು, ಅಂದು ಕಠಿಣ ಕ್ರಮ ತೆಗೆದು ಕೊಳ್ಳದಿರುವುದು, ಈ ಜನರಿಗೆ ಧೈರ್ಯ ಬಂದಿದೆ. ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಮತಕ್ಕಾಗಿ ಓಲೈಕೆ ರಾಜಕಾರಣ ಮಾಡಿದ್ದು, ಪಾದರಾಯನಪುರ ಗಲಭೆ ಆದಾಗ ಜಮೀರ್ ಅಹಮ್ಮದ್ ಮೆರವಣಿಗೆ ಮಾಡಿದರು. ಡಿಜೆ ಹಳ್ಳಿ ಗಲಭೆಯಲ್ಲಿ ಸತ್ತವರನ್ನು ಅಮಾಯಕರು ಅಂತಾರೆ ಎಂದು ಆರೋಪಿಸಿದರು.

    ಡಿ ಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರು, ನವೀನ್ ಯಾವ ಪಾರ್ಟಿ ಎಂದು ಪ್ರಶ್ನಿಸಿದ ನಳಿನ್ ಕುಮಾರ್, ನವೀನ್ ಕಾಂಗ್ರೆಸ್ ಪಕ್ಷದವನು ಎನ್ನುವುದಕ್ಕೆ ನಮ್ಮ ಬಳಿ ಪೂರ್ತಿಯಾದ ದಾಖಲೆಗಳಿದ್ದು, ಪೊಲೀಸ್ ಠಾಣೆ, ವಾಹನಗಳಿಗೆ ಬೆಂಕಿ ಹಾಕಿದವರು ಯಾರು? ಸಾರ್ವಜನಿಕರಿಗೆ ಭಯ ಸೃಷ್ಟಿಸಿದವರು ಏನೆಂದರು. ಮಾಧ್ಯಮದವರ ಮೇಲೆ ಹಲ್ಲೆ ಮಾಡಿದ್ದು, ಭಯವನ್ನು ಸೃಷ್ಟಿ ಮಾಡುವವನು ಭಯೋತ್ಪಾದಕ, ಭಯೋತ್ಪಾದಕರಿಗೆ ಬೆಂಗಾವಲಾಗಿ ನಿಲ್ಲುತ್ತಾರೆ ಎಂದು ಕಾಂಗ್ರೆಸ್ ಪ್ರಶ್ನಿಸಿದ ಕಟೀಲ್, ಶಾಸಕರು ದಲಿತ ಸಮುದಾಯಕ್ಕೆ ಸೇರಿದವರು, ನೀವು ದಲಿತರ ಪರವಾ ಅಥವಾ ಭಯೋತ್ಪಾದಕರ ಪರವಾ ಎನ್ನುವುದಕ್ಕೆ ಸಿದ್ದರಾಮಯ್ಯ, ಡಿಕೆಶಿ ಉತ್ತರಿಸಬೇಕೆಂದರು.

    ಸತ್ತವರನ್ನು, ಗಲಭೆ ಮಾಡಿದವರನ್ನು ಅಮಾಯಕರು ಅಂತ ಯಾಕೆ ಹೇಳ್ತೀರಾ? ಯಾವುದೇ ಸಮಾಜಕ್ಕೆ, ದೇವರ ನಂಬಿಕೆಗಳಿಗೆ ನೋವು ಮಾಡುವುದು ಧರ್ಮವಲ್ಲ. ಆರೋಪಿ ಖಲೀಂ ರಕ್ಷಣೆಗೆ ಮಾಜಿ ಸಚಿವ ಕೆಜೆ ಜಾರ್ಜ ನಿಂತಿದ್ದಾರೆ ಎನ್ನುವ ಆರೋಪದ ಕುರಿತು ಪ್ರತಿಕ್ರಿಯಿಸಿದ ಕಟೀಲ್, ಯಾರು ಆರೋಪಿಗಳ ರಕ್ಷಣೆಗೆ ನಿಂತಿದ್ದಾರೆ ಅವರನ್ನು ಉಚ್ಚಾಟನೆ ಮಾಡಬೇಕು ಜೊತೆಗೆ ಎಷ್ಟೇ ದೊಡ್ಡ ಶಕ್ತಿಗಳು ಇದ್ದರೂ ಅವರನ್ನು ಬಂಧಿಸಬೇಕೆಂದು ಕಟೀಲ್ ಒತ್ತಾಯಿಸಿದರು.