Tag: Bangalore. Siddaramaiah

  • ವೀಡಿಯೋ ಹಲವು ಬಾರಿ ಫಾರ್ವರ್ಡ್ ಆಗಿದೆ: ಯಶ್‍ಪಾಲ್ ಸುವರ್ಣ ಹೊಸ ಬಾಂಬ್

    ವೀಡಿಯೋ ಹಲವು ಬಾರಿ ಫಾರ್ವರ್ಡ್ ಆಗಿದೆ: ಯಶ್‍ಪಾಲ್ ಸುವರ್ಣ ಹೊಸ ಬಾಂಬ್

    – ಉಡುಪಿಯ ಬಿಜೆಪಿ ಕಚೇರಿಯಿಂದ ಎಸ್‍ಪಿ ಕಚೇರಿ ವರೆಗೆ ಜಾಥಾ

    ಉಡುಪಿ: ನಗರದ ಖಾಸಗಿ ಕಾಲೇಜಿನ (BJP) ಟಾಯ್ಲೆಟ್‍ನಲ್ಲಿ ವಿದ್ಯಾರ್ಥಿನಿಯರ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಯಶ್‍ಪಾಲ್ ಸುವರ್ಣ (Yashpal Suvarna) ಹೊಸ ಬಾಂಬ್ ಸಿಡಿಸಿದ್ದಾರೆ.

    ಕಾಪು ಮೂಲದ ಜಿಹಾದಿ ಮಹಿಳೆ ಸಂಘಟನೆ ಪ್ರಾರಂಭವಾಗಿದೆ. ಚಿತ್ರೀಕರಣಗೊಂಡ ವೀಡಿಯೋ ಹಲವು ಬಾರಿ ಫಾರ್ವರ್ಡ್ ಆಗಿದೆ. ಇದಕ್ಕೆ ನನ್ನ ಬಳಿ ಸಾಕ್ಷಿ ಇದೆ. ಈ ಪ್ರಕರಣದ ಹಿಂದೆ ದೊಡ್ಡ ಷಡ್ಯಂತ್ರ ಇದೆ. ವೀಡಿಯೋ ಮಾಡಿರುವ ವಿದ್ಯಾರ್ಥಿನಿ ಬಳಿ ಮೂರು ಮೊಬೈಲ್‍ಗಳಿವೆ ಎಂಬ ಮಾಹಿತಿ ಇದೆ. ಆ ವಿದ್ಯಾರ್ಥಿಗಳ ಹಿಂದೆ ಯಾರು ಇದ್ದಾರೆ ಎಂಬುದು ತನಿಖೆಯಾಗಬೇಕು ಎಂದು ಯಶ್‍ಪಾಲ್ ಸುವರ್ಣ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಬುರ್ಖಾ ಧರಿಸದಿದ್ದಕ್ಕೆ ಮುಸ್ಲಿಂ ವಿದ್ಯಾರ್ಥಿನಿಯರನ್ನ ಬಸ್ ಹತ್ತಲು ಬಿಡದ ಡ್ರೈವರ್ ಅಮಾನತು

    ಒಂದು ವಿದ್ಯಾರ್ಥಿನಿ ಟಾಯ್ಲೆಟ್‍ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ ಮಾಡುವುದು ಅಷ್ಟು ಸುಲಭದ ವಿಚಾರವಲ್ಲ. ನಾಳೆ ಆ ವಿದ್ಯಾರ್ಥಿನಿ ಯಾರೇ ಬಾಂಬ್ ಕೊಟ್ಟರೂ ಅದನ್ನು ಇಡಲು ಹಿಂಜರಿಯುವುದಿಲ್ಲ. ಈ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಗೃಹಸಚಿವ ಜಿ. ಪರಮೇಶ್ವರ್ ಕಿವುಡ ಹಾಗೂ ಮೂಕರಾಗಿದ್ದಾರೆ. ಈ ಪ್ರಕರಣದ ತನಿಖೆಯನ್ನು ಕೇಂದ್ರಕ್ಕೆ ಒಪ್ಪಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

    ಈ ಬಗ್ಗೆ ಮಾತಾಡಿರುವ ಮಾಜಿ ಶಾಸಕ ರಘುಪತಿ ಭಟ್, ಇದು ಕೊಲೆಯಷ್ಟೇ ದೊಡ್ಡ ಅಪರಾಧ. ವೀಡಿಯೋ ಯಾರಿಗೆ ಫಾರ್ವರ್ಡ್ ಆಗಿದೆ ಎಂಬುದನ್ನು ಬಯಲಿಗೆಳೆಯಬೇಕು. ಸೂಕ್ತ ತನಿಖೆ ನಡೆದರೆ ಎಲ್ಲಾ ಮಾಹಿತಿ ಹೊರಬರಲಿದೆ. ಸರ್ಕಾರ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಆದರೆ ಒಂದು ಕೋಮಿನ ಬಗ್ಗೆ ಮಾತ್ರ ಸರ್ಕಾರ ಗಮನಹರಿಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

    ಮುಸ್ಲಿಂ ಹುಡುಗಿಯರು, ಹಿಂದೂ ಹುಡುಗಿಯ ವಿಡಿಯೋ ಚಿತ್ರೀಕರಿಸಿದ್ದಕ್ಕೆ ಗೃಹ ಸಚಿವರಿಗೆ ಇದು ಸಣ್ಣ ವಿಚಾರವಾಗಿದೆ. ಮುಸ್ಲಿಂ ಹುಡುಗಿಯ ಚಿತ್ರೀಕರಣ ಆಗಿದ್ದರೂ ಅದು ದೊಡ್ಡ ವಿಷಯವೇ. ಹಿಂದೂ ಹುಡುಗಿಯ ಚಿತ್ರೀಕರಣ ಆದರೂ ಅದು ದೊಡ್ಡ ವಿಷಯವೇ ಆಗಿದೆ. ಸಿಡಿಆರ್ ತೆಗೆದರೆ ಎಲ್ಲವೂ ಹೊರಬರಲಿದೆ. ಸರ್ಕಾರ ಪೊಲೀಸರ ಕೈ ಕಟ್ಟಿ ಹಾಕಿದೆ. ಇಲ್ಲಿ ಎನ್‍ಐಎ ಘಟಕ ತೆರೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ.

    ಉಡುಪಿಯ ಬಿಜೆಪಿ ಕಚೇರಿಯಿಂದ ಎಸ್‍ಪಿ ಕಚೇರಿವರೆಗೂ ಬಿಜೆಪಿಯ ಶಾಸಕರು ಹಾಗೂ ಜಿಲ್ಲಾ ನಾಯಕರು ಮತ್ತು ಕಾರ್ಯಕರ್ತರು ಜಾಥಾ ನಡೆಸಿದ್ದಾರೆ. ಬಳಿಕ ಎಸ್‍ಪಿ ಕಚೇರಿಗೆ ತೆರಳಿ ಸೂಕ್ತ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಗೃಹ ಸಚಿವರ ಮನೆಗೆ ಮುತ್ತಿಗೆ ಯತ್ನ – ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‍ಐಆರ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಜ್ಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಸಾಲು ಸಾಲು ಪ್ರಶ್ನೆ

    ರಾಜ್ಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಸಾಲು ಸಾಲು ಪ್ರಶ್ನೆ

    -ಉತ್ತರ ಕೊಡಿ ಮೋದಿ ಎಂದು ಕೇಳಿದ ಮಾಜಿ ಸಿಎಂ

    ಬೆಂಗಳೂರು: ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ಸಾಲು ಸಾಲು ಪ್ರಶ್ನೆಗಳನ್ನು ಕೇಳಿದ್ದಾರೆ. ಪ್ರತಿ ಟ್ವೀಟ್ ಕೊನೆಗೆ ಉತ್ತರ ಕೊಡಿ ಮೋದಿ ಎಂದು ಹ್ಯಾಶ್ ಟ್ಯಾಗ್ ಬಳಸಿ ಪ್ರಶ್ನಿಸಿದ್ದಾರೆ.

    ಸಿದ್ದರಾಮಯ್ಯ ಟ್ವೀಟ್:
    ಕಾವೇರಿ ನೀರು ಹಂಚಿಕೆಯಲ್ಲಿ ಅನ್ಯಾಯ ಮಾಡಿದ್ರಿ, ಈಗ ಮಹದಾಯಿ ಯೋಜನೆಯನ್ನು ತಡೆದು ದ್ರೊಹ ಮಾಡುತ್ತಿದ್ದೀರಿ, ಚುನಾವಣಾ ಕಾಲದಲ್ಲಿ ನಿಮ್ಮ ಜಲಸಂಪನ್ಮೂಲ ಸಚಿವ ಹೇಳಿದ್ದೇನು? ಈಗ ಮಾಡಿದ್ದೇನು? ಕರ್ನಾಟಕದ ಜನರ ಬಗ್ಗೆ ನಿಮಗೆ ಯಾಕಿಷ್ಟು ದ್ವೇಷ, ಅಸೂಯೆ? ಕೇಂದ್ರ- ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದ್ದರೆ ರಾಜ್ಯದ ಭಾಗ್ಯದ ಬಾಗಿಲು ತೆರೆಯುತ್ತೆ ಎಂದು ಭಾಷಣ ಮಾಡಿದ್ರಿ, ಅಮಾಯಕ ಜನ ನಿಮ್ಮ ಮಾತು ನಂಬಿ 25 ಸ್ಥಾನ ಗೆಲ್ಲಿಸಿಕೊಟ್ಟರು. ನಮ್ಮ ಭಾಗ್ಯದ ಬಾಗಿಲು ತೆಗೆಯಲಿಲ್ಲ, ಕರ್ನಾಟಕದ ಪಾಲಿಗೆ ನಿಮ್ಮ ಕಚೇರಿ ಬಾಗಿಲು ಮುಚ್ಚಿದ್ದೀರಿ, ಯಾಕೆ?

    ಆಪರೇಷನ್ ಕಮಲ ಮಾಡಿ ಹಿಂದಿನ ಬಾಗಿಲಿನಿಂದ ಸರ್ಕಾರ ರಚಿಸುತ್ತೀರಿ, ನೈತಿಕ ರಾಜಕಾರಣದ ಬಗ್ಗೆ ಭಾಷಣ ಮಾಡ್ತೀರಿ. ರಾಜಕೀಯ ವಿರೋಧಿಗಳ ಮೇಲೆ ಐಟಿ, ಇಡಿ, ಸಿಬಿಐ ಛೂ ಬಿಡ್ತೀರಿ, ಗಣಿಕಳ್ಳರು, ಭೂಕಳ್ಳರನ್ನು ನಿಮ್ಮ ಪಕ್ಷಕ್ಕೆ ಕರೆದು ಮುದ್ದಾಡ್ತೀರಿ. ಇದೇನಾ ನಿಮ್ಮ ”ಸ್ವಚ್ಚ ಭಾರತ್” ?

    ನೆರೆಹಾವಳಿಗೆ ಪರಿಹಾರ ಕೊಡಲಿಲ್ಲ, ಜಿಎಸ್ ಟಿ ನಷ್ಟಕ್ಕೆ ಪರಿಹಾರ ತುಂಬಿಕೊಡಲಿಲ್ಲ, ಕೇಂದ್ರ ಅನುದಾನದಲ್ಲಿ ನಮಗೆ ನೀಡಬೇಕಾದ ನ್ಯಾಯಬದ್ಧ ಪಾಲೂ ಕೊಡಲಿಲ್ಲ. ಈಗ ಯಾವ ಮುಖಹೊತ್ತು ರಾಜ್ಯಕ್ಕೆ ಬರ್ತಿದ್ದೀರಿ ಪ್ರಧಾನಿ ಮೋದಿ ಅವರೇ? ರಾಜ್ಯದ ಜನ ನೆರೆನೀರಲ್ಲಿ ಮುಳುಗಿದ್ದಾಗ ಕನಿಷ್ಠ ಸಾಂತ್ವನ ನೀಡಲು ನೀವು ಬರಲಿಲ್ಲ. ತುಟಿ ಅನುಕಂಪಕ್ಕಾದರೂ ನಿಮ್ಮಿಂದ ನಾಲ್ಕಕ್ಷರ ಸಮಾಧಾನದ ಮಾತು ಹೊರಡಲಿಲ್ಲ. ಈಗ ರೈತರ ಕಲ್ಯಾಣದ ಡೋಂಗಿ ಕಾರ್ಯಕ್ರಮಗಳ ಪ್ರಚಾರಕ್ಕೆ ನಮ್ಮ ಅಮಾಯಕ ಜನ ನೆನಪಾಗುತ್ತಿದ್ದಾರಾ? #ಉತ್ತರಕೊಡಿಮೋದಿ

  • ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಣೆ ಮಾಡಿದ ಸ್ಪೀಕರ್​ಗೆ ಅಭಿನಂದನೆ – ಸಿದ್ದರಾಮಯ್ಯ

    ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಣೆ ಮಾಡಿದ ಸ್ಪೀಕರ್​ಗೆ ಅಭಿನಂದನೆ – ಸಿದ್ದರಾಮಯ್ಯ

    ಬೆಂಗಳೂರು: 14 ತಿಂಗಳು ಮೈತ್ರಿ ಸರ್ಕಾರದಲ್ಲಿ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ ರಮೇಶ್ ಕುಮಾರ್ ಇಂದು ತನ್ನ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಣೆ ಮಾಡಿದ ಸ್ವೀಕರ್ ಗೆ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ.

    ಇಂದು ಸದನದಲ್ಲಿ ಬಿ.ಎಸ್ ಯಡಿಯೂರಪ್ಪ ಅವರು ವಿಶ್ವಾಸಮತಯಾಚನೆ ಮಾಡಿದ ಬಳಿಕ ಸ್ಪೀಕರ್ ರಮೇಶ್ ಕುಮಾರ್ ಅವರು ತಮ್ಮ ಸಭಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಈ ಸಮಯದಲ್ಲಿ ಅವರು ತಮ್ಮ ಕಾರ್ಯನಿರ್ವಹಣೆಯಲ್ಲಿ ತೋರಿದ ನಿಷ್ಠೆ, ನಿಷ್ಪಕ್ಷಪಾತತನವನ್ನು ಸಿದ್ದರಾಮಯ್ಯ ನೆನಪಿಸಿಕೊಂಡು ಟ್ವೀಟ್ ಮಾಡಿದ್ದಾರೆ.

    ಈ ವಿಚಾರವಾಗಿ ಟ್ವೀಟ್ ಮಾಡಿರುವ ಸಿದ್ದು, ಕೆ.ಆರ್ ರಮೇಶ್ ಕುಮಾರ್ ಅವರು ಯಾವುದೇ ಒತ್ತಡಕ್ಕೆ ಮಣಿಯದೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಅತ್ಯುತ್ತಮವಾಗಿ ಸೇವೆ ಸಲ್ಲಿಸಿದ್ದಾರೆ. ಅವರು ತೆಗೆದುಕೊಂಡ ಪ್ರಾಮಾಣಿಕ ನಿರ್ಧಾರಗಳು ದೇಶದಲ್ಲಿ ಓರ್ವ ಸ್ಪೀಕರ್ ಆಗಿದ್ದವರು ಹೇಗೆ ವರ್ತಿಸಬೇಕು ಎಂಬುದನ್ನು ತೋರಿಸಿದ್ದಾರೆ. ಸ್ಪೀಕರ್ ಆಗಿ ನಿಮ್ಮ ಸೇವೆಗೆ ನನ್ನ ಪ್ರಾಮಾಣಿಕ ಧನ್ಯವಾದಗಳು ಎಂದು ಹೇಳಿದ್ದಾರೆ.

    ತಮ್ಮ ಫೇಸ್ ಬುಕ್ ಖಾತೆಯಲ್ಲೂ ಪೋಸ್ಟ್ ಹಾಕಿರುವ ಸಿದ್ದರಾಮಯ್ಯ, ರಮೇಶ್ ಕುಮಾರ್ ಅವರು ಸಭಾಧ್ಯಕ್ಷರಾಗಿ ಕಾರ್ಯನಿರ್ವಹಣೆಯಲ್ಲಿ ತೋರಿದ ನಿಷ್ಠೆ, ನಿಷ್ಪಕ್ಷಪಾತತನ ಮತ್ತು ಸಂವಿಧಾನ, ಪ್ರಜಾಪ್ರಭುತ್ವದ ಕಡೆಗೆ ಅವರು ತೋರಿದ ಬದ್ಧತೆ ಅನುಕರಣೀಯವಾದುದು. ರಾಜಕೀಯ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಸಂವಿಧಾನದ ಆಶಯಗಳಿಗೆ ಚ್ಯುತಿ ಬಾರದಂತೆ ಅವರು ಕರ್ತವ್ಯ ನಿರ್ವಹಿಸಿದ ರೀತಿ ಪ್ರಶಂಸನೀಯ. ಅವರಿಗೆ ನಮ್ಮ ಪಕ್ಷದ ಪರವಾದ ಹಾಗೂ ನನ್ನ ವೈಯಕ್ತಿಕ ಅಭಿನಂದನೆಗಳು ಮತ್ತು ಧನ್ಯವಾದಗಳು ಎಂದು ಹೇಳಿದರು.