Tag: Bangalore

  • ವಿಧಾನಸಭಾ ಚುನಾವಣೆ ಪ್ರಚಾರ ಮಾಡ್ತೀರಾ: ಪ್ರಶ್ನೆಗೆ ಉತ್ತರಿಸಿದ ಶಿವಣ್ಣ

    ವಿಧಾನಸಭಾ ಚುನಾವಣೆ ಪ್ರಚಾರ ಮಾಡ್ತೀರಾ: ಪ್ರಶ್ನೆಗೆ ಉತ್ತರಿಸಿದ ಶಿವಣ್ಣ

    ಬೆಂಗಳೂರು: ಈ ಬಾರಿ ಕರ್ನಾಟಕ ವಿಧಾನಸಾಭಾ ಚುನಾವಣೆ ವೇಳೆ ಪ್ರಚಾರ ಮಾಡುವುದಿಲ್ಲ ಎಂದು ಸೆಂಚುರಿ ಸ್ಟಾರ್ ಶಿವಣ್ಣ ಹೇಳಿದ್ದಾರೆ.

    ಡಾ. ರಾಜ್ ಕುಮಾರ್ ಪುಣ್ಯಸ್ಮರಣೆ ಅಂಗವಾಗಿ ಕಂಠೀರವ ಸ್ಟುಡಿಯೋಗೆ ಬಂದಿದ್ದ ಶಿವರಾಜ್ ಕುಮಾರ್, ತಂದೆ ಸ್ಮಾರಕಕ್ಕೆ ಪೂಜೆಸಲ್ಲಿಸಿ ಮಾಧ್ಯಮಗಳ ಜೊತೆ ಮಾತನಾಡಿದರು.

    ನಾನು ಚುನಾವಣಾ ಪ್ರಚಾರಕ್ಕೆ ಬರುವುದಿಲ್ಲ. ಅಷ್ಟೇ ಅಲ್ಲದೆ ನನ್ನ ಶ್ರೀಮತಿ ಪಕ್ಷದ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುತ್ತಾರೆ. ನನಗೆ ಶೂಟಿಂಗ್ ಇದ್ದು ಡೇಟ್ಸ್ ಇಲ್ಲದ ಕಾರಣ ನಾನು ಪ್ರಚಾರಕ್ಕೆ ಬರುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಪ್ಪ-ಅಮ್ಮನ ಸ್ಮಾರಕ ಸೇರಿಸಿ ಎಲ್ಲೂ ಇಲ್ಲದ ಯೋಗ ಕೇಂದ್ರ ನಿರ್ಮಾಣ ಮಾಡ್ತೀವಿ: ರಾಘವೇಂದ್ರ ರಾಜ್‍ಕುಮಾರ್

    ಇಂದು ವರನಟ ಡಾ. ರಾಜ್‍ಕುಮಾರ್ ಪುಣ್ಯಸ್ಮರಣೆ. 12 ನೇ ವರ್ಷ ಪುಣ್ಯಸ್ಮರಣೆಯನ್ನ ಸರಳವಾಗಿ ಆಚರಿಸಲು ಕುಟುಂಬವರ್ಗ ನಿರ್ಧರಿಸಿದ್ದು, ಶಿವರಾಜ್‍ಕುಮಾರ್, ರಾಘವೇಂದ್ರ ರಾಜಕುಮಾರ್, ಪುನೀತ್‍ರಾಜ್‍ಕುಮಾರ್ ಸೇರಿದಂತೆ ಕುಟುಂಬವರ್ಗ ಸ್ಮಾರಕಕ್ಕೆ ಪೂಜೆ ಸಲ್ಲಿಸಿದರು.

    ರಾಜ್ ಪುಣ್ಯಸ್ಮರಣೆಗೆ ನೀತಿಸಂಹಿತೆ ಎಫೆಕ್ಟ್ ತಟ್ಟಿದ್ದು, ಸರಳವಾಗಿ ಪುಣ್ಯಸ್ಮರಣೆ ಆಚರಿಸಲು ನಿರ್ಧಾರ ಮಾಡಿದ್ದರು. ಹಾಗಾಗಿ ಪ್ರತಿವರ್ಷ ಸುಮಾರು 3 ಸಾವಿರ ಜನಕ್ಕೆ ಊಟದ ವ್ಯವಸ್ಥೆ ಮಾಡಲಾಗುತ್ತಿತ್ತು. ಈ ವರ್ಷ ಕರ್ನಾಟಕ ವಿಧಾನಸಭಾ ಚುನಾವಣೆ ಬಂದಿರುವುದರಿಂದ ರಾಜ್ ಕುಮಾರ್ ಪುಣ್ಯಸ್ಮರಣೆಯನ್ನ ಶಾಮಿಯಾನ, ಊಟದ ವ್ಯವಸ್ಥೆ ಇಲ್ಲದೆ ಮಾಡಲಾಗುತ್ತಿದೆ.

  • ಕುರುಕ್ಷೇತ್ರ ಸಿನಿಮಾ ನಿರೀಕ್ಷೆಯಲ್ಲಿ ಇರುವ ಅಭಿಮಾನಿಗಳಿಗೆ ಗುಡ್ ನ್ಯೂಸ್

    ಕುರುಕ್ಷೇತ್ರ ಸಿನಿಮಾ ನಿರೀಕ್ಷೆಯಲ್ಲಿ ಇರುವ ಅಭಿಮಾನಿಗಳಿಗೆ ಗುಡ್ ನ್ಯೂಸ್

    ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಅದ್ಧೂರಿ ವೆಚ್ಚದಲ್ಲಿ ನಿರ್ಮಾಣವಾಗಿರುವ `ಕುರುಕ್ಷೇತ್ರ’ ಚಿತ್ರ ಆರಂಭದಿಂದಲೂ ಕುತೂಹಲ ಮೂಡಿಸಿದೆ.

    ಬಹು ತಾರಾಗಣದಲ್ಲಿ ನಿರ್ಮಾಣವಾಗಿರುವ ‘ಕುರುಕ್ಷೇತ್ರ’ ದರ್ಶನ್ ಅಭಿನಯದ 50 ನೇ ಚಿತ್ರವಾಗಿದೆ. ಹೈದರಾಬಾದ್ ರಾಮೋಜಿ ಫಿಲಂ ಸಿಟಿಯಲ್ಲಿ ವಿಶೇಷವಾದ ಸೆಟ್ ಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಈ ಚಿತ್ರಕ್ಕೆ ಮುನಿರತ್ನ ಅವರ ಬಂಡವಾಳ ಹಾಕಿದ್ದು, ಅವರ ನಿರ್ಮಾಣದಲ್ಲಿ ಚಿತ್ರ ಮೂಡಿಬರುತ್ತಿದೆ.

    ಈಗಾಗಲೇ `ಕುರುಕ್ಷೇತ್ರ’ ಚಿತ್ರದ ಆಡಿಯೋ ದುಬಾರಿ ಬೆಲೆಗೆ ಮಾರಾಟವಾಗಿದ್ದು, ಇದೇ ತಿಂಗಳಲ್ಲಿ ಆಡಿಯೋ ಬಿಡುಗಡೆ ಮಾಡುವ ಚಿತ್ರತಂಡ ತಯಾರಿ ನಡೆಸುತ್ತಿದೆ ಎಂದು ತಿಳಿದು ಬಂದಿದೆ. ಅಷ್ಟೇ ಅಲ್ಲದೇ ಏಪ್ರಿಲ್ ಅಂತ್ಯಕ್ಕೆ `ಕುರುಕ್ಷೇತ್ರ’ ಹಾಡುಗಳು ನಿಮ್ಮ ಮುಂದೆ ಬರಬಹುದು.

    ವಿ.ಹರಿಕೃಷ್ಣ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದು, ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದಾರೆ. ಚಿತ್ರಕ್ಕೆ ತಕ್ಕಂತೆ ಹಾಡುಗಳು ಮತ್ತು ಶ್ಲೋಕ, ಪದ್ಯಗಳನ್ನು ಚಿತ್ರದಲ್ಲಿ ಕಾಣಬಹುದಾಗಿದೆ.

    ಈಗಾಗಲೇ ಚಿತ್ರದ ಡಬ್ಬಿಂಗ್ ಕೆಲಸವೂ ಪೂರ್ತಿಯಾಗಿದ್ದು, ಚಿತ್ರದ ಪೋಸ್ಟ್ ಪ್ರೋಡಕ್ಷನ್ ಕೆಲಸಗಳು ನಡೆಯುತ್ತಿರುವುದರಿಂದ ಚಿತ್ರ ತೆರೆಗೆ ಬರಲು ವಿಳಂಬವಾಗುತ್ತಿದೆ. ಲಹರಿ ಕಂಪನಿ ದೊಡ್ಡ ಮೊತ್ತಕ್ಕೆ ಚಿತ್ರ ಆಡಿಯೋ ಹಕ್ಕುಗಳನ್ನು ಖರೀದಿಸಿದ್ದು, ಏಪ್ರಿಲ್ ತಿಂಗಳಾಂತ್ಯಕ್ಕೆ ಆಡಿಯೋ ಬಿಡುಗಡೆಗೆ ಪ್ಲಾನ್ ಮಾಡಲಾಗಿದೆ.

    ಅರ್ಜುನ್ ಸರ್ಜಾ (ಕರ್ಣ), ರವಿಚಂದ್ರನ್ (ಶ್ರೀಕೃಷ್ಣ), ಅಂಬರೀಶ್ (ಭೀಷ್ಮ), ಸೋನು ಸೂದ್ (ಅರ್ಜುನ), ನಿಖಿಲ್ ಕುಮಾರ್ (ಅಭಿಮನ್ಯು), ಮೇಘನಾ ರಾಜ್ (ಭಾನುಮತಿ), ಸ್ನೇಹಾ (ದ್ರೌಪದಿ) ಸೇರಿದಂತೆ ಹಲವರು ಅಭಿನಯಿಸುತ್ತಿದ್ದಾರೆ. `ಕುರುಕ್ಷೇತ್ರ’ ಸಿನಿಮಾವನ್ನು ಚಿತ್ರವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು, ಸಿನಿರಸಿಕರು ಕಾತರರಾಗಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ಈ ವೇಳೆಗಾಗಲೇ `ಕುರುಕ್ಷೇತ್ರ’ ತೆರೆಗೆ ಬರಬೇಕಿತ್ತು.

  • ನಾಪತ್ತೆಯಾಗಿರುವ ಮಗನನ್ನು ಹುಡುಕಿ ಕೊಡಿ- ಪೋಷಕರಿಂದ ಮನವಿ

    ನಾಪತ್ತೆಯಾಗಿರುವ ಮಗನನ್ನು ಹುಡುಕಿ ಕೊಡಿ- ಪೋಷಕರಿಂದ ಮನವಿ

    ಬೆಂಗಳೂರು: 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬಾಲಕನೊಬ್ಬ ನಾಪತ್ತೆಯಾಗಿದ್ದು ಆತನನ್ನು ದಯವಿಟ್ಟು ಹುಡುಕಿಕೊಡಿ ಎಂದು ಪೋಷಕರು ಮನವಿ ಮಾಡಿದ್ದಾರೆ.

    ಲೋಕೇಶ್ ನಾಪತ್ತೆಯಾಗಿರುವ ಬಾಲಕ. ಏಪ್ರಿಲ್ 5 ರಂದು ನಾಪತ್ತೆಯಾಗಿದ್ದು ಆತನ ಪೋಷಕರು ಅಂದಿನಿಂದ ಹುಡುಕಾಡುತ್ತಿದ್ದಾರೆ. ಚನ್ನಪ್ಪ ಬಿಲ್ಡಿಂಗ್, ಶೀಗೇಹಳ್ಲಿಯಲ್ಲಿ ವಾಸವಾಗಿರುವ ಬಾಲಕನ ತಂದೆ ಡಿ.ಬಿ.ನಾಗರಾಜ ನಗರದ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

    ದೂರಿನಲ್ಲಿದೆ?
    ಚೈತನ್ಯ ಕಂಪನಿಯಲ್ಲಿ ಸೂಪರ್ ವೈಸರ್ ಆಗಿ ಕೆಲಸ ಮಾಡುತ್ತಿರುವ ನಾಗರಾಜು ಅವರಿಗೆ ಜನಾರ್ದನ್ (18) ಮತ್ತು ಲೋಕೇಶ್(15) ವರ್ಷದ ಇಬ್ಬರು ಮಕ್ಕಳಿದ್ದಾರೆ. 2ನೇ ಮಗ ಲೋಕೇಶ್ ಕೊಳ್ಳೇಗಾಲ ಡಾನ್ ಬಾಸ್ಕೋ ಸ್ಕೂಲ್ ನಲ್ಲಿ 9 ನೇ ತರಗತಿ ಓದುತ್ತಿದ್ದನು. ಲೋಕೇಶ್ ಇತ್ತೀಚೆಗೆ ವಾರ್ಷಿಕ ಪರೀಕ್ಷೆ ಮುಗಿಸಿ ಮಾರ್ಚ್ 31ರಂದು ಬೆಂಗಳೂರಿನ ಮನೆಗೆ ಬಂದಿದ್ದ.

    ಏಪ್ರಿಲ್ 5ರಂದು ಮಧ್ಯಾಹ್ನ 4 ಗಂಟೆಗೆ ಮನೆಯಿಂದ ಹೊರಗಡೆ ಹೋಗಿದ್ದನು. ಆದರೆ ಈತ ತುಂಬಾ ಸಮಯವಾದರೂ ಮನೆಗೆ ಹಿಂದಿರುಗಲಿಲ್ಲ. ಪೋಷಕರು ಆತನ ಸ್ನೇಹಿತರು ಮತ್ತು ಸಂಬಂಧಿಕರೆಲ್ಲರನ್ನು ವಿಚಾರಿಸಿದ್ದಾರೆ. ಅಷ್ಟೇ ಅಲ್ಲದೇ ಆತನ ಶಾಲೆಗೂ ಹೋಗಿ ವಿಚಾರಿಸಿದ್ದಾರೆ. ಆದರೆ ಏನು ಪ್ರಯೋಜನವಾಗಿಲ್ಲ. ಇದುವರೆಗೂ ಬಾಲಕ ಪತ್ತೆಯಾಗಿಲ್ಲ. ಹೀಗಾಗಿ ಲೋಕೇಶ್ ಕಾಣೆಯಾಗಿರಬಹುದು ಅಥವಾ ಅಪಹರಣವಾಗಿರಬಹುದು ಎಂದು ದೂರಿನಲ್ಲಿ ಅನುಮಾನ ವ್ಯಕ್ತಪಡಿಸಿದ್ದಾರೆ.

    ಈ ಬಾಲಕನ ಬಗ್ಗೆ ನಿಮಗೆ ಏನಾದರೂ ಮಾಹಿತಿ ತಿಳಿದರೆ ಈ ಫೋನ್ ನಂಬರ್ ಗೆ ಕರೆ ಮಾಡಿ 99009 13545, 98808 53844

  • ಕೆಎಫ್‍ಸಿ ಸೆಂಟರ್ ಗೆ ನುಗ್ಗಿ ದಾಂಧಲೆ- ಪಿಜ್ಜಾ ಬಾಯ್ ಗೆ ಚಾಕುವಿನಿಂದ ಇರಿದು ಬರ್ಬರ ಹತ್ಯೆಗೈದ ದುಷ್ಕರ್ಮಿಗಳು

    ಕೆಎಫ್‍ಸಿ ಸೆಂಟರ್ ಗೆ ನುಗ್ಗಿ ದಾಂಧಲೆ- ಪಿಜ್ಜಾ ಬಾಯ್ ಗೆ ಚಾಕುವಿನಿಂದ ಇರಿದು ಬರ್ಬರ ಹತ್ಯೆಗೈದ ದುಷ್ಕರ್ಮಿಗಳು

    ಬೆಂಗಳೂರು: ದುಷ್ಕರ್ಮಿಗಳು ದಾಂಧಲೆ ನಡೆಸಿ ಪಿಜ್ಜಾ ಬಾಯ್‍ಗೆ ಚಾಕು ಇರಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಹೊಸೂರು ಮುಖ್ಯರಸ್ತೆಯ ಬೊಮ್ಮಸಂದ್ರ ಕೆಎಫ್‍ಸಿ ಪಿಜ್ಜಾ ಸೆಂಟರ್ ನಲ್ಲಿ ನಡೆದಿದೆ.

    ಒರಿಸ್ಸಾ ಮೂಲದ ಸಮೀರ್(25) ಮೃತ ದುರ್ದೈವಿ. ಸೋಮವಾರ ರಾತ್ರಿ ಬೈಕಿನಲ್ಲಿ ನಾಲ್ವರು ದುಷ್ಕರ್ಮಿಗಳು ಬಂದಿದ್ದಾರೆ. ಅವರಲ್ಲಿ ಇಬ್ಬರು ಕೆಎಫ್‍ಸಿ ಪಿಜ್ಜಾ ಸೆಂಟರ್ ಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಹಣ ಮತ್ತು ಮೊಬೈಲ್ ದರೋಡೆಗೆ ಯತ್ನಿಸಿದ್ದಾರೆ.

    ಈ ವೇಳೆ ಪ್ರತಿರೋಧ ಒಡ್ಡಿದ ಸಮೀರ್ ಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ವಿಷಯ ತಿಳಿದ ಹೆಬ್ಬಗೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತನ ಶವವನ್ನು ನಗರದ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ.

    ಹೆದ್ದಾರಿ ಪಕ್ಕದಲ್ಲಿನ ಪಿಜ್ಜಾ ಸೆಂಟರ್ ನಲ್ಲಿ ಇಂತಹ ಘಟನೆ ನಡೆದಿರುವುದು ನಗರದ ಜನರನ್ನು ಬೆಚ್ಚಿಬೀಳಿಸಿದೆ. ಈ ಬಗ್ಗೆ ಹೆಬ್ಬಗೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

  • ನೆಚ್ಚಿನ ನಟನನ್ನು ಭೇಟಿ ಮಾಡಿ ತಬ್ಬಿಕೊಂಡ ಮೇಲೆ ಮೂರು ದಿನ ಸ್ನಾನ ಮಾಡಿಲ್ಲ: ಶಿವಣ್ಣ

    ನೆಚ್ಚಿನ ನಟನನ್ನು ಭೇಟಿ ಮಾಡಿ ತಬ್ಬಿಕೊಂಡ ಮೇಲೆ ಮೂರು ದಿನ ಸ್ನಾನ ಮಾಡಿಲ್ಲ: ಶಿವಣ್ಣ

    ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಂದರೆ ಎಲ್ಲರಿಗೂ ಇಷ್ಟ. ಅವರಿಗೆ ಅಪಾರ ಅಭಿಮಾನಿಗಳು ಇದ್ದಾರೆ. ಲಾಂಗ್ ಹಿಡಿದು ಮಾಸ್ ಆಡಿಯನ್ಸ್ ನ ರಂಜಿಸುವ ಶಿವಣ್ಣ, ಕ್ಲಾಸ್ ಆಡಿಯನ್ಸ್ ಗೂ ಅಷ್ಟೇ ಅಚ್ಚುಮೆಚ್ಚು. ಸ್ಯಾಂಡಲ್ ವುಡ್ ನಲ್ಲಿ ಸೆಂಚುರಿ ಬಾರಿಸಿರುವ ಶಿವಣ್ಣನಿಗೆ ಅಸಂಖ್ಯಾತ ಅಭಿಮಾನಿಗಳಿದ್ದಾರೆ. ಅಂತಹ ಶಿವಣ್ಣ ಅವರು ಒಬ್ಬರ ಮಹಾನ್ ಫ್ಯಾನ್ ಆಗಿದ್ದಾರೆ.

    ಹೌದು. ಶಿವರಾಜ್ ಕುಮಾರ್ ಅವರು ಸಕಲ ಕಲಾವಲ್ಲಭ ಕಮಲ್ ಹಾಸನ್ ಅವರ ಅಭಿಮಾನಿಯಾಗಿದ್ದಾರೆ. ಶಿವಣ್ಣ ಅವರು ಕಮಲ್ ಹಾಸನ್ ರವರ ಎಲ್ಲ ಚಿತ್ರಗಳನ್ನೂ ಮಿಸ್ ಮಾಡದೆ ಫಸ್ಟ್ ಡೇ ಫಸ್ಟ್ ಶೋ ನೋಡುತ್ತಿದ್ದರು. ತಮ್ಮ ಅಚ್ಚುಮೆಚ್ಚಿನ ನಟ ಕಮಲ್ ಹಾಸನ್ ರನ್ನ ಒಮ್ಮೆ ಭೇಟಿ ಆಗಿ ತಬ್ಬಿಕೊಂಡ ಮೇಲೆ, ಮೂರು ದಿನ ಸ್ನಾನ ಮಾಡಿರಲಿಲ್ಲ ಎಂದು ಸ್ವತಃ ಶಿವಣ್ಣ ಅವರೇ `ನಂ.1 ಯಾರಿ ವಿತ್ ಶಿವಣ್ಣ’ ಕಾರ್ಯಕ್ರಮದಲ್ಲಿ ಹೇಳಿಕೊಂಡಿದ್ದಾರೆ.

    ಶಿವಣ್ಣ ಕಮಲ್ ಹಾಸನ್ ಅವರ ಸಿನಿಮಾಗಳನ್ನ ಫಸ್ಟ್ ಡೇ ಫಸ್ಟ್ ಶೋ ನೋಡುತ್ತಿದ್ದೆ. ಓಪನಿಂಗ್ ಡೇ ಅವರ ಆಫೀಸ್ ಗೆ ಫೋನ್ ಮಾಡಿ, ರಾಜ್ ಕುಮಾರ್ ಮನೆಗೆ ಟಿಕೆಟ್ ಬೇಕು ಅಂತ ಸುಳ್ಳು ಹೇಳಿ ಹದಿನೈದು ಟಿಕೆಟ್ ತರಿಸಿಕೊಂಡು ಸಿನಿಮಾ ನೋಡುತ್ತಿದ್ದೆ. ಆಗ ನನಗಿನ್ನೂ 14-15 ವರ್ಷ ಇರಬಹುದು ಎಂದು ಹೇಳಿಕೊಂಡಿದ್ದಾರೆ.

  • ಚಿರಂಜೀವಿ ಸರ್ಜಾ- ಮೇಘನರಾಜ್ ಮದುವೆ ಮುಹೂರ್ತ ಫಿಕ್ಸ್

    ಚಿರಂಜೀವಿ ಸರ್ಜಾ- ಮೇಘನರಾಜ್ ಮದುವೆ ಮುಹೂರ್ತ ಫಿಕ್ಸ್

    ಬೆಂಗಳೂರು: ಸಿನಿಮಾದಲ್ಲಿ ಯಶಸ್ವಿ ಜೋಡಿಯಾಗಿದ್ದ ಅನೇಕ ನಟ, ನಟಿಯರು ನಿಜ ಜೀವನದಲ್ಲಿಯೂ ಜೊತೆಯಾಗಿದ್ದಾರೆ. ಈಗ ಸ್ಯಾಂಡಲ್ ವುಡ್ ನಲ್ಲಿ ಮತ್ತೊಂದು ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದೆ.

    ಚಂದನವನದ ಚೆಂದದ ಪ್ರೇಮ ಜೋಡಿಯಲ್ಲೊಂದು ಮೇಘನಾ ರಾಜ್ ಮತ್ತು ಚಿರು ಸರ್ಜಾ ಜೊತೆಯಾಗಿ ಸಪ್ತಪದಿ ತುಳಿಯಲು ಸಜ್ಜಾಗಿದ್ದಾರೆ. ಕಳೆದ ವರ್ಷ ಅಕ್ಟೋಬರ್ 22 ರಂದು ಗುರುಹಿರಿಯರ ಸಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ನಟ ಚಿರಂಜೀವಿ ಸರ್ಜಾ ಮತ್ತು ನಟಿ ಮೇಘನಾ ರಾಜ್ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

    ಮೇ 2 ರಂದು ಮದುವೆ ದಿನಾಂಕ ನಿಗದಿಯಾಗಿದ್ದು, ಅಂದು ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಈಗಾಗಲೇ ಮೇಘನಾ ರಾಜ್ ಮಾಲಿವುಡ್‍ನ ನಟ, ನಟಿಯರಿಗೆ ಆಮಂತ್ರಿಸಿದ್ದು, ಕನ್ನಡ ಚಿತ್ರರಂಗದ ಗಣ್ಯಾತಿ-ಗಣ್ಯರನ್ನು ಆಹ್ವಾನಿಸುತ್ತಿದ್ದಾರೆ. ಮೇ 2ಕ್ಕೆ ಬೆಳಗ್ಗೆ 10.30ರ ಶುಭಗಳಿಗೆಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

    ಬೆಂಗಳೂರಿನ ಅರಮನೆ ಮೈದಾನದ ವೈಟ್ ಪೆಟಲ್ಸ್ ನಲ್ಲಿ ಅದ್ಧೂರಿ ಮದುವೆಯನ್ನು ಎರಡು ಕುಟುಂಬದವರು ಏರ್ಪಡಿಸಿದ್ದಾರೆ. ದಕ್ಷಿಣ ಭಾರತ ಚಿತ್ರರಂಗದ ಅನೇಕ ಗಣ್ಯ ಮಹೋದಯರು ಚಿರು ವೆಡ್ಸ್ ಮೇಘನಾ ಮದುವೆಗೆ ಸಾಕ್ಷಿಯಾಗಲಿದ್ದಾರೆ.

  • ಬೃಹತ್ ಆಂಜನೇಯ ಪ್ರತಿಷ್ಠಾಪನೆ ವಿವಾದ- ಬಿಜೆಪಿ ಮುಖಂಡ ಸೇರಿ 18 ಮಂದಿ ಮೇಲೆ ಎಫ್‍ಐಆರ್

    ಬೃಹತ್ ಆಂಜನೇಯ ಪ್ರತಿಷ್ಠಾಪನೆ ವಿವಾದ- ಬಿಜೆಪಿ ಮುಖಂಡ ಸೇರಿ 18 ಮಂದಿ ಮೇಲೆ ಎಫ್‍ಐಆರ್

    ಬೆಂಗಳೂರು: ಅಂಜನೇಯನ ವಿಚಾರದಲ್ಲಿ ಭರ್ಜರಿ ರಾಜಕೀಯ ಶುರುವಾಗಿದೆ. ಬೃಹತ್ ಆಂಜನೆಯ ವಿಗ್ರಹ ಪ್ರತಿಷ್ಠಾಪನೆ ವಿವಾದ ಸಂಬಂಧ ಇದೀಗ ಬಿಜೆಪಿ ಮುಖಂಡ ಸೇರಿ 18 ಮಂದಿ ಮೇಲೆ ಎಫ್‍ಐಆರ್ ದಾಖಲಾಗಿದೆ.

    ಬೃಹತ್ ರೂಪಿ ಆಂಜನೇಯನಿಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗುತ್ತಿದೆ. ಜಿಲ್ಲಾಡಳಿತ ವಿವಾದಿತ ಜಾಗದಲ್ಲಿ ಹನುಮನ ಪ್ರತಿಮೆ ಪ್ರತಿಷ್ಠಾಪಿಸಲಾಗುತ್ತಿದೆ ಎಂದು ಹೇಳಿದೆ. ಆದ್ದರಿಂದ ಸೋಮವಾರ ತಡರಾತ್ರಿ ಎಸಿ ಜಗದೀಶ್ ಎಂಬವರು ಡಿ.ಜಿ.ಹಳ್ಳಿ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಮುಖಂಡ ಪದ್ಮನಾಭರೆಡ್ಡಿ ಸೇರಿ 18 ಮಂದಿ ವಿರುದ್ಧ ದೂರು ದಾಖಲಿಸಿದ್ದಾರೆ.

    ಜಿಲ್ಲಾಡಳಿತ ಸರ್ವೇ ನಂಬರ್ 153 ಕೆರೆ ಜಾಗವಾಗಿದ್ದು, ಇಲ್ಲಿ ಮೂರ್ತಿ ಪ್ರತಿಷ್ಠಾನೆಗೆ ಸಾಧ್ಯವಿಲ್ಲ. ಇದನ್ನು ಪ್ರಶ್ನಿಸಲು ಬಂದ ನನಗೆ ಬೆದರಿಕೆ ಹಾಕಿದ್ದಾರೆ ಅಂತ ಜಗದೀಶ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಹಿಂದೂಗಳನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಆರೋಪಿಸಲಾಗುತ್ತಿದೆ.

    ಏನಿದು ವಿವಾದ?: ಬೆಂಗಳೂರಿನ ಎಚ್‍ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಕೋದಂಡರಾಮಸ್ವಾಮಿ ದೇಗುಲದ ಪ್ರಾಂಗಣದಲ್ಲಿ 62 ಅಡಿ ಎತ್ತರದ ಬೃಹತ್ ಆಂಜನೇಯ ವಿಗೃಹವನ್ನು ಪ್ರತಿಷ್ಠಾಪನೆ ಮಾಡಲು ನಿರ್ಧರಿಸಲಾಗಿದೆ. ಆದ್ರೆ ಮುಜರಾಯಿ ಇಲಾಖೆ ಹಾಗೂ ಶ್ರೀರಾಮ ದೇಗುಲದ ಟ್ರಸ್ಟಿಗಳ ಮಧ್ಯೆ ದೇಗುಲದ ಜಾಗಕ್ಕೆ ಸಂಬಂಧಪಟ್ಟ ವ್ಯಾಜ್ಯ ಕೋರ್ಟ್‍ನಲ್ಲಿ ಇರುವುದರಿಂದ ದೇಗುಲದ ಆವರಣದೊಳಗೆ ಆಂಜನೇಯ ವಿಗ್ರಹ ತರುವಂತಿಲ್ಲ ಎಂದು ತಹಶೀಲ್ದಾರ್ ಡಿಸಿ ತಡೆಯೊಡ್ಡಿದ್ದಾರೆ. ಆಗ ಭಕ್ತರು ಆಕ್ರೋಶಗೊಂಡು ದೇಗುಲದ ಆವರಣದಲ್ಲಿಯೇ ಅಧಿಕಾರಿಗಳ ಜೊತೆ ವಾಗ್ವಾದ ನಡೆಸಿದ್ದಾರೆ. ಸಚಿವ ಜಾರ್ಜ್ ಇದಕ್ಕೆಲ್ಲ ಕುಮ್ಮಕ್ಕು ನೀಡುತ್ತಿದ್ದಾರೆ ಅಂತಾ ಆರೋಪಿಸಿ ಜಾರ್ಜ್ ವಿರುದ್ಧ ಬ್ಯಾನರ್ ಹಿಡಿದು ರಸ್ತೆಗಿಳಿದು ಜನ ಪ್ರತಿಭಟಿಸಿದ್ದಾರೆ. ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸ್ ವಾಹನಕ್ಕೆ ಅಡ್ಡಲಾಗಿ ಕಲ್ಲು ಇಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಇನ್ನು ಬಿಜೆಪಿಯ ಕೆಲ ನಾಯಕರು ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿ ಸಾಥ್ ನೀಡಿದ್ದಾರೆ. ಕೆಜೆ ಜಾರ್ಜ್ ಈ ವಿಚಾರದಲ್ಲಿ ಕುಮ್ಮಕ್ಕು ನೀಡುತ್ತಿದ್ದಾರೆ. ಇದನ್ನು ಸಹಿಸಲು ಸಾಧ್ಯವಿಲ್ಲ, ಮುಂದಿನ ಚುನಾವಣೆಯಲ್ಲಿ ಜನರೆ ಉತ್ತರ ಕೊಡಲಿದ್ದಾರೆ ಎಂದು ಬಿಬಿಎಂಪಿ ವಿರೋಧ ಪಕ್ಷದ ನಾಯಕ ಪದ್ಮನಾಭ ರೆಡ್ಡಿ ಹೇಳಿದ್ದಾರೆ.

    ರಸ್ತೆಯ ಡಿವೈಡರ್ ಅಡ್ಡ ಬಂದಿರೋದ್ರಿಂದ ಅದನ್ನು ನೆಲಸಮ ಮಾಡಲಾಗಿದೆ. ಎಷ್ಟೇ ಗಲಾಟೆಯಾದ್ರೂ ದೇವಾಲಯದ ಆವರಣದೊಳಗೆ ವಿಗ್ರಹ ಪ್ರವೇಶವಾಗುವಂತಿಲ್ಲ, ಪರ್ಯಾಯ ವ್ಯವಸ್ಥೆ ಏನ್ ಬೇಕಾದರೂ ಮಾಡಿಕೊಳ್ಳಲಿ ಎಂದು ಜಿಲ್ಲಾಧಿಕಾರಿ ದಯಾನಂದ ಹೇಳಿದ್ದಾರೆ.

  • ಬೆಂಗ್ಳೂರಲ್ಲಿ ಹಿಟ್ ಆಂಡ್ ರನ್‍ ಗೆ ಯುವಕರಿಬ್ಬರು ಬಲಿ

    ಬೆಂಗ್ಳೂರಲ್ಲಿ ಹಿಟ್ ಆಂಡ್ ರನ್‍ ಗೆ ಯುವಕರಿಬ್ಬರು ಬಲಿ

    ಬೆಂಗಳೂರು: ಹಿಟ್ ಆಂಡ್ ರನ್ ಗೆ ಇಬ್ಬರು ಯುವಕರು ಬಲಿಯಾಗಿರುವ ಘಟನೆ ಬೆಂಗಳೂರು ಹೊರವಲಯದ ಬ್ಯಾಡರಹಳ್ಳಿ ಮುದ್ದಿನಪಾಳ್ಯದ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

    ಉಮೇಶ್(20) ಮತ್ತು ಗೌತಮ್(20) ಮೃತ ದುರ್ದೈವಿಗಳು. ಈ ಯುವಕರು ಬ್ಯಾಡರಹಳ್ಳಿಯ ವಿಘ್ನೇಶ್ವರ ನಗರದವರು ಎಂದು ತಿಳಿದುಬಂದಿದೆ. ಉಮೇಶ್ ಮತ್ತು ಗೌತಮ್ ಇಬ್ಬರು ಒಂದೇ ಪಲ್ಸರ್ ಬೈಕ್‍ನಲ್ಲಿ ಹೋಗುತ್ತಿದ್ದರು. ಈ ವೇಳೆ ಮುದ್ದಿನಪಾಳ್ಯದ ಪೆಟ್ರೋಲ್ ಬಂಕ್ ಬಳಿ ವೇಗವಾಗಿ ಟಿಪ್ಪರ್ ಲಾರಿ ಬಂದು ಡಿಕ್ಕಿ ಹೊಡೆದಿದೆ.

    ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಬ್ಯಾಡರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

  • ಭಾರತೀಯ ಚಿತ್ರರಂಗದಲ್ಲೇ ಫಸ್ಟ್ ಟೈಂ ತನ್ನ ಪಾತ್ರಕ್ಕೆ ತಾನೇ ಡಬ್ ಮಾಡಿತು ಶ್ವಾನ!

    ಭಾರತೀಯ ಚಿತ್ರರಂಗದಲ್ಲೇ ಫಸ್ಟ್ ಟೈಂ ತನ್ನ ಪಾತ್ರಕ್ಕೆ ತಾನೇ ಡಬ್ ಮಾಡಿತು ಶ್ವಾನ!

    ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಈಗ ಶ್ವಾನಗಳ ಅಬ್ಬರ ಜೋರಾಗಿದ್ದು, ಭಾರತೀಯ ಚಿತ್ರರಂಗದಲ್ಲೇ ಮೊದಲ ಬಾರಿಗೆ ಶ್ವಾನವೊಂದು ತಾನು ಮಾಡಿದ ಪಾತ್ರಕ್ಕೆ ಡಬ್ ಮಾಡಿದೆ.

    ಇದು ಅಕ್ಕಪಕ್ಕದ ಇಂಡಸ್ಟ್ರಿಯಲ್ಲಿ ಆದ ಮಿರಾಕಲ್ ಅಲ್ಲ. ನಮ್ಮ ಸ್ಯಾಂಡಲ್‍ವುಡ್ ಇಂಡಸ್ಟ್ರಿಯಲ್ಲಿ ಆಗಿದೆ. ಸಿನಿಮಾಗಳಲ್ಲಿ ಶ್ವಾನಗಳು ನಟಿಸುವುದು ಸಾಮಾನ್ಯವಾಗಿದೆ. ಕಾಮಿಡಿ ಕಿಲಾಡಿ ಖ್ಯಾತಿಯ ಶಿವರಾಜ್ ಕೆ.ಆರ್. ಪೇಟೆ ಹಾಗೂ ಸಂಯುಕ್ತ ಹೊರನಾಡು ನಟನೆಯ `ನಾನು ಮತ್ತು ಗುಂಡ’ ಸಿನಿಮಾದಲ್ಲಿ ಸಿಂಬಾ ಹೆಸರಿನ ಶ್ವಾನ ನಟನೆ ಮಾಡುವುದು ಮಾತ್ರವಲ್ಲದೆ ತನ್ನ ಪಾತ್ರಕ್ಕೆ ತಾನೇ ಡಬ್ ಮಾಡಿದೆ.

    `ನಾನು ಮತ್ತು ಗುಂಡ’ ಸಿನಿಮಾದಲ್ಲಿ ನಟಿಸಿರುವ ಶ್ವಾನ ಮೈಕ್ ಮುಂದೆ ನಿಂತು ಡಬ್ಬಿಂಗ್ ಮಾಡುತ್ತಿರುವ ವಿಡಿಯೋವನ್ನು ಚಿತ್ರತಂಡ ಹಂಚಿಕೊಂಡಿದೆ. ಈ ಚಿತ್ರದಲ್ಲಿ ಶ್ವಾನ ಲೀಡ್ ರೋಲ್ ನಲ್ಲಿ ಕಾಣಿಸಿಕೊಂಡಿದೆ. ಚಿತ್ರದ ಪೂರ್ತಿ ಈ ನಾಯಿ ನಾಯಕನ ಜೊತೆಯಲ್ಲಿಯೇ ಇರುತ್ತದೆ. ಈ ಚಿತ್ರದಲ್ಲಿ ಸ್ಯಾಮ್, ಗುಂಡ ಹಾಗೂ ಸಿಂಬಾ ಎನ್ನುವ ಮೂರು ಶ್ವಾನಗಳನ್ನ ಬಳಕೆ ಮಾಡಿಕೊಳ್ಳಲಾಗಿದೆ.

    ಖ್ಯಾತ ಚಿತ್ರಸಾಹಿತಿ ಕಮ್ ನಿರ್ದೇಶಕ ರಘುಹಾಸನ್ ನಿರ್ಮಾಣದಲ್ಲಿ ಶ್ರೀ ನಿವಾಸ್ ತಿಮ್ಮಯ್ಯ ನಿರ್ದೇಶನದಲ್ಲಿ ಈ ಚಿತ್ರ ಮೂಡಿಬರಲಿದೆ. ಸಂಭಾಷಣೆ ಶರತ್ ಚಕ್ರವರ್ತಿ ನೀಡಿದ್ದಾರೆ. ಚಿತ್ರದ ಶೂಟಿಂಗ್ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸ ಪ್ರಗತಿಯಲ್ಲಿದೆ. ಚುನಾವಣೆ ಮುಗಿದ ನಂತರ ನಾನು ಮತ್ತು ಗುಂಡ ಚಿತ್ರತಂಡ ಸಿನಿಮಾವನ್ನ ಬಿಡುಗಡೆ ಮಾಡುವ ಯೋಚನೆಯನ್ನು ಮಾಡಿದೆ.

  • ಕರ್ನಾಟಕದಲ್ಲಿರುವ ತೆಲುಗು ಪ್ರಜೆಗಳು ಮೋದಿ ಪಕ್ಷಕ್ಕೆ ಮತ ಹಾಕ್ಬೇಡಿ: ಆಂಧ್ರ ಡಿಸಿಎಂ

    ಕರ್ನಾಟಕದಲ್ಲಿರುವ ತೆಲುಗು ಪ್ರಜೆಗಳು ಮೋದಿ ಪಕ್ಷಕ್ಕೆ ಮತ ಹಾಕ್ಬೇಡಿ: ಆಂಧ್ರ ಡಿಸಿಎಂ

    ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಕಾವು ಏರತೊಡಗಿದ್ದು, ಮೋದಿ ಪಕ್ಷಕ್ಕೆ ಮತ ಹಾಕಬೇಡಿ ಎಂದು ಆಂಧ್ರದ ಉಪ ಮುಖ್ಯಮಂತ್ರಿ ಬಹಿರಂಗವಾಗಿಯೇ ಕರೆ ನೀಡಿದ್ದಾರೆ.

    ಭಾನುವಾರವಷ್ಟೇ ತಮಿಳುನಾಡಿನ ನಾನ್ ತಮಿಳಿಯನ್ ಸಂಘಟನೆ ರಾಜ್ಯದಲ್ಲಿರುವ ತಮಿಳುಗರಿಗೆ ಬಿಜೆಪಿಗೆ ಮತ ನೀಡದಂತೆ ಕರೆ ನೀಡಿತ್ತು. ಇದರ ಬೆನ್ನಲ್ಲೇ ಇಂದು ಆಂಧ್ರ ಉಪ ಮುಖ್ಯಮಂತ್ರಿ ಕೆ.ಇ.ಕೃಷ್ಣಮೂರ್ತಿ ಯವರು ಮೋದಿ ವಿರುದ್ಧ ಮಾತನಾಡಿ, ಮೋದಿ ಪಕ್ಷವಾದ ಬಿಜೆಪಿಗೆ ಮತ ನೀಡಬೇಡಿ ಎಂದು ಕರ್ನಾಟಕದಲ್ಲಿ ನೆಲೆಸಿರುವ ತೆಲುಗು ಪ್ರಜೆಗಳಿಗೆ ಕರೆ ನೀಡಿದ್ದಾರೆ. ಇದನ್ನೂ ಓದಿ: ಬಿಜೆಪಿ ಹಣಿಯಲು ರಾಜ್ಯ ಕಾಂಗ್ರೆಸ್‍ಗೆ `ಚಂದ್ರ’ದೆಸೆ!

    ಧಾರ್ಮಿಕ ಕಾರ್ಯನಿಮಿತ್ತ ಬೆಂಗಳೂರಿಗೆ ಆಗಮಿಸಿದ್ದ ಅವರು ವೈಟ್‍ಫೀಲ್ಡ್ ನ ಖಾಸಗಿ ಹೋಟೆಲ್‍ ನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಆಂಧ್ರಪ್ರದೇಶದ ರಾಜಧಾನಿ ಅಮರಾವತಿ ನಿರ್ಮಾಣ ಫಂಡ್, ಕಡಪ ಸ್ಟೀಲ್ ಬ್ರಿಡ್ಜ್, ವೈಜಾಕ್ ರೈಲ್ವೇ ಜೋನ್ ಯೋಜನೆ ಸೇರಿದಂತೆ ಸಾಕಷ್ಟು ಯೋಜನೆಗಳನ್ನು ನೆರವೇರಿಸುವುದಾಗಿ ತಿರುಪತಿ ತಿಮ್ಮಪ್ಪನ ಸನ್ನಿದಾನದಲ್ಲಿ ತಿಳಿಸಿದ್ದರು. ಆದರೆ ಅವರು ನೀಡಿದ್ದ ಯಾವುದೇ ಭರವಸೆ ಈಡೇರಿಸಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬಿಜೆಪಿ ಹಣಿಯಲು ರಾಜ್ಯ ಕಾಂಗ್ರೆಸ್‍ಗೆ `ಚಂದ್ರ’ದೆಸೆ!

    ಯಾವುದೇ ಭರವಸೆಯನ್ನು ಈಡೇರಿಸದ ಕಾರಣ ಬಿಜೆಪಿ ಜೊತೆ ಸಮಿಶ್ರ ಮಾಡಿಕೊಂಡಿದ್ದ ತೆಲುಗು ದೇಶಂ ಪಾರ್ಟಿ ಎನ್‍ಡಿಎ ಒಕ್ಕೂಟದಿಂದ ಹೊರ ಬಂದಿದೆ. ಬಿಜೆಪಿ ಪಕ್ಷವನ್ನು ನಂಬಿ ತಾವು ಮೋಸ ಹೋದಂತೆ ಮತ್ತೆ ಯಾರೂ ಮೋಸ ಹೋಗಬಾರದೆಂದು ಹರಿಹಾಯ್ದಿದ್ದಾರೆ.