Tag: Bangaluru

  • ಮರಣೋತ್ತರ ಪರೀಕ್ಷೆ ವರದಿ ಇನ್ನೂ ಬಂದಿಲ್ಲ, ಕೊಲೆ ಹೇಗೆ ಆಗುತ್ತೆ: ಸಿಎಂ ಸಿದ್ದರಾಮಯ್ಯ

    ಮರಣೋತ್ತರ ಪರೀಕ್ಷೆ ವರದಿ ಇನ್ನೂ ಬಂದಿಲ್ಲ, ಕೊಲೆ ಹೇಗೆ ಆಗುತ್ತೆ: ಸಿಎಂ ಸಿದ್ದರಾಮಯ್ಯ

    ಬೆಂಗಳೂರು: ಹೊನ್ನಾವರದಲ್ಲಿ ನಡೆದ ಯುವಕನ ಹತ್ಯೆಯ ಘಟನೆಗೆ ಕಾಂಗ್ರೆಸ್ ಕಾರಣ ಅನ್ನುವ ಬಿಜೆಪಿ ಪಕ್ಷದ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

    ಗೃಹ ಕಚೇರಿ ಕೃಷ್ಣದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇಂತಹ ಘಟನೆಯನ್ನು ಬಿಜೆಪಿಯವರು ರಾಜಕೀಯವಾಗಿ ಬಳಸಿಕೊಳ್ಳಲು ಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕೆ ರಾಜಕೀಯ ಬಣ್ಣ ಕಟುತ್ತಿದ್ದಾರೆ. ಸಾವನ್ನಪ್ಪಿರುವ ಯುಕವನ ಮರಣೋತ್ತರ ಪರೀಕ್ಷೆ ವರದಿ ಬಂದಿಲ್ಲ. ಯಾಕೆ ಸತ್ತಿದ್ದಾರೆ, ಹೇಗೆ ಸತ್ತಿದ್ದಾರೆ ಎಂಬ ಅಂಶಗಳ ಬಗ್ಗೆ ಮಾಹಿತಿ ಇಲ್ಲ. ಹೀಗಿರುವಾಗ ಇದು ಕೊಲೆ ಅಂತ ಹೇಳೋದು ಸರಿಯಲ್ಲ ಎಂದರು.

    ಬಿಜೆಪಿ ನಾಯಕರು ಕುಮುಟದ ಜನರನ್ನು ಭಾವನಾತ್ಮಕವಾಗಿ ಕೆರಳಿಸುತ್ತಿದ್ದಾರೆ. ಇದು ಕೇವಲ ರಾಜಕೀಯ ಉದ್ದೇಶಕ್ಕೆ ಬಿಜೆಪಿ ಮಾಡುತ್ತಿದೆ. ಚುನಾವಣೆ ಬರುತ್ತಿರುವುದರಿಂದ ಬಿಜೆಪಿಯವರು ರಾಜಕೀಯ ಲಾಭಕ್ಕೆ ಪಡೆಯಲು ಹೀಗೆ ಮಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.

    ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಕಳೆದ ಬುಧವಾರ ಕ್ಷುಲ್ಲಕ ಕಾರಣಕ್ಕೆ ನಡೆದ ಕೋಮ ಗಲಭೆ ಘಟನೆಯಲ್ಲಿ 19 ವರ್ಷದ ಪರೇಶ್ ಮೇಸ್ತ ಎಂಬ ಯುವಕ ಕಾಣೆಯಾಗಿದ್ದರು. ನಾಪತ್ತೆಯಾಗಿದ್ದ ಯುವಕನ ಶವ ಘಟನೆ ನಡೆದ ಘಟನಾ ಸ್ಥಳದ ಸಮೀಪದ ಶನಿ ದೇವಸ್ಥಾನದ ಬಳಿ ಇರುವ ಶಟ್ಟಿ ಕೆರೆಯಲ್ಲಿ ಪತ್ತೆಯಾಗಿತ್ತು. ದುಷ್ಕರ್ಮಿಗಳು ಯುವಕನ ಕೈಕಟ್ಟಿ ಹಲ್ಲೆ ಮಾಡಿ ಕೊಲೆ ಮಾಡಿ ನಂತರ ಶವವನ್ನು ಕೆರೆಗೆ ಎಸೆದು ಹೋಗಿದ್ದಾರೆ ಎಂದು ಶಂಕೆ ವ್ಯಕ್ತವಾಗಿತ್ತು. ಘಟನೆ ಕುರಿತು ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ನಾಯಕರು ಯುವಕನ ಸಾವಿಗೆ ಸರ್ಕಾರವೇ ನೇರ ಹೊಣೆ ಎಂದು ಆರೋಪ ಮಾಡಿದ್ದರು.  ( ಇದನ್ನೂ ಓದಿ: ಕುಮಟಾದಲ್ಲಿ ಭುಗಿಲೆದ್ದ ಹಿಂಸಾಚಾರ – ಐಜಿ ನಿಂಬಾಳ್ಕರ್ ಕಾರ್ ಗೆ ಬೆಂಕಿ, ಲಾಠಿಚಾರ್ಜ್ )

  • ಬೆಳಗೆರೆ ವಿರುದ್ಧ  ಸಿಸಿಬಿ ಪೊಲೀಸರು ಸಲ್ಲಿಸಿದ್ದ  ಜಾಮೀನು ಆಕ್ಷೇಪಣೆಯಲ್ಲಿ ಏನಿದೆ ಗೊತ್ತಾ?

    ಬೆಳಗೆರೆ ವಿರುದ್ಧ ಸಿಸಿಬಿ ಪೊಲೀಸರು ಸಲ್ಲಿಸಿದ್ದ ಜಾಮೀನು ಆಕ್ಷೇಪಣೆಯಲ್ಲಿ ಏನಿದೆ ಗೊತ್ತಾ?

    ಬೆಂಗಳೂರು: ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಆರೋಪವನ್ನು ಎದುರಿಸುತ್ತಿರುವ ಪತ್ರಕರ್ತ ರವಿ ಬೆಳಗೆರೆ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ 1ನೇ ಎಸಿಎಂಎಂ ನ್ಯಾಯಾಲಯ ಆದೇಶ ನೀಡಿದೆ.

    ಬೆಳಗೆರೆ ಅರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಅವರ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸುವ ಮೊದಲೇ ಸಿಸಿಬಿ ಪೊಲೀಸರ ಪರ ವಕೀಲರು 10 ಕಾರಣಗಳನ್ನು ನೀಡಿ ಜಾಮೀನು ಮಂಜೂರು ಮಾಡದಂತೆ  ಆಕ್ಷೇಪಣೆ ಸಲ್ಲಿಸಿದ್ದಾರೆ.

    ಆ 10 ಕಾರಣಗಳು:
    1. ಆರೋಪಿ ರವಿ ಬೆಳಗೆರೆ ಅವರು ಸಮಾಜದಲ್ಲಿ ಪ್ರಭಾವಿ ವ್ಯಕ್ತಿಯಾಗಿದ್ದು, ಇವರು ಕಾನೂನು ತಿಳಿದಂತಹ ಪತ್ರಕರ್ತರಾಗಿದ್ದಾರೆ ಮತ್ತು ಸ್ವಂತ ಪತ್ರಿಕೆ ನಡೆಸುತ್ತಿದ್ದಾರೆ. ಇವುಗಳನ್ನು ತಿಳಿದ ಈ ವ್ಯಕ್ತಿ ಕಾನೂನಿಗೆ ಗೌರವವನ್ನು ನೀಡದೇ ತನ್ನ ಸಹೋದ್ಯೋಗಿಯೊಬ್ಬರನ್ನೇ ಕೊಲೆ ಮಾಡಿಸಲು ಸುಪಾರಿ ನೀಡಿದ ಪ್ರಕರಣದ ಆರೋಪಿಯಾಗಿರುತ್ತಾರೆ.

    2. ರವಿಬೆಳಗೆರೆ ರವರು ಮುಂದಿನ ದಿನಗಳಲ್ಲಿ ಸಮಾಜದಲ್ಲಿ ತಮಗಿರುವ ಪ್ರಭಾವವನ್ನು ಬಳಸಿ ಈ ಪ್ರಕರಣದಲ್ಲಿ ಮುಂದಿನ ತನಿಖೆಯಲ್ಲಿ ಸಂಗ್ರಹಿಸಬೇಕಾದಂತಹ ಸಾಕ್ಷಾಧಾರಗಳನ್ನು ನಾಶಪಡಿಸುವ ಸಂಭವ ಇರುತ್ತದೆ.

    3. ಅಪರಾಧಗಳ ಸಂಬಂಧ ಹೆಚ್ಚು ಹೆಚ್ಚು ಸುದ್ದಿಗಳನ್ನು, ಭೂಗತ ಲೋಕದ ಸುದ್ದಿಗಳನ್ನು ತಮ್ಮ ಪತ್ರಿಕೆಯಲ್ಲಿ ಪ್ರಕಟಿಸಿ ಭೂಗತ ಪಾತಕಿಗಳೊಂದಿಗೆ ಸಂಪರ್ಕ ಹೊಂದಿದ್ದಂತಹ ಪತ್ರಕರ್ತರಾಗಿದ್ದು, ತಮಗಿರುವ ಈ ಭೂಗತ ಲೋಕದ ಸಂಪರ್ಕವನ್ನು ತಮ್ಮ ವೈಯಕ್ತಿಕ/ವ್ಯವಹಾರಿಕ ಬದುಕಿನ ಸಮಸ್ಯೆಗಳಿಗೆ ಉಪಯೋಗಿಸಿಕೊಂಡು ಕೊಲೆ ಮಾಡಿಸಲು ಸುಪಾರಿ ನೀಡಿದ ಆರೋಪ ಹೊಂದಿರುತ್ತಾರೆ.

    4. ಶಸ್ತ್ರ ಪರವಾನಗಿಯನ್ನು ರವಿ ಬೆಳಗೆರೆ ಹೊಂದಿದ್ದು, ಅವರು ಪರವಾನಗಿ ಹೊಂದಿದ್ದ ಶಸ್ತ್ರವನ್ನೇ ಈ ಪ್ರಕರಣದಲ್ಲಿ ಬಳಸಿರುವುದು ಕಂಡು ಬರುತ್ತದೆ.

    5. ಬೆಳಗೆರೆ ಹೊಂದಿದ್ದ ಶಸ್ತ್ರ ಪರವಾನಗಿಯ ನಿಬಂಧನೆಗಳನ್ನು ಉಲ್ಲಂಘಿಸಿ ಅಕ್ರಮವಾಗಿ ಹೆಚ್ಚಿನ ಗುಂಡುಗಳನ್ನು ಹೊಂದಿರುವುದು ತನಿಖೆಯಲ್ಲಿ ಕಂಡು ಬಂದಿದ್ದು, ಇವರು ಅಪರಾಧದಲ್ಲಿ ಭಾಗಿಯಾಗುವ ಸಲುವಾಗಿಯೇ ಅಕ್ರಮವಾಗಿ ಗುಂಡುಗಳನ್ನು ಹೊಂದಿರುವುದು ದೃಢಪಟ್ಟಿರುತ್ತದೆ.

    6. ಆರೋಪಿಗೆ ಅಪರಾಧ ಜಗತ್ತಿನ ಮಾಹಿತಿ ಇದ್ದು ತಮ್ಮ ವೃತ್ತಿ ಜೀವನದಲ್ಲಿ ಹಲವಾರು ಪ್ರಕರಣಗಳ ಬಗ್ಗೆ ಅಳವಾದ ಮಾಹಿತಿಯನ್ನು ಹೊಂದಿದ್ದಾರೆ. ತಮಗಿರುವ ಅಪರಾಧ ಜಗತ್ತಿನ ಜ್ಞಾನದಿಂದ ಈ ಪ್ರಕರಣವನ್ನು ಯಾರಿಗೂ ತಿಳಿಯದಂತೆ ಮುತುವರ್ಜಿಯಿಂದ ಯವುದೇ ಸಾಕ್ಷ್ಯಾಧಾರಗಳನ್ನು ಸಿಗದಂತೆ ಮಾಡಲು ಪ್ರಯತ್ನಿಸಿದ್ದು, ಇಂತಹ ಪ್ರಕರಣದಲ್ಲಿ ಹೆಚ್ಚಿನ ವೈಜ್ಞಾನಿಕ ತನಿಖೆಗಾಗಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಬೇಕಾದ ಅಗತ್ಯತೆ ಇದೆ. ಹೀಗಾಗಿ ಅಲ್ಲಿಯವರೆಗೂ ಆರೋಪಿಯು ನ್ಯಾಯಾಂಗ ಬಂಧನದಲ್ಲಿರುವ ಅಗತ್ಯತೆ ಇರುತ್ತದೆ.

    7. ಬೆಳಗೆರೆ ಬಳಸುತ್ತಿದ್ದ ಐ ಪೋನ್ ಮತ್ತು ಟ್ಯಾಬ್ ಗಳಳನ್ನು ವಶ ಪಡಿಸಿಕೊಳ್ಳಲಾಗಿದೆ. ಇವುಗಳಲ್ಲಿ ತನಿಖೆಗೆ ಸಂಬಂಧಿಸಿದ ಸಾಕ್ಷ್ಯಗಳು ಇರುವ ಸಾಧ್ಯತೆ ಇದ್ದು, ಸಾಕ್ಷ್ಯಗಳನ್ನು ಸಂಗ್ರಹಿಸುವ ಸಲುವಾಗಿ ಇವುಗಳನ್ನು ತಜ್ಞರ ಬಳಿ ಕಳುಹಿಸಬೇಕಾದ ಅಗತ್ಯತೆ ಇರುತ್ತದೆ.

    8. ಈ ಪ್ರಕರಣದಲ್ಲಿ ಹೆಚ್ಚಿನ ಸಾಕ್ಷಿದಾರರು ಆರೋಪಿ ರವಿಬೆಳಗೆರೆ ಅವರ ಕಚೇರಿಯಲ್ಲಿ ಕೆಲಸ ಮಾಡುವವರೇ ಆಗಿದ್ದು ಇವರುಗಳ ಮೇಲೆ ಆರೋಪಿ ತನ್ನ ಪ್ರಭಾವವನ್ನು ಬೀರಿ ಅವರು ನಿರ್ಭಿತಿಯಿಂದ ಸಾಕ್ಷಿ ನುಡಿಯಲು ಮುಂದೆ ಬರದೇ ಇರುವ ಪರಿಸ್ಥಿತಿ ನಿರ್ಮಾಣ ಮಾಡುವ ಸಂಭವವಿದೆ. ಹೀಗಾಗಿ ಸಾಕ್ಷಿದಾರರು ನಿರ್ಭಿತಿಯಿಂದ ಸಾಕ್ಷಿ ನುಡಿಯಲು ಆರೋಪಿಯೂ ನ್ಯಾಯಾಂಗ ಬಂಧನದಲ್ಲಿರುವುದು ಅತ್ಯವಶ್ಯಕವಾಗಿರುತ್ತದೆ.

    9. ಈ ಪ್ರಕರಣದಲ್ಲಿ ವಶಪಡಿಸಿಕೊಂಡಿರುವ ಆರೋಪಿಯ ರಿವಾಲ್ವರ್, ಡಿ.ಬಿ.ಬಿ.ಎಲ್. ಗನ್ ಮತ್ತು ಜೀವಂತ ಗುಂಡುಗಳನ್ನು ಪರೀಕ್ಷೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿ ತಜ್ಞರ ವರದಿ ಪಡೆಯಬೇಕಾಗಿರುತ್ತದೆ.

    10. ಆರೋಪಿಯ ಕಚೇರಿಯಿಂದ ನಿಷೇಧಿತ ಜಿಂಕೆ ಚರ್ಮ ಮತ್ತು ಆಮೆಯ ಚಿಪ್ಪನ್ನು ವಶಪಡಿಸಿಕೊಳ್ಳಲಾಗಿದೆ. ಹೀಗಾಗಿ ಈ ವಿಚಾರದ ಬಗ್ಗೆ ಮುಂದಿನ ಕ್ರಮ ಜರುಗಿಸಲು ಅರಣ್ಯ ಇಲಾಖೆ ವಶಕ್ಕೆ ನೀಡಬೇಕಿದೆ. ಇವುಗಳ ಬಗ್ಗೆ ಆರೋಪಿಯು ವಿಚಾರಣೆಯ ಸಮಯದಲ್ಲಿ ಸರಿಯಾದ ಮಾಹಿತಿಯನ್ನು ನೀಡಿಲ್ಲ. ಹೀಗಾಗಿ ಇವುಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯುವ ಅವಶ್ಯಕತೆ ಇರುವ ಕಾರಣ ಅಲ್ಲಿಯವರೆಗೂ ನ್ಯಾಯಾಂಗ ಬಂಧನದಲ್ಲಿರುವ ಅಗತ್ಯತೆ ಇರುತ್ತದೆ.

    ಈ ಮೇಲ್ಕಂಡ ಕಾರಣಗಳಿಗೆ ಎ2 ಆರೋಪಿಯಾಗಿರುವ ರವಿಬೆಳಗೆರೆ ರವರನ್ನು ಡಿಸೆಂಬರ್ 11 ರಿಂದ ಡಿಸೆಂಬರ್ 24ರವರೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ನೀಡಬೇಕೆಂದು ಮನವಿ ಮಾಡಿಕೊಳ್ಳುತ್ತಿದ್ದೇವೆ.

    https://www.youtube.com/watch?v=1XjJ-a_uFjI

     

  • ಗೌರಿ ಹತ್ಯೆ ಕೇಸ್ ಮುಚ್ಚಿ ಹಾಕೋಕೆ ಸ್ಕೆಚ್- ಸರ್ಕಾರದ ವಿರುದ್ಧ ಬಿಜೆಪಿ ಕೆಂಡಾಮಂಡಲ

    ಗೌರಿ ಹತ್ಯೆ ಕೇಸ್ ಮುಚ್ಚಿ ಹಾಕೋಕೆ ಸ್ಕೆಚ್- ಸರ್ಕಾರದ ವಿರುದ್ಧ ಬಿಜೆಪಿ ಕೆಂಡಾಮಂಡಲ

    ಬೆಂಗಳೂರು: ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ ರವಿ ಬೆಳಗೆರೆ ಬಂಧಿಸೋ ಮೂಲಕ ಗೌರಿ ಲಂಕೇಶ್ ಹತ್ಯೆ ಕೇಸ್‍ನಿಂದ ಜನರನ್ನು ದಿಕ್ಕು ತಪ್ಪಿಸಲು ಸರ್ಕಾರ ಯತ್ನಿಸುತ್ತಿದೆ ಅಂತಾ ಬಿಜೆಪಿ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

    ಗೌರಿ ಲಂಕೇಶ್ ಹಂತಕರ ಬಂಧನಕ್ಕೆ ನೇಮಕಗೊಂಡಿರುವ ಎಸ್‍ಐಟಿ ಕೆಲಸವೇ ಮಾಡುತ್ತಿಲ್ಲ. ಎಸ್‍ಐಟಿ ತಂಡ ಗಣೇಶನ ಮಾಡಿ ಅಂದ್ರೆ ಅವರ ಅಪ್ಪನನ್ನು ಮಾಡ್ತಿದೆ. ಬೆಳಗೆರೆ ಸುಪಾರಿ ಪ್ರಕರಣವನ್ನು ದೊಡ್ಡದು ಮಾಡಲು ಹೊರಟಿದೆ. ಆದ್ರೆ ಗೌರಿ ಕೇಸೇ ಬೇರೆ. ಹಂತಕರ ಬಗ್ಗೆ ಯಾವುದೇ ಸುಳಿವು ಅವರಿಗೆ ಸಿಕ್ಕಿಲ್ಲ. ಜನರ ಮನಸ್ಸನ್ನು ಬೇರೆ ಕಡೆ ತಿರುಗಿಸಲು ರವಿ ಬೆಳೆಗೆರೆ ಪ್ರಕರಣವನ್ನು ಅದಕ್ಕೆ ಲಿಂಕ್ ಮಾಡುತ್ತಿದ್ದಾರೆ. ರವಿ ಬೆಳೆಗೆರೆ ಸುಪಾರಿ ಪ್ರಕರಣ ತನಿಖೆಗೆ ಬೇರೆ ಪೊಲೀಸ್ ವಿಭಾಗಗಳಿವೆ. ಎಸ್‍ಐಟಿ ತನಗೆ ವಹಿಸಿದ ಮೂಲ ಕರ್ತವ್ಯವನ್ನೇ ಮೆರೆತು ಬೇರೆ ಮಾಡಲು ಹೊರಟಿದೆ ಅಂತ ಅಂತ ಕಿಡಿಕಾರಿದ್ರು.

    ಗೌರಿ ಹಂತಕರ ಬಗ್ಗೆ ಯಾವುದೇ ಸುಳಿವು ಅವರಿಗೆ ಸಿಕ್ಕಿಲ್ಲ. ಆದ್ರೆ ವಹಿಸಿದ ಮೂಲ ಕರ್ತವ್ಯವನ್ನು ಬಿಟ್ಟು ಬೆಳಗೆರೆ ಕೇಸ್ ಹಿಂದೆ ಬಿದ್ದಿದೆ. ಒಟ್ಟಿನಲ್ಲಿ ವಿಷಯಾಂತರ ಮಾಡಲು ಸರ್ಕಾರ ಹೊರಟಿದೆ ಅಂತಾ ಸಿಡಿಮಿಡಿಗೊಂಡಿದ್ದಾರೆ.

    ಪೊಲೀಸ್ ಇಲಾಖೆ ಯಾರ ಹಿಡಿತದಲ್ಲಿ ಇದೆ ಅನ್ನೋದೆ ಗೊತ್ತಾಗ್ತಿಲ್ಲ. ಕೆಂಪಯ್ಯ ಹಿಡಿತದಲ್ಲೇ ಪೊಲೀಸ್ ಇಲಾಖೆ ಇದೆ. ರಾಮಲಿಂಗಾರೆಡ್ಡಿ ಕೂಡ ಬೇರೆ ಗೃಹ ಸಚಿವರಂತೆ ಕೆಂಪಯ್ಯ ಕೆಳಗೆ ಕಾರ್ಯನಿರ್ವಹಿಸ್ತಿದ್ದಾರೆ. ಗೌರಿ ಹತ್ಯೆ ಹಂತಕರನ್ನ ಹಿಡಿದೇ ಬಿಡ್ತೀವಿ ಅಂತಾ ಸುಮ್ನೆ ಹೇಳ್ತಿದ್ದಾರೆ ಅಷ್ಟೇ ಅಂತ ಅವರು ಆರೋಪಿಸಿದ್ದಾರೆ.

     

  • Exclusive: ರವಿಬೆಳಗೆರೆ ರಾಕ್ಷಸ, ನನ್ನ ವಿರುದ್ಧ ಸುಪಾರಿ ನೀಡಿರುವುದು ಅತ್ಯಂತ ಕೆಟ್ಟ ಕೆಲಸ: ಸುನೀಲ್ ಹೆಗ್ಗರವಳ್ಳಿ

    Exclusive: ರವಿಬೆಳಗೆರೆ ರಾಕ್ಷಸ, ನನ್ನ ವಿರುದ್ಧ ಸುಪಾರಿ ನೀಡಿರುವುದು ಅತ್ಯಂತ ಕೆಟ್ಟ ಕೆಲಸ: ಸುನೀಲ್ ಹೆಗ್ಗರವಳ್ಳಿ

    ಬೆಂಗಳೂರು: ರಾಕ್ಷಸ ರವಿಬೆಳಗೆರೆ ನನ್ನ ವಿರುದ್ಧ ಸುಪಾರಿ ನೀಡಿರುವುದು ಅತ್ಯಂತ ಕೆಟ್ಟ ಕೆಲಸ, ಈ ಕುರಿತು ತನಿಖೆ ನಡೆಸಿ ಶಿಕ್ಷೆ ನೀಡಬೇಕು ಎಂದು ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಹೇಳಿದ್ದಾರೆ.

    ತನ್ನ ಹತ್ಯೆಗೆ ಸುಪಾರಿ ನೀಡಿ ಬಂಧನವಾಗಿರುವ ರವಿ ಬೆಳಗೆರೆ ಅವರ ಕುರಿತು ಅವರು ಪಬ್ಲಿಕ್ ಟಿವಿ ಗೆ ಪ್ರತಿಕ್ರಿಯೆ ನೀಡಿ, ರವಿ ಬೆಳಗೆರೆ ಅವರ ವಿರುದ್ಧ ನಾನು ಯಾವುದೇ ದೂರು ನೀಡಿಲ್ಲ. ಸಿಸಿಬಿ ಮತ್ತು ಎಸ್‍ಐಟಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದು, ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ. 

    ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ತನಿಖೆ ವೇಳೆ ಕೆಲವರನ್ನು ಬಂಧಿಸಿ ವಿಚಾರಣೆ ನಡೆಸಿದ ವೇಳೆ ನನ್ನನ್ನು ಕೊಲೆ ಮಾಡಲು ರವಿಬೆಳಗೆರೆಯಿಂದ ಸುಪಾರಿ ಪಡೆದಿರುವ ಮಾಹಿತಿಯನ್ನು ಪೊಲೀಸರಿಗೆ ನೀಡಿದ್ದಾರೆ. ಈ ವಿಚಾರ ನನಗೂ ತಿಳಿದಿರಲಿಲ್ಲ. ಇಂದು ಬೆಳಗ್ಗೆ ಪೊಲೀಸರು ಬಂಧನ ನಡೆಸಿದ ಸಂದರ್ಭದಲ್ಲಿ ತಿಳಿಯಿತು ಎಂದರು.

    ಸುಪಾರಿ ನೀಡಿರುವ ಬಗ್ಗೆ ಕೇಳಿ ನನಗೂ ಶಾಕ್ ಆಗಿದ್ದು, ನನ್ನ ಹಾಗೂ ರವಿಬೆಳಗೆರೆ ಅವರ ಸಂಬಂಧ ಸುಮಾರು 14 ವರ್ಷಗಳದ್ದು, ನಿರಂತರವಾಗಿ 14 ವರ್ಷ ಅವರ ಬಳಿ ಕೆಲಸ ಮಾಡಿದ್ದೇನೆ. ಅಲ್ಲದೇ ಅವರಿಗೆ ಎಂದು ಅಸಮಾಧಾನ ಬಾರದ ಹಾಗೇ ಕೆಲಸ ಮಾಡಿದ್ದೇನೆ. ಈಗಿದ್ದು ನನ್ನ ವಿರುದ್ಧ ಸುಪಾರಿ ನೀಡುವ ಸುದ್ದಿ ಕೇಳಿ ಅಶ್ಚರ್ಯ ಹಾಗೂ ಅತಂಕವಾಗುತ್ತಿದೆ ಎಂದು ಹೇಳಿದರು.

    ಹಾಯ್ ಬೆಂಗಳೂರು ಬಿಟ್ಟಿದ್ದು ಯಾಕೆ?
    ನನ್ನ ಅವರ ಮಧ್ಯೆ ಯಾವುದೇ ವೈಯಕ್ತಿಕ ಜಗಳವಿಲ್ಲ. 2014 ಡಿಸೆಂಬರ್ ನಲ್ಲಿ ನಾನು ಅವರ ಬಳಿ ಕೆಲಸ ಬಿಟ್ಟೆ. 14 ವರ್ಷದ ಅವಧಿಯಲ್ಲಿ ನನ್ನ ಹಾಗೂ ನನ್ನ ವರದಿಗಳ ಬಗ್ಗೆ ಯಾವುದೇ ಅನುಮಾನ ವ್ಯಕ್ತವಾಗಿರಲಿಲ್ಲ. ಯಾವುದೇ ವ್ಯಕ್ತಿಯನ್ನು ಬ್ಲಾಕ್ ಮೇಲ್ ಮಾಡದೆ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಆದರೆ 2014ರಲ್ಲಿ ಅವರು ನನ್ನ ಬಗ್ಗೆ ಸಂಶಯ ವ್ಯಕ್ತಪಡಿಸಲು ಆರಂಭಮಾಡಿದರು. ಹೀಗಾಗಿ ನಂಬಿಕೆ ಇಲ್ಲದ ಜಾಗದಲ್ಲಿ ಕಾರ್ಯನಿರ್ವಹಿಸಬಾರದು ಎಂಬ ಕಾರಣಕ್ಕೆ ಕೆಲಸ ಬಿಟ್ಟೆ ಎಂದು ತಿಳಿಸಿದರು. ಇದನ್ನೂ ಓದಿ: ಗಂಡ ರಣಭೂಮಿಯಲ್ಲಿ ಇರುವಾಗ ಶತ್ರುವಿನ ತೊಡೆ ಮೇಲೆ ಕುಳಿತರೆ ಅದು ಪಾತಿವ್ರತ್ಯೆಯೇ: ಬೆಳಗೆರೆ ಪೋಸ್ಟ್ ಸುತ್ತ ಅನುಮಾನದ ಹುತ್ತ

    ಈ ಹಿಂದೆ ಪ್ಲಾನ್ ಮಾಡಲಾಗಿತ್ತಾ?
    ಈ ಹಿಂದೆ ತಮ್ಮ ಮೇಲೆ ನಡೆದ ದಾಳಿ ಕುರಿತು ಪ್ಲಾನ್ ಮಾಡಲಾಗಿತ್ತು ಎಂದು ಸಿಸಿಬಿ ಪೊಲೀಸರ ಮಾಹಿತಿ ಕುರಿತು ಪ್ರತಿಕ್ರಿಯಿಸಿದ ಅವರು, ಈ ಕುರಿತು ನನಗೆ ಎಂದು ಸಂಶಯ ಉಂಟಾಗಿರಲಿಲ್ಲ, ಆದರೆ ಪೊಲೀಸ್ ಮಾಹಿತಿ ಪಡೆದ ನಂತರ ನನ್ನ ಜೀವನದಲ್ಲಿ ನಡೆದ ಘಟನೆಗಳನ್ನು ನೆನಪಿಸಿ ಕೊಂಡರೆ ಹೌದು ಎನ್ನುವ ಭಾವನೆ ಬರುತ್ತಿದೆ. 2014 ಡಿಸೆಂಬರ್ 20, ಶನಿವಾರ ರವಿಬೆಳಗೆರೆ ಅವರು ನನಗೆ ಪದೆ ಪದೆ ಕರೆಮಾಡಿ ಚಾನಲ್‍ಗೆ ಬಂಡವಾಳ ಹೂಡಲು ಕೆಲವರು ಬರುತ್ತಿದ್ದಾರೆ. ನಿನ್ನ ಬಳಿ ಮಾತನಾಡಬೇಕು ಬಾ ಎಂದು ಕರೆದರು. ಆದರೆ ನಾನು ಅಂದು ತಡವಾಗಿ ಕಚೇರಿ ಬಳಿ ತೆರಳಿದೆ, ಆ ವೇಳೆಗೆ ಕ್ರಿಮಿನಲ್ ಹಿನ್ನೆಲೆಯುಳ್ಳ ಹಲವರು ಅಲ್ಲಿಗೆ ಬಂದಿದ್ದರು. ಆದರೆ ಕಚೇರಿಯಲ್ಲಿ ನೋಡಿದರೆ ಯಾರು ಇರಲಿಲ್ಲ. ಆಗ ನಾನು ಅವರ ಬಳಿ ಬಂಡವಾಳ ಹೂಡುವ ವ್ಯಕ್ತಿಗಳ ಬಗ್ಗೆ ಕೇಳಿದೆ, ಆದರೆ ಈ ಬಗ್ಗೆ ಮಾತನಾಡದೆ ಬೇರೆ ವಿಷಯ ಕುರಿತು ಮಾತನಾಡಿದರು. ಅಂದು ಅನುಮಾನಗೊಂಡು ಕೆಲವು ಹಿರಿಯ ಪೊಲೀಸ್ ಅಧಿಕಾರಿಗಳ ಬಳಿ ಮಾಹಿತಿ ಪಡೆದೆ. ಅವರು ಸಹ ಅನುಮಾನ ವ್ಯಕ್ತಪಡಿಸಿ ನನ್ನನ್ನು ಅಲ್ಲಿಂದ ಹೊರಡುವಂತೆ ಸೂಚಿಸಿದರು. ತಕ್ಷಣ ನಾನು ಅಲ್ಲಿಂದ ನಾನು ಬೇರೆ ಕಡೆ ತೆರಳಿ ಕೆಲಸ ಬಿಡುವ ನಿರ್ಧಾರ ಮಾಡಿದೆ ಎಂದು ವಿವರಿಸಿದರು.

    ವಿಳಾಸ ತಿಳಿಯಲು ಕೊರಿಯರ್ ನೆಪ:
    ಕಳೆದ ಆಗಸ್ಟ್ 28 ರಂದು ನನ್ನ ಮನೆ ಬಳಿ ಆರೋಪಿ ಶಶಿ ಓಡಾಡುವುದನ್ನು ಗಮನಿಸಿದ್ದೇನೆ, ಆತನು ಅಲ್ಲಿಯೇ ಒಂದು ವರ್ಷ ಕೆಲಸ ಮಾಡಿದ್ದ. ಈ ವೇಳೆ ಆತನ ಹಿನ್ನೆಲೆ ತಿಳಿದಿತ್ತು. ನಾನು ಉತ್ತರ ಹಳ್ಳಿ ಬಳಿ ವಾಸಿಸುತ್ತಿದ್ದೆ, ನಂತರ ಕಳೆದ ವರ್ಷ ನನ್ನ ಮಗನ ಶಾಲೆಯ ವಿಚಾರವಾಗಿ ಮಲ್ಲೇಶ್ವರಂ ಬಳಿ ಮನೆ ಬದಲಾಯಿಸಿದೆ. ನಂತರ ವಸಂತಪುರಕ್ಕೆ ಬಂದೆ ಈ ವೇಳೆ ನನಗೆ ಕೊರಿಯರ್ ಅಫೀಸ್ ನಿಂದ ಕರೆ ಬಂತು. ಆಗ ಕೆಲವು ಪುಸ್ತಕ ನೀಡಬೇಕಿದೆ ಎಂದು ನನ್ನ ವಿಳಾಸ ಪಡೆದರು. ಅಂದು ಬಂದ ಪುಸ್ತಕದಲ್ಲಿ ಬಿ.ಎಚ್ ರಾಘವೇಂದ್ರ ಬರೆದ ಪುಸ್ತಕವು ಇತ್ತು, ರಾಘವೇಂದ್ರ ಅವರು ರವಿಬೆಳಗೆರೆ ಅವರ ಆಪ್ತ ಗೆಳೆಯರು. ಇದರಿಂದ ಅನುಮಾನಗೊಂಡು ರವಿಬೆಳಗೆರೆ ಅವರಿಗೆ ಕರೆ ಮಾಡಿ ಈ ಕುರಿತು ವಿಚಾರಿಸಿದೆ. ಆದರೆ ಅವರು ಪುಸ್ತಕ ಕಳುಹಿಸಿಲ್ಲ ಎಂದು ಹೇಳಿದರು. ನಂತರ ಕೊರಿಯರ್ ನಿಂದ ಬಂದ ಕರೆ ಆಧಾರಿಸಿ ನಾನು ಪರಿಶೀಲಿಸಲು ಮುಂದಾದಾಗ ಅದು ಹಾಯ್ ಬೆಂಗಳೂರು ಪತ್ರಿಕೆಯಲ್ಲಿ 10 ವರ್ಷಗಳ ಕಾಲ ಕೊರಿಯರ್ ಸೇವೆ ಮಾಡುತ್ತಿದ್ದ ಮಂಜುವಿನ ನಂಬರ್ ಎಂದು ತಿಳಿಯಿತು. ಆಗ ನಾನು ಆತನನ್ನು ವಿಚಾರಿಸಿದಾಗ ಮಹಿಳೆಯೊಬ್ಬರು ಬಂದು ಕೊಟ್ಟರು ಎಂದು ತಿಳಿಸಿದ. ಆಗ ನನಗೆ ಆತ ಸುಳ್ಳು ಹೇಳುತ್ತಿರುವ ಕುರಿತು ಮನವರಿಕೆ ಆಯ್ತು, ನನ್ನ ಮನೆ ವಿಳಾಸ ತಿಳಿಯಲು ಮಾಡಿದ ತಂತ್ರ ಎಂದು ಅರಿವಾಯಿತು ಎಂದರು.

    ಆದರೂ ನಾನು ಏನು ತಪ್ಪು ಮಾಡಿಲ್ಲ ಎಂಬ ಧೈರ್ಯದ ಮೇಲೆ ಸುಮ್ಮನಾದೆ, ಸುಪಾರಿ ಕೊಟ್ಟಿರುವ ಕುರಿತು ಎಲ್ಲೂ ಸುಳಿವು ನನಗೆ ಸಿಗಲಿಲ್ಲ. ಇಲ್ಲವಾದರೆ ಅಂದೇ ರವಿಬೆಳಗೆರೆ ಅವರು ಜೈಲು ಸೇರುತ್ತಿದ್ದರು, ಎಸ್‍ಐಟಿ ಅಧಿಕಾರಿಗಳ ಕಾರ್ಯ ಮೆಚ್ಚುವಂತದ್ದು, ಪೊಲೀಸರು ಯಾವುದೇ ಒತ್ತಡಕ್ಕೆ ಮಣಿಯಾದೇ ಕಾರ್ಯನಿರ್ವಹಿಸಿದ್ದಾರೆ. ಆದರೆ ಒಬ್ಬ ರಾಕ್ಷಸ ರವಿಬೆಳಗೆರೆ ಬಳಿ 14 ವರ್ಷದ ಕೆಲಸ ಮಾಡಿದ ನಂತರವು ನನ್ನ ವಿರುದ್ಧ ಸುಪಾರಿ ನೀಡಿರುವುದು ಅತ್ಯಂತ ಕೆಟ್ಟ ಕೆಲಸ, ಈ ಕುರಿತು ತನಿಖೆ ನಡೆಸಿ ಶಿಕ್ಷೆ ನೀಡಬೇಕಿದೆ ಎಂದರು.

    ಇದನ್ನೂ ಓದಿ: ಯಾಕ್ ನೀವ್ ರಿಸ್ಕ್ ತೆಗೆದುಕೊಳ್ತೀರಿ: ಪೊಲೀಸರಿಗೆ ರವಿ ಬೆಳಗೆರೆ ಬುದ್ಧಿವಾದ

    https://www.youtube.com/watch?v=tvAkOpM6ZZo

     

     

  • ಪರಿಸರ ಪ್ರೇಮಿಗಳಲ್ಲಿ ಕ್ಷಮೆ ಕೇಳಿದ ಶಿವಣ್ಣ

    ಪರಿಸರ ಪ್ರೇಮಿಗಳಲ್ಲಿ ಕ್ಷಮೆ ಕೇಳಿದ ಶಿವಣ್ಣ

    ಬೆಂಗಳೂರು: ಸ್ಯಾಂಡಲ್‍ವುಡ್‍ನ ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಪರಿಸರ ಪ್ರೇಮಿಗಳಲ್ಲಿ ಕ್ಷಮೆಯನ್ನು ಕೇಳಿದ್ದಾರೆ.

    ನಟ ಶಿವರಾಜ್ ಕುಮಾರ್ ಮಲ್ಲೇಶ್ವರಂ ನಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್ ನ ಹೊಸ ಶೋರೂಂನ ಉದ್ಘಾಟನೆಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಶೋರೂಂಗೆ ಅಡ್ಡಲಾಗಿದ್ದ ಎರಡು ಮರಗಳನ್ನು ಶೋರೂಂ ಅವರು ಅಂಗಡಿ ಕಾಣುವುದಿಲ್ಲ ಎಂದು ಕಡಿಸಿದ್ದಾರೆ. ಇದರಿಂದ ಪರಿಸರ ಪ್ರೇಮಿಗಳು ಆಕ್ರೋಶಗೊಂಡು ಪ್ರತಿಭಟನೆಯನ್ನು ಮಾಡಲು ಆರಂಭಿಸಿದ್ದರು.

    ಉದ್ಘಾಟನೆ ಮಾಡಲು ಸಮಾರಂಭಕ್ಕೆ ಆಗಮಿಸಿದ ಶಿವಣ್ಣಗೂ ಪ್ರತಿಭಟನೆಯ ಬಿಸಿ ತಟ್ಟಿದೆ. ಆದ್ದರಿಂದ ಪ್ರತಿಭಟನಕಾರರ ಮನವೊಲಿಸಿ ಕಲ್ಯಾಣ್ ಜ್ಯುವೆಲರ್ಸ್ ಪರವಾಗಿ ಕ್ಷಮೆಯನ್ನು ಕೇಳಿದ್ದಾರೆ. ಅಷ್ಟೇ ಅಲ್ಲದೇ ಜ್ಯುವೆಲ್ಲರ್ಸ್ ಅಂಗಡಿ ಮುಂದೆ ಗಿಡವೊಂದನ್ನು ನೆಟ್ಟು ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ.

    ಒಂದು ಸಣ್ಣ ತಪ್ಪಾಗಿದೆ. ಅದನ್ನು ಮುಂದುವರೆಸಿಕೊಂಡು ಹೋಗೋದು ಬೇಡ. ಇವತ್ತು ಒಂದು ಗಿಡ ನೆಟ್ಟಿದ್ದೇವೆ. ಇನ್ನೂ ನೂರು ಗಿಡ ನೆಡುತ್ತೇವೆ. ನಾನು ನಿಮ್ಮೆಲ್ಲರ ಮುಂದೆ ಪ್ರಾಮಿಸ್ ಮಾಡುತ್ತೇನೆ. ನಿಮ್ಮೆಲ್ಲರಿಗೂ ಬೇಜರಾಗಿದ್ದರಿಂದ ಕ್ಷಮಿಸಿ, ಕ್ಷಮಿಸಿ ಎಂದು ಪರಿಸರ ಪ್ರೇಮಿಗಳಲ್ಲಿ ಎರಡು ಬಾರಿ ಕ್ಷಮೆ ಕೇಳಿದ್ದಾರೆ.

  • ರವಿಬೆಳಗೆರೆ ಬಂಧನಕ್ಕೂ, ಗೌರಿ ಹತ್ಯೆಗೂ ಯಾವುದೇ ಸಂಬಂಧವಿಲ್ಲ: ರಾಮಲಿಂಗಾರೆಡ್ಡಿ

    ರವಿಬೆಳಗೆರೆ ಬಂಧನಕ್ಕೂ, ಗೌರಿ ಹತ್ಯೆಗೂ ಯಾವುದೇ ಸಂಬಂಧವಿಲ್ಲ: ರಾಮಲಿಂಗಾರೆಡ್ಡಿ

    ಬೆಂಗಳೂರು: ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಆರೋಪದಲ್ಲಿ ಹಾಯ್ ಬೆಂಗಳೂರು ಸಂಪಾದಕ ರವಿ ಬೆಳಗೆರೆ ಅವರನ್ನು ಬಂಧಿಸಲಾಗಿದೆ, ಆದರೆ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೂ ರವಿಬೆಳಗೆರೆ ಅವರ ಬಂಧನಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.

    ಪತ್ರಕರ್ತ ರವಿಬೆಳೆಗೆರೆ ಬಂಧನ ಹಿನ್ನೆಲೆ ವಿಕಾಸಸೌಧದಲ್ಲಿ ಗೃಹಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ನೀಡಿದರು, ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖೆ ನಡೆಸುವ ವೇಳೆ ತಾಹೀರ್ ನನ್ನು ಪೊಲೀಸರು ಬಂಧಿಸಿದಾಗ ಸುಪಾರಿ ಕಿಲ್ಲರ್ ಶಶಿಧರ್ ಮುಂಡೇವಾಡಗೆ ಗನ್ ಮಾರಾಟ ಮಾಡಿದ್ದ ಎಂಬ ಮಾಹಿತಿ ಸಿಕ್ಕಿದೆ. ತಾಹೀರ್ ವೆಪನ್ ಸೆಲ್ಲರ್ ಮಾತ್ರ. ಆದರೆ ಬೆಳಗೆರೆ ಬಂಧನಕ್ಕೂ ಗೌರಿ ಹತ್ಯೆ ಪ್ರಕರಣಕ್ಕೂ ಸಂಬಂಧ ಇಲ್ಲ ಎಂದರು.

    ಬೆಳಗೆರೆ ಅವರ ಬಂಧನ ವಿಚಾರ ಎಲ್ಲವೂ ಪೊಲೀಸ್ ಪ್ರಕ್ರಿಯೆ, ಮಾಹಿತಿ ಇದ್ದ ಕಾರಣದಿಂದಲೇ ಈ ಪ್ರಕ್ರಿಯೆ ನಡೆದಿದೆ. ಮಾಹಿತಿ ಇಲ್ಲದೇ ಏನೂ ಮಾಡಲು ಆಗುವುದಿಲ್ಲ. ಅಲ್ಲದೇ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಲ್ಯಾಬ್ ರಿಪೋರ್ಟ್ ಬರುವವರೆಗೆ ಕಾಯಬೇಕು. ಕಳೆದ ಭಾನುವಾರ ತಾಹೀರ್ ನನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು, ಯಾರು ಯಾರಿಗೆ ಗನ್ ಮಾರಾಟ ಮಾಡಲಾಗಿದೆ ಎಂಬುವುದರ ಬಗ್ಗೆ ಪೊಲೀಸರು ತನಿಖೆ ಮಾಡಿದಾಗ ಶಶಿಧರ್ ಮುಂಡೆವಾಡಿಗೆ ಗನ್ ಮಾರಾಟ ಮಾಡಿರುವ ಮಾಹಿತಿ ಸಿಕ್ಕಿದೆ. ಈ ಮಾಹಿತಿ ಆಧಾರಿಸಿ ಶಶಿಧರ್ ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಸಿಸಿಬಿಗೆ ಕೆಲವು ಮಾಹಿತಿ ಸಿಕ್ಕಿದೆ. ಅದರಂತೆ ಇಂದಿನ ಬಂಧನ ಪ್ರಕ್ರಿಯೆ ನಡೆದಿದೆ ಎಂದು ವಿವರಿಸಿದರು.  ( ಇದನ್ನೂ ಓದಿ: ಯಾಕ್ ನೀವ್ ರಿಸ್ಕ್ ತೆಗೆದುಕೊಳ್ತೀರಿ: ಪೊಲೀಸರಿಗೆ ರವಿ ಬೆಳಗೆರೆ ಬುದ್ಧಿವಾದ )

    ಅಲ್ಲದೇ ಶಶಿಧರ್ ಮುಂಡೇವಾಡಿ ಬಳಸಿದ್ದ ಗನ್ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಅದರ ವರದಿ ಬಂದ ಬಳಿಕ ಆ ಗನ್ ಎಲ್ಲೆಲ್ಲಿ ಬಳಕೆಯಾಗಿದೆ ಎನ್ನುವ ಮಾಹಿತಿ ಲಭಿಸಲಿದೆ. ಬೆಳಗೆರೆ ಬಂಧನದ ಹಾಗೂ ತನಿಖೆ ಬಗ್ಗೆ ನಾನು ಪ್ರತಿಕ್ರಿಯೆ ಕೊಡುವುದು ಸರಿಯಲ್ಲ. ಈ ಬಗ್ಗೆ ಪೊಲೀಸ್ ಆಯುಕ್ತರು ಅಥವಾ ಸಿಸಿಬಿ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡುತ್ತಾರೆ ಎಂದು ಹೇಳಿದರು.

    ( ಇದನ್ನೂ ಓದಿ: ರವಿ ಬೆಳಗೆರೆ ಅಫಿಡವಿಟ್ಟಿನಲ್ಲಿ ಏನಿದೆ? )

    ( ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆಯ ಬಳಿಕ ಅಂದು ರವಿ ಬೆಳಗೆರೆ ಹೇಳಿದ್ದು ಹೀಗೆ )

  • ಯಾಕ್ ನೀವ್ ರಿಸ್ಕ್ ತೆಗೆದುಕೊಳ್ತೀರಿ: ಪೊಲೀಸರಿಗೆ ರವಿ ಬೆಳಗೆರೆ ಬುದ್ಧಿವಾದ

    ಯಾಕ್ ನೀವ್ ರಿಸ್ಕ್ ತೆಗೆದುಕೊಳ್ತೀರಿ: ಪೊಲೀಸರಿಗೆ ರವಿ ಬೆಳಗೆರೆ ಬುದ್ಧಿವಾದ

    ಬೆಂಗಳೂರು: ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಆರೋಪದಲ್ಲಿ ಬಂಧಿಸಲು ತೆರಳಿದಾಗ ಹಾಯ್ ಬೆಂಗಳೂರು ಸಂಪಾದಕ ರವಿ ಬೆಳಗೆರೆ ಪೊಲೀಸ್ ಅಧಿಕಾರಿಗೆ ಬುದ್ಧಿವಾದ ಹೇಳಿರುವ ವಿಚಾರ ಮೂಲಗಳಿಂದ ಸಿಕ್ಕಿದೆ.

    ಚಾಮರಾಜಪೇಟೆಯ ಹಾಯ್ ಬೆಂಗಳೂರು ಕಚೇರಿಯಲ್ಲಿ ಶುಕ್ರವಾರ ರವಿ ಬೆಳಗೆರೆ ಇದ್ದಾರೆ ಎಂದು ತಿಳಿದು ಬೆಳಗ್ಗೆ ಪೊಲೀಸರು ತೆರಳಿದ್ದಾರೆ. ಈ ವೇಳೆ ಬೆಳಗೆರೆ ನಿದ್ರೆ ಮಾಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ( ಇದನ್ನೂ ಓದಿ: ಗಂಡ ರಣಭೂಮಿಯಲ್ಲಿ ಇರುವಾಗ ಶತ್ರುವಿನ ತೊಡೆ ಮೇಲೆ ಕುಳಿತರೆ ಅದು ಪಾತಿವ್ರತ್ಯೆಯೇ: ಬೆಳಗೆರೆ ಪೋಸ್ಟ್ ಸುತ್ತ ಅನುಮಾನದ ಹುತ್ತ )

    ಈ ವೇಳೆ ಪೊಲೀಸರೊಂದಿಗೆ ವಿಚಾರಣೆಗೆ ಸರಿಯಾಗಿ ಸ್ಪಂದಿಸದ ಅವರು, ನಾನೇನು ಓಡಿ ಹೋಗುವುದಿಲ್ಲ. ಬಂದು ವಿಚಾರಣೆ ಮಾಡಿ. ಅದೃಷ್ಟ ಚೆನ್ನಾಗಿಲ್ಲ ನೀವು ನನ್ನನ್ನು ಹಿಡಿದುಕೊಂಡಿದ್ದೀರಿ, ಬಂಧಿಸ್ತೀನಿ ಅಂತ ಹೇಳ್ತೀರಿ. ಮೊದಲೇ ನನಗೆ ಹುಷಾರಿಲ್ಲ. ನನ್ನನ್ನು ಬಂಧಿಸಿ ಜಡ್ಜ್ ಮನೆಗೆ ಕರೆದುಕೊಂಡು ಹೋದರೂ ಜಾಮೀನು ಸಿಕ್ಕುತ್ತೆ. ಅನಾರೋಗ್ಯ ಕಾರಣದಿಂದ ಜಾಮೀನು ಕೊಡುತ್ತಾರೆ. ಸುಮ್ನೆ ಯಾಕೆ ರಿಸ್ಕ್ ತಗೆದುಕೊಳ್ಳುತ್ತಿದ್ದೀರಿ. ಕೊಲ್ಲೊದಕ್ಕೆ ಹೇಳಿರಬಹುದು ಕೊಂದಿಲ್ಲ ಅಲ್ವಾ? ಜಾಮೀನಿನ ಮೇಲೆ ವಿಚಾರಣೆ ಮಾಡಿ. ಸುಮ್ನೆ ಹಿಂಸೆ ತಗೋ ಬೇಡಿ. ನನ್ನ ಪಾಡಿಗೆ ನನ್ನ ಬಿಡಿ ಎಂದು ಅಧಿಕಾರಿಗಳಿಗೆ ಬುದ್ಧಿವಾದ ಹೇಳಿದ್ದಾರೆ ಎಂದು ಪೊಲೀಸ್ ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.  ( ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆಯ ಬಳಿಕ ಅಂದು ರವಿ ಬೆಳಗೆರೆ ಹೇಳಿದ್ದು ಹೀಗೆ )

    ( ಇದನ್ನೂ ಓದಿ: ರವಿ ಬೆಳಗೆರೆ ಅಫಿಡವಿಟ್ಟಿನಲ್ಲಿ ಏನಿದೆ? )

     

     

  • ಚೈಲ್ಡ್ ಲಾಕ್ ಮಾಡಿ ಯುವತಿ ಮುಂದೆ ಓಲಾ ಡ್ರೈವರ್ ನಿಂದ ಅಸಭ್ಯವಾಗಿ ವರ್ತನೆ

    ಚೈಲ್ಡ್ ಲಾಕ್ ಮಾಡಿ ಯುವತಿ ಮುಂದೆ ಓಲಾ ಡ್ರೈವರ್ ನಿಂದ ಅಸಭ್ಯವಾಗಿ ವರ್ತನೆ

    ಬೆಂಗಳೂರು: ನಡು ರಸ್ತೆಯಲ್ಲಿ ಕಾರು ನಿಲ್ಲಿಸಿ ಯುವತಿಯ ಜೊತೆ ಅಸಭ್ಯವಾಗಿ ವರ್ತಿಸಿದ್ದ ಡ್ರೈವರ್ ನನ್ನು ಓಲಾ ಕಂಪನಿ ಅಮಾನತು ಮಾಡಿದೆ.

    ರಾಜಶೇಖರ್ ರೆಡ್ಡಿ ಲೈಂಗಿಕ ದೌರ್ಜನ್ಯ ಎಸಗಿದ ಡ್ರೈವರ್. ಭಾನುವಾರ ರಾತ್ರಿ ಕೋರಮಂಗಲ ರಿಂಗ್ ರಸ್ತೆಯಲ್ಲಿ ಈ ಘಟನೆ ರಾಜಶೇಖರ್ ರೆಡ್ಡಿ ಅಸಭ್ಯವಾಗಿ ವರ್ತಿಸಿದ್ದ.

    ಇಂದಿರಾನಗರದಿಂದ ಬಿಟಿಎಂ ಲೇಔಟ್ ತೆರಳುತ್ತಿದ್ದಾಗ ರಾಜಶೇಖರ್ ರೆಡ್ಡಿ ಕಾರನ್ನು ಚೈಲ್ಡ್ ಲಾಕ್ ಮಾಡಿ ಯುವತಿಯ ಜೊತೆ ಅಸಭ್ಯವಾಗಿ ವರ್ತಿಸಿದ್ದ. ಈ ಕುರಿತು ಓಲಾ ಸಂಸ್ಥೆಗೆ ಯುವತಿ ದೂರು ನೀಡಿದ್ದರು. ಆದರೆ ಈ ಕುರಿತು ಯುವತಿ ಪೊಲೀಸರಿಗೆ ದೂರು ನೀಡಲು ಹಿಂದೇಟು ಹಾಕಿದ್ದರು.

    ಈ ವಿಚಾರ ಬೆಳಕಿಗೆ ಬಂದ ಬಳಿಕ ಓಲಾ ಕಂಪೆನಿ ಡ್ರೈವರ್ ನನ್ನು ಅಮಾನತು ಗೊಳಿಸಿದ್ದು, ರಾಜಶೇಖರ್ ರೆಡ್ಡಿ ಮೇಲೆ ದೂರು ನೀಡುವಂತೆ ಯುವತಿ ಜೊತೆ ಕೇಳಿಕೊಂಡಿದೆ. ( ಇದನ್ನೂ ಓದಿ: ಕೊತ ಕೊತ ಕುದಿಯುವ ಬಿಸಿ ಬಿಸಿ ಎಣ್ಣೆ ಗಂಡನ ‘ಅದಕ್ಕೇ’ ಸುರಿದ್ಳು ಪತ್ನಿ! )

    ನಡೆದಿದ್ದು ಏನು? 23 ವರ್ಷದ ಯುವತಿ ಭಾನುವಾರ ರಾತ್ರಿ ಇಂದಿರಾನಗರದಿಂದ ಬಿಟಿಎಂ ಲೇಔಟ್ ತೆರಳಲು ಓಲಾ ಕಾರ್ ಬುಕ್ ಮಾಡಿದ್ದರು. ಈ ವೇಳೆ ಕೋರ ಮಂಗಲದ ರಿಂಗ್ ರಸ್ತೆಯಲ್ಲಿ ಕಾರು ನಿಲ್ಲಿಸಿದ ಡ್ರೈವರ್ ಚೈಲ್ಡ್ ಲಾಕ್ ಮಾಡಿ ಯುವತಿಯ ದೇಹವನ್ನು ಮುಟ್ಟಲು ಪ್ರಯತ್ನಿಸಿ ಅಸಭ್ಯವಾಗಿ ವರ್ತಿಸಿದ್ದ.

    ಈ ವೇಳೆ ಕಾರ್ ನಿಂದ ಹೊರ ಬರಲು ಪ್ರಯತ್ನಿಸಿದ ಯುವತಿ ಕಾರ್ ಲಾಕ್ ಆಗಿದುವುದನ್ನು ಕಂಡು ಕಾರಿನ ಕಿಟಕಿ ಗಾಜಿನ ಮೇಲೆ ಬಲವಾಗಿ ಹೊಡೆದು ಕಿರುಚಿಕೊಳ್ಳುತ್ತಾರೆ. ಇದರಿಂದ ಭಯಗೊಂಡ ಡ್ರೈವರ್ ಯುವತಿಯನ್ನು ಕಾರಿನಿಂದ ಹೊರ ಬಿಡುತ್ತಾನೆ. ಅಲ್ಲಿಂದ ಸುಮಾರು 500 ಮೀಟರ್ ದೂರವಿರುವ ಈಜಿಪುರ ಟ್ರಾಫಿಕ್ ಸಿಗ್ನಲ್ ಬಳಿ ಓಡಿ ಬಂದ ಯುವತಿ ಅಲ್ಲಿಂದ ಬೇರೆ ವಾಹನದಲ್ಲಿ ಮನೆಗೆ ತೆರಳುತ್ತಾರೆ. ಘಟನೆ ನಡೆದ ಮರುದಿನವೂ ಡ್ರೈವರ್ ಫೋನ್ ಮಾಡಿ ಆಕೆಯ ಜೊತೆ ಮಾತನಾಡಿದ್ದಾನೆ. ನಂತರ ಘಟನೆ ಕುರಿತು ಯುವತಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

     

  • ಕಾಂಗ್ರೆಸ್ ನಾಯಕರಿಗೆ ವೇಣುಗೋಪಾಲ್ ಫುಲ್ ಕ್ಲಾಸ್

    ಕಾಂಗ್ರೆಸ್ ನಾಯಕರಿಗೆ ವೇಣುಗೋಪಾಲ್ ಫುಲ್ ಕ್ಲಾಸ್

    ಬೆಂಗಳೂರು: 2018ರ ಚುನಾವಣೆಗೆ ಕಾಂಗ್ರೆಸ್ ಸಜ್ಜಾಗುತ್ತಿದೆ. ಹೀಗಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಮೂರು ದಿನಗಳ ಕಾಲ ಸರಣಿ ಸಭೆಯನ್ನು ಆರಂಭಿಸಿರುವ ವೇಣುಗೋಪಾಲ್ ಇಂದು ಕೆಪಿಸಿಸಿ ಮುಂಚೂಣಿ ಘಟಕಗಳ ಸಭೆ ನಡೆಸಿ ಮುಖಂಡರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

    ಮೊದಲಿಗೆ ಯೂತ್ ಕಾಂಗ್ರೆಸ್ ಮುಖಂಡರ ಜೊತೆ ವೇಣುಗೋಪಾಲ್ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ್ ಸಭೆ ನಡೆಸಿದರು. ಈ ವೇಳೆ ಯೂತ್ ಮುಖಂಡರಿಗೆ ವೇಣುಗೋಪಾಲ್ ಹಿಗ್ಗಾ ಮುಗ್ಗಾ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನುವ ಮಾಹಿತಿ ಮೂಲಗಳಿಂದ ಸಿಕ್ಕಿದೆ.

    ಕಳೆದ ಭಾರಿ ಎಚ್ಚರಿಕೆ ನೀಡಿದರು ಪ್ರತಿಪಕ್ಷಗಳ ವಿರುದ್ಧ ಎಷ್ಟು ಪ್ರತಿಭಟನೆ ಹೋರಾಟ ನಡೆಸಿದ್ದೀರಿ? ಸಾಂಕೇತಿಕವಾಗಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರೆ ಸಾಲದು, ರಾಜ್ಯಾದ್ಯಂತ ಹೋರಾಟ ಮಾಡಬೇಕು ಎಂದು ಹೇಳಿ ತರಾಟೆ ತೆಗೆದುಕೊಂಡಿದ್ದಾರೆ.

    ಯೂತ್ ಸಭೆಯ ಬಳಿಕ ಎನ್‍ಎಸ್‍ಯುಐ, ರೈತ, ಮಹಿಳಾ ಘಟಕದ ಪದಾಧಿಕಾರಿಗಳ ಸಭೆ ನಡೆಸಿದರು. ಎನ್‍ಎಸ್‍ಯುಐ ಸಭೆಯಲ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸೈಕಲ್ ಜಾಥಾ ನಡೆಸಿ ಸರ್ಕಾರದ ಸಾಧನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವಂತೆ ಸೂಚಿಸಿದರು. ಕಾಲೇಜುಗಳಲ್ಲಿ ಸಮಿತಿ ರಚಿಸಿ ಹೆಚ್ಚು ಹೆಚ್ಚು ವಿದ್ಯಾರ್ಥಿಗಳನ್ನು ಸಂಘಟನೆಗೆ ಸೇರಿಸಿಕೊಳ್ಳುವಂತೆ ತಿಳಿಸಿದರು. ನಂತರ ಮಹಿಳಾ ಘಟಕದ ಸಭೆಯಲ್ಲಿ ಮುಖಂಡರಿಗೆ ಪ್ರತಿಪಕ್ಷಗಳ ವಿರುದ್ಧ ಹೋರಾಟ ಹಮ್ಮಿಕೊಳ್ಳುವಂತೆ ಸೂಚಿಸಿದ್ದಾರೆ. ಅಲ್ಲದೇ ಮುಂದಿನ ಚುನಾವಣೆಯಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವುದಾಗಿ ಭರವಸೆ ನೀಡಿದರು.

    ಒಟ್ಟಾರೆ ಚುನಾವಣೆ ದೃಷ್ಟಿಯಿಂದ ಭರ್ಜರಿ ವರ್ಕ್ ಔಟ್ ಮಾಡುತ್ತಿರುವ ಕಾಂಗ್ರೆಸ್ ನಾಯಕರು ಮೂರು ದಿನಗಳ ಕಾಲ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಈ ಮೂಲಕ ಪಕ್ಷ ಬಲವರ್ಧನೆ ಹಾಗೂ ಸಂಘಟನೆ ಮಾಡುವುದು, ಸರ್ಕಾರದ ಸಾಧನೆ ಜನರಿಗೆ ತಿಳಿಸುವ ಮೂಲಕ ಮುಂದಿನ ಎಲೆಕ್ಷನ್ ನಲ್ಲಿ ಭರ್ಜರಿ ಸೀಟು ಗಳಿಸಿ ಅಧಿಕಾರ ಹಿಡಿಯುವ ಕಾರ್ಯತಂತ್ರ ನಡೆಸಿದ್ದಾರೆ.

     

  • ಸಿಎಂ, ಪರಂ ಮಧ್ಯೆ ಮನಸ್ತಾಪ ಇದ್ಯಾ?: ವೇಣುಗೋಪಾಲ್ ಪ್ರತಿಕ್ರಿಯಿಸಿದ್ದು ಹೀಗೆ

    ಸಿಎಂ, ಪರಂ ಮಧ್ಯೆ ಮನಸ್ತಾಪ ಇದ್ಯಾ?: ವೇಣುಗೋಪಾಲ್ ಪ್ರತಿಕ್ರಿಯಿಸಿದ್ದು ಹೀಗೆ

    ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಮತ್ತು ಸಿಎಂ ಸಿದ್ದರಾಮಯ್ಯ ನಡುವೆ ಯಾವುದೇ ಮನಸ್ತಾಪವಿಲ್ಲ. ದೆಹಲಿಯಿಂದ ಎಲ್ಲರೂ ಒಟ್ಟಿಗೆ ಬಂದಿದ್ದೇವೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಹೇಳಿದ್ದಾರೆ.

    ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಆಯೋಜಿಸಿಲಾಗಿರುವ ವಿವಿಧ ಘಟಕಗಳ ಸಭೆ ನಡೆಸಲು ವೇಣುಗೋಪಾಲ್ ನಗರಕ್ಕೆ ಆಗಮಿಸಿದ್ದಾರೆ. ಈ ವೇಳೆ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇಬ್ಬರು ನಾಯಕರ ನಡುವೆ ಯಾವುದೇ ಮನಸ್ತಾಪವಿಲ್ಲ. ಆದರೆ ಸಾಮಾನ್ಯವಾಗಿ ಪಕ್ಷದಲ್ಲಿ ಸಣ್ಣಪುಟ್ಟ ಸಮಸ್ಯೆಗಳು ಇರುತ್ತವೆ. ಪಕ್ಷ ಅಂದ ಮೇಲೆ ಇವೆಲ್ಲಾ ಸಾಮಾನ್ಯವಾಗಿರುತ್ತದೆ ಎಂದರು.

    ಸಿಎಂ ಸಿದ್ದರಾಮಯ್ಯ ಸರ್ಕಾರದ ವತಿಯಿಂದ ನಡೆಸುವ ಜನಾಶೀರ್ವಾದ ಯಾತ್ರೆಯಲ್ಲಿ ಪರಮೇಶ್ವರ್ ಭಾಗವಹಿಸುವುದಿಲ್ಲ. ಪಕ್ಷದ ವತಿಯಿಂದ ನಡೆಯುವ ಕಾರ್ಯಕ್ರಮಗಳಲ್ಲಿ ಮಾತ್ರ ಇಬ್ಬರು ಒಟ್ಟಾಗಿ ಪಾಲ್ಗೊಳ್ಳುತ್ತಾರೆ ಎಂದರು.

    ಇನ್ನೂ ತಮ್ಮ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಅವರು, ಇದು ಕೇವಲ ರಾಜಕೀಯ ಪ್ರೇರಿತ ಆರೋಪವಾಗಿದೆ. ಬಿಜೆಪಿ ಅವರು ಪ್ರತಿಭಟನೆ ಮಾಡಿಕೊಳ್ಳಲಿ. ಆರೋಪದ ಕುರಿತು ಈಗಾಗಲೇ ಎರ್ನಾಕುಲಂ ಮ್ಯಾಜಿಸ್ಟ್ರೇಟ್ ಕೋರ್ಟ್‍ಲ್ಲಿ ಸರೀತಾ ನಾಯರ್ ವಿರುದ್ಧ ಮಾನಹಾನಿ ಮೊಕದ್ದಮೆ ದಾಖಲಿಸಿದ್ದೇನೆ. ಅಲ್ಲದೇ ಕೇರಳ ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ಮಾನಹಾನಿ ಪ್ರಕರಣದ ಆದೇಶದ ಪ್ರತಿ ಲಗತ್ತಿಸಿದ್ದಾರೆ. 40 ವರ್ಷಗಳ ನನ್ನ ಸಾರ್ವಜನಿಕ ರಾಜಕಾರಣದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ. ಕೇರಳದಲ್ಲಿ ಕಾಂಗ್ರೆಸ್ ಸರ್ಕಾರವಿಲ್ಲ, ಸಿಪಿಎಂ ಸರ್ಕಾರ ಅಧಿಕಾರ ನಡೆಸುತ್ತಿದೆ. ಸರ್ಕಾರ ಯಾವುದೇ ತನಿಖೆ ನಡೆಸಿದರೂ ಎದುರಿಸಲು ಸಿದ್ಧ. ಆರೋಪ ಸಾಬೀತಾದ್ರೆ ರಾಜಕೀಯದಿಂದ ನಿವೃತ್ತಿಯಾಗುತ್ತೇನೆ ಎಂದು ಸವಾಲು ಎಸೆದರು. ( ಇದನ್ನೂ ಓದಿ: ಕರ್ನಾಟಕ ಉಸ್ತುವಾರಿಯ ‘ಕೈ’ಚಳಕಕ್ಕೆ ಸರಿತಾಗೆ 5 ದಿನ ನಡೆಯೋಕೂ ಸಾಧ್ಯವಾಗಿಲ್ವಂತೆ! )

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳು ಮಾಡಲು ಬಿಜೆಪಿ ಪಕ್ಷ ಮುಂದಾಗಿದೆ ಎಂಬ ವಿಚಾರವಾಗಿ ಮಾತನಾಡಿದ ಅವರು, ಈ ಕುರಿತು ಸಂಸದ ಪ್ರತಾಪ್ ಅವರ ವಿಡಿಯೋವನ್ನು ನೋಡಿದ್ದೇನೆ. ಕಾನೂನು ಸುವ್ಯವಸ್ಥೆ ಹಾಳು ಮಾಡಿ ಅಶಾಂತಿ ಉಂಟು ಮಾಡುವುದೇ ಅವರ ಸಿದ್ಧಾಂತ. ಕಾನೂನು ವ್ಯವಸ್ಥೆಯನ್ನು ಹದಗೆಡಿಸಲು ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರೇ ಪ್ರಚೋದನೆ ನೀಡುತ್ತಾರೆ ಎಂದರೇ ಅರ್ಥ ಏನು? ಬಿಜೆಪಿ ನಾಯಕರಿಗೆ ಅಭಿವೃದ್ಧಿ ವಿಚಾರದಲ್ಲಿ ಮಾತಾಡಲು ಅವಕಾಶವಿಲ್ಲ. ಹಾಗಾಗಿ ರಾಜ್ಯದಲ್ಲಿ ಕೋಮುಗಲಾಟೆ ವಿಚಾರಗಳನ್ನು ಟಾರ್ಗೆಟ್ ಮಾಡಿಕೊಂಡು ರಸ್ತೆಗಿಳಿದಿದ್ದಾರೆ ಎಂದು ಆರೋಪ ಮಾಡಿದರು.

    https://www.youtube.com/watch?v=eWGguHNhwBQ