Tag: Bangaluru

  • ಗೌರಿ ಹತ್ಯೆ ಮಾಡಿದ್ದ ರಿವಾಲ್ವರ್ ಟಿವಿಯೊಳಗಿಟ್ಟು ಆರಾಮಾಗಿದ್ದ ಸುಪಾರಿ ಕಿಲ್ಲರ್!

    ಗೌರಿ ಹತ್ಯೆ ಮಾಡಿದ್ದ ರಿವಾಲ್ವರ್ ಟಿವಿಯೊಳಗಿಟ್ಟು ಆರಾಮಾಗಿದ್ದ ಸುಪಾರಿ ಕಿಲ್ಲರ್!

    – ವಿಚಾರಣೆ ನಡೆಸಿದಷ್ಟೂ ಹೊರ ಬೀಳುತ್ತಿದೆ ರೋಚಕ ಮಾಹಿತಿ

    ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯಲ್ಲಿ ವಿಶೇಷ ತನಿಖಾ ತಂಡ (ಎಸ್‍ಐಟಿ) ಮಹತ್ವದ ಪ್ರಗತಿ ಸಾಧಿಸಿದೆ. ಗೌರಿ ಹತ್ಯೆಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸುಪಾರಿ ಕಿಲ್ಲರ್ ಒಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಜಯಪುರದ ಜೈಲಿನಲ್ಲಿದ್ದ ಕೈದಿ ನೀಡಿದ್ದ ಸುಳಿವು ಆಧರಿಸಿ ಸುಪಾರಿ ಕಿಲ್ಲರ್ ನನ್ನು ವಶಕ್ಕೆ ಪಡೆದಿರುವ ಪೊಲೀಸರು, ಯಲಹಂಕದ ಮನೆಯಲ್ಲಿ ಮೂರು ರಿವಾಲ್ವರ್ ವಶಪಡಿಸಿಕೊಂಡಿದ್ದಾರೆ.

    ಆರಂಭದಲ್ಲಿ ಈತ ನನಗೆ ಈ ಪ್ರಕರಣದ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದನಾದ್ರೂ ಎಸ್‍.ಐ.ಟಿ ಈ ಮನೆಯಲ್ಲಿ ತೀವ್ರ ಪರಿಶೋಧನೆ ನಡೆಸಿದೆ. ಈ ವೇಳೆ ಮನೆಯಲ್ಲಿದ್ದ ಖಾಲಿ ಟಿವಿಯ ಒಳಗಡೆ 3 ರಿವಾಲ್ವರ್ ಸಿಕ್ಕಿದೆ ಎಂದು ಪಬ್ಲಿಕ್ ಟಿವಿಗೆ ಪೊಲೀಸ್ ಇಲಾಖೆಯ ಉನ್ನತ ಮೂಲಗಳಿಂದ ಮಾಹಿತಿ ಸಿಕ್ಕಿದೆ.

    ಸದ್ಯ ಸುಪಾರಿ ಕಿಲ್ಲರ್ ನನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಜೊತೆಗೆ ಆತನಿಂದ ವಶಕ್ಕೆ ಪಡೆದ ರಿವಾಲ್ವರ್ ತಪಾಸಣೆ ಮಾಡ್ತಿದ್ದಾರೆ. ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಂಟ್ರಿ ಮೇಡ್ ರಿವಾಲ್ವರ್ ರವಾನೆ ಮಾಡಲಾಗಿದೆ. ಸುಪಾರಿ ಕಿಲ್ಲರ್ ವಶಕ್ಕೆ ಪಡೆದು ಪೊಲೀಸರು ನಡೆಸಿದ ವಿಚಾರಣೆ ವೇಳೆ ಈತ ಇನ್ನಷ್ಟು ಮಹತ್ವದ ವಿಚಾರಗಳನ್ನು ಬಾಯ್ಬಿಟ್ಟಿದ್ದಾನೆ. ಈ ಪ್ರಕರಣದ ಹಿಂದೆ ಪ್ರಭಾವಿಗಳಿದ್ದಾರೆ ಎಂಬ ಮಾಹಿತಿಯನ್ನೂ ಈತ ನೀಡಿದ್ದಾನೆ ಎಂಬ ಮಾಹಿತಿಯೂ ಸಿಕ್ಕಿದೆ. ಇನ್ನೊಂದೆರಡು ದಿನಗಳಲ್ಲಿ ಗೌರಿ ಹತ್ಯೆಗೆ ಭಯಾನಕ ಹಾಗೂ ರೋಚಕ ಕ್ಲೈಮ್ಯಾಕ್ಸ್ ಸಿಗಲಿದೆ ಎನ್ನುವುದಂತೂ ಸುಳ್ಳಲ್ಲ.

  • ಹುಸ್ಕೂರು ಪಂಚಾಯ್ತಿ ವ್ಯಾಪ್ತಿಯ ಕಾಮಗಾರಿಯಲ್ಲಿ ಅವ್ಯವಹಾರ ಆರೋಪ ಸುಳ್ಳು- ಅಧ್ಯಕ್ಷರ ಸ್ಪಷ್ಟನೆ

    ಹುಸ್ಕೂರು ಪಂಚಾಯ್ತಿ ವ್ಯಾಪ್ತಿಯ ಕಾಮಗಾರಿಯಲ್ಲಿ ಅವ್ಯವಹಾರ ಆರೋಪ ಸುಳ್ಳು- ಅಧ್ಯಕ್ಷರ ಸ್ಪಷ್ಟನೆ

    ಬೆಂಗಳೂರು: ನಗರದ ಹೊರವಲಯ ನೆಲಮಂಗಲ ಸಮೀಪದ ಹುಸ್ಕೂರು ಪಂಚಾಯ್ತಿ ವ್ಯಾಪ್ತಿಯ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಕೆಲ ಸದಸ್ಯರು ಆರೋಪ ಮಾಡಿದ್ದಕ್ಕೆ ಸಂಬಂಧಿಸಿದಂತೆ ಅಧ್ಯಕ್ಷ ಸೋಮಶೇಖರ್ ಸ್ಪಷ್ಟನೆ ನೀಡಿದ್ದಾರೆ.

    ಈ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿರುವ ಪಂಚಾಯ್ತಿ ಅಧ್ಯಕ್ಷ ಸೋಮಶೇಖರ್, ಪಂಚಾಯ್ತಿ ಕಾಮಗಾರಿಯ ಬಿಲ್ ನಲ್ಲಿ ಅವ್ಯವಹಾರ ಆರೋಪ ನಿರಾಧಾರ. ನಾನು ಯಾವುದೇ ಅವ್ಯವಹಾರ ಮಾಡಿಲ್ಲ. ರಾಜಕೀಯ ಪ್ರೇರಿತ ಹುನ್ನಾರದಿಂದ ನನ್ನ ಮೇಲೆ ಆರೋಪ ಮಾಡಲಾಗಿದೆ. ಆರೋಪ ಸಾಬೀತಾದರೆ ಪಂಚಾಯ್ತಿಯಿಂದ ಹೊರನಡೆಯುವೆ ಎಂದಿದ್ದಾರೆ.

    ನನ್ನ ಅಭಿವೃದ್ಧಿ ಕೆಲಸಗಳನ್ನ ಸಹಿಸಲಾಗದೆ ರಾಜಕೀಯ ಪ್ರೇರಿತವಾಗಿ ಇಲ್ಲಸಲ್ಲದ ಆರೋಪಗಳನ್ನ ಮಾಡಿ ಹುನ್ನಾರ ನಡೆಸುತ್ತಿದ್ದಾರೆ. ಸದಸ್ಯ ಲೋಕೇಶ್ ಮಾಡಿರುವ ಆರೋಪಗಳು ಸುಳ್ಳು ಎಂದು ತಿಳಿಸಿದ್ದಾರೆ.

    ಅಲ್ಲದೆ ಪಂಚಾಯಿತಿ ಅಧ್ಯಕ್ಷನಾದ ದಿನದಿಂದ ಜನರಿಗೆ ಅಗತ್ಯವಿರುವ ಸಮಾಜಮುಖಿ ಕಾರ್ಯಗಳು, ಮೂಲಭೂತ ಸೌಕರ್ಯಗಳನ್ನ ಒದಗಿಸುವ ನಿಟ್ಟಿನಲ್ಲಿ ಕೆಲಸ ಮಡುತಿದ್ದು, ಪಂಚಾಯ್ತಿಯ ಎಲ್ಲ ಸದಸ್ಯರು ಸಾಮರಸ್ಯದಿಂದ ಕೆಲಸ ಮಾಡುತ್ತಿರುವುದಾಗಿ ಹೇಳಿದ್ದಾರೆ.

    ಹೀಗಾಗಿ ಕೇವಲ ರಾಜಕೀಯ ದುರುದ್ದೇಶದಿಂದ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿ ನನ್ನ ಮನಸ್ಸಿಗೆ ನೋವುಂಟು ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

  • ಅಪರಾಧ ನಗರಗಳ ಪಟ್ಟಿಯಲ್ಲಿ ಬೆಂಗ್ಳೂರಿಗೆ 2ನೇ ಸ್ಥಾನ ಸಿಕ್ಕಿದ್ದು ಯಾಕೆ: ರಾಮಲಿಂಗಾ ರೆಡ್ಡಿ ನಿಜವಾದ ಕಾರಣ ವಿವರಿಸಿದ್ರು

    ಅಪರಾಧ ನಗರಗಳ ಪಟ್ಟಿಯಲ್ಲಿ ಬೆಂಗ್ಳೂರಿಗೆ 2ನೇ ಸ್ಥಾನ ಸಿಕ್ಕಿದ್ದು ಯಾಕೆ: ರಾಮಲಿಂಗಾ ರೆಡ್ಡಿ ನಿಜವಾದ ಕಾರಣ ವಿವರಿಸಿದ್ರು

    ಬೆಂಗಳೂರು: ಟ್ರಾಫಿಕ್ ಪೊಲೀಸರು ಜಾಸ್ತಿ ಕಾರ್ಯಚರಣೆ ಮಾಡಿದ್ದ ಹಿನ್ನೆಲೆಯಲ್ಲಿ ದೇಶದಲ್ಲಿ ಅಪರಾಧ ಪ್ರಕರಣಗಳು ದಾಖಲಾದ ನಗರಗಳ ಪಟ್ಟಿಯಲ್ಲಿ ಬೆಂಗಳೂರು ಎರಡನೇ ಸ್ಥಾನ ಪಡೆದಿದೆ ಎಂದು ಗೃಹಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

    ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ ಬಿಡುಗಡೆಗೊಳಿಸಿದ ಅಂಕಿ ಅಂಶಗಳ ಪ್ರಕಾರ ದೇಶದಲ್ಲಿ ಬೆಂಗಳೂರು ಅತ್ಯಾಧಿಕ ಅಪರಾಧ ಪ್ರಕರಣ ದಾಖಲಾದ ನಗರ ಎಂಬ ವರದಿಯಾಗಿತ್ತು. ಆದರೆ ನಗರದಲ್ಲಿ ನಡೆಯುತ್ತಿರುವ ಅಪರಾಧ ಪ್ರಕರಣಗಳ ಅಂಕಿ ಅಂಶಗಳನ್ನು ಗಮನಿಸಿದ ಸಂದರ್ಭದಲ್ಲಿ ಕಳೆದ ಒಂದು ವರ್ಷದಲ್ಲಿ ಸುಮಾರು ಒಂದು ಸಾವಿರ ಪ್ರಕರಣಗಳು ಕಡಿಮೆಯಾಗಿವೆ ಎಂದು ಸ್ಪಷ್ಟಪಡಿಸಿದರು.

    ಶುಕ್ರವಾರ ರಾಮಲಿಂಗಾರೆಡ್ಡಿರವರು ಬೆಂಗಳೂರು ನಗರ ಸಿ.ಎ.ಆರ್ ಕೇಂದ್ರ ಘಟಕದಲ್ಲಿ ನಿರ್ಮಿಸುತ್ತಿರುವ 192 ಪೊಲೀಸ್ ವಸತಿಗೃಹಗಳ ಸಮುಚ್ಛಯದ ನಿರ್ಮಾಣಕ್ಕಾಗಿ ಇಂದು ಶಂಕುಸ್ಥಾಪನೆ ನಡೆಸಿದರು. ಈ ವೇಳೆ ಮಾಧ್ಯಮಗಳ ಪ್ರಶ್ನೆ ಕೇಳಿದಾಗ, ನೀವು ಈ ಪ್ರಶ್ನೆಯನ್ನು ಕೇಳುತ್ತೀರಿ ಎನ್ನುವ ಕಾರಣಕ್ಕಾಗಿ ನಾನು ತಯಾರಿ ಮಾಡಿಕೊಂಡೆ ಬಂದಿದ್ದೇನೆ ಎಂದು ಹೇಳಿ ತಮ್ಮ ಕೈಯಲ್ಲಿದ್ದ ಡೇಟಾವನ್ನು ನೀಡಲು ಆರಂಭಿಸಿದರು. (ಇದನ್ನೂ ಓದಿ:  ಜನ್ರಿಗೆ ಫೈನ್ ಹಾಕಿ ಸರ್ಕಾರಕ್ಕೆ ಕೋಟಿ ಕೋಟಿ ದುಡಿದು ಕೊಟ್ಟ ಬೆಂಗ್ಳೂರು ಟ್ರಾಫಿಕ್ ಪೊಲೀಸರು!)

    ಅಪರಾಧ ಪ್ರಕರಣಗಳಲ್ಲಿ ಕೊಲೆ, ಸುಲಿಗೆ, ದರೋಡೆ, ಸರಗಳ್ಳತನ, ಮನೆ ಕಳ್ಳತನ ಸೇರಿದಂತೆ 9 ವಿಭಾಗಗಳಾಗಿ ವಿಂಗಡಿಸಲಾಗಿದೆ. ಇದರಲ್ಲಿ 2015 ರಲ್ಲಿ ಸುಮಾರು 17,435 ಪ್ರಕರಣಗಳು ದಾಖಲಾಗಿದೆ. 2016 ರಲ್ಲಿ 16,797 ಪ್ರಕರಣಗಳು ದಾಖಲಾಗಿದೆ. ಆಂದರೆ ವಾರ್ಷಿಕವಾಗಿ ಸುಮಾರು ಒಂದು ಸಾವಿರ ಪ್ರಕರಣಗಳು ಕಡಿಮೆಯಾಗಿದೆ. ಆದರೆ ರಾಷ್ಟ್ರೀಯ ಅಪರಾಧ ದಾಖಲೆಗಳಲ್ಲಿ ನಗರ ಎರಡನೇ ಸ್ಥಾನ ಪಡೆದುಕೊಳ್ಳಲು ಪ್ರಮುಖ ಕಾರಣ ಟ್ರಾಫಿಕ್ ಸಂಬಂಧಿಸಿದಂತೆ ಐಪಿಸಿ 283ರ ಅಡಿ ದಾಖಲಾದ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. 2015 ರಲ್ಲಿ ಈ ಕುರಿತು ಕೇವಲ 3,502 ಪ್ರಕರಣಗಳು ಮಾತ್ರ ದಾಖಲಾಗಿದ್ದವು. 2016 ರಲ್ಲಿ 13,759 ಪ್ರಕರಣಗಳು ದಾಖಲಾಗಿದೆ. ಸುಮಾರು 10 ಸಾವಿರ ಪ್ರಕರಣಗಳ ಸಂಖ್ಯೆ ಟ್ರಾಫಿಕ್‍ನಲ್ಲಿ ಹೆಚ್ಚಳವಾಗಿದೆ. ನಗರ ಪೊಲೀಸರು ಹೆಚ್ಚು ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇನ್ನು ನಗರದಲ್ಲಿ ಐಟಿ ಉದ್ಯಮಗಳು ಹೆಚ್ಚಾಗಿರುವುದರಿಂದ ಸೈಬರ್ ಪ್ರಕರಣಗಳು ಹೆಚ್ಚಾಗಿದೆ ಎಂದು ವಿವರಿಸಿದರು. ನಮ್ಮ ಪೊಲೀಸರು ಚೆನ್ನಾಗಿ ಕಾರ್ಯನಿರ್ವಹಿಸುತ್ತಾರೆ ಹೀಗಾಗಿ ನಾವು ನಮ್ಮ ಬೆನ್ನನ್ನು ತಟ್ಟಿಕೊಳ್ಳಬೇಕು ಎಂದು ತಿಳಿಸಿದರು.

    ರಾಷ್ಟ್ರೀಯ ಅಪರಾಧ ದಾಖಲೆ ವಿಭಾಗದ 2016ನೇ ವರದಿ ಪ್ರಕಾರ ದೇಶದ 19 ಮೆಟ್ರೊಪೊಲಿಟನ್ ನಗರಗಳಲ್ಲಿ ಅಪರಾಧ, ಹಿಂಸೆ, ಕೊಲೆ, ಲೈಂಗಿಕ ಕಿರುಕುಳ, ಅತ್ಯಾಚಾರ ಇತ್ಯಾದಿ ಘಟನೆಗಳ ಬಗ್ಗೆ ದಾಖಲಾದ ಪ್ರಕರಣದ ಆಧಾರದಲ್ಲಿ ಬೆಂಗಳೂರು ಎರಡನೇ ಸ್ಥಾನದಲ್ಲಿದೆ. ಅಲ್ಲದೇ ಮಹಿಳೆಯರು ಹಾಗೂ ಮಕ್ಕಳ ಮೇಲೆ ನಡೆಯುವ ಅಪರಾಧ ಪ್ರಕರಣಗಳಲ್ಲಿ ಮೂರನೇ ಸ್ಥಾನದಲ್ಲಿದೆ. ನಂತರದ ಸ್ಥಾನವನ್ನು ಮುಂಬೈ ನಗರ ಪಡೆದುಕೊಂಡಿದೆ.

    ಏನಿದುಐಪಿಸಿ ಸೆಕ್ಷನ್ 283?
    ಐಪಿಸಿ 283 ಪ್ರಕಾರ, ಸಾರ್ವಜನಿಕ ರಸ್ತೆ ಅತಿಕ್ರಮಣ ತಪ್ಪು. ಫುಟ್‍ಪಾತ್‍ನಲ್ಲಿ ಪಾರ್ಕಿಂಗ್ ಮಾಡೋದು ಅಪರಾಧ ಎಂದು ಪರಿಗಣಿಸಲಾಗುತ್ತದೆ. ಮನೆ ಮುಂದಿನ ರಸ್ತೆಯಲ್ಲಿ ವಾಹನ ನಿಲ್ಲಿಸುವುದು ಅಪರಾಧ. ಮನೆ ಎದುರಿನ ಫುಟ್‍ಪಾತ್ ಮೇಲೆ ಪಾರ್ಕಿಂಗ್ ಮಾಡೋದೂ ಅಪರಾಧ. ಪೊಲೀಸ್ ನವರು ಕಂಪ್ಲೇಂಟ್ ಹಾಕಿ ಎಫ್‍ಐಆರ್ ಹಾಕುತ್ತಾರೆ. ವಾಹನ ಸೀಝ್ ಮಾಡಿ ಎತ್ತಕೊಂಡು ಹೋಗ್ತಾರೆ. 90 ದಿನಗಳ ಒಳಗೆ ಚಾರ್ಜ್ ಶೀಟ್ ಹಾಕುತ್ತಾರೆ. ಅಪರಾಧ ಸಾಬೀತಾದ್ರೆ 200 ರೂ. ದಂಡ ಕಟ್ಟಬೇಕಾಗುತ್ತದೆ ಮತ್ತು ಆ ದಂಡವನ್ನ ಕೋರ್ಟಿನಲ್ಲೇ ಕಟ್ಟಬೇಕಾಗುತ್ತದೆ.

    https://www.youtube.com/watch?v=oh8lPilttTE

     

     

     

  • ಆಸ್ಪತ್ರೆಗೆ ಬರುತ್ತಿದ್ದ ಯುವತಿಯರ ಅರೆನಗ್ನ ಫೋಟೋ ಕ್ಲಿಕ್ಕಿಸುತ್ತಿದ್ದ ಕಾಮುಕ ಅಟೆಂಡರ್ ಸಿಕ್ಕಿಬಿದ್ದ

    ಆಸ್ಪತ್ರೆಗೆ ಬರುತ್ತಿದ್ದ ಯುವತಿಯರ ಅರೆನಗ್ನ ಫೋಟೋ ಕ್ಲಿಕ್ಕಿಸುತ್ತಿದ್ದ ಕಾಮುಕ ಅಟೆಂಡರ್ ಸಿಕ್ಕಿಬಿದ್ದ

    ಬೆಂಗಳೂರು: ಆಸ್ಪತ್ರೆಯಲ್ಲಿ ಇಸಿಜಿ ಚಿಕಿತ್ಸೆ ಪಡೆಯಲು ಬಂದ ಮಹಿಳಾ ರೋಗಿಗಳ ಅರೆ ನಗ್ನ ಫೋಟೋ ತೆಗೆಯುತ್ತಿದ್ದ ಕೆ.ಆರ್.ಪುರ ಸರ್ಕಾರಿ ಆಸ್ಪತ್ರೆಯಲ್ಲಿ ನೌಕರ ಈಗ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.

    ರಘು ಬಂಧಿತ ಆರೋಪಿಯಾಗಿದ್ದು, ಕೆ.ಆರ್.ಪುರ ಸರ್ಕಾರಿ ಆಸ್ಪತ್ರೆಯಲ್ಲಿ ಡಿ ಗ್ರೂಪ್ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದ. ಈತ ಮಹಿಳೆಯರ ಜೊತೆ ಅನುಚಿತವಾಗಿ ವರ್ತಿಸುತ್ತಿದ್ದ ಅಲ್ಲದೆ, ಅವರ ಅರೆ ನಗ್ನ ಫೋಟೋ ತೆಗೆಯುತ್ತಿದ್ದ.

    ಶುಕ್ರವಾರ ಆಸ್ಪತ್ರೆಗೆ ಬಂದ ಯುವತಿ ಇಸಿಜಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಅನುಮಾನಗೊಂಡು ಆರೋಪಿಯನ್ನು ಹಿಡಿದು ಮೊಬೈಲ್ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ.

    ಆರೋಪಿಯ ರಘು ಹಲವು ದಿನಗಳಿಂದ ಇಂತಹ ನೀಚ ಕೃತ್ಯದಲ್ಲಿ ತೊಡಗಿದ್ದು, ಆತನ ಮೊಬೈಲ್ ಫೋನ್ ನಲ್ಲಿ ಹಲವು ಮಹಿಳೆಯರ ಆರೆ ನಗ್ನ ಫೋಟೋಗಳು ಪತ್ತೆಯಾಗಿದೆ. ಘಟನೆ ಕುರಿತು ಆಸ್ಪತ್ರೆಯ ಮೇಲಾಧಿಕಾರಿಗಳಿಗೆ ರಘು ವಿರುದ್ಧ ದೂರು ನೀಡಿದ ಯುವತಿ ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ.

    ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಆಸ್ಪತ್ರೆಯ ಟಿ.ಹೆಚ್.ಒ ಡಾ. ಚಂದ್ರಶೇಖರ್ ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

  • ರಮ್ಯಾ ಚುನಾವಣೆಗೆ ಸ್ಪರ್ಧಿಸುತ್ತಾರಾ?: ಪರಮೇಶ್ವರ್ ಈ ಉತ್ತರ ನೀಡಿದ್ರು

    ರಮ್ಯಾ ಚುನಾವಣೆಗೆ ಸ್ಪರ್ಧಿಸುತ್ತಾರಾ?: ಪರಮೇಶ್ವರ್ ಈ ಉತ್ತರ ನೀಡಿದ್ರು

    ಬೆಂಗಳೂರು: ಮಾಜಿ ಸಂಸದೆ ಹಾಗೂ ನಟಿ ರಮ್ಯಾ ರಾಜ್ಯ ರಾಜಕಾರಣಕ್ಕೆ ಪ್ರವೇಶ ಮಾಡುವ ಕುರಿತು ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ರಮ್ಯಾ ಅವರು ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ವಿಚಾರವನ್ನು ಎಲ್ಲೂ ಹೇಳಿಲ್ಲ ಎಂದು ತಿಳಿಸಿದ್ದಾರೆ.

    ರಮ್ಯಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಕುರಿತು ಎಲ್ಲೂ ಹೇಳಿಕೆ ನೀಡಿಲ್ಲ, ನಾವು ಹೇಳಿಲ್ಲ. ರಮ್ಯಾ ಯಾರ ಸಂಪರ್ಕದಲ್ಲಿ ಇದ್ದಾರೋ, ಇಲ್ವೋ ಎಂಬುವುದು ತಿಳಿದಿಲ್ಲ. ಅವರ ಹುಟ್ಟು ಹಬ್ಬದ ದಿನದಂದು ಅವರಿಗೆ ಕರೆ ಮಾಡಿ ಶುಭಾಶಯ ಹೇಳಿದ್ದೆ ಎಂದು ತಿಳಿಸಿದ್ದಾರೆ.

    ಇನ್ನು 2018 ರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಯಾತ್ರೆ ಕೈಗೊಳ್ಳುವ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಪಕ್ಷದವರು ಯಾತ್ರೆ ಮಾಡಿದ ತಕ್ಷಣ ನಾವು ಏಕೆ ಯಾತ್ರೆ ಮಾಡಬೇಕು. ಯಾತ್ರೆ ಮಾಡಿದ ತಕ್ಷಣ ಚುನಾವಣೆಗೆ ತಯಾರಿ ಅಂತ ಏನಿಲ್ಲ. ನಾವು ನಮ್ಮದೇ ರಣತಂತ್ರ ಹೊಂದಿದ್ದೇವೆ. ಈಗಾಗಲೇ ಸರ್ಕಾರದ ಸಾಧನೆಯನ್ನು ಜನರಿಗೆ ತಲುಪಿಸಲು ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದರು.

    ಈ ಬಾರಿಯ ಚುನಾವಣೆಯಲ್ಲಿ ನಾನು ಕೊರಟಗೆರೆಯಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದ ಪರಮೇಶ್ವರ್ ಒಂದು ಕುಟುಂಬದಲ್ಲಿ ಹಲವರಿಗೆ ಟಿಕೆಟ್ ನೀಡುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಲು ಕೋಪಗೊಂಡರು. ಚುನಾವಣೆಯಲ್ಲಿ ಮೂರು ಬಾರಿ ಪರಾಭವಗೊಂಡವರಿಗೆ ಹಾಗೂ ಒಂದು ಕುಟುಂಬದಲ್ಲಿ ಒಬ್ಬರಿಗೆ ಟಿಕೆಟ್ ನೀಡಬೇಕು ಎನ್ನುವ ನಿಯಮ ಇದೆ. ಆದರೆ ಇದು ಜಾರಿಯಾಗಿಲ್ಲ. ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಹೈಕಮಾಂಡ್ ಹೇಗೆ ನಿಯಮ ರೂಪಿಸುತ್ತದೋ ಅದರ ಅನ್ವಯ ಟಿಕೆಟ್ ನೀಡಲಾಗುತ್ತದೆ ಎಂದರು. ಚನ್ನಪಟ್ಟಣದಲ್ಲಿ ಜೆಡಿಎಸ್ ಜೊತೆ ಕಾಂಗ್ರೆಸ್ ಒಳ ಒಪ್ಪಂದ ವಿಚಾರ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಕ್ಷೇತ್ರದಲ್ಲಿ ಸಮರ್ಥ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಕಣಕ್ಕೆ ಇಳಿಸುತ್ತೇವೆ ಎಂದರು.

    ರಮ್ಯಾ ಅವರು ಸಂಸದರಾಗಿ ಆಯ್ಕೆಯಾದ ಕಡಿಮೆ ಅವಧಿಯಲ್ಲಿ ಜಿಲ್ಲೆಯಲ್ಲಿ ಹಲವು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಹೀಗಾಗಿ ಅವರು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ಮಂಡ್ಯದ ಕಾಂಗ್ರೆಸ್ ಅಭಿಮಾನಿಗಳು ಮನವಿ ಮಾಡಿದ್ದರು.

  • ಒಂದು ಅಡಿ ಮುಂದೆ ಹೋಗಿದ್ರೂ KSRTC ಬಸ್ 20 ಅಡಿ ಆಳದ ಗುಂಡಿಗೆ!

    ಒಂದು ಅಡಿ ಮುಂದೆ ಹೋಗಿದ್ರೂ KSRTC ಬಸ್ 20 ಅಡಿ ಆಳದ ಗುಂಡಿಗೆ!

    ಬೆಂಗಳೂರು: ಕೆಎಸ್‍ಆರ್‍ ಟಿಸಿ ಬಸ್ ಹಾಗೂ ಟಿಪ್ಪರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಚಾಲಕರು ಗಂಭೀರವಾಗಿ ಗಾಯಗೊಂಡಿದ್ದು, 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನಲ್ಲಿ ನಡೆದಿದೆ.

    ಆನೇಕಲ್ ನ ಗುಡ್ನಹಳ್ಳಿ ಕೆರೆ ಏರಿ ಮೇಲೆ ಈ ಘಟನೆ ಸಂಭವಿಸಿದ್ದು, ಅಪಘಾತದಲ್ಲಿ ಬಸ್ ಹಾಗೂ ಲಾರಿ ಚಾಲಕರಿಗೆ ಗಂಭೀರ ಗಾಯಗಳಾಗಿದೆ. ಸದ್ಯಕ್ಕೆ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಸ್ ನಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

    ಆನೇಕಲ್ ಡಿಪೋಗೆ ಸೇರಿದ್ದ ಈ ಬಸ್, ಆನೇಕಲ್‍ನಿಂದ ಹೊಸೂರಿನ ಕಡೆ ತೆರಳುತ್ತಿತ್ತು, ಈ ಸಂದರ್ಭದಲ್ಲಿ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಲಾರಿ ಡಿಕ್ಕಿ ಹೊಡೆದ ಪರಿಣಾಮ ಕೆಎಸ್‍ಆರ್‍ಟಿಸಿ ಬಸ್ ಒಂದು ಅಡಿಯಷ್ಟು ಮುಂದೆ ಹೋಗಿದ್ದರೆ 20 ಅಡಿ ಆಳದ ಗುಂಡಿಗೆ ಬಿದ್ದು ಅಪಾಯ ಸಂಭವಿಸುತ್ತಿತ್ತು. ಆದರೆ ಅದೃಷ್ಟವಶಾತ್ ಬಸ್ ಚಕ್ರ ಕೆಸರಿನಲ್ಲಿ ಹೂತುಕೊಂಡಿದ್ದರಿಂದ ಭಾರಿ ಅನಾಹುತ ತಪ್ಪಿದಂತಾಗಿದೆ.

    ಅಪಘಾತ ನಡೆದ ಸ್ಥಳಕ್ಕೆ ಆನೇಕಲ್ ಪೊಲೀಸರು ಬಂದು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

  • ಪ್ರತಾಪ್ ಸಿಂಹ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರಿಗೆ ಕಾಂಗ್ರೆಸ್ಸಿನಿಂದ ಹಣ ಹಂಚಿಕೆ

    ಪ್ರತಾಪ್ ಸಿಂಹ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರಿಗೆ ಕಾಂಗ್ರೆಸ್ಸಿನಿಂದ ಹಣ ಹಂಚಿಕೆ

    ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ, ಒನಕೆ ಓಬವ್ವ ಬಗ್ಗೆ ಕೀಳುಮಟ್ಟದ ಪೋಸ್ಟ್ ಹಂಚಿದ್ದನ್ನು ಖಂಡಿಸಿ ಸಂಸದ ಪ್ರತಾಪ್ ಸಿಂಹ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಾರ್ಯಕರ್ತರಿಗೆ ಕಾಂಗ್ರೆಸ್ ಹಣ ಹಂಚಿಕೆ ಮಾಡಿದೆ.

    ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ನೇತೃತ್ವದಲ್ಲಿ ಇಂದು ನಗರದ ಮೌರ್ಯ ಸರ್ಕಲ್ ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆ ನಡೆಸಿದ ನಂತರ ಬಿಜೆಪಿ ಹಾಗೂ ಪ್ರತಾಪ್ ಸಿಂಹ ಅವರ ವಿರುದ್ಧ ಧಿಕ್ಕಾರ ಕೂಗಿದವರಿಗೆ ಕೆಪಿಸಿಸಿ ವತಿಯಿಂದ ಹಣ ಹಂಚಿಕೆ ಮಾಡುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.

    ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಎಲ್ಲಾ ಮಹಿಳೆಯರಿಗೆ 100 ರೂ. ಹಾಗೂ 500 ರೂ. ಮುಖ ಬೆಲೆಯ ನೋಟುಗಳನ್ನು ಹಂಚಿಕೆ ಮಾಡುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. (ಇದನ್ನೂ ಓದಿ: ಸಂಸದ ಪ್ರತಾಪ್ ಸಿಂಹ ಬೆಂಬಲಿಗರ ವಿರುದ್ಧ ದೂರು ದಾಖಲು )

    ಈ ಸಂದರ್ಭದಲ್ಲಿ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್, ನಾಡಿನ ಇತಿಹಾಸ ಗೊತ್ತಿಲ್ಲದೇ ಏನೇನೋ ಮಾತನಾಡುತ್ತಿರುವ ಬಿಜೆಪಿ ನಾಯಕರು ಹಾಗೂ ಸಂಸದ ಪ್ರತಾಪ್ ಸಿಂಹ ಅವರಿಗೆ ನಾಚಿಕೆಯಾಗ್ಬೇಕು. ಇಡೀ ದೇಶಕ್ಕೆ, ರಾಜ್ಯಕ್ಕೆ ವೀರ ವನಿತೆ ಒಬವ್ವ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ಯಾರು ಎನ್ನುವುದು ಗೊತ್ತು. ಬಿಜೆಪಿಯವರು ಇಡೀ ಸ್ತ್ರೀ ಕುಲಕ್ಕೆ ಅವಮಾನ ಮಾಡಿದ್ದಾರೆ. ಇದಕ್ಕೆ ತಕ್ಕ ಶಿಕ್ಷೆಯನ್ನು ಅನುಭವಿಸಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು. (ಇದನ್ನೂ ಓದಿ: ಓಬವ್ವ, ಕಿತ್ತೂರು ರಾಣಿ ಬಗ್ಗೆ ಪ್ರಕಟವಾದ ಪೋಸ್ಟಿಗೂ ನನಗೂ ಸಂಬಂಧವಿಲ್ಲ: ಪ್ರತಾಪ್ ಸಿಂಹ )

    ಈ ಹಿಂದೆ ನೋಟ್ ಬ್ಯಾನ್ ಆದ ಸಂದರ್ಭಲ್ಲಿ ಕಳೆದ ವರ್ಷ ಕಾಂಗ್ರೆಸ್ ನವೆಂಬರ್ ತಿಂಗಳಿನಲ್ಲಿ ಆಕ್ರೋಶ್ ದಿನವನ್ನು ಆಚರಿಸಲು ಕರೆ ಕೊಟ್ಟಿತ್ತು. ಈ ವೇಳೆ ಪ್ರತಿಭಟನೆಗೆ ಆಗಮಿಸಿದ್ದ ಜನರಿಗೆ ಹಣವನ್ನು ಹಂಚಿಕೆ ಮಾಡಿದ್ದು ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

    https://www.youtube.com/watch?v=EkN6SRtlWtY

  • ಪತ್ನಿಯ ಹತ್ಯೆಗೆ ಸುಪಾರಿ – ಕೊಲೆಗೂ ಮುನ್ನವೇ ಪೊಲೀಸ್ ಅತಿಥಿಯಾದ ಪತಿ, ಸುಪಾರಿ ಗ್ಯಾಂಗ್

    ಪತ್ನಿಯ ಹತ್ಯೆಗೆ ಸುಪಾರಿ – ಕೊಲೆಗೂ ಮುನ್ನವೇ ಪೊಲೀಸ್ ಅತಿಥಿಯಾದ ಪತಿ, ಸುಪಾರಿ ಗ್ಯಾಂಗ್

    ಬೆಂಗಳೂರು: ಪತ್ನಿಯನ್ನು ಕೊಲ್ಲಲು ಸುಪಾರಿ  ನೀಡಿದ ಪತಿ ಹಾಗೂ ಸುಪಾರಿ  ಹಂತಕರ ತಂಡವನ್ನು ವೈಯಾಲಿಕಾವಲ್ ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.

    ಪತಿ ನರೇಂದ್ರಬಾಬು ಹಾಗೂ ಸುಪಾರಿ ಗ್ಯಾಂಗ್ ನ ಸದಸ್ಯರಾದ ಚಿನ್ನಸ್ವಾಮಿ ಮತ್ತು ಅಭಿಲಾಷ್ ಬಂಧಿತ ಆರೋಪಿಗಳು. ನರೇಂದ್ರಬಾಬು ಎಂಬಾತ ತನ್ನ ಪತ್ನಿ ವಿನುತಾರನ್ನು ಕೊಲೆ ಮಾಡಲು ಸುಪಾರಿ ನೀಡಿದ್ದ. ಇದರಂತೆ ಗುರುವಾರ ನಗರದ ವೈಯಾಲಿಕಾವಲ್ ನಲ್ಲಿ ವಿನುತಾರನ್ನು ಕೊಲೆ ಮಾಡಲು ಆಟೋದಲ್ಲಿ ಕಾದು ಕುಳಿತಿದ್ದ ವೇಳೆ ಸುಪಾರಿ ತಂಡವನ್ನು ಪೊಲೀಸರು ಬಂಧಿಸಿದ್ದಾರೆ.

    ಪತಿ ಹಾಗೂ ಪತ್ನಿಯ ನಡುವಿನ ಕೌಟುಂಬಿಕ ಕಲಹವೇ ಕೊಲೆ ಯತ್ನಕ್ಕೆ ಪ್ರಮುಖ ಕಾರಣ ಎಂದು ತಿಳಿದು ಬಂದಿದೆ. ಕಳೆದ ಐದು ವರ್ಷಗಳಿಂದ ದಂಪತಿ ದೂರ ವಾಸಿಸುತ್ತಿದ್ದರು. ಆದರೆ ವಿನುತಾ ಪತಿಯ ಆಸ್ತಿಯಲ್ಲಿ ಪಾಲು ಬೇಕು ಎಂದು ಗಲಾಟೆ ಮಾಡಿದ್ದರು. ಇದೇ ವಿಚಾರಕ್ಕೆ ವೈಯಾಲಿಕಾವಲ್ ಪೊಲೀಸ್ ಸ್ಟೇಷನ್ ಅಲ್ಲಿ ಇಬ್ಬರ ಮೇಲೂ ಐದು ದೂರು ದಾಖಲಾಗಿದೆ.

    ಈ ನಡುವೆ ವಿನುತಾ ಕಳೆದ 6 ತಿಂಗಳ ಹಿಂದೆ ನರೇಂದ್ರಬಾಬು ಮನೆಯಲ್ಲಿ ಸೇರಿಕೊಂಡು ಆತನನ್ನು ಹೊರಹಾಕಿ ಆಸ್ತಿ ಲಪಟಾಯಿಸುವ ಪ್ಲಾನ್ ಮಾಡಿದ್ದರು. ಇದರಿಂದ ಆರೋಪಿ ನರೇಂದ್ರಬಾಬುವಿಗೆ ವಾಸಿಸಲು ಮನೆ ಇರಲಿಲ್ಲ. ಹೀಗಾಗಿ ನರೇಂದ್ರಬಾಬು 15 ಲಕ್ಷ ರೂ. ಗಳಿಗೆ ಪತ್ನಿಯ ಕೊಲೆ ಮಾಡಲು ಸುಪಾರಿ ನೀಡಿದ್ದ. ಅದರಂತೆ ಹಂತಕರಿಗೆ ಎರಡು ಲಕ್ಷ ರೂ. ಅಡ್ವಾನ್ಸ್ ಸಹ ನೀಡಿದ್ದ.

    ಕಳೆದ ಎರಡು ದಿನಗಳ ಹಿಂದೆ ಆಟೋದಲ್ಲಿ ಸುಪಾರಿ ಹಂತಕರು ಮಾರಾಕಾಸ್ತ್ರಗಳೊಂದಿಗೆ ಹೊಂಚು ಹಾಕಿದ್ದರು. ಆದರೆ ಅಂದು ಕೊಲೆ ಸಾಧ್ಯವಾಗಿರಲಿಲ್ಲ. ಕೊಲೆ ಬಗ್ಗೆ ಮಾಹಿತಿ ಪಡೆದ ವೈಯಾಲಿಕಾವಲ್ ಪೊಲೀಸರು ತಕ್ಷಣವೇ ಎಚ್ಚೆತ್ತು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಪ್ರತಿ ದಿನ ಪತ್ನಿಗೆ ನೀನು ದಪ್ಪಗೆ ಇದ್ದೀಯ ಎಂದು ಪತಿ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸರಗೊಂಡಿದ್ದ ವಿನುತಾ ಈ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನುವ ಮಾಹಿತಿ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಪ್ರಸ್ತುತ ವೈಯಾಲಿಕಾವಲ್ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

  • ನಾಪತ್ತೆಯಾಗಿದ್ದ ಎಮ್ಮೆಗಳು ಫೇಸ್‍ಬುಕ್‍ನಿಂದ ಪತ್ತೆಯಾದ್ವು!

    ನಾಪತ್ತೆಯಾಗಿದ್ದ ಎಮ್ಮೆಗಳು ಫೇಸ್‍ಬುಕ್‍ನಿಂದ ಪತ್ತೆಯಾದ್ವು!

    ಚಿಕ್ಕಬಳ್ಳಾಪುರ: ನಾಪತ್ತೆಯಾಗಿದ್ದ ಎಮ್ಮೆಗಳು ಫೇಸ್‍ಬುಕ್ ಪೋಸ್ಟ್ ನಿಂದ ಪತ್ತೆಯಾಗಿರುವ ಅಚ್ಚರಿ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನಲ್ಲಿ ನಡೆದಿದೆ.

    ಮೂಲತಃ ಬೆಂ.ಗ್ರಾ ಜಿಲ್ಲೆಯ ಈಸ್ತೂರು ಗ್ರಾಮದ ನಾರಾಯಣಸ್ವಾಮಿ ಎಂಬುವರಿಗೆ ಸೇರಿದ ಎರಡು ಎಮ್ಮೆಗಳು ಸೋಮವಾರ ನಾಪತ್ತೆಯಾಗಿದ್ದವು. ಎಮ್ಮೆಗಳು ನಾಪತ್ತೆಯಾಗಿರುವುದು ತಿಳಿದ ಅವರು ಸುತ್ತಲ ಹೊಲ, ಗದ್ದೆ, ಪ್ರದೇಶಗಳಲ್ಲಿ ಹುಡುಕಿ ಕೈಚೆಲ್ಲಿ ಕುಳಿತ್ತಿದ್ದರು.

    ಆದರೆ ನಾಪತ್ತೆಯಾದ ಎಮ್ಮೆಗಳು ಈಸ್ತೂರು ಗ್ರಾಮದಿಂದ ಸುಮಾರು 10 ಕಿ.ಮೀ ದೂರ ಪ್ರಯಾಣಿಸಿ ಕೊಂಡ್ರಹಳ್ಳಿ ಗ್ರಾಮದಲ್ಲಿ ಪತ್ತೆಯಾಗಿವೆ. ಅದೇ ಗ್ರಾಮದ ನಿವಾಸಿ ಮೋಹನ್ ಅವರು ಎಮ್ಮೆಗಳಿಗೆ ಹುಲ್ಲು, ಆಹಾರ ನೀಡಿ ಕಟ್ಟಿ ಹಾಕಿದ್ದರು.

    ಎಮ್ಮೆಗಳನ್ನು ಮೂಲ ಮಾಲೀಕರಿಗೆ ಹಿಂದುರುಗಿಸಲು ನಿರ್ಧರಿಸಿದ ಮೋಹನ್ ಅವರು ಎಮ್ಮೆ ಪತ್ತೆಯಾದ ಬಗ್ಗೆ ಮಂಗಳವಾರ ತಮ್ಮ ಫೇಸ್ ಬುಕ್ ಖಾತೆಯಲ್ಲಿ, ಈ ಎಮ್ಮೆಗಳು ಯಾರದ್ದು ನೋಡಿ ಎಂದು ಫೋಟೋ ಸಮೇತ ಸ್ಟೇಟಸ್ ಹಾಕಿ ಪೋಸ್ಟ್ ಮಾಡಿದ್ದರು.

    ಫೇಸ್ ಬುಕ್ ಸ್ಟೇಟಸ್ ನೋಡಿದ ಈಸ್ತೂರು ಗ್ರಾಮದ ಯುವಕ, ಎಮ್ಮೆ ಮಾಲೀಕ ನಾಗೇಶ್ ಅವರಿಗೆ ಮಾಹಿತಿ ನೀಡಿ ಕಳೆದು ಹೋದ ಎಮ್ಮೆಗಳನ್ನು ಮಾಲೀಕನ ಕೈ ತಲುಪುವಂತೆ ಮಾಡಿದ್ದಾರೆ.

     

  • ನಿಮ್ಮ ಮನೆಯಲ್ಲಿ ವೆಸ್ಟರ್ನ್ ಟಾಯ್ಲೆಟ್ ಇದ್ಯಾ? ಹಾಗಾದ್ರೆ ಈ ಸುದ್ದಿ ಓದ್ಲೇಬೇಕು

    ನಿಮ್ಮ ಮನೆಯಲ್ಲಿ ವೆಸ್ಟರ್ನ್ ಟಾಯ್ಲೆಟ್ ಇದ್ಯಾ? ಹಾಗಾದ್ರೆ ಈ ಸುದ್ದಿ ಓದ್ಲೇಬೇಕು

    ಬೆಂಗಳೂರು: ನಿಮ್ಮ ಮನೆಯಲ್ಲಿ ವೆಸ್ಟರ್ನ್ ಟಾಯ್ಲೆಟ್ ಇದ್ಯಾ ಹಾಗಾದರೆ ಟಾಯ್ಲೆಟ್‍ಗೆ ಹೋಗುವ ಮುನ್ನ ಎಚ್ಚರವಾಗಿರಿ.

    ವೆಸ್ಟರ್ನ್ ಶೈಲಿಯ ಟಾಯ್ಲೆಟ್ ಕಮೋಡಲ್ಲಿ ಹಾವು ಕಾಣಿಸಿಕೊಂಡಿರುವ ಘಟನೆ ನಗರದ ಜೀವನ್ ಭೀಮಾ ನಗರದ ಕೇಂದ್ರಿಯಾ ವಿಶ್ವವಿದ್ಯಾಲಯದ ಶೌಚಾಲಯದಲ್ಲಿ ನಡೆದಿದೆ.

    ವಿಶ್ವವಿದ್ಯಾಲಯದ ಶಿಕ್ಷಕರು ಬಳಸುವ ಶೌಚಾಲಯ ಇದಾಗಿದ್ದು, ಸ್ವಲ್ಪ ಎಚ್ಚರ ತಪ್ಪಿದ್ದರೂ ಶಿಕ್ಷಕರ ಜೀವಕ್ಕೆ ಆಪಾಯ ಕಾದಿತ್ತು. ಟಾಯ್ಲೆಟ್‍ನಲ್ಲಿ ಹಾವು ಕಾಣಿಸಿಕೊಂಡ ಕೂಡಲೇ ಬಿಬಿಎಂಪಿ ಅರಣ್ಯ ಘಟಕಕ್ಕೆ ವಿವಿ ಅಧಿಕಾರಗಳು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯ ಘಟಕದ ಸಂರಕ್ಷಕರಾದ ಸುಭಾಷ್ ಹಾವನ್ನು ರಕ್ಷಿಸಿ ಸುರಕ್ಷಿತವಾಗಿ ಅರಣ್ಯದಲ್ಲಿ ಬಿಟ್ಟಿದ್ದಾರೆ.