Tag: Bangladesh Violence

  • ಬಾಂಗ್ಲಾದೇಶದ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ರಾಯಚೂರಲ್ಲಿ ಪ್ರತಿಭಟನೆ

    ಬಾಂಗ್ಲಾದೇಶದ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ರಾಯಚೂರಲ್ಲಿ ಪ್ರತಿಭಟನೆ

    ರಾಯಚೂರು: ಬಾಂಗ್ಲಾದೇಶದ ಹಿಂದೂಗಳ (Bangladesh) ಮೇಲಿನ ದೌರ್ಜನ್ಯ ಹಾಗೂ ಹಿಂದೂ ವಿರೋಧಿ ನೀತಿ ಖಂಡಿಸಿ ರಾಯಚೂರು (Raichuru) ನಗರದ ಅಂಬೇಡ್ಕರ್ ವೃತ್ತದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.ಇದನ್ನೂ ಓದಿ: ಹಾಸನ ಸಮಾವೇಶ ಪಕ್ಷದ ಸಮಾವೇಶ, ಕಾಂಗ್ರೆಸ್‌ನಲ್ಲಿ ಯಾವುದೇ ಗೊಂದಲ ಇಲ್ಲ: ಸುಧಾಕರ್

    ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಇಂದು (ಡಿ.04) ಬಾಂಗ್ಲಾದೇಶದ ಹಿಂದೂಗಳ ಮೇಲಿನ ದೌರ್ಜನ್ಯ ಹಾಗೂ ಹಿಂದೂ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಜಿಲ್ಲೆಯ ವಿವಿಧ ಮಠಗಳ ಪೀಠಾಧಿಪತಿಗಳು, ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ಸೇರಿ ಬಿಜೆಪಿ ಮುಖಂಡರು ಭಾಗವಹಿಸಿದ್ದರು. ವಿವಿಧ ಹಿಂದೂಪರ ಸಂಘಟನೆಗಳ ಮುಖಂಡರು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದರು.

    ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಿ ಬಾಂಗ್ಲಾದೇಶದಲ್ಲಿನ ಹಿಂದೂಗಳಿಗೆ ರಕ್ಷಣೆ ನೀಡುವಂತೆ ಒತ್ತಾಯಿಸಿದರು. ಜೊತೆಗೆ ಬಾಂಗ್ಲಾದೇಶದಲ್ಲಿ ಬಂಧನಕ್ಕೊಳಗಾದ ಹಿಂದೂಗಳ ಬಿಡುಗಡೆಗೆ ಆಗ್ರಹಿಸಿದರು.ಇದನ್ನೂ ಓದಿ: BBK 11: ಶಿಶಿರ್‌ ಹೆಣ್ಮಕ್ಕಳ ಹಿಂದೆ ಸುತ್ತೋ ಜೊಲ್ಲ ಎಂದ್ರಾ ಚೈತ್ರಾ?- ರಣರಂಗವಾಯ್ತು ದೊಡ್ಮನೆ

  • Bangladesh Violence | 7 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾರತಕ್ಕೆ ವಾಪಸ್

    Bangladesh Violence | 7 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾರತಕ್ಕೆ ವಾಪಸ್

    ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂಸಾಚಾರ (Bangladesh Violence) ಭುಗಿಲೆದ್ದ ಹಿನ್ನೆಲೆಯಲ್ಲಿ ಸುಮಾರು 7,200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾರತಕ್ಕೆ (India) ಮರಳಿದ್ದಾರೆ.

    ಜುಲೈ 18 ರಿಂದ ಆಗಸ್ಟ್ 1 ರವರೆಗಿನ ಅವಧಿಯಲ್ಲಿ ಸುಮಾರು 7,200 ಕ್ಕಿಂತ ಹೆಚ್ಚಿನ ಭಾರತೀಯ ವಿದ್ಯಾರ್ಥಿಗಳು ಬಾಂಗ್ಲಾದೇಶದಿಂದ ಭಾರತಕ್ಕೆ ಮರಳಿದ್ದಾರೆ. ದಾಖಲೆಗಳ ಪ್ರಕಾರ 9 ಸಾವಿರ ವಿದ್ಯಾರ್ಥಿಗಳು ಸೇರಿ 19 ಸಾವಿರ ನಾಗರಿಕರು ಬಾಂಗ್ಲಾದೇಶದಲ್ಲಿದ್ದರು ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿವರ್ಧನ್ ಸಿಂಗ್ ತಿಳಿಸಿದ್ದಾರೆ.

    ನೆರೆ ದೇಶ ಬಾಂಗ್ಲಾದಲ್ಲಿ ಹಿಂಸಾಚಾರದಿಂದಾಗಿ ಭಾರತೀಯ ನಾಗರಿಕರು ಮತ್ತು ವಿದ್ಯಾರ್ಥಿಗಳು ಮರಳಿದ್ದು ಅವರಿಗೆ ವಿಶೇಷ ಶಿಬಿರಗಳನ್ನು ತೆರೆಯಲಾಗಿದೆಯೇ? ಮತ್ತು ಅದೆಷ್ಟು ನಾಗರಿಕರನ್ನು ವಾಪಸ್ ಕರೆತರಲಾಗಿದೆ ಎಂದು ಸಚಿವರಿಗೆ ಪ್ರಶ್ನೆ ಕೇಳಲಾಯಿತು.  ಇದನ್ನೂ ಓದಿ: ಬಾಂಗ್ಲಾದಲ್ಲಿ ಮಧ್ಯಂತರ ಸರ್ಕಾರ ರಚನೆ – ಮುಖ್ಯಸ್ಥರಾಗಿ ಮೊಹಮ್ಮದ್ ಯೂನಸ್ ಪ್ರಮಾಣ ವಚನ

    ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರ, ಗುಜರಾತ್, ಉತ್ತರ ಪ್ರದೇಶ, ಬಿಹಾರ, ತಮಿಳುನಾಡು, ರಾಜಸ್ಥಾನ, ಪಶ್ಚಿಮ ಬಂಗಾಳ, ತ್ರಿಪುರ, ಆಸ್ಸಾಂ ಹಾಗೂ ಇನ್ನಿತರ ರಾಜ್ಯಗಳ ವಿದ್ಯಾರ್ಥಿಗಳು ಬಾಂಗ್ಲಾದಲ್ಲಿ ಓದುತ್ತಿದ್ದಾರೆ ಎಂದು ತಿಳಿಸಿದರು.

    ಢಾಕಾ, ಚಿತ್ತಗಾಂಗ್, ರಾಜ್‌ಶಹಿ, ಶೈಲ್ಹೆಟ್ ಮತ್ತು ಖುಲ್ನಾ ಹೈಕಮಿಷನ್‌ಗಳು ಭಾರತದ ಹೈಕಮಿಷನ್‌ನ ಸಂಪರ್ಕದಲ್ಲಿದ್ದು, ಭಾರತೀಯರನ್ನು ಸುರಕ್ಷಿತವಾಗಿ ಕಳುಹಿಸಲು ಸಹಾಯ ಮಾಡುತ್ತಿವೆ. ವಿಮಾನ ನಿಲ್ದಾಣ ಮತ್ತು ಭಾರತ- ಬಾಂಗ್ಲಾದೇಶ ಗಡಿಯಲ್ಲಿ ರಕ್ಷಣೆ ಒದಗಿಸುತ್ತೀವೆ ಎಂದರು.