Tag: Bangladeshi

  • 200 ಜನರ ಕಳ್ಳಸಾಗಣೆ – ಬಾಂಗ್ಲಾದ ತೃತೀಯಲಿಂಗಿ ʻಗುರು ಮಾʼ ಮುಂಬೈನಲ್ಲಿ ಅರೆಸ್ಟ್‌

    200 ಜನರ ಕಳ್ಳಸಾಗಣೆ – ಬಾಂಗ್ಲಾದ ತೃತೀಯಲಿಂಗಿ ʻಗುರು ಮಾʼ ಮುಂಬೈನಲ್ಲಿ ಅರೆಸ್ಟ್‌

    ಮುಂಬೈ: ನಕಲಿ ದಾಖಲೆ (Fake Documents) ಬಳಸಿಕೊಂಡು ಕಳೆದ 30 ವರ್ಷಗಳಿಂದ ಭಾರತದಲ್ಲಿ ನೆಲೆಸಿದ್ದ ಬಾಂಗ್ಲಾದೇಶ (Bangladesh) ಮೂಲದ ತೃತೀಯಲಿಂಗಿಯನ್ನ ಮುಂಬೈನಲ್ಲಿ ಪೊಲೀಸರು ಬಂಧಿಸಲಾಗಿದೆ.

    ಬಂಧಿತ ಆರೋಪಿಯನ್ನ ಆರೋಪಿ ಬಾಬು ಅಯಾನ್ ಖಾನ್ ಅಲಿಯಾಸ್ ಜ್ಯೋತಿ, ಅಲಿಯಾಸ್ ‘ಗುರು ಮಾ’ (Guru Maa) ಎಂದು ಗುರುತಿಸಲಾಗಿದೆ. ಗುರು ಮಾ ಸುಮಾರು 200 ಬಾಂಗ್ಲಾ ಪ್ರಜೆಗಳನ್ನ ಭಾರತಕ್ಕೆ ಕಳ್ಳಸಾಗಣೆ ಮಾಡಿರುವುದಾಗಿ ತಿಳಿದುಬಂದಿದೆ. ಸದ್ಯ ಆರೋಪಿಯನ್ನು ಬಂಧಿಸಿರುವ ಮುಂಬೈ ಪೊಲೀಸರು (Mumbai Police) ತನಿಖೆ ಚುರುಕುಗೊಳಿಸಿದ್ದಾರೆ. ಕಳ್ಳಸಾಗಣೆ ಮಾಡಿರುವ ಸಂಖ್ಯೆ ಇನ್ನೂ ಹೆಚ್ಚಿರಬಹುದೆಂದು ಶಂಕಿಸಿದ್ದಾರೆ.

    300 ಅನುಯಾಯಿ ಹೊಂದಿದ್ದ ಆಧ್ಯಾತ್ಮಿಕ ನಾಯಕಿ:
    ಜ್ಯೋತಿ ಮುಂಬೈನಲ್ಲಿರುವ ಟ್ರಾನ್ಸ್ (Trans) ಜನರಿಗೆ ʻಗುರು ಮಾʼ ಎಂದು ತನ್ನನ್ನು ಪರಿಚಯಿಸಿಕೊಂಡಿದ್ದಳು. ತಾನೊಬ್ಬಳು ಆಧ್ಯಾತ್ಮಿಕ ನಾಯಕಿ ಎಂದು ಹೇಳಿಕೊಂಡಿದ್ದಳು. ಹೀಗಾಗಿ ವಿವಿಧ ನಗರಗಳಲ್ಲಿ ಆಕೆಗೆ 300 ಜನ ಅನುಯಾಯಿಗಳಿದ್ದರು. ಅಲ್ಲದೇ ತಾನು ಭಾರತೀಯ ಪ್ರಜೆ ಎಂದು ಹೇಳಿಕೊಂಡಿದ್ದಳು. ಅದಕ್ಕಾಗಿ ನಕಲಿ ಪ್ರಮಾಣ ಪತ್ರ, ಪ್ಯಾನ್‌ ಕಾರ್ಡ್‌, ಆಧಾರ್‌ ಕಾರ್ಡ್‌ಗಳನ್ನ ನಕಲು ಮಾಡಿದ್ದಳು. ಅಕ್ರಮ ವಲಸಿಗರ ವಿರುದ್ಧದ ಕಾರ್ಯಾಚರಣೆ ವೇಳೆ ಪೊಲೀಸರು ದಾಖಲೆಗಳನ್ನು ಪರಿಶೀಲಿಸಿದಾಗ ಆಕೆ ಬಳಿಕ ಇದ್ದ ದಾಖಲೆಗಳು ನಕಲಿ ಅನ್ನೋದು ಗೊತ್ತಾಗಿದೆ.

    ಕಳ್ಳಸಾಗಣೆ ಮಾಡ್ತಿದ್ದು ಹೇಗೆ?
    ತನಿಖಾಧಿಕಾರಿ ಮೂಲಗಳ ಪ್ರಕಾರ, ಗುರು ಮಾ, ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ ಗಡಿಯ ಮೂಲಕ ಭಾರತಕ್ಕೆ ಅಕ್ರಮವಾಗಿ ಕರೆತರುತ್ತಿದ್ದಳು. ಬಾಂಗ್ಲಾದಿಂದ ಕರೆತಂದು ಮುಂಬೈನ ಶಿವಾಜಿನಗರದಲ್ಲಿ ಬಾಡಿಗೆ ಮನೆಯಲ್ಲಿರಿಸಿದ್ದಳು. ಅವರಿಂದ ಪ್ರತಿ ತಿಂಗಳು 5 ರಿಂದ 10 ಸಾವಿರ ರೂ. ವರೆಗೂ ಬಾಡಿಗೆ ಪಡೆಯುತ್ತಿದ್ದಳು ಎಂದು ತಿಳಿದುಬಂದಿದೆ.

    ಮಹಾರಾಷ್ಟ್ರ ವಸತಿ ಮತ್ತು ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (MHADA) ಅಡಿಯಲ್ಲಿ ನೋಂದಾಯಿಸಲ್ಪಟ್ಟಿದ್ದ ಫ್ಲ್ಯಾಟ್‌ ಹಾಗೂ ಮನೆಗಳನ್ನ ಅತಿಕ್ರಮಣ ಮಾಡಿಕೊಂಡು, ಅಲ್ಲಿಯೇ ಕಳ್ಳಸಾಗಣೆ ಮೂಲಕ ಕರೆತಂದವರನ್ನ ಬಾಡಿಗೆಗೆ ಇರಿದ್ದಳೆಂದು ಹೇಳಲಾಗಿದೆ. ಸದ್ಯ ಈ ಕುರಿತು ಮುಂಬೈ ಪೊಲೀಸರಿಂದ ಹೆಚ್ಚಿನ ತನಿಖೆ ನಡೆಯುತ್ತಿದೆ.

  • ಪ್ರಿಯತಮನನ್ನು ಮದುವೆಯಾಗಲು ಬಾಂಗ್ಲಾದಿಂದ ಭಾರತಕ್ಕೆ ಈಜಿಕೊಂಡೇ ಬಂದ್ಳು!

    ಕೋಲ್ಕತ್ತಾ: ನಾವು ಈ ಹಿಂದೆ ಪ್ರೇಮಿಗಳು ತಮ್ಮ ಪ್ರೀತಿಯನ್ನು ಹುಡುಕಲು ಸಪ್ತ ಸಾಗರವನ್ನೇ ದಾಟಿ ಬರುವಂತಹ ಕಥೆಗಳನ್ನು ಕೇಳಿರುತ್ತೇವೆ. ಆದರೆ ಅವು ಕಾಲ್ಪನಿಕ ಕಥೆಗಳೇ ಹೊರತು ನಿಜವಲ್ಲ. ಆದರೆ ಇಲ್ಲೊಬ್ಬ ಬಾಂಗ್ಲಾದೇಶದ ಯುವತಿ ಭಾರತದಲ್ಲಿರುವ ತನ್ನ ಗೆಳೆಯನನ್ನು ಮದುವೆಯಾಗಲು ಈಜಿಕೊಂಡೇ ಬಂದಿದ್ದಾಳೆ. ತನ್ನ ಪ್ರಾಣವನ್ನೂ ಲೆಕ್ಕಿಸದೇ 1 ಗಂಟೆ ನದಿಯಲ್ಲಿ ಈಜುವ ಮೂಲಕ ಭಾರತ ಪ್ರವೆಶಿಸಿ ತನ್ನ ಪ್ರಿಯತಮನನ್ನು ಕೊನೆಗೂ ಭೇಟಿಯಾಗಿದ್ದಾಳೆ.

    ಹೌದು, ಬಾಂಗ್ಲಾದೇಶದ ಯುವತಿ ಕೃಷ್ಣ ಮಂಡಲ್ ಭಾರತದ ಯುವಕ ಅಭಿಕ್ ಮಂಡಲ್‌ನನ್ನು ಸಾಮಾಜಿಕ ಮಾಧ್ಯಮದಲ್ಲಿ ಭೇಟಿಯಾಗಿ, ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಕೃಷ್ಣ ಬಳಿ ಪಾಸ್‌ಪೋರ್ಟ್ ಇಲ್ಲದ ಕಾರಣ ಆಕೆ ತನ್ನ ಗೆಳೆಯನನ್ನು ಭೇಟಿಯಾಗಲು ಅಕ್ರಮವಾಗಿ ಭಾರತ ಪ್ರವೇಶಿಸಿಲು ನಿರ್ಧರಿಸಿದಳು. ಇದನ್ನೂ ಓದಿ: ಪ್ರೀತಿಸಿ ಮೋಸ ಮಾಡ್ತಾರೆ, ಕೈಗೊಂದು ಮಗು ಕೊಟ್ಟು ಓಡಿ ಹೋಗ್ತಾರೆ – ಲವ್‌ಜಿಹಾದ್ ವಿರುದ್ಧ ಶೋಭಾ ಗುಡುಗು

    ಕೃಷ್ಣ ಮೊದಲು ರಾಯಲ್ ಬೆಂಗಾಲ್ ಟೈಗರ್ಸ್ಗೆ ಹೆಸರುವಾಸಿಯಾಗಿರುವ ಸುಂದರಬನ್ಸ್ ಪ್ರವೆಶಿಸಿದ್ದಳು. ಬಳಿಕ ತನ್ನ ಗೆಳೆಯನನ್ನು ತಲುಪಲು ನದಿಯಲ್ಲಿ ಸುಮಾರು 1 ಗಂಟೆ ಈಜಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ನಾಸಿಕ್ ಧರ್ಮಸಂಸದ್‍ನಲ್ಲಿ ಹನುಮ ಜನ್ಮಸ್ಥಳ ಗಲಾಟೆ- ಕಿಷ್ಕಿಂದೆ ಸ್ವಾಮೀಜಿ ಮೇಲೆ ಹಲ್ಲೆ ಯತ್ನ

    ಮುಂದೇನಾಯ್ತು?
    ಕೃಷ್ಣ 3 ದಿನಗಳ ಹಿಂದೆ ತನ್ನ ಗೆಳೆಯ ಅಭಿಕ್‌ನನ್ನು ಕೋಲ್ಕತ್ತಾದ ಕಾಳಿಘಾಟ್ ದೇವಾಲಯದಲ್ಲಿ ವಿವಾಹವಾಗಿದ್ದಾಳೆ. ಆದರೆ ಆಕೆ ಅಕ್ರಮವಾಗಿ ಭಾರತ ಪ್ರವೇಶಿಸಿರುವುದರಿಂದ ಸೋಮವಾರ ಪೊಲೀಸರು ಬಂಧಿಸಿದ್ದಾರೆ. ಕೃಷ್ಣಳನ್ನು ಬಾಂಗ್ಲಾದೇಶದ ಹೈಕಮಿಷನ್‌ಗೆ ಹಸ್ತಾಂತರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.