Tag: bangladeshi author

  • ಪಾಕ್‌ ಪ್ರಧಾನಿಯಾಗ್ತಾರೆ ಅಂತ ಭವಿಷ್ಯ ನುಡಿದಿದ್ದ ಬುಶ್ರಾ ಬೀಬಿಗೆ ಇಮ್ರಾನ್‌ ಈಗ ಡಿವೋರ್ಸ್‌ ನೀಡಬಹುದು: ತಸ್ಲೀಮಾ

    ಪಾಕ್‌ ಪ್ರಧಾನಿಯಾಗ್ತಾರೆ ಅಂತ ಭವಿಷ್ಯ ನುಡಿದಿದ್ದ ಬುಶ್ರಾ ಬೀಬಿಗೆ ಇಮ್ರಾನ್‌ ಈಗ ಡಿವೋರ್ಸ್‌ ನೀಡಬಹುದು: ತಸ್ಲೀಮಾ

    ಢಾಕಾ: ಇಮ್ರಾನ್‌ ಪಾಕ್‌ ಪ್ರಧಾನಿಯಾಗುತ್ತಾರೆ ಎಂದು ತಮ್ಮ ಆಧ್ಯಾತ್ಮಿಕ ಶಕ್ತಿಯಿಂದ ಭವಿಷ್ಯ ನುಡಿದಿದ್ದ ಬುಶ್ರಾ ಬೀಬಿಗೆ ಇಮ್ರಾನ್‌ ಖಾನ್‌ ಈಗ ವಿಚ್ಛೇದನ ನೀಡಬಹುದು ಎಂದು ಬಾಂಗ್ಲಾದೇಶ ಬರಹಗಾರ್ತಿ ತಸ್ಲೀಮಾ ನಸ್ರಿನ್‌ ಕುಟುಕಿದ್ದಾರೆ.

    ಪಾಕಿಸ್ತಾನದ ಪ್ರಧಾನಿ ಸ್ಥಾನ ಬಿಕ್ಕಟ್ಟು ಕುರಿತು ಟ್ವೀಟ್‌ ಮಾಡಿರುವ ಅವರು, ʻಇಮ್ರಾನ್ ಖಾನ್, ಬುಶ್ರಾ ಅವರನ್ನು ವಿವಾಹವಾದರು. ಏಕೆಂದರೆ ಬುಶ್ರಾ ತನ್ನ ವಿಶೇಷ ಆಧ್ಯಾತ್ಮಿಕ ಶಕ್ತಿಯಿಂದ ಇಮ್ರಾನ್ ಪ್ರಧಾನಿಯಾಗುತ್ತಾರೆ ಎಂದು ಹೇಳಿದ್ದರು. ಆದರೆ ಇಮ್ರಾನ್‌ ತಮ್ಮ ಅವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಗುವುದಿಲ್ಲ ಎಂದು ಅವರು ಭವಿಷ್ಯ ನುಡಿದಿರಲಿಲ್ಲ. ಅದಕ್ಕಾಗಿ ಆಕೆಗೆ ಇಮ್ರಾನ್‌ ವಿಚ್ಛೇದನ ನೀಡಬಹುದು. ಇಮ್ರಾನ್ ಎಂದಿಗೂ ಸಾಯುವುದಿಲ್ಲ ಎಂದು ಭವಿಷ್ಯವಾಣಿ ನುಡಿಯುವ ಹೆಣ್ಣು ಗಿಣಿಯನ್ನು ಖಾನ್‌ ಮದುವೆಯಾಗಬಹುದುʼ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಭಾರತವನ್ನು ಹೊಗಳಿದ ಇಮ್ರಾನ್ ಖಾನ್‍ಗೆ ಪಾಕ್ ಬಿಟ್ಟು ತೊರೆಯಿರಿ ಎಂದ ಷರೀಫ್ ಪುತ್ರಿ

    ಇಮ್ರಾನ್ ಖಾನ್ ಚುನಾವಣೆಯಲ್ಲಿ ಗೆದ್ದ ನಂತರ 2018 ರಲ್ಲಿ ಬುಶ್ರಾ ಬೀಬಿ ಅವರನ್ನು ವಿವಾಹವಾದರು. ಬುಶ್ರಾ ಬೀಬಿ ಅವರು ಪಾಕಿಸ್ತಾನದ ಪ್ರಥಮ ಮಹಿಳೆಯಾದಾಗಿನಿಂದ ವಾಮಾಚಾರ ಮಾಡುತ್ತಿದ್ದಾರೆ ಎಂದು ವಿರೋಧ ಪಕ್ಷಗಳು ಆರೋಪಿಸಿದ್ದವು. ಇಮ್ರಾನ್ ಖಾನ್ 2015 ರಿಂದ ಬುಶ್ರಾ ಬೀಬಿಯನ್ನು ಆಧ್ಯಾತ್ಮಿಕ ಮಾರ್ಗದರ್ಶನಕ್ಕಾಗಿ ಭೇಟಿಯಾಗುತ್ತಿದ್ದರು.

    ಬೀಬಿ ಅವರ ರಾಜಕೀಯ ಭವಿಷ್ಯವಾಣಿಗಳು ನಿಜವಾಗಿವೆ ಎಂದು ಪಾಕಿಸ್ತಾನಿ ಮಾಧ್ಯಮಗಳು ವರದಿ ಮಾಡಿವೆ. ಇಮ್ರಾನ್ ಖಾನ್ ಅವರನ್ನು ಮದುವೆಯಾಗುವ ಮೊದಲು, ಬುಶ್ರಾ ಬೀಬಿ ಅವರು ಸರ್ಕಾರಿ ಅಧಿಕಾರಿಯಾಗಿದ್ದ ಖವಾರ್ ಫರೀದ್ ಮೇನಕಾ ಅವರನ್ನು ವಿವಾಹವಾಗಿದ್ದರು. ಇದನ್ನೂ ಓದಿ: ಪಾಕ್ ಅನ್ನು ಟಿಶ್ಯೂ ಪೇಪರ್ ಆಗಿ ಬಳಸಿ ಎಸೆಯಲಾಗಿದೆ: ಇಮ್ರಾನ್ ಕಿಡಿ

  • ಬಾಂಗ್ಲಾ ಹಿಂದೂಗಳ ವಲಸೆ ಬಗ್ಗೆ ಸಿನಿಮಾ ಯಾಕಾಗಿಲ್ಲ: ಕಾಶ್ಮೀರ್‌ ಫೈಲ್ಸ್‌ಗೆ ಲೇಖಕಿ ತಸ್ಲೀಮಾ ನಸ್ರಿನ್ ಪ್ರತಿಕ್ರಿಯೆ

    ಬಾಂಗ್ಲಾ ಹಿಂದೂಗಳ ವಲಸೆ ಬಗ್ಗೆ ಸಿನಿಮಾ ಯಾಕಾಗಿಲ್ಲ: ಕಾಶ್ಮೀರ್‌ ಫೈಲ್ಸ್‌ಗೆ ಲೇಖಕಿ ತಸ್ಲೀಮಾ ನಸ್ರಿನ್ ಪ್ರತಿಕ್ರಿಯೆ

    ಢಾಕಾ: ಕಾಶ್ಮೀರಿ ಪಂಡಿತರ ವಲಸೆಗೆ ಸಂಬಂಧಿಸಿ ಸಿನಿಮಾ ಮಾಡಿರುವಂತೆ ಬಂಗಾಳಿ ಹಿಂದೂಗಳ ವಲಸೆ ಕುರಿತು ಯಾಕೆ ಸಿನಿಮಾ ಮಾಡಿಲ್ಲ ಎಂದು ಬಾಂಗ್ಲಾದೇಶದ ಲೇಖಕಿ ತಸ್ಲೀಮಾ ನಸ್ರಿನ್‌ ಪ್ರಶ್ನಿಸಿದ್ದಾರೆ.

    ʼದಿ ಕಾಶ್ಮೀರ್‌ ಫೈಲ್ಸ್‌ʼ ಸಿನಿಮಾ ಕುರಿತು ಮಾತನಾಡಿರುವ ಅವರು, ವಿಭಜನೆಯ ಸಮಯದಲ್ಲಿ ಬಾಂಗ್ಲಾದೇಶದಿಂದ ಬಂಗಾಳಿ ಹಿಂದೂಗಳ ವಲಸೆಯ ಕುರಿತು ಯಾವುದೇ ಚಲನಚಿತ್ರ ಏಕೆ ಇಲ್ಲ? ಕಥೆಯು ಶೇ.100 ನಿಜವಾಗಿದ್ದರೆ, ಉತ್ಪ್ರೇಕ್ಷೆಯಿಲ್ಲ. ಅರ್ಧ ಸತ್ಯವಿಲ್ಲದಿದ್ದರೆ ಅದು ನಿಜವಾಗಿಯೂ ದುಃಖದ ಕಥೆಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ದಿ ಕಾಶ್ಮೀರ್ ಫೈಲ್ಸ್ ಮಾದರಿಯಲ್ಲಿ ಯಾವೆಲ್ಲ ಚಿತ್ರಗಳು ಬರಬೇಕು : ಪ್ರಕಾಶ್ ರೈ ಲಿಸ್ಟ್ ನೋಡಿ

    ಕಾಶ್ಮೀರಿ ಪಂಡಿತರು ಕಾಶ್ಮೀರದಲ್ಲಿ ವಾಸಿಸುವ ತಮ್ಮ ಹಕ್ಕನ್ನು ಮರಳಿ ಪಡೆಯಬೇಕು. ಬಾಂಗ್ಲಾದೇಶದ ವಿಭಜನೆ ಸಂದರ್ಭದಲ್ಲಿ ವಲಸೆ ಹೋದ ಹಿಂದೂಗಳ ಬಗ್ಗೆ ಇದುವರೆಗೂ ಯಾಕೆ ಸಿನಿಮಾ ಮಾಡಿಲ್ಲ ಎಂಬುದು ನನಗೆ ಅರ್ಥವಾಗುತ್ತಿಲ್ಲ ಎಂದು ಕೇಳಿದ್ದಾರೆ.

    ವಿವೇಕ್‌ ಅಗ್ನಿಹೋತ್ರಿ ನಿರ್ದೇಶನದ ʼದಿ ಕಾಶ್ಮೀರ್‌ ಫೈಲ್ಸ್‌ʼ ಸಿನಿಮಾ ಮಾ.11ರಂದು ತೆರೆ ಕಂಡಿತು. ಸಿನಿಮಾ ಈಗ ರಾಜಕೀಯ ದೃಷ್ಟಿಕೋನದಲ್ಲಿ ವಿವಾದಕ್ಕೆ ಸಿಲುಕಿದೆ. ಈ ಬಗ್ಗೆ ವ್ಯಾಪಕ ಚರ್ಚೆಗಳು ಹುಟ್ಟುಕೊಂಡಿವೆ. ಇದನ್ನೂ ಓದಿ: ಗುಜರಾತ್ ಫೈಲ್ಸ್ ಚಿತ್ರಕ್ಕಾಗಿ ಪ್ರಧಾನಿ ಮೋದಿಗೆ ಸವಾಲು ಹಾಕಿದ ಬಾಲಿವುಡ್ ನಿರ್ದೇಶಕ

    ಕಾಶ್ಮೀರಿ ಪಂಡಿತರು ವಲಸೆ ಹೋಗುವ ಸಂದರ್ಭದಲ್ಲಿ ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ ಇತ್ತು. ಈ ವೇಳೆ ಕೇಂದ್ರದಲ್ಲಿ ಬಿಜೆಪಿ ಬೆಂಬಲಿತ ವಿ.ಪಿ.ಸಿಂಗ್‌ ಅವರ ಆಡಳಿತ ಇತ್ತು ಎಂದು ಸಿನಿಮಾ ಕುರಿತು ಕಾಂಗ್ರೆಸ್‌ ಟೀಕೆ ವ್ಯಕ್ತಪಡಿಸಿದೆ.