Tag: bank loan

  • SBI ಬ್ಯಾಂಕ್‌ಗೆ 8 ಕೋಟಿ ವಂಚನೆ – 20 ವರ್ಷದಿಂದ ಸಿಗದವರು ಇಮೇಜ್ ಸರ್ಚ್ ಅನಾಲಿಟಿಕ್ಸ್‌ ಸಾಫ್ಟ್‌ವೇರ್‌ನಿಂದ ಸಿಬಿಐಗೆ ಲಾಕ್

    SBI ಬ್ಯಾಂಕ್‌ಗೆ 8 ಕೋಟಿ ವಂಚನೆ – 20 ವರ್ಷದಿಂದ ಸಿಗದವರು ಇಮೇಜ್ ಸರ್ಚ್ ಅನಾಲಿಟಿಕ್ಸ್‌ ಸಾಫ್ಟ್‌ವೇರ್‌ನಿಂದ ಸಿಬಿಐಗೆ ಲಾಕ್

    ಬೆಂಗಳೂರು: ಬ್ಯಾಂಕ್‌ಗೆ (SBI Bank) 20 ಕೋಟಿ ವಂಚಿಸಿ ತಲೆಮರೆಸಿಕೊಂಡಿದ್ದ ಮಹಿಳೆಯನ್ನ ಬರೋಬ್ಬರಿ 20 ವರ್ಷದ ಬಳಿಕ ಸಿಬಿಐ ಪೊಲೀಸರು (CBI Police) ಬಂಧಿಸಿದ್ದಾರೆ.

    ಮಣಿ ಸೇಖರ್ ಬಂಧಿತ ಮಹಿಳೆ. ಎಸ್‌ಬಿಐ ಶಾಖೆಯೊಂದಕ್ಕೆ 8 ಕೋಟಿ ವಂಚನೆ ಮಾಡಿದ್ದ ದಂಪತಿ ಮುತ್ತು ರಾಮಲಿಂಗಂ ಸೇಖರ್ ಮತ್ತು ಪತ್ನಿ ಮಣಿ ಸೇಖರ್ ತಲೆ ಮರೆಸಿಕೊಂಡಿದ್ರು. 2002 -05ರ ನಡ್ವೆ ನಡೆದಿದ್ದ ವಂಚನೆ ಪ್ರಕರಣ ಸಂಬಂಧ ಬೆಂಗಳೂರು ಸಿಬಿಐನಲ್ಲಿ 2006ರಲ್ಲಿ ಎಫ್‌ಐಆರ್ ದಾಖಲಾಗಿತ್ತು. ಇದನ್ನೂ ಓದಿ: 10 ವರ್ಷಗಳಿಂದ ಭಾರತದಲ್ಲಿ ಮಂಗಳಮುಖಿ ವೇಷದಲ್ಲಿದ್ದ ಅಬ್ದುಲ್ ಕಲಾಂ ಅರೆಸ್ಟ್‌

    ಕೇಸ್ ದಾಖಲಾಗ್ತಿದ್ದಂತೆ ತಲೆಮರೆಸಿಕೊಂಡಿದ್ದ ದಂಪತಿ ಮೇಲೆ 2007 ರಲ್ಲಿ ಸಿಬಿಐ ಚಾರ್ಜ್ ಶೀಟ್ ಹಾಕಿತ್ತು. ಆರೋಪಿಗಳ ವಿರುದ್ಧ ನ್ಯಾಯಲಯ 2009 ರಲ್ಲಿ ಪ್ರೊಕ್ಲೈಮೇಷನ್ ಆದೇಶ ಹೊರಡಿಸಿತ್ತು. ಆರೋಪಿಗಳು ತಮ್ಮ ಗುರುತು ಸಿಗದಂತೆ ಕೆವೈಸಿ ಬದಲಿಸಿ ಕೃಷ್ಣ ಕುಮಾರ್ ಗುಪ್ತ ಹಾಗೂ ಗೀತಾ ಕೃಷ್ಣ ಕುಮಾರ್ ಗುಪ್ತ ಎಂದು ಹೆಸರು ಬದಲಾವಣೆ ಮಾಡಿಕೊಂಡಿದ್ರಂತೆ. ಮೊಬೈಲ್ ನಂಬರ್, ಇಮೇಲ್, ಪ್ಯಾನ್‌ ಎಲ್ಲವನ್ನೂ ಬದಲಿಸಿದ್ದ ದಂಪತಿ ಮಧ್ಯಪ್ರದೇಶದ ಇಂದೋರ್ ನಲ್ಲಿ ತಲೆಮರೆಸಿಕೊಂಡು ವಾಸ ಮಾಡ್ತಿದ್ರು. ಇದನ್ನೂ ಓದಿ: Uttar Pradesh | ಸ್ಕೂಲ್ ವ್ಯಾನ್‌ನಲ್ಲಿ 4 ವರ್ಷದ ಬಾಲಕಿ ಮೇಲೆ ರೇಪ್ – ಡ್ರೈವರ್ ಬಂಧನ

    ಸಿಬಿಐ ಅತ್ಯಾಧುನಿಕ ಇಮೇಜ್ ಸರ್ಚ್ ಅನಾಲಿಟಿಕ್ಸ್‌ ಸಾಫ್ಟ್‌ವೇರ್ ಮೂಲಕ ಆರೊಪಿಯನ್ನ ಬಂಧಿಸಿದೆ. ಹಳೇ ಕೇಸ್ ಆರೋಪಿಗಳ ಬಗ್ಗೆ ಸರ್ಚ್ ಮಾಡುವಾಗ ಸುಳಿವು ಪತ್ತೆ‌ಯಾಗಿದ್ದು ಹಳೇ ಇಮೇಜ್ ಇಟ್ಟುಕೊಂಡು ಶೋಧ ನಡೆಸಿದಾಗ ಮಹಿಳೆ ಇಂದೋರ್‌ನಲ್ಲಿ ಪತ್ತೆಯಾಗಿದ್ದಾಳೆ. ಸದ್ಯ ಸಿಬಿಐ ಮಹಿಳೆಯನ್ನ ಬಂಧಿಸಿ ವಿಚಾರಣೆ ನಡೆಸುತ್ತಿದೆ. ವಿಚಾರಣೆ ವೇಳೆ ಗಂಡ ಮುತ್ತು ರಾಮಲಿಂಗಂ ಸಾವಿನ ಕುರಿತು ವಿಚಾರ ತಿಳಿಸಿದ್ದಾಳೆ. ಎಂಟು ಕೋಟಿ ಬ್ಯಾಂಕ್ ಸಾಲ ಪಡೆದು ವಂಚಿಸಿದ್ದ ದಂಪತಿ ಪತ್ತೆಗೆ ಸಿಬಿಐ ತಲಾ 50 ಸಾವಿರ ಬಹುಮಾನ ಕೂಡ ಘೋಷಿಸಿತ್ತು. ಸದ್ಯ ಮಹಿಳೆಯನ್ನ ಬಂಧಿಸಿ ಸಿಬಿಐ ಜೈಲಿಗಟ್ಟಿದೆ. ಇದನ್ನೂ ಓದಿ: Chitradurga | ಮದುವೆಯಾಗಲು ಹೆಣ್ಣು ಸಿಕ್ಕಿಲ್ಲವೆಂದು ಹೋಂ ಗಾರ್ಡ್ ನೇಣಿಗೆ ಶರಣು 

  • ನಾನು ತಪ್ಪು ಮಾಡಿಲ್ಲ, ಇನ್ನೊಬ್ಬರ ಭಿಕ್ಷೆಯಲ್ಲಿ ಬದುಕಬೇಕಿಲ್ಲ: ಉಮಾಪತಿ

    ನಾನು ತಪ್ಪು ಮಾಡಿಲ್ಲ, ಇನ್ನೊಬ್ಬರ ಭಿಕ್ಷೆಯಲ್ಲಿ ಬದುಕಬೇಕಿಲ್ಲ: ಉಮಾಪತಿ

    ಮೈಸೂರು: ನಾನು ತಪ್ಪು ಮಾಡಿಲ್ಲ, 2 ದಿನ ಟೈಮ್ ಬೇಕು ಅಂತಾ ಹೇಳಿದ್ದೇನೆ. ಪೊಲೀಸ್ ಠಾಣೆಗೆ ದೂರು ನೀಡಿದ್ದು, ತನಿಖೆ ನಡೆಯುತ್ತಿದೆ ಎಂದು ರಾಬರ್ಟ್ ಚಿತ್ರದ ನಿರ್ಮಾಪಕ ಉಮಾಪತಿ ಹೇಳಿದ್ದಾರೆ.

    25 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಹರ್ಷ ನನಗೆ ಗೊತ್ತಿರುವ ಸ್ನೇಹಿತರಲ್ಲ. ನನಗೆ ದರ್ಶನ್ ಸರ್‍ರಿಂದ ಪರಿಚಯವಾಗಿದ್ದಾರೆ. ಶ್ಯೂರಿಟಿ ವಿಚಾರವಾಗಿ ನಾನು ದರ್ಶನ್ ಅವರು ಮಾತನಾಡಿಕೊಂಡು ದಾಖಲೆ ಪರಿಶೀಲನೆ ಮಾಡಲು ಮಹಿಳೆಯನ್ನು ಕರೆದಾಗ ಇದು ನಕಲಿ ಎನ್ನುವುದು ಗೊತ್ತಾಯಿತು. ಬಳಿಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇವೆ. ನಿನ್ನೆ ಕೆಲವು ಮಾಹಿತಿಗಳನ್ನು ಕೊಟ್ಟು ಬಂದಿದ್ದೇನೆ ಎಂದು ಉಮಾಪತಿ ತಿಳಿಸಿದರು. ಇದನ್ನೂ ಓದಿ:  ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ – ಗುಡುಗಿದ ದರ್ಶನ್

    ನಾನು ತಪ್ಪು ಮಾಡಿಲ್ಲ, ನನಗೆ ಯಾರು ಟೈಮ್ ಕೊಡಬೇಕಿಲ್ಲ, 2 ದಿನ ಟೈಮ್ ಬೇಕು ಅಂತಾ ಹೇಳಿದ್ದೇನೆ. ಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ತನಿಖೆ ನಡೆಯುತ್ತಿದೆ. ಜನ ಸಾವಿರ ಹೇಳುತ್ತಾರೆ. ಆದರೆ ಪೊಲೀಸ್ ಇಲಾಖೆ ತೀರ್ಮಾನ ಮಾಡುತ್ತದೆ ಎಂದು ಹೇಳಿದರು.

    ವಾಟ್ಸಾಪ್ ಚಾಟ್ ಅನ್ನು ನಾನು 17 ರಂದೇ ನಾನು ದರ್ಶನ್ ಸರ್‍ಗೆ ಕಳುಹಿಸಿದ್ದೇನೆ. ಹಾಗಾಗಿ ನಾನು ಕದ್ದು ಮುಚ್ಚಿ ಮಾಡೋದು ಏನಿದೆ? ನನಗೆ ಏನು ಗುಂಡಿಟ್ಟು ಸಾಯಿಸುತ್ತಾರಾ? ನಾನೇನು ಮಾಡಿದ್ದೇನೆ? ಕಾನೂನು ಇದೆ, ಭಗವಂತ ಇದ್ದಾನೆ. 24 ಗಂಟೆಯಲ್ಲಿ ಈವರೆಗೆ ಬಂದಿದೆ ಇನ್ನು ಉಳಿದದ್ದು ತನಿಖೆ ಮೂಲಕ ಬರುತ್ತದೆ ಎಂದು ತಿಳಿಸಿದರು.

    ದರ್ಶನ್ ಸರ್ ನನ್ನ ಸ್ನೇಹ ಹಾಗೆ ಇದೆ. ನಿನ್ನೆಯಿಂದ ನಾವು ಸಂಪರ್ಕದಲ್ಲೇ ಇದ್ದೇವೆ. ಅವರು ನೇರವಾಗಿ ಮಾತನಾಡುತ್ತಾರೆ. ನನಗೆ ದೇವರು ಎಲ್ಲಾ ಕೊಟ್ಟಿದ್ದಾನೆ. ನಾನೇ ಕಾನೂನು ಮೂಲಕ ಹೋರಾಟ ಮಾಡಬೇಕು. ಇನ್ನೊಬ್ಬರ ಭಿಕ್ಷೆಯಲ್ಲಿ ನಾನು ಬದುಕಬೇಕಿಲ್ಲ. ನನಗೆ ಕುಡಿಯೋದು, ಪಬ್ ಚಟ ಇಲ್ಲ. ಈ ಪ್ರಕರಣದಲ್ಲಿ ನನ್ನ ಸಿಕ್ಕಿಸುವ ಪ್ರಯತ್ನ ನಡೆಸಲಾಗುತ್ತಿದೆ. ನನ್ನದೇನು ತಪ್ಪಿಲ್ಲ. ನಾವು ದೂರು ಕೊಟ್ಟಿದ್ದೇವೆ, ತನಿಖೆಯಲ್ಲಿ ಎಲ್ಲಾ ಬಯಲಾಗುತ್ತದೆ ಎಂದು ಹೇಳಿದ್ದಾರೆ.

    ಸ್ಟೇಷನ್‍ಗೆ ಹೋದಾಗ ಮಹಿಳೆ ಕೂತಿದ್ದರು. ದರ್ಶನ್ ಸರ್ ಮುಂದೆ ಉಮಾಪತಿ ಮಾಡಿಸಿದ್ದು, ಅಂತಾ ಅರುಣಾ ಕುಮಾರಿ ಹೇಳಿದ್ದಾರೆ. ಆದರೆ ಇದನ್ನು ದರ್ಶನ್ ಸರ್ ನಂಬಿಲ್ಲ, ಇದನ್ನ ಸೂಕ್ಷ್ಮವಾಗಿ ಹ್ಯಾಂಡಲ್ ಮಾಡೋಣ ಎಂದು ದರ್ಶನ್ ಸರ್ ಹೇಳಿರುವುದಾಗಿ ತಿಳಿಸಿದರು.

  • ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ – ಗುಡುಗಿದ ದರ್ಶನ್

    ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ – ಗುಡುಗಿದ ದರ್ಶನ್

    ಮೈಸೂರು: 25 ಕೋಟಿ ರೂ. ವಂಚನೆ ಪ್ರಕರಣದ ಹಿಂದೆ ಯಾರಿದ್ದಾರೆ ಎನ್ನುವುದು ಗೊತ್ತಿಲ್ಲ. ತನಿಖೆಯಿಂದ ಮಾತ್ರ ಸತ್ಯಾಂಶ ಬರಲಿದೆ. ನಾನು ಕಾನೂನು ಸಮರ ಮಾಡಲಿದ್ದು ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಗುಡುಗಿದ್ದಾರೆ.

    ಖಾಸಗಿ ಹೋಟೆಲಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಈ ದೋಖಾ ಪ್ರಕರಣದ ಬಗ್ಗೆ ಮಾಹಿತಿ ನೀಡಿದರು. ನಾನು ಸುದ್ದಿಗೋಷ್ಠಿ ನಡೆಸಬಾರದು ಎಂದು ತೀರ್ಮಾನಿಸಿದ್ದೆ. ಆದರೆ ಮಾಧ್ಯಮಗಳಲ್ಲಿ ತಪ್ಪು ಸಂದೇಶ ಪ್ರಕಟವಾಗಬಾರದು ಎಂಬ ಕಾರಣಕ್ಕೆ ಸುದ್ದಿಗೋಷ್ಠಿ ನಡೆಸುತ್ತಿದ್ದೇನೆ ಎಂದು ಹೇಳಿದರು.

    ದರ್ಶನ್ ಹೇಳಿದ್ದೇನು?
    ಲಾಕ್ ಡೌನ್ ಸಮಯದಲ್ಲಿ ನಾನು ಮೈಸೂರಿನಲ್ಲಿದೆ. ಜೂ.6 ರಂದು ಉಮಾಪತಿ ಕರೆ ಮಾಡಿ 25 ಕೋಟಿ ರೂ.ಗೆ ನೀವು ಶ್ಯೂರಿಟಿ ಹಾಕಿದ್ರಾ ಎಂದು ಕೇಳಿದರು. ನಾನು ಇಲ್ಲ ಎಂದು ಹೇಳಿದೆ. ಇದಾದ ಬಳಿಕ ಉಮಾಪತಿ ಅವರು ಕಾನ್ಫರೆನ್ಸ್ ಕಾಲ್ ಮಾಡಿ ಬ್ಯಾಂಕ್ ಉದ್ಯೋಗಿ ಅರುಣಾ ಜೊತೆ ಮಾತನಾಡಿದರು. ಇದಾದ ಬಳಿಕ ಜೂ. 16 ರಂದು ಉಮಾಪತಿ ಅವರು ಅರುಣಾರನ್ನು ನಮ್ಮ ಮನೆಗೆ ಕರೆದುಕೊಂಡು ಬಂದರು. ಆ ಮಹಿಳೆ ನನ್ನ ಸ್ನೇಹಿತ ಹರ್ಷ ಅವರ ಹೆಸರನ್ನು ಹೇಳಿ ಸಾಲ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದರು. ನನ್ನ ಎಲ್ಲ ಸ್ನೇಹಿತರು ಮತ್ತು ಅವರ ಪತ್ನಿಯರ ಬಗ್ಗೆ ನಿಖರವಾಗಿ ಮಾತನಾಡಿದ್ದರಿಂದ ನಾನು ಆ ಮಹಿಳೆಯನ್ನು ನಂಬಿದೆ.

    ಅರುಣಾ ತೋರಿಸಿದ ದಾಖಲೆಯಲ್ಲಿ ನನ್ನ ಹೆಸರು, ಪೊನ್ನಂಪೇಟೆ ವಿಳಾಸ ಮತ್ತು ಆಧಾರ್ ಕಾರ್ಡ್ ನಂಬರ್ ಇತ್ತು. ಬಳಿಕ ಅರುಣಾ ಪೊನ್ನಂಪೇಟೆಯಲ್ಲಿ ಜಾಗ ನೋಡಬೇಕು ಎಂದು ಹೇಳಿದರು. ಹೀಗಾಗಿ ಆ ಮಹಿಳೆ ಜೊತೆ ನಂದೀಶ್, ಮಧುಕೇಶ್ ಎಂಬುವವರು ಬಂದು ತೋಟ ನೋಡಿದ್ದಾರೆ. ತೋಟ ನೋಡುವ ಸಂದರ್ಭದಲ್ಲಿ ಹರ್ಷ ಅವರು ಅಲ್ಲಿದ್ದರು. ಇದನ್ನೂ ಓದಿ: ಲೋನ್ ಪಡೆಯಲು ಶ್ಯೂರಿಟಿ ಹಾಕಿ ಅಂದ್ರು, ದಾಖಲೆಗಳೇ ಇರಲಿಲ್ಲ: ಉಮಾಪತಿ

    ಹರ್ಷ ಅವರನ್ನು ನೋಡಿದ ಕೂಡಲೇ ಅರುಣಾ ಶಾಕ್ ಆದರು. ನಾನು ಯಾವುದೇ ಸಾಲ ತೆಗೆದುಕೊಂಡಿಲ್ಲ ಎಂದು ಹೇಳಿದ ಹರ್ಷ ಅವರು, ಆಕೆಯ ಬ್ಯಾಂಕ್ ಐಡಿ ಕಾರ್ಡ್ ತೋರಿಸುವಂತೆ ಕೇಳಿದಾಗ ಆಕೆ ಅದು ಮೈಸೂರಿಲ್ಲಿದೆ ಎಂದು ಹೇಳಿದರು. ಆಗ ನಮಗೆ ಇದು ಈಕೆ ಬ್ಯಾಂಕ್ ಉದ್ಯೋಗಿ ಅಲ್ಲ ಎನ್ನುವುದು ದೃಢವಾಯಿತು.

    ಈ ಎಲ್ಲ ವಿಚಾರ ಗೊತ್ತಾದಾಗ ಈ ಅರುಣಾ ಕುಮಾರಿ ಯಾರು ಎನ್ನುವುದನ್ನು ನಾವು ಪತ್ತೆ ಮಾಡಿದೆವು. ಅರಣಾ ಕುಮಾರ್ ಖಾಸಗಿ ಭದ್ರತಾ ಸಿಬ್ಬಂದಿಯ ಪತ್ನಿ ಎನ್ನುವುದು ತಿಳಿಯಿತು. ಈಕೆ ಪತಿಯನ್ನು ನಾವು ಸಂಪರ್ಕಿಸಿದಾಗ ಅವರು ನಾನು ಪತ್ನಿ ಕಳೆದ 4-5 ವರ್ಷದಿಂದ ಸಂಪರ್ಕದಲ್ಲಿ ಇಲ್ಲ. ಆಕೆ ಪಿಯುಸಿ ಓದಿದ್ದಾಳೆ ಎಂದು ಹೇಳಿದರು.

    ಇದಾದ ಬಳಿಕ ಆಕೆಯನ್ನು ನಾವು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಮನೆಗೆ ಬರುವಂತೆ ಹೇಳಿದೆವು. ಜೂನ್ 16ಕ್ಕೆ ಆಕೆ ಮನೆಗೆ ಬಂದಾಗ ನಾವು ಯಾರು ಲೋನ್ ತೆಗೆದುಕೊಂಡಿಲ್ಲ. ಎಲ್ಲವೂ ನಕಲಿ ಎನ್ನುವುದು ಗೊತ್ತಾಗಿದೆ ಎಂದಾಗ ಅರುಣಾ ನಾನು ಉಮಾಪತಿ ಕಡೆಯಿಂದ ಬಂದಿದ್ದೇನೆ. ಸತ್ಯ ಹೇಳಿದರೆ ನನಗೆ ಜೀವ ಬೆದರಿಕೆ ಇದೆ ಎಂದು ಹೇಳಿದ್ದರು. ಈ ವಿಚಾರ ತಿಳಿದು ನನಗೆ ಶಾಕ್ ಆಯ್ತು.

    ಉಮಾಪತಿಯವರನ್ನು ಸಂಪರ್ಕಿಸಿದಾಗ ನನಗೆ ಆಕೆ ಫೇಸ್‍ಬುಕ್ ಪರಿಚಯ ಎಂದು ಹೇಳಿದ್ದರು. ಎಲ್ಲವೂ ಗೊಂದಲ ಇರುವುದರಿಂದ ನಾನು ಉಮಾಪತಿಯವರಿಗೆ ದೂರು ನೀಡಲು ಹೇಳಿದ್ದೇನೆ ಎಂದು ವಿವರಿಸಿದರು.

    ಈ ವೇಳೆ ಮಾಧ್ಯಮದವರು ಉಮಾಪತಿಯವರು ಈ ಪ್ರಕರಣದಲ್ಲಿ ಇದ್ದಾರಾ ಎಂಬ ಮಾಧ್ಯಮಗಳ ಪ್ರಶ್ನೆಗೆ, ನನಗೆ ಗೊತ್ತಿಲ್ಲ. ನಾವಿಬ್ಬರು ಉತ್ತಮ ಸ್ನೇಹಿತರು. ರಾಬರ್ಟ್ ಸಿನಿಮಾವನ್ನು ಅವರೇ ನಿರ್ಮಿಸಿದ್ದಾರೆ. ಅಷ್ಟೇ ಅಲ್ಲದೇ ಇನ್ನು ಎರಡು ಸಿನಿಮಾ ನಿರ್ಮಾಣ ಮಾಡಲಿದ್ದಾರೆ. ಮಹಿಳೆ ಜೊತೆ ಏಪ್ರಿಲ್‍ನಿಂದ ಉಮಾಪತಿಯವರು ಚಾಟ್ ಮಾಡಿದ್ದಾರೆ. ಯಾರಿದ್ದಾರೆ ಎನ್ನುವುದು ತನಿಖೆಯಿಂದ ದೃಢಪಡಲಿದೆ ಎಂದು ತಿಳಿಸಿದರು.

  • ಚಾಲೆಂಜಿಂಗ್ ಸ್ಟಾರ್ ದರ್ಶನ್‍ ಹೆಸರಿನಲ್ಲಿ ವಂಚನೆಗೆ ಯತ್ನ – ಮಹಿಳೆಯ ವಿರುದ್ಧ ಯಜಮಾನ ದೂರು

    ಚಾಲೆಂಜಿಂಗ್ ಸ್ಟಾರ್ ದರ್ಶನ್‍ ಹೆಸರಿನಲ್ಲಿ ವಂಚನೆಗೆ ಯತ್ನ – ಮಹಿಳೆಯ ವಿರುದ್ಧ ಯಜಮಾನ ದೂರು

    ಮೈಸೂರು: ತಮ್ಮ ಹೆಸರಿನಲ್ಲಿ ವಂಚನೆಗೆ ಮುಂದಾಗಿದ್ದ ಮಹಿಳೆ ವಿರುದ್ಧ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೈಸೂರಿನ ಎಸಿಪಿ ಕಚೇರಿಗೆ ತೆರಳಿ ದೂರು ಸಲ್ಲಿಸಿದ್ದಾರೆ.

    15 ದಿನಗಳ ಹಿಂದೆ ದರ್ಶನ್ ಬಳಿ ಓರ್ವ ಮಹಿಳೆ ಬಂದು, ನಿಮ್ಮ ಹೆಸರಿನಲ್ಲಿ ಶ್ಯೂರಿಟಿ ಹಾಕಿಕೊಂಡು 25 ಕೋಟಿ ರೂ. ಸಾಲ ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ. ದರ್ಶನ್ ಆಪ್ತ ರಾಬರ್ಟ್ ನಿರ್ಮಾಪಕರಾದ ಉಮಾಪತಿ ಮಹಿಳೆಯನ್ನ ದರ್ಶನ್ ಬಳಿ ಕರೆದುಕೊಂಡು ಬಂದಿರುವ ಬಗ್ಗೆ ತಿಳಿದು ಬಂದಿದೆ. ಇನ್ನೂ ತಮ್ಮ ಹೆಸರಿನಲ್ಲಿ ಶ್ಯೂರಿಟಿ ಹಾಕಿದ್ದಾರೆ ಎನ್ನಲಾದ ಎಲ್ಲ ಗೆಳೆಯರನ್ನು ದರ್ಶನ್ ವಿಚಾರಿಸಿದಾಗ ಮಹಿಳೆಯೇ ನಕಲಿ ಬ್ಯಾಂಕ್ ಮ್ಯಾನೇಜರ್ ಎಂಬುವುದು ತಿಳಿದು ಬಂದಿದೆ.

    ಈ ಸಂಬಂಧ ದರ್ಶನ್ ಮೈಸೂರಿನಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ಮಹಿಳೆ ನಿರ್ಮಾಪಕ ಉಮಾಪತಿಯೇ ಹೀಗೆ ಹೇಳುವಂತೆ ಹೇಳಿದ್ದರು. ಹಾಗಾಗಿ ಸುಳ್ಳು ಮಾಹಿತಿಯನ್ನು ನೀಡುವಂತೆ ಸೂಚಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯ ಪೊಲೀಸರು ನಿರ್ಮಾಪಕ ಉಮಾಪತಿ, ನಟ ದರ್ಶನ್ ಮತ್ತು ಮಹಿಳೆಯನ್ನು ಎಸಿಪಿ ಕಚೇರಿಗೆ ಬಂದಿದ್ದು, ವಿಚಾರಣೆ ನಡೆಯುತ್ತಿದೆ.

     

  • ಸಾಲ ನೀಡದ್ದಕ್ಕೆ ಬ್ಯಾಂಕ್ ಮುಂದೆ ಕಸ ಸುರಿದ್ರು

    ಸಾಲ ನೀಡದ್ದಕ್ಕೆ ಬ್ಯಾಂಕ್ ಮುಂದೆ ಕಸ ಸುರಿದ್ರು

    ಹೈದರಾಬಾದ್: ಸಾಲದ ಅರ್ಜಿಗಳನ್ನು ನಿರಾಕರಿಸಿದ ಕಾರಣ ಬ್ಯಾಂಕ್ ಮುಂದೆ ಕಸದ ರಾಶಿಯನ್ನು ಸುರಿಯುವ ಮೂಲಕ ಪೌರ ಕಾರ್ಮಿಕ ಅರ್ಜಿದಾರರು ತಮ್ಮ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ವಯ್ಯೂರಿನ ಕೃಷ್ಣ ಜಿಲ್ಲೆಯಲ್ಲಿ ನಡೆದಿದೆ.

    ಹಲವಾರು ರಾಷ್ಟ್ರೀಕೃತ ಬ್ಯಾಂಕುಗಳು ಜಗನ್ನಣತೋಡು ಮತ್ತು ಚೆಯುಥಾ ಯೋಜನೆಗಳ ಅಡಿಯಲ್ಲಿ ಸಾಲ ನೀಡಲು ನಿರಾಕರಿಸಲಾಗಿತ್ತು. ಇದು ಅರ್ಜಿದಾರರನ್ನು ಕೆರಳಿಸುವಂತೆ ಮಾಡಿದೆ. ಹೀಗಾಗಿ ಕೋಪಗೊಂಡ ಜನರು ಗುರುವಾರ ವುಯೂರು ಪಟ್ಟಣದ ಮೂರು ಬ್ಯಾಂಕ್ ಶಾಖೆಗಳ ಮುಂದೆ ಕಸದ ರಾಶಿಯನ್ನು ಸುರಿದ್ದಾರೆ. ಮಾರನೇ ದಿನ ಕೆಲಸಕ್ಕೆಂದು ಬ್ಯಾಂಕ್‍ಗೆ ಬಂದ ಅಧಿಕಾರಿಗಳು ಕಸದ ರಾಶಿಯನ್ನು ಕಂಡು ಬೇಸರ ವ್ಯಕ್ತಪಡಿಸಿದ್ದಾರೆ.

    ಬಳಿಕ ಕೂಡಲೇ ತಮ್ಮ ಉನ್ನತ ಮೇಲಾಧಿಕಾರಿಗಳಿಗೆ ಮತ್ತು ಪುರಸಭೆ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ನಂತರ ಕಸದ ರಾಶಿಯನ್ನು ತೆಗೆದು ಬ್ಯಾಂಕ್ ಮುಂದೆ ಸ್ವಚ್ಛಗೊಳಿಸಲಾಗಿದ್ದು, ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ಮುಖಂಡರು ನೈರ್ಮಲ್ಯದ ಕೃತ್ಯವನ್ನು ಖಂಡಿಸಿದ್ದಾರೆ.

    ಈ ಕುರಿತಂತೆ ಮಾತನಾಡಿದ ಕೃಷ್ಣ ಜಿಲ್ಲಾಧಿಕಾರಿ ಎ.ಎಂಡಿ ಇಮ್ತಿಯಾಜ್, ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳ ಮೂಲಕ ಬಡವರಿಗೆ ಸಾಲ ಮಂಜೂರು ಮಾಡುವ ನಿಟ್ಟಿನಲ್ಲಿ ಸಾರ್ವಜನಿಕರು ಸರ್ಕಾರ ಮತ್ತು ಬ್ಯಾಂಕ್ ಸಿಬ್ಬಂದಿ ಜೊತೆ ಸಹಕರಿಸಬೇಕು. ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಕೆಲವು ಕಠಿಣ ಕ್ರಮ ಕೈಗೊಳ್ಳುವುದಾಗಿ ಬ್ಯಾಂಕುಗಳಿಗೆ ಭರವಸೆ ನೀಡಿದ್ದಾರೆ.

  • ಸಾಲ ಪಡೆಯಲು ಹೋಗುತ್ತಿದ್ದ ವ್ಯಕ್ತಿಗೆ ಒಲಿಯಿತು 12 ಕೋಟಿ ರೂ. ಬಂಪರ್ ಲಾಟರಿ

    ಸಾಲ ಪಡೆಯಲು ಹೋಗುತ್ತಿದ್ದ ವ್ಯಕ್ತಿಗೆ ಒಲಿಯಿತು 12 ಕೋಟಿ ರೂ. ಬಂಪರ್ ಲಾಟರಿ

    – ಬಡತನದಿಂದ ಬಳಲುತ್ತಿದ್ದ ಕುಟುಂಬದ ಕೈಹಿಡಿದ ಲಾಟರಿ
    – ಸಾಲ ಪಡೆಯಲು ಹೋಗುತ್ತಿದ್ದ ವ್ಯಕ್ತಿ ಆದ ಕೋಟ್ಯಧಿಪತಿ

    ತಿರುವನಂತಪುರಂ: ಹಣವಿಲ್ಲದೆ ಸಾಲ ಪಡೆಯಲು ಬ್ಯಾಂಕಿಗೆ ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 12 ಕೋಟಿ ರೂ. ಲಾಟರಿ ಹೊಡೆದು ಕೋಟ್ಯಧಿಪತಿ ಆಗಿದ್ದಾರೆ.

    ಕೇರಳದ ಕುರುಚಿಯಾ ರಾಜನ್ ಅವರಿಗೆ 12 ಕೋಟಿ ರೂ. ಲಾಟರಿ ಹೊಡೆದಿದೆ. ಹಿಂದೆ ಮೂರು ಬಾರಿ ಮಾಡಿದ್ದ ಸಾಲ ಇನ್ನೂ ತೀರಿಸಿರಲಿಲ್ಲ, ಆದರೆ ಹಣ ಅವಶ್ಯಕತೆ ಇದ್ದ ಕಾರಣಕ್ಕೆ ನಾಲ್ಕನೇ ಬಾರಿಗೆ ಬ್ಯಾಂಕಿನಲ್ಲಿ ಸಾಲ ಪಡೆಯಲು ರಾಜನ್ ಹೋಗುತ್ತಿದ್ದರು. ಆದರೆ ಬ್ಯಾಂಕಿಗೆ ಹೋಗುವ ದಾರಿಯಲ್ಲೇ ರಾಜನ್ ಕೋಟ್ಯಧಿಪತಿ ಆಗಿದ್ದಾರೆ.

    ತಮ್ಮ ಮನೆಯ ನಿರ್ಮಾಣ ಕೆಲಸ ಅರ್ಧಕ್ಕೆ ನಿಂತಿದ್ದ ಕಾರಣಕ್ಕೆ ರಾಜನ್ ಸಾಕಷ್ಟು ಸಾಲ ಮಾಡಿಕೊಂಡಿದ್ದರು. ಅಲ್ಲದೆ ತಮ್ಮ ಮಗಳ ಮದುವೆಗೂ ಕೂಡ ಸಾಲ ಮಾಡಿದ್ದರು. ಆದರೆ ನಾಲ್ಕನೇ ಬಾರಿಗೆ ಬ್ಯಾಂಕಿನಲ್ಲಿ ಸಾಲ ಪಡೆಯಲು ಹೋಗುವ ಮುನ್ನ 300 ರೂ. ಕೊಟ್ಟು ಲಾಟರಿ ಟಿಕೆಟ್ ಖರೀದಿಸಿದ್ದರು. ಈ ಬಗ್ಗೆ ಯಾರಿಗೂ ತಿಳಿಸಿರಲಿಲ್ಲ.

    ನಾನು ಯಾವಾಗಲೂ ಲಾಟರಿ ಖರೀದಿಸುತ್ತಿರುತ್ತೇನೆ ಎಂದು ನನ್ನ ಪತ್ನಿ ನನ್ನ ಜೊತೆ ಜಗಳವಾಡುತ್ತಿದ್ದಳು. ಅದಕ್ಕೆ ನಾನು ಲಾಟರಿ ಖರೀದಿಸಿದ್ದ ಬಗ್ಗೆ ಯಾರಿಗೂ ಹೇಳಿರಲಿಲ್ಲ. ಆದರೆ ಮಂಗಳವಾರ ಬೆಳಗ್ಗೆ ಕುತೂಹಲದಿಂದ ಕಾಯುತ್ತಿದ್ದೆ. ಆಗ ನಾನು ಖರೀದಿಸಿದ ಲಾಟರಿ ಉಪಯೋಗಕ್ಕೆ ಬಂದಿದ್ದು, ಹಣವಿಲ್ಲದೆ ಸಾಲ ಪಡೆಯಲು ಹೋಗುತ್ತಿದ್ದ ನನಗೆ ಕೋಟಿಗಟ್ಟಲೆ ಹಣ ಸಿಕ್ಕಿದೆ ಎಂದರು.

    ಲಾಟರಿಯಿಂದ ಹಣ ಬಂದಿದ್ದರಿಂದ ನನಗೆ ಸಿಕ್ಕಾಪಟ್ಟೆ ಸಂತೋಷವಾಗಿದೆ ಎಂದು ರಾಜನ್ ಹೀಳಿದ್ದರು. ಈ ಬಗ್ಗೆ ಕುಟುಂಬಸ್ಥರಿಗೆ ತಿಳುತ್ತಿದ್ದಂತೆ ಖುಷಿಯಾಗಿದೆ ಎಂದು ರಾಜನ್ ಅವರ ಕುಟುಂಬವೂ ಸಂತೋಷ ವ್ಯಕ್ತಪಡಿಸಿದ್ದಾರೆ.

  • ಸಾಲ ಮಾಡ್ಬೇಡಿ ಫ್ರೆಂಡ್ಸ್- ವಿಡಿಯೋ ರೆಕಾರ್ಡ್ ಮಾಡಿ ಕ್ಯಾಬ್ ಚಾಲಕ ಆತ್ಮಹತ್ಯೆ

    ಸಾಲ ಮಾಡ್ಬೇಡಿ ಫ್ರೆಂಡ್ಸ್- ವಿಡಿಯೋ ರೆಕಾರ್ಡ್ ಮಾಡಿ ಕ್ಯಾಬ್ ಚಾಲಕ ಆತ್ಮಹತ್ಯೆ

    ಬೆಂಗಳೂರು: ಸಾಲದ ಕಂತು ಪಾವತಿಸಿಲ್ಲ ಎಂದು ಸಾರ್ವಜನಿಕವಾಗಿ ಬ್ಯಾಂಕ್ ಮ್ಯಾನೇಜರ್, ಸಿಬ್ಬಂದಿಯಿಂದ ನಿಂದನೆಗೊಳಗಾದ ಕಾರಣ ಕ್ಯಾಬ್ ಚಾಲಕರೊಬ್ಬರು ಆತ್ಮಹತ್ಯೆಗೆ ಶರಣಾಗಿರೋ ಘಟನೆ ನಗರದ ಬೈಯ್ಯಪ್ಪನಹಳ್ಲಿ ಪೊಲೀಸ್ ಠಾಣೆ ವ್ಯಾಪ್ತಿಯ ಬೆನ್ನಿಗಾನಹಳ್ಳಿಯಲ್ಲಿ ಕಳೆದ ರಾತ್ರಿ ನಡೆದಿದೆ.

    ಕ್ಯಾಬ್ ಚಾಲಕರಾಗಿದ್ದ ಅನಿಲ್(25) ಮೃತ ದುರ್ದೈವಿ. ಸಾವಿಗೂ ಮುನ್ನ ಅನಿಲ್ ಮನೆಯಲ್ಲಿ ಮೊಬೈಲ್ ವಿಡಿಯೋ ರೆಕಾರ್ಡ್ ಮಾಡಿ ನೇಣಿಗೆ ಶರಣಾಗಿದ್ದಾರೆ. ನನ್ನ ಸಾವಿಗೆ ಸಾಲವೇ ಕಾರಣ. ಯಾವುದೇ ಕಾರಣಕ್ಕೂ ಬ್ಯಾಂಕ್‍ನಲ್ಲಿ ಯಾರೂ ಸಾಲ ಮಾಡಬೇಡಿ. ಹೆಂಡತಿ, ಮಕ್ಕಳು ಯಾರಿಂದಲೂ ನನಗೆ ಬೇಜಾರಿಲ್ಲ. ಸಾಲ ಮಾಡಬೇಡಿ ಫ್ರೆಂಡ್ಸ್, ಗುಡ್‍ಬೈ ಎಂದು ಅನಿಲ್ ಹೇಳಿರುವ ಮೊಬೈಲ್ ವಿಡಿಯೋ ಪತ್ತೆಯಾಗಿದೆ.

    ಅನಿಲ್ ಬೆನ್ನಿಗಾನಹಳ್ಳಿಯ ಎಸ್‍ಬಿಐ ಬ್ಯಾಂಕ್ ಶಾಖೆಯಲ್ಲಿ 5 ಲಕ್ಷ ರೂ. ಸಾಲ ಮಾಡಿದ್ದರು. ಆದ್ರೆ ಕಳೆದ ಮೂರು ತಿಂಗಳ ಕಂತು ಪಾವತಿಸಿರಲಿಲ್ಲ. ಹೀಗಾಗಿ ಕಂತು ಕಟ್ಟಿ ಎಂದು ಕಳೆದ 15 ದಿನಗಳಿಂದ ಬ್ಯಾಂಕ್ ಸಿಬ್ಬಂದಿ ಹೇಳಿದ್ದರು. ಮಂಗಳವಾರ ಮನೆ ಬಳಿ ಬಂದ ಬ್ಯಾಂಕ್ ಸಿಬ್ಬಂದಿ, ಕಂತು ಕಟ್ಟಿಲ್ಲವೆಂದರೆ ಮನೆ ಹರಾಜು ಹಾಕುವ, ನೋಟಿಸ್ ನೀಡುವ ಬೆದರಿಕೆ ಹಾಕಿದ್ದರು.

    ಬ್ಯಾಂಕ್ ಮ್ಯಾನೇಜರ್ ಹಾಗೂ ಸಿಬ್ಬಂದಿ ಮಾತಿನಿಂದ ಮನನೊಂದು ಅನಿಲ್ ನೇಣಿಗೆ ಶರಣಾಗಿದ್ದಾರೆ. ಅನಿಲ್ ತನ್ನ ತಂದೆ, ತಾಯಿ ಹಾಗೂ ಹೆಂಡತಿ ಮಕ್ಕಳನ್ನ ಅಗಲಿದ್ದಾರೆ.

  • ರೈತರ ಬಗ್ಗೆ ಇದ್ದಕ್ಕಿದ್ದಂತೆ ಫುಲ್ ಕಾಳಜಿ: ಸಾಲ ವಸೂಲಿಗೆ ಸಿಎಂ ಬ್ರೇಕ್

    ರೈತರ ಬಗ್ಗೆ ಇದ್ದಕ್ಕಿದ್ದಂತೆ ಫುಲ್ ಕಾಳಜಿ: ಸಾಲ ವಸೂಲಿಗೆ ಸಿಎಂ ಬ್ರೇಕ್

    ಮಂಡ್ಯ: ರಣಭಯಂಕರ ಬರಗಾಲ ಇದ್ದರೂ ಬಜೆಟ್‍ನಲ್ಲಿ ರೈತರ ಸಾಲ ಮನ್ನಾ ಮಾಡದ ಸಿಎಂ ಸಿದ್ದರಾಮಯ್ಯನವರಿಗೆ ಈಗ ಅನ್ನದಾತರ ಮೇಲೆ ಪ್ರೀತಿ ಉಕ್ಕಿದಂತಿದೆ. ಮಳವಳ್ಳಿಯಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ವೇಳೆ ಮಾತನಾಡಿ, ಮಳೆ-ಬೆಳೆ ಆಗುವವರೆಗೂ ರೈತರ ಸಾಲ ವಸೂಲಿ ಮಾಡಬೇಡಿ, ನೋಟಿಸ್  ನೀಡಬೇಡಿ ಅಂತ ಬ್ಯಾಂಕ್‍ಗಳಿಗೆ ಸೂಚಿಸಿದ್ದಾರೆ.

    ಬಲವಂತವಾಗಿ ಸಾಲ ವಸೂಲಿ ಮಾಡಿದ್ರೆ ಗಂಭೀರ ಕ್ರಮ ಕೈಗೊಳ್ಳಬೇಕಾಗುತ್ತೆ ಅಂತ ಎಚ್ಚರಿಸಿದ್ದಾರೆ. ಇದೇ ವೇಳೆ ಸಾಲಮನ್ನಾ ಬಗ್ಗೆ ರೈತರು ಪ್ರಶ್ನಿಸಿದ್ದಕ್ಕೆ, ಸಾಲಮನ್ನಾ ಮಾಡಲು ನಾನು ಸಿದ್ಧ. ಆದ್ರೆ, ಕೇಂದ್ರ ಸರ್ಕಾರ ಮುಂದೆ ಬರುತ್ತಿಲ್ಲ. ಪ್ರಧಾನಿ ಮೋದಿ ಅವರಿಗೂ ಮನವಿ ಮಾಡಿದ್ದೇನೆ. ಸರ್ವಪಕ್ಷ ಸಭೆಯಲ್ಲಿ ಬಿಜೆಪಿಯವರು ತುಟಿನೇ ಬಿಚ್ಚಲಿಲ್ಲ ಅಂತ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದರು.

    2018ರಲ್ಲಿ ಬಿಜೆಪಿಯವರು ಅವರಪ್ಪನಾಣೆ ಗೆಲ್ಲಲ್ಲ ಅಂದ್ರು. ಇನ್ನು, ವೇದಿಕೆಯಲ್ಲಿ ನಿದ್ದೆಗೆ ಜಾರಿದ್ದಾಗ ಕನ್ನಡಕ ಜಾರಿಬಿತ್ತು. ಅಲ್ಲದೆ, ಕಾಫಿಯನ್ನೂ ಮೇಲೆ ಚೆಲ್ಲಿಕೊಂಡ್ರು.

    ಇದಕ್ಕೂ ಮುನ್ನ, ಸಿದ್ದರಾಮಯ್ಯ ಕಾರಿಗೆ ಬಿಜೆಪಿ ಕಾರ್ಯಕರ್ತರು ಕಪ್ಪುಬಾವುಟ ತೋರಿಸಿ, ಮುತ್ತಿಗೆ ಹಾಕಿದ್ರು. ಪ್ರತಿಭಟನೆ ಹತ್ತಿಕ್ಕಲು ವಿಫಲರಾದ ಮಂಡ್ಯ ಎಸ್‍ಪಿ ಸುಧೀರ್‍ಕುಮಾರ್ ರೆಡ್ಡಿಗೆ ಸಿಎಂ ಅಲ್ಲೇ ಕ್ಲಾಸ್ ತಗೊಂಡ್ರು.

    ಸಿಎಂ ಅವ್ರನ್ನ ಮೈಸೂರಿಗೆ ಬಿಟ್ಟು, ವಾಪಸ್ ಬೆಂಗಳೂರಿಗೆ ಬರುವಾಗ ಸಚಿವರಾದ ಶಿವಕುಮಾರ್, ಜಯಚಂದ್ರ ಮತ್ತು ಎಂಬಿ ಪಾಟೀಲ್ ಅವರಿದ್ದ  ಹೆಲಿಕಾಪ್ಟರ್‍ಗೆ ಗಾಳಿ-ಮಳೆ ಅಡ್ಡಿಯಾದ ಕಾರಣ ಮೈಸೂರಿಗೆ ಹಿಂತಿರುಗಿದ್ರು.

    ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ರೈತರ ಸಾಲ ಮನ್ನಾ ಆಗಿದೆ ನೀವ್ಯಾಕೆ ಮಾಡಲ್ಲ ಪ್ರಶ್ನೆಗೆ ಸಿಎಂ ಉತ್ತರ ಇದು