Tag: bankrupt

  • ಕಾಂಗ್ರೆಸ್‌ನ ಗ್ಯಾರಂಟಿಗಳು ದೇಶವನ್ನು ದಿವಾಳಿಗೆ ತಳ್ಳಬಹುದು: ಮೋದಿ ಎಚ್ಚರಿಕೆ

    ಕಾಂಗ್ರೆಸ್‌ನ ಗ್ಯಾರಂಟಿಗಳು ದೇಶವನ್ನು ದಿವಾಳಿಗೆ ತಳ್ಳಬಹುದು: ಮೋದಿ ಎಚ್ಚರಿಕೆ

    ಜೈಪುರ: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election) ಸಂದರ್ಭ ಕಾಂಗ್ರೆಸ್ (Congress) ಹೊಸ ಗ್ಯಾರಂಟಿ ಸೂತ್ರವನ್ನು (Guarantee Formula) ಹೆಣೆದಿದೆ. ಕಾಂಗ್ರೆಸ್‌ನವರ ಈ ಗ್ಯಾರಂಟಿಗಳು ದೇಶವನ್ನು ದಿವಾಳಿಯಾಗಿಸಬಹುದು (Bankrupt) ಎಂದು ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ.

    ಬುಧವಾರ ರಾಜಸ್ಥಾನದ (Rajasthan) ಅಜ್ಮೀರದಲ್ಲಿ ನಡೆದ ರ‍್ಯಾಲಿಯಲ್ಲಿ ಮಾತನಾಡಿದ ಮೋದಿ, ಕಾಂಗ್ರೆಸ್ ರಾಜ್ಯ ಚುನಾವಣೆಗಳಿಗಾಗಿ ಗ್ಯಾರಂಟಿ ಸೂತ್ರಗಳನ್ನು ಸೃಷ್ಟಿಸಿದೆ. ಆದರೆ ಅವರು ತಾವು ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸುತ್ತಾರಾ? ಕಲ್ಯಾಣಕ್ಕಾಗಿ ಅವರಿಗೆ ಇಷ್ಟೊಂದು ಹಣ ಎಲ್ಲಿಂದ ಬರುತ್ತದೆ ಎಂದು ಜನರು ಆಶ್ಚರ್ಯಪಡುತ್ತಿದ್ದಾರೆ. ಆದರೆ ಅವರಿಗೆ ಎಂದಿಗೂ ಹಣದ ಸಮಸ್ಯೆಯೇ ಆಗಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

    50 ವರ್ಷಗಳ ಹಿಂದೆ ಕಾಂಗ್ರೆಸ್ ದೇಶದಲ್ಲಿ ಬಡತನ ತೊಡೆದುಹಾಕುತ್ತದೆ ಎಂದು ಭರವಸೆ ನೀಡಿತ್ತು. ಆದರೆ ಇದು ಅವರು ಬಡವರಿಗೆ ಬಗೆದಿರುವ ದೊಡ್ಡ ದ್ರೋಹವಾಗಿದೆ. ಬಡವರ ದಾರಿ ತಪ್ಪಿಸುವುದು ಮತ್ತು ಅವರನ್ನು ವಂಚಿತರನ್ನಾಗಿ ಮಾಡುವುದು ಕಾಂಗ್ರೆಸ್‌ನ ನೀತಿಯಾಗಿದೆ. ಇದರಿಂದ ರಾಜಸ್ಥಾನದ ಜನರು ಕೂಡಾ ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ರಾಜಸ್ಥಾನಕ್ಕೆ ಏನು ಸಿಕ್ಕಿದೆ? ಶಾಸಕರು, ಸಿಎಂ ಹಾಗೂ ಮಂತ್ರಿಗಳು ತಮ್ಮ ತಮ್ಮಲ್ಲೇ ಕಿತ್ತಾಡಿಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಜ್ಞಾನವಾಪಿ ಕೇಸ್‌ – ಮುಸ್ಲಿಂ ಸಮಿತಿ ಸಲ್ಲಿಸಿದ್ದ ಅರ್ಜಿ ವಜಾ, ಐವರು ಹಿಂದೂ ಮಹಿಳೆಯರಿಗೆ ಗೆಲುವು

    2014 ಕ್ಕೂ ಮೊದಲು ಭ್ರಷ್ಟಾಚಾರದ ವಿರುದ್ಧ ಜನರು ಬೀದಿಗಿಳಿದಿದ್ದರು. ಪ್ರಮುಖ ನಗರಗಳಲ್ಲಿ ಭಯೋತ್ಪಾದಕ ದಾಳಿಗಳು ನಡೆದಿದ್ದರೂ ಕಾಂಗ್ರೆಸ್ ರಿಮೋಟ್ ಕಂಟ್ರೋಲ್ ಮೂಲಕ ಸರ್ಕಾರವನ್ನು ನಡೆಸುತ್ತಿತ್ತು. ಕಾಂಗ್ರೆಸ್ ದೇಶದ ರಕ್ತವನ್ನು ಹೀರುವ ಮತ್ತು ಅಭಿವೃದ್ಧಿಗೆ ಅಡ್ಡಿಪಡಿಸುವ ಭ್ರಷ್ಟ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿದೆ ಎಂದು ವಾಗ್ದಾಳಿ ನಡೆಸಿದರು.

    ಈಗ ದೇಶದಲ್ಲಿ ಬಿಜೆಪಿ ಸರ್ಕಾರದಿಂದಾಗಿ ಜಗತ್ತು ಭಾರತದ ಬಗ್ಗೆ ಮಾತನಾಡುತ್ತಿದೆ. ಕಳೆದ 9 ವರ್ಷಗಳಲ್ಲಿ ತಮ್ಮ ಸರ್ಕಾರ ಜನರ ಸೇವೆ, ಉತ್ತಮ ಆಡಳಿತ ಮತ್ತು ಬಡವರ ಕಲ್ಯಾಣಕ್ಕಾಗಿ ಸಮರ್ಪಿತವಾಗಿದೆ. ತೀವ್ರ ಬಡತನವನ್ನು ಕೊನೆಗೊಳಿಸಲು ಭಾರತ ಹತ್ತಿರದಲ್ಲಿದೆ ಎಂದು ನುಡಿದರು. ಇದನ್ನೂ ಓದಿ: ಜೂನ್‌ 1ಕ್ಕೆ ನಡೆಯಬೇಕಿದ್ದ ಕ್ಯಾಬಿನೆಟ್‌ ಸಭೆ ಶುಕ್ರವಾರಕ್ಕೆ ಹೋಗಿದ್ದು ಯಾಕೆ?

  • ಪತನದ ಭೀತಿಯಲ್ಲಿ ಮತ್ತೊಂದು ಬ್ಯಾಂಕ್ – ಕ್ರೆಡಿಟ್ ಸ್ಯೂಸಿ ಸಹಾಯಕ್ಕೆ ನಿಂತ ಸ್ವಿಸ್ ಬ್ಯಾಂಕ್

    ಪತನದ ಭೀತಿಯಲ್ಲಿ ಮತ್ತೊಂದು ಬ್ಯಾಂಕ್ – ಕ್ರೆಡಿಟ್ ಸ್ಯೂಸಿ ಸಹಾಯಕ್ಕೆ ನಿಂತ ಸ್ವಿಸ್ ಬ್ಯಾಂಕ್

    ವಾಷಿಂಗ್ಟನ್: ಅಮೆರಿಕದಲ್ಲಿ (America) ಕಳೆದ ಕೆಲವು ದಿನಗಳಿಂದ ಒಂದಾದ ಮೇಲೊಂದರಂತೆ ಬ್ಯಾಂಕುಗಳು (Bank) ದಿವಾಳಿಯಾಗುತ್ತಿವೆ. ಕಳೆದ 10 ದಿನಗಳಲ್ಲಿ ಅಮೆರಿಕದ 3 ಬ್ಯಾಂಕುಗಳು ದಿವಾಳಿಯಾಗಿರುವ ಬೆನ್ನಲ್ಲೇ ಜಗತ್ತಿನ 8ನೇ ಅತಿ ದೊಡ್ಡ ಬ್ಯಾಂಕ್ ‘ಕ್ರೆಡಿಟ್ ಸ್ಯೂಸಿ’ (Credit Suisse) ನೆಲಕಚ್ಚುವ ಭೀತಿಯಲ್ಲಿದೆ.

    ಸ್ವಿಡ್ಜರ್‌ಲ್ಯಾಂಡ್ (Switzerland) ಮೂಲದ ಕ್ರೆಡಿಟ್ ಸ್ಯೂಸಿ ಬ್ಯಾಂಕ್‌ನ ಷೇರುಗಳು ಬುಧವಾರ ಶೇ.30 ರಷ್ಟು ಕುಸಿದಿದೆ. ಈ ಹಿನ್ನೆಲೆ ಕ್ರೆಡಿಟ್ ಸ್ಯೂಸಿ ಮುಚ್ಚಿಹೋಗುವ ಭೀತಿಯಲ್ಲಿದೆ. ಈ ನಡುವೆ ಸ್ವಿಸ್ ನ್ಯಾಷನಲ್ ಬ್ಯಾಂಕ್ (Swiss bank) ಕ್ರೆಡಿಟ್ ಸ್ಯೂಸಿಯನ್ನು ಬಲಪಡಿಸಲು 54 ಶತಕೋಟಿ ಡಾಲರ್ ನೀಡಲು ಮುಂದಾಗಿದೆ.

    ಕ್ರೆಡಿಟ್ ಸ್ಯೂಸಿ ಬ್ಯಾಂಕ್ ಕುಸಿಯುವ ಸಾಧ್ಯತೆಯಿದೆ ಎಂದು ಖ್ಯಾತ ಹೂಡಿಕೆ ತಜ್ಞ ರಾಬರ್ಟ್ ಕಿಯೋಸಾಕಿ ಭವಿಷ್ಯ ನುಡಿದಿದ್ದಾರೆ. ಕಳೆದ 10 ದಿನಗಳಲ್ಲಿ ಅಮೆರಿಕದ ಸಿಲ್ವರ್ ಗೇಟ್ ಕ್ಯಾಪಿಟಲ್, ಸಿಲಿಕಾನ್ ವ್ಯಾಲಿ ಹಾಗೂ ಸಿಗ್ನೆಚರ್ ಬ್ಯಾಂಕ್‌ಗಳನ್ನು ಮುಚ್ಚಲಾಗಿದೆ. ಒಂದು ವೇಳೆ ತಜ್ಞರ ಭವಿಷ್ಯದಂತೆ ಕ್ರೆಡಿಟ್ ಸ್ಯೂಸಿ ಬ್ಯಾಂಕ್ ಕೂಡಾ ದಿವಾಳಿಯಾದರೆ ಅಮೆರಿಕದ ಆರ್ಥಿಕತೆ ಬುಡಮೇಲಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ನ್ಯೂಜಿಲೆಂಡ್‌ನ ಕೆರ್ಮಾಡೆಕ್ ದ್ವೀಪಗಳಲ್ಲಿ 7.1 ತೀವ್ರತೆಯ ಭೂಕಂಪ – ಸುನಾಮಿ ಎಚ್ಚರಿಕೆ

    ಕ್ರೆಡಿಟ್ ಸ್ಯೂಸಿ ಬ್ಯಾಂಕ್ 2021ರ ಬಳಿಕ ಸಾಕಷ್ಟು ಹಣಕಾಸು ಅಕ್ರಮಗಳಲ್ಲಿ ಭಾಗಿಯಾಗಿರುವ ಆರೋಪದಿಂದಾಗಿ ಮಾರುಕಟ್ಟೆ ಮೌಲ್ಯವನ್ನು ಶೇ.80 ರಷ್ಟು ಕಳೆದುಕೊಂಡಿದೆ. ಇದೀಗ ಬಾಂಡ್ ಮಾರುಕಟ್ಟೆಯಲ್ಲಿ ಈ ಬ್ಯಾಂಕ್ ಸಾಕಷ್ಟು ಹಣವನ್ನು ಹೊಂದಿದೆ. ಆದರೆ ಬಾಂಡ್ ಮಾರುಕಟ್ಟೆಯೇ ಕುಸಿತದ ಭೀತಿಯಲ್ಲಿದೆ. ಷೇರುಪೇಟೆಗಿಂತಲೂ ಬಾಂಡ್ ಪೇಟೆಯಲ್ಲಿ ಹೆಚ್ಚು ಹಣವಿದೆ. ಒಂದುವೇಳೆ ಬಾಂಡ್ ಪೇಟೆ ಕುಸಿದರೆ ಕ್ರೆಡಿಟ್ ಸ್ಯೂಸಿ ಕೂಡಾ ಕುಸಿದುಹೋಗುವ ಸಾಧ್ಯತೆಯಿದೆ. ಇದನ್ನೂ ಓದಿ: ಎಕ್ಸ್‌ಪ್ರೆಸ್‌ ವೇಯಲ್ಲಿ ಅಪಘಾತ ನಿಯಂತ್ರಣಕ್ಕೆ ಹೈಟೆಕ್ ಟಚ್: ಸ್ಪೀಡ್ ಲಿಮಿಟ್ ಮೀರಿದ್ರೆ ಮನೆಗೆ ಬರುತ್ತೆ ನೋಟಿಸ್

  • ಅಮೆರಿಕನ್ ಬ್ಯಾಂಕ್ ದಿವಾಳಿ – ಮಾಧ್ಯಮಗಳ ಪ್ರಶ್ನೆ ನಿರ್ಲಕ್ಷಿಸಿ ಹೊರನಡೆದ ಬೈಡನ್

    ಅಮೆರಿಕನ್ ಬ್ಯಾಂಕ್ ದಿವಾಳಿ – ಮಾಧ್ಯಮಗಳ ಪ್ರಶ್ನೆ ನಿರ್ಲಕ್ಷಿಸಿ ಹೊರನಡೆದ ಬೈಡನ್

    ವಾಷಿಂಗ್ಟನ್: ಅಮೆರಿಕದಲ್ಲಿ (America) ಬ್ಯಾಂಕ್‌ಗಳು ದಿವಾಳಿಯಾಗುತ್ತಿರುವ (Bankrupt) ಹಿನ್ನೆಲೆ ಅಧ್ಯಕ್ಷ ಜೋ ಬೈಡನ್‌ಗೆ (Joe Biden) ಸುದ್ದಿಗೋಷ್ಠಿಯಲ್ಲಿ ಮಾಧ್ಯಮದವರು ಈ ಕುರಿತು ಪ್ರಶ್ನೆಯನ್ನು ಕೇಳಿದ್ದರು. ಆದರೆ ಯುಎಸ್ ಅಧ್ಯಕ್ಷ ಅವರ ಪ್ರಶ್ನೆಗಳನ್ನು ನಿರ್ಲಕ್ಷಿಸಿ ಹೊರನಡೆದಿದ್ದಾರೆ. ಇದರಿಂದ ಬೈಡನ್ ಭಾರೀ ಟೀಕೆಗೆ ಗುರಿಯಾಗಿದ್ದಾರೆ.

    ಬೈಡನ್ ಸುದ್ದಿಗೋಷ್ಠಿಯಲ್ಲಿ ಕೊನೆಯದಾಗಿ ಚೇತರಿಸಿಕೊಳ್ಳುವ ಬ್ಯಾಂಕಿಂಗ್ ವ್ಯವಸ್ಥೆಯನ್ನು ನಿರ್ವಹಿಸುವುದು ಹಾಗೂ ನಮ್ಮ ಐತಿಹಾಸಿಕ ಚೇತರಿಕೆಯನ್ನು ರಕ್ಷಿಸುವಲ್ಲಿ ಕೆಲಸ ಮಾಡುವುದಾಗಿ ತಿಳಿಸಿ ಮಾತನ್ನು ಮುಗಿಸಿದ್ದಾರೆ. ಈ ವೇಳೆ ವರದಿಗಾರರೊಬ್ಬರು, ಬ್ಯಾಂಕ್‌ಗಳು ಏಕೆ ದಿವಾಳಿಯಾಗುತ್ತಿದೆ? ನೀವು ಇನ್ನು ಮುಂದೆ ಈ ರೀತಿ ಬ್ಯಾಂಕ್‌ಗಳು ದಿವಾಳಿಯಾಗುವುದಿಲ್ಲ ಎಂದು ಅಮೆರಿಕನ್ನರಿಗೆ ಭರವಸೆ ನೀಡಬಹುದೇ ಎಂದು ಪ್ರಶ್ನಿಸಿದ್ದಾರೆ.

    ಅಮೆರಿಕ ಅಧ್ಯಕ್ಷ ವರದಿಗಾರರ ಪ್ರಶ್ನೆಗೆ ಉತ್ತರಿಸದೇ ಅಲ್ಲಿಂದ ಕಾಲ್ಕಿತ್ತಿದ್ದಾರೆ. ಇದೇ ವೇಳೆ ಮತ್ತೊಬ್ಬ ವರದಿಗಾರರು ಈಗಾಗಲೇ ದಿವಾಳಿಯಾಗಿರುವ ಬ್ಯಾಂಕುಗಳಂತೆ ಇತರ ಬ್ಯಾಂಕುಗಳ ಸ್ಥಿತಿಯೂ ಆಗುತ್ತದೆಯೇ ಎಂದು ಪ್ರಶ್ನಿಸಿದ್ದಾರೆ. ಆದರೆ ಬೈಡನ್ ವರದಿಗಾರರೆಡೆ ಕಣ್ಣು ಹಾಯಿಸದೇ ಸುದ್ದಿಗೋಷ್ಠಿ ನಡೆಯುತ್ತಿದ್ದ ಕೊಠಡಿಯನ್ನು ತೊರೆದಿದ್ದಾರೆ. ಇದನ್ನೂ ಓದಿ: Bengaluru Mysuru Expressway- ಟೋಲ್ ಸಂಗ್ರಹ ಪ್ರಾರಂಭವಾದ ಮೊದಲ ದಿನವೇ ತಾಂತ್ರಿಕ ದೋಷ

    ಇದೀಗ ಬೈಡನ್ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸದೇ ಅಲ್ಲಿಂದ ಜಾಗ ಖಾಲಿ ಮಾಡಿರುವ ವೀಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಅಮೆರಿಕದಲ್ಲಿ ಬ್ಯಾಂಕುಗಳು ದಿವಾಳಿಯಾಗುತ್ತಿರುವ ಬಗ್ಗೆ ಅಧ್ಯಕ್ಷರು ಜನರಿಗೆ ಯಾವುದೇ ರೀತಿಯ ಭರವಸೆ ನೀಡುತ್ತಿಲ್ಲ ಎಂದು ಟೀಕಿಸಿದ್ದಾರೆ.

    ಕಳೆದ ವಾರ ಸಿಲಿನಾನ್ ವ್ಯಾಲಿ ಬ್ಯಾಂಕ್ (Silicon Valley Bank) ದಿವಾಳಿಯಾದ ಬೆನ್ನಲ್ಲೇ ಅಮೆರಿಕದ ಅಧಿಕಾರಿಗಳು ಮತ್ತೊಂದು ಟೆಕ್ ಸ್ನೇಹಿ ಸಿಗ್ನೇಚರ್ ಬ್ಯಾಂಕ್ ಅನ್ನು ಮುಚ್ಚಿದ್ದಾರೆ. ಬ್ಯಾಂಕ್‌ಗಳ ಠೇವಣಿದಾರರು ಹಾಗೂ ಹೂಡಿಕೆದಾರರು ಬೃಹತ್ ಮೊತ್ತದ ಹಣವನ್ನು ಹಿಂಪಡೆದಿರುವ ಪರಿಣಾಮವಾಗಿ ಬ್ಯಾಂಕ್‌ನ ನಗದು ವ್ಯವಹಾರದಲ್ಲಿ ಕೊರತೆ ಕಂಡುಬಂದಿದೆ. ಈ ಹಿನ್ನೆಲೆ ಈ ಬ್ಯಾಂಕ್‌ಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಬಾಡಿಗೆ ಮನೆಗಳಿಗೆ ಫುಲ್ ಡಿಮ್ಯಾಂಡ್: ಹಿಂದೆ ಎಷ್ಟಿತ್ತು? ಈಗ ಎಷ್ಟು ಹೆಚ್ಚಾಗಿದೆ?

  • ಸಿಲಿಕಾನ್ ವ್ಯಾಲಿ ಬಳಿಕ ಅಮೆರಿಕದ ಮತ್ತೊಂದು ಬ್ಯಾಂಕ್ ದಿವಾಳಿ

    ಸಿಲಿಕಾನ್ ವ್ಯಾಲಿ ಬಳಿಕ ಅಮೆರಿಕದ ಮತ್ತೊಂದು ಬ್ಯಾಂಕ್ ದಿವಾಳಿ

    ವಾಷಿಂಗ್ಟನ್: ಸ್ಟಾರ್ಟ್ಅಪ್‌ಗಳಿಗೆ ಸಾಲ ನೀಡಲು ಹೆಸರುವಾಸಿಯಾಗಿದ್ದ ಅಮೆರಿಕದ (America) ಸಿಲಿಕಾನ್ ವ್ಯಾಲಿ ಬ್ಯಾಂಕ್ (SVB) ದಿವಾಳಿಯಾಗಿರುವ ಬೆನ್ನಲ್ಲೇ ಅಮೆರಿಕದ ಅಧಿಕಾರಿಗಳು ಮತ್ತೊಂದು ಟೆಕ್ ಸ್ನೇಹಿ ಬ್ಯಾಂಕ್ ಅನ್ನು ಮುಚ್ಚಿರುವುದಾಗಿ ಘೋಷಿಸಿದ್ದಾರೆ.

    ಸಿಲಿಕಾನ್ ವ್ಯಾಲಿ ಬ್ಯಾಂಕ್ (Silicon Valley Bank) ದಿವಾಳಿಯಾದ ಬೆನ್ನಲ್ಲೇ ಸಿಗ್ನೇಚರ್ ಬ್ಯಾಂಕ್ (Signature Bank) ಅನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಈ ಬ್ಯಾಂಕ್ ಕ್ರಿಪ್ಟೋಕರೆನ್ಸಿಗಳ ಸ್ಟಾಕ್ ಅನ್ನು ಹೊಂದಿತ್ತು. ಇದೀಗ ಅಪಾಯದ ದೃಷ್ಟಿಯಿಂದ ಬ್ಯಾಂಕ್ ಅನ್ನು ಸ್ವಲ್ಪ ಸಮಯದವರೆಗೆ ಮುಚ್ಚಲಾಗಿದೆ.

    ಸಿಗ್ನೇಚರ್ ಬ್ಯಾಂಕ್ ನ್ಯೂಯಾರ್ಕ್ನಲ್ಲಿರುವ ಪ್ರಾದೇಶಿಕ ಬ್ಯಾಂಕ್ ಆಗಿದೆ. ಕಳೆದ ವರ್ಷ ಕೊನೆಯಲ್ಲಿ ಈ ಬ್ಯಾಂಕ್ ಅನ್ನು ಫೆಡರಲ್ ಡೆಪಾಸಿಟ್ ಇನ್ಶುರೆನ್ಸ್ ಕಾರ್ಪೊರೇಷನ್ (FDIC) ತೆಗೆದುಕೊಂಡಿದೆ ಎಂದು ನ್ಯೂಯಾರ್ಕ್ ರಾಜ್ಯ ಹಣಕಾಸು ಸೇವೆಗಳ ಇಲಾಖೆ ತಿಳಿಸಿದೆ. ಸದ್ಯ ಸಿಗ್ನೇಚರ್ ಬ್ಯಾಂಕ್ ಹಾಗೂ ಸಿಲಿಕಾನ್ ವ್ಯಾಲಿ ಬ್ಯಾಂಕ್‌ನ ಯಾವುದೇ ನಷ್ಟದ ಹೊರೆಯನ್ನು ತೆರಿಗೆದಾರರು ಭರಿಸುವ ಅಗತ್ಯವಿಲ್ಲ ಎಂದು ತಿಳಿಸಲಾಗಿದೆ. ಇದನ್ನೂ ಓದಿ: ಲಂಕಾ ವಿರುದ್ಧ ಕಿವೀಸ್‌ಗೆ ರೋಚಕ ಜಯ – 2ನೇ ಬಾರಿ WTC ಫೈನಲ್‌ಗೆ ಭಾರತ

    ಟೆಕ್ ಸ್ಟಾರ್ಟ್ಅಪ್‌ಗಳಿಗೆ ಮೂಲ ಕಂಪನಿಯಾಗಿದ್ದ ಸಿಲಿಕಾನ್ ವ್ಯಾಲಿ ಬ್ಯಾಂಕ್‌ನ ಠೇವಣಿದಾರರು ಹಾಗೂ ಹೂಡಿಕೆದಾರರು ಬರೋಬ್ಬರಿ 42 ಬಿಲಿಯನ್ ಡಾಲರ್‌ನಷ್ಟು (ಸುಮಾರು 282 ಲಕ್ಷ ಕೋಟಿ ರೂ.) ಬೃಹತ್ ಮೊತ್ತದ ಹಣವನ್ನು ಹಿಂಪಡೆದ ಪರಿಣಾಮವಾಗಿ ಬ್ಯಾಂಕ್‌ನ ನಗದು ವ್ಯವಹಾರದಲ್ಲಿ ಕೊರತೆ ಕಂಡುಬಂದಿದೆ. ಈ ಕಾರಣದಿಂದಾಗಿ ಕಳೆದ ವಾರ ಸಿಲಿಕಾನ್ ವ್ಯಾಲಿ ಬ್ಯಾಂಕ್ ವ್ಯವಹಾರಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.

    ಕಳೆದ ಶುಕ್ರವಾರ ಕ್ಯಾಲಿಫೋರ್ನಿಯಾದ ಬ್ಯಾಂಕಿಂಗ್ ಅಧಿಕಾರಿಗಳು ಸಿಲಿಕಾನ್ ವ್ಯಾಲಿ ಬ್ಯಾಂಕ್ ಅನ್ನು ಮುಚ್ಚಿದ್ದಾರೆ. 2008ರಲ್ಲಿ ಉಂಟಾದ ಜಾಗತಿಕ ಆರ್ಥಿಕ ಬಿಕ್ಕಟ್ಟಿನ ಬಳಿಕ ಇದು ಅತ್ಯಂತ ದೊಡ್ಡ ಬ್ಯಾಂಕಿಂಗ್‌ನ ವೈಫಲ್ಯ ಎನಿಸಿಕೊಂಡಿದೆ. ಇದನ್ನೂ ಓದಿ: ಸಲಿಂಗ ವಿವಾಹಕ್ಕೆ ಕೇಂದ್ರ ಸರ್ಕಾರದ ವಿರೋಧ

  • ಪಾಕಿಸ್ತಾನ ಆರ್ಥಿಕ ಬಿಕ್ಕಟ್ಟು – ನಮ್ಮ ದೇಶ ದಿವಾಳಿಯಾಗಿದೆ ಎಂದ ರಕ್ಷಣಾ ಸಚಿವ

    ಪಾಕಿಸ್ತಾನ ಆರ್ಥಿಕ ಬಿಕ್ಕಟ್ಟು – ನಮ್ಮ ದೇಶ ದಿವಾಳಿಯಾಗಿದೆ ಎಂದ ರಕ್ಷಣಾ ಸಚಿವ

    ಇಸ್ಲಾಮಾಬಾದ್: ನಗದು ಕೊರತೆಯಿಂದ ಬಳಲುತ್ತಿರುವ ಪಾಕಿಸ್ತಾನ ಆರ್ಥಿಕ ಬಿಕ್ಕಟ್ಟನ್ನು (Pakistan economic crisis) ಎದುರಿಸಲು ಹೆಣಗಾಡುತ್ತಿರುವ ನಡುವೆಯೇ ಇದೀಗ ಅಲ್ಲಿನ ರಕ್ಷಣಾ ಸಚಿವರು (Defense Minister) ಪಾಕಿಸ್ತಾನ ದಿವಾಳಿ (Bankrupt) ರಾಷ್ಟ್ರವಾಗಿದೆ ಎಂದು ಬೇಸರದಿಂದ ಹೇಳಿಕೊಂಡಿದ್ದಾರೆ.

    ಶನಿವಾರ ಸಿಯಾಲ್‌ಕೋಟ್‌ನಲ್ಲಿ ಸಮಾರಂಭವೊಂದನ್ನು ಉದ್ದೇಶಿಸಿ ಮಾತನಾಡಿದ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ (Khawaja Asif), ನಾವೀಗ ದಿವಾಳಿಯಾಗಿರುವ ದೇಶದಲ್ಲಿ ವಾಸಿಸುತ್ತಿದ್ದೇವೆ. ಈ ಸ್ಥಿತಿಗೆ ಪ್ರತಿಯೊಬ್ಬರೂ ಕಾರಣರು. ಪಾಕಿಸ್ತಾನದ ಸಮಸ್ಯೆಗೆ ಪಾಕಿಸ್ತಾನವೇ ಪರಿಹಾರ ಕಂಡುಕೊಳ್ಳಬೇಕು ಎಂದಿದ್ದಾರೆ.

    ಪಾಕಿಸ್ತಾನ ಈಗಾಗಲೇ ದಿವಾಳಿಯಾಗಿದೆ. ನಾವು ದಿವಾಳಿಯಾಗಿರುವ ದೇಶದಲ್ಲಿ ವಾಸಿಸುತ್ತಿದ್ದೇವೆ. ಪಾಕಿಸ್ತಾನದ ಸಮಸ್ಯೆಗೆ ಅಂತಾರಾಷ್ಟ್ರೀಯ ಹಣಕಾಸು ನಿಧಿ ಬಳಿ ಪರಿಹಾರವಿಲ್ಲ. ನಮ್ಮ ಸಮಸ್ಯೆಗಳಿಗೆ ನಮ್ಮ ದೇಶದೊಳಗೆಯೇ ಪರಿಹಾರವಿದೆ. ಪಾಕಿಸ್ತಾನದಲ್ಲಿ ಕಾನೂನು ಹಾಗೂ ಸಂವಿಧಾನವನ್ನು ಅನುಸರಿಸದಿರುವುದರಿಂದ ಆರ್ಥಿಕ ಅವ್ಯವಸ್ಥೆ ಉಂಟಾಗಿದೆ. ಈ ಪರಿಸ್ಥಿತಿಗೆ ಅಧಿಕಾರಶಾಹಿ ಹಾಗೂ ರಾಜಕಾರಣಿಗಳು ಸೇರಿದಂತೆ ಎಲ್ಲರೂ ಕಾರಣರಾಗಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಜಪಾನ್ ಮೇಲೆ ಪರೀಕ್ಷಾರ್ಥ ಖಂಡಾಂತರ ಕ್ಷಿಪಣಿ ಹಾರಿಸಿದ ಉ. ಕೊರಿಯಾ – ಅಮೆರಿಕ, ದ. ಕೊರಿಯಾಗೆ ಎಚ್ಚರಿಕೆ

    ತೀವ್ರ ಆರ್ಥಿಕ ಕುಸಿತ ಎದುರಿಸುತ್ತಿರುವ ಪಾಕಿಸ್ತಾನದಲ್ಲಿ ಕಳೆದ ವಾರ ಹಣದುಬ್ಬರ ಶೇ.38.4 ಕ್ಕೆ ಏರಿಕೆಯಾಗಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿರುವುದು ಮುಂದುವರಿಯುತ್ತಿರುವುದರಿಂದ ಒಂದೇ ವಾರದಲ್ಲಿ ಶೇ.38.4 ಕ್ಕೆ ಏರಿಕೆಯಾಗಿದೆ. ಇದನ್ನೂ ಓದಿ: ಕಾರಿನಲ್ಲಿ ಹೋಗುತ್ತಿದ್ದಾಗ ತನ್ನ ಅಜ್ಜಿಗೆ ಗುಂಡು ಹಾರಿಸಿದ 6ರ ಬಾಲಕಿ – ವೃದ್ಧೆ ಸಾವು

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ವಿಜಯ್ ಮಲ್ಯ ದಿವಾಳಿ ಎಂದು ಘೋಷಿಸಿದ ಯುಕೆ ಕೋರ್ಟ್

    ವಿಜಯ್ ಮಲ್ಯ ದಿವಾಳಿ ಎಂದು ಘೋಷಿಸಿದ ಯುಕೆ ಕೋರ್ಟ್

    – ಭಾರತೀಯ ಬ್ಯಾಂಕ್‍ಗಳಿಗೆ ಬಹುದೊಡ್ಡ ವಿಜಯ

    ಲಂಡನ್: ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯನನ್ನು ಲಂಡನ್ ಹೈ ಕೋರ್ಟ್ ದಿವಾಳಿ ಎಂದು ಘೋಷಿಸಿದೆ. ಈ ಮೂಲಕ ಭಾರತೀಯ ಬ್ಯಾಂಕ್‍ಗಳಿಗೆ ಜಯ ಸಿಕ್ಕಂತಾಗಿದೆ.

    ಎಸ್‍ಬಿಐ ನೇತೃತ್ವದ ಭಾರತೀಯ ಬ್ಯಾಂಕ್‍ಗಳ ಒಕ್ಕಟವೂ ಇದೀಗ ಸ್ಥಗಿತಗೊಂಡಿರುವ ವಿಜಯ್ ಮಲ್ಯ ಅವರ ಕಿಂಗ್‍ಫಿಶರ್ ಏರ್ ಲೈನ್ಸ್ ಗೆ ನೀಡಿದ ಸಾಲವನ್ನು ವಸೂಲಿ ಮಾಡಲು ಈ ತೀರ್ಪು ಸಹಾಯ ಮಾಡುತ್ತದೆ. ಮಲ್ಯ ಅವರು ಹೈ ಕೋರ್ಟ್ ತೀರ್ಪಿನ ಮೇಲ್ಮನವಿ ಸಲ್ಲಿಸಲು ಪ್ರಯತ್ನಿಸಿದ್ದರು ಆದರೆ ಅನುಮತಿ ನಿರಾಕರಿಸಲಾಗಿದೆ ಎಂದು ವರದಿಯಾಗಿದೆ.

    ಮೇ ತಿಂಗಳಲ್ಲಿ ಯುಕೆ ಕೋರ್ಟ್ ಎಸ್‍ಬಿಐ ನೇತೃತ್ವದ ಸಾಲದಾತ ಒಕ್ಕೂಟದ ದಿವಾಳಿತನದ ಕುರಿತು ಸಲ್ಲಿಸಿದ್ದ ಅರ್ಜಿಯನ್ನು ಎತ್ತಿ ಹಿಡಿದಿತ್ತು. ಭಾರತದಲ್ಲಿ ಮಲ್ಯ ಅವರ ಆಸ್ತಿಗಳ ಮೇಲಿನ ಭದ್ರತೆಯನ್ನು ಮನ್ನಾ ಮಾಡುವ ಪರವಾಗಿ ಅರ್ಜಿಯನ್ನು ಎತ್ತಿಹಿಡಿದಿತ್ತು.

    ಭದ್ರತಾ ಹಕ್ಕುಗಳನ್ನು ಮನ್ನಾ ಮಾಡುವುದನ್ನು ತಡೆಯುವಂತೆ ಮಲ್ಯ ಪರ ವಕೀಲರು ವಾದ ಮಂಡಿಸಿದ್ದರು. ಆದರೆ ಈ ಮನವಿಯಲ್ಲಿ ಯಾವುದೇ ಸಾರ್ವಜನಿಕ ನೀತಿ ಇಲ್ಲ ಎಂದು ಘೋಷಿಸಿ ಬ್ಯಾಂಕ್‍ಗಳ ಪರವಾಗಿ ಚೀಫ್ ಇನ್ಸೋಲ್ವೆನ್ಸೀಸ್ ಆ್ಯಂಡ್ ಕಂಪನೀಸ್ ಕೋರ್ಟ್ (ಐಸಿಸಿ) ಜಡ್ಜ್ ಮೈಕೆಲ್ ಬ್ರಿಗ್ಸ್ ಆದೇಶ ನಿಡಿದ್ದರು.

    ಫೆಬ್ರವರಿಯಲ್ಲಿ ಡೆಪ್ಯೂಟಿ ಐಸಿಸಿ ನ್ಯಾಯಾಧೀಶ ಬರ್ನೆಟ್ ನೀಡಿದ ಆದೇಶವನ್ನು ಪ್ರಶ್ನಿಸಿ ವಿಜಯ್ ಮಲ್ಯ ಹೈ ಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಆರ್ಥಿಕ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದ ಬಾರ್ನೆಟ್ ಅವರು, ಭವಿಷ್ಯದ ಕಾನೂನು ಶುಲ್ಕ ಹಾಗೂ ತನ್ನ ಜೀವನ ಸಾಗಿಸಲು ಮಾಸಿಕ 23 ಲಕ್ಷ ರೂ.ಗಳನ್ನು ಕೋರ್ಟ್ ಫಂಡ್ಸ್ ಆಫೀಸ್‍ನಿಂದ ನೀಡಲು ಅನುಮತಿಸಿದ್ದರು. ಆದರೆ ಇದರಲ್ಲಿ ಭಾರತದಲ್ಲಿನ ವಕೀಲರಿಗೆ ನೀಡುವ ಹಣವನ್ನು ಸೇರಿಸಿರಲಿಲ್ಲ. ಹೀಗಾಗಿ ಇದೀಗ ಭಾರತದಲ್ಲಿನ ವಕೀಲರ ಶುಲ್ಕವನ್ನು ಸಹ ಕೋಟ್ರ್ಸ್ ಫಂಡ್ಸ್ ಆಫೀಸ್‍ನಿಂದ ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದಾರೆ. ಒಟ್ಟು 12 ಕೋಟಿ ರೂ. ಆಸ್ತಿಯನ್ನು ಬಳಸಲು ಮಲ್ಯಗೆ ಬರ್ನೆಟ್ ಅವರು ಆಗ ಅನುಮತಿ ನೀಡಿದ್ದರು.

    ಈಗಾಗಲೇ ಮಲ್ಯ ಭಾರತದಲ್ಲಿನ ಕಾನೂನು ಸಂಸ್ಥೆಗಳಿಗೆ ನೀಡುವ 5.7 ಕೋಟಿ ರೂ.ಗಳನ್ನು ಬಾಕಿ ಉಳಿಸಿಕೊಂಡಿದ್ದಾರೆ. ಅಲ್ಲದೆ ಭಾರತದಲ್ಲಿನ ಭವಿಷ್ಯದ ಕಾನೂನು ವೆಚ್ಚಗಳಿಗಾಗಿ ಅವರಿಗೆ ಇನ್ನೂ 2 ಕೋಟಿ ರೂ. ಅಗತ್ಯವಿದೆ ಎಂದು ಬ್ರಿಟಿಷ್ ನ್ಯಾಯಾಲಯಕ್ಕೆ ತಿಳಿಸಲಾಗಿತ್ತು.

    ಮಲ್ಯ ಪರ ವಕೀಲ ಫಿಲಿಪ್ ಮಾರ್ಷಲ್ ಕ್ಯೂಸಿ ಅವರು ಈ ಕುರಿತು ನ್ಯಾಯಾಲಯಕ್ಕೆ ತಿಳಿಸಿದ್ದು, ನನ್ನ ಕಕ್ಷಿದಾರ ಈ ಪ್ರಕರಣಗಳಿಗೆ ಸ್ವತಃ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಏಕೆಂದರೆ ಅವರು `ಜೈಲುವಾಸ ಅನುಭವಿಸುತ್ತಿದ್ದಾರೆ’. ವಿಜಯ್ ಮಲ್ಯ ಅವರ ರಾಜಿ ಇತ್ಯರ್ಥದ 3 ಪ್ರೊಸಿಡಿಂಗ್ಸ್‍ಗಳು ಭಾರತದ ಸುಪ್ರೀಂ ಕೋರ್ಟ್ ಮುಂದಿವೆ. ತೀರ್ಪಿನ ಸಾಲದ ಮೇಲೆ ವಿಧಿಸಲಾಗುತ್ತಿರುವ ಶೇ.11.5 ಬಡ್ಡಿ ಹಾಗೂ `ಪರಾರಿಯಾದ ಆರ್ಥಿಕ ಅಪರಾಧಿ’ ಹಣೆಪಟ್ಟಿ ಕುರಿತು ಮೂರು ಸೆಟ್‍ಗಳ ವಿಚಾರಣೆಗಳು ಭಾರತದ ಸುಪ್ರೀಂ ಕೋರ್ಟ್‍ನಲ್ಲಿ ನಡೆಯುತ್ತಿವೆ ಎಂದು ಅವರು ಹೇಳಿದ್ದರು.

    ಬಡ್ಡಿದರ ಪಾವತಿಸುವ ಸವಾಲಿನಲ್ಲಿ ಮಲ್ಯ ಯಶಸ್ವಿಯಾದರೆ, ತೀರ್ಪಿನ ಸಾಲವನ್ನು 5,851 ಕೋಟಿ ರೂ.ಗೆ ಇಳಿಸಲಾಗುತ್ತದೆ. ಉಳಿದ ಹಣವನ್ನು ಆಸ್ತಿಗಳ ಮೂಲಕ ಪೂರೈಸಬಹುದು. ಅವರ ಆಸ್ತಿಗಳು ಮೂರನೇ ವ್ಯಕ್ತಿಗಳ ಕೊಡುಗೆಗಳಾಗಿವೆ. ರಾಜಿ ಇತ್ಯರ್ಥಕ್ಕೆ ಅನುಮೋದನೆ ನೀಡಿದರೆ ತೀರ್ಪಿನ ಸಂಪೂರ್ಣ ಸಾಲವನ್ನು ತೀರಿಸಲಾಗುತ್ತದೆ ಎಂದು ಅವರು ನ್ಯಾಯಾಲಯಕ್ಕೆ ವಿವರಿಸಿದ್ದರು.

    ಭಾರತದಲ್ಲಿನ ವಕೀಲರಿಗೆ ಸೂಚನೆ ನೀಡಲು ಅವಕಾಶ ನೀಡದಿರುವುದು ಆಕ್ರಮಣಕಾರಿ. ಅಲ್ಲದೆ ಭಾರತದಲ್ಲಿ ಈ ಪ್ರಕರಣಗಳು ಪ್ರಗತಿ ಸಾಧಿಸುತ್ತಿಲ್ಲ. ವಿಚಾರಣೆಗಳು ಪ್ರಗತಿ ಸಾಧಿಸದಿರಲು ಹಣದ ಕೊರತೆ ಹಾಗೂ ಕೊರೊನಾ ಪರಿಸ್ಥಿತಿ ಕಾರಣ ಎಂದು ಮಲ್ಯ ಪರ ವಕೀಲ ಮಾರ್ಷಲ್ ಅವರು ಈ ಹಿಂದೆ ಕೋರ್ಟ್‍ಗೆ ತಿಳಿಸಿದ್ದರು.