Tag: Banks

  • ಚೋರ್ ಎಂದು ಕರೆಯುವುದನ್ನು ನಿಲ್ಲಿಸಿ: ನೆಟ್ಟಿಗರ ವಿರುದ್ಧ ಮಲ್ಯ ಕಿಡಿ

    ಚೋರ್ ಎಂದು ಕರೆಯುವುದನ್ನು ನಿಲ್ಲಿಸಿ: ನೆಟ್ಟಿಗರ ವಿರುದ್ಧ ಮಲ್ಯ ಕಿಡಿ

    ನವದೆಹಲಿ: ನನ್ನನ್ನು ಚೋರ್ ಎಂದು ಕರೆಯುವುದನ್ನು ನಿಲ್ಲಿಸಿ. ಮೊದಲು ಸತ್ಯ ಹಾಗೂ ವಾಸ್ತವ ಅರ್ಥ ಮಾಡಿಕೊಳ್ಳಿ ಎಂದು ಮದ್ಯದ ದೊರೆ, ಉದ್ಯಮಿ ವಿಜಯ ಮಲ್ಯ ನೆಟ್ಟಿಗರ ವಿರುದ್ಧ ಕಿಡಿಕಾರಿದ್ದಾರೆ.

    ನನ್ನ ನೆಚ್ಚಿನ ಗೆಳೆಯ ಹಾಗೂ ಯೂನಿವರ್ಸಲ್ ಬಾಸ್ ಎಂದು ವಿಜಯ್ ಮಲ್ಯ ವೆಸ್ಟ್ ಇಂಡೀಸ್‍ನ ಕ್ರಿಕೆಟರ್ ಕ್ರಿಸ್ ಗೇಲ್ ಜೊತೆಗಿರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. ಕ್ರಿಸ್ ಗೇಲ್ ಅವರು ಕೂಡ ಅದೇ ಫೋಟೋವನ್ನು ತಮ್ಮ ಟ್ವೀಟ್ ಖಾತೆಯಲ್ಲಿ ಹಂಚಿಕೊಂಡು, ಬಿಗ್ ಬಾಸ್ ಗ್ರೇಟ್ ವಿಜಯ್ ಮಲ್ಯ ಅವರೊಂದಿಗಿನ ಅದ್ಭುತ ಕ್ಷಣ ಎಂದು ಬರೆದುಕೊಂಡಿದ್ದಾರೆ.

    ಈ ಫೋಟೋಗೆ ಅನೇಕ ನೆಟ್ಟಿಗರು ಚೋರ್ ಎಂದು ರೀ ಟ್ವೀಟ್ ಮಾಡಿದ್ದಾರೆ. ವಿಜಯ್ ಮಲ್ಯಗೆ ನಿಮ್ಮ ಖಾತೆಯ ಮಾಹಿತಿ ನೀಡಬೇಡಿ. ಅವರೊಂದಿಗೆ ಯಾವುದೇ ವಹಿವಾಟು ನಡೆಸಬೇಡಿ. ಭಾವನಾತ್ಮಕವಾಗಿ ನಿಮ್ಮ ಬಳಿಗೆ ಬಂದು ಸಾಲ ಕೇಳಿದರೆ ಕೊಡಬೇಡಿ ಎಂದು ಹಿರೆನ್ ಎಂಬವರು ರೀ ಟ್ವೀಟ್ ಮಾಡಿದ್ದಾರೆ.

    ವಿಜಯ್ ಮಲ್ಯ ಮೋಸಗಾರನೆಂದು ನಿಮಗೆ ತಿಳಿದಿದೆ. 9 ಸಾವಿರ ಕೋಟಿ ರೂ. ಸಾಲ ಮಾಡಿ ಭಾರತ ಬಿಟ್ಟು ಬಂದು ತಲೆಮರೆಸಿಕೊಂಡಿದ್ದಾರೆ. ಅವರನ್ನು ಬಿಗ್ ಬಾಸ್ ಎಂದು ಕರೆಯುವ ಮುನ್ನ ನಮ್ಮ ಭಾವನೆ ಅರ್ಥ ಮಾಡಿಕೊಳ್ಳಬೇಕು ಎಂದು ಸಮೀಂ ರಾಜಾ ಎಂಬವರು ಗೇಲ್ ಅವರನ್ನು ಕುಟುಕಿದ್ದಾರೆ.

    https://twitter.com/tige7r_/status/1150072213686476800

    ನೆಟ್ಟಿಗರ ಟ್ವೀಟ್‍ನಿಂದ ಬೇಸತ್ತು ರೀಟ್ವೀಟ್ ಮಾಡಿರುವ ವಿಜಯ್ ಮಲ್ಯ, ನನ್ನನ್ನು ಚೋರ್ ಎಂದು ಕರೆಯುವವರು ಮೊದಲು ಸತ್ಯ ಹಾಗೂ ವಾಸ್ತವತೆಯನ್ನು ಅರಿತು ಮಾತನಾಡಿದರೆ ಒಳ್ಳೆಯದು. ನಿಮ್ಮ ಬ್ಯಾಂಕುಗಳಿಗೆ ಪೂರ್ತಿ ಸಾಲ ಮರುಪಾವತಿ ಮಾಡುತ್ತೇನೆ ಎಂದು ಕಳೆದ ಒಂದು ವರ್ಷದಿಂದ ಹೇಳುತ್ತಾ ಬಂದಿದ್ದೇನೆ. ಆದರೆ ಅದನ್ನು ಅವರು ಪಡೆದುಕೊಳ್ಳಲು ನಿರಾಕರಿಸುತ್ತಿದ್ದಾರೆ. ಈ ಬಗ್ಗೆ ನಿಮ್ಮ ಬ್ಯಾಂಕ್‍ಗಳನ್ನು ಪ್ರಶ್ನಿಸಿ. ನಂತರ ಯಾರು ಚೋರ್ ಎಂದು ನಿರ್ಧರಿಸಿ ಎಂದು ಗುಡುಗಿದ್ದಾರೆ.

  • ಗ್ರಾಹಕರೇ ಬ್ಯಾಂಕ್ ಕೆಲ್ಸ ಬೇಗ  ಮುಗಿಸಿಕೊಳ್ಳಿ- ಡಿ.25ರಿಂದ 5 ದಿನ ಸಾಲು ಸಾಲು ರಜೆ

    ಗ್ರಾಹಕರೇ ಬ್ಯಾಂಕ್ ಕೆಲ್ಸ ಬೇಗ ಮುಗಿಸಿಕೊಳ್ಳಿ- ಡಿ.25ರಿಂದ 5 ದಿನ ಸಾಲು ಸಾಲು ರಜೆ

    ಬೆಂಗಳೂರು: ಬ್ಯಾಂಕ್ ಗ್ರಾಹಕರೇ ಎಚ್ಚರ. ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ (ಎಐಬಿಒಸಿ) ಪ್ರತಿಭಟನೆ ಹಾಗೂ ಸಾಲು ಸಾಲಾಗಿ ಬಂದ ರಜೆಯಿಂದಾಗಿ ದೇಶಾದ್ಯಂತ ಡಿಸೆಂಬರ್ 21ರಿಂದ ಐದು ದಿನಗಳ ಕಾಲ ಬ್ಯಾಂಕ್‍ಗಳು ಕಾರ್ಯನಿರ್ವಹಿಸುವುದಿಲ್ಲ.

    ವೇತನ ಪರಿಷ್ಕರಣೆ ಬೇಡಿಕೆ ಮುಂದಿಟ್ಟುಕೊಂಡು ಎಐಬಿಒಸಿ ಪ್ರತಿಭಟನೆ ಡಿಸೆಂಬರ್ 21ರಂದು ಮುಷ್ಕರಕ್ಕೆ ಕರೆ ನೀಡಿದೆ. ನಂತರದ ದಿನ (ಡಿಸೆಂಬರ್ 22) ನಾಲ್ಕನೇ ಶನಿವಾರದ ರಜೆ ಹಾಗೂ ಡಿಸೆಂಬರ್ 23 ಭಾನುವಾರದ ರಜೆ. ಮಂಗಳವಾರ ಕ್ರಿಸ್ಮಸ್ ಪ್ರಯುಕ್ತ ರಜೆ ಇರುತ್ತದೆ. ಹೀಗಾಗಿ ಸಾಲು ಸಾಲು ರಜೆಗಳು ಬರುವುದರಿಂದ ಗ್ರಾಹಕರು ಆದಷ್ಟು ಬೇಗ ನಿಮ್ಮ ಬ್ಯಾಂಕ್ ಕೆಲಸಗಳನ್ನು ಮುಗಿಸಿಕೊಳ್ಳಿ.

    ದೇನಾ, ವಿಜಯ ಮತ್ತು ಬ್ಯಾಂಕ್ ಆಫ್ ಬರೋಡಾ ಬ್ಯಾಂಕ್‍ಗಳ ವಿಲೀನ ವಿರೋಧಿಸಿ ಅಖಿಲ ಭಾರತ ಬ್ಯಾಂಕ್ ಸಿಬ್ಬಂದಿ ಒಕ್ಕೂಟ (ಎಐಬಿಇಒ) ಡಿಸೆಂಬರ್ 26ರಂದು ಮುಷ್ಕರ ನಡೆಸಲಿದೆ. ಹೀಗಾಗಿ ಡಿಸೆಂಬರ್ 24 (ಸೋಮವಾರ) ಹೊರತುಪಡಿಸಿದರೆ ಒಟ್ಟಾರೆ ಐದು ದಿನ ಬ್ಯಾಂಕಿಂಗ್ ಸೇವೆಗಳು ಲಭ್ಯವಿರುವುದಿಲ್ಲ. ಸಾಲು ರಜೆ ಇರುವುದರಿಂದ ಕೆಲವು ಸಿಬ್ಬಂದಿ ಡಿಸೆಂಬರ್ 24ರಂದು ಕೂಡಾ ರಜೆ ಪಡೆಯುವ ಸಾಧ್ಯಗಳಿದ್ದು, ಬ್ಯಾಂಕ್ ವಹಿವಾಟು ನಡೆಯುವ ಸಾಧ್ಯತೆ ವಿರಳ ಎನ್ನಲಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಮೈಕಲ್ ಬಂಧನದ ಬಿಸಿಗೆ ಎಚ್ಚೆತ್ತ ವಿಜಯ್ ಮಲ್ಯ!

    ಮೈಕಲ್ ಬಂಧನದ ಬಿಸಿಗೆ ಎಚ್ಚೆತ್ತ ವಿಜಯ್ ಮಲ್ಯ!

    ನವದೆಹಲಿ: ಯುಪಿಎ ಅವಧಿಯ ಹೆಲಿಕಾಪ್ಟರ್ ಹಗರಣದ ಶಂಕಿತ ಮಧ್ಯವರ್ತಿ ಕ್ರಿಶ್ಚಿಯನ್ ಮೈಕಲ್‍ನನ್ನು ಸಿಬಿಐ ಭಾರತಕ್ಕೆ ಕರೆತರುತ್ತಿದ್ದಂತೆ, ಸಾರ್ವಜನಿಕ ಬ್ಯಾಂಕ್‍ಗಳಿಗೆ ವಂಚಿಸಿ ತಲೆಮರೆಸಿಕೊಂಡಿರುವ ಉದ್ಯಮಿ ವಿಜಯ್ ಮಲ್ಯ ಈಗ ಎಚ್ಚೆತ್ತುಕೊಂಡಿದ್ದಾರೆ.

    ನಾನು ಪಡೆದಿರವುದು ಸಾರ್ವಜನಿಕ ಹಣ. ಹೀಗಾಗಿ ಶೇ.100ರಷ್ಟು ಸಾಲವನ್ನು ಮರು ಪಾವತಿ ಮಾಡುತ್ತೇನೆ ಎಂದು ವಿಜಯ್ ಮಲ್ಯ ಸರಣಿ ಟ್ವೀಟ್ ಮೂಲಕ ಹೇಳಿಕೊಂಡಿದ್ದಾರೆ. ಇದೇ ವೇಳೆ ರಾಜಕಾರಣಿಗಳು ಹಾಗೂ ಮಾಧ್ಯಮಗಳ ವಿರುದ್ಧ ಕಿಡಿಕಾರಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?:
    ನಾನು ಸಾರ್ವಜನಿಕರ ಹಣವನ್ನು ದೋಚಿ ಪರಾರಿಯಾಗಿದ್ದೇನೆ ಎಂದು ರಾಜಕಾರಣಿಗಳು ಹಾಗೂ ಮಾಧ್ಯಮಗಳು ನನ್ನ ವಿರುದ್ಧ ಜೋರಾಗಿ ಮಾತನಾಡುತ್ತಿದ್ದಾರೆ. ಕರ್ನಾಟಕ ಹೈಕೋರ್ಟ್ ನಲ್ಲಿ ಪ್ರಕರಣವಿರುವಾಗಲೇ ನನ್ನ ವಿರುದ್ಧ ಮಾತನಾಡುತ್ತಿದ್ದಾರೆ.

    ಕಿಂಗ್‍ಫಿಶರ್ ಅದ್ಭುತ ವಿಮಾನಯಾನ ಸಂಸ್ಥೆಯಾಗಿದೆ. ಆದರೆ ವಿಮಾನಕ್ಕೆ ಬಳಸುವ ಇಂಧನದ ಬೆಲೆಯು ಪ್ರತಿ ಬ್ಯಾರೆಲ್‍ಗೆ 140 ಅಮೆರಿಕನ್ ಡಾಲರ್ ಹೆಚ್ಚಾಯಿತು. ಇದನ್ನು ಸಂಸ್ಥೆ ಎದುರಿಸುವಲ್ಲಿ ವಿಫಲವಾಯಿತು. ಇದರಿಂದಾಗಿ ಬ್ಯಾಂಕ್ ಹಣವೆಲ್ಲವೂ ಅಲ್ಲಿ ಹೋಗಿದೆ. ನಾನು ಶೇಕಡಾ 100ರಷ್ಟು ಹಣ ಮರು ಪಾವತಿ ಮಾಡಲು ಸಿದ್ಧವಾಗಿದ್ದೇನೆ. ದಯವಿಟ್ಟು ಸ್ವೀಕರಿಸಿ.

    ಕಳೆದ ಮೂರು ದಶಕಗಳಿಂದ ಕಿಂಗ್‍ಫಿಶರ್ ಮದ್ಯದ ಕಂಪನಿ ಉತ್ತಮ ಪ್ರಗತಿಯಲ್ಲಿದೆ. ಆದರೆ ವಿಮಾನ ಯಾನದಿಂದ ನಷ್ಟಕ್ಕೆ ಒಳಗಾಗಬೇಕಾಯಿತು. ಅನೇಕ ರಾಜ್ಯಗಳ ಪ್ರಗತಿಗೆ ಹಣವನ್ನು ನೀಡಿರುವೆ. ಎಂದಿಗೂ ಬ್ಯಾಂಕ್‍ಗೆ ಮೋಸ ಮಾಡುವುದಿಲ್ಲ. ಎಲ್ಲ ಹಣವನ್ನು ಪಾವತಿ ಮಾಡುತ್ತೇನೆ.

    ದೇಶ ತೊರೆದು ಬಂದಿರುವುದಕ್ಕೆ ನಾನು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತೇನೆ. ನಾನು ಜನರ ಹಣವನ್ನು ಮರುಪಾವತಿ ಮಾಡಲು ಯತ್ನಿಸುತ್ತಿರುವೆ. ದಯವಿಟ್ಟು ಅದನ್ನು ಸ್ವೀಕರಿಸಿ.

    ಡಿಸೆಂಬರ್ 10ಕ್ಕೆ ತೀರ್ಪು:
    ಬ್ಯಾಂಕುಗಳಿಗೆ ಸಾವಿರಾರು ಕೋಟಿ ವಂಚನೆ ಮಾಡಿ ಲಂಡನ್‍ಗೆ ಪರಾರಿಯಾಗಿರುವ ಮದ್ಯದೊರೆ ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಹಸ್ತಾಂತರಿಸುವ ಸಂಬಂಧ ಲಂಡನ್ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದ್ದು, ಡಿಸೆಂಬರ್ 10 ರಂದು ತೀರ್ಪು ಪ್ರಕಟವಾಗಲಿದೆ. ತೀರ್ಪು ಪ್ರಕಟವಾಗಲು 5 ದಿನ ಬಾಕಿ ಇರುವಾಗ ಮಲ್ಯ ತಾನು ಪಡೆದ ಎಲ್ಲ ಸಾಲವನ್ನು ಮರಳಿ ಪಾವತಿಸುತ್ತೇನೆ ಎಂದು ಅಚ್ಚರಿಯ ಎಂಬಂತೆ ಟ್ವೀಟ್ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv